ಮಕ್ಕಳ ಭವಿಷ್ಯದ ಆತಂಕ: 1ನೇ ತರಗತಿಗೆ ದಾಖಲಾತಿ ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು – Kannada News | NEP 6 Year Rule: Karnataka Parents Demand Age Relaxation for 1st Grade Admission

ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು
Image Credit source: Google

ಬೆಂಗಳೂರು, ಮಾರ್ಚ್​​ 02: ಹೊಸ ಶಿಕ್ಷಣ ನೀತಿ (NEP) ಪ್ರಕಾರ ಪ್ರಥಮ ತರಗತಿಗೆ ಪ್ರವೇಶಕ್ಕೆ 6 ವರ್ಷ ನಿಗದಿ ಹಿನ್ನೆಲೆ, ನಿಗದಿಪಡಿಸಿದ ವಯೋಮಿತಿಯನ್ನು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 90 ದಿನಗಳ ಸಡಿಲಿಕೆ ನೀಡುವಂತೆ ಕರ್ನಾಟಕ ಸರ್ಕಾರವನ್ನು ಪೋಷಕರು ಆಗ್ರಹಿಸಿದ್ದು, ಯುಕೆಜಿ ಮುಗಿದಿದೆ 1ನೇ ತರಗತಿಗೆ ದಾರಿ ಬಿಡಿ. ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ. ಶಿಕ್ಷಣ ನಮ್ಮ ಹಕ್ಕು, ವಯಸ್ಸು ಅಡ್ಡಿಯಾಗದಿರಲಿ ಎಂಬಿತ್ಯಾದಿ ಪ್ಲೇ ಕಾರ್ಡ್ ಹಿಡಿದು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಆದೇಶಗಳಿಂದಾಗಿ ಯುಕೆಜಿ ಅಥವಾ ಮಾಂಟೆಸ್ಸರಿ ತರಗತಿಯನ್ನು ಮರುಕಳಿಸಬೇಕಾದ ಪರಿಸ್ಥಿತಿ ಎದುರಾಗಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಓರ್ವ ಪೋಷಕರು, ಇದು ಪ್ರತಿಭಟನೆ ಅಲ್ಲ. ಸರ್ಕಾರಕ್ಕೆ ನಾವು ಮಾಡುತ್ತಿರುವ ಮನವಿ. ಮೂರು ವರ್ಷಗಳ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿದ ಮಕ್ಕಳನ್ನು ಪ್ರಥಮ ತರಗತಿಗೆ ದಾಖಲಿಸಬೇಕು. ಆದರೆ ನಮ್ಮ ಮಕ್ಕಳು NEP ಪ್ರಕಾರ 6 ವರ್ಷದ ವಯೋಮಿತಿಯನ್ನು ಪೂರೈಸುತ್ತಿಲ್ಲ. ಈಗಿರುವ ತರಗತಿಯನ್ನು ಮರುಕಳಿಸುವುದು ಮಕ್ಕಳಿಗೆ ಮಾನಸಿಕ ಒತ್ತಡ ಉಂಟುಮಾಡುತ್ತದೆ. ಶಿಕ್ಷಣ ಸಂಸ್ಥೆಗಳು ಸಹ ಮಕ್ಕಳನ್ನು ಮರುಕಳಿಸಲು ಇಷ್ಟಪಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರಾಚ್ಯದಲ್ಲಿ ಯುದ್ಧ; ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ

ಕಳೆದ ಎರಡು ವರ್ಷಗಳಿಂದ ನಾವು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಂದ ಭರವಸೆ ಸಿಕ್ಕಿದೆ. ಕೋವಿಡ್ ಸಮಯದಲ್ಲಿ ಹುಟ್ಟಿದ ಈ ಮಕ್ಕಳು ಈಗಾಗಲೇ ಸಾಕಷ್ಟು ಭಾವನಾತ್ಮಕ ಮತ್ತು ಮಾನಸಿಕ ಒತ್ತಡ ಅನುಭವಿಸಿದ್ದಾರೆ. ಮತ್ತೊಮ್ಮೆ ತರಗತಿ ಮರುಕಳಿಸುವುದು ಅವರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕರ್ನಾಟಕ ಸರ್ಕಾರದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. 2 ಲಕ್ಷಕ್ಕೂ ಹೆಚ್ಚು ಮಕ್ಕಳು ಸರ್ಕಾರದ ಆದೇಶದಿಂದಾಗಿ ತೊಂದರೆಗೆ ಸಿಲುಕಿದ್ದು, ದಾಖಲಾತಿ ವಿಚಾರದಲ್ಲಿ 90 ದಿನಗಳ ವಯಸ್ಸಿನ ಸಡಿಲಿಕೆ ಸಿಗಬಹುದೆಂಬ ವಿಶ್ವಾಸ ಇದೆ ಎಂದು ಮತ್ತೋರ್ವ ಪೋಷಕಿರು ಅಭಿಪ್ರಾಯಪಟ್ಟಿದ್ದಾರೆ.

ಏನಿದು ಆದೇಶ?

2025-26ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಮಕ್ಕಳು ದಾಖಲಾಗಲು ಜೂನ್ 1ಕ್ಕೆ 6 ವರ್ಷಗಳು ತುಂಬಿರಬೇಕು ಎಂದು ಸರ್ಕಾರ ಆದೇಶವನ್ನು ಹೊರಡಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದ ನಿರ್ದೇಶನದ ಅನ್ವಯ 1ನೇ ತರಗತಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು 6 ವರ್ಷ ಎಂದು ನಿಗದಿಪಡಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Source link

Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ? – Kannada News | Holi 2026: Why do people wear white clothes on Holi? Here’s the information

ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯನ್ನು (Holi) ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೆಟ್ಟದರ ವಿರುದ್ಧ ವಿಜಯದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಜನರು ತಮ್ಮ ದುಃಖ ನೋವುಗಳನ್ನು ಮರೆತು ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಓಕುಳಿಯಾಟದ ಸಂದರ್ಭದಲ್ಲಿ ಹೆಚ್ಚಿನ ಜನರು ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುತ್ತಾರೆ. ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆಯನ್ನೇ ಏಕೆ ಧರಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಹೆಚ್ಚಿನವರು ಇದೊಂದು ಫ್ಯಾಶನ್‌ ಅಂದುಕೊಳ್ಳುತ್ತಾರೆ. ಆದರೆ ಇದರ ಹಿಂದೆಯೂ ಒಂದು ಕಾರಣವಿದೆಯಂತೆ. ಅದೇನೆಂಬುದನ್ನು ನೋಡೋಣ ಬನ್ನಿ.

ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆ ಧರಿಸುವುದೇಕೆ?

ಸಕಾರಾತ್ಮಕ ಶಕ್ತಿ ಮತ್ತು ಮಾನಸಿಕ ಶಾಂತಿ: ಬಿಳಿ ಬಣ್ಣವನ್ನು ಶುದ್ಧತೆ ಮತ್ತು ಶಾಂತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೋಳಿಯ ಗದ್ದಲದ ನಡುವೆ ಬಿಳಿ ಬಟ್ಟೆಗಳನ್ನು ಧರಿಸುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಅಲ್ಲದೆ ಈ ಬಣ್ಣವು ಸಕಾರಾತ್ಮಕ ಶಕ್ತಿಯನ್ನು ರವಾನಿಸುತ್ತದೆ.

ಬಣ್ಣಗಳನ್ನು ಹೈಲೈಟ್ ಮಾಡುವುದು: ಬಿಳಿ ಬಟ್ಟೆ ಧರಿಸಲು ಇದು ಅತ್ಯಂತ ಮೂಲಭೂತ ಕಾರಣ. ಏಕೆಂದರೆ ಬಿಳಿ ಬಟ್ಟೆಗಳ ಮೇಲೆ ಗುಲಾ ಬಿದ್ದಾಗ, ಪ್ರತಿಯೊಂದು ಬಣ್ಣವೂ ಸ್ಪಷ್ಟ ಮತ್ತು ಸುಂದರವಾಗಿ ಕಾಣುತ್ತದೆ. ಅದಕ್ಕಾಗಿ ಓಕುಳಿಯಾಟದಲ್ಲಿ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು.

ಸಹೋದರತ್ವ ಮತ್ತು ಸಾಮರಸ್ಯದ ಸಂದೇಶ: ಹೋಳಿ ಹಬ್ಬವು ಸಮಾಜದಲ್ಲಿ ಏಕತೆ ಮತ್ತು ಸಹೋದರತ್ವವನ್ನು ಉತ್ತೇಜಿಸುತ್ತದೆ. ಬಿಳಿ ಬಟ್ಟೆಗಳನ್ನು ಧರಿಸುವುದರಿಂದ ಎಲ್ಲರೂ ಸಮಾನರಾಗಿ ಕಾಣುತ್ತಾರೆ, ಅಲ್ಲದೆ ಹೋಳಿಯನ್ನು ಯಾವುದೇ ತಾರತಮ್ಯವಿಲ್ಲದೆ ಒಟ್ಟಿಗೆ ಆಚರಿಸಲಾಗುತ್ತದೆ ಎಂಬುದನ್ನು ಸಂಕೇತಿಸುತ್ತದೆ. ಇದು ಬಣ್ಣ, ಜಾತಿ, ಧರ್ಮ ಮತ್ತು ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲರನ್ನೂ ಒಂದುಗೂಡಿಸುತ್ತದೆ.

ಆಧ್ಯಾತ್ಮಿಕ ಮಹತ್ವ: ಬಿಳಿ ಬಣ್ಣವನ್ನು ಆಧ್ಯಾತ್ಮಿಕವಾಗಿ ಶುದ್ಧತೆ, ಶಾಂತಿ ಮತ್ತು ನವೀಕರಣದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೋಳಿ ಹಬ್ಬವು ಶುದ್ಧೀಕರಣ ಮತ್ತು ಹೊಸ ಆರಂಭದ ಸಂದೇಶವನ್ನು ನೀಡುತ್ತದೆ. ಬಿಳಿ ಬಟ್ಟೆಗಳನ್ನು ಧರಿಸುವ ಮೂಲಕ ಜನರು ಈ ಆಧ್ಯಾತ್ಮಿಕ ಭಾವನೆಯನ್ನು ವ್ಯಕ್ತಪಡಿಸುತ್ತಾರೆ ಮತ್ತು ತಮ್ಮ ಮನಸ್ಸು ಮತ್ತು ಆತ್ಮವನ್ನು ಶುದ್ಧೀಕರಿಸುತ್ತಾರೆ.

ಸಂಪ್ರದಾಯದೊಂದಿಗಿನ ಸಂಬಂಧ: ಹೋಳಿ ಕೇವಲ ಬಣ್ಣಗಳ ಹಬ್ಬವಲ್ಲ, ಇದು ಹೊಸ ಆರಂಭಗಳನ್ನು ಸಹ ಸಂಕೇತಿಸುತ್ತದೆ. ಹೋಳಿಕಾ ದಹನ್ ಬಣ್ಣಗಳ ಹಬ್ಬಕ್ಕೆ ಒಂದು ದಿನ ಮೊದಲು ನಡೆಯುತ್ತದೆ, ಇದು ಚಳಿಗಾಲದ ಅಂತ್ಯ ಮತ್ತು ವಸಂತಕಾಲದ ಆಗಮನವನ್ನು ಸೂಚಿಸುತ್ತದೆ. ಹವಾಮಾನ ಬದಲಾದಂತೆ, ವಾತಾವರಣವೂ ಬದಲಾಗುತ್ತದೆ ಮತ್ತು ಇದು ಹಿಂದಿನ ನೋವು, ಕಹಿಗಳನ್ನೆಲ್ಲಾ ಅಳಿಸಿಹಾಕುವ ಮೂಲಕ ಹೊಸ ಆರಂಭವನ್ನು ಸೂಚಿಸುತ್ತದೆ, ಜೀವನಕ್ಕೆ ಹೊಸ ಬಣ್ಣಗಳನ್ನು ಸೇರಿಸುವ ಕ್ಷಣವನ್ನು ಸೂಚಿಸುತ್ತದೆ.

ಇದನ್ನೂ ಓದಿ: ಭಾರತದಂತೆಯೇ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುವ ದೇಶಗಳಿವು

 ವೈಜ್ಞಾನಿಕ ಕಾರಣ: ಹೋಳಿಯನ್ನು ವಸಂತಕಾಲದ ಕೊನೆಯಲ್ಲಿ ಮತ್ತು ಬೇಸಿಗೆಯ ಆರಂಭದಲ್ಲಿ ಆಚರಿಸಲಾಗುತ್ತದೆ. ಹೋಳಿ ಬರುವ ಮೊದಲೇ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತದೆ. ಚಳಿಗಾಲ ಕಡಿಮೆಯಾಗಲು ಪ್ರಾರಂಭವಾಗುತ್ತದೆ ಮತ್ತು ಬೇಸಿಗೆ ಕಾಲ ಕೂಡಿಬರಲು ಪ್ರಾರಂಭಿಸುತ್ತದೆ. ಈ ಸಮಯದಲ್ಲಿ ವಿಪರೀತ ಬಿಸಿಲು ಇರುತ್ತದೆ. ವೈಜ್ಞಾನಿಕವಾಗಿ, ಬಿಳಿ ಬಣ್ಣವು ಸೂರ್ಯನ ಬೆಳಕನ್ನು ಪ್ರತಿಬಿಂಬಿಸುತ್ತದೆ ಮತ್ತು ಶಾಖವನ್ನು ಹೀರಿಕೊಳ್ಳುವುದಿಲ್ಲ. ಇದು ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ದೀರ್ಘ ದಿನದ ಮೋಜಿನ ನಂತರವೂ ಈ ಬಟ್ಟೆ ದೇಹವನ್ನು  ತಂಪಾಗಿ ಮತ್ತು ಉಲ್ಲಾಸದಿಂದ ಇರಿಸುತ್ತದೆ. ಈ ಕಾರಣದಿಂದಾಗಿಯೂ ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ – Kannada News | Dhurandhar 2 vs Toxic advance booking in USA early reports

ಈ ವರ್ಷದ ಬಹುದೊಡ್ಡ ಬಾಕ್ಸ್ ಆಫೀಸ್ ಕ್ಲ್ಯಾಶ್ ಮಾರ್ಚ್ 19ರಂದು ನಡೆಯಲಿದೆ. ಅಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಬಿಡುಗಡೆ ಆಗಲಿವೆ. ಎರಡೂ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಇದೆ. ಭಾರತದಲ್ಲಿ ಈ ಸಿನಿಮಾಗಳ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಇನ್ನೂ ಆರಂಭ ಆಗಿಲ್ಲ. ಆದರೆ ಅಮೆರಿಕದಲ್ಲಿ ಬುಕಿಂಗ್ ಶುರುವಾಗಿದೆ. ವರದಿಗಳ ಪ್ರಕಾರ, ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾಗಿಂತಲೂ ರಣವೀರ್ ಸಿಂಗ್ ಅಭಿನಯದ ‘ಧುರಂದರ್ 2’ ಸಿನಿಮಾ ಸದ್ಯಕ್ಕೆ ಮುನ್ನಡೆ ಸಾಧಿಸಿದೆ.

Sacnilk ವರದಿ ಪ್ರಕಾರ, ‘ಧುರಂಧರ್ 2’ ಚಿತ್ರಕ್ಕೆ ಮಾರ್ಚ್ 2ರ ತನಕ ಅಮೆರಿಕದ 151 ಲೊಕೇಷನ್​​ಗಳಲ್ಲಿ 209 ಶೋಗಳ ಟಿಕೆಟ್ ಬುಕಿಂಗ್ ಶುರುವಾಗಿದೆ. ಆ ಪೈಕಿ 1953 ಟಿಕೆಟ್​ಗಳು ಮಾರಾಟ ಆಗಿವೆ. ಇದರಿಂದ ಚಿತ್ರಕ್ಕೆ ಅಂದಾಜು 30 ಲಕ್ಷ ರೂಪಾಯಿ ಆದಾಯ ಬಂದಿದೆ. ‘ಧುರಂಧರ್ 2’ ಚಿತ್ರಕ್ಕೆ ವಿದೇಶಿ ಪ್ರೇಕ್ಷಕರಲ್ಲಿ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಈ ಸಂಖ್ಯೆಗಳೇ ಸಾಕ್ಷಿಯಾಗಿವೆ.

ಇನ್ನು, ‘ಟಾಕ್ಸಿಕ್’ ಸಿನಿಮಾಗೆ ಅಮೆರಿಕದ 81 ಲೊಕೇಷನ್​​ಗಳ 122 ಶೋಗಳಿಗೆ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಆ ಪೈಕಿ ಕೇವಲ 189 ಟಿಕೆಟ್​ಗಳು ಬುಕ್ ಆಗಿವೆ. ಅದರಿಂದ ಅಂದಾಜು 3.3 ಲಕ್ಷ ರೂಪಾಯಿ ಕಲೆಕ್ಷನ್ ಆಗಿದೆ. ಈ ಸಂಖ್ಯೆಗಳನ್ನು ಗಮನಿಸಿದರೆ ಅಮೆರಿಕದಲ್ಲಿ ‘ಟಾಕ್ಸಿಕ್’ ಚಿತ್ರಕ್ಕಿಂತಲೂ ‘ಧುರಂಧರ್ 2’ ಸಿನಿಮಾಗೆ ಕ್ರೇಜ್ ಜಾಸ್ತಿ ಇದೆ ಎಂಬುದು ತಿಳಿಯುತ್ತಿದೆ.

ಆದರೆ ಇದೇ ಅಂತಿಮವಲ್ಲ. ಸಿನಿಮಾದ ಬಿಡುಗಡೆಗೆ ಇನ್ನೂ 17 ದಿನಗಳು ಬಾಕಿ ಇವೆ. ಟ್ರೇಲರ್ ರಿಲೀಸ್ ಆಗುತ್ತಿದ್ದಂತೆಯೇ ಗೇಮ್ ಬದಲಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ‘ಧುರಂಧರ್ 2’ ಚಿತ್ರಕ್ಕಿಂತಲೂ ‘ಟಾಕ್ಸಿಕ್’ ಸಿನಿಮಾಗೆ ಹೆಚ್ಚು ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆಗಲೂಬಹುದು. ಹೆಚ್ಚಿನ ಅಪ್​ಡೇಟ್ ತಿಳಿಯಲು ಸಿನಿಪ್ರಿಯರು ಕಾದಿದ್ದಾರೆ.

ಇದನ್ನೂ ಓದಿ: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ

‘ಕೆಜಿಎಫ್: ಚಾಪ್ಟರ್ 2’ ಬಳಿಕ ಯಶ್ ನಟಿಸಿದ ಸಿನಿಮಾ ಎಂಬ ಕಾರಣಕ್ಕೆ ‘ಟಾಕ್ಸಿಕ್’ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಇನ್ನು, ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದರಿಂದ ಸಹಜವಾಗಿಯೇ ಇದರ ಸೀಕ್ವೆಲ್ ನೋಡಲು ಜನರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಐಆರ್​ಜಿಸಿ ಸೇನೆಯ ಅಂಗವಲ್ಲ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತೆ: ಇರಾನ್ ವಿದೇಶಾಂಗ ಸಚಿವ – Kannada News | Iran: IRGC Acted Independently in Oman Drone Attack, Foreign Minister Denies Govt Role

ಇರಾನ್ ವಿದೇಶಾಂಗ ಸಚಿವImage Credit source: China Daily

ಒಮಾನ್, ಮಾರ್ಚ್​ 02: ಒಮಾನ್ ಮೇಲೆ ಇರಾನ್​​(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಡ್ರೋನ್ ದಾಳಿ ನಡೆಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಇರಾನ್ ವಿದೇಶಾಂಗ ಸಚಿವ ಒಮಾನ್ ನಮ್ಮ ಆಯ್ಕೆಯಾಗಿರಲಿಲ್ಲ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದ್ದಾರೆ. ಇರಾನಿನ ಕ್ರಾಂತಿಯ ನಂತರ ಮೇ 1979 ರಲ್ಲಿ ರುಹೊಲ್ಲಾ ಖೊಮೇನಿ ಸ್ಥಾಪಿಸಿದ ಐಆರ್​​ಜಿಸಿ, ಸಾಂಪ್ರದಾಯಿಕ ಇರಾನಿನ ಸೈನ್ಯದಿಂದ ಪ್ರತ್ಯೇಕವಾಗಿದೆ. ಅಮೆರಿಕ-ಇಸ್ರೇಲ್ ದಾಳಿಯ ಸಮಯದಲ್ಲಿ ಕೊಲ್ಲಲ್ಪಡುವ ಮೊದಲು ಅಯತೊಲ್ಲಾ ಅಲಿ ಖಮೇನಿಗೆ ಐಆರ್‌ಜಿಸಿ ವರದಿ ಮಾಡುತ್ತಿತ್ತು.

ಇದರರ್ಥ ಐಆರ್‌ಜಿಸಿ ಈಗ ನಿಗಾ ಇಡುವವರಿಲ್ಲದೆ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ.ಅಲ್ ಜಜೀರಾಗೆ ನೀಡಿದ ಸಂದರ್ಶನದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ.ಒಮಾನ್ ಬಂದರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯ ಬಗ್ಗೆ ಕೇಳಿದಾಗ, ಒಮಾನ್‌ನಲ್ಲಿ ನಡೆದದ್ದು ನಮ್ಮ ಆಯ್ಕೆಯಾಗಿರಲಿಲ್ಲ. ನಮ್ಮ ಸಶಸ್ತ್ರ ಪಡೆಗಳು ಆಯ್ಕೆ ಮಾಡುವ ಗುರಿಗಳ ಬಗ್ಗೆ ಜಾಗರೂಕರಾಗಿರಲು ನಾವು ಈಗಾಗಲೇ ಹೇಳಿದ್ದೇವೆ ಎಂದು ಉತ್ತರಿಸಿದ್ದಾರೆ.

ಈ ಹೇಳಿಕೆ ಮಹತ್ವದ್ದಾಗಿದೆ. ಇದರರ್ಥ IRGC ಇರಾನಿನ ಸರ್ಕಾರದ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿಲ್ಲ, ಬದಲಾಗಿ ಖಮೇನಿ ತನ್ನ ಹತ್ಯೆಗೆ ಮೊದಲು ನೀಡಿದ ಸೂಚನೆಗಳ ಪ್ರಕಾರ ಕಾರ್ಯನಿರ್ವಹಿಸುತ್ತಿದೆ.

ಮತ್ತಷ್ಟು ಓದಿ: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ

ಖಮೇನಿ ಐಆರ್‌ಜಿಸಿಗೆ ಖಾಸಗಿ ಉದ್ಯಮವಾಗಿ ವಿಸ್ತರಿಸಲು ಅಧಿಕಾರ ನೀಡಿದ್ದರು, ಬಂದರುಗಳು, ದೂರಸಂಪರ್ಕ ಜಾಲಗಳು ಮತ್ತು ಲೇಸರ್ ಕಣ್ಣಿನ ಶಸ್ತ್ರಚಿಕಿತ್ಸಾ ಕೇಂದ್ರಗಳನ್ನು ಸಹ ನಡೆಸುತ್ತದೆ. ಇದರರ್ಥ ಅದು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದೆ. ಮತ್ತು ಮುಂದಿನ ಸುಪ್ರೀಂ ಲೀಡರ್ ಆಯ್ಕೆಯಾಗುವವರೆಗೆ, ಐಆರ್‌ಜಿಸಿಗೆ ಬಾಸ್ ಇರುವುದಿಲ್ಲ. ಖಮೇನಿಯವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಐಆರ್‌ಜಿಸಿ ಪ್ರತಿಜ್ಞೆ ಮಾಡಿದೆ.

ತಮ್ಮ ನಾಯಕನ ಪರಂಪರೆಯನ್ನು ರಕ್ಷಿಸುವಲ್ಲಿ ಅವರ ಮಾರ್ಗವನ್ನು ಶಕ್ತಿಯುತವಾಗಿ ಮುಂದುವರಿಸುತ್ತವೆ, ಆಂತರಿಕ ಮತ್ತು ಬಾಹ್ಯ ಪಿತೂರಿಗಳ ವಿರುದ್ಧ ದೃಢವಾಗಿ ನಿಲ್ಲುತ್ತವೆ ಮತ್ತು ಇಸ್ಲಾಮಿಕ್ ತಾಯ್ನಾಡಿನ ವಿರುದ್ಧ ಆಕ್ರಮಣಕಾರರಿಗೆ ಪಾಠ ಕಲಿಸುತ್ತದೆ.

ಐಆರ್​ಜಿಸಿ ಬಹು ವಿಭಾಗಗಳನ್ನು ಹೊಂದಿದೆ. ಸಾಮಾನ್ಯ ಇರಾನಿನ ಮಿಲಿಟರಿಗಿಂತ 200,000 ಕಡಿಮೆ ಸೈನಿಕರನ್ನು ಹೊಂದಿದ್ದರೂ, ಗಾರ್ಡ್‌ಗಳನ್ನು ಇರಾನ್‌ನಲ್ಲಿ ಪ್ರಬಲ ಮಿಲಿಟರಿ ಪಡೆಯೆಂದು ಪರಿಗಣಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. ಐಆರ್​ಜಿಸಿ ತನ್ನದೇ ಆದ ನೆಲದ ಪಡೆಗಳು, ವಾಯುಪಡೆ ಮತ್ತು ನೌಕಾಪಡೆಯನ್ನು ಹೊಂದಿದೆ. ಅಷ್ಟೇ ಅಲ್ಲ. ರಹಸ್ಯ ಕಾರ್ಯಾಚರಣೆಗಳಿಗಾಗಿ ಅದು ಕುಡ್ಸ್ ಎಂಬ ಮೀಸಲಾದ ಪಡೆಯನ್ನು ಹೊಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 3:05 pm, Mon, 2 March 26

Source link

ಕಬ್ಬಿಗೆ ಗುಡ್‌ ಬೈ ಹೇಳಿ ಬಹುಬೇಡಿಕೆ ಬೆಳೆಯತ್ತ ಮುಖಮಾಡಿದ ಗಡಿ ಜಿಲ್ಲೆಯ ರೈತರು: ಕೈತುಂಬಾ ಲಾಭ – Kannada News | Bidar Farmer Thrives with Chia: From Sugarcane Losses to High Profit

ಬೀದರ್, ಮಾರ್ಚ್​ 02: ಜಿಲ್ಲೆಯ ರೈತ ಉದ್ದು, ಸೋಯಾ, ಕಬ್ಬು ಬೆಳೆಗೆ ಮಾತ್ರ ಸೀಮಿತವಾಗಿದ್ದರು. ಹೀಗಾಗಿ ಪದೇ ಪದೇ ನಷ್ಟಕ್ಕೆ ತುತ್ತಾಗಿ, ಸಾಲದ ಸುಳಿಗೆ ಸಿಲುಕುತ್ತಿದ್ದರು. ಬೆಳೆ ಬದಲಾವಣೆ ಮಾಡಬೇಕೆಂದು ನಿರ್ಧರಿಸಿದ ರೈತನಿಗೆ ಚಿಯಾ ಬೆಳೆ ಕೈ ಹಿಡಿದಿದ್ದು, ಇದೀಗ ಭರ್ಜರಿ ಲಾಭ ಗಳಿಸುತ್ತಿದ್ದಾರೆ.

ಬಹುಬೇಡಿಕೆ ಬೆಳೆಯತ್ತ ವಾಲಿದ ರೈತರು

ಗಡಿ ಜಿಲ್ಲೆ ಬೀದರ್​ನ ರೈತರು ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕಿಕೊಂಡು ನಷ್ಟವನ್ನ ಅನುಭವಿಸುತ್ತಿದ್ದರು. ಜೊತೆಗೆ ಪದೇ ಪದೇ ಒಂದೆ ಬೆಳೆಯನ್ನ ನಾಟಿ ಮಾಡಿ ಆರ್ಥಿಕ ಸ್ಥಿತಿವಂತರಾಗುವ ದಿಕ್ಕಿನಲ್ಲಿ ಮುಂದಾಗಿ ಏಳು-ಬೀಳು ಕಂಡಿದ್ದು, ಇದೀಗ ಬಹುಬೇಡಿಕೆ ಬೆಳೆ ಚಿಯಾ ಧಾನ್ಯ ಬೆಳೆಯುವ ಕಡೆಗೆ ಮುಖ ಮಾಡಿದ್ದಾರೆ.

ಇದನ್ನೂ ಓದಿ: ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಬೀದರ್ ತಾಲೂಕಿನ ಶಮಶಾನಗರ ಗ್ರಾಮದ ಆನಂದ ಒಂದು ಎಕರೆ ಜಮೀನಿನಲ್ಲಿ ಚಿಯಾ ಬೆಳೆಯನ್ನ ಬೆಳೆಯುತ್ತಿದ್ದಾರೆ. ಆ ಮೂಲಕ ಆರ್ಥಿಕವಾಗಿ ಸದೃಢರಾಗುವ ನಿಟ್ಟಿನಲ್ಲಿ ವಾಣಿಜ್ಯ ಬೇಸಾಯಕ್ಕೆ ಒಲವು ತೋರಿದ್ದಾರೆ. ಇಂಟರ್​ನೆಟ್​​ನಲ್ಲಿ ಚಿಯಾ ಬೆಳೆ ಕುರಿತು ಮಾಹಿತಿ ಸಂಗ್ರಹಿಸಿ, ಬೀಜ ಖರೀದಿಸಿ ಇದೀಗ ಬೆಳೆ ಬೆಳೆದು ಸ್ಥಳೀಯ ರೈತರಿಗೆ ಮಾದರಿಯಾಗಿದ್ದಾರೆ. ಚಿಯಾ ಪೌಷ್ಟಿಕಾಂಶ ಸೇರಿದಂತೆ ಔಷಧಿಯ ಗುಣ ಹೊಂದಿದೆ. ಈ ಬೆಳೆ ಜಾನುವಾರು ಅಥವಾ ಕಾಡುಪ್ರಾಣಿಗಳ ಹಾವಳಿ ಇಲ್ಲದೆ ನೆಮ್ಮದಿಯಿಂದ ಬೆಳೆಯಬಹುದಾಗಿದೆ.

ರೈತ ಆನಂದ

ರಾಗಿ ಬೇಸಾಯದ ಮಾದರಿಯಲ್ಲೇ ಚಿಯಾ ಬೆಳೆಯಬಹುದು. ಅತಿಯಾದ ನೀರಿನ ಅವಲಂಬನೆ ಇಲ್ಲದೆ ಬೆಳೆಯುವ ಬೆಳೆ ಇದಾಗಿದೆ ಎಂದು ರೈತ ಅಜರ್ ಮಸ್ತಾನ್ ಹೇಳುತ್ತಾರೆ. ಇನ್ನು ಚಿಯಾ ಬೆಳೆಗೆ ಅಂತಾರಾಷ್ಟ್ರಿಯ ಮಟ್ಟದಲ್ಲಿ ಬಹುಬೇಡಿಕೆ ಇದೆ. ಒಣ ಹವಾಮಾನದಲ್ಲಿ, ವಾರಕ್ಕೊಂದು ಬಾರಿ ತುಂತುರು ನೀರಾವರಿ ನೀಡಿದರೆ ಸಾಕು. 90ರಿಂದ 100 ದಿನದಲ್ಲಿ ಫಸಲು ಪಡೆಯಬಹುದು. ಒಂದು ಎಕರೆ ಪ್ರದೇಶಕ್ಕೆ 3 ರಿಂದ 4 ಸಾವಿರ ರೂ ವೆಚ್ಚ ತಗುಲಲಿದ್ದು, ಪೈರು ಬೆಳೆಸಿ ನಾಟಿ ಅಥವಾ ಬಿತ್ತನೆ ಬೀಜ ನೇರವಾಗಿ ಸಾಲು ಬಿಟ್ಟು ಬೆಳೆಯಬಹುದು.

14 ರಿಂದ 19 ಸಾವಿರ ರೂ ದರ

ಒಮ್ಮೆ ಮಾತ್ರ ರಾಸಾಯನಿಕ ಗೊಬ್ಬರ ನೀಡಿದೆ ಸಾಕು. ಸ್ಥಳಿಯ ವಾತಾವರಣಕ್ಕೆ ಬೆಳೆಯಬಹುದಾದ ವಾಣಿಜ್ಯ ಬೆಳೆ ಚಿಯಾ ಎಕರೆಗೆ 4 ರಿಂದ 5 ಕ್ವಿಂಟಲ್ ಇಳುವರಿ ಸಿಗಲಿದೆ. ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ 14 ರಿಂದ 19 ಸಾವಿರ ರೂ ದರವಿದ್ದು ರೈತರು ಹೆಚ್ಚಿನ ಲಾಭ ಗಳಿಸಬಹುದಾಗಿದೆ.

ಚಿಯಾ ಧಾನ್ಯದಲ್ಲಿ ಅಧಿಕ ಕ್ಯಾಲ್ಸಿಯಂ, ಮ್ಯಾಗ್ನಿಷಿಯಂ, ಫಾಸ್ಫರಸ್ (ರಂಜಕ) ಇದ್ದು, ಹೀಗಾಗಿ ಮಾರುಕಟ್ಟೆಯಲ್ಲಿ ಇದಕ್ಕೆ ಭಾರೀ ಬೇಡಿಕೆಯಿದೆ. ಈ ಧಾನ್ಯ ಸೇವನೆಯಿಂದ ಮೂಳೆಗಳು ಗಟ್ಟಿಗೊಳ್ಳುತ್ತವೆ. ರಕ್ತದ ಒತ್ತಡ ನಿಯಂತ್ರಣ, ರಕ್ತದಲ್ಲಿ ಸಕ್ಕರೆ ಅಂಶ ನಿಯಂತ್ರಣ, ಸಕ್ಕರೆ ಕಾಯಿಲೆ ನಿಯಂತ್ರಣ, ಉತ್ತಮ ಪಚನಕ್ರಿಯೆಗೆ ಸಹಕಾರಿ ಎಂದು ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂಬುವುದು ರೈತರ ಮಾತು.

ಚಿಯಾ ಬೆಳೆ

ಇನ್ನು ಬೀದರ್ ಜಿಲ್ಲೆಯಲ್ಲಿ ಚಿಯಾ ಬೆಳೆಯ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿಯಿಲ್ಲ. ಜೊತೆಗೆ ಮಾರುಕಟ್ಟೆ ಬಗ್ಗೆ ಕೂಡ ರೈತರಿಗೆ ಮಾಹಿತಿಯಿಲ್ಲ. ಹೀಗಾಗಿ ಕೆಲವೇ ಕೆಲವು ರೈತರು ಈ ಬೆಳೆಯ ಕಡೆಗೆ ಮುಖ ಮಾಡಿದ್ದೇವೆಂದು ರೈತ ರೇವಣಸಿದ್ದಯ್ಯ ಹೇಳುತ್ತಾರೆ.

ಇದನ್ನೂ ಓದಿ: ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ಜಿಲ್ಲೆಯ ರೈತರು ಚಿಯಾ ಕೃಷಿಯಲ್ಲಿ ತೊಡಗಿದ್ದಾರೆ. ಒಮ್ಮೆ ನಾಟಿ ಮಾಡಿದ ನಂತರ ಯಾವುದೇ ಖರ್ಚು ಇಲ್ಲದೇ ಶೂನ್ಯ ಬಂಡವಾಳದಲ್ಲಿ ಬೆಳೆಯಬಹುದಾದ ಬೆಳೆ ಇದಾಗಿದೆ. ಒಟ್ಟಾರೆ ಕೇವಲ ಕಬ್ಬು ಬೆಳೆದು ಕೈ ಸುಟ್ಟುಕೊಳ್ಳುತ್ತಿದ್ದ ಗಡಿ ಜಿಲ್ಲೆಯ ರೈತರಿಗೆ ಇವರು ಮಾದರಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ – Kannada News | PM Modi meets Canadian PM Mark Carney in Hyderabad House

ನವದೆಹಲಿ, ಮಾರ್ಚ್ 2: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೆನಡಾದ ಪ್ರಧಾನಿ ಮಾರ್ಕ್ ಜೆ ಕಾರ್ನಿ ಅವರನ್ನು ಭೇಟಿಯಾದರು. ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಕಾರ್ನಿ ಇಂದು ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾಗಿ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. ಇದಕ್ಕೂ ಮೊದಲು ಇಂದು ಬೆಳಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಕೆನಡಾ ಪ್ರಧಾನಿ ಕಾರ್ನಿ ಅವರೊಂದಿಗೆ ಮಾತನಾಡಿದ್ದರು. ಎರಡೂ ದೇಶಗಳ ನಡುವೆ ಬಲವಾದ ಸಂಬಂಧವನ್ನು ನಿರ್ಮಿಸುವ ಅವರ ಬದ್ಧತೆಯನ್ನು ಸಚಿವ ಜೈಶಂಕರ್ ಶ್ಲಾಘಿಸಿದ್ದರು.

ಕೆನಡಾದ ಪ್ರಧಾನಿ ಕಾರ್ನಿ ಅವರ ಮುಂಬೈ ಭೇಟಿಯ ನಂತರ ಭಾನುವಾರ ಸಂಜೆ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದಿಳಿದಿದ್ದರು. ಇದು ಅವರ ಅಧಿಕೃತ ಭಾರತ ಪ್ರವಾಸದ ಭಾಗವಾಗಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಪತ್ನಿ ಕೊಂದು ಆಕೆಯ ಹಣೆಗೆ ಸಿಂಧೂರವಿಟ್ಟು ವಿಡಿಯೋ ಮಾಡಿ ಪತಿಯೂ ಆತ್ಮಹತ್ಯೆ: ಕ್ಷುಲ್ಲಕ ಕಾರಣಕ್ಕೆ ದಂಪತಿ ದಾರುಣ ಅಂತ್ಯ – Kannada News | Bengaluru Couple Tragedy: Husband Kills wife, Commits Suicide in Anekal

ಆನೇಕಲ್​​, ಮಾರ್ಚ್​​ 02: ಪತ್ನಿಯನ್ನು ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆಯಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಒಡಿಶಾ ಮೂಲದ ಮಂಜುಳಾಳನ್ನು ಕೊಂದು ದೀಪಂತ್ ತಾನೂ ಪ್ರಾಣ ಬಿಟ್ಟಿದ್ದಾನೆ. ದಂಪತಿ ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಕಳೆದ ಬುಧವಾರ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ಹೋಗಿ ಮಂಜುಳಾ ಮೇಲೆ ದೀಪಂತ್​ ಹಲ್ಲೆ ನಡೆಸಿದ್ದ. ಈ ವೇಳೆ ಮಂಜುಳಾ ಪ್ರಾಣ ಬಿಟ್ಟಿದ್ದಾಳೆ. ಬಳಿಕ ಶವದ ಮುಂದೆ ಕಣ್ಣೀರು ಹಾಕಿ ವಿಡಿಯೋ ಮಾಡಿದ್ದ ದೀಪಂತ್, ಮಂಜುಳಾ ಹಣೆಗೆ ಸಿಂಧೂರವಿಟ್ಟಿದ್ದ. ಬಳಿಕ ಒಡಿಶಾ ಭಾಷೆಯಲ್ಲಿ ಡೆತ್​ನೋಟ್​ ಬರೆದು ತಾನು ಕೂಡ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅನುಮಾನಗೊಂಡ ಮನೆ ಮಾಲೀಕ ಕಿಟಕಿಯಲ್ಲಿ ನೋಡಿದಾಗ ಮಂಜುಳಾ ಮತ್ತು ದೀಪಂತ್​​ ಇಬ್ಬರೂ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಕಳೆದ ಶುಕ್ರವಾರವೇ ಮನೆ ಮಾಲಿಕರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ

ಮಹಿಳೆಯರ ಮೇಲೆ ಹಲ್ಲೆ

ಬೆಳಗಾವಿ ತಾಲೂಕಿನ ಬೆಕ್ಕಿನಕೇರಿ ಗ್ರಾಮದಲ್ಲಿ ದೇವಸ್ಥಾನದ ಜಾಗದಲ್ಲಿ ಮೇವು ಇಟ್ಟಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲ ನಡೆಸಿರುವ ಘಟನೆ ನಡೆದಿದೆ. ನಾಗನಾಥ ದೇವಸ್ಥಾನದ ಆವರಣದಲ್ಲಿ ಮೇವು ಇಟ್ಟಿದ್ದ ಮಹಿಳೆಯರಿಗೆ, ಅವನ್ನು ತೆಗೆಯುವಂತೆ ಕೆಲ ಪುಡಿ ರೌಡಿಗಳು ಧಮ್ಕಿ ಹಾಕಿ, ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಕಾಕತಿ ಪೊಲೀಸರು ಸ್ಪಂದಿಸದ ಹಿನ್ನೆಲೆ ಹರಿದ ಸೀರೆಯಲ್ಲಿಯೇ ಪೊಲೀಸ್ ಕಮಿಷನರ್ ಭೆಟಿಯಾಗಲು ಮಹಿಳೆಯರು ತೆರಳಿದ್ದು, ಇವರಿಗೆ ಸ್ಥಳಿಯ ರೈತ ಮುಖಂಡರು ಸಾಥ್​​ ನೀಡಿದ್ದಾರೆ. ಪ್ರಿಯಾಂಕಾ ಸಾವಂತ್ ಮತ್ತು ಉಮಾ ಸಾವಂತ್ ಮೇಲೆ ಶಿವಾಜಿ ಬೋಗಾನ್, ಶಿವಾಜಿ ಪಾಟೀಲ್, ಜಯವಂತ ಸಾವಂತ್, ನವನಾಥ್ ಗಾವಡೆ ಮತ್ತು ಸುನೀಲ್ ಗಾವಡೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ವಿವಾಹದ ಬಳಿಕವೂ ಸಂಸ್ಕೃತಿ ಮರೆಯದ ರಶ್ಮಿಕಾ-ವಿಜಯ್; ಅಭಿಮಾನಿಗಳಿಂದ ಮೆಚ್ಚುಗೆ – Kannada News | Rashmika Mandanna and Vijay Deverakonda Wedding: Tirupati Visit, Hometown Pooja and Annadana

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ವಿವಾಹ ಆಗಿದ್ದಾರೆ. ಇವರ ಮದುವೆ ಬಗ್ಗೆ ಎಲ್ಲ ಕಡೆಗಳಲ್ಲೂ ಚರ್ಚೆ ಆಯಿತು. ಇವರ ವಿವಾಹ ಫೋಟೋಗೆ ಕೋಟಿ ಕೋಟಿ ಲೈಕ್ಸ್ ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಪತಿ ವಿಜಯ್ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದರು. ಈಗ ಇವರು ಮದುವೆ ಬಳಿಕವೂ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.

ಕೆಲವರು ಕೆಲಸದ ಕಾರಣಕ್ಕೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದರೆ, ಮದುವೆ ಬಳಿಕ ಹುಟ್ಟೂರಿಗೆ ಭೇಟಿ ಕೊಡೋದು ಸಂಪ್ರದಾಯ. ಈ ಸಂಪ್ರದಾಯವನ್ನು ವಿಜಯ್ ಹಾಗೂ ರಶ್ಮಿಕಾ ಮರೆತಿಲ್ಲ. ಹೌದು, ಮದುವೆ ಆದ ಬಳಿಕ ವಿಜಯ್ ದೇವರಕೊಂಡ ಸ್ವಂತ ಊರಿಗೆ ದಂಪತಿ ತೆರಳಿದ್ದಾರೆ. ತೆಲಂಗಾಣದ ನಾಗರ್ ಕರ್ನೋಲ್ ತುಮ್ಮನ್​ಪೆಟ್​ಗೆ ಭೇಟಿ ಕೊಟ್ಟಿದ್ದಾರೆ.

ವಿಜಯ್ ಅವರು ಸ್ವಂತ ಊರಲ್ಲಿ ಫಾರ್ಮ್​​ಹೌಸ್ ಹೊಂದಿದ್ದಾರೆ. ಅಲ್ಲಿ ಇಂದು (ಮಾರ್ಚ್ 2) ಸತ್ಯನಾರಾಯಣ ಪೂಜೆ ಮಾಡಿಸಿದ್ದಾರೆ. ಅಲ್ಲದೆ, ಗ್ರಾಮದ 2000ಕ್ಕೂ ಹೆಚ್ಚು ಜನಕ್ಕೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ. ರಶ್ಮಿಕಾ ಹಾಗೂ ವಿಜಯ್ ಊರಿಗೆ ಬರುತ್ತಿದ್ದಂತೆ ಎಲ್ಲರೂ ಅವರನ್ನು ಪ್ರೀತಿಯಿಂದ ಸ್ವಾಗತಿಸಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ತಿರುಪತಿಗೆ ಭೇಟಿ ನೀಡಿದಾಗಲೂ ರಶ್ಮಿಕಾ ಹಾಗೂ ವಿಜಯ್ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದರು.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ವಿಷಯವನ್ನು ದಂಪತಿ ಮುಚ್ಚಿಟ್ಟಿದ್ದರು. ವಿವಾಹ ಆಗುವ ಹಲವು ವರ್ಷಗಳ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಒಟ್ಟಾಗಿ ಸಿನಿಮಾ ಕೂಡ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ

ರಶ್ಮಿಕಾ ವಿವಾಹದ ಕುರಿತು ಒಂದು ವರ್ಗದ ಜನರು ಅಪಸ್ವರ ತೆಗೆದಿದ್ದಾರೆ. ಆದರೆ, ಇದಕ್ಕೆ ರಶ್ಮಿಕಾ ಮಂದಣ್ಣ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಟೀಕೆಗಳಿಗೆ ಕಿವಿಕೊಡದೆ ಇಬ್ಬರೂ ಹಾಯಾಗಿ ಜೀವನ ಸಾಗಿಸುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ.

ಇಂದು (ಮಾರ್ಚ್ 02) ಮೈಸೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ. ವಿಮಾನ ಹಾರಾಟ ಆರಂಭವಾದರೆ ಸುರಕ್ಷಿತವಾಗಿ ಬರುತ್ತಾರೆ. ವಿಮಾನ ಹಾರಾಟ ಬಂದ್ ಆಗಿರುವ ಕಾರಣ ಸಮಸ್ಯೆಯಾಗಿದೆ. ದುಬೈನಲ್ಲಿ ಕೆಲಸ ಮಾಡ್ತಿರುವ ಕನ್ನಡಿಗರು ಸಹಾಯಕ್ಕೆ ಬಂದಿದ್ದಾರೆ. ನನ್ನ ಜೊತೆಯೂ ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಕೇಂದ್ರ ಸರ್ಕಾರ ಕೂಡ ಭಾರತೀಯರ ಸುರಕ್ಷತೆಗೆ ಒತ್ತು ಕೊಟ್ಟಿದೆ. ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version