Headlines

ಆಂಬ್ಯುಲೆನ್ಸ್ ಸಿಗದೆ ಮೃತ ಮಗನ ಶವವನ್ನು ತಳ್ಳುವ ಗಾಡಿಯಲ್ಲಿ ಹೊತ್ತೊಯ್ದ ಪೋಷಕರು – Kannada News | Family in Telangana Uses Pushcart Amid Lack of Ambulance Services

ಕರೀಂನಗರ, ಮೇ 06: ಆಧುನಿಕ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದೇವೆ ಎಂದು ಹೇಳಿಕೊಂಡರೂ, ಬಡವರ ಪಾಲಿಗೆ ಕನಿಷ್ಠ ಸೌಲಭ್ಯಗಳು ಇಂದಿಗೂ ಮರೀಚಿಕೆಯಾಗಿವೆ ಎಂಬುದಕ್ಕೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಅಂತಿಮ ಪ್ರಯಾಣಕ್ಕೆ ಒಂದು ವಾಹನವೂ ಸಿಗದೆ, ಹೆತ್ತ ಮಗನ ಶವವನ್ನು ಪೋಷಕರು ತಳ್ಳುಗಾಡಿಯಲ್ಲಿ ಸಾಗಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣನ್ನು ತೇವಗೊಳಿಸುವಂತಿದೆ. ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ನಿವಾಸಿ ಯಾಕೂಬ್ ಎಂಬ ಯುವಕ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಪೋಷಕರಿಗೆ ಆಸ್ಪತ್ರೆಯಿಂದ ಮನೆಗೆ…

Read More

ಇರು ಅಂದ್ರೆ ಇರ್‍ತೀನಿ, ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್​​ ನಿರ್ಧಾರವೇ ಫೈನಲ್; ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah on Cabinet Reshuffle, Local Polls, and Opposition Tactics

ಬೆಂಗಳೂರು, ಮೇ.6: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಐದು ವರ್ಷಗಳ ಮುಖ್ಯಮಂತ್ರಿ ಸ್ಥಾನದ ಅವಧಿಯ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಪಕ್ಷ ಐದು ವರ್ಷ ಪೂರ್ಣಗೊಳಿಸುತ್ತದೆ, ಆದರೆ ನನ್ನ ಸ್ಥಾನದ ಕುರಿತು ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಡೆಯುತ್ತೇನೆ” ಎಂದು ಅವರು ತಿಳಿಸಿದ್ದಾರೆ. ದೆಹಲಿ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಹೈಕಮಾಂಡ್ ಕರೆದರೆ ಅಥವಾ ರಾಹುಲ್ ಗಾಂಧಿ ಅಪಾಯಿಂಟ್‌ಮೆಂಟ್ ನೀಡಿದರೆ ಸಂಪುಟ ಪುನರಚನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಲು…

Read More

ದಯವಿಟ್ಟು ನನ್ನನ್ನ ಬದುಕಲು ಬಿಡಿ: ಸಿಎಂ, ಡಿಸಿಎಂಗೆ ಕೈಮುಗಿದು ಕೇಳಿಕೊಂಡ ಶೃಂಗೇರಿ ನೂತನ ಶಾಸಕ ಜೀವರಾಜ್ – Kannada News | Let Me Live: Sringeri MLA DN Jeevaraj Appeals to CM Siddaramaiah and DCM DK Shivakumar Over FIR and Oath Delay

ಬೆಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಸುತ್ತಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದೆ. ಇದೇ ಸಂದರ್ಭದಲ್ಲಿ, ಅಂಚೆ ಮತ ಮರು ಎಣಿಕೆಯ ನಂತರ ನೂತನ ಶಾಸಕರಾಗಿ ಆಯ್ಕೆಯಾದ ಡಿಎನ್ ಜೀವರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ, ‘ದಯವಿಟ್ಟು ನನ್ನನ್ನು ಬದುಕಲು ಬಿಡಿ’ ಎಂದು ಕೈಮುಗಿದು ಮನವಿ ಮಾಡಿದ್ದಾರೆ. ಚುನಾವಣಾ ಆಯೋಗದಿಂದ ಪ್ರಮಾಣಪತ್ರ ಬಂದ ಕೆಲವೇ ಸಮಯದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು ಎಂದು ಜೀವರಾಜ್ ತಿಳಿಸಿದ್ದಾರೆ. ಈ ಎಫ್‌ಐಆರ್‌ಗೆ…

Read More

ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಬಂಡಾಯ ಏಳ್ತಾರಾ ಎಐಎಡಿಎಂಕೆಯ ಕೆಲ ಶಾಸಕರು? – Kannada News | AIADMK Divided Over TVK Support: Vijays Pivotal Role in Tamil Nadu Government Formation

ಚೆನ್ನೈ, ಮೇ 06: ತಮಿಳುನಾಡು ಸರ್ಕಾರ ರಚನೆ ಸಂಬಂಧ ಟಿವಿಕೆ ಬೆಂಬಲಿಸುವ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಟಿಪಿಎಸ್ (TPS) ಬಣ ಮತ್ತು ಷಣ್ಮುಗಂ ಬಣಗಳ ನಡುವೆ ಈ ಕುರಿತು ಒಡಕು ಕಾಣಿಸಿಕೊಂಡಿದ್ದು, ಇದು ಎಐಎಡಿಎಂಕೆಗೆ ದೊಡ್ಡ ಆಘಾತ ನೀಡುವ ಸಾಧ್ಯತೆಯಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಐಎಡಿಎಂಕೆ ಪಕ್ಷದಲ್ಲಿ 35 ಶಾಸಕರು ಬಂಡಾಯ ಎದ್ದರೆ ಸಂಕಷ್ಟ ಎದುರಾಗಲಿದೆ. ಮಹಾರಾಷ್ಟ್ರದ ಶಿವಸೇನೆ ವಿಭಜನೆಯ ಉದಾಹರಣೆಯ ಆಧಾರದಲ್ಲಿ ಹೊಸ ಲೆಕ್ಕಾಚಾರಗಳು ತಮಿಳುನಾಡಲ್ಲೀಗ ಶುರುವಾಗಿವೆ. ಮತ್ತಷ್ಟು ವಿಡಿಯೋ ನೋಡಲು…

Read More

ಕುಟುಂಬದ ಜೊತೆ ಕಾಡಿನ ಪಿಸಿಮಾತು ಕೇಳಿದ ರಾಧಿಕಾ ಪಂಡಿತ್ – Kannada News | Radhika Pandit Trekking Video with Kids Ayra and Yatharv Goes Viral; Yash Busy with Toxic

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್ (Radhika Pandit) ಸದ್ಯ ಬಣ್ಣದ ಲೋಕದಿಂದ ದೂರವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ಬದುಕಿನ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ತಮ್ಮ ಮಕ್ಕಳಾದ ಆಯ್ರಾ, ಯಥರ್ವ್ ಹಾಗೂ ಪೋಷಕರೊಂದಿಗೆ ದಟ್ಟ ಅರಣ್ಯದ ನಡುವೆ ಚಾರಣ ಕೈಗೊಂಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚಾರಣದ ಹಿಂದಿನ ಕಾರಣ ನೀಡಿದ್ದಾರೆ. ಸದ್ಯ ರಾಧಿಕಾ ಪಂಡಿತ್ ಅವರ ಮಕ್ಕಳಿಗೆ ಶಾಲಾ ರಜೆ ಇರುವುದರಿಂದ, ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಅವರು…

Read More

ಭಾರತೀಯರು ವಿಶ್ವದಲ್ಲೇ ಅತ್ಯುತ್ತಮ ಪ್ರತಿಭಾನ್ವಿತರು: ಬುರ್ಜ್ ಖಲೀಫಾ ನಿರ್ಮಾತೃವಿನ ಅಂತರಂಗದ ಅನಿಸಿಕೆ – Kannada News | Burj Khalifa builder Mohamed Alabbar reveals reasons why he prefers Indians in hiring list

ಮೊಹಮ್ಮದ್ ಅಲಾಬ್ಬರ್Image Credit source: AI/Mediaforge/TV9 ಅಬುಧಾಬಿ, ಮೇ 6: ವಿಶ್ವದ ಅತ್ಯಂತ ಎತ್ತರದ ಕಟ್ಟಡವಾದ ‘ಬುರ್ಜ್ ಖಲೀಫಾ’ (Burj Khalifa) ನಿರ್ಮಿಸಿದ, ಯುಎಇ (UAE) ಮೂಲದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆ ‘ಎಮಾರ್ ಪ್ರಾಪರ್ಟೀಸ್’ (Emaar Properties) ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಮೊಹಮ್ಮದ್ ಅಲಾಬ್ಬರ್ (Mohamed Alabbar) ಅವರು ಭಾರತೀಯ ಪ್ರತಿಭೆಗಳ ಬಗ್ಗೆ ಅತ್ಯುನ್ನತ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ತಮಗೆ ಭಾರತೀಯರನ್ನು ಕೆಲಸಕ್ಕೆ ತೆಗೆದುಕೊಳ್ಳುವುದು ಏಕೆ ಹೆಚ್ಚು ಇಷ್ಟ ಎಂಬ ರಹಸ್ಯವನ್ನು ಅವರು ಬಿಚ್ಚಿಟ್ಟಿದ್ದಾರೆ. ಅಬುಧಾಬಿಯಲ್ಲಿ…

Read More

ಚಿಕ್ಕಬಳ್ಳಾಪುರದಲ್ಲೊಂದು ಅಚ್ಚರಿಯ ಘಟನೆ: ಕಳುವಾಗಿದ್ದ ಮಹಿಳೆಯ ಬಂಗಾರದ ಸರ 2 ದಿನಗಳ ಬಳಿಕ ಮನೆ ಬಳಿಯೇ ಪ್ರತ್ಯಕ್ಷ! – Kannada News | Hikkaballapur Mystery: Stolen Gold Chain Miraculously Returns Home After 2 Days

ಕಳವಾಗಿದ್ದ ಚಿನ್ನದ ಸರImage Credit source: Tv9 Kannada ಚಿಕ್ಕಬಳ್ಳಾಪುರ, ಮೇ 06: ಇತ್ತೀಚೆಗೆ ಸರಗಳ್ಳರ ಹಾವಳಿ ಹೆಚ್ಚಾಗಿದ್ದು ಒಂಟಿ ಮಹಿಳೆಯನ್ನೇ ಟಾರ್ಗೆಟ್​ ಮಾಡಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಇಂತಹುದ್ದೇ ಘಟನೆ ಮೊನ್ನೆ ಮೇ 3ರಂದು ಚಿಕ್ಕಬಳ್ಳಾಪುರ ನಗರದ ವಾರ್ಡ ನಂಬರ್​​ 23ರ ಚಾಮರಾಜಪೇಟೆಯಲ್ಲಿಯೂ ನಡೆದಿತ್ತು. ಮನೆಯ ಮುಂದಿನ ನೀರಿನ ಸಂಪ್ ನೋಡುತ್ತಿದ್ದ ಗೃಹಿಣಿ ಪ್ರಿಯಾ ಎಂಬವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಖದೀಮರು ಎಸ್ಕೇಪ್​​ ಆಗಿದ್ದರು. ಆದರೆ ವಿಚಿತ್ರ ಎಂಬಂತೆ ಘಟನೆ ನಡೆದು…

Read More

ವಧುವಿನ ಖತರ್ನಾಕ್ ವಂಚನೆ ಜಾಲ: 9 ಬಾರಿ ಮದುವೆಯಾಗಿ ವರರಿಗೆ ಪಂಗನಾಮ, ಹಣ-ಒಡವೆಯೊಂದಿಗೆ ಎಸ್ಕೇಪ್ – Kannada News | Maharashtra: Woman Accused of Repeated Marriage Fraud Across Multiple Cases

ಬೀಡ್, ಮೇ 06: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಅವಿವಾಹಿತ ಪುರುಷರನ್ನು ಗುರಿಯಾಗಿಸಿಕೊಂಡು ನಕಲಿ ವಿವಾಹಗಳ ಮೂಲಕ ಹಣ ಮತ್ತು ಆಭರಣ ದೋಚುತ್ತಿದ್ದ ಶಂಕಿತ ವಧು(Bride)ವಿನ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಮಹಿಳೆಯೊಬ್ಬರು ಏಜೆಂಟ್‌ಗಳ ಸಹಾಯದಿಂದ ಹಲವು ಪುರುಷರನ್ನು ಮದುವೆಯಾಗಿ, ಕೆಲವೇ ದಿನಗಳಲ್ಲಿ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗುತ್ತಿದ್ದ ಆರೋಪ ಕೇಳಿಬಂದಿದೆ. ಯೋಗೇಶ್ ಶಿಂಧೆ ಎಂಬ ಮಧ್ಯವರ್ತಿಗಳ ಮೂಲಕ ಈ ಮಹಿಳೆಯನ್ನು ಪರಿಚಯ ಮಾಡಿಕೊಂಡು ಮದುವೆಯಾಗಿದ್ದರು. ಏಜೆಂಟರು ಮದುವೆ ಏರ್ಪಡಿಸಲು ಅವರಿಂದ ದೊಡ್ಡ ಮೊತ್ತದ ಹಣ ಪಡೆದಿದ್ದರು. ಶಾಸ್ತ್ರೋಕ್ತವಾಗಿ ಮದುವೆಯಾದ ಕೆಲವೇ…

Read More

ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – Kannada News | Hoskote Police Bust Interstate Bike Theft Racket: 2 Arrested, 50 Bikes Worth Rs 55 Lakh Recovered

ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್…

Read More

DRDO Internship 2026: DRDO ಇಂಟರ್ನ್‌ಶಿಪ್; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಪಡೆಯುವ ಸುವರ್ಣಾವಕಾಶ! – Kannada News | DRDO Internship 2026: Apply Now for Engineering and Tech with 30,000rs Stipend!

ಇಂಟರ್ನ್‌ಶಿಪ್ ಕಾರ್ಯಕ್ರಮImage Credit source: gemini ai ಭಾರತೀಯ ರಕ್ಷಣಾ ರಂಗದ ಬೆನ್ನೆಲುಬಾಗಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), 2026ನೇ ಸಾಲಿನ ತನ್ನ ಪ್ರತಿಷ್ಠಿತ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ದೇಶದ ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ಸುಕರಾಗಿರುವ ಯುವ ಎಂಜಿನಿಯರ್‌ಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ. ಇಂಟರ್ನ್‌ಶಿಪ್‌ನ ಪ್ರಮುಖ ವಿವರಗಳು: ಈ ಕಾರ್ಯಕ್ರಮವು ಕೇವಲ ತರಬೇತಿಯಲ್ಲ, ಬದಲಾಗಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನೈಜ ಯೋಜನೆಗಳಲ್ಲಿ ವಿಜ್ಞಾನಿಗಳೊಂದಿಗೆ ಕೆಲಸ ಮಾಡುವ ಅಪರೂಪದ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ…

Read More