JP Tuminad Wedding: ರಶ್ಮಿಕಾ ಜೊತೆ ವಿವಾಹ ಆದ ‘ಸು ಫ್ರಮ್ ಸೋ’ ನಿರ್ದೇಶಕ ಜೆಪಿ ತುಮಿನಾಡು

Source link

IPL 2026: 6+2+4 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB – Kannada News | IPL 2026: RCB Playing XI For LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​  (LSG) ಹಾಗೂ ರಾಯಲ್ ಚಾಲೆಂಜರ್ಸ್ (RCB) ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಗುರುವಾರ (ಮೇ 6) ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಕಳೆದ ಬಾರಿ ಕಣಕ್ಕಿಳಿದಂತೆ 6+2+4 ಸಂಯೋಜನೆಯನ್ನು ರೂಪಿಸಲಿದ್ದಾರೆ.

ಅದರಂತೆ ಆರ್​ಸಿಬಿ ಪರ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಜಿತೇಶ್ ಶರ್ಮಾ ಹಾಗೂ ಟಿಮ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಕೃನಾಲ್ ಪಾಂಡ್ಯ ಹಾಗೂ ರೊಮಾರಿಯೊ ಶೆಫರ್ಡ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಬೌಲರ್​ಗಳಾಗಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್ ಕಾಣಿಸಿಕೊಳ್ಳುವುದು ಖಚಿತ. ಇವರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಸ್ಪಿನ್ನರ್ ಸುಯಶ್ ಶರ್ಮಾ ಕೂಡ ಸೇರ್ಪಡೆಯಾಗಲಿದ್ದಾರೆ.

ಅಂದರೆ ಆರುಬ್ಯಾಟರ್​ಗಳು, ಇಬ್ಬರು ಆಲ್​ರೌಂಡರ್​ಗಳು ಮತ್ತು ನಾಲ್ವರು ಬೌಲರ್​ಗಳೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಲಿದ್ದಾರೆ. ಅದರಂತೆ ಆರ್​ಸಿಬಿ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  • ವಿರಾಟ್ ಕೊಹ್ಲಿ
  • ಜೇಕಬ್ ಬೆಥೆಲ್
  • ದೇವದತ್ ಪಡಿಕ್ಕಲ್
  • ರಜತ್ ಪಾಟಿದಾರ್ (ನಾಯಕ)
  • ಟಿಮ್ ಡೇವಿಡ್
  • ಜಿತೇಶ್ ಶರ್ಮಾ
  • ರೊಮಾರಿಯೊ ಶೆಫರ್ಡ್​
  • ಕೃನಾಲ್ ಪಾಂಡ್ಯ
  • ಜೋಶ್ ಹೇಝಲ್​ವುಡ್​
  • ಭುವನೇಶ್ವರ್ ಕುಮಾರ್
  • ರಾಸಿಖ್ ದಾರ್
  • ಸುಯಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).

ಕಾಕ್ಸ್​ಗೆ ಸಿಗಲಿದೆಯಾ ಚಾನ್ಸ್​?

ಫಿಲ್ ಸಾಲ್ಟ್ ಅನುಪಸ್ಥಿತಿಯಲ್ಲಿ ಕಳೆದ ಮೂರು ಮ್ಯಾಚ್​ಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕಬ್ ಬೆಥೆಲ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಒಂದು ವೇಳೆ ಬೆಥೆಲ್ ಅವರನ್ನು ಆಡುವ ಬಳಗದಿಂದ ಕೈ ಬಿಟ್ಟರೆ, ಇಂಗ್ಲೆಂಡ್​ನ ಮತ್ತೋರ್ವ ಸ್ಫೋಟಕ ದಾಂಡಿಗ ಜೋರ್ಡನ್ ಕಾಕ್ಸ್​ಗೆ ಚಾನ್ಸ್ ಸಿಗಬಹುದು. ಇದರ ಹೊರತಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

ಇದನ್ನೂ ಓದಿ: IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

Source link

ಡಿ.ಕೆ. ಶಿವಕುಮಾರ್ ಜನ್ಮದಿನಕ್ಕೆ ಹೈಕಮಾಂಡ್‌ನಿಂದ ‘ಗಿಫ್ಟ್’? ಕುತೂಹಲ ಮೂಡಿಸಿದ ಡಿಕೆ ಸುರೇಶ್ ಹೇಳಿಕೆ – Kannada News | Karnataka Politics: DK Suresh Discusses Anticipated High Command Move for DK Shivakumars Birthday

ಬೆಂಗಳೂರು, ಮೇ.6: ಡಿಕೆ ಶಿವಕುಮಾರ್ ಅವರ 64ನೇ ಜನ್ಮದಿನದಂದು ಹೈಕಮಾಂಡ್‌ನಿಂದ ಮಹತ್ವದ “ಶುಭ ಸುದ್ದಿ”ಯ ನಿರೀಕ್ಷೆಯಿದೆ. ಈ ಕುರಿತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮಾತನಾಡಿ, ತಾವು ಕೂಡ ಈ ಶುಭ ಸುದ್ದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಮತ್ತು ತಾಳ್ಮೆ ಮುಖ್ಯ ಎಂದು ಅವರು ಒತ್ತಿ ಹೇಳಿದರು. “ತಾಳಿದವನು ಬಾಳಿಯಾನು” ಎಂಬ ನುಡಿಯನ್ನು ಉಲ್ಲೇಖಿಸುತ್ತಾ, ಎಲ್ಲವಕ್ಕೂ ಒಂದು ಕಾಲ ಬರುತ್ತದೆ ಎಂದು ವಿವರಿಸಿದರು. ಸರ್ಕಾರ ಮತ್ತು ಪಕ್ಷದ ಅಧ್ಯಕ್ಷರು ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ, ಅಧಿಕಾರ ಹಂಚಿಕೆ ಕುರಿತ ನಿರ್ಧಾರಗಳು ಮುಖ್ಯಮಂತ್ರಿಗಳು, ಪಕ್ಷ ಮತ್ತು ಹೈಕಮಾಂಡ್‌ನ ನಡುವೆ ನಡೆಯುತ್ತವೆ ಎಂದು ಸುರೇಶ್ ಸ್ಪಷ್ಟಪಡಿಸಿದರು. ಎಲ್ಲರಿಗೂ ಸೂಕ್ತ ಕಾಲ ಬರುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs LSG: ಯಾರಿಗೆ ಸಿಗಲಿದೆ ಚಾನ್ಸ್​?

Source link

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಪ್ರಕಟ – Kannada News | TATA IPL 2026 Playoffs Schedule

ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ಹಂತದ ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿಯ ಟೂರ್ನಿಯ ಅಂತಿಮ ಹಣಾಹಣಿಯು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 31ರಂದು ನಡೆಯಲಿದೆ. ಈ ಹಿಂದೆ ಐಪಿಎಲ್​ನ ಫೈನಲ್ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರ ಮಾಡಲಾಗಿದೆ.

3 ನಗರಗಳಲ್ಲಿ 4 ಮ್ಯಾಚ್​:

ಪ್ಲೇಆಫ್ ಹಂತದ ನಾಲ್ಕು ಪಂದ್ಯಗಳನ್ನು ಮೂರು ನಗರಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಧರ್ಮಶಾಲಾ, ಚಂಡೀಗಢ್ ಮತ್ತು ಅಹಮದಾಬಾದ್ ನಗರಗಳಲ್ಲಿ ದ್ವಿತೀಯ ಸುತ್ತಿನ ಪಂದ್ಯಗಳು ನಡೆಯಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯವು ಧರ್ಮಶಾಲಾದಲ್ಲಿ ನಡೆದರೆ, ಎಲಿಮಿನೇಟರ್ ಹಾಗೂ ಎರಡನೇ ಕ್ವಾಲಿಫೈಯರ್ ಪಂದ್ಯಗಳು ಚಂಡೀಗಢ್​ನಲ್ಲಿ ಜರುಗಲಿದೆ. ಇನ್ನು ಫೈನಲ್ ಪಂದ್ಯಕ್ಕೆ ಅಹಮದಾಬಾದ್​ ನಗರ ಆತಿಥ್ಯವಹಿಸಲಿದೆ.

  • ಕ್ವಾಲಿಫೈಯರ್ 1:  ಮೇ 26 (ಮಂಗಳವಾರ) | HPCA ಸ್ಟೇಡಿಯಂ | ಧರ್ಮಶಾಲಾ |
  • ಎಲಿಮಿನೇಟರ್: ಮೇ 27 (ಬುಧವಾರ) | ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ | ಚಂಡೀಗಢ್ |
  • ಕ್ವಾಲಿಫೈಯರ್ 2: ಮೇ 29 (ಶುಕ್ರವಾರ) | ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ | ಚಂಡೀಗಢ್ |
  • ಫೈನಲ್: ಮೇ 31 (ಭಾನುವಾರ) | ನರೇಂದ್ರ ಮೋದಿ ಸ್ಟೇಡಿಯಂ | ಅಹಮದಾಬಾದ್ |

ಬೆಂಗಳೂರಿನ ಅಭಿಮಾನಿಗಳಿಗೆ ನಿರಾಸೆ:

ಪೂರ್ವ ನಿಗದಿಯಂತೆ ಈ ಬಾರಿಯ ಐಪಿಎಲ್ ಫೈನಲ್ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಆದರೆ, ತಾಂತ್ರಿಕ ಮತ್ತು ವ್ಯವಸ್ಥಾಪನಾ ಕಾರಣಗಳಿಂದಾಗಿ ಬಿಸಿಸಿಐ ಕೊನೆಯ ಕ್ಷಣದಲ್ಲಿ ಫೈನಲ್ ಪಂದ್ಯದ ಆತಿಥ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿದೆ. ಇದಕ್ಕೆ ಮುಖ್ಯ ಕಾರಣಗಳು ಈ ಕೆಳಗಿನಂತಿವೆ…

  •  ಶಾಸಕರ ಟಿಕೆಟ್ ಹಂಚಿಕೆ ವಿವಾದ: ಬಿಸಿಸಿಐನ ತನ್ನ ನಿರ್ಧಾರ ಬದಲಿಸಲು ಪ್ರಮುಖ ಕಾರಣವೆಂದರೆ ಸ್ಥಳೀಯ ಶಾಸಕರಿಗೆ ನೀಡಲಾಗುವ ಟಿಕೆಟ್‌ಗಳ ಹಂಚಿಕೆ. ವರದಿಗಳ ಪ್ರಕಾರ, ರಾಜ್ಯ ಸರ್ಕಾರ ಮತ್ತು ಕೆಎಸ್‌ಸಿಎ (KSCA) ನಡುವೆ ಟಿಕೆಟ್ ಕೋಟಾದ ಕುರಿತು ಭಿನ್ನಾಭಿಪ್ರಾಯಗಳು ಮೂಡಿವೆ. ಈ ರಾಜಕೀಯ ಹಸ್ತಕ್ಷೇಪ ಮತ್ತು ಟಿಕೆಟ್ ಗೊಂದಲಗಳು ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಫೈನಲ್ ಪಂದ್ಯವನ್ನು ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
  • ಭದ್ರತಾ ಲೋಪ ಮತ್ತು ಸಿಸಿಟಿವಿ ವಿವಾದ: ಇತ್ತೀಚೆಗೆ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯದ ವೇಳೆ ನಡೆದ ಭದ್ರತಾ ಲೋಪವು ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಸಿಸಿಟಿವಿ ವ್ಯವಸ್ಥೆ ಮಾಡಿದ್ದ ಕಂಪೆನಿಯ ಸಿಬ್ಬಂದಿಯೇ ಸುಮಾರು 240 ಕ್ಯಾಮೆರಾಗಳ ಸಂಪರ್ಕವನ್ನು ಕಡಿತಗೊಳಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಫೈನಲ್‌ನಂತಹ ಹೈ-ಪ್ರೊಫೈಲ್ ಪಂದ್ಯಕ್ಕೆ ಇಂತಹ ಭದ್ರತಾ ಲೋಪಗಳು ದೊಡ್ಡ ಹಿನ್ನಡೆಯಾಗಿವೆ.
  • ಕ್ರೀಡಾಂಗಣದ ಸುರಕ್ಷತೆ ಮತ್ತು ಮೂಲಸೌಕರ್ಯ: ಕಳೆದ ವರ್ಷ ಆರ್‌ಸಿಬಿ ಚಾಂಪಿಯನ್ ಆದಾಗ ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ನಡೆದ ನೂಕುನುಗ್ಗಲು ಮೈದಾನದ ಸುರಕ್ಷತೆಯ ಬಗ್ಗೆ ಪ್ರಶ್ನೆ ಎತ್ತಿತ್ತು. ನ್ಯಾ. ಜಾನ್ ಮೈಕೆಲ್ ಡಿಕುನ್ಹಾ ಅವರ ವರದಿಯು ಕ್ರೀಡಾಂಗಣದ ಕೆಲವು ವಿನ್ಯಾಸಗಳು “ಹೆಚ್ಚಿನ ಜನಸಂದಣಿಗೆ ಸುರಕ್ಷಿತವಲ್ಲ” ಎಂದು ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ ಸುರಕ್ಷತೆಯೂ ಬಿಸಿಸಿಐನ ಪ್ರಮುಖ ಕಾಳಜಿಯಾಗಿದೆ.

ಇದನ್ನೂ ಓದಿ: DK ಕೋಚ್ ಆಗಲು ಇವರೇ ಕಾರಣ..!

ಈ ಎಲ್ಲಾ ಕಾರಣಗಳಿಂದಾಗಿ ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್​ನ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ. ಅದರಂತೆ ಮೇ 31 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ಜರುಗಲಿದೆ.

Published On – 1:15 pm, Wed, 6 May 26

Source link

ಆಂಬ್ಯುಲೆನ್ಸ್ ಸಿಗದೆ ಮೃತ ಮಗನ ಶವವನ್ನು ತಳ್ಳುವ ಗಾಡಿಯಲ್ಲಿ ಹೊತ್ತೊಯ್ದ ಪೋಷಕರು – Kannada News | Family in Telangana Uses Pushcart Amid Lack of Ambulance Services

ಕರೀಂನಗರ, ಮೇ 06: ಆಧುನಿಕ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದೇವೆ ಎಂದು ಹೇಳಿಕೊಂಡರೂ, ಬಡವರ ಪಾಲಿಗೆ ಕನಿಷ್ಠ ಸೌಲಭ್ಯಗಳು ಇಂದಿಗೂ ಮರೀಚಿಕೆಯಾಗಿವೆ ಎಂಬುದಕ್ಕೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಅಂತಿಮ ಪ್ರಯಾಣಕ್ಕೆ ಒಂದು ವಾಹನವೂ ಸಿಗದೆ, ಹೆತ್ತ ಮಗನ ಶವವನ್ನು ಪೋಷಕರು ತಳ್ಳುಗಾಡಿಯಲ್ಲಿ ಸಾಗಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣನ್ನು ತೇವಗೊಳಿಸುವಂತಿದೆ. ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ನಿವಾಸಿ ಯಾಕೂಬ್ ಎಂಬ ಯುವಕ ಅನಾರೋಗ್ಯದಿಂದ ಸಾವನ್ನಪ್ಪಿದ್ದ.

ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಪೋಷಕರಿಗೆ ಆಸ್ಪತ್ರೆಯಿಂದ ಮನೆಗೆ ಮೃತದೇಹವನ್ನು ಸಾಗಿಸಲು ಯಾವುದೇ ಸರ್ಕಾರಿ ವಾಹನ ಅಥವಾ ಆಂಬ್ಯುಲೆನ್ಸ್(Ambulance) ಲಭ್ಯವಾಗಲಿಲ್ಲ. ಅತ್ತ ಖಾಸಗಿ ಆಂಬ್ಯುಲೆನ್ಸ್ ಪಡೆಯಲು ಹಣದ ಬಲವಿಲ್ಲದ ಕಾರಣ, ಅನಿವಾರ್ಯವಾಗಿ ಶವವನ್ನು ನಿಂಬೆಹಣ್ಣು ಮಾರುವ ತಳ್ಳುಗಾಡಿಯ ಮೇಲೆ ಮಲಗಿಸಿ ತಮ್ಮ ನಿವಾಸಕ್ಕೆ ಕೊಂಡೊಯ್ಯಬೇಕಾಯಿತು.

ಮೂಲಭೂತ ಸೌಕರ್ಯಗಳ ಕೊರತೆಯನ್ನು ಬಹಿರಂಗಪಡಿಸುವ ಇಂತಹ ಘಟನೆಗಳು ಇದೇ ಮೊದಲಲ್ಲ. ವ್ಯವಸ್ಥೆಯ ಅಸಡ್ಡೆಗೆ ಸಾಕ್ಷಿಯಾಗಿ ಈ ಹಿಂದೆಯೂ ಇಂತಹ ಕರಾಳ ದೃಶ್ಯಗಳು ವರದಿಯಾಗಿವೆ. ಜನವರಿಯಲ್ಲಿ ಫರಿದಾಬಾದ್‌ನ ಆಸ್ಪತ್ರೆಯಲ್ಲಿ ಕ್ಷಯರೋಗದಿಂದ ಮೃತಪಟ್ಟ 35 ವರ್ಷದ ಮಹಿಳೆಯ ಶವವನ್ನು ಸಾಗಿಸಲು ನೆರವು ಸಿಗದಿದ್ದಾಗ, ಕುಟುಂಬದವರು 12 ಕಿಲೋಮೀಟರ್ ದೂರ ಮೋಟಾರ್‌ಚಾಲಿತ ತಳ್ಳುಗಾಡಿಯಲ್ಲೇ ಶವ ಸಾಗಿಸಿದ್ದರು. ಆನ್‌ಲೈನ್‌ನಲ್ಲಿ ಹರಿದಾಡಿದ ವಿಡಿಯೋದಲ್ಲಿ ಪುಟ್ಟ ಮಗ ತನ್ನ ತಾಯಿಯ ಮುಖವನ್ನು ಬಟ್ಟೆಯಿಂದ ಮುಚ್ಚುತ್ತಿರುವುದು ಕಂಡುಬಂದಿತ್ತು.

ಆಗಸ್ಟ್​ನಲ್ಲಿ ತೆಲಂಗಾಣದಲ್ಲಿ ಅಪಘಾತದಲ್ಲಿ ಮೃತಪಟ್ಟ ಮೊಗುಳಯ್ಯ ಎಂಬ 26 ವರ್ಷದ ಯುವಕನ ಶವ ಸಾಗಿಸಲು ಆಂಬ್ಯುಲೆನ್ಸ್ ಬಾರದೆ ಹೋದಾಗ, ಸ್ವತಃ ಪೊಲೀಸ್ ಅಧಿಕಾರಿಯೊಬ್ಬರು ತಳ್ಳುಗಾಡಿಯಲ್ಲೇ ಮರಣೋತ್ತರ ಪರೀಕ್ಷೆಗೆ ಶವವನ್ನು ಸಾಗಿಸಿದ್ದರು. ಯಾಕೂಬ್ ಕುಟುಂಬಕ್ಕೆ ಎದುರಾದ ಈ ದುಸ್ಥಿತಿಯನ್ನು ಕಂಡು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿಯೂ ಮೂಲಭೂತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ವಿಫಲವಾಗಿರುವ ವ್ಯವಸ್ಥೆಯ ವಿರುದ್ಧ ಜನರು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಇರು ಅಂದ್ರೆ ಇರ್‍ತೀನಿ, ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್​​ ನಿರ್ಧಾರವೇ ಫೈನಲ್; ಶಾಕಿಂಗ್ ಹೇಳಿಕೆ ನೀಡಿದ ಸಿದ್ದರಾಮಯ್ಯ – Kannada News | Karnataka CM Siddaramaiah on Cabinet Reshuffle, Local Polls, and Opposition Tactics

ಬೆಂಗಳೂರು, ಮೇ.6: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಐದು ವರ್ಷಗಳ ಮುಖ್ಯಮಂತ್ರಿ ಸ್ಥಾನದ ಅವಧಿಯ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಪಕ್ಷ ಐದು ವರ್ಷ ಪೂರ್ಣಗೊಳಿಸುತ್ತದೆ, ಆದರೆ ನನ್ನ ಸ್ಥಾನದ ಕುರಿತು ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದರಂತೆ ನಡೆಯುತ್ತೇನೆ” ಎಂದು ಅವರು ತಿಳಿಸಿದ್ದಾರೆ. ದೆಹಲಿ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಹೈಕಮಾಂಡ್ ಕರೆದರೆ ಅಥವಾ ರಾಹುಲ್ ಗಾಂಧಿ ಅಪಾಯಿಂಟ್‌ಮೆಂಟ್ ನೀಡಿದರೆ ಸಂಪುಟ ಪುನರಚನೆ ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಲು ತೆರಳುವುದಾಗಿ ಹೇಳಿದ್ದಾರೆ. ಇದುವರೆಗೆ ಯಾವುದೇ ಅಪಾಯಿಂಟ್‌ಮೆಂಟ್ ಕೇಳಿಲ್ಲ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಪರ ಜನಾಭಿಪ್ರಾಯ ಇರುವುದರಿಂದ ಚುನಾವಣೆಗಳನ್ನು ತಕ್ಷಣದಲ್ಲಿ ನಡೆಸುವುದಾಗಿ ಘೋಷಿಸಿದರು. ವಿರೋಧ ಪಕ್ಷಗಳ ತಂತ್ರಗಳನ್ನು ತಳ್ಳಿಹಾಕಿದ ಅವರು, ವಿರೋಧ ಪಕ್ಷಗಳಿಗೆ ಯಾವುದೇ ತಂತ್ರಗಳಿಲ್ಲ, ಕೇವಲ ಕುತಂತ್ರಗಳು ಮಾತ್ರ ಎಂದು ವ್ಯಂಗ್ಯವಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಯವಿಟ್ಟು ನನ್ನನ್ನ ಬದುಕಲು ಬಿಡಿ: ಸಿಎಂ, ಡಿಸಿಎಂಗೆ ಕೈಮುಗಿದು ಕೇಳಿಕೊಂಡ ಶೃಂಗೇರಿ ನೂತನ ಶಾಸಕ ಜೀವರಾಜ್ – Kannada News | Let Me Live: Sringeri MLA DN Jeevaraj Appeals to CM Siddaramaiah and DCM DK Shivakumar Over FIR and Oath Delay

ಬೆಂಗಳೂರು, ಮೇ 6: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದ ಸುತ್ತಲಿನ ರಾಜಕೀಯ ಜಟಾಪಟಿ ತೀವ್ರಗೊಂಡಿದೆ. ಇದೇ ಸಂದರ್ಭದಲ್ಲಿ, ಅಂಚೆ ಮತ ಮರು ಎಣಿಕೆಯ ನಂತರ ನೂತನ ಶಾಸಕರಾಗಿ ಆಯ್ಕೆಯಾದ ಡಿಎನ್ ಜೀವರಾಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ, ‘ದಯವಿಟ್ಟು ನನ್ನನ್ನು ಬದುಕಲು ಬಿಡಿ’ ಎಂದು ಕೈಮುಗಿದು ಮನವಿ ಮಾಡಿದ್ದಾರೆ. ಚುನಾವಣಾ ಆಯೋಗದಿಂದ ಪ್ರಮಾಣಪತ್ರ ಬಂದ ಕೆಲವೇ ಸಮಯದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು ಎಂದು ಜೀವರಾಜ್ ತಿಳಿಸಿದ್ದಾರೆ. ಈ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ, ಹಾಗೂ ಪ್ರಕರಣದ ವಿಚಾರಣೆ ಜುಲೈ 7ಕ್ಕೆ ಮುಂದೂಡಲ್ಪಟ್ಟಿದೆ.

ಅಂಚೆ ಮತ ಮರು ಎಣಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಅದರಂಗೆ ಮರು ಎಣಿಕೆ ನಡೆದು ತಾವು ಶಾಸಕರಾಗಿ ಆಯ್ಕೆಯಾಗಿದ್ದರೂ, ಪ್ರಮಾಣವಚನಕ್ಕೆ ಅವಕಾಶ ನೀಡಲಾಗುತ್ತಿಲ್ಲ ಎಂದು ಜೀವರಾಜ್ ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಪ್ರಮಾಣವಚನಕ್ಕೆ ಯಾವುದೇ ಅಡ್ಡಿ ಇಲ್ಲ. ಇದು ತಾಂತ್ರಿಕ ವಿಚಾರವಾಗಿದ್ದು, ನಿಯಮಾನುಸಾರ ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ವೋಟ್ ಕಳ್ಳತನ ಆರೋಪಕ್ಕೆ ಪ್ರತಿಕ್ರಿಯಿಸಿದ ಜೀವರಾಜ್, ರಾಜಕೀಯ ಹಿರಿಯರಿಂದ ಇಂತಹ ಆರೋಪಗಳು ತಮಗೆ ನೋವುಂಟು ಮಾಡಿವೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿವಿಕೆಗೆ ಬಂಬಲ ವಿಚಾರದಲ್ಲಿ ಭಿನ್ನಮತ: ಬಂಡಾಯ ಏಳ್ತಾರಾ ಎಐಎಡಿಎಂಕೆಯ ಕೆಲ ಶಾಸಕರು? – Kannada News | AIADMK Divided Over TVK Support: Vijays Pivotal Role in Tamil Nadu Government Formation

ಚೆನ್ನೈ, ಮೇ 06: ತಮಿಳುನಾಡು ಸರ್ಕಾರ ರಚನೆ ಸಂಬಂಧ ಟಿವಿಕೆ ಬೆಂಬಲಿಸುವ ವಿಚಾರದಲ್ಲಿ ಎಐಎಡಿಎಂಕೆ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಟಿಪಿಎಸ್ (TPS) ಬಣ ಮತ್ತು ಷಣ್ಮುಗಂ ಬಣಗಳ ನಡುವೆ ಈ ಕುರಿತು ಒಡಕು ಕಾಣಿಸಿಕೊಂಡಿದ್ದು, ಇದು ಎಐಎಡಿಎಂಕೆಗೆ ದೊಡ್ಡ ಆಘಾತ ನೀಡುವ ಸಾಧ್ಯತೆಯಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಐಎಡಿಎಂಕೆ ಪಕ್ಷದಲ್ಲಿ 35 ಶಾಸಕರು ಬಂಡಾಯ ಎದ್ದರೆ ಸಂಕಷ್ಟ ಎದುರಾಗಲಿದೆ. ಮಹಾರಾಷ್ಟ್ರದ ಶಿವಸೇನೆ ವಿಭಜನೆಯ ಉದಾಹರಣೆಯ ಆಧಾರದಲ್ಲಿ ಹೊಸ ಲೆಕ್ಕಾಚಾರಗಳು ತಮಿಳುನಾಡಲ್ಲೀಗ ಶುರುವಾಗಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕುಟುಂಬದ ಜೊತೆ ಕಾಡಿನ ಪಿಸಿಮಾತು ಕೇಳಿದ ರಾಧಿಕಾ ಪಂಡಿತ್ – Kannada News | Radhika Pandit Trekking Video with Kids Ayra and Yatharv Goes Viral; Yash Busy with Toxic

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್ (Radhika Pandit) ಸದ್ಯ ಬಣ್ಣದ ಲೋಕದಿಂದ ದೂರವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ಬದುಕಿನ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ತಮ್ಮ ಮಕ್ಕಳಾದ ಆಯ್ರಾ, ಯಥರ್ವ್ ಹಾಗೂ ಪೋಷಕರೊಂದಿಗೆ ದಟ್ಟ ಅರಣ್ಯದ ನಡುವೆ ಚಾರಣ ಕೈಗೊಂಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚಾರಣದ ಹಿಂದಿನ ಕಾರಣ ನೀಡಿದ್ದಾರೆ.

ಸದ್ಯ ರಾಧಿಕಾ ಪಂಡಿತ್ ಅವರ ಮಕ್ಕಳಿಗೆ ಶಾಲಾ ರಜೆ ಇರುವುದರಿಂದ, ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಅವರು ಈ ಪ್ರವಾಸ ಹಮ್ಮಿಕೊಂಡಿದ್ದಾರೆ. ಸುಡುವ ಬೇಸಿಗೆಯ ನಡುವೆಯೂ ಅರಣ್ಯ ಹಾದಿಯಲ್ಲಿ ಸಾಗುವುದು, ಮರ ಹತ್ತುವುದು ಹಾಗೂ ತೊರೆಯ ಬದಿಯ ಜಾರುಬಂಡೆಗಳ ಮೇಲೆ ನಡೆಯುವುದು ಒಂದು ಅದ್ಭುತ ಅನುಭವ ಎಂದು ರಾಧಿಕಾ ಬರೆದುಕೊಂಡಿದ್ದಾರೆ. ‘ಕಾಡಿನ ಹಾದಿಯಲ್ಲಿ ಗಾಳಿಯ ಪಿಸುಮಾತು, ಎಲೆಗಳ ಶಬ್ದ ಮತ್ತು ಹಕ್ಕಿಗಳ ಚಿಲಿಪಿಲಿ ನಾದದ ನಡುವೆ ನಡೆಯುವ ಸುಖವೇ ಬೇರೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಕುಟುಂಬದ ಈ ಪ್ರವಾಸದಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿಲ್ಲ. ಯಶ್ ಸದ್ಯ ತಮ್ಮ ಬಹುನಿರೀಕ್ಷಿತ ಸಿನಿಮಾವಾದ ‘ಟಾಕ್ಸಿಕ್’ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಕೆಲಸ ಇರುವುದರಿಂದ ಅವರು ಈ ಪ್ರವಾಸದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ. ಅವರ ಅನುಪಸ್ಥಿತಿಯಲ್ಲಿ ರಾಧಿಕಾ ಅವರು ಮಕ್ಕಳ ಜೊತೆ ಕಾಲ ಕಳೆದು, ಒಂದು ಸಣ್ಣ ವಿರಾಮದ ಖುಷಿ ಅನುಭವಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್

ರಾಧಿಕಾ ಪಂಡಿತ್ ಅವರ ಈ ವಿಡಿಯೋ ನೋಡಿ ಅಭಿಮಾನಿಗಳು ಅವರು ಮತ್ತೆ ಚಿತ್ರರಂಗಕ್ಕೆ ಮರಳಲಿ ಎಂದು ಆಶಿಸುತ್ತಿದ್ದಾರೆ. ಆದರೆ, ಲಭ್ಯವಿರುವ ಮಾಹಿತಿಯ ಪ್ರಕಾರ ರಾಧಿಕಾ ಸದ್ಯಕ್ಕೆ ಸಿನಿಮಾ ರಂಗಕ್ಕೆ ಮರಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಸದ್ಯಕ್ಕೆ ಅವರು ತಮ್ಮ ಪೂರ್ಣ ಸಮಯವನ್ನು ಮಕ್ಕಳ ಪಾಲನೆ ಮತ್ತು ಕುಟುಂಬಕ್ಕಾಗಿ ಮೀಸಲಿಟ್ಟಿದ್ದಾರೆ. ಅವರ ಈ ಅರಣ್ಯ ಪಯಣದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version