ಹಿಮಾಚಲ ಪ್ರದೇಶ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು
ಶಿಮ್ಲಾ, ಏಪ್ರಿಲ್ 13: ಹಿಮಾಚಲ ಪ್ರದೇಶ ಇಂದು(ಏಪ್ರಿಲ್ 13) ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ(Murder) ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು…