Headlines

Bengaluru: ಹನಿಟ್ರ್ಯಾಪ್​​​​ ಕೇಸ್ ಆರೋಪಿ ಯುವತಿಯಿಂದ ಸಾಮೂಹಿಕ ಅತ್ಯಾಚಾರ ದೂರು – Kannada News | Honeytrap Accused Files Physical Harassment Complaint Against Two Youths in Bengaluru

ಬೆಂಗಳೂರು, ಫೆಬ್ರವರಿ 23: ಹನಿಟ್ರ್ಯಾಪ್​​​​ ಕೇಸ್ ಆರೋಪಿತ ಯುವತಿ ತನ್ನ ಮೇಲೆ ಗ್ಯಾಂಗ್​ರೇಪ್ ನಡೆದಿದೆ ಎಂದು ಆರೋಪಿಸಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ಪಾರ್ಟಿಯೊಂದಕ್ಕೆ ಕರೆದೊಯ್ದು ನನ್ನ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಸಂತ್ರಸ್ತೆ ದೂರಿದ್ದು, ಈ ಸಂಬಂಧ ನಿಖಿಲ್​ ಮತ್ತು ಡಿಕ್ಸನ್​ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಫೆ.22ರಂದು ಎಫ್​​ಐಆರ್​​ ದಾಖಲಾಗಿದೆ. ಇದಕ್ಕೂ ಮುನ್ನ ಒಂದು ದಿನ ಮೊದಲಷ್ಟೇ ಅಂದರೆ ಫೆ.21ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಯುವತಿ ವಿರುದ್ಧ ಹನಿಟ್ರ್ಯಾಪ್ ಕೇಸ್ ದಾಖಲಾಗಿತ್ತು. ಯುವತಿ…

Read More

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ – Kannada News | BJP MLAS Chandru Lamani Bribery Case: Kumara Maharaja Swamiji Clarify about His Audio Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ…

Read More

Video: ಪುಟ್ಟ ಕಂದಮ್ಮನನ್ನು ಹುಲ್ಲಿನ ಹೊರೆಯಲ್ಲಿ ಕಟ್ಟಿ ತಲೆ ಮೇಲೆ ಹೊತ್ತು ಸಾಗಿದ ಹೆತ್ತಮ್ಮ – Kannada News | A mother carried her son sleeping on her grass bundle

ತಾಯಿ (mother) ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ಮಕ್ಕಳ ಲಾಲನೆ ಪಾಲನೆ ಮಾಡುತ್ತಾ ಮಕ್ಕಳಿಗೆ ಸದಾ ನೆರಳಾಗಿರುವ ಜೀವವೇ ಈ ಅಮ್ಮ. ಆದರೆ ನಗರದಲ್ಲಿ ತಾಯಂದಿರು ತಮ್ಮ ಮಕ್ಕಳನ್ನು ಬೆಳೆಯುವ ರೀತಿಗೂ ಹಳ್ಳಿಯಲ್ಲಿ ಮಕ್ಕಳು ಬೆಳೆಯುವ ರೀತಿಗೆ ಸಾಕಷ್ಟು ವ್ಯತ್ಯಾಸವಿದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಇಲ್ಲೊಬ್ಬಳು ತಾಯಿ ಕೆಲಸದ ನಡುವೆಯೂ ತನ್ನ ಮಗನ ಬಗ್ಗೆ ಕಾಳಜಿ ವಹಿಸಿದ್ದಾಳೆ. ಹುಲ್ಲಿನ ಹೊರೆಯೊಂದರಲ್ಲಿ ಪುಟ್ಟ ಮಗುವನ್ನು ಸೇರಿಸಿ ಕಟ್ಟಿ ತಾಯಿಯೊಬ್ಬಳು ಹೊತ್ತುಕೊಂಡು ಸಾಗಿದ್ದಾಳೆ . ಈ ವಿಡಿಯೋ…

Read More

ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿವೆ 31 ಜೀವಗಳು! ಬೆಂಗಳೂರಿನಲ್ಲೇ ಅತಿಹೆಚ್ಚು ಸಾವು! – Kannada News | Karnataka Road Accidents: 31 Daily Deaths Highlight Urgent Safety Crisis

ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿವೆ 31 ಜೀವಗಳು! ಬೆಂಗಳೂರು, ಫೆಬ್ರವರಿ 23: ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 31 ಮಂದಿ ರಸ್ತೆ ಅಪಘಾತಗಳಲ್ಲಿ (Road accidents) ಸಾವನ್ನಪ್ಪುತ್ತಿದ್ದು, 86 ಮಂದಿ ಗಾಯಗೊಳ್ಳುತ್ತಿದ್ದಾರೆ ಎಂದು ಇತ್ತೀಚಿನ ಅಧ್ಯಯನವೊಂದು ತಿಳಿಸಿದೆ. 2025ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಶೇ 62.68 ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲೇ ನಡೆದಿದ್ದು, 2026ರ ಜನವರಿಯಲ್ಲಿಯೇ 1,009 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಈ ವರದಿ ಬಹಿರಂಗಪಡಿಸಿದೆ. ವೇಗದ ಚಾಲನೆ, ನಿರ್ಲಕ್ಷ್ಯ, ಹೆದ್ದಾರಿ ಕಾಮಗಾರಿಗಳು ಮತ್ತು ಮೂಲಸೌಕರ್ಯ ಸಮಸ್ಯೆಗಳೇ…

Read More

ಆನ್​ಲೈನ್ ಗೇಮ್ ಚಟಕ್ಕೆ ಮಾಡಿದ್ದ ಲಕ್ಷಾಂತರ ರೂ. ಸಾಲ ತೀರಿಸಲು ವೃದ್ಧೆಯ ಕೊಂದು ಚಿನ್ನಾಭರಣ ದೋಚಿದ್ದ ಯುವಕ ಅಂದರ್ – Kannada News | Youth Kills Elderly Woman to Repay Online Gaming Debt, Arrested in Davanagere District

ದಾವಣಗೆರೆ, ಫೆಬ್ರವರಿ 23: ಆನ್‌ಲೈನ್ ಗೇಮ್ ವ್ಯಸನದಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ ಪ್ರಕರಣ ದಾವಣಗೆರೆ (Davanagere) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಫೆಬ್ರವರಿ 2ರಂದು ಈ ಘಟನೆ ನಡೆದಿತ್ತು. ಗ್ರಾಮದ ಒಂಟಿ ವೃದ್ಧೆ ಕಮಲಮ್ಮ (64) ಅವರನ್ನು ಮನೆಗೆ ನುಗ್ಗಿ ಹತ್ಯೆ ಮಾಡಿ, ಸುಮಾರು 8.44…

Read More

ಟೀಮ್ ಇಂಡಿಯಾ ಮುಂದಿನ ಪಂದ್ಯವನ್ನು ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? – Kannada News | India must achieve massive victory in this margins

ಸೌತ್ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಭಾರತ ತಂಡವು ಹೀನಾಯವಾಗಿ ಸೋತಿರುವುದು. ಅಂದರೆ ಸೌತ್ ಆಫ್ರಿಕಾ ವಿರುದ್ಧದ 76 ರನ್​ಗಳ ಅಂತರದಿಂದ ಸೋತಿರುವ ಕಾರಣ ಟೀಮ್ ಇಂಡಿಯಾದ ನೆಟ್ ರನ್ ರೇಟ್ -3.800 ಕ್ಕೆ ಕುಸಿದಿದೆ. ಈ ನೆಗೆಟಿವ್ ನೆಟ್ ರನ್ ರೇಟ್ ಅನ್ನು ಪಾಸಿಟಿಮ್ ಮಾಡಬೇಕಿದ್ದರೆ ಭಾರತ ತಂಡವು ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಬೇಕು. ಅದರಂತೆ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ…

Read More

Video: ತನಗೆ ಕಾಟ ಕೊಟ್ಟ ಕೋತಿಗೆ ಪಂಚ್ ಕೊಡ್ತಾ ಈ ಕೋತಿ ಮರಿ ‘ಪಂಚ್’? – Kannada News | Viral AI Edits Reimagine Baby Monkey Punch With a Dramatic Comeback

ಟೋಕಿಯೋ, ಫೆಬ್ರವರಿ 23: ಈ ಕೋತಿ ಮರಿ ಹುಟ್ಟಿನಿಂದಲೇ ಒಬ್ಬಂಟಿ, ಅದು ತೂಕ ಕಡಿಮೆ ಇದ್ದಿದ್ದರಿಂದ ತಾಯಿಗೂ ಅದನ್ನು ಸಾಕಲು ತಿಳಿಯದೆ ಬಿಟ್ಟು ಹೋಗಿತ್ತು. ಜಪಾನ್​ನ ಮೃಗಾಲಯದಲ್ಲಿ ಅದನ್ನು ಬಿಡಲಾಗಿತ್ತು. ಆದರೆ ಅದಕ್ಕೆ ಸ್ನೇಹಿತರು ಯಾರೂ ಇರಲಿಲ್ಲ, ಕೋತೊಯನ್ನೇ ಹೋಲುವ ಗೊಂಬೆಯನ್ನೇ ಅದು ತನ್ನ ಕುಟುಂಬವನ್ನಾಗಿ ಮಾಡಿಕೊಂಡಿತ್ತು. ಉಳಿದ ಕೋತಿಗಳೆಲ್ಲಾ ಅದರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು. ಬಳಿಕ ಅದಕ್ಕೆ ಕೆಲವು ಕೋತಿಗಳು ಫ್ರೆಂಡ್​ಶಿಪ್ ಮಾಡಿವೆ ಎನ್ನುವ ಮಾಹಿತಿಯೂ ಇದೆ. @ Pediavenir ಎಂಬ…

Read More

ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ: ಸಹ ಕೈದಿಗಳ ಮೇಲೆ ಹಲ್ಲೆ – Kannada News | Biklu Shiva Murder Accused Pradeep Assaults Fellow Inmates in Parappana Agrahara Jail

ಬೆಂಗಳೂರು, ಫೆಬ್ರವರಿ 23: ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಪ್ರದೀಪ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ತನ್ನ ಸಹ ಕೈದಿಗಳ ಮೇಲೆ ಹಲ್ಲೆ ನಡೆಸಿದ್ದಾನೆ.  ಕೊಲೆ ಆರೋಪದಡಿ ಬಂಧಿತನಾಗಿ ಜೈಲೂಟ ಸವಿಯುತ್ತಿದ್ದರೂ ಈತ ಮತ್ತೆ ತನ್ನ ರೌಡಿಸಂ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ. ಫೆಬ್ರವರಿ 18ರಂದು ಸುರೇಶ್ ಹಾಗೂ ಆದಿತ್ ಮಧುಕಿರಣ್ ಎಂಬುವವರ ಮೇಲೆ ಪ್ರದೀಪ್ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಸುರೇಶ್ ಮತ್ತು ಆದಿತ್ ಮಧುಕಿರಣ್…

Read More

‘ಧುರಂಧರ್ 2’ ಚಿತ್ರಕ್ಕಿಂತ ‘ಟಾಕ್ಸಿಕ್’ ಚಿತ್ರಕ್ಕೆ ಸಿಕ್ತು ಹೆಚ್ಚುವರಿ 1200 ಪರದೆಗಳು? – Kannada News | Toxic vs Dhruvadhar 2: Box Office Battle Begins! Screens and Day 1 Collection Forecast

‘ಧುರಂಧರ್ 2’ vs ‘ಟಾಕ್ಸಿಕ್’ ಫೈಟ್​​ಗೆ ವೇದಿಕೆ ಸಿದ್ಧವಾಗುತ್ತಿದೆ. ಮಾರ್ಚ್ 19ರಂದು ಎರಡೂ ಸಿನಿಮಾಗಳು ಮುಖಾ ಮುಖಿ ಆಗುತ್ತಿವೆ. ಈ ಎರಡು ಸಿನಿಮಾಗಳ ಪೈಕಿ ಯಾರು ಗೆಲ್ಲುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಹೀಗಿರುವಾಗಲೇ, ‘ಟಾಕ್ಸಿಕ್’ ಸಿನಿಮಾಗೆ (Toxic Movie) ‘ಧುರಂಧರ್ 2’ ಚಿತ್ರಕ್ಕಿಂತ ಹೆಚ್ಚುವರಿಯಾಗಿ 1200 ಸ್ಕ್ರೀನ್​​ಗಳು ಸಿಗಲಿವೆ ಎಂದು ಹೇಳಲಾಗುತ್ತಾ ಇದೆ. ‘ಧುರಂಧರ್ 2’ ಸಿನಿಮಾ ಬಗ್ಗೆ ಒಂದು ವರ್ಗದ ಜನರಿಗೆ ನಿರೀಕ್ಷೆ ಇದೆ. ಈಗಾಗಲೇ ರಿಲೀಸ್ ಆಗಿರುವ ಮೊದಲ ಪಾರ್ಟ್​ ಹಲ್​ಚಲ್ ಎಬ್ಬಿಸಿರುವುದರಿಂದ…

Read More

ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನಲ್ಲಿ ನೂರಾರು ಕೋಟಿ ರೂ ಲೂಟಿ; ಹೂಡಿಕೆದಾರರಿಗೆ 14,000 ಕೋಟಿ ರೂ ನಷ್ಟ; ಏನಿದು ಹಗರಣ? – Kannada News | IDFC First Bank’s Rs 590 fraud case: company shares hit 20pc lower circuit, details of this scam

ನವದೆಹಲಿ, ಫೆಬ್ರುವರಿ 23: ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ (IDFC First Bank) ಚಂಡೀಗಡ ಶಾಖೆಯಲ್ಲಿ 590 ಕೋಟಿ ರೂ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಈ ಬ್ಯಾಂಕ್​ನ ಷೇರುಗಳು ತರಗೆಲೆಯಲ್ಲಿ ಉದುರುತ್ತಿವೆ. ಸೋಮವಾರ ಈ ಬ್ಯಾಂಕ್​ನ ಷೇರುಬೆಲೆ ಶೇ. 20ರ ಕೆಳಗಿನ ಮಿತಿಯಷ್ಟು ಕುಸಿದಿದೆ. ಇದರ ಷೇರುಗಳಲ್ಲಿ ಹೂಡಿಕೆ ಮಾಡಿದವರಿಗೆ ಒಂದೇ ದಿನ 14,000 ಕೋಟಿ ರೂಗೂ ಅಧಿಕ ಮೊತ್ತದ ನಷ್ಟ ಆಗಿದೆ. ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಈ ಪ್ರಕರಣವೇನು? ಐಡಿಎಫ್​ಸಿ ಫಸ್ಟ್ ಬ್ಯಾಂಕ್​ನ ಚಂಡೀಗಡ…

Read More