Headlines

ಬಾಗಲಕೋಟೆ, ದಾವಣಗೆರೆ ಉಪಸಮರದಲ್ಲಿ ಬಿಜೆಪಿಗೆ ಹಿನ್ನಡೆ; ಆಡಳಿತ ಪಕ್ಷದ ಪ್ರಭಾವಕ್ಕೆ ಗೆಲುವು ಎಂದ ವಿಜಯೇಂದ್ರ – Kannada News | Vijayendra Reflects on BJPs By election Defeat in Davangere South and Bagalkot

ದಾವಣಗೆರೆ, ಏ.5: ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿ. ವೈ. ವಿಜಯೇಂದ್ರರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಕಂಡಿದ್ದು, ಗೆಲುವಿನ ನಿರೀಕ್ಷೆಗಳಿದ್ದವು ಎಂದು ಅವರು ತಿಳಿಸಿದರು. ಉಪಚುನಾವಣೆಗಳಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ ಎಂದು ಅವರು ಒಪ್ಪಿಕೊಂಡರು. ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಅನುಕಂಪ ಹಾಗೂ ಆಡಳಿತ ಪಕ್ಷದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಚಾರ ಪರಿಣಾಮ ಬೀರಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು. ಹಿಂದೆ ಯಡಿಯೂರಪ್ಪನವರು…

Read More

ಜಾರ್ಖಂಡ್ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಹೆರಿಗೆ; ತಾಯಿ, ಮಗು ಸಾವು – Kannada News | Jharkhand hospital staff used mobile torch light for delivery mother and newborn died

ಜಾರ್ಖಂಡ್, ಮೇ 5: ಜಾರ್ಖಂಡ್‌ನಲ್ಲಿ (Jharkhand) ಅಮಾನವೀಯ ಘಟನೆಯೊಂದು ನಡೆದಿದೆ. ಇಲ್ಲಿನ ಸೆರೈಕೆಲಾ-ಖರ್ಸವಾನ್ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ (ಸಿಎಚ್‌ಸಿ) ವಿದ್ಯುತ್ ಕಡಿತದಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಮೊಬೈಲ್ ಟಾರ್ಚ್ ಹಾಕಿಕೊಂಡು ಡೆಲಿವರಿ ಮಾಡಿಸಿದ್ದಾರೆ. ಇದಾದ ಬಳಿಕ ಮಹಿಳೆ ಮತ್ತು ಅವರ ನವಜಾತ ಶಿಶು ಸಾವನ್ನಪ್ಪಿದೆ. ಆಸ್ಪತ್ರೆ ಸಿಬ್ಬಂದಿ ಮೊಬೈಲ್ ಫೋನ್ ಬೆಳಕನ್ನು ಬಳಸಿ ಹೆರಿಗೆಗೆ ಪ್ರಯತ್ನಿಸಿದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಜಾರ್ಖಂಡ್​​ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬಳಸಿ ಹೆರಿಗೆ…

Read More

ರಾತ್ರಿ ಮಲಗೋ ಮುನ್ನ ಪಾದಗಳನ್ನು ತೊಳೆಯೋದು ಎಷ್ಟು ಮುಖ್ಯ ಗೊತ್ತಾ? – Kannada News | Benefits of washing feet before going to bed

ವೈಯಕ್ತಿಕ ನೈರ್ಮಲ್ಯದ (Hygiene) ಬಗ್ಗೆ ಪ್ರತಿಯೊಬ್ಬರೂ ಸಹ ಕಾಳಜಿ ವಹಿಸಬೇಕು. ಇದು ಸೋಂಕುಗಳನ್ನು ತಡೆಗಟ್ಟಲು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನೈರ್ಮಲ್ಯದ ದೃಷ್ಟಿಯಿಂದ ನಾವು ಪ್ರತಿನಿತ್ಯ ಸ್ನಾನ ಮಾಡುತ್ತೇವೆ ಮತ್ತು ಆಗಾಗ್ಗೆ ಕೈಗಳನ್ನು ತೊಳೆದುಕೊಳ್ಳುತ್ತೇವೆ. ಕಾಲುಗಳ ಆರೈಕೆಯ ಬಗ್ಗೆ ಅಷ್ಟಾಗಿ ಗಮನ ಹರಿಸುವುದಿಲ್ಲ. ಅದರಲ್ಲೂ ಮಲಗುವ ಮುನ್ನ ಕಡ್ಡಾಯವಾಗಿ ಪಾದಗಳನ್ನು ತೊಳೆದೇ ಮಲಗಬೇಕು ಎಂಬುದು ಅನೇಕರಿಗೆ ಗೊತ್ತೇ ಇಲ್ಲ. ತಜ್ಞರು ಹೇಳುವಂತೆ, ವಿಶೇಷವಾಗಿ ಮಲಗುವ ಮೊದಲು, ಪಾದಗಳನ್ನು ತೊಳೆಯದಿದ್ದರೆ…

Read More

ಅಸ್ತಮಾ ರೋಗಿಗಳೇ ಹವಾಮಾನ ಬದಲಾವಣೆಯಿಂದ ಸಮಸ್ಯೆಗಳಾಗುತ್ತಿದ್ಯಾ? ಹಾಗಿದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಿ – Kannada News | Asthma Patients Beware: Seasonal Changes and Breathing Health Guide

Asthma Patients Beware: Seasonal Changes and Breathing Health GuideImage Credit source: Getty Images ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಅಸ್ತಮಾ (Asthma) ರೋಗಿಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ತಾಪಮಾನದಲ್ಲಿ ಏರುಪೇರು, ಗಾಳಿಯಲ್ಲಿನ ತೇವಾಂಶದ ಬದಲಾವಣೆ ಮತ್ತು ಧೂಳು, ಮಾಲಿನ್ಯದ ಪ್ರಮಾಣ ಹೆಚ್ಚಾಗಿರುವುದು ಸೇರಿದಂತೆ ನಾನಾ ರೀತಿಯ ಕಾರಣಗಳು ಉಸಿರಾಟ ಸಂಬಂಧಿ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ಹವಾಮಾನ ಬದಲಾದಾಗ ದೇಹವು ಹೊಸ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಈ…

Read More

20ರ ಯುವತಿ-46ರ ಅಂಕಲ್ ಲವ್: ಪ್ರೇಯಸಿ ಬೇಕು ಹೆಂಡ್ತಿನೂ ಬೇಕೆಂದ ಟೇಲರ್ – Kannada News | A 46 Year Old Man Cheating to 20 old Young Woman in Love Name

ಚಿಕ್ಕಬಳ್ಳಾಪುರ, (ಮೇ 05): 46ರ ಅಂಕಲ್ 20 ವರ್ಷದ ಯುವತಿಯನ್ನು ಪ್ರೀತಿಸಿ  (Love) ಕೈಕೊಟ್ಟ ಆರೋಪ ಕೇಳಿಬಂದಿದೆ.  ಚಿಕ್ಕಬಳ್ಳಾಪುರದ (Chikkaballapur) ಬಾಗೇಪಲ್ಲಿ ಮೂಲದ ಟೈಲರ್ ರಮೇಶ ಎನ್ನುವಾತನಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ತನಗೆ ಮದುವೆಯಾಗಿಲ್ಲ ಎಂದು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ. ಸಾಲದಕ್ಕೆ ಮದುವೆ ಮಾಡಿಕೊಳ್ಳೊದಾಗಿ ನಂಬಿಸಿ ಆಕೆಯೊಂದಿಗೆ 2 ತಿಂಗಳ ಸಂಸಾರ ಸಹ ನಡೆಸಿದ್ದಾನೆ. ಚಿಕ್ಕಮ್ಮನ ಮನೆಗೆ ಹೋಗಿ ಬರ್ತಿದ್ದಾಗ ಯುವತಿಯನ್ನು ರಮೇಶ್ ಪರಿಚಯ ಮಾಡಿಕೊಂಡಿದ್ದ. ಬಳಿಕ ಯುವತಿಯ ಪೋನ್ ನಂಬರ್…

Read More

ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಪೂಜಾ ಹೆಗ್ಡೆ: ವಿಡಿಯೋ ವೈರಲ್ – Kannada News | Jana Nayagan actor Pooja Hegde prediction on TVK Thalapathy Vijay Election Win comes true

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಫಲಿತಾಂಶ ಹೊರಬಿದ್ದಿದ್ದು, ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಯಾರೂ ಊಹಿಸದ ರೀತಿಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ವಿಜಯ್ (Thalapathy Vijay) ಅವರದ್ದೇ ಹವಾ. ಈ ನಡುವೆ, ವಿಜಯ್ ಅವರ ಈ ಭರ್ಜರಿ ಗೆಲುವಿನ ಬಗ್ಗೆ ನಟಿ ಪೂಜಾ ಹೆಗ್ಡೆ (Pooja Hegde) ಅವರು ಬಹಳ ಹಿಂದೆಯೇ ನುಡಿದಿದ್ದ ಭವಿಷ್ಯ ಈಗ ಅಕ್ಷರಶಃ ನಿಜವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. 1….

Read More

ಪ್ರಯಾಣಿಕರ ಪವರ್ ಬ್ಯಾಂಕ್​ನಿಂದ ಬೆಂಕಿ; ಇಂಡಿಗೋ ವಿಮಾನದಲ್ಲಿ ತಪ್ಪಿದ ಭಾರೀ ದುರಂತ – Kannada News | IndiGo plane evacuated in Chandigarh Airport after passengers power bank catches fire

ಚಂಡೀಗಢ, ಮೇ 5: ಚಂಡೀಗಢಕ್ಕೆ ಬಂದಿಳಿದ ಇಂಡಿಗೋ (IndiGo) ವಿಮಾನದೊಳಗೆ ಹೊಗೆ ಕಾಣಿಸಿಕೊಂಡಿದೆ. ಇಂಡಿಗೋ ಪ್ರಯಾಣಿಕರೊಬ್ಬರು ತಮ್ಮ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನದ ಸಿಬ್ಬಂದಿಗೆ ತಿಳಿಸಿದ ನಂತರ ತುರ್ತು ಸ್ಥಳಾಂತರಕ್ಕೆ ಆದೇಶಿಸಲಾಯಿತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ತುರ್ತು ಸ್ಲೈಡ್‌ಗಳನ್ನು ಸಹ ನಿಯೋಜಿಸಲಾಯಿತು. ಸ್ಥಳಾಂತರಿಸುವ ಪ್ರಕ್ರಿಯೆಯ ಸಮಯದಲ್ಲಿ ಪ್ರಯಾಣಿಕರಲ್ಲಿ ಒಬ್ಬರು ಗಾಯಗೊಂಡರು. 198 ಪ್ರಯಾಣಿಕರು ಮತ್ತು 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಹೈದರಾಬಾದ್‌ನಿಂದ ಹೊರಟು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸುಮಾರು ಮಧ್ಯಾಹ್ನ 3.29ಕ್ಕೆ ಇಳಿಯಿತು. ಈ…

Read More

ನಮ್ಮ ಮೆಟ್ರೋ ನೇರಳೆ ಮಾರ್ಗದ ಸೇವೆಯಲ್ಲಿ ವ್ಯತ್ಯಯ: 15 ನಿಮಿಷ ನಿಂತಲ್ಲೇ ನಿಂತ ರೈಲುಗಳು – Kannada News | Namma Metro Disruption: Purple Line Service Halts, Technical Issues Affect Commuters

ಬೆಂಗಳೂರು, ಮೇ 05: ಇವತ್ತೂ ಕೂಡ ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 15 ನಿಮಿಷಗಳ ಕಾಲ ನೇರಳೆ ಮಾರ್ಗದ ಕುಂದಲಹಳ್ಳಿ ಸ್ಟೇಷನ್​ನಲ್ಲಿ ಮೆಟ್ರೋ ರೈಲುಗಳು ನಿಂತಲ್ಲೇ ನಿಂತಿರುವ ಬಗ್ಗೆ ಪ್ರಯಾಣಿಕರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದರೆ ಈ ಬಗ್ಗೆ ಬಿಎಂಆರ್​​ಸಿಎಲ್​​ ಈವರೆಗೂ ಮೆಟ್ರೋ ಸೇವೆಯಲ್ಲಿನ ವ್ಯತ್ಯಯದ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ನಮ್ಮ ಮೆಟ್ರೋ ನೇರಳೆ ಮಾರ್ಗದ ಕಾರ್ಯಾಚರಣೆಯಲ್ಲಿ ವ್ಯತ್ಯಯ 15 ನಿಮಿಷಗಳ ಕಾಲ ನಿಂತಲ್ಲೇ ನಿಂತ ಮೆಟ್ರೋ ರೈಲುಗಳು…

Read More

DC vs CSK Playing XI: ಧೋನಿ ಅಲಭ್ಯ: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11 – Kannada News | DC vs CSK Playing XI Delhi Capitals vs Chennai Super Kings Today IPL 2026 match Confirmed playing 11 details with name in kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಸಿಎಸ್​ಕೆ ತಂಡ ಮೊದಲು ಬೌಲಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕೂ ಮಹೇಂದ್ರ ಸಿಂಗ್ ಧೋನಿ ಅಲಭ್ಯರಾಗಿದ್ದಾರೆ. ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಈ ಬಾರಿ ಒಂದೇ ಒಂದು ಪಂದ್ಯವಾಡಿಲ್ಲ. ಅಂದರೆ ಈ…

Read More

ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್‌ ಶಾ ಭಾಗಿ ಸಾಧ್ಯತೆ – Kannada News | Bs yediyurappa utsava in chitradurga on may 9 for BSY Completed 50 Years In Politics

ಚಿತ್ರದುರ್ಗ, (ಮೇ 05): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More