600 ಕೋಟಿ ರೂಪಾಯಿ ಒಡೆಯ ದಳಪತಿ ವಿಜಯ್; ಡಿವೋರ್ಸ್ ಆದರೆ ಸಂಗೀತಾಗೆ ಸಿಗೋದೆಷ್ಟು? – Kannada News | Vijay Sangeetha Divorce: Can Wife Claim 50 of Actor’s 600 Crore Assets in India

ತಮಿಳು ನಟ ದಳಪತಿ ವಿಜಯ್‌ (Vijay) ಅವರಿಂದ ವಿಚ್ಛೇದನ ಕೋರಿ ಸಂಗೀತಾ ತಮಿಳುನಾಡಿನ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಅವರು ಆರೋಪಿಸಿದ್ದಾರೆ. ಅವರ ಆದಾಯ ಮತ್ತು ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ಜೀವನಾಂಶವನ್ನು ಪಾವತಿಸುವಂತೆ ನ್ಯಾಯಾಲಯದ ಬಳಿ ಕೋರಿದ್ದಾರೆ. ವಿಜಯ್ ಅವರ ಆಸ್ತಿ 600 ಕೋಟಿ ರೂಪಾಯಿ. ಈ ಆಸ್ತಿಯಲ್ಲಿ 50% ಹಂಚಿಕೊಳ್ಳುವುದು ಭಾರತೀಯ ಕಾನೂನಿನ ಪ್ರಕಾರ ಕಡ್ಡಾಯವಲ್ಲ.

ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ಪ್ರಶ್ನೆಯೆಂದರೆ, ತೀರ್ಪು ಸಂಗೀತಾ ಪರವಾಗಿ ಬಂದರೆ, ವಿಜಯ್ ತನ್ನ ಆಸ್ತಿಯಲ್ಲಿ 50% ನೀಡಬೇಕಾಗುತ್ತದೆಯೇ?  ಈ ಬಗ್ಗೆ ಚರ್ಚೆ ನಡೆದಿದೆ. ಸದ್ಯ ಅಂಶ್ರಿಧರ್ ವೆಂಬು ಮತ್ತು ಪ್ರಮೀಳಾ ಶ್ರೀನಿವಾಸನ್ ಅವರ ವಿಚ್ಛೇದನವನ್ನು ಅತ್ಯಂತ ದುಬಾರಿ ವಿಚ್ಛೇದನವೆಂದು ಪರಿಗಣಿಸಲಾಗಿದೆ. ಹೃತಿಕ್ ರೋಷನ್ ಮತ್ತು ಸುಸಾನೆ ಖಾನ್ ಅವರ ವಿಚ್ಛೇದನದಲ್ಲಿ ಪತ್ನಿಗೆ ಅವರು ಸುಮಾರು 380 ಕೋಟಿ ರೂ. ಮೌಲ್ಯದ ಆಸ್ತಿ ನೀಡಿದರು. ಈ ಹಿನ್ನೆಲೆಯಲ್ಲಿ, ವಿಜಯ್ ಅವರ 600 ಕೋಟಿ ರೂ. ಆಸ್ತಿಯಲ್ಲಿ ಸಂಗೀತಾ 50% ಪಾಲನ್ನು ಪಡೆಯಬಹುದೇ ಎಂಬ ಪ್ರಶ್ನೆ ಮೂಡಿದೆ.

ಭಾರತೀಯ ಕಾನೂನು ಚ್ಛೇದನದ ನಂತರ ಹೆಂಡತಿಗೆ ತನ್ನ ಗಂಡನ ಆಸ್ತಿಯಲ್ಲಿ 50% ನೀಡಬೇಕೆಂದು ಆದೇಶಿಸುವುದಿಲ್ಲ. ’50-50 ಆಸ್ತಿ ವಿಭಜನೆ’ ಮಾದರಿ ಕೆಲವು ಪಾಶ್ಚಿಮಾತ್ಯ ದೇಶಗಳಲ್ಲಿ ಸಾಮಾನ್ಯವಾಗಿದೆ, ಆದರೆ ಭಾರತದಲ್ಲಿ ಕಾನೂನುಗಳು ವಿಭಿನ್ನವಾಗಿವೆ.

ಇದನ್ನೂ ಓದಿ: ದಳಪತಿ ವಿಜಯ್​​ಗೆ ನಟಿಯ ಜೊತೆ ಅಫೇರ್; ತ್ರಿಶಾ ಮೇಲೆ ಗೂಬೆ ಕೂರಿಸಿದ ನೆಟ್ಟಿಗರು

ನ್ಯಾಯಾಲಯವು ಇಬ್ಬರ ಆದಾಯ, ಮನೆಯ ಕೊಡುಗೆಗಳು, ಮಕ್ಕಳ ಅಗತ್ಯತೆಗಳು, ಮದುವೆಯ ಸಮಯದಲ್ಲಿ ಜೀವನಶೈಲಿ ಇತ್ಯಾದಿಗಳನ್ನು ನೋಡುತ್ತದೆ . ಪ್ರತಿ ಪ್ರಕರಣಗಳೂ ಭಿನ್ನವಾಗಿವೆ. ಅಲ್ಲದೆ, ದಳಪತಿ ವಿಜಯ್ ಅವರು ಮಾಡಿರುವ ಆಸ್ತಿ ಪೈಕಿ ಅವರ ಸ್ವಂತ ಆಸ್ತಿ ಎಷ್ಟು? ಅವರ ತಂದೆ ಮಾಡಿಟ್ಟ ಆಸ್ತಿ ಎಷ್ಟು ಎಂಬಿತ್ಯಾದಿ ಎಲ್ಲವೂ ಮುಖ್ಯವಾಗುತ್ತದೆ. ಎಲ್ಲವನ್ನೂ ನೋಡಿ ನ್ಯಾಯಾಲಯ ಈ ಬಗ್ಗೆ ಆದೇಶ ಹೊರಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅತ್ತಿಗೆ-ನಾದಿನಿಯರು ತಲೆಗೆ ತಲೆ ಡಿಕ್ಕಿ ಹೊಡೆಯುವುದೇ ಹಬ್ಬ! ಚಿತ್ರದುರ್ಗ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲೊಂದು ವಿಶಿಷ್ಟ ಆಚರಣೆ – Kannada News | Unique Dikki Habba Festival in Chitradurga: Sisters in Law Head Butt Ritual in Chikkirannan Malige Village Goes Viral

ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಸಾಂಪ್ರದಾಯಿಕ ಆಚರಣೆ ಸಹ ಆಚರಿಸಲಾಗುತ್ತದೆ.

Source link

ಇನ್​​ಸ್ಟಾಗ್ರಾಂ ಆಯ್ತು ಈಗ ಯೂಟ್ಯೂಬ್​ನಲ್ಲೂ ದಾಖಲೆ ಬರೆದ ಪ್ರಧಾನಿ ಮೋದಿ – Kannada News | PM Modi YouTube Record: 30 Million Subscribers Mark Global Digital Leadership

ನವದೆಹಲಿ, ಮಾರ್ಚ್​ 03: ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಯೂಟ್ಯೂಬ್​ನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಯೂಟ್ಯೂಬ್​ನಲ್ಲಿ 30 ಮಿಲಿಯನ್ ಸಬ್​​ಸ್ಕ್ರೈಬರ್ ಹೊಂದುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್​ಸ್ಕ್ರೈಬರ್ ಹೊಂದಿದ್ದಾರೆ. ಈ ಅಂಕಿ ಅಂಶವು ಪ್ರಧಾನಿ ಮೋದಿಯವರ ಜಾಗತಿಕ ಡಿಜಿಟಲ್ ವ್ಯಾಪ್ತಿ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಪ್ರತಿಬಿಂಬಿಸುತ್ತದೆ.

ಭಾರತದಲ್ಲಿ ಬೇರೆ ಯಾವುದೇ ನಾಯಕರು ಈ ವಿಷಯದಲ್ಲಿ ಪ್ರಧಾನಿ ಮೋದಿಯವರ ಹತ್ತಿರವೂ ಇಲ್ಲ.  ಪ್ರಧಾನಿ ಮೋದಿ, ರಾಹುಲ್ ಗಾಂಧಿಗಿಂತ ಸುಮಾರು ಮೂರು ಪಟ್ಟು ಮತ್ತು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಗಿಂತ ನಾಲ್ಕು ಪಟ್ಟು ಹೆಚ್ಚು ಸಬ್​ಸ್ಕ್ರೈಬರ್ಸ್​ ಹೊಂದಿದ್ದಾರೆ.

ಪ್ರಧಾನಿ ಮೋದಿ ಈಗಾಗಲೇ ಯೂಟ್ಯೂಬ್‌ನಲ್ಲಿ ಅತಿ ಹೆಚ್ಚು ಸಬ್​ಸ್ಕ್ರೈಬರ್ಸ್​ ಹೊಂದಿರುವ ನಾಯಕರಾಗಿದ್ದಾರೆ. ಆದಾಗ್ಯೂ, 30 ಮಿಲಿಯನ್ ಜನರನ್ನು ತಲುಪುವುದು ಜಾಗತಿಕ ನಾಯಕನಾಗಿ ಅವರ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಪ್ರಧಾನಿ ಮೋದಿ ಯೂಟ್ಯೂಬ್‌ನಲ್ಲಿ ಜಾಗತಿಕ ಮಾನದಂಡವನ್ನು ಸ್ಥಾಪಿಸಿದ್ದಾರೆ. ಪ್ರಧಾನಿ ಮೋದಿ ನಂತರ, ಮಾಜಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಯೂಟ್ಯೂಬ್ ಚಂದಾದಾರರ ವಿಷಯದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ, ಸರಿಸುಮಾರು 6.6 ಮಿಲಿಯನ್ ಸಬ್ ಸ್ಕ್ರೈಬರ್ ಹೊಂದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 4 ಮಿಲಿಯನ್ ಜನರೊಂದಿಗೆ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಮತ್ತಷ್ಟು ಓದಿ: ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಅವರು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯ ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ. ಅವರು ಫೇಸ್‌ಬುಕ್‌ನಲ್ಲಿ 54 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ, ಅವರು 100 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಇದಲ್ಲದೆ, ಅವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​​ನಲ್ಲಿ 106 ಮಿಲಿಯನ್‌ಗಿಂತಲೂ ಹೆಚ್ಚು ಫಾಲೋವರ್ಸ್​​ಗಳನ್ನು ಹೊಂದಿದ್ದಾರೆ.

ಇಂದು ರಾಜಕೀಯವು ಕೇವಲ ರ್ಯಾಲಿಗಳು ಮತ್ತು ಟಿವಿ ಚರ್ಚೆಗಳಿಗೆ ಸೀಮಿತವಾಗಿಲ್ಲ. ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳು ನಾಯಕರಿಗೆ ಸಾರ್ವಜನಿಕರಿಗೆ ನೇರ ಪ್ರವೇಶವನ್ನು ಒದಗಿಸುತ್ತವೆ. ಅವರ ಭಾಷಣಗಳು, ಕಾರ್ಯಕ್ರಮಗಳ ಬಗ್ಗೆ ಮಾಹಿತಿ, ವಿದೇಶ ಪ್ರವಾಸಗಳು ಮತ್ತು ವಿಶೇಷ ಸಂದೇಶಗಳು ಲಕ್ಷಾಂತರ ಜನರನ್ನು ನೇರವಾಗಿ ತಲುಪುತ್ತವೆ.

ಯೂಟ್ಯೂಬ್ ಗಿಂತ ಮೊದಲು, ಪ್ರಧಾನಿ ಮೋದಿ ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಮೈಲಿಗಲ್ಲನ್ನು ದಾಟಿದ್ದಾರೆ. ಈ ಮೈಲಿಗಲ್ಲನ್ನು ತಲುಪಿದ ಮೊದಲ ಪ್ರಮುಖ ವಿಶ್ವ ನಾಯಕರಾದರು.

ಇನ್‌ಸ್ಟಾಗ್ರಾಮ್‌ನಲ್ಲಿ ಅವರ ಫಾಲೋವರ್‌ಗಳ ಸಂಖ್ಯೆ ಅನೇಕ ಪ್ರಮುಖ ವಿಶ್ವ ನಾಯಕರ ಸಂಖ್ಯೆಯನ್ನು ಮೀರಿದೆ. ಇದು ಭಾರತಕ್ಕೆ ಸೀಮಿತವಾಗಿಲ್ಲ, ಜಾಗತಿಕವಾಗಿ ಅವರ ಡಿಜಿಟಲ್ ಪ್ರಭಾವವನ್ನು ಎಷ್ಟಿದೆ ಎಂಬುದು ಗೋಚರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:46 am, Tue, 3 March 26

Source link

Video: ಹಕ್ಕಿಗಳ ನಡುವಿನ ಜಗಳ ಬಿಡಿಸಿದ ಮಹಿಳೆ, ವೈರಲ್‌ ಆಯ್ತು ದೃಶ್ಯ – Kannada News | Woman mediates between fighting birds

ಮನುಷ್ಯರಿಗಿಂತ ಪ್ರಾಣಿ ಪಕ್ಷಿಗಳೇ (animals and birds) ಲೇಸು. ಒಂದು ತುತ್ತು ಅನ್ನ ಹಾಕಿದರೆ ಸಾಕು, ದಿನನಿತ್ಯ ಮನೆ ಮುಂದೆ ಬರುತ್ತವೆ. ಮನುಷ್ಯ ಹಾಗೂ ಪಕ್ಷಿಯ (Bird) ಸ್ನೇಹಪರ ಸಂಬಂಧಕ್ಕೆ ಈ ವಿಡಿಯೋನೇ ಸಾಕ್ಷಿ. ಮನೆಯ ಹತ್ತಿರ ಹಾರಿ ಬಂದು ಬಾಲ್ಕನಿಯಲ್ಲಿ ಕುಳಿತುಕೊಂಡಿದ್ದ ಹಕ್ಕಿಗಳೆರಡು ಜಗಳವಾಡುತ್ತಿದ್ದು,  ಮಹಿಳೆಯೊಬ್ಬಳು ಈ ಹಕ್ಕಿಗಳ ನಡುವಿನ ಜಗಳವನ್ನು ಬಿಡಿಸಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ದೃಶ್ಯ ನೋಡಿ ನೆಟ್ಟಿಗರು ಅಚ್ಚರಿ ಪಟ್ಟುಕೊಂಡಿದ್ದಾರೆ.

Puja mondal ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮಹಿಳೆಯೊಬ್ಬಳು ಹಕ್ಕಿಗಳ ನಡುವಿನ ಜಗಳವನ್ನು ಬಿಡಿಸಿದ್ದಾಳೆ. ಮಹಿಳೆಯೂ ಮನೆಯ ಬಾಲ್ಕನಿಯಲ್ಲಿ ಕಿತ್ತಾಡಿಕೊಳ್ಳುತ್ತಿದ್ದ ಹಕ್ಕಿಗಳ ನಡುವೆ  ರಾಜಿ ಸಂಧಾನ ಮಾಡಿಸಿರುವ ದೃಶ್ಯವನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಶ್ವಾನವನ್ನು ಕಂಡೊಡನೆ ತಬ್ಬಿ ಮುದ್ದಾಡಿದ ಗೊರಿಲ್ಲಾ

ಈ ವಿಡಿಯೋ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮತ್ತೆ ಮತ್ತೆ ನೋಡಬೇಕೆನಿಸುವ ದೃಶ್ಯ ಎಂದರೆ, ಮತ್ತೊಬ್ಬರು, ತುಂಬಾ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ಹಕ್ಕಿಗಳು ತುಂಬಾನೇ ಜಗಳ ಆಡುತ್ತವೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 3ರ ದಿನಭವಿಷ್ಯ – Kannada News | March 03 Tuesday Horoscope: Birth Numbers 7,8,9 Daily Forecast and Life Advice

ಕಾಳಿಕಾ ದೇವಿ ದೇವಸ್ಥಾನಕ್ಕೆ ತೆರಳಿ ದರ್ಶನ ಹಾಗೂ ನಿಮ್ಮಿಂದ ಏನು ಸೇವೆ ಮಾಡಲು ಸಾಧ್ಯವೋ ಅದು ಮಾಡಿಸಿದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿಯರು ಸೋದರ ಸಂಬಂಧಿಗಳ ಮಧ್ಯೆ ವಿರಸ ಏರ್ಪಟ್ಟಿದ್ದಲ್ಲಿ ಅದು ನಿವಾರಣೆ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಕೆಲಸಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಒತ್ತಡ ನಿಮ್ಮ ಮೇಲೆ ಬೀಳಲಿದೆ. ಮೇಲಿಂದ ಮೇಲೆ ಫೋನ್ ಕಾಲ್ ಗಳು, ಕೆಲವು ತಾಂತ್ರಿಕ ಸಮಸ್ಯೆಗಳನ್ನು ನೀವೇ ಬಗೆಹರಿಸಬೇಕು ಎಂದು ಕೇಳಿಕೊಳ್ಳುವುದು ಬಿಡುವಿಲ್ಲದಷ್ಟು ಕೆಲಸಗಳು ಮೈ ಮೇಲೆ ಬರುವಂತೆ ಮಾಡಲಿದೆ. ಹೂಡಿಕೆ ವಿಚಾರಗಳಲ್ಲಿ ದಿಢೀರ್ ನಿರ್ಧಾರಗಳನ್ನು ಮಾಡುವುದಕ್ಕೆ ಹೋಗಬೇಡಿ. ಸ್ವಲ್ಪ ಹಣವನ್ನು ಕೈಯಿಂದ ಕಳೆದುಕೊಳ್ಳುವಂತೆ ಆಗುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮಗೆ ಕುಟುಂಬ ಸದಸ್ಯರ ಪೈಕಿ ಯಾರ ಮೇಲಾದರೂ ಆಕ್ಷೇಪ ಇದ್ದಲ್ಲಿ ಅದನ್ನು ನಯವಾಗಿ ಹೇಳಿ ಮುಗಿಸುವುದಕ್ಕೆ ಪ್ರಯತ್ನಿಸಿ. ನಿಮ್ಮ ಕೆಲವು ಸ್ನೇಹಿತರು ಅನಿರೀಕ್ಷಿತವಾಗಿ ದೊಡ್ಡ ಸಹಾಯವನ್ನು ಮಾಡಲಿದ್ದಾರೆ. ಸಂಗಾತಿಯ ಆರೋಗ್ಯ ವಿಚಾರ ಪ್ರಾಮುಖ್ಯವನ್ನು ಪಡೆಯಲಿದೆ. ಆರಂಭದ ಕೆಲವು ಬೆಳವಣಿಗೆಗಳು ಚಿಂತೆಗೆ ಕಾರಣ ಆಗಲಿವೆ. ವಿದ್ಯಾರ್ಥಿಗಳು ತಮ್ಮ ಪ್ರಾಜೆಕ್ಟ್- ಅಸೈನ್ ಮೆಂಟ್ ಗಳನ್ನು ಏಕಾಗ್ರತೆಯಿಂದ ಪೂರ್ಣಗೊಳಿಸುವ ಕಡೆಗೆ ಲಕ್ಷ್ಯ ನೀಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಒಂದು ವೇಳೆ ನೀವೇನಾದರೂ ಪ್ರೀತಿಯಲ್ಲಿ ಇದ್ದೀರಿ ಅಂತಾದಲ್ಲಿ ಸಂಗಾತಿಯ ಕಾಳಜಿಯ ಮಾತುಗಳಿಂದ ಸಂತೋಷ ಆಗಲಿದೆ. ಉದ್ಯೋಗದಲ್ಲಿ ಹಿರಿಯ ಸಹೋದ್ಯೋಗಿಗಳ ಮೆಚ್ಚುಗೆ ಮಾತುಗಳನ್ನು ಕೇಳಿಸಿಕೊಳ್ಳುವ ಯೋಗ ಇದೆ. ವ್ಯಾಪಾರಿಗಳಿಗೆ ಹೊಸ ಒಪ್ಪಂದದ ಚರ್ಚೆ ಯಶಸ್ವಿ ಆಗಲಿದೆ. ಸ್ನೇಹಿತರ ಜೊತೆಗೆ ಅನವಶ್ಯಕ ವಾದ- ವಿವಾದ ಮಾಡಿಕೊಳ್ಳಬೇಡಿ. ಆಹಾರದಲ್ಲಿ ವಿಪರೀತ ಸಿಹಿ– ವಿಪರೀತ ಕಾರದ ಪದಾರ್ಥ ಎರಡೂ ಬೇಡ.

ಲೇಖನ- ಸ್ವಾತಿ ಎನ್.ಕೆ.

Published On – 11:23 am, Tue, 3 March 26

Source link

ರಿಲೀಸ್​​ಗೂ ಮೊದಲೇ ಸೇಫ್ ಆದ ‘ಟಾಕ್ಸಿಕ್’; ಇನ್ನು ಬರೋದೆಲ್ಲ ಲಾಭ – Kannada News | Yash’s Toxic Movie Hits 600 Crore Pre Release Business: Producers Safe Before Release

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ (Toxic Movie) ಸೂಪರ್ ಹಿಟ್ ಆಗುವ ಸೂಚನೆ ಸಿಕ್ಕಿದೆ. ಈ ಚಿತ್ರದ ಟೀಸರ್​​ ಹಾಗೂ ಹಾಡುಗಳು ಗಮನ ಸೆಳೆಯುತ್ತಿವೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾದ ಪ್ರೀ ರಿಲೀಸ್ ಬಿಸ್ನೆಸ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಸಿನಿಮಾ ರಿಲೀಸ್​​​ಗೂ ಮೊದಲೇ ಸೇಫ್ ಆಗಿದೆ ಎಂಬ ಮಾಹಿತಿಯನ್ನು ನಿರ್ಮಾಪಕರೊಬ್ಬರು ನೀಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇನ್ಮುಂದೆ ಬರೋದೆಲ್ಲ ಕೇವಲ ಲಾಭ ಎಂದು ಫ್ಯಾನ್ಸ್ ಹಿಗ್ಗುತ್ತಿದ್ದಾರೆ.

ದೊಡ್ಡ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡಿದಾಗ ನಿರ್ಮಾಪಕರು ಸೇಫ್ ಆಗೋದು ತುಂಬಾನೇ ಮುಖ್ಯ ಆಗುತ್ತದೆ. ಎಲ್ಲಾ ಸಿನಿಮಾ ನಿರ್ಮಾಪಕರಿಗೂ ಈ ಅವಕಾಶ ಸಿಗೋದಿಲ್ಲ. ಅದರಲ್ಲೂ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎಂದರೆ ಲಾಭಕ್ಕಾಗಿ ಸಿನಿಮಾ ರಿಲೀಸ್​​ವರೆಗೆ ಕಾಯಲೇಬೇಕಾಗುತ್ತದೆ. ಆದರೆ, ಯಶ್ ಮಾಡಿದ ಪ್ಲ್ಯಾನ್​​ನಿಂದ ನಿರ್ಮಾಪಕರು ಮೊದಲೇ ಸೇಫ್ ಆಗಿದ್ದಾರೆ.

ಈ ಬಗ್ಗೆ ತಮಿಳು ಸಿನಿಮಾ ನಿರ್ಮಾಪಕ ಹಾಗೂ ಹಂಚಿಕೆದಾರ ಧನಂಜಯನ್ ಮಾತನಾಡಿದ್ದಾರೆ. ‘ಸಿನಿಮಾ ರಿಲೀಸ್​​​ಗೂ ಮೊದಲೇ 600 ಕೋಟಿ ರೂಪಾಯಿ ಪ್ರೀ-ರಿಲೀಸ್ ಬಿಸ್ನೆಸ್ ಮಾಡಲಾಗಿದೆ. ಇದು ಹೈಪ್​​ನಿಂದ ಅಲ್ಲ. ಸರಿಯಾದ ಗ್ರೌಂಡ್​ವರ್ಕ್ ಮಾಡಿದ ಕಾರಣಕ್ಕೆ’ ಎಂದು ಅವರು ಹೇಳಿದ್ದಾರೆ.

‘ನಯನತಾರಾ ಇದ್ದಾರೆ, ಟುವಿನೋ ಥಾಮಸ್ ಇದ್ದಾರೆ. ಮಾರ್ಕೆಟ್ ಮಾಡಲು ದೊಡ್ಡ ದೊಡ್ಡ ಹೆಸರು ಇದೆ. ಎಲ್ಲಾ ಹೆಸರಿನಿಂದಲೂ ಲಾಭ ಇದೆ. ನಯನತಾರಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದವರು. ಅವರ ನಟನೆಯ ಜವಾನ್ ಹಿಟ್ ಆಗಿದೆ. ಕಾಂತಾರ ಬಳಿಕ ರುಕ್ಮಿಣಿ ವಸಂತ್ ದೇಶಾದ್ಯಂತ ಜನಪ್ರಿಯತೆ ಪಡೆದರು’ ಎಂದು ಅವರು ಹೇಳಿದ್ದಾರೆ. ಈ ಹೆಸರುಗಳೇ ಮಾರುಕಟ್ಟೆ ವಿಸ್ತರಿಸಲು ಸಹಕಾರಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲೇ ನಡೆಯಲಿದೆ ‘ಟಾಕ್ಸಿಕ್’ ಟ್ರೇಲರ್ ಲಾಂಚ್; ಆದರೆ, ಅಭಿಮಾನಿಗಳಿಗೆ ನಿರಾಸೆ

‘ಟಾಕ್ಸಿಕ್’ ಟೀಸರ್ ಮಾತ್ರ ರಿಲೀಸ್ ಆಗಿದೆ. ಆದಾಗ್ಯೂ ಚಿತ್ರದ ಒಟಿಟಿ ಹಕ್ಕು, ಟಿವಿ ಹಕ್ಕು, ಥಿಯೇಟ್ರಿಕಲ್ ಹಕ್ಕುಗಳು ಮಾರಾಟ ಆಗಿವೆ. ಇವುಗಳಿಂದಲೇ ಚಿತ್ರಕ್ಕೆ 600 ಕೋಟಿ ರೂಪಾಯಿ ಹರಿದು ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

ಪ್ರೀತಿಯಲ್ಲಿ ಇದ್ದು, ವಿರಸಗಳು ಪದೇ ಪದೇ ಆಗುತ್ತಾ ಇದ್ದಲ್ಲಿ ಹಾಗೂ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ನಾನಾ ರೀತಿ ಅಡೆತಡೆಗಳು ಎದುರಾಗುತ್ತಾ ಇದ್ದಲ್ಲಿ ‘ರೋಸ್ ಕ್ವಾರ್ಟ್ಜ್’ ಸ್ಟೋನ್ ಉಂಗುರ, ಹಾರ ಅಥವಾ ಬ್ರೇಸ್ ಲೆಟ್ ಹಾಕಿದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮ್ಮ ಬಳಿ ಇರುವಂಥ ಉಳಿತಾಯ- ಹೂಡಿಕೆ ಹಣವನ್ನು ಹೇಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡುವುದಕ್ಕೆ ಇದು ಸೂಕ್ತ ದಿನವಾಗಿರುತ್ತದೆ. ತಾವೊಬ್ಬರೇ ಹೋಗುವುದಕ್ಕಿಂತ ಜತೆಯಲ್ಲಿ ನೀವೂ ಬಂದರೆ ಅನುಕೂಲ ಆಗುತ್ತದೆ ಎಂದು ನಿಮ್ಮ ಸ್ನೇಹಿತರು ಹೇಳುವುದರಿಂದ ದಿಢೀರ್ ಪ್ರಯಾಣ ತೆರಳುವಂತೆ ಆಗಲಿದೆ. ಶೀತ- ಜ್ವರದ ಬಾಧೆ ಅಲ್ಪ ಪ್ರಮಾಣದಲ್ಲಿಯಾದರೂ ಕಾಡಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮ್ಮ ಕಾರ್ಯನಿರ್ವಹಣೆ ಬಗ್ಗೆ ಎಲ್ಲರೂ ಮೆಚ್ಚುಗೆ ಮಾತುಗಳನ್ನು ಆಡಲಿದ್ದಾರೆ. ಇದರಿಂದ ನಿಮಗೂ ಸಂತೋಷ- ಸಮಾಧಾನ ದೊರೆಯಲಿದೆ. ಉದ್ಯೋಗ ಸ್ಥಳದಲ್ಲಿ ಮೇಲಧಿಕಾರಿಗಳಿಂದ ಪ್ರೋತ್ಸಾಹ ದೊರೆಯಲಿದೆ. ಉದ್ಯೋಗ- ವೃತ್ತಿ- ವ್ಯವಹಾರ- ವ್ಯಾಪಾರಗಳಲ್ಲಿ ನಿಮ್ಮ ಮಾತಿಗೆ ತೂಕ ಸಿಗುವ ದಿನ ಇದಾಗಿರುತ್ತದೆ. ಕುಟುಂಬದಲ್ಲಿ ಮುಖ್ಯವಾಗಿ ನಿರ್ಧಾರ ತೆಗೆದುಕೊಳ್ಳಲೇ ಬೇಕಾದ ವಿಷಯಗಳು ಚರ್ಚೆ ಆಗಲಿವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಅಲರ್ಜಿ– ಚರ್ಮದ ಸಮಸ್ಯೆಗಳು ಪದೇಪದೇ ಕಾಣಿಸುತ್ತಾ ತೊಂದರೆ ನೀಡುತ್ತಾ ಇದ್ದಲ್ಲಿ ಅಂಥವುಗಳಿಗೆ ಸೂಕ್ತ ವೈದ್ಯೋಪಚಾರ ದೊರೆಯುವ ದಿನ ಇದಾಗಿರುತ್ತದೆ. ಹಣಕಾಸು ವಿಚಾರದಲ್ಲಿ ಹರಿವು ಚೆನ್ನಾಗಿರುತ್ತದೆ. ದೂರದ ಸಂಬಂಧಿಗಳಿಂದ ಸಂತಸದ ಸುದ್ದಿ ಬರುವ ಸಾಧ್ಯತೆ ಇದೆ. ಪ್ರೀತಿಯಲ್ಲಿ ಇರುವವರು ಈ ಬಗ್ಗೆ ಮನೆಯಲ್ಲಿ ವಿಷಯ ಪ್ರಸ್ತಾವ ಮಾಡಿ, ಮದುವೆಗೆ ಒಪ್ಪಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 3ರ ದಿನಭವಿಷ್ಯ

ನೀವು ಇಟ್ಟಿರುವ ಮುಖ್ಯವಾದ ವಸ್ತುವೋ ದಾಖಲೆಯೋ ಸಮಯಕ್ಕೆ ನಿಮಗೆ ಸಿಗದೆ ಅದರ ಹುಡುಕಾಟದಲ್ಲಿ ತೊಡಗಿದ್ದಲ್ಲಿ ‘ಕಾರ್ತವೀರ್ಯಾರ್ಜುನ’ ಅಂತ ಸ್ಮರಣೆ ಮಾಡಿ. ಜೊತೆಗೆ ಮುಖ್ಯವಾದ ವ್ಯಕ್ತಿಗಳ ಭೇಟಿಗೆ ತೆರಳುತ್ತಿದ್ದರೆ ಆಗಲೂ ಸ್ಮರಣೆ ಮಾಡುವುದರಿಂದ ಅನುಕೂಲ ಆಗುತ್ತದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಈ ದಿನ ನಿಮ್ಮ ಸಂಪರ್ಕ ವಲಯ ವಿಸ್ತರಿಸುವಂಥ ಅವಕಾಶಗಳು ಹೆಚ್ಚಾಗಿವೆ. ಹೊಸ ವ್ಯಕ್ತಿಗಳ ಪರಿಚಯವಾಗಿ, ಅವರಿಂದ ದೀರ್ಘಾವಧಿಗೆ ದೊಡ್ಡ ಅನುಕೂಲಗಳು ಆಗುವ ಸುಳಿವು ಸಿಗಲಿದೆ. ನೀವು ತೊಡಗಿಕೊಂಡ ವ್ಯವಹಾರದಲ್ಲಿ ಆಗುವ ಬೆಳವಣಿಗೆಯಿಂದ ನಿಮಲ್ಲಿ ಹೊಸ ಚೈತನ್ಯ ಮೂಡಲಿದೆ. ಭಾವನಾತ್ನಕ ಕ್ಷಣಗಳಲ್ಲಿ ಹಣಕಾಸಿನ ಖರ್ಚು ಹೆಚ್ಚಾಗುವ ಸಾಧ್ಯತೆ ಇದ್ದು, ಮಿತವ್ಯಯದ ಕಡೆಗೆ ಹೆವ್ವು ಗಮನ ನೀಡುವುದು ಅಗತ್ಯ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮ ಯಾವುದೇ ಕೆಲಸಕ್ಕೆ ಸಂಗಾತಿಯಿಂದ ಪ್ರೋತ್ಸಾಹ ದೊರೆಯಲಿದೆ. ವಿಮರ್ಶಾತ್ಮಕವಾಗಿ ನಿಮ್ಮ ಸ್ನೇಹಿತರು ಹೇಳುವಂಥ ಅಭಿಪ್ರಾಯಗಳನ್ನು ಗೌರವಿಸಿ. ಹೀಗೆ ಮಾಡುವುದರಿಂದ ನಿಮ್ಮ ಮುಂದಿನ ಯೋಜನೆಗಳಿಗೆ ದೊಡ್ಡ ಮಟ್ಟದಲ್ಲಿ ನೆರವಾಗುತ್ತದೆ. ಎದೆಯುರಿ- ಗ್ಯಾಸ್ಟ್ರಿಕ್ ಸಮಸ್ಯೆ ಕಾಡಬಹುದು. ಇನ್ನು ಮನೆಯ ಕೆಲಸ- ಕಾರ್ಯಗಳಲ್ಲಿ ಹಲವಾರು ರೀತಿಯಲ್ಲಿ ಸಹಕಾರ ದೊರೆಯಲಿದೆ. ಈ ಹಿಂದೆ ಆದ ಘಟನೆಗಳ ಬಗ್ಗೆ ಪ್ರಸ್ತಾವ ಮಾಡುವುದರಿಂದ ಸ್ವಲ್ಪ ಮಟ್ಟಿಗೆ ಬೇಸರ ಕಾಡಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಈ ದಿನ ಕೆಲವು ಹೊಸ ಕೆಲಸ- ಕಾರ್ಯಗಳನ್ನು ಆರಂಭ ಮಾಡಲಿದ್ದೀರಿ. ಉದ್ಯೋಗ ಸ್ಥಳದಲ್ಲಿ ನಿಮಗೆ ಪದೋನ್ನತಿ ನೀಡುವ ಬಗ್ಗೆ ಚರ್ಚೆ ಆಗುತ್ತಿದೆ ಎಂಬ ಮಾಹಿತಿ ದೊರೆಯಲಿದೆ. ಅಥವಾ ಮುಖ್ಯವಾದ ಕೆಲವು ಹೊಸ ಜವಾಬ್ದಾರಿಗಳನ್ನು ನಿಮಗೆ ವಹಿಸಲಿದ್ದಾರೆ. ಕುಟುಂಬ ಸದಸ್ಯರ ಪೈಕಿ ಹಿರಿಯರಾದವರ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ಮಾಡುವುದು ಅವಶ್ಯ ಇರುತ್ತದೆ.

ಲೇಖನ- ಸ್ವಾತಿ ಎನ್.ಕೆ.

Source link

ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ಚಾಮರಾಜನಗರ ಗೂಳಿಪುರದಲ್ಲಿ ವಿಶೇಷ ಹಬ್ಬ, ವಿಡಿಯೋ ಇಲ್ಲಿದೆ ನೋಡಿ – Kannada News | Devotees Leap Into Thorn Bushes During Bisilu Mariamma Festival in Chamarajanagar’s Goolipura; Viral Video Surfaces

ಚಾಮರಾಜನಗರ, ಮಾರ್ಚ್ 3: ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಗ್ರಾಮ ದೇವತೆ ಬಿಸಿಲು ಮಾರಮ್ಮ ಜಾತ್ರೆ ಸಂಭ್ರಮ ಸಡಗರದಿಂದ ನಡೆಯಿತು. ಈ ಜಾತ್ರೆಯ ಪ್ರಮುಖ ವಿಶೇಷತೆ ಎಂದರೆ ಭಕ್ತರು ಮುಳ್ಳಿನ ಪೊದೆಗಳ ಮೇಲೆ ಹಾರುವುದು. ಈ ವಿಶೇಷ ಆಚರಣೆ ಪ್ರಕಾರ, ದೇವಿಗೆ ಪೂಜೆ ಸಲ್ಲಿಸಿದ ಬಳಿಕ ತಮಟೆ ನಾದದ ನಡುವೆ ಭಕ್ತರು ವೇಗವಾಗಿ ಓಡಿಬಂದು ಮುಳ್ಳಿನ ಪೊದೆಗಳ ಮೇಲೆ ಹಾರುತ್ತಾರೆ. ಆಶ್ಚರ್ಯಕರ ಸಂಗತಿ ಏನೆಂದರೆ, ಹೀಗೆ ಹಾರಿದರೂ ಯಾರಿಗೂ ಯಾವುದೇ ಗಾಯವಾಗುವುದಿಲ್ಲ ಎಂಬುದು ಗ್ರಾಮಸ್ಥರ ನಂಬಿಕೆ.

ಈ ರೀತಿಯ ಆಚರಣೆ ಮಾಡಿದರೆ ಗ್ರಾಮದೇವತೆ ಸಂತೃಪ್ತರಾಗುತ್ತಾಳೆ ಎಂಬ ನಂಬಿಕೆ ಹಾಗೂ ಭಕ್ತಿಭಾವದಿಂದ ವರ್ಷಂಪ್ರತಿ ಗ್ರಾಮಸ್ಥರು ಈ ಸಂಪ್ರದಾಯವನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಬರುತ್ತಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಮಾರಿಯಮ್ಮ ದೇವಿಗೆ ಬೇವು, ಹೂವು ಹಾಗೂ ತಂಬಿಟ್ಟಿನ ಆರತಿ ಸಮರ್ಪಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಜಾತ್ರೆ ನೋಡಲು ಅಕ್ಕಪಕ್ಕದ ನೂರಾರು ಗ್ರಾಮಗಳಿಂದ ಜನರು ಆಗಮಿಸಿದ್ದರು. ಮುಳ್ಳಿನ ಪೊದೆಗಳಿಗೆ ಹಾರುವ ವಿಶಿಷ್ಟ ದೃಶ್ಯವನ್ನು ಕಣ್ತುಂಬಿಕೊಂಡ ಭಕ್ತರು ದೇವಿಗೆ ಪ್ರಾರ್ಥನೆ ಸಲ್ಲಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಶ್ಮಿಕಾ-ವಿಜಯ್ ಮದುವೆ ಆರತಕ್ಷತೆ: ನೂತನ ಜೋಡಿಯಿಂದ ವಿಶೇಷ ಮನವಿ – Kannada News | Rashmika Mandanna and Vijay Deverakonda statement begore reception

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ನೆರವೇರಿದೆ. ರಶ್ಮಿಕಾ ಹಾಗೂ ವಿಜಯ್ ಅವರ ಮದುವೆ ಚಿತ್ರಗಳಂತೂ ದೇಶದಾದ್ಯಂತ ಸದ್ದು-ಸುದ್ದಿ ಆಗಿವೆ. ಇಬ್ಬರ ಮದುವೆ ಒಂದು ರೀತಿ ‘ನ್ಯಾಷನಲ್ ನ್ಯೂಸ್’ ಆಗಿದೆ. ರಶ್ಮಿಕಾ-ವಿಜಯ್ ಹೋದಲ್ಲೆಲ್ಲ ಅವರ ನೋಡಲು ಜನ ಮುಗಿಬೀಳುತ್ತಿದ್ದಾರೆ. ಇದರ ನಡುವೆ ನಾಳೆ (ಮಾರ್ಚ್ 04) ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಆರತಕ್ಷತೆ ಆಯೋಜಿಸಲಾಗಿದ್ದು ಆರತಕ್ಷತೆ ಕಾರ್ಯಕ್ರಮ ಬಲು ಅದ್ಧೂರಿಯಾಗಿ ನಡೆಯಲಿದೆ. ರಿಸೆಪ್ಷನ್​​ಗೆ ಮುಂಚೆ ನವ ಜೋಡಿ ಅಭಿಮಾನಿಗಳಲ್ಲಿ ವಿಶೇಷ ಮನವಿಯನ್ನು ಮಾಡಿದ್ದಾರೆ.

ಮದುವೆ ಸ್ಥಳ ಮತ್ತು ಆಗಮಿಸುವ ಅತಿಥಿಗಳ ಮಾಹಿತಿಯನ್ನು ಬಲು ಗುಟ್ಟಾಗಿ ಇರಿಸಿದ್ದರು ರಶ್ಮಿಕಾ ಮತ್ತು ವಿಜಯ್. ಮದುವೆಯ ಹಿಂದಿನ ದಿನದ ವರೆಗೂ ಮದುವೆ ನಡೆಯುತ್ತಿರುವ ರೆಸಾರ್ಟ್ ಯಾವುದು ಎಂಬದರ ಬಗ್ಗೆ ಮಾಧ್ಯಮದವರಿಗೇ ಗೊಂದಲ ಇತ್ತು. ಆದರೆ ರಿಸೆಪ್ಷನ್ ಲೊಕೇಶನ್ ಮಾಹಿತಿಯನ್ನು ಗುಟ್ಟಾಗಿರಿಸುವಲ್ಲಿ ರಶ್ಮಿಕಾ-ವಿಜಯ್ ಜೋಡಿ ವಿಫಲವಾಯ್ತು. ಹೈದರಾಬಾದ್​ನ ತಾಜ್ ಕೃಷ್ಣನಲ್ಲಿ ನಾಳೆ ಸಂಜೆ ರಶ್ಮಿಕಾ-ವಿಜಯ್ ಆರತಕ್ಷತೆ ಬಲು ಅದ್ಧೂರಿಯಾಗಿ ನಡೆಯಲಿದೆ.

ಆದರೆ ಇದೀಗ ರಶ್ಮಿಕಾ-ವಿಜಯ್ ತುಸು ಆತಂಕಕ್ಕೆ ಒಳಗಾಗಿದ್ದು, ಆರತಕ್ಷತೆ ದಿನದಂದು ಭದ್ರತೆ ಸಮಸ್ಯೆ ಆಗುವ ಭೀತಿ ಅವರನ್ನು ಕಾಡುತ್ತಿರುವಂತಿದೆ. ಆರತಕ್ಷತೆಗೆ ತೆಲುಗು ಚಿತ್ರರಂಗದ ಹಲವಾರು ಗಣ್ಯರು, ಬಾಲಿವುಡ್ ನ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಆಂಧ್ರ-ತೆಲಂಗಾಣದ ಪ್ರಮುಖ ರಾಜಕಾರಣಿಗಳು, ಕೇಂದ್ರದ ಕೆಲವು ಪ್ರಮುಖ ರಾಜಕಾರಣಿಗಳು ಸಹ ಇವರ ವಿವಾಹ ಆರತಕ್ಷತೆಗೆ ಹಾಜರಿ ಹಾಕಲಿದ್ದು, ಭಾರಿ ಭದ್ರತೆಯ ಅವಶ್ಯಕತೆ ಇದೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ-ವಿಜಯ್ ಧರಿಸಿದ್ದ ಚಿನ್ನದ ಬೆಲೆ ಎಷ್ಟು ಕೋಟಿ ರೂಪಾಯಿ?

ಅಲ್ಲದೆ, ಇದೀಗ ಆರತಕ್ಷತೆಯ ಸ್ಥಳದ ಮಾಹಿತಿ ಬಹಿರಂಗ ಆಗಿರುವ ಕಾರಣ ಸಾವಿರಾರು ಮಂದಿ ಅಭಿಮಾನಿಗಳು ಸಹ ಆಗಮಿಸುವ ಸಾಧ್ಯತೆ ಇದೆ. ಇದರಿಂದ ಭದ್ರತೆ ಕಠಿಣವಾಗಲಿದೆ. ಇದೀಗ ರಶ್ಮಿಕಾ ಮತ್ತು ವಿಜಯ್ ಮೊದಲೇ ಅಭಿಮಾನಿಗಳಲ್ಲಿ ಮನವಿ ಮಾಡಿದ್ದು, ‘ನಿಮ್ಮ ಸುರಕ್ಷತೆ ಮತ್ತು ಸಂತೋಷ ನಮಗೆ ಮುಖ್ಯ. ನಿಮ್ಮ ಆಶೀರ್ವಾದ ಮತ್ತು ಬೆಂಬಲಕ್ಕೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ ಮತ್ತು ಈ ಆಚರಣೆಯನ್ನು ಎಲ್ಲರಿಗೂ ಸುರಕ್ಷಿತವಾಗಿ ಮತ್ತು ಸಂತೋಷದಿಂದ ಇರಿಸಲು ನಮಗೆ ಸಹಾಯ ಮಾಡುವಲ್ಲಿ ನಿಮ್ಮ ಸಹಕಾರವನ್ನು ನಾವು ಕೋರುತ್ತೇವೆ’ ಎಂದಿದ್ದಾರೆ.

ರಶ್ಮಿಕಾ ಮತ್ತು ವಿಜಯ್ ಅವರ ಆರತಕ್ಷತೆಗೆ ಪೊಲೀಸ್ ಇಲಾಖೆ ಭಾರಿ ಬಂದೋಬಸ್ತ್ ನೀಡುತ್ತಿದೆ. ಸೆಕ್ಯೂರಿಟಿ ಚೆಕ್ ವ್ಯವಸ್ಥೆ, ಸುಗಮ ಸಂಚಾರಕ್ಕೆ ಸೂಕ್ತ ವ್ಯವಸ್ಥೆಗಳ ಬಗ್ಗೆ ಈಗಾಗಲೇ ಯೋಜನೆ ಸಿದ್ಧವಾಗಿದೆ. ಜೊತೆಗೆ ರಶ್ಮಿಕಾ ಮತ್ತು ವಿಜಯ್ ಅವರು ವಿದೇಶಿ ಸಂಸ್ಥೆಯೊಂದರಿಂದ ವಿಶೇಷ ಸೆಕ್ಯೂರಿಟಿ ಮೆನ್​​ಗಳ ದೊಡ್ಡ ತಂಡವನ್ನೇ ಕರೆಸಿಕೊಂಡಿದ್ದಾರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version