ಮಲೆ ಮಹದೇಶ್ವರನಿಗೆ ಮಹಾಮೋಸ: ಸಚಿವರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗುತ್ತಿಗೆದಾರರು – Kannada News | K. Venkatesh Angered by MM Hills Poor Work: Minister Demands Action on Contractor
ಚಾಮರಾಜನಗರ, ಫೆ.24: ರಾಜ್ಯದ ಪವಿತ್ರ ಯಾತ್ರಾಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟದಲ್ಲಿ (Malai Mahadeshwara Hills) ನಡೆಯುತ್ತಿರುವ ವಿವಿಧ ಕಾಮಗಾರಿಗಳಲ್ಲಿ ಕಳಪೆ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದ ಸಚಿವ ಕೆ. ವೆಂಕಟೇಶ್, ಬೆಟ್ಟದಲ್ಲಿ ಪ್ರಗತಿಯಲ್ಲಿರುವ ತಿರುಪತಿ ಮಾದರಿಯ ಕ್ಯೂ ಲೈನ್ (ಸರತಿ ಸಾಲು) ಬ್ಲಾಕ್ ನಿರ್ಮಾಣ, ಮಾದಪ್ಪನ ಪ್ರತಿಮೆ ಹಾಗೂ…