The Wedding of VIROSH: ವಿವಾಹಕ್ಕೂ ಮೊದಲು ಸಖತ್ ಎಂಜಾಯ್​​ ಮಾಡಿದ ವಿಜಯ್-ರಶ್ಮಿಕಾ – Kannada News | Virosh Wedding Confirmed: Vijay Deverakonda and Rashmika Mandanna’s Udaipur Pre Wedding Fun

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ವಿವಾಹ ಆಗೋದು ಅಧಿಕೃತ ಆಗಿದೆ. ಸ್ವತಃ ರಶ್ಮಿಕಾ ಮಂದಣ್ಣ ಅವರೇ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಈ ಮಧ್ಯೆ ದಂಪತಿಗಳು ಪ್ರೀ ವೆಡ್ಡಿಂಗ್ ಸೆಲಬ್ರೇಷನ್ ಅಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಾ ಇದೆ. ಇದು ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಿದೆ.

ತಮ್ಮ ಜೋಡಿಯನ್ನು ವಿರೋಶ್ ಎಂದು ಕರೆದುಕೊಂಡಿದ್ದಾರೆ ರಶ್ಮಿಕಾ ಹಾಗೂ ವಿಜಯ್. ಇದು ಅಭಿಮಾನಿಗಳೇ ಇಟ್ಟ ಹೆಸರು ಎಂದು ಅವರು ಹೇಳಿದ್ದಾರೆ. ಈಗಾಗಲೇ ಭಾವಿ ದಂಪತಿಗಳು ಉದಯಪುರ ಸೇರಿದ್ದು, ಅಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಇಡೀ ಕುಟುಂಬ ಈಗಾಗಲೇ ಅಲ್ಲಿ ನೆಲೆಯೂರಿದೆ. ನೀರಿನಲ್ಲಿ ನೆಟ್ ಕಟ್ಟಿ ಕುಟುಂಬದವರ ಜೊತೆ ವಿಜಯ್ ದೇವರಕೊಂಡ ವಾಲಿಬಾಲ್ ಆಡಿದ್ದಾರೆ. ಈ ಸಂದರ್ಭದ ಫೋಟೋನ ಇನ್​​ಸ್ಟಾಗ್ರಾಮ್ ಸ್ಟೇಟಸ್​​ನ್ಲಿ ಹಂಚಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಜಾಪನೀಸ್ ಡಿನ್ನರ್ ಆಯೋಜನೆ ಮಾಡಿದ್ದರು. ಈ ಸಂದರ್ಭದ ಫೋಟೋನ ಹಂಚಿಕೊಳ್ಳಲಾಗಿದೆ. ಇದರಲ್ಲಿ ಜಾಪನೀಸ್ ಅಡುಗೆ ಊಟ ಇರುವ ಮೆನ್ಯು ಸಾಕಷ್ಟು ಗಮನ ಸೆಳೆದಿದೆ. ರಶ್ಮಿಕಾ ಮಂದಣ್ಣ ಅವರ ಮೆನ್ಯು ಕಾರ್ಡ್ ಬಳಿ ಗ್ರೀನ್ ಆ್ಯಪಲ್ ಹಾಗೂ ದ್ರಾಕ್ಷಿಗಳನ್ನು ಇಡಲಾಗಿದೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ವಿವಾಹ ಆಗಲಿದ್ದಾರೆ. ಉದಯಪುರದ ಐಟಿಸಿ ಹೋಟೆಲ್​ ಅಲ್ಲಿ ಈ ವಿವಾಹ ನಡೆಯುತ್ತಿದೆ. ಡೆಸ್ಟಿನೇಷನ್ ವಿವಾಹಗಳನ್ನು ಆಯೋಜನೆ ಮಾಡಲು ಉದಯಪುರ ಮುಂಚೂಣಿಯಲ್ಲಿ ಇದೆ. ಈ ಕಾರಣದಿಂದಲೇ ಈ ಜಾಗವನ್ನು ಆಯ್ಕೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: The Wedding of VIROSH: ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ ಎಷ್ಟು?

ವಿಜಯ್ ದೇವರಕೊಂಡ ಹಾಗು ರಶ್ಮಿಕಾ ಮಂದಣ್ಣ ಅವರು ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಸಿನಿಮಾ ಗಮನ ಸೆಳೆಯಿತು. ಈ ಚಿತ್ರದ ಬಳಿಕ ಇವರ ಲವ್​​ಸ್ಟೋರಿ ಶುರುವಾಯಿತು ಎಂದು ಹೇಳಲಾಗುತ್ತಾ ಇದೆ. ಈಗ ಇವರು ಮದುವೆ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:01 am, Tue, 24 February 26

Source link

ಜಾರ್ಖಂಡ್​ನಲ್ಲಿ ಏರ್ ಆಂಬ್ಯುಲೆನ್ಸ್​ ಅಪಘಾತ, ರೋಗಿ ಸೇರಿ 7 ಮಂದಿ ಪ್ರಯಾಣಿಕರ ದುರ್ಮರಣ – Kannada News | Tragic Air Ambulance Crash in Jharkhand: All Seven Lives Lost

ರಾಂಚಿ, ಫೆಬ್ರವರಿ 24: ಏರ್ ಅಂಬ್ಯುಲೆನ್ಸ್​ ಅಪಘಾತಕ್ಕೀಡಾಗಿ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್​ನ ಛತ್ರ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಂಚಿಯಿಂದ ಹೊರಟ ಸ್ವಲ್ಪ ಸಮಯದ ನಂತರ ವಿಮಾನವು ಸಿಮಾರಿಯಾ ಬಳಿ ಪತನಗೊಂಡಿತು. ಅದು ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7.11 ಕ್ಕೆ ಹೊರಟು ಘಟನೆಯ ಸಮಯದಲ್ಲಿ ದೆಹಲಿಗೆ ಹೋಗುತ್ತಿತ್ತು. ಏರ್ ಆಂಬ್ಯುಲೆನ್ಸ್ ಅನ್ನು ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿತ್ತು.

ಏರ್ ಆಂಬ್ಯುಲೆನ್ಸ್‌ನಲ್ಲಿದ್ದ ಏಳು ಮಂದಿಯೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ ತೆರಳುತ್ತಿತ್ತು ಎಂದು ಛತ್ರ ಜಿಲ್ಲಾಧಿಕಾರಿ ಕೀರ್ತಿಶ್ರೀ ಜಿ ತಿಳಿಸಿದ್ದಾರೆ. ವಿಮಾನವು ಸಂಜೆ 7.30 ರ ಸುಮಾರಿಗೆ ನಾಪತ್ತೆಯಾಗಿತ್ತು. ಅದು ಸಿಮಾರಿಯಾದ ಬರಿಯಾಟು ಪಂಚಾಯತ್ ಪ್ರದೇಶದಲ್ಲಿ ಪತನಗೊಂಡಿತ್ತು ಎಂದು ಅವರು ಹೇಳಿದ್ದಾರೆ.

ಅಪಘಾತಕ್ಕೆ ಗುಡುಗು ಸಹಿತ ಮಳೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.ಮೃತರನ್ನು ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಕ್ಯಾಪ್ಟನ್ ಸವ್ರಜ್‌ದೀಪ್ ಸಿಂಗ್, ಸಂಜಯ್ ಕುಮಾರ್, ವಿಕಾಸ್ ಕುಮಾರ್ ಗುಪ್ತಾ, ಸಚಿನ್ ಕುಮಾರ್ ಮಿಶ್ರಾ, ಅರ್ಚನಾ ದೇವಿ ಮತ್ತು ಧುರು ಕುಮಾರ್ ಎಂದು ಹೆಸರಿಸಲಾಗಿದೆ. ಈ ವಿಮಾನವು ದೆಹಲಿ ಮೂಲದ ನಾನ್-ಶೆಡ್ಯೂಲ್ಡ್ ಆಪರೇಟರ್ ರೆಡ್‌ಬರ್ಡ್‌ಗೆ ಸೇರಿತ್ತು. ಲತೇಹಾರ್ ಜಿಲ್ಲೆಯ ಚಂದ್ವಾ ನಿವಾಸಿ ಸಂಜಯ್ ಕುಮಾರ್ (41) ಎಂಬ ರೋಗಿಯನ್ನು ಫೆಬ್ರವರಿ 16 ರಂದು ಆಸ್ಪತ್ರೆಗೆ ಕರೆತರಲಾಗಿತ್ತು, ಅವರ ದೇಹ ಶೇ.65ರಷ್ಟು ಸುಟ್ಟಿತ್ತು. ಮುಂದುವರಿದ ಚಿಕಿತ್ಸೆಗಾಗಿ ರೋಗಿಯನ್ನು ದೆಹಲಿಗೆ ಕರೆದೊಯ್ಯಲು ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮೈಸೂರಿನಲ್ಲಿ ಮುಂದುವರಿದ ಡ್ರಗ್ ಬೇಟೆ: ಮಾದಕವಸ್ತು ಸಾಗಿಸುತ್ತಿದ್ದ ನಾಲ್ವರ ಬಂಧನ – Kannada News | Drug Crackdown Continues in Mysuru: Four Arrested With 103 Grams MDMA Worth Rs 10.3 Lakh

ಪೊಲೀಸರು ವಶಕ್ಕೆ ಪಡೆದಿರುವ ಎಂಡಿಎಂಎ ಹಾಗೂ ಆರೋಪಿಗಳುImage Credit source: tv9

ಮೈಸೂರು, ಫೆಬ್ರವರಿ 24: ಮೈಸೂರು (Mysuru) ನಗರದಲ್ಲಿ ಡ್ರಗ್ ಹಾವಳಿ ಇನ್ನೂ ನಿಂತಿಲ್ಲ. ಮಹಾರಾಷ್ಟ್ರ ಪೊಲೀಸರು ಬಂದು ಕಾರ್ಯಾಚರಣೆ ನಡೆಸಿದ ನಂತರ ಪದೇಪದೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಹಾಗೂ ಪೂರೈಕೆ ಮಾಡುತ್ತಿರುವ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಇದೀಗ ಸೋಮವಾರ ಮೈಸೂರು ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಳಿ ಮಾಡಿರುವ ಪೊಲೀಸರು, 10.30 ಲಕ್ಷ ರೂ. ಮೌಲ್ಯದ 103 ಗ್ರಾಂ ಎಂಡಿಎಂಎ ವಶಕ್ಕೆ ಪಡೆದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿಯಾವುಲ್ಲಾ, ಜಾವೇದ್ ಅಹ್ಮದ್, ಸೋಹೆಲ್, ನೂಯೇದ್ ಎಂದು ಗುರುತಿಸಲಾಗಿದೆ.

ಆರೋಪಿಗಳ ಬಳಿಯಿಂದ ಇನ್ನೋವಾ ಕಾರು, 5 ಮೊಬೈಲ್​ಗಳನ್ನೂ ಜಪ್ತಿ ಮಾಡಲಾಗಿದೆ.

ಮೈಸೂರಿನಲ್ಲಿ ಇತ್ತೀಚಿನ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಗಳ ವಿವರ

2026 ಫೆಬ್ರವರಿ 17: ಸಿಸಿಬಿ ಪೊಲೀಸರು ಬೆಂಗಳೂರು ಮೂಲದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ, ಅವರಿಂದ 6.35 ಲಕ್ಷ ರೂ. ಮೌಲ್ಯದ ಎಂಡಿಎಂಎ ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದರು.

2026 ಫೆಬ್ರವರಿ 15: ಮಂಡಿ ಪೊಲೀಸರು ಮೊಹಮ್ಮದ್ ರೋಷನ್ ಎಂಬಾತನನ್ನು ಬಂಧಿಸಿ 4 ಲಕ್ಷ ರೂ. ಮೌಲ್ಯದ 41 ಗ್ರಾಂ ಎಂಡಿಎಂಎ ಜಪ್ತಿ ಮಾಡಿದ್ದರು. ಈತ ಬೆಂಗಳೂರಿನಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

2026 ಫೆಬ್ರವರಿ 12: ಮೈಸೂರು ನಗರದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಸಿಸಿಬಿ ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದರು. ಒಟ್ಟು 3 ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ ಪಡೆದಿದ್ದರು.

2026 ಫೆಬ್ರವರಿ 7: ಸಾತಗಳ್ಳಿ ಬಳಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ 1.20 ಲಕ್ಷ ರೂ. ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿತ್ತು.

2026 ಜನವರಿ 30: ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಘಟಕ (NCB) ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ರಹಸ್ಯವಾಗಿ ನಡೆಯುತ್ತಿದ್ದ ಹೈಟೆಕ್ ಡ್ರಗ್ಸ್ ತಯಾರಿಕಾ ಘಟಕವನ್ನು ಪತ್ತೆಹಚ್ಚಿ, ಕೋಟ್ಯಂತರ ರೂ. ಮೌಲ್ಯದ ಮಾದಕವಸ್ತುವನ್ನು ಜಪ್ತಿ ಮಾಡಿತ್ತು. ಇದು ಇಡೀ ರಾಜ್ಯವೇ ಬೆಚ್ಚಿಬೀಳುವಂತೆ ಮಾಡಿತ್ತು.

ಇದನ್ನೂ ಓದಿ: ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ

ಮೈಸೂರು ನಗರ ಈಗ ಡ್ರಗ್ಸ್ ಮಾರಾಟದ ತಾಣವಷ್ಟೇ ಅಲ್ಲದೆ, ತಯಾರಿಕಾ ತಾಣವಾಗಿಯೂ ಬದಲಾಗುತ್ತಿರುವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಿವಮೊಗ್ಗ: ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ – Kannada News | SSLC Student Killed in Shivamogga’s Sulekebailu Layout; Two Students Detained After School Clash

ಶಿವಮೊಗ್ಗ, ಫೆಬ್ರವರಿ 24: ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿ ಸಂಕೇತ್ (16) ಕೊಲೆಯಾಗಿದ್ದಾನೆ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಸಂಕೇತ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರು ಮಾಹಿತಿ ನೀಡಿದ್ದಾರೆ. ಮೃತ ಸಂಕೇತ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಕೇತ್ ಓದಿನಲ್ಲಿ ಚುರುಕಾಗಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 24ರ ದಿನಭವಿಷ್ಯ – Kannada News | Feb 24th Numerology: Daily Horoscope for Birth Numbers 7, 8, 9; Financial & Career Insights

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಯಾರು ದ್ವಿಚಕ್ರ ವಾಹನವನ್ನೋ ಅಥವಾ ಕಾರು ಇತ್ಯಾದಿಗಳನ್ನೋ ಖರೀದಿ ಮಾಡಬೇಕು ಎಂದುಕೊಳ್ಳುತ್ತಾ ಇರುತ್ತೀರಿ ಅದಕ್ಕೆ ಬೇಕಾದ ಹಣಕಾಸಿನ ಹೊಂದಾಣಿಕೆ ಆಗಿ, ಅಡ್ವಾನ್ಸ್ ನೀಡಿ- ಬುಕ್ ಮಾಡುವ ಸಾಧ್ಯತೆ ಇದೆ. ಅಥವಾ ಲೋನ್ ಗಾಗಿ ಪ್ರಯತ್ನ ಮಾಡಬೇಕು ಎಂದಿರುವವರು ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಮಾತುಕತೆಯನ್ನಾದರೂ ಮಾಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಖರ್ಚಿಗೆ ಹಣ ಹೊಂದಿಸುವುದು ಹೇಗೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಾ ಇದ್ದಲ್ಲಿ ಅದು ಈ ದಿನ ದೂರವಾಗಲಿದೆ. ಹೊಸ ಆದಾಯ ಮೂಲಗಳು ತೆರೆದುಕೊಳ್ಳಲಿವೆ. ಹಣಕಾಸಿನ ಹರಿವು ಸರಾಗ ಆಗಲಿದೆ. ಬಹಳ ಆಪ್ತರಾದವರು ನಿಮ್ಮಲ್ಲಿ ಕೆಲವರಿಗೆ ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಹೂಡಿಕೆ ಬಗ್ಗೆ ನಿಮಗೆ ಯಾರಾದರೂ ಸಲಹೆ ಕೇಳಿಕೊಂಡು ಬಂದಲ್ಲಿ ಸಾಧ್ಯವಾದಷ್ಟೂ ಏನೂ ಸಲಹೆ ನೀಡದಿರುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಮನೆಗೆ ಹೊಸದಾದ ಇಂಟರ್ ನೆಟ್ ಸಂಪರ್ಕ ಅಥವಾ ವೈ-ಫೈಗೆ ಸಂಬಂಧಿಸಿದ ಸಲಕರಣೆ ಇಂಥವುಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಈ ದಿನ ಇದೆ. ಮ್ಯಾನೇಜರ್ ಅಥವಾ ಅದಕ್ಕಿಂತ ಮೇಲಿನ ಹುದ್ದೆಯಲ್ಲಿ ಇರುವವರಿಗೆ ಈ ಹಿಂದೆ ನೀವು ತೆಗೆದುಕೊಂಡ ನಿರ್ಧಾರಕ್ಕೆ ಕಾರಣ ಏನು ಹಾಗೂ ಅದರ ಫಲಿತಾಂಶ ಏನು ಎಂಬ ಬಗ್ಗೆ ವಿಪರೀತ ಸಮಜಾಯಿಷಿ- ಕಾರಣಗಳನ್ನು ನೀಡುವಂತೆ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 24ರ ದಿನಭವಿಷ್ಯ – Kannada News | Numerology Horoscope: Birth Numbers 4,5,6 Predictions, Remedies and Mental Peace

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ರೀ ಸೇಲ್ ದೃಷ್ಟಿಯಿಂದ ಸೈಟು ಒಂದಕ್ಕೆ ಅಡ್ವಾನ್ಸ್ ನೀಡುವ ಬಗ್ಗೆ ಸ್ನೇಹಿತರ ಜೊತೆಗೂಡಿ ನಿಮ್ಮಲ್ಲಿ ಕೆಲವರು ಮಾತುಕತೆ ನಡೆಸಲಿದ್ದೀರಿ. ನಿಮ್ಮ ಸಲಹೆಗೆ ಇತರರು ಸಹ ಒಪ್ಪಿಗೆ ಸೂಚಿಸಲಿದ್ದಾರೆ. ನಿಮ್ಮ ಮನೆ ಹತ್ತಿರ ಇರುವಂಥ ಗಣಪತಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಳ್ಳಿ ಅಥವಾ ಗಣಪತಿ ಅಥರ್ವಶೀರ್ಷವನ್ನು ಕೇಳಿಸಿಕೊಳ್ಳಿ. ಇದರಿಂದ ನಿಮಗೆ ಕಾಡುವ ಅಡೆತಡೆಗಳು ದೂರವಾಗಲಿವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಅತಿ ಬುದ್ಧಿವಂತಿಕೆ ನಿರ್ಧಾರಗಳನ್ನು ಈ ದಿನ ತೆಗೆದುಕೊಳ್ಳಲು ಹೋಗಬೇಡಿ. ಅದರಲ್ಲೂ ನೀವೇನಾದರೂ ದೂರ ಪ್ರಯಾಣ ಮಾಡಬೇಕಿದೆ, ಅದಕ್ಕೆ ಸಂಬಂಧಿಸಿದ ಹೋಟೆಲ್ ಬುಕ್ಕಿಂಗ್, ವಿಮಾನದ ಸೀಟ್ ಬುಕ್ಕಿಂಗ್ ಮಾಡಿಸಬೇಕಿದೆ ಎಂದಾದಲ್ಲಿ ಬೇರೆಯವರಿಗೆ ಆ ಜವಾಬ್ದಾರಿಯನ್ನು ನೀಡುವುದು ಉತ್ತಮ ನಿರ್ಧಾರ ಎನಿಸಿಕೊಳ್ಳಲಿದೆ. ಸೆಕೆಂಡ್ ಹ್ಯಾಂಡ್ ಕಾರು- ಸ್ಕೂಟರ್- ಬೈಕ್ ಗಳ ಖರೀದಿ, ಮಾರಾಟ ಮಾಡುವಂಥ ವ್ಯವಹಾರ ನಡೆಸುತ್ತಿರುವವರಿಗೆ ಆದಾಯದಲ್ಲಿ ಏರಿಕೆ ಆಗುವಂಥ ಸಾಧ್ಯತೆ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಸೋದರ- ಸೋದರಿಯರ ಜತೆಗೆ ಆಸ್ತಿಗೆ ಸಂಬಂಧಿಸಿದ ವ್ಯಾಜ್ಯಗಳು ಅಥವಾ ಅಭಿಪ್ರಾಯ ಭೇದ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳಲು ಸೂಕ್ತ ವೇದಿಕೆ ದೊರೆಯಲಿದೆ. ನಿಮ್ಮಲ್ಲಿ ಕೆಲವರು ಪಿಎಫ್ ಸೇರಿದಂತೆ ಮತ್ಯಾವುದಾದರೂ ಉಳಿತಾಯದ ಹಣವನ್ನು ವಿಥ್ ಡ್ರಾ ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮಗೆ ಬರಬೇಕಾದ ಹಣದ ಬಾಕಿ ವಸೂಲಿಗೆ ಸೂಕ್ತವಾದ ದಿನ ಇದಾಗಲಿದ್ದು, ಈ ದಿನ ಒಂದು ಕಾಲ್ ಮಾಡಿಯಾದರೂ ವಿಚಾರಿಸಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 24ರ ದಿನಭವಿಷ್ಯ – Kannada News | Sphatika Mala Benefits: Boost Focus, Reduce Stress and Attract Prosperity

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮಲ್ಲಿ ಕೆಲವರಿಗೆ ಹಳೇ ಗೆಳೆಯ ಅಥವಾ ಗೆಳತಿಯ ನೆನಪು ವಿಪರೀತ ಕಾಡುವಂಥ ದಿನ ಇದಾಗಿರಲಿದೆ. ಅಥವಾ ಅಚಾನಕ್ ಆಗಿ ಭೇಟಿ ಆಗುವುದೋ ಅಥವಾ ಕಾಲ್ ಮಾಡುವುದೋ ಇಂಥದ್ದು ಕೂಡ ಆಗಬಹುದು. ಹೀಗೆ ಆಗುವುದರಿಂದ ನಿಮ್ಮ ಏಕಾಗ್ರತೆ ಕಳೆದುಕೊಳ್ಳುವಂತೆ ಆಗಲಿದೆ. ಹೊಸ ವಾಹನ ಖರೀದಿ ಮಾಡಿದ್ದೀರಿ ಅಂತಾದಲ್ಲಿ ಚಾಲನೆ ವೇಳೆ ಮುಂಜಾಗ್ರತೆ ವಹಿಸಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಕ್ರೀಡಾಪಟುಗಳಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಹೆಚ್ಚಿನ ತರಬೇತಿಗಾಗಿ ವಿದೇಶಗಳಿಗೆ ಅಥವಾ ನೀವು ಇರುವ ಸ್ಥಳದಲ್ಲಿಯೇ ಅತ್ಯುತ್ತಮ ತರಬೇತಿ ಸಂಸ್ಥೆಗಳಿಗೆ ತೆರಳುವ ಅವಕಾಶ ಸೃಷ್ಟಿ ಆಗಲಿದೆ. ನಿಮ್ಮಲ್ಲಿ ಯಾರಿಗೆ ಸೋದರ- ಸೋದರಿಯರು ಇದ್ದಾರೋ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಮಾಡುವುದು ಒಳ್ಳೆಯದು. ಈ ದಿನ ಅವರಿಗೆ ನಿಮ್ಮ ನೆರವಿನ ಅಗತ್ಯ ಕಂಡುಬರಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನೀವು ಯಾವುದನ್ನು ಕನಿಷ್ಠ ಪ್ರಮಾಣದ ಶಿಸ್ತು ಎಂದು ಭಾವಿಸಿರುತ್ತೀರೋ ಇತರರಿಗೆ ಅದು ಕಿರಿಕಿರಿಯಾಗಿ ಪರಿಣಮಿಸಲಿದೆ. ಅದರಲ್ಲೂ ನೀವು ಸ್ವಂತ ವ್ಯವಹಾರ- ವ್ಯಾಪಾರ ಮಾಡುವಂಥವರು ಆಗಿದ್ದಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಲೇ ಬೇಕು. ನಿಮಗೆ ಹಿರಿಯರಿಂದ ಬಂದಂಥ ಒಡವೆ, ಆಸ್ತಿ ಇಂಥವುಗಳನ್ನು ಮಾರಾಟ ಮಾಡುವ ಆಲೋಚನೆ ಮಾಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 24 February: ಇಂದು ಈ ರಾಶಿಯವರನ್ನು ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿ ತಪ್ಪಿಸಬಹುದು – Kannada News | Horoscope Today Feb 24: What Your Zodiac Sign Needs to Know About Money, Love and Career

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಸಪ್ತಮೀ ತಿಥಿ ಮಂಗಳವಾರದಂದು ಅಲೆದಾಟ, ಕಷ್ಟದ ಕಾರ್ಯ, ಮರೆವು, ಹೊಸ ಸ್ನೇಹ, ಕೃಷಿ, ಆದಾಯಕ್ಕೆ ತಯಾರಿ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಐಂದ್ರ, ಕರಣ :ವಣಿಜ, ಸೂರ್ಯೋದಯ – 06 – 44 am, ಸೂರ್ಯಾಸ್ತ – 06 – 30 pm, ಇಂದಿನ ಶುಭಾಶುಭ ಕಾಲ : ರಾಹು 15:34 – 17:02, ಯಮಗಂಡ ಕಾಲ 09:41 – 11:10, ಗುಳಿಕ ಕಾಲ 12:38 – 14:06

ಮೇಷ ರಾಶಿ :

ಇಂದು ನಿಮ್ಮ ಆಪಾಯದ ಸೂಚನೆಯನ್ನು ಗಮನಿಸಿಕೊಳ್ಳಿ. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮುಗಿಸುವ ಕೌಶಲವು ನಿಮ್ಮಲ್ಲಿರುವುದು. ಹೂಡಿಕೆಯ ವಿಚಾರದಲ್ಲಿ ಯಾರಾದರೂ ದಾರಿಯನ್ನು ತಪ್ಪಿಸಿಯಾರು. ಬೇರೆ ಬೇರೆ ಕ್ಷೇತ್ರಗಳ ಉದ್ಯಮಿಗಳ ಭೇಟಿ ಮಾಡುವಿರಿ. ಭೂಮಿಯ ಖರೀದಿಗೆ ಸೂಕ್ತ ಸಮಯವಿದ್ದು ಇಷ್ಟಪಟ್ಟ ಭೂಮಿಯು ಸಿಗುವುದು. ಕೆಲವರಿಂದ ದೂರವಿರುವ ಪ್ರಯತ್ನವನ್ನು ಮಾಡುವಿರಿ. ಸಂಗಾತಿಯ ಮಾತಿನಿಂದ ನೀವು ನೆಮ್ಮದಿಯನ್ನು ಕಳೆದುಕೊಳ್ಳಬಹುದು. ಮನಸ್ಸಿನ ಚಾಂಚಲ್ಯವನ್ನು ನಿವಾರಿಸಲು ಯೋಗವೇ ಮದ್ದಾಗಲಿದೆ.

ವೃಷಭ ರಾಶಿ :

ಯಾರ ಜೊತೆಗೂ ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ. ದೈವದ ಮೇಲಿನ ನಂಬಿಕೆ ಸತ್ಯವಾಗುವುದು. ಬೇರೆಯವರನ್ನು ಗೊಂದಲಕ್ಕೆ ಸಿಕ್ಕಿ ಹಾಕಿಸುವುದು ಬೇಡ. ಕೃಷಿ ಉತ್ಪನ್ನದ ಮಾರಾಟ. ಖರ್ಚು ಮತ್ತು ಆದಾಯ ಸಮಾಮವಾಗುವುದು. ನಿಮ್ಮ ಕಾರ್ಯದಲ್ಲಿನ ಶಿಸ್ತು ಉಳಿದವರಿಗೆ ಕಷ್ಟವಾದೀತು. ಮಿತಿಮೀರಿದ ಆಸೆಗೆ ಕಡಿವಾಣದ ಅಗತ್ಯವಿದೆ. ನೀವು ಹೋದಕಡೆ ನಿಮಗೆ ಬೇಕಾದ ಹಾಗೆ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ.

ಮಿಥುನ ರಾಶಿ :

ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು. ವಿನಯಶೀಲತೆಯನ್ನು ಬೆಳೆಸಿಕೊಳ್ಳುವುದು ಅಗತ್ಯ. ಅನಗತ್ಯ ಅಲೆದಾಟವನ್ನು ನಿಲ್ಲಿಸಿ ಕಾರ್ಯದಲ್ಲಿ ಮಗ್ನರಾಗಿ. ನಿಮ್ಮ ಸುಳ್ಳು ಮಾತುಗಳನ್ನು ಯಾರೂ ಕೇಳಲು ಇಷ್ಟ ಪಡರು.‌ ಅಲ್ಪ ಕಾರ್ಯದಿಂದ ಎಲ್ಲವೂ ಸಿದ್ಧಿಸುವುದಾದರೂ ಅಧಿಕ ಶ್ರಮವಿರುವುದು. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗಲಿದ್ದಾರೆ. ಯಾರೋ‌ ಮಾಡಬೇಕಾದ ಕೆಲಸಕ್ಕೆ ನೀವು ಹೋಗಬೇಕಾದೀತು. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತುರ್ತಾಗಿ ಸಾಲವನ್ನು ಮಾಡಬೇಕಾಗುವುದು.

ಕರ್ಕಾಟಕ ರಾಶಿ :

ನಿಂತ ಕಾರ್ಯಕ್ಕೆ ಚಾಲನೆ ನೀಡುವಿರಿ. ನಿದ್ರೆ ಇಲ್ಲದೇ ಮಾನಸಿಕ‌ವಾಗಿ ಕುಗ್ಗುವಿರಿ. ಸ್ಪರ್ಧೆಗಾಗಿ ನಡೆಸಿದ ನಿಮ್ಮ ಶ್ರಮವು ವ್ಯರ್ಥವಾದೀತು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ. ಸಕಾರಾತ್ಮಕ ಚಿಂತನೆಯನ್ನು ದೂರ ಮಾಡಿಕೊಳ್ಳುವಿರಿ.‌ ಸದಾ ಯಾರ ಮೇಲಾದರೂ ಅನುಮಾನದಿಂದಲೇ ಇರುವಿರಿ.‌ ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೋಗಲು ಇಷ್ಟ ಪಡುವುದಿಲ್ಲ.‌

ಸಿಂಹ ರಾಶಿ :

ಎಲ್ಲವೂ ಆಗಿಹೋದಂತೆ ನಿಮಗೆ ಅನ್ನಿಸಬಹುದು. ನಿಮ್ಮವರನ್ನು ಬಿಟ್ಟು ಹೋದವರ ಬಗ್ಗೆ ಆಲೋಚನೆ ಬೇಡ. ಸ್ನೇಹಿತರ ಜೊತೆಗೆ ಪ್ರವಾಸ ಸಂಭವ. ವಸತಿಯಲ್ಲಿ ತೊಂದರೆ ಬಂದ ಕಾರಣ ಬದಲಾಯಿಸುವ ಸಂದರ್ಭವೂ ಬರಬಹುದು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು. ಮನಸ್ಸಿನ ಗುಯ್ದಾಟಕ್ಕೆ ಒಂದು ವಿರಾಮ ಬೇಕಿದೆ. ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಸಣ್ಣ ವಿಚಾರಕ್ಕೆ ಯಾರನ್ನೋ ದ್ವೇಷ‌ ಮಾಡುವುದು ಸರಿಯಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕು.

ಕನ್ಯಾ ರಾಶಿ :

ಯಾವ ಸಂದರ್ಭದಲ್ಲಿಯೂ ವ್ಯಾಪಾರದ ಸ್ಥಳದಲ್ಲಿ ಇಕ್ಕಟ್ಟು ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ಅನಾರೋಗ್ಯದ ಕಾರಣ ಉತ್ಸಾಹದ ಯಾವ ಕಾರ್ಯವನ್ನೂ ಮಾಡಲಾಗದು. ದಿನದ ಕೆಲಸವನ್ನು ಮಾಡುವಷ್ಟರಲ್ಲಿ ನಿಮ್ಮ ಸಮಯವು ಕಳೆದುಹೋಗುವುದು. ಎಲ್ಲ ಕೆಲಸಗಳೂ ಅಪೂರ್ಣವಾಗಿದ್ದು ನಿಮಗೆ ಅಸಮಾಧಾನ ಇರುವುದು. ಸಾಮಾಜಿಕ ಕಾರ್ಯವನ್ನೂ ಪರಿಚಿತರ ಜೊತೆ ಭಾಗವಹಿಸಿ ಮಾಡುವಿರಿ.

ತುಲಾ ರಾಶಿ :

ಪಾಲುದಾರಿಕೆಯ ಭೂ ಸಂಬಂಧದ ಕಾರ್ಯದಿಂದ ಲಾಭವಾಗಲಿದೆ. ದಾಂಪತ್ಯವು ಪರಸ್ಪರ ಸೌಹಾರ್ದದ ಮಾತುಗಳಿಂದ ನೆಮ್ಮದಿ ಸಿಗುವುದು.‌ ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ. ಅವಶ್ಯಕತೆಯನ್ನು ನೋಡಿ ಮುಂದುವರಿಯಿರಿ. ಯಾರಸದರೂ ಅಸತ್ಯವನ್ನು ಆಡಿದರೆ ಅದನ್ನು ಸರಳವಾಗಿ ಕಂಡು ಹಿಡಿಯುವಿರಿ.‌ ನೀವು ಮೌನದಿಂದ ಇದ್ದರೆ ಒಪ್ಪಿಗೆ ಕೊಟ್ಟಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವುದು ಉತ್ತಮ.

ವೃಶ್ಚಿಕ ರಾಶಿ :

ನಿಮ್ಮ ಕೆಲವು ವರ್ತನೆಯನ್ನು ಮಿತ್ರರು ವಿರೋಧಿಸುವರು. ಅಮೂಲ್ಯ ವಸ್ತುಗಳನ್ನು ಖರೀದಿಸುವುದು ಕಷ್ಟವಾದರೂ ಮಾಡುವಿರಿ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ಇಷ್ಟವಿಲ್ಲದಿದ್ದರೂ ಬಂಧುಗಳ ಆಗಮನವಾಗಲಿದೆ. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು. ನೀವು ಮಾಡುವ ವೃತ್ತಿಯಲ್ಲಿ ಗೊಂದಲವಿದ್ದರೆ ಅನುಭವಗಳನ್ನು ಕೇಳಿ ಮಂದುವರೆಯಿರಿ. ಸಂಗಾತಿಯ ಕೆಲವು ಮಾತುಗಳಿಂದ ನಿಮಗೆ ಬೇಸರವಾಗುವುದು.

ಧನು ರಾಶಿ :

ಇಂದು ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಹೆಚ್ಚು ತಿರುಗಾಟ ಮಾಡಬೇಕಾಗುವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಲಾಭವನ್ನು ಅರಿತು ಯೋಜನೆ ರೂಪಿಸುವಿರಿ. ನಿಮ್ಮ ಮನಸ್ಸಿಗೆ ಪೂರ್ಣವಾಗಿ ಒಪ್ಪಿಗೆ ಆದರೆ ಮಾತ್ರ ಯಾವ ಕೆಲಸಕ್ಕಾದರೂ ಮುಂದುವರಿಯಿರಿ. ನಿಮಗೆ ಇಷ್ಟವಾದ ವಿಚಾರವನ್ನು ತಕ್ಷಣ ಪಡೆಯುವಿರಿ.

ಮಕರ ರಾಶಿ :

ಇಂದು ಸ್ತ್ರೀಯರಿಗೆ ಮಾನಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಯಂತ್ರೋತ್ಪನ್ನಗಳ ತಯಾರಿಯಲ್ಲಿ ಹಿನ್ನಡೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ಚರಾಸ್ತಿಯ ರಕ್ಷಣೆ ಕಷ್ಟವಾಗಲಿದೆ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು. ಸಾರ್ವಜನಿಕವಾಗಿ ಅವಮಾನವಾಗುವ ಸಾಧ್ಯತೆ ಇದೆ. ನಿಮಗೆ ಪರಿಚಿತರನ್ನು ಆಪ್ತರನದನಾಗಿ ಮಾಡಿಕೊಳ್ಳುವಿರಿ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಆದೀತು. ಸಂಗಾತಿಯ ಭಾವನೆಗಳಿಗೆ ಸ್ಪಂದಿಸದ ಕಾರಣ ನಿಮ್ಮ ಮೇಲೆ ಕೋಪ‌.

ಕುಂಭ ರಾಶಿ :

ಮಕ್ಕಳಿಗೆ ಇರುವ ಗೊಂದಲವನ್ನು ದೂರ ಮಾಡುವಿರಿ.‌ ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು. ವಿದೇಶದ ವ್ಯವಹಾರದಲ್ಲಿ ಪಾಲುದಾರಿಕೆ ಇರಲಿದೆ. ಕಾರ್ಯದ ಸ್ಥಳವು ಬದಲಾಗುವ ಸಾಧ್ಯತೆ ಇದೆ. ಉತ್ತಮ ಸಮಯದ ನಿರೀಕ್ಷೆಯಲ್ಲಿ ಸಮಾಧಾನ ಇರುವುದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ಕೊಡುವುದು ಬೇಡ. ನಿಮ್ಮ ಕೋಪವು ವ್ಯರ್ಥ.

ಮೀನ ರಾಶಿ :

ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ನಿಮ್ಮ ದಾಂಪತ್ಯದ ಮೇಲೆ ಇತರರ ದೃಷ್ಟಿ ಬೀಳಬಹುದು. ಪಾಲುದಾರಿಕೆಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ಶತ್ರುಗಳ ಮುಖಾಮುಖಿ ಭೇಟಿಯ ಸಂದರ್ಭವು ಬರುವುದು. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರವಿರಲಿ. ಒತ್ತಾಯದ ಕಾರಣ ಸಮಾರಂಭಗಳಿಗೆ ಹೋಗುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

Source link

Viral Video: ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ? – Kannada News | Mother ties her Son from 8th floor for Saree Viral Video Sparks Child Safety Debate

ನವದೆಹಲಿ, ಫೆಬ್ರವರಿ 23: ನೂರಾರು ರೂಪಾಯಿ ಬೆಲೆಯ ಸೀರೆ ಕೆಳಗೆ ಬಿದ್ದಿದ್ದಕ್ಕೆ ತಾಯಿಯೊಬ್ಬಳು ತನ್ನ ಮಗನ ಪ್ರಾಣವನ್ನೇ ಪಣಕ್ಕಿಟ್ಟಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗುತ್ತಿದೆ. ಅಪಾರ್ಟ್​​ಮೆಂಟ್​​ನ 8ನೇ ಮಹಡಿಯಲ್ಲಿ ವಾಸಿಸುತ್ತಿದ್ದ ಮಹಿಳೆ ತನ್ನ ಬಾಲ್ಕನಿಯಿಂದ 7ನೇ ಮಹಡಿಯ ಬಾಲ್ಕನಿಗೆ ಬಿದ್ದಿದ್ದ ತನ್ನ ಸೀರೆಯನ್ನು ಪಡೆಯಲು ತನ್ನ ಮಗನಿಗೆ ಸೀರೆಯನ್ನು ಕಟ್ಟಿ ಕೆಳಗೆ ನೇತಾಡಿಸಿದ್ದಾಳೆ. ಆ ಬಾಲಕ ಆ ಸೀರೆಯನ್ನು ಹಿಡಿದುಕೊಂಡು ಕೆಳಗಿನ ಬಾಲ್ಕನಿಗೆ ಹೋಗಿ ಅಲ್ಲಿ ಬಿದ್ದಿದ್ದ ಅಮ್ಮನ ಸೀರೆಯನ್ನು ತೆಗೆದುಕೊಂಡು ಮತ್ತೆ ಸೀರೆಯಲ್ಲಿ ನೇತಾಡುತ್ತಾ ಮೇಲೆ ಬಂದಿದ್ದಾನೆ. ಅಪ್ಪಿತಪ್ಪಿ ಆ ಮಗುವೇನಾದರೂ ಕೈ ಜಾರಿ ಕೆಳಗೆ ಬಿದ್ದಿದ್ದರೆ ಬದುಕುವ ಸಾಧ್ಯತೆಯಂತೂ ಇರಲೇಇಲ್ಲ ಬಿಡಿ. ಹೀಗಾಗಿ, ಆ ತಾಯಿಗೆ ತನ್ನ ಮಗನ ಪ್ರಾಣಕ್ಕಿಂತ ಸೀರೆಯೇ ಮುಖ್ಯವಾಯಿತಾ ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಈ ಘಟನೆಯನ್ನು ಎದುರಿನ ಅಪಾರ್ಟ್​ಮೆಂಟ್​ ನಿವಾಸಿಗಳು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒಡಿಶಾದ ನವವಧು ಕಿಡ್ನಾಪ್​ ಪ್ರಕರಣಕ್ಕೆ ಹೊಸ ತಿರುವು; ಪ್ರಿಯಕರನ ಜೊತೆ ಸೇರಿ ಮಾಡಿದ ಪ್ಲಾನ್ ಅಂತಿಂಥದ್ದಲ್ಲ! – Kannada News | Odisha Bride Stages her Own Kidnapping plan With Lover help Hours After Wedding

ಭುವನೇಶ್ವರ, ಫೆಬ್ರವರಿ 23: ಒಡಿಶಾದ ಸುವರ್ಣಪುರ ಜಿಲ್ಲೆಯಲ್ಲಿ ಇಂದು ಮದುಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಕಾರಿಗೆ ಅಡ್ಡಹಾಕಿದ ಅಪರಿಚಿತರು ನವವಧುವನ್ನು ಕಿಡ್ನಾಪ್ (Kidnap) ಮಾಡಿದ್ದು ಪೊಲೀಸರಿಗೆ ತಲೆನೋವಿನ ಕೇಸಾಗಿತ್ತು. ಇದೀಗ ತನಿಖೆಯ ಬಳಿಕ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ನವವಿವಾಹಿತ ವಧು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನನ್ನು ತಾನೇ ‘ಅಪಹರಣ’ ಮಾಡುವ ನಾಟಕವನ್ನು ಆಡಿದ್ದಾಳೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಬೋಲಂಗೀರ್ ಜಿಲ್ಲೆಯ ಹರಿಬಂಧು ಪಟೇಲ್ ಅಲಿಯಾಸ್ ರಿಂಕು ಎಂಬ ಯುವಕನು ಬೌಧ್ ಜಿಲ್ಲೆಯ ರಶ್ಮಿ ಎಂಬ ಯುವತಿಯನ್ನು ಮದುವೆಯಾಗಿದ್ದನು. ಅವರ ದಿಬ್ಬಣದ ಕಾರು ಹುಡುಗನ ಮನೆಯತ್ತ ಹೋಗುವಾಗ ಆಕೆಯನ್ನು ಕಿಡ್ನಾಪ್ ಮಾಡಲಾಗಿತ್ತು. ಮದುವೆಯ ನಂತರ ದಂಪತಿಗಳು ಕಾರಿನಲ್ಲಿ ವರನ ಮನೆಗೆ ಹಿಂತಿರುಗುತ್ತಿದ್ದಾಗ, ತರ್ಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವರ ಕಾರನ್ನು ಮತ್ತೊಂದು ಬಿಳಿ ಕಾರು ಅಡ್ಡಗಟ್ಟಿತ್ತು. ಬಳಿಕ ಆ ವಧುವನ್ನು ಕಿಡ್ನಾಪ್ ಮಾಡಲಾಗಿತ್ತು.

ಇದನ್ನೂ ಓದಿ: ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ ಮಹಿಳೆ, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ!

ತನ್ನ ಹೆಂಡತಿಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ವರ ಹರಿಬಂಧು ಪಟೇಲ್ ನೀಡಿದ ದೂರಿನ ಪ್ರಕಾರ, ಗನ್ ಹಿಡಿದುಕೊಂಡಿದ್ದ ವಧುವಿನ ಮಾಜಿ ಪ್ರಿಯಕರ ಮತ್ತು ಆತನ ಸಹಚರರು ಬಲವಂತವಾಗಿ ಆಕೆಯನ್ನು ಕಾರಿನೊಳಗೆ ಹಾಕಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಪೊಲೀಸರು ತನಿಖೆ ನಡೆಸಿದಾಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ತಾಂತ್ರಿಕ ತನಿಖೆ ಮತ್ತು ವಿಚಾರಣೆಯ ಸಂದರ್ಭದಲ್ಲಿ, ಈ ಸಂಪೂರ್ಣ ಅಪಹರಣದ ಪ್ಲಾನ್ ಅನ್ನು ವಧು ರಶ್ಮಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ರೂಪಿಸಿದ್ದಳು ಎಂಬುದು ಬಯಲಾಗಿದೆ.

ಇದನ್ನೂ ಓದಿ: 6 ವರ್ಷದಿಂದ ಒಂದೇ ರೂಮಿನಲ್ಲಿದ್ದು ಈಗ ನಾನು ಬೇಡ ಅಂತಿದ್ದಾಳೆ: ನ್ಯಾಯಕ್ಕಾಗಿ ಪಟ್ಟು ಹಿಡಿದ ಪ್ರಿಯಕರ

ವಧು ಸ್ವಇಚ್ಛೆಯಿಂದಲೇ ತನ್ನ ಪ್ರಿಯಕರನೊಂದಿಗೆ ಹೋಗಿದ್ದಾಳೆ, ಅಲ್ಲಿ ಯಾವುದೇ ಅಪಹರಣ ನಡೆದಿಲ್ಲ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮದುವೆಯಾದ ಕೆಲವೇ ಗಂಟೆಗಳ ನಂತರ, ವಧು ತನ್ನ ಪ್ರಿಯಕರನಿಗೆ ಕರೆ ಮಾಡಿ ಈ ಸಿನಿಮೀಯ ಅಪಹರಣವನ್ನು ಪ್ಲಾನ್ ಮಾಡಿದ್ದಳು. ಪೊಲೀಸ್ ತನಿಖೆಯ ವೇಳೆ ಈ ಅಪಹರಣವು ವಧು ರಶ್ಮಿ ಅವರೇ ತನ್ನ ಪ್ರಿಯಕರನೊಂದಿಗೆ ಸೇರಿ ನಡೆಸಿದ ಹೈಡ್ರಾಮಾ ಎಂಬುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version