ಅಜ್ಜನಂತೆ ಅಜಾತಶತ್ರು ಆಗುವುದೇ ನನ್ನ ಗುರಿ: ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್​​ ಶಾಮನೂರು – Kannada News | Aim to Be an ‘Ajatashatru’ Like My Grandfather: Davanagere South MLA Samarth Shamanur

ದಾವಣಗೆರೆ, ಮೇ 06: ಅಭಿವೃದ್ಧಿ ಕೆಲಸ ಮಾಡುವ ಸಾಮರ್ಥ್ಯ ಇದೆ ಎಂದುನ ಜನರು ನನ್ನ ಗೆಲ್ಲಿಸಿದ್ದಾರೆಬ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ನೂತನ ಶಾಸಕ ಸಮರ್ಥ್ ಶಾಮನೂರು ಹೇಳಿದ್ದಾರೆ. ನನ್ನ ಅಜ್ಜನ ರೀತಿಯಲ್ಲಿ ಅಜಾತಶತ್ರು ಆಗ್ತೇನೆ, ಅದೇ ನನ್ನ ಗುರಿ. ಜನರ ಪಾಲಿಗೆ ನಮ್ಮ ಮನೆ ಮತ್ತು ಮನಸ್ಸಿನ ಬಾಗಿಲು ತೆರೆದಿರುತ್ತದೆ. ಯಾರೇ ಬಂದರೂ ನಮ್ಮ ಮನೆಯ ಬಾಗಿಲು ಓಪನ್​​ ಆಗಿರಲಿದ್ದು, ದಾವಣಗೆರೆ ದಕ್ಷಿಣ ಶಾಸಕರ ಜನಸಂಪರ್ಕ ಕಚೇರಿ ತೆರೆಯುತ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕ್ಲೋಡ್​ನ ಈ ಎಐ ಮಾಡಲ್​ಗೆ ಬೆಚ್ಚಿಬಿದ್ದ ಬ್ಯಾಂಕುಗಳು; ಉನ್ನತ ಮಟ್ಟದ ಸಭೆ ಕರೆದ ನಿರ್ಮಲಾ ಸೀತಾರಾಮನ್ – Kannada News | Claude Mythos AI: India’s Banks Face Unprecedented Cybersecurity Challenge from New Model

ನಿರ್ಮಲಾ ಸೀತಾರಾಮನ್ ಸಭೆಯ ಎಐ ಚಿತ್ರImage Credit source: AI/Mediaforge/TV9

ನವದೆಹಲಿ, ಮೇ 6: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನಗಳು ಜಗತ್ತನ್ನು ಬದಲಾಯಿಸುತ್ತಿರುವ ಬೆನ್ನಲ್ಲೇ, ಭಾರತದ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಕ್ಕೆ ಹೊಸದೊಂದು ಆತಂಕ ಶುರುವಾಗಿದೆ. ಅತ್ಯಂತ ಶಕ್ತಿಶಾಲಿ ಮತ್ತು ಅಪಾಯಕಾರಿ ಎನ್ನಲಾದ ‘ಕ್ಲೋಡ್ ಮಿಥೋಸ್’ (Claude Mythos) ಎಂಬ ಹೊಸ ಎಐ ಮಾಡಲ್​ನಿಂದ ಎದುರಾಗಬಹುದಾದ ಸೈಬರ್ ಸೆಕ್ಯೂರಿಟಿ ಅಪಾಯಗಳ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್‌ಗಳ ಮುಖ್ಯಸ್ಥರೊಂದಿಗೆ ಮಹತ್ವದ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕಾರಿಗಳು ಮತ್ತು ವಿವಿಧ ವಾಣಿಜ್ಯ ಬ್ಯಾಂಕ್‌ಗಳ ಮುಖಂಡರು ಭಾಗವಹಿಸಿದ್ದರು.

ಏನಿದು ‘ಕ್ಲೋಡ್ ಮಿಥೋಸ್’ (Claude Mythos AI)?

  • ‘ಆಂಥ್ರೋಪಿಕ್’ (Anthropic) ಎಂಬ ಅಮೆರಿಕ ಮೂಲದ ಪ್ರಮುಖ ಎಐ ಸಂಸ್ಥೆಯು ಈ ‘ಕ್ಲೋಡ್ ಮಿಥೋಸ್ ಪ್ರಿವ್ಯೂ’ ಮಾಡಲ್ ಅನ್ನು ಅಭಿವೃದ್ಧಿಪಡಿಸಿದೆ.
  • ಕ್ಲೋಡ್ ಮಿಥೋಸ್ ಎಐ ಮಾಡಲ್ ಸಾಫ್ಟ್‌ವೇರ್ ಮತ್ತು ಡಿಜಿಟಲ್ ವ್ಯವಸ್ಥೆಗಳಲ್ಲಿರುವ ಅತ್ಯಂತ ಸೂಕ್ಷ್ಮ ದೋಷಗಳನ್ನು (Vulnerabilities) ಪತ್ತೆಹಚ್ಚುವಲ್ಲಿ ಮನುಷ್ಯರಿಗಿಂತಲೂ ವೇಗವಾಗಿ ಮತ್ತು ನಿಖರವಾಗಿ ಕೆಲಸ ಮಾಡುತ್ತದೆ.
  • ಪರೀಕ್ಷೆಗಳ ಸಮಯದಲ್ಲಿ, ಈ ಎಐ ಮಾದರಿಯು ಜಗತ್ತಿನ ಪ್ರಮುಖ ಆಪರೇಟಿಂಗ್ ಸಿಸ್ಟಮ್‌ಗಳು ಹಾಗೂ ವೆಬ್ ಬ್ರೌಸರ್‌ಗಳಲ್ಲಿ ಅಡಗಿದ್ದ ಸಾವಿರಾರು ಗಂಭೀರ ಭದ್ರತಾ ಲೋಪಗಳನ್ನು ಪತ್ತೆಹಚ್ಚಿದೆ. ಇದರಲ್ಲಿ 27 ವರ್ಷಗಳಷ್ಟು ಹಳೆಯದಾದ ಸಾಫ್ಟ್‌ವೇರ್ ದೋಷಗಳೂ ಸೇರಿವೆ.

ಇದನ್ನೂ ಓದಿ: ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ

ಬ್ಯಾಂಕ್ ಮತ್ತು ಸರ್ಕಾರದ ಆತಂಕಕ್ಕೆ ಕಾರಣವೇನು?

ಈ ಎಐ ಮಾದರಿಯು ಎಷ್ಟು ಶಕ್ತಿಶಾಲಿಯಾಗಿದೆ ಎಂದರೆ, ಇದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದರೆ ಭೀಕರ ಸೈಬರ್ ದಾಳಿಗಳಿಗೆ (Hacking) ದಾರಿಯಾಗಬಹುದು ಎಂದು ಸ್ವತಃ ಆಂಥ್ರೋಪಿಕ್ ಸಂಸ್ಥೆಯೇ ಇದನ್ನು ಸದ್ಯಕ್ಕೆ ರಹಸ್ಯವಾಗಿಟ್ಟಿದೆ. ‘ಪ್ರಾಜೆಕ್ಟ್ ಗ್ಲಾಸ್‌ವಿಂಗ್’ ಅಡಿಯಲ್ಲಿ ವಿಶ್ವದ ಕೇವಲ 40 ಆಯ್ದ ಕಂಪನಿಗಳಿಗೆ (ಗೂಗಲ್, ಮೈಕ್ರೋಸಾಫ್ಟ್, ಆಪಲ್ ಇತ್ಯಾದಿ) ಮಾತ್ರ ಇದರ ಪ್ರವೇಶ ನೀಡಲಾಗಿದೆ.

ಆದರೆ, ಇತ್ತೀಚೆಗೆ ಈ ಅತ್ಯಂತ ಸುರಕ್ಷಿತ ಎಐ ಮಾದರಿಯನ್ನು ಕೆಲವರು ಅನಧಿಕೃತವಾಗಿ (Unauthorized access) ಪ್ರವೇಶಿಸಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಈ ಎಐ ತಂತ್ರಜ್ಞಾನವು ಹ್ಯಾಕರ್‌ಗಳು ಅಥವಾ ಸೈಬರ್ ಅಪರಾಧಿಗಳ ಕೈಗೆ ಸಿಕ್ಕರೆ, ಅವರು ಬ್ಯಾಂಕಿಂಗ್ ವ್ಯವಸ್ಥೆಯ ಡಿಜಿಟಲ್ ಭದ್ರತೆಯನ್ನು ಕ್ಷಣಮಾತ್ರದಲ್ಲಿ ಧ್ವಂಸಗೊಳಿಸಬಹುದು ಎಂಬ ಆತಂಕ ಜಾಗತಿಕವಾಗಿ ಎದುರಾಗಿದೆ.

ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ನೀಡಿದ ಎಚ್ಚರಿಕೆಗಳೇನು?

ಈ ಹೊಸ ಎಐ ಮಾದರಿಯಿಂದ ಎದುರಾಗಿರುವ ಸೈಬರ್ ಭದ್ರತೆಯ ಸವಾಲು ಈ ಹಿಂದೆಂದೂ ಕಾಣದಂತಹುದಾಗಿದೆ (Unprecedented). ಆದ್ದರಿಂದ ಬ್ಯಾಂಕುಗಳು ಅತ್ಯಂತ ಹೆಚ್ಚಿನ ಜಾಗರೂಕತೆ ಮತ್ತು ಸಿದ್ಧತೆಯನ್ನು ಹೊಂದಿರಬೇಕು ಎಂದು ಸಚಿವರು ಸೂಚಿಸಿದ್ದಾರೆ.

ಬ್ಯಾಂಕುಗಳ ನಡುವೆ ಮತ್ತು ಭಾರತದ ಸೈಬರ್ ಭದ್ರತಾ ಏಜೆನ್ಸಿಯಾದ ‘ಸರ್ಟ್-ಇನ್’ (CERT-In) ಜೊತೆಗೆ ಸೈಬರ್ ಥ್ರೆಟ್​ಗಳ ಕುರಿತು ರಿಯಲ್ ಟೈಮ್​ನಲ್ಲಿ ಮಾಹಿತಿ ಹಂಚಿಕೆ ವ್ಯವಸ್ಥೆಯನ್ನು ರೂಪಿಸಬೇಕು ಎನ್ನುವ ಸಲಹೆಯು ಸಭೆಯಲ್ಲಿ ವ್ಯಕ್ತವಾಗಿದೆ. ಈ ಹೊಸ ಎಐ ತಂತ್ರಜ್ಞಾನದಿಂದ ಭಾರತೀಯ ಬ್ಯಾಂಕುಗಳಿಗೆ ಆಗಬಹುದಾದ ನಷ್ಟ ಮತ್ತು ಅಪಾಯಗಳನ್ನು ಅಧ್ಯಯನ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧ್ಯಕ್ಷ ಸಿ.ಎಸ್. ಶ್ರೀನಿವಾಸುಲು ಶೆಟ್ಟಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ.

ಹಳೆಯ ತಂತ್ರಜ್ಞಾನದ ಭದ್ರತಾ ನಿಯಮಗಳು (SOPs) ಇಂದಿನ ಆಧುನಿಕ ಎಐ ದಾಳಿಗಳನ್ನು ತಡೆಯಲು ಸಾಧ್ಯವಿಲ್ಲ. ಹೀಗಾಗಿ ಗ್ರಾಹಕರ ಹಣ ಮತ್ತು ಡೇಟಾವನ್ನು ರಕ್ಷಿಸಲು ಬ್ಯಾಂಕುಗಳು ತಮ್ಮ ಐಟಿ (IT) ಮತ್ತು ಸೈಬರ್ ಸೆಕ್ಯೂರಿಟಿ ಬಜೆಟ್ ಅನ್ನು ಹೆಚ್ಚಿಸಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ

ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಆರ್‌ಬಿಐ ಮತ್ತು ಸರ್ಕಾರವು ಈ ಅಪಾಯದ ವ್ಯಾಪ್ತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ. ಸದ್ಯಕ್ಕೆ ಭಾರತದ ಬ್ಯಾಂಕಿಂಗ್ ಡಿಜಿಟಲ್ ವ್ಯವಸ್ಥೆಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಭವಿಷ್ಯದ ಸುರಕ್ಷತೆಯ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಈ ಅಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಜಕೀಯ ಎಂಟ್ರಿ ಯಾವಾಗ? ಉತ್ತರಿಸಿದ ‘ದುನಿಯಾ’ ವಿಜಯ್ – Kannada News | Duniya Vijay Says When He will Enter Politics

ದಳಪತಿ ವಿಜಯ್ ಅವರು ಟಿವಿಕೆ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಗೆಲುವಿನ ಬಗ್ಗೆ ಹಾಗೂ ರಾಜಕೀಯ ಎಂಟ್ರಿ ಬಗ್ಗೆ ವಿಜಯ್ ಮಾತನಾಡಿದ್ದಾರೆ. ‘ನನ್ನ ಹೆಸರೂ ವಿಜಯ್, ಅವರ ಹೆಸರೂ ವಿಜಯ್. ಈ ಕಾರಣಕ್ಕೆ ಖುಷಿ ಇದೆ. ತಮಿಳುನಾಡಿನಲ್ಲಿ ಆದ ಬದಲಾವಣೆ ಎಲ್ಲ ಕಡೆಗಳಲ್ಲೂ ಆಗಬೇಕು’ ಎಂದರು. ರಾಜಕೀಯ ಎಂಟ್ರಿ ಯಾವಾಗ ಎಂದು ವಿಜಯ್ ಕೇಳಿದ ಪ್ರಶ್ನೆಗೆ ವಿಜಯ್ ಉತ್ತರಿಸಿದರು. ‘ಜೆಂಜಿಗಳು ಇದಕ್ಕೆ ಕಾರಣ. ಅವರು ಮನಸ್ಸು ಮಾಡಿದರೆ ಬದಲಾವಣೆ ತರುತ್ತಾರೆ’ ಎಂದರು. ರಾಜಕೀಯಕ್ಕೆ ಬರೋದಕ್ಕೆ ಈಗಲೇ ಆಲೋಚಿಸಿಲ್ಲ ಎಂದಿರೋ ಅವರು, ಟೈಮ್ ಬರಲಿ ಹೇಳುತ್ತೇನೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಂಜಾಬ್​ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡ; ಸಿಎಂ ಭಗವಂತ್ ಮಾನ್ ಆರೋಪ – Kannada News | Punjab twin blasts Case CM Bhagwant Mann claims BJP link Amritsar and Jalandhar blasts

ನವದೆಹಲಿ, ಮೇ 6: ನಿನ್ನೆ ತಡರಾತ್ರಿ ಪಂಜಾಬ್‌ನ (Punjab) ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್​​ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ 10.50ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಇದರಿಂದಾಗಿ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಜಲಂಧರ್​​ನ ಸ್ಫೋಟದ ನಂತರ ಬೆಂಕಿಯಲ್ಲಿ ಆಕ್ಟಿವಾ ಸ್ಕೂಟಿ ಸುಟ್ಟುಹೋಗಿದೆ. ಈ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕೃತ್ಯದಲ್ಲಿ ಬಿಜೆಪಿ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ಆದರೆ, ಡಿಜಿಪಿ ಗೌರವ್ ಮಾನ್ ಪಂಜಾಬ್​ ಅನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿರುವ ಪಾಕಿಸ್ತಾನ ಬೆಂಬಲಿತ ಐಎಸ್‌ಐ ಭಯೋತ್ಪಾದಕ ಸಂಘಟನೆ ಈ ಸಂಚನ್ನು ಮಾಡಿರಬಹುದು ಎಂದಿದ್ದಾರೆ. ಈ ಬಗ್ಗೆ ತನಿಖೆಗಳು ನಡೆಯುತ್ತಿದೆ. ಪೊಲೀಸ್ ಇಲಾಖೆ ಮತ್ತು ಸಿಎಂ ಅವರಿಂದ ಬಂದಿರುವ ಈ ವ್ಯತಿರಿಕ್ತ ಹೇಳಿಕೆಗಳು ಪಂಜಾಬ್‌ನಲ್ಲಿ ತೀವ್ರ ಭದ್ರತೆ ಮತ್ತು ರಾಜಕೀಯ ಬಿಕ್ಕಟ್ಟನ್ನು ಎತ್ತಿ ತೋರಿಸುತ್ತವೆ.

ಇದನ್ನೂ ಓದಿ: ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಆಪರೇಷನ್ ಸಿಂಧೂರ್ ಬಗ್ಗೆ ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ

ಜಲಂಧರ್ ಮತ್ತು ಅಮೃತಸರದಲ್ಲಿನ ರಕ್ಷಣಾ ಸ್ಥಾಪನೆಗಳ ಬಳಿ ಅವಳಿ ಸ್ಫೋಟಗಳು ಸಂಭವಿಸಿದ ನಂತರ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವುಗಳಲ್ಲಿ ಬಿಜೆಪಿಯ ಕೈವಾಡವಿದೆ ಎಂದು ಹೇಳಿಕೊಂಡರೆ, ಪೊಲೀಸ್ ಮಹಾನಿರ್ದೇಶಕರು ಈ ಪ್ರದೇಶದಲ್ಲಿ ಅಶಾಂತಿ ಸೃಷ್ಟಿಸಲು ಪಾಕಿಸ್ತಾನ ಬೆಂಬಲಿತ ಸಂಚು ಎಂದಿದ್ದಾರೆ. ಮುಂದಿನ ವರ್ಷ ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ದೊಡ್ಡ ರಾಜಕೀಯ ಯೋಜನೆಯ ಭಾಗವಾಗಿ ಈ ಸ್ಫೋಟಗಳನ್ನು ನಡೆಸಲಾಗಿದೆ ಎಂದು ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

ಪಂಜಾಬ್ ಪೊಲೀಸರು, ಕೇಂದ್ರ ಸಂಸ್ಥೆಗಳೊಂದಿಗೆ, ತೀವ್ರ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ರಾಜ್ಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅವಳಿ ಸ್ಫೋಟಗಳಲ್ಲಿ ಯಾವುದೇ ಸಾವುನೋವುಗಳು ವರದಿಯಾಗಿಲ್ಲ.

ಇದನ್ನೂ ಓದಿ: ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ

“ಬಿಜೆಪಿ ಎಲ್ಲೆಲ್ಲಿ ಸ್ಪರ್ಧಿಸಲು ಬಯಸುತ್ತದೋ ಅಲ್ಲೆಲ್ಲಾ ಇಂತಹ ಘಟನೆಗಳು ಸಂಭವಿಸುತ್ತವೆ” ಎಂದು ಸಿಎಂ ಭಗವಂತ್ ಮಾನ್ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಅಶ್ವನಿ ಶರ್ಮಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಮುಖ್ಯಮಂತ್ರಿಯ ಮಾನಸಿಕ ಸ್ಥಿತಿ ಸ್ಥಿರವಾಗಿಲ್ಲ ಎಂದು ಅನಿಸುತ್ತಿದೆ. ಅವರು ರಾಜೀನಾಮೆ ನೀಡಬೇಕು ಮತ್ತು ಸರಿಯಾದ ಚಿಕಿತ್ಸೆ ಪಡೆಯಬೇಕು. ಪಂಜಾಬ್ ಗಡಿ ರಾಜ್ಯ. ಅವರು ಈ ರಾಜ್ಯವನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಬಿಜೆಪಿಯ ಮೇಲೆ ಕೆಸರು ಎರಚುವ ಮೂಲಕ, ಅವರು ಕೊಳಕು ರಾಜಕೀಯದಲ್ಲಿ ತೊಡಗಿದ್ದಾರೆ.” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

TV9 Kannada News Live: ಆಟೋ ಎಲ್​​ಪಿಜಿ ಬಿಕ್ಕಟ್ಟಿನ ನಡುವೆ ಮತ್ತೊಂದು ಶಾಕ್​​, ಜನ್ಮದಿನಕ್ಕೆ ಸಿಗುತ್ತಾ ಡಿಕೆಶಿಗೆ ಶುಭ ಸುದ್ದಿ? – Kannada News | TV9 Kannada News Live: Petrol and Diesel Shortage Hits Bengaluru; Good News Expected for DK Shivakumar on His Birthday 

ಬೆಂಗಳೂರು, ಮೇ 06: ಆಟೋ ಎಲ್‌ಪಿಜಿ ಬಿಕ್ಕಟ್ಟಿನ ಬೆನ್ನಲ್ಲೇ ಬೆಂಗಳೂರಲ್ಲೀಗ (Bengaluru) ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ. ಆ ಮೂಲಕ ವಾಹನ ಸವಾರರು ಮತ್ತೊಂದು ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಗೋಚರಿಸಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದೆ. ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲವಂತೆ. ಇಂಡಿಯನ್ ಆಯಿಲ್ ಬಂಕ್‌ಗಳಲ್ಲಿ ಸದ್ಯಕ್ಕೆ ಪೂರೈಕೆ ಸುಗಮವಾಗಿದ್ದರೂ, ಎಚ್‌ಪಿ ಮತ್ತು ಭಾರತ್ ಬಂಕ್‌ಗಳಲ್ಲಿ ಪರಿಸ್ಥಿತಿ ಬಿಗಡಾಯಿಸಿರೋದು ಆತಂಕ ಹೆಚ್ಚಿಸಿದೆ.

ಜನ್ಮ ದಿನಕ್ಕೆ ಡಿಕೆಶಿಗೆ ಸಿಗುತ್ತಾ ಶುಭ ಸುದ್ದಿ?

ಪಂಚರಾಜ್ಯಗಳ ಚುನಾವಣೆ ಫಲಿತಾಂಸ ಹೊರಬಿದ್ದ ಬೆನ್ನಲ್ಲೇ ಕರ್ನಾಟಕದಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದಂದು ಹೈಕಮಾಂಡ್‌ನಿಂದ ಶುಭ ಸುದ್ದಿ ಸಿಗಬಹುದೆಂಬ ನಿರೀಕ್ಷೆ ಬೆಂಬಲಿಗರಲ್ಲಿ ಹೆಚ್ಚಿದೆ. ಈ ಕುರಿತು ಮಾತನಾಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್ , ತಾವು ಕೂಡ ಈ ಶುಭ ಸುದ್ದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದ ಅವರು, ಎಲ್ಲದಕ್ಕೂ ಒಂದು ಕಾಲ ಬರುತ್ತದೆ ಎಂದು ಹೇಳಿರೋದು ಕುತೂಹಲ ಮೂಡಿಸಿದೆ. ಸರ್ಕಾರ ಮತ್ತು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ, ಅಧಿಕಾರ ಹಂಚಿಕೆ ಕುರಿತ ನಿರ್ಧಾರಗಳು ಮುಖ್ಯಮಂತ್ರಿಗಳು, ಪಕ್ಷ ಮತ್ತು ಹೈಕಮಾಂಡ್‌ನ ನಡುವೆ ನಡೆಯುತ್ತವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವಚನಾನಂದ ಶ್ರೀಗೆ ಜಾಮೀನು ಮಂಜೂರು; ಕಾಂಗ್ರೆಸ್​​ ಕೇರಳದಲ್ಲಿ ಗದ್ದುಗೆ, ತಮಿಳುನಾಡಿನಲ್ಲಿ ವಿಜಯ್ ಜೊತೆ ಮೈತ್ರಿ!

ಕಂಡ ಕಂಡಲ್ಲಿ ಮೂತ್ರ ಮಾಡುವ ಮುನ್ನ ಜೋಕೆ!

ಶೌಚಾಲಯಗಳಿಗೆ ತೆರಳುವ ಬದಲು ಪಟ್ಟಣದಲ್ಲಿನ ಖಾಲಿ ಜಾಗ, ಕಾಂಪೌಂಡ್​​ಗಳ ಸಮೀಪ ಮೂತ್ರ ಮಾಡುವವರಿಗೆ ಬ್ರೇಕ್​​ ಹಾಕಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ದಂಡಾಸ್ತ್ರಕ್ಕೂ ಜನ ಬಗ್ಗದ ಕಾರಣ, ಈ ಬಗ್ಗೆ ಗಂಭೀರ ಚಿಂತನೆ ನಡೆಸಿರುವ ಪಾಲಿಕೆ ಮಾಸ್ಟರ್​​ ಪ್ಲಾನ್​​ ಮಾಡಿದೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಮುಂಭಾಗದ ಸುಮಾರು 80 ಮೀಟರ್ ಉದ್ದದ ಕಾಂಪೌಂಡ್ ಗೋಡೆಗೆ ಸ್ಟೇನ್ ಲೆಸ್ ಸ್ಟೀಲ್ ಶೀಟ್‌ಗಳನ್ನು ಅಳವಡಿಸಲಾಗಿದ್ದು, ಇವು ಕನ್ನಡಿಯಂತೆ ಎದುರಿದ್ದವರನ್ನು ಪ್ರತಿಬಿಂಬಿಸಲಿವೆ. ಹೀಗಾಗಿ ಕಾಂಪೌಂಡ್​​ ಎಂದು ಅಲ್ಲಿ ಮೂತ್ರಮಾಡಲು ಹೋದರೆ ಮಾನ ಕಳೆದುಕೊಳ್ಳಬೇಕಾಗಬಹುದು ಜೋಕೆ!. ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡುವವರಿಗೆ ಮುಜುಗರ ಉಂಟು ಮಅಡುವ ಮೂಲಕ ಈ ಚಾಳಿಗೆ ಬ್ರೇಕ್​​ ಹಾಕಲು ಮೈಸೂರು ಪಾಲಿಕೆ ಮುಂದಾಗಿದ್ದು, ಇದು ಎಷ್ಟರ ಮಟ್ಟಿಗ ಯಶಸ್ಸು ಕಾಣುತ್ತೆ ಎಂಬುದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 3:23 pm, Wed, 6 May 26

Source link

ಕುತೂಹಲಕ್ಕೆ ಹೋಗಿ ನೋಡಿದಾಗ ಎದುರಾಗಿದ್ದು ಶಾಕ್​! ಬಾಲ್ಯ ವಿವಾಹ ತಡೆದ ಅಕ್ಕ ಪಡೆ – Kannada News | Belagavi Akka Pade Prevents Two Child Marriages in Two Days, Rescues Girls

ಬಾಲ್ಯ ವಿವಾಹ ತಡೆದ ಅಕ್ಕ ಪಡೆImage Credit source: tv9 kannada

ಬೆಳಗಾವಿ, ಮೇ 06: ನಗರದಲ್ಲಿ (Belagavi) ಅಕ್ಕ ಪಡೆ ಕಾರ್ಯಾಚರಣೆ ನಡೆಸಿ ಎರಡು ಬಾಲ್ಯ ವಿವಾಹವನ್ನು (child marriage) ತಡೆದಿರುವಂತಹ ಘಟನೆ ನಡೆದಿದೆ. ಬಾಲ್ಯ ವಿವಾಹ ಅಪರಾಧ ಅಂತಾ ಗೊತ್ತಿದ್ದರೂ ಪೋಷಕರು ಮದುವೆಗೆ ಮುಂದಾಗಿದ್ದರು. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ ಬಾಲ್ಯ ವಿವಾಹವನ್ನು ನಿಲ್ಲಿಸಿ 13 ಮತ್ತು 17 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡಿದ್ದಾರೆ. ಸದ್ಯ ಅಕ್ಕ ಪಡೆಯ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಬೆಳಗಾವಿಯಲ್ಲಿ ಬಾಲ್ಯ ವಿವಾಹಕ್ಕೆ ಮುಂದಾಗಿದ್ದ ಪೋಷಕರು
  • ಕಾರ್ಯಾಚರಣೆ ನಡೆಸಿ ಬಾಲ್ಯ ವಿವಾಹ ತಡೆದ ಅಕ್ಕ ಪಡೆ
  • ಅಕ್ಕ ಪಡೆ ಕಾರ್ಯಕ್ಕೆ ಪೊಲೀಸ್ ಕಮಿಷನರ್ ಮೆಚ್ಚುಗೆ
  • ಬೆಳಗಾವಿ ನಗರದಲ್ಲಿ‌ ಹೆಣ್ಣು ಮಕ್ಕಳ ರಕ್ಷಣೆಗೆ ಅಕ್ಕ ಪಡೆ ನಿಯೋಜನೆ

ನಡೆದಿದ್ದೇನು?

ಬೆಳಗಾವಿಯ ವಂಟಮೂರಿ ಕಾಲೋನಿಯಲ್ಲಿ ಪೋಷಕರು 17 ವರ್ಷದ ಬಾಲಕಿ ಮದುವೆ ಮಾಡುತ್ತಿದ್ದರು. ಕುತೂಹಲಕ್ಕೆ ಏನು ಕಾರ್ಯಕ್ರಮ ಅಂತಾ ಅಕ್ಕ ಪಡೆ ಹೋಗಿ ನೋಡಿದಾಗ ಬಾಲ್ಯ ವಿವಾಹ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್​ ಎಂಟ್ರಿ: ಹುಡುಗಿಗೆ 18 ತುಂಬಲು ಬಾಕಿ ಇತ್ತು ಕೇವಲ 4 ತಿಂಗಳು

ಇದೇ ರೀತಿಯಾಗಿ ಶಹಾಪುರದಲ್ಲಿ 13 ವರ್ಷದ ಬಾಲಕಿ ಮದುವೆ ಮಾಡುತ್ತಿರುವ ಮಾಹಿತಿ ಸಿಗುತ್ತಿದ್ದಂತೆ ಕೂಡಲೇ ಅಕ್ಕ ಪಡೆ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಾಲ್ಯ ವಿವಾಹ ತಡೆದಿದ್ದಾರೆ. ಸದ್ಯ ಎರಡು ಪ್ರಕರಣದಲ್ಲಿ ಬಾಲಕಿಯರ ತಂದೆ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಲಾಗಿದೆ. ಸದ್ಯ ಬಾಲ್ಯ ವಿವಾಹ ತಡೆದಿದ್ದಕ್ಕೆ ಅಕ್ಕ ಪಡೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಇನ್ನು ಬೆಳಗಾವಿ ನಗರದಲ್ಲಿ‌ ಪುಂಡ ಪೋಕರಿಗಳಿಂದ ಹೆಣ್ಣು ಮಕ್ಕಳ ರಕ್ಷಣೆಗೆ ಅಕ್ಕ ಪಡೆ ನಿಯೋಜನೆ ಮಾಡಲಾಗಿದ್ದು, ಶಾಲಾ-ಕಾಲೇಜು, ಬಸ್ ನಿಲ್ದಾಣ, ಮಾರುಕಟ್ಟೆ ಹೀಗೆ ಪ್ರಮುಖ ಸ್ಥಳಗಳಲ್ಲಿ ಅಕ್ಕ ಪಡೆ ಸುತ್ತಾಟ ನಡೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಾರ್ವಜನಿಕರ ಗಮನಕ್ಕೆ: ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ – Kannada News | Disruption to bus services over 10 thousand Bus Book For yediyurappa utsava On May 9th

ಚಿತ್ರದುರ್ಗ, (ಮೇ 06): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆತರಲು 10 ಸಾವಿರ ಬಸ್​​​ಗಳನ್ನ ಬುಕ್ ಮಾಡಲಾಗಿದೆ. ಹೀಗಾಗಿ ಸಾಮಾನ್ಯವಾಗಿ ಮೇ 9ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರ್ವಜನಿಕರು ಅಂದು ಪ್ರಯಾಣವನ್ನು ಮುಂದೂಡುವುದು ಒಳಿತು.

ಇದನ್ನೂ ನೋಡಿ: ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ

Source link

Apply Now: ಸ್ಟ್ರೈಡ್ಸ್ ಫಾರ್ಮಾ ಸಂಸ್ಥೆಯಲ್ಲಿ ಕೆಲಸದ ಜೊತೆಗೆ ಉಚಿತ ಪದವಿ ಪಡೆಯುವ ಸುವರ್ಣಾವಕಾಶ! – Kannada News | Strides Pharma Science: Free B.Voc Student Trainee Jobs in Bengaluru via Mangaluru Interview

ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿನ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಈ ನೇಮಕಾತಿ ಪ್ರಕ್ರಿಯೆಯು ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಬೆಂಗಳೂರಿನ ‘ಸ್ಟ್ರೈಡ್ಸ್ ಫಾರ್ಮಾ ಸೈನ್ಸ್ ಲಿಮಿಟೆಡ್’ ಸಂಸ್ಥೆಯು ಖಾಲಿ ಇರುವ ‘ಸ್ಟೂಡೆಂಟ್ ಟ್ರೈನಿ’ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಐಟಿಐ, ಪಿಯುಸಿ, ಡಿಪ್ಲೋಮಾ ಅಥವಾ ಯಾವುದೇ ಪದವಿ ಪೂರ್ಣಗೊಳಿಸಿರುವ 18 ರಿಂದ 25 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಕೆಲಸದ ಸ್ಥಳವನ್ನು ನಿಗದಿಪಡಿಸಲಾಗಿದೆ.

ಈ ನೇಮಕಾತಿಯ ವಿಶೇಷತೆಯೆಂದರೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿಯ ವತಿಯಿಂದ ಉಚಿತವಾಗಿ ಬಿ.ವಾಕ್ (B.Voc) ಪದವಿ ಕೋರ್ಸ್ ಕಲಿಯುವ ಅವಕಾಶವನ್ನು ಒದಗಿಸಲಾಗುತ್ತದೆ. ಇದರೊಂದಿಗೆ ಉಚಿತ ಊಟ, ವಸತಿ ಸೌಲಭ್ಯ ಹಾಗೂ ಆರೋಗ್ಯ ವಿಮೆಯ ಸವಲತ್ತುಗಳನ್ನು ಸಹ ನೀಡಲಾಗುವುದು ಎಂದು ಸಂಸ್ಥೆಯು ತಿಳಿಸಿದೆ.

ಇದನ್ನೂ ಓದಿ: ಇನ್ಫೋಸಿಸ್‌ನಿಂದ ಭರ್ಜರಿ ಉದ್ಯೋಗಾವಕಾಶ; 20,000 ಫ್ರೆಶರ್ಸ್‌ ನೇಮಕಾತಿ ಘೋಷಣೆ

ಆಸಕ್ತ ಅಭ್ಯರ್ಥಿಗಳು ದಿನಾಂಕ 12-05-2026ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:30ರ ಒಳಗೆ ಮಂಗಳೂರಿನ ಪಡೀಲ್‌ನಲ್ಲಿರುವ ಪ್ರಜಾ ಸೌಧದ ನೆಲಮಹಡಿಯ ಕೊಠಡಿ ಸಂಖ್ಯೆ 04ಕ್ಕೆ ಭೇಟಿ ನೀಡಿ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಸಂದರ್ಶನ ಕಾರ್ಯಕ್ರಮವು ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು 0824-2457139 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮಿಳುನಾಡಿನಲ್ಲಿ ‘ದಳಪತಿ’ ಸರ್ಕಾರಕ್ಕೆ ಕೈ ಬಲ: ಟಿವಿಕೆ ಕಚೇರಿಯಲ್ಲಿ ವಿಜಯ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು – Kannada News | Indian National Congress Extends Support to Tamilaga Vettri Kazhagam After Meeting Vijay in Chennai

ಚೆನ್ನೈ, ಮೇ 06: ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ. ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ ನಡೆದ ಮಹತ್ವದ ಭೇಟಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿಯ ಮುಖಂಡರು ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ತಮಿಳುನಾಡು ಕಾಂಗ್ರೆಸ್ ಸಮಿತಿ (TNCC) ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಒಮ್ಮತದಿಂದ ವಿಜಯ್ ನೇತೃತ್ವದ ಟಿವಿಕೆಗೆ ಬೆಂಬಲ ನೀಡಲು ನಿರ್ಧರಿಸಿವೆ. ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಬೇಕಾದ ಅಗತ್ಯ ಸಂಖ್ಯಾಬಲವನ್ನು ಒದಗಿಸಲು ಕಾಂಗ್ರೆಸ್ ಸಿದ್ಧವಿದ್ದು, ಈ ಸಂಬಂಧ ಅಧಿಕೃತ ಮಾತುಕತೆಗಳು ಪೂರ್ಣಗೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Emergency Credit Line Guarantee Scheme- ಏರ್​ಲೈನ್ಸ್, ಎಂಎಸ್​ಎಂಇಗಳಿಗೆ ಬೆಂಬಲಿಸುವ ಇಸಿಎಲ್​ಜಿಎಸ್ 5.0 ಸ್ಕೀಮ್​ಗೆ ಅನುಮೋದನೆ – Kannada News | ECLGS 5.0 Approved: India Extends Vital Financial Support to MSMEs & Airlines Amidst Global Crisis

ಇಸಿಎಲ್​ಜಿಎಸ್ ಯೋಜನೆImage Credit source: AI/Mediaforge/TV9

ನವದೆಹಲಿ, ಮೇ 6: ಪಶ್ಚಿಮ ಏಷ್ಯಾ (West Asia) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಾಗತಿಕವಾಗಿ ಉಂಟಾಗಿರುವ ಆರ್ಥಿಕ ಸವಾಲುಗಳನ್ನು ಎದುರಿಸಲು ಮತ್ತು ದೇಶದ ಉದ್ಯಮಗಳಿಗೆ ಆಸರೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಕಷ್ಟದಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು (MSMEಗಳು) ಹಾಗೂ ವಿಮಾನಯಾನ ಸಂಸ್ಥೆಗಳಿಗೆ (Airlines) ನೆರವಾಗಲು ‘ಎಮರ್ಜೆನ್ಸಿ ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್’ನ 5ನೇ ಹಂತಕ್ಕೆ (ECLGS 5.0) ಅನುಮೋದನೆ ನೀಡಿದೆ.

ಇಸಿಎಲ್​ಜಿಎಸ್ ಯೋಜನೆಯ ಪ್ರಮುಖ ಉದ್ದೇಶ

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಪೂರೈಕೆ ಸರಪಳಿ (Supply Chain) ಏರುಪೇರಾಗಿದೆ ಮತ್ತು ವಿಮಾನ ಇಂಧನ ದರ ಹೆಚ್ಚಳ ಸೇರಿದಂತೆ ಉದ್ಯಮಗಳ ನಿರ್ವಹಣಾ ವೆಚ್ಚ ಅಧಿಕವಾಗಿದೆ. ಇದರಿಂದ ಉಂಟಾಗಿರುವ ಅಲ್ಪಾವಧಿಯ ನಗದು ಕೊರತೆ (Liquidity mismatch) ಮತ್ತು ಆರ್ಥಿಕ ಒತ್ತಡವನ್ನು ನಿವಾರಿಸಲು, ಉದ್ಯೋಗ ನಷ್ಟವನ್ನು ತಡೆಯಲು ಹಾಗೂ ವ್ಯಾಪಾರ ಮುಂದುವರಿಕೆಗೆ ನೆರವಾಗಲು ಸರ್ಕಾರ ಈ ಯೋಜನೆಯನ್ನು ತಂದಿದೆ. ಇದರ ಪ್ರಮುಖಾಂಶಗಳು ಇಂತಿವೆ:

  • ಒಟ್ಟು ಸಾಲದ ಗುರಿ: ಈ ಯೋಜನೆಯ ಮೂಲಕ ಮಾರುಕಟ್ಟೆಯಲ್ಲಿ ಒಟ್ಟು 2,55,000 ಕೋಟಿ ರೂ ಹೆಚ್ಚುವರಿ ಸಾಲದ ಹರಿವನ್ನು ಸುಗಮಗೊಳಿಸುವ ಗುರಿ ಹೊಂದಲಾಗಿದೆ. ಇದರಲ್ಲಿ ವಿಶೇಷವಾಗಿ 5,000 ಕೋಟಿ ರೂ ಅನ್ನು ವಿಮಾನಯಾನ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.
  • ಶೇ. 100 ರಷ್ಟು ಗ್ಯಾರಂಟಿ: ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟಿ ಕಂಪನಿ ಲಿಮಿಟೆಡ್ (NCGTC) ಮೂಲಕ ಬ್ಯಾಂಕ್‌ಗಳು ನೀಡುವ ಹೆಚ್ಚುವರಿ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡಲಿದೆ. MSME ಉದ್ಯಮಗಳಿಗೆ ಶೇ. 100 ರಷ್ಟು ಮತ್ತು ಎಂಎಸ್ಮೇ ಅಲ್ಲದ ಇತರ ದೊಡ್ಡ ಸಂಸ್ಥೆಗಳು ಹಾಗೂ ವಿಮಾನಯಾನ ಸಂಸ್ಥೆಗಳಿಗೆ ಶೇ. 90 ರಷ್ಟು ಕ್ರೆಡಿಟ್ ಗ್ಯಾರಂಟಿ ಕವರೇಜ್ ಸಿಗಲಿದೆ.
  • ಯಾರು ಅರ್ಹರು?: ಮಾರ್ಚ್ 31, 2026 ರ ವೇಳೆಗೆ ಬ್ಯಾಂಕ್‌ಗಳಲ್ಲಿ ಚಾಲ್ತಿಯಲ್ಲಿರುವ ವರ್ಕಿಂಗ್ ಕ್ಯಾಪಿಟಲ್ (ದುಡಿಯುವ ಬಂಡವಾಳ) ಮಿತಿ ಹೊಂದಿರುವ MSMEಗಳು ಮತ್ತು ಯಾವುದೇ ಸಾಲದ ಸುಸ್ತಿದಾರರಲ್ಲದ (Standard Accounts) ಪರಿಶಿಷ್ಟ ಪ್ರಯಾಣಿಕರ ವಿಮಾನಯಾನ ಸಂಸ್ಥೆಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.
  • ಸಾಲದ ಪ್ರಮಾಣ: ಸಾಮಾನ್ಯ ಉದ್ಯಮಗಳು 2025-26ರ ಕೊನೆಯ ತ್ರೈಮಾಸಿಕದಲ್ಲಿ ಬಳಸಿದ ಗರಿಷ್ಠ ವರ್ಕಿಂಗ್ ಕ್ಯಾಪಿಟಲ್‌ನ ಶೇ. 20 ರಷ್ಟು ಹೆಚ್ಚುವರಿ ಸಾಲವನ್ನು (ಗರಿಷ್ಠ 100 ಕೋಟಿ ರೂವರೆಗೆ) ಪಡೆಯಬಹುದು.

ಇದನ್ನೂ ಓದಿ: ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ

ವಿಮಾನಯಾನ ಸಂಸ್ಥೆಗಳಿಗೆ ಕೆಲವು ಷರತ್ತುಗಳ ಅನ್ವಯದೊಂದಿಗೆ ಗರಿಷ್ಠ 1,500 ಕೋಟಿ ರೂವರೆಗೆ ಸಾಲದ ಮಿತಿಯನ್ನು ನಿಗದಿಪಡಿಸಲಾಗಿದೆ.

ಮರುಪಾವತಿ ಅವಧಿ (Tenor)

  • MSME ಮತ್ತು ಇತರ ಉದ್ಯಮಗಳಿಗೆ: 1 ವರ್ಷದ ಮೊರಟೋರಿಯಂ (ಅಸಲು ಪಾವತಿಗೆ ವಿನಾಯಿತಿ ಅವಧಿ) ಸೇರಿದಂತೆ ಒಟ್ಟು 5 ವರ್ಷಗಳ ಮರುಪಾವತಿ ಅವಧಿ ಇರುತ್ತದೆ.
  • ವಿಮಾನಯಾನ ಸಂಸ್ಥೆಗಳಿಗೆ: 2 ವರ್ಷಗಳ ಮೊರಟೋರಿಯಂ ಸೇರಿದಂತೆ ಒಟ್ಟು 7 ವರ್ಷಗಳ ದೀರ್ಘಾವಧಿ ಮರುಪಾವತಿ ಸೌಲಭ್ಯ ಸಿಗಲಿದೆ.

ಮಾರ್ಚ್ 31, 2027 ರವರೆಗೆ ಮಂಜೂರಾಗುವ ಎಲ್ಲಾ ಸಾಲಗಳಿಗೆ ಈ ಸೌಲಭ್ಯ ಅನ್ವಯವಾಗುತ್ತದೆ. ಇದಕ್ಕಾಗಿ ಗ್ರಾಹಕರಿಂದ ಯಾವುದೇ ಗ್ಯಾರಂಟಿ ಶುಲ್ಕವನ್ನು (Guarantee Fee) ವಸೂಲಿ ಮಾಡಲಾಗುವುದಿಲ್ಲ.

ಇದನ್ನೂ ಓದಿ: ಎಸ್​ಬಿಐ ನೌಕರರ ಎರಡು ದಿನ ಮುಷ್ಕರ; ಏನು ಕಾರಣ, ಅವರ 16 ಬೇಡಿಕೆಗಳೇನು? ಇಲ್ಲಿದೆ ಮಾಹಿತಿ

ಉದ್ಯಮಗಳ ಮೇಲಾಗುವ ಧನಾತ್ಮಕ ಪರಿಣಾಮ

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದಂತೆ, ಈ ತುರ್ತು ಸಾಲದ ಸೌಲಭ್ಯವು ಸಣ್ಣ ಕೈಗಾರಿಗಗಳಿಗೆ ಸಕಾಲದಲ್ಲಿ ಹಣಕಾಸಿನ ನೆರವು ನೀಡುವ ಮೂಲಕ ದೇಶೀಯ ಉತ್ಪಾದನೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳುತ್ತದೆ. ವಿಮಾನಯಾನ ಸಂಸ್ಥೆಗಳಿಗೆ ಕಾರ್ಯನಿರ್ವಹಣಾ ವೆಚ್ಚ ಸರಿದೂಗಿಸಲು ಮತ್ತು ನೌಕರರ ಸಂಬಳ, ಪಿಎಫ್ ಪಾವತಿಗಳನ್ನು ಸಮಯಕ್ಕೆ ಸರಿಯಾಗಿ ಮಾಡಲು ಇದು ಅತ್ಯಂತ ಸಹಕಾರಿಯಾಗಲಿದ್ದು, ದೇಶದಲ್ಲಿ ದೊಡ್ಡ ಮಟ್ಟದ ಉದ್ಯೋಗ ನಷ್ಟವಾಗುವುದನ್ನು ತಪ್ಪಿಸಲಿದೆ.

(ಗಮನಿಸಿ: ಮೊದಲ ಬಾರಿಗೆ ECLGS ಯೋಜನೆಯನ್ನು ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಉದ್ಯಮಗಳ ಉಳಿವಿಗಾಗಿ ಮೇ 2020 ರಲ್ಲಿ ಪ್ರಾರಂಭಿಸಲಾಗಿತ್ತು, ಈಗ ಅದರ 5ನೇ ಆವೃತ್ತಿಯನ್ನು ಜಾಗತಿಕ ಯುದ್ಧದ ಸನ್ನಿವೇಶದ ಹಿನ್ನೆಲೆಯಲ್ಲಿ ತರಲಾಗಿದೆ).

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version