Headlines

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ – Kannada News | Stone Pelting During Shivaji Jayanti Procession in Bagalkot: Hindu Groups Call for Massive Protest on Feb 26

ಬಾಗಲಕೋಟೆ, ಫೆಬ್ರವರಿ 23: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಫೆಬ್ರವರಿ 26 ರಂದು ದೊಡ್ಡ ಮಟ್ಟದ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇತ್ತೀಚೆಗೆ ಶಿವಾಜಿ ಮಹಾರಾಜರ ಭಾವಚಿತ್ರ ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ಎಸೆದು ಅಪಮಾನ ಮಾಡಿದವರನ್ನು ಇನ್ನೂ ಬಂಧಿಸಿಲ್ಲ ಎಂದು ಭಾನುವಾರ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ…

Read More

ಪವರ್​ಪ್ಲೇನಲ್ಲಿ ಪಂದ್ಯ ಗೆಲ್ಲಲು ಸಾಧ್ಯವಿಲ್ಲ, ಆದರೆ ಸೋಲಬಹುದು! – Kannada News | Suryakumar yadav post match interview IND vs SA 2026

T20 World Cup 2026: ಟಿ20 ವಿಶ್ವಕಪ್​ನ ಲೀಗ್​ ಹಂತದಲ್ಲಿ ಸತತ 4 ಪಂದ್ಯಗಳನ್ನು ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಪರಾಜಯಗೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ…

Read More

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

‘ಜೈ ಹನುಮಾನ್’ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರು ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಹನುಮಂತ ಹುಟ್ಟಿದ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ರಿಷಬ್ ಅವರು ಕಾಲ್ನಡಿಗೆಯಲ್ಲೇ ಬೆಟ್ಟ ಏರಿದರು. ಮುಹೂರ್ತದ ಬಳಿಕ ಮಾತನಾಡಿದ ಅವರು, ‘ಈ ಚಿತ್ರದಿಂದ ರಾಮ ಹಾಗೂ ಹನುಮ ಭಕ್ತರಿಗೆ ಖುಷಿ ಆಗಲಿದೆ’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ಟಾಕ್ಸಿಕ್’ ಚಿತ್ರಕ್ಕೆ ಯಶ್ ಪಡೆದ ಸಂಭಾವನೆ ಎಷ್ಟು? – Kannada News | Yash’s Toxic Remuneration: Pan India Star Demands 150 Crores After KGF Success?

ಕನ್ನಡದ ರಾಕಿಂಗ್ ಸ್ಟಾರ್ ಯಶ್ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳೊಂದಿಗೆ ಸತತ ಬ್ಲಾಕ್ಬಸ್ಟರ್ ಹಿಟ್ ಗಳಿಸಿದ್ದಾರೆ. ಅವರು ಪ್ರಸ್ತುತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಿಡುಗಡೆಗೂ ಮುನ್ನ, ಚಿತ್ರದ ಟೀಸರ್ ಮತ್ತು ಗ್ಲಿಂಪ್ಸ್ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆ. ಇತ್ತೀಚೆಗೆ, ಈ ಚಿತ್ರಕ್ಕಾಗಿ ಯಶ್ ತೆಗೆದುಕೊಳ್ಳುತ್ತಿರುವ ಸಂಭಾವನೆ ಕೂಡ ಚರ್ಚೆಯ ವಿಷಯವಾಗಿದೆ. ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅಪಾರ ಕ್ರೇಜ್ ಹೊಂದಿರುವ ನಾಯಕ. ಸಾಮಾನ್ಯ…

Read More

ಗೆದ್ದರೆ ಮಾತ್ರ ಸಾಕಾಗಲ್ಲ… ಹೀಗಿದೆ ಟೀಮ್ ಇಂಡಿಯಾದ ‘ಸೆಮಿಫೈನಲ್’ ಲೆಕ್ಕಾಚಾರ – Kannada News | How can India qualify for semifinal in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ ಮುಗ್ಗರಿಸಿದೆ. ಈ ಸೋಲಿನ ಹೊರತಾಗಿಯೂ ಭಾರತ ತಂಡಕ್ಕೆ ಸೆಮಿಫೈನಲ್​ಗೇರಲು ಉತ್ತಮ ಅವಕಾಶವಿದೆ. ಈ ಅವಕಾಶದೊಂದಿಗೆ ಟೀಮ್ ಇಂಡಿಯಾ ತನ್ನ ಗೆಲುವಿನ ಅಂತರವನ್ನೂ ಸಹ ನೋಡಿಕೊಳ್ಳಬೇಕಿದೆ. ಏಕೆಂದರೆ ಸೆಮಿಫೈನಲ್​ ರೇಸ್​ನಲ್ಲಿ ಒಟ್ಟು 4 ತಂಡಗಳಿದ್ದು, ಈ ನಾಲ್ಕು ಟೀಮ್​ಗಳಲ್ಲಿ ಎರಡು ತಂಡ ಮುಂದಿನ ಹಂತಕ್ಕೇರಲಿದೆ. ಆದರೆ ಇತ್ತ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ ಹೀನಾಯವಾಗಿ ಸೋತಿರುವುದರಿಂದ ನೆಟ್ ರನ್ ರೇಟ್…

Read More

ಬೆಂಗಳೂರು ಗ್ರಾಮಾಂತರ ಭಾಗದ ಪ್ರಯಾಣಿಕರಿಗೂ ಬಿಎಂಟಿಸಿ ಗುಡ್ ನ್ಯೂಸ್: ಇನ್ಮುಂದೆ 80 ಕಿಮೀ ವ್ಯಾಪ್ತಿಯಲ್ಲಿ ಸಂಚಾರ! – Kannada News | BMTC Extends Bus Services Up to 80 KM: Big Relief for Bengaluru Rural Passengers

ಬೆಂಗಳೂರು, ಫೆಬ್ರವರಿ 23: ಬೆಂಗಳೂರು (Bangalore) ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹೋಗಬೇಕು ಅಂದರೆ ಬಿಎಂಟಿಸಿ ಬಸ್ (BMTC Bus) ಬೇಕೇಬೇಕು. ರಾಜಧಾನಿಯ ಗಲ್ಲಿ ಗಲ್ಲಿಗೂ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡುತ್ತವೆ. ಆದರೆ ಇನ್ಮುಂದೆ ಬಿಎಂಟಿಸಿ ಬಸ್ಸುಗಳು ಬೆಂಗಳೂರು ಗ್ರಾಮಾಂತರ ಭಾಗಗಳಿಗೂ ಸಂಚಾರ ಮಾಡಲು ಸಜ್ಜಾಗಿವೆ. ಇಲ್ಲಿಯವರೆಗೆ ಬಿಎಂಟಿಸಿ ಬಸ್ಸುಗಳು 40 ಕಿಮೀ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದವು. ಇನ್ಮುಂದೆ ರಾಮನಗರ, ಕನಕಪುರ, ನೆಲಮಂಗಲ-ಹೊಸಕೋಟೆ, ದೇವನಹಳ್ಳಿ- ದೊಡ್ಡಬಳ್ಳಾಪುರಕ್ಕೂ ಸಂಚಾರ ಮಾಡಲಿವೆ. ಬಿಎಂಟಿಸಿ ಹೊಸ ನಿರ್ಧಾರ ಪ್ರಯಾಣಿಕರಿಗೂ…

Read More

ಕರ್ನಾಟಕ ಹವಾಮಾನ ವರದಿ: ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ – Kannada News | Bengaluru temperature: Heat wave alert in Bengaluru after March

ಕೂಲ್ ಸಿಟಿ ಇನ್ಮುಂದೆ ಹಾಟ್ ಸಿಟಿ! ಬೆಂಗಳೂರಿಗೆ ಗರಿಷ್ಠ ತಾಪಮಾನದ ಅಲರ್ಟ್ ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ನಿನ್ನೆಯಷ್ಟೇ ಮೋಡ ಕವಿದ ವಾತಾವರಣ ಕಾಣಿಸಿತ್ತು. ಆದರೆ ಇಂದು ಎಲ್ಲೆಡೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಬಿಸಿಲಿನ ತಾಪಕ್ಕೆ ತತ್ತರಿಸುತ್ತಿದೆ. ಕಳೆದ ಒಂದು ವಾರದಿಂದ ತಾಪಮಾನ ನಿರಂತರ…

Read More

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್? ಇಲ್ಲಿದೆ ನೋಡಿ – Kannada News | Another FIR Filed Against Activist Snehamayi Krishna in Bengaluru: Fresh Case Registered at Basaveshwaranagar

ಬೆಂಗಳೂರು, ಫೆಬ್ರವರಿ 23: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಕೇಸ್​​ನಲ್ಲಿ ತೀವ್ರ ಹೋರಾಟ ನಡೆಸಿದ್ದ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು 2 ದಿನ ಹಿಂದಷ್ಟೇ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಅವರ ಆಡಿಯೋ ಬಹಿರಂಗ ವಿಚಾರವಾಗಿ ಈ ಕ್ರಮ ಆಗಿತ್ತು. ಇದೀಗ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರಾ…

Read More

Video: ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ – Kannada News | Partial Railway Bridge Collapse on National Highway 45 Sparks Safety Concerns in MP

ಜಬಲ್ಪುರ, ಫೆಬ್ರವರಿ 23: ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿ 45 ರಲ್ಲಿರುವ ಶಹಪುರ ಸೇತುವೆಯ ದೊಡ್ಡ ಭಾಗ ಭಾನುವಾರ ಕುಸಿದಿದೆ. ಅದೃಷ್ಟವಶಾತ್, ಸೇತುವೆ ಕುಸಿದಾಗ ಸ್ಥಳದಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಮೇಲ್ಸೇತುವೆ ಕುಸಿದ ಸ್ಥಳದ ಬಳಿ ರೈಲ್ವೆ ಕ್ರಾಸಿಂಗ್ ಇದೆ. ಈ ಸೇತುವೆಯನ್ನು ರೈಲ್ವೆ ಕ್ರಾಸಿಂಗ್ ಮೇಲೆಯೇ ನಿರ್ಮಿಸಲಾಗಿದೆ. ಡಿಸೆಂಬರ್‌ನಲ್ಲಿ, ಇದೇ ಸೇತುವೆಯ ಮತ್ತೊಂದು ಭಾಗವೂ ಕುಸಿದಿತ್ತು. ಈ ಸೇತುವೆ ಜಬಲ್‌ಪುರದಿಂದ ಕೇವಲ 30-35 ಕಿಲೋಮೀಟರ್ ದೂರದಲ್ಲಿದೆ. ಸೇತುವೆ ತುಂಬಾ ಹಳೆಯದಲ್ಲ, ಇದು ಸುಮಾರು ಐದು ವರ್ಷಗಳ ಹಿಂದೆಯೇ…

Read More

ಮದುವೆಗೆ ಎರಡು ವಾರ ಇರುವಾಗಲೇ ಅಲ್ಲು ಮನೆಯಲ್ಲಿ ಸಂಭ್ರಮ ಆರಂಭ; ಅದ್ದೂರಿ ಪಾರ್ಟಿ – Kannada News | Allu Sirish and Nayaniika Wedding: Grand Pre Wedding Bash by Allu Arjun and Sneha Reddy

ಅಲ್ಲು ಅರ್ಜುನ್ (Allu Arjun) ಸಹೋದರು ಅಲ್ಲು ಸಿರಿಶ್ ಅವರು ಮಾರ್ಚ್ 6ರಂದು ವಿವಾಹ ಆಗುತ್ತಿದ್ದಾರೆ. ತಾವು ಪ್ರೀತಿಸುತ್ತಿದ್ದ ನಯಾನಿಕಾ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಸದ್ಯ ಸಂಭ್ರಮ ಜೋರಾಗಿದೆ. ಈ ಮೊದಲು ದುಬೈನಲ್ಲಿ ಕುಟುಂಬದವರು ಯಾಚ್​ ಪಾರ್ಟಿ ಮಾಡಿದ್ದರು. ಈಗ ಹೈದರಾಬಾದ್​​ನಲ್ಲಿ ದೊಡ್ಡ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಅಲ್ಲು ಅರ್ಜುನ್ ಹಾಗೂ ಪತ್ನಿ ಸ್ನೇಹಾ ರೆಡ್ಡಿ ಇದನ್ನು ಹೋಸ್ಟ್ ಮಾಡಿದ್ದರು. ವಿವಾಹಕ್ಕೆ ಎರಡು ವಾರ ಇರುವಾಗಲೇ ಪಾರ್ಟಿ ಜೋರಾಗಿದೆ. ಅಲ್ಲು ಅರ್ಜುನ್ ದಂಪತಿ ಆಯೋಜನೆ ಮಾಡಿದ…

Read More