ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ? – Kannada News | Indias strategic petroleum reserves know how many days they last if crude oil supply is stopped

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇಸ್ರೇಲ್, ಇರಾನ್ ಸಂಘರ್ಷದಲ್ಲಿ (Middle East crisis) ಅಮೆರಿಕ ಅಖಾಡಕ್ಕೆ ಪ್ರವೇಶ ಮಾಡಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಕೊಂದು ಹಾಕಿವೆ. ಗಲ್ಫ್ ದೇಶಗಳಿಂದ ತೈಲ ಪೂರೈಕೆಗೆ ಅಡಚಣೆ ಆಗಿದೆ. ಜಾಗತಿಕವಾಗಿ ತೈಲ ಬೆಲೆ ಹೆಚ್ಚುವ ಮತ್ತು ಪೂರೈಕೆ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚು ಕಾಣುತ್ತಿದೆ.

ಒಂದು ವೇಳೆ, ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಏನು ತೊಂದರೆ? ಅತಿಹೆಚ್ಚು ಪೆಟ್ರೋಲ್ ಬಳಸುವ ದೇಶಗಳಲ್ಲಿ ಭಾರತ ಒಂದು. ಒಂದು ವೇಳೆ ತೈಲ ಪೂರೈಕೆ ಸ್ಥಗಿತಗೊಂಡರೆ ಭಾರತದಲ್ಲಿ ಈಗಿರುವ ಪೆಟ್ರೋಲಿಯಂ ಸಂಗ್ರಹ ಎಷ್ಟು ದಿನಕ್ಕೆ ಸಾಕಾಗಬಹುದು? ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಅವರು ಕಳೆದ ತಿಂಗಳು (ಫೆಬ್ರುವರಿ) ಈ ಬಗ್ಗೆ ರಾಜ್ಯಸಭೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಭಾರತದಲ್ಲಿ ಇರುವ ಪೆಟ್ರೋಲಿಯಂ ಸಂಗ್ರಹವು 74 ದಿನಗಳಿಗೆ ಸಾಕಾಗುವಷ್ಟು ಇದೆಯಂತೆ.

ಅಂತಾರಾಷ್ಟ್ರೀಯ ಇಂಧನ ಸಂಘಟನೆಯಾದ ಐಇಎ (IEA) ಒಂದು ದೇಶದಲ್ಲಿ ಕನಿಷ್ಠ 90 ದಿನಗಳಿಗೆ ಆಗುವಷ್ಟು ಪೆಟ್ರೋಲ್ ಸಂಗ್ರಹ ಇರಬೇಕು ಎಂದು ಶಿಫಾರಸು ಮಾಡಿದೆ. ತೈಲ ನಿಕ್ಷೇಪಗಳಿಲ್ಲದ ದೇಶಗಳಿಗೆ ಈ ನಿಯಮ ಅಥವಾ ಶಿಫಾರಸು ಅನ್ವಯ ಆಗುತ್ತದೆ. ಹಲವು ಐರೋಪ್ಯ ದೇಶಗಳು ಈ ನಿಯಮವನ್ನು ಪಾಲಿಸುತ್ತಿವೆ. ಅವನ್ನು ಬಿಟ್ಟು ಹೆಚ್ಚಿನ ದೇಶಗಳಲ್ಲಿ ಇಷ್ಟು ಸಂಗ್ರಹ ಇಲ್ಲ. ಭಾರತದಲ್ಲಿ ಬಹಳ ಪೆಟ್ರೋಲ್ ಬಳಕೆ ಇದ್ದರೂ 74 ದಿನಗಳಿಗೆ ಆಗುವಷ್ಟು ಸಂಗ್ರಹ ಹೊಂದಿರುವುದು ಗಮನಾರ್ಹ.

ಇದನ್ನೂ ಓದಿ: ಇರಾನ್​ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಎಷ್ಟು ದಿನಗಳವರೆಗೆ ಮುಂದುವರೆಯಬಹುದು, ಟ್ರಂಪ್ ಹೇಳಿದ್ದೇನು?

ಭಾರತದಲ್ಲಿ ಮೂರು ಕಡೆ ತೈಲ ಸಂಗ್ರಹ ಸ್ಥಳಗಳಿವೆ. ಕರ್ನಾಟಕದ ಮಂಗಳೂರು ಮತ್ತು ಉಡುಪಿಯಲ್ಲಿ, ಹಾಗೂ ಆಂಧ್ರದ ವಿಶಾಖಪಟ್ಟಣಂನಲ್ಲಿ ಕ್ಯಾವರ್ನ್​ಗಳು ಅಥವಾ ಭೂಗತ ತೈಲಾಗಾರಗಳಿವೆ. ಒಡಿಶಾದಲ್ಲೂ ಒಂದು ತೈಲ ಸಂಗ್ರಹಗಾರವನ್ನು ಸ್ಥಾಪಿಸಲಾಗುತ್ತಿದೆ. ಒಡಿಶಾದ್ದು ಪೂರ್ಣಗೊಂಡರೆ ಭಾರತದಲ್ಲಿ 90 ದಿನಗಳಿಗಾಗುಷ್ಟು ಪೆಟ್ರೋಲ್ ಸಂಗ್ರಹ ಹೊಂದಿರಲು ಸಾಧ್ಯವಾಗುತ್ತದೆ. ಈಗಿರುವ ಮೂರು ಕ್ಯಾವರ್ನ್​ಗಳಲ್ಲಿ 5 ಎಂಎಂಟಿಗೂ ಅಧಿಕ ಕಚ್ಚಾ ತೈಲವನ್ನು ಇರಿಸಲಾಗಿದೆ. ಇದಲ್ಲದೆ, ದೇಶದ ಹಲವೆಡೆ ರಿಫೈನರಿಗಳಿವೆ. ಅಲ್ಲಿಯೂ ಸಾಕಷ್ಟು ಕಚ್ಚಾ ತೈಲ ಇದ್ದು ಅದನ್ನು ಸಂಸ್ಕರಿಸಿ ಪೆಟ್ರೋಲಿಯಂ ಉತ್ಪನ್ನಗಳನ್ನು ತಯಾರಿಸುವ ಕೆಲಸ ನಿರಂತರವಾಗಿ ನಡೆಯುತ್ತಿರುತ್ತದೆ. ತುರ್ತು ಸ್ಥಿತಿ ಬಂದಾಗ ಈ ರಿಫೈನರಿಯಲ್ಲಿರುವ ಪೆಟ್ರೋಲ್ ಎಲ್ಲವನ್ನೂ ಆಂತರಿಕ ಬಳಕೆಗೆ ಉಪಯೋಗಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ: ಶ್ರೀಮಂತರಿಗೂ ಫ್ರೀ ಕೊಡೋದು ಕಷ್ಟ ಎಂದ ಬಾಲಕೃಷ್ಣ – Kannada News | Congress MLA HC Balakrishna Questions Free Guarantee Schemes, Says Benefits to Rich Are a Burden on Government

ಬೆಂಗಳೂರು, ಮಾರ್ಚ್ 2: ಮಾಗಡಿ ಶಾಸಕ ಹೆಚ್​ಸಿ ಬಾಲಕೃಷ್ಣ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಆಗ್ರಹಿಸಿದ್ದಾರೆ. ಈ ಯೋಜನೆಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಉಳ್ಳವರಿಗೂ ಮತ್ತು ಆರ್ಥಿಕವಾಗಿ ಸದೃಢರಿಗೂ ಗ್ಯಾರಂಟಿ ಸೌಲಭ್ಯಗಳು ಲಭಿಸುತ್ತಿವೆ. ಇದರಿಂದ ಯೋಜನೆಗಳ ನಿಜವಾದ ಉದ್ದೇಶ ಈಡೇರುತ್ತಿಲ್ಲ ಮತ್ತು ಸರ್ಕಾರಕ್ಕೆ ಅನಗತ್ಯ ಹೊರೆ ಹೆಚ್ಚುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬಡವರು ಮತ್ತು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಯಬೇಕು. ಇದಕ್ಕಾಗಿ ಸರ್ಕಾರ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿ, ಅರ್ಹರನ್ನು ಮಾತ್ರ ಗುರುತಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಉದಾಹರಣೆಗೆ, ಬಸ್ಸಿನಲ್ಲಿ ಶ್ರೀಮಂತರು ಉಚಿತವಾಗಿ ಪ್ರಯಾಣಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ, ಯೋಜನೆಗಳನ್ನು ಸೂಕ್ತ ಮಾನದಂಡಗಳೊಂದಿಗೆ ಪರಿಷ್ಕರಿಸಿದರೆ, ಉಳಿತಾಯವಾಗುವ ಹಣವನ್ನು ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು ಎಂದು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಬಾಲಕೃಷ್ಣ ಮನವಿ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಈ ಬಗ್ಗೆ ಪರಿಷ್ಕರಣೆ ನಡೆಸದ ಸರ್ಕಾರದ ನಿಲುವಿನ ಬಗ್ಗೆಯೂ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೀಕರ ಸ್ಫೋಟಕ್ಕೆ ಮನೆಗೆ ಮನೆಯೇ ಸರ್ವನಾಶ!: ಹೊಸ ಸಿಲಿಂಡರ್ ಜೋಡಣೆ ವೇಳೆ ಅವಘಡ – Kannada News | House Collapses in LPG Blast at Taluru Village in Ballari

ಬಳ್ಳಾರಿ, ಮಾರ್ಚ್​ 02: ಅಡುಗೆ ಸಿಲಿಂಡರ್​​ ಸ್ಫೋಟಗೊಂಡ ಪರಿಣಾಮ ಮನೆಗೆ ಮನೆಯೇ ಸರ್ವನಾಶವಾಗಿರುವ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆ ಸಂಡೂರ ತಾಲೂಕಿನ ತಾಳೂರು ಗ್ರಾಮದಲ್ಲಿ ನಡೆದಿದೆ. ಸುಬಾನಿ ಸಾಬ್ ಎನ್ನುವವರ ಮನೆಯಲ್ಲಿ ಹೊಸ ಸಿಲಿಂಡರ್ ಜೋಡಣೆ ವೇಳೆ ಗ್ಯಾಸ್ ಸೋರಿಕೆಯಾಗಿ ಅವಘಡ ನಡೆದಿದ್ದು, ಗ್ಯಾಸ್ ಲೀಕ್​ ಆಗುತ್ತಿದ್ದಂತೆ ಮನೆಯಲ್ಲಿದ್ದ ಕುಟುಂಬಸ್ಥರು ಎಚ್ಚೆತ್ತು ಹೊರಬಂದ ಕಾರಣ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಛಿದ್ರ ಛಿದ್ರವಾಗಿದ್ದು, ಪಕ್ಕದ ಮನೆಯ ಗೋಡೆಯೂ ಕುಸಿದು ಬಿದ್ದಿದೆ. ಮನೆ ಮಾಲೀಕ ಸುಬಾನಿ ಸಾಬ್ ಸೇರಿದಂತೆ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ತೋರಣಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ – Kannada News | Toxic Film Update: Yash’s ‘Tabahi’ Song Out, Music Composers and Cast Details

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸಿನಿಮಾ ಬಗ್ಗೆ ಒಂದಲ್ಲ ಒಂದು ಅಪ್​​​ಡೇಟ್​ ನೀಡುತ್ತಲೇ ಬರಲಾಗುತ್ತಿದೆ. ಈಗ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಮ್ಯೂಸಿಕ್​ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಒಟ್ಟೂ ಆರು ಹಾಡುಗಳು ಇವೆ ಎನ್ನಲಾಗಿದೆ. ಈ ಸಿನಿಮಾಗಾಗಿ ಐದು ಸಂಗೀತ ಸಂಯೋಜಕರು ಕೆಲಸ ಮಾಡಿದ್ದಾರೆ. ಬಾಲಿವುಡ್​ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಒಂದು ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಇದನ್ನೂ ಓದಿ: ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ?

‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ರಿಲೀಸ್ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಸಿನಿಮಾಗೆ ಶೀಘ್ರವೇ ಸೆನ್ಸಾರ್ ಪ್ರಕ್ರಿಯೆ ಕೂಡ ಪೂರ್ಣಗೊಳ್ಳಲಿದೆ. ಮೊದಲ ದಿನ ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎನ್ನುವ ಕುತೂಹಲ ಮೂಡಿದೆ. ನಯನತಾರಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ – Kannada News | Kuwait Diplomatic Zone Rattled by Smoke After Iran Linked Strikes

ಕುವೈತ್, ಮಾರ್ಚ್​ 02: ಇರಾನ್ ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿಯನ್ನು ತೀವ್ರಗೊಳಿಸಿದ್ದು, ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಪ್ರಕಟ – Kannada News | India vs Afghanistan Series Full schedule

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು ಮಾರ್ಚ್ 28 ರಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಐಪಿಎಲ್ ಮುಗಿಯೋದು ಮೇ 31 ರಂದು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ 4 ಪಂದ್ಯಗಳ ಸರಣಿ ಆಡಲಿದೆ. ಅದು ಸಹ ಅಫ್ಘಾನಿಸ್ತಾನ್ ವಿರುದ್ಧ ಎಂಬುದು ವಿಶೇಷ.

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಂದು ಟೆಸ್ಟ್ ಪಂದ್ಯ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ.

ಟೆಸ್ಟ್ ಪಂದ್ಯವು ಚಂಡೀಗಢ್​ನಲ್ಲಿ ನಡೆದರೆ, ಏಕದಿನ ಪಂದ್ಯಗಳು ಧರ್ಮಶಾಲಾ, ಲಕ್ನೋ ಹಾಗೂ ಚೆನ್ನೈನಲ್ಲಿ ಜರುಗಲಿದೆ. ಅಂದರೆ ಮುಂಬರುವ ಸರಣಿಯಲ್ಲೂ ಬೆಂಗಳೂರಿನಲ್ಲಿ ಪಂದ್ಯ ಆಯೋಜಿಸಲು ಬಿಸಿಸಿಐ ನಿರ್ಧರಿಸಿಲ್ಲ.

8 ವರ್ಷಗಳ ಬಳಿಕ ಟೆಸ್ಟ್:

ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು.

ಇದೀಗ ಬರೋಬ್ಬರಿ 8 ವರ್ಷಗಳ ಬಳಿಕ ಮತ್ತೊಮ್ಮೆ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯಲಿರುವುದು ಚಂಡೀಗಢ್​ನ ಮುಲ್ಲನ್​ಪುರ್ ಸ್ಟೇಡಿಯಂನಲ್ಲಿ.

ಅಂದರೆ ಇದೇ ಮೊದಲ ಬಾರಿಗೆ ಚಂಡೀಗಢ್​ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲಿದೆ. ಮುಲ್ಲನ್​ಪುರ್​ನಲ್ಲಿರುವ ಎಂವೈಎಸ್ ಸ್ಟೇಡಿಯಂನಲ್ಲಿ ಈವರೆಗೆ ಐಪಿಎಲ್ ಪಂದ್ಯಗಳು, ಒಂದು ಪುರುಷರ ಟಿ20 ಪಂದ್ಯ ಮತ್ತು ಎರಡು ಮಹಿಳಾ ಏಕದಿನ ಪಂದ್ಯಗಳನ್ನು ಆಯೋಜಿಸಲಾಗಿದೆ. ಇದೀಗ ಭಾರತ ಮತ್ತು ಅಫ್ಘಾನಿಸ್ತಾನ್ ಪಂದ್ಯಕ್ಕೆ ಆತಿಥ್ಯವಹಿಸಲು ಸಜ್ಜಾಗಿದೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕಂಬ್ಯಾಕ್:

ಮೇ ತಿಂಗಳಾಂತ್ಯದಲ್ಲಿ ಐಪಿಎಲ್ ಮುಗಿಯಲಿದ್ದು, ಇದಾದ ಬಳಿಕ ಟೀಮ್ ಇಂಡಿಯಾ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇನ್ನು ಜೂನ್ 14 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿಯ ಮೂಲಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯಲಿದ್ದಾರೆ. ಈ ಸರಣಿಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ vs ಅಫ್ಘಾನಿಸ್ತಾನ್ ಸರಣಿ ವೇಳಾಪಟ್ಟಿ:

ದಿನಾಂಕ ಸಮಯ ಪಂದ್ಯ ಸ್ವರೂಪ ಸ್ಥಳ
ಜೂನ್ 6 ಬೆಳಿಗ್ಗೆ 9:30 ಭಾರತ vs ಅಫ್ಘಾನಿಸ್ತಾನ್ ಟೆಸ್ಟ್ ಹೊಸ ಚಂಡೀಗಢ
ಜೂನ್ 14 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಧರ್ಮಶಾಲಾ
ಜೂನ್ 17 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಲಕ್ನೋ
ಜೂನ್ 20 ಮಧ್ಯಾಹ್ನ 1:30 ಭಾರತ vs ಅಫ್ಘಾನಿಸ್ತಾನ್ ಏಕದಿನ ಪಂದ್ಯ ಚೆನ್ನೈ

Source link

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ – Kannada News | KIA Flight Cancellations: Middle East Route Impact and Stranded Kannadigas Due to War

ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್‌ ಸೇರಿದಂತೆ ಮಧ್ಯಪ್ರಾಚ್ಯದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ, ಎಮಿರೇಟ್ಸ್, ಇಂಡಿಗೋ ಮತ್ತು ಖತಾರ್ ಏರ್ವೇಸ್ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ. ರದ್ದಾದ ವಿಮಾನಗಳಲ್ಲಿ ಟಿಕೆಟ್ ಬುಕ್ ಮಾಡಿದ್ದ ಪ್ರಯಾಣಿಕರಿಗೆ ಟಿಕೆಟ್ ಮರು ಬುಕ್ಕಿಂಗ್ ಅಥವಾ ಪೂರ್ಣ ಹಣ ವಾಪಸ್ (Refund) ಪಡೆಯಲು ಏರ್‌ಲೈನ್ಸ್‌ಗಳು ಅವಕಾಶ ಕಲ್ಪಿಸಿವೆ.

ಯುದ್ಧದ ಪರಿಸ್ಥಿತಿಯಿಂದಾಗಿ ವಿಮಾನಗಳ ಹಾರಾಟ ಅನಿಶ್ಚಿತವಾಗಿದೆ. ಹೀಗಾಗಿ ಪ್ರಯಾಣಿಕರು ತಮ್ಮ ವಿಮಾನದ ಸ್ಥಿತಿಗತಿಯನ್ನು (Flight Status) ಅಧಿಕೃತವಾಗಿ ಖಚಿತಪಡಿಸಿಕೊಳ್ಳದೆ ವಿಮಾನ ನಿಲ್ದಾಣಕ್ಕೆ ಬರಬಾರದು ಎಂದು ಆಡಳಿತ ಮಂಡಳಿ ವಿನಂತಿಸಿದೆ. ಸಹಾಯಕ್ಕಾಗಿ ಸಾಮಾಜಿಕ ಜಾಲತಾಣ ಮತ್ತು ಏರ್‌ಪೋರ್ಟ್‌ನಲ್ಲಿ ಹೆಲ್ಪ್‌ಡೆಸ್ಕ್ ತೆರೆಯಲಾಗಿದೆ. ಇನ್ನು ದುಬೈನಲ್ಲಿ ಒಟ್ಟು 100 ಮಂದಿ ಕನ್ನಡಿಗರು ಸಿಲುಕಿದ್ದಾರೆ. ಬಳ್ಳಾರಿಯ 32 ಮಂದಿ, ಬೆಂಗಳೂರಿನ 25 ಮಂದಿ, ದಾವಣಗೆರೆಯ 9 ಮಂದಿ, ಚಿಕ್ಕಮಗಳೂರಿನ 5 ಮಂದಿ, ವಿಜಯಪುರದ 4 ಮಂದಿ, ಕೊಡಗಿನ 4 ಮಂದಿ, ದಕ್ಷಿಣ ಕನ್ನಡದ 3 ಮಂದಿ, ಶಿವಮೊಗ್ಗದ 3 ಮಂದಿ, ರಾಯಚೂರಿನ 3 ಮಂದಿ, ಚಿಕ್ಕಬಳ್ಳಾಪುರದ 2 ಮಂದಿ, ಚಿತ್ರದುರ್ಗದ 2 ಮಂದಿ, ಕಲಬುರಗಿಯ 2 ಮಂದಿ, ಉಡುಪಿಯ 2 ಮಂದಿ, ತುಮಕೂರಿನ 1 ಮಂದಿ, ಮತ್ತೆ ಮೂರು ಜನರ ಜಿಲ್ಲೆಯಾವುದು ಎಂದು ತಿಳಿದಿಲ್ಲ. ಇದರ ಬಹ್ರೇನ್‌ನಲ್ಲಿ ಒಟ್ಟು 9 ಮಂದಿ ಸಿಲುಕಿದ್ದಾರೆ. ಹಾಸನದ 4 ಮಂದಿ ಉಡುಪಿಯ 3 ಮಂದಿ ಕೊಡಗಿನ 1 ಮಂದಿ, ಮತ್ತೆ ಒಬ್ಬರ ಜಿಲ್ಲೆ ಯಾವುದು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ 2026; ಇದು ಬೆಂಗಳೂರಿನ ಅತಿದೊಡ್ಡ ಮೇಳ – Kannada News | TV9 Kannada Presents Bengaluru’s Biggest Expo of the Year – Lifestyle, Automobile & Furniture Expo 2026

ಟಿವಿ9 ಲೈಫ್​ಸ್ಟೈಲ್, ಆಟೊ, ಫರ್ನಿಚರ್ ಎಕ್ಸ್​ಪೋ

ಬೆಂಗಳೂರು, ಮಾರ್ಚ್ 2: ಪ್ರತೀ ವರ್ಷ ಸಾವಿರಾರು, ಲಕ್ಷಾಂತರ ಬೆಂಗಳೂರಿಗರನ್ನು ಸೆಳೆಯುತ್ತಾ ಬಂದಿರುವ ಮಹಾಮೇಳ ಈ ವರ್ಷ ಮತ್ತೆ ಸಿಲಿಕಾನ್ ಸಿಟ್ಟಿಗೆ ಮರಳಿದೆ. ಕರ್ನಾಟಕದ ಅಗ್ರಮಾನ್ಯ ಸುದ್ದಿ ವಾಹಿನಿ ಎನಿಸಿರುವ ಟಿವಿ9 ಕನ್ನಡ ವತಿಯಿಂದ ಲೈಫ್​ಸ್ಟೈಲ್, ಆಟೊಮೊಬೈಲ್ ಮತ್ತು ಫರ್ನಿಚರ್ ಎಕ್ಸ್​ಪೋ 2026 ಮೇಳ (TV9 Kannada Lifestyle, Automobile & Furniture Expo 2026) ನಡೆಯಲಿದೆ. ಅರಮನೆ ಮೈದಾನದಲ್ಲಿ ಮಾರ್ಚ್ 6ರಿಂದ ಮೂರು ದಿನಗಳ ಕಾಲ ನಡೆಯುವ ಈ ಮೆಗಾ ಎಕ್ಸ್​ಪೋದಲ್ಲಿ ಹೊಚ್ಚ ಹೊಸ ಫ್ಯಾಷನ್, ವಾಹನಗಳು, ಗೃಹೋಪಕರಣಗಳನ್ನು ಕಾಣಬಹುದು.

ಟಿವಿ9 ಕನ್ನಡ ಲೈಫ್​ಸ್ಟೈಲ್, ಆಟೊಮೊಬೈಲ್, ಫರ್ನಿಚರ್ ಎಕ್ಸ್​ಪೋದಲ್ಲಿ ನಿರೀಕ್ಷಿಸಬಹುದಾದದ್ದು…

  • ವೈವಿಧ್ಯಮಯ ಮತ್ತು ಅತ್ಯಾಧುನಿಕ ಎಲೆಕ್ಟ್ರಾನಿಕ್ ಗ್ಯಾಜೆಟ್​ಗಳನ್ನು ಈ ಎಕ್ಸ್​ಪೋದಲ್ಲಿ ನೋಡಬಹುದು. ಸ್ಮಾರ್ಟ್​ಹೋಮ್ ಟೆಕ್ನಾಲಜಿ ಹೊಂದಿರುವ ಎಸಿಗಳು, ರೆಫ್ರಿಜರೇಟರ್​ಗಳು, ಅಡುಗೆ ಮನೆ ವಸ್ತುಗಳು, ಪರ್ಸನಲ್ ಗ್ಯಾಜೆಟ್​ಗಳು ನಿಮಗಾಗಿ ಕಾಯುತ್ತಿರುತ್ತವೆ.
  • ಉತ್ಕೃಷ್ಟ ಗುಣಮಟ್ಟದ ಪೀಠೋಪಕರಣ ಮತ್ತು ಹೋಮ್ ಡೆಕೋರೇಶನ್ ವಸ್ತುಗಳು ಇರುತ್ತವೆ. ಬಹಳ ಸುಂದರವಾದ, ಲಕ್ಷುರಿ ಎನಿಸುವ ಸೋಫಾ ಸೆಟ್​ಗಳು, ಡೈನಿಂಗ್ ಟೇಬಲ್, ಇಂಟೀರಿಯನ್ ಡೆಕೋರೇಶನ್, ಸ್ಮಾರ್ಟ್ ಲಿವಿಂಗ್ ಸಲ್ಯೂಶನ್​ಗಳು ಪ್ರದರ್ಶನಗೊಳ್ಳುತ್ತವೆ. ಅತ್ಯಾಧುನಿಕ ಮನೆಗಳಿಗೆ ಒಪ್ಪುವಂತಹ ಇನ್ನೋವೇಟಿವ್ ಎನಿಸುವ ಉತ್ಪನ್ನಗಳು ಇಲ್ಲಿರುತ್ತವೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಖ್ಯಾತ ಬ್ರ್ಯಾಂಡ್​ಗಳ ಉತ್ಪನ್ನಗಳನ್ನು ಪ್ರದರ್ಶಿಸಲಾಗುತ್ತದೆ.
  • ಲೇಟೆಸ್ಟ್ ಟೆಕ್ನಾಲಜಿಯೊಂದಿಗೆ ನಿರ್ಮಿಸಲಾಗಿರುವ ಹೊಸ ಎಲೆಕ್ಟ್ರಿಕ್ ವಾಹನಗಳು, ಎಸ್​ಯುವಿಗಳು, ಬೈಕ್​ಗಳು, ಕಾನ್ಸೆಪ್ಟ್ ಕಾರುಗಳು ನಿಮ್ಮನ್ನು ಆಕರ್ಷಿಸಲು ಎಕ್ಸ್ಪೋದಲ್ಲಿ ಕಾಯುತ್ತಿರುತ್ತವೆ.
  • ಫ್ಯಾಷನ್ ಮತ್ತು ಆಭರಣಗಳ ಕಲೆಕ್ಷನ್ಸ್ ಮನೋಹರವಾಗಿರಲಿವೆ. ಹೊಸ ಫ್ಯಾಷನ್ ಟ್ರೆಂಡ್​ಗಳು, ಡಿಸೈನರ್ ಕಲೆಕ್ಷನ್, ಆಭರಣಗಳನ್ನು ಇಲ್ಲಿ ಕಾಣಬಹುದು. ದೇಶ ವಿದೇಶಗಳ ಫ್ಯಾಷನ್ ಬ್ರ್ಯಾಂಡ್​ಗಳ ಉತ್ಪನ್ನಗಳು ಇಲ್ಲಿ ಪ್ರದರ್ಶನಕ್ಕೆ ಮತ್ತು ಮಾರಾಟಕ್ಕೆ ಲಭ್ಯ ಇರುತ್ತವೆ.

ಟಿವಿ9 ಕನ್ನಡ ಲೈಫ್​ಸ್ಟೈಲ್, ಆಟೊಮೊಬೈಲ್, ಫರ್ನಿಚರ್ ಎಕ್ಸ್​ಪೋ ಕೆಲವಾರು ವರ್ಷಗಳಿಂದ ನಡೆಯುತ್ತಾ ಬಂದಿದೆ. ಹಿಂದಿನ ಆವೃತ್ತಿಯ ಮೇಳಗಳಿಗೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಪ್ರತೀ ಎಕ್ಸ್​ಪೋದಲ್ಲೂ ಸಾವಿರಾರು ಜನರು ಆಗಮಿಸಿ, ಲಾಭ ಪಡೆದಿದ್ದಾರೆ. ಕುಟುಂಬದವರು, ವೃತ್ತಿಪರರು ಮತ್ತು ಹೊಸ ಫ್ಯಾಷನ್ ಮತ್ತು ಗ್ಯಾಜೆಟ್​ಗಳ ಪ್ರೇಮಿಗಳು ಎಲ್ಲರಿಗೂ ಹೇಳಿ ಮಾಡಿಸಿದಂತಹ ಪ್ಲಾಟ್​ಫಾರ್ಮ್ ಇದು. ಈ ಎಕ್ಸ್​ಪೋದಲ್ಲಿ ಆಕರ್ಷಣೀಯ ಎನಿಸುವ ಡಿಸ್ಕೌಂಟ್​ಗಳು, ಡೀಲ್​ಗಳು ನಿಮಗಾಗಿ ಲಭ್ಯ ಇರುತ್ತವೆ.

ಟಿವಿ9 ಕನ್ನಡ ಲೈಫ್​ಸ್ಟೈಲ್, ಆಟೊಮೊಬೈಲ್, ಫರ್ನಿಚರ್ ಎಕ್ಸ್​ಪೋ ವೇಳಾಪಟ್ಟಿ

  • ಎಕ್ಸ್​ಪೋ ದಿನಾಂಕ: 2026ರ ಮಾರ್ಚ್ 6, 7 ಮತ್ತು 8ರಂದು.
  • ಸ್ಥಳ: ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನ
  • ಸಮಯ: ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ

ಪಾರ್ಕಿಂಗ್ ಮತ್ತು ಪ್ರವೇಶ ಉಚಿತ

Source link

ಮಧ್ಯ ಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಕನ್ನಡಿಗರ ಪರದಾಟ, ರಾಜ್ಯ ಸರ್ಕಾರದಿಂದ ಸಹಾಯವಾಣಿ ಆರಂಭ – Kannada News | Middle East War: Kannadigas Stranded Abroad Amidst Conflict, Govt Seeks Safe Return

ಬೆಂಗಳೂರು, ಮಾರ್ಚ್​​ 2: ಮಧ್ಯ ಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿರುವ ಹಿನ್ನೆಲೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದವರು, ಉದ್ಯೋಗ ಸಂಬಂಧ ಕೆಲಸಗಳಿಗಾಗಿ ದುಬೈಗೆ ಹೋಗಿರುವ ಕನ್ನಡಿಗರು ಸ್ವದೇಶಕ್ಕೆ ಹಿಂತಿರುಗಲಾರದೆ ಪರದಾಟ ನಡೆಸುತ್ತಿದ್ದಾರೆ. ಏಕಾಏಕಿ ವಿಮಾನಗಳ ಹಾರಾಟ ರದ್ದುಗೊಂಡಿರುವ ಕಾರಣ ಆತಂಕಕ್ಕೆ ಒಳಗಾಗಿದ್ದಾರೆ. ಕ್ಷಣ ಕ್ಷಣಕ್ಕೂ ಯುದ್ಧದ ತೀವ್ರತೆ ಹೆಚ್ಚುತ್ತಿರುವ ಕಾರಣ ಜೀವ ಭಯ ಕಾಡತೊಡಗಿದ್ದು, ಈ ನಡುವೆ ಕನ್ನಡಿಗರು ಸೇರಿದಂತೆ ಸರ್ವ ಭಾರತೀಯರ ಸುರಕ್ಷಿತಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳೋದಾಗಿ ತಿಳಿಸಿದೆ.

ಪ್ಯಾಮಿಲಿ ಜೊತೆ ಪ್ರವಾಸಕ್ಕೆ ಹೋದವರ ಪರದಾಟ

ಫ್ಯಾಮಿಲಿ ಜೊತೆ ದುಬೈ ಪ್ರವಾಸಕ್ಕೆ ಹೋಗಿದ್ದ ಚಿಕ್ಕಮಗಳೂರಿನ‌ ಮಯೂರ ಹೋಟೆಲ್ ಮಾಲೀಕ ಗಿರೀಶ್ ಮತ್ತು ಕುಣಿಗಲ್​​ನಲ್ಲಿ ವಾಸವಿರೋ ಅವರ ಸಹೋದರ ಹರೀಶ್ ಭಟ್ ಕುಟುಂಬಗಳು ದುಬೈನಲ್ಲಿ ಸಿಲುಕಿವೆ. ಅಲ್ಲಿಂದ ಭಾರತಕ್ಕೆ ಹಿಂದಿರುಗಲು ಮಾರ್ಚ್​​ 3ಕ್ಕೆ ಫ್ಲೈಟ್​​ ಬುಕ್​​ ಆಗಿತ್ತು. ಈ ನಡುವೆ ಯುದ್ಧ ಆರಂಭವಾಗಿರುವ ಕಾರಣ ಎರಡೂ ಕುಟುಂಬಗಳ ಒಟ್ಟು 9 ಜನ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ. ಫೆ. 23ರಂದು ಇವರು ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ. ಹಾಗೆಯೇ ಚಿತ್ರದುರ್ಗದ ಬಾಪೂಜಿ ವಿದ್ಯಾ ಸಂಸ್ಥೆಯ ಕೆ.ಎಂ. ವೀರೇಶ್ ಕುಟುಂಬ ಕೂಡ ದುಬೈನಲ್ಲೇ ಲಾಕ್​​ ಆಗಿದೆ. ಕುಟುಂಬದವರೆಲ್ಲರೂ ಸುರಕ್ಷಿತವಾಗಿದ್ದು, ಖಾಸಗಿ ಪತ್ರಿಕೆಯ ಅವಾರ್ಡ್ ಕಾರ್ಯಕ್ರಮಕ್ಕೆಂದು ಇವರು ತೆರಳಿದ್ದರು.

ಪ್ಲೀಸ್​​ ನಮ್ಮನ್ನು ವಾಪಸ್​​ ಕರೆಸಿಕೊಳ್ಳಿ- ಮಹಿಳೆಯ ಅಳಲು


ಬೆಂಗಳೂರಿನ ಹೊಸಕೆರೆ ನಿವಾಸಿಯಾಗಿರುವ ಸುನೀತಾ ಅವರು ತಮ್ಮ ಕುಟುಂಬದೊಂದಿಗೆ ದುಬೈ ಪ್ರವಾಸಕ್ಕೆ ತೆರಳಿದ್ದಾಗ ಅನಿರೀಕ್ಷಿತ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಫೆಬ್ರವರಿ 23ರಂದು ದುಬೈಗೆ ಪ್ರಯಾಣಿಸಿದ್ದ ಈ ಕುಟುಂಬ, ಫೆಬ್ರವರಿ 28ರಂದು ಅಬುಧಾಬಿಯಿಂದ ಬೆಂಗಳೂರಿಗೆ ಮರಳಬೇಕಿತ್ತು. ಆದರೆ, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದಾಗಿ ಅವ ಮರಳಬೇಕಿದ್ದ ವಿಮಾನಗಳು ರದ್ದುಗೊಂಡಿವೆ.

ಇದನ್ನೂ ಓದಿ: ಕನ್ನಡಿಗರಷ್ಟೇ ಅಲ್ಲ ಯಾರೂ ಆತಂಕ ಪಡಬೇಕಿಲ್ಲ, ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ; ಪ್ರಲ್ಹಾದ್ ಜೋಶಿ ಅಭಯ

ಲಂಡನ್​​ಗೆ ಹೊರಟಿದ್ದ ಪ್ರಯಾಣಿಕ ದುಬೈನಲ್ಲಿ ಲಾಕ್​​

ಕೆಲಸದ ವಿಚಾರಕ್ಕೆ ಬೆಂಗಳೂರಿನಿಂದ ಲಂಡನ್​​ಗೆ ಹೊರಟಿದ್ದ ಸೀನಿಯರ್​ ಈಕ್ವಿಟಿ ಸಲಹಾಗಾರ ನಾಗೇಂದ್ರ ಎಂಬವರು ಕೂಡ ದುಬೈನಲ್ಲಿ ಸಿಲುಕಿಕೊಂಡು ಪರದಾಟ ನಡೆಸುತ್ತಿದ್ದಾರೆ. ಲಂಡನ್​​ಗೆ ಹೊರಟಿದ್ದ ಇವರು ದುಬೈನಲ್ಲಿ ವಿಮಾನ ಬದಲಾಯಿಸಬೇಕಿತ್ತು. ಕುಟುಂಬದ ಜೊತೆಗೆ ಮಾತನಾಡಿರುವ ನಾಗೇಂದ್ರ, ಸುತ್ತಮುತ್ತ ದೊಡ್ಡ ಶಬ್ದ ಕೇಳಿಬರುತ್ತಿದೆ ಎಂದು ಹೆಂಡತಿಗೆ ತಿಳಿಸಿದ್ದಾರೆ. ತಾನಿರುವ ಪ್ರದೇಶದಲ್ಲಿ ನೆಟ್​​ವರ್ಕ್​​ ಸಮಸ್ಯೆ ಇರೋದಾಗಿಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸಹಾಯವಾಣಿ ಆರಂಭ

ಮಧ್ಯಪ್ರಾಚ್ಯ ದೇಶಗಳಲ್ಲಿ ಅನೇಕ ಕನ್ನಡಿಗರು ಸಿಲುಕಿರುವ ಹಿನ್ನೆಲೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ ಆರಂಭಿಸಿದೆ. 080-22340676 ಅಥವಾ 22253707ಗೆ ಕರೆ ಮಾಡಬಹುದು ಎಂದು ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಟಾಕ್ಸಿಕ್’ಗೆ ತಿರುಗೇಟು ಕೊಡಲು ಸರ್​​​ಪ್ರೈಸ್ ಶಾಕ್ ರೆಡಿ ಮಾಡಿದ ‘ಧುರಂಧರ್ 2’ – Kannada News | Dhurandhar 2 vs Toxic: Can the Sequel’s Holi Trailer Overcome Yash’s Hype for March 19?

ಒಂದು ಸಿನಿಮಾ ಹಿಟ್ ಆಗಿ ಅದಕ್ಕೆ ಸೀಕ್ವೆಲ್ ಬರ್ತಿದೆ ಎಂದರೆ ಆ ಚಿತ್ರ ಹಿಟ್ ಆಗೋದು ಬಹುತೇಕ ಖಚಿತ ಎಂಬ ವಾತಾವರಣ ನಿರ್ಮಾಣ ಆಗಿದೆ. ‘ಬಾಹುಬಲಿ 2’, ‘ಕೆಜಿಎಫ್ 2’, ‘ಪುಷ್ಪ 2’ ಚಿತ್ರಗಳ ಮೂಲಕ ಇದು ಸಾಬೀತಾಗಿದೆ. ಈಗ ಮಾರ್ಚ್ 19ಕ್ಕೆ ‘ಧುರಂಧರ್ 2’ (Dhurandhar 2) ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ, ಈ ಚಿತ್ರಕ್ಕೆ ಪ್ರಚಾರ ಆರಂಭ ಆಗಿಲ್ಲ. ಇದು ರಣವೀರ್ ಸಿಂಗ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಯಶ್ ಎದುರು ಬರಲು ಸಾಕಷ್ಟು ಸಿದ್ಧತೆ ಬೇಕು. ಆದರೆ, ಆ ಸಿದ್ಧತೆ ತಂಡದ ಕಡೆಯಿಂದ ಆಗುತ್ತಿಲ್ಲ ಎಂಬ ಕೊರಗು ಅಭಿಮಾನಿಗಳಿಗೆ ಇದೆ. ಹೀಗಿರುವಾಗಲೇ ಸಡನ್ ಶಾಕ್ ನೀಡಲು ‘ಧುರಂಧರ್ 2’ ತಂಡ ಪ್ಲ್ಯಾನ್ ಮಾಡಿದೆಯಂತೆ.

ಯಾವುದೇ ವಿಷಯವನ್ನು ಘೋಷಣೆ ಮಾಡಿ ರಿಲೀಸ್ ಮಾಡಿದರೆ ಅದಕ್ಕೆ ಹೈಪ್ ಸಿಗೋ ಸಾಧ್ಯತೆ ಕಡಿಮೆ. ಆದರೆ, ಯಾವುದೇ ಘೋಷಣೆ ಇಲ್ಲದೆ ಬಂದರೆ ಅದಕ್ಕೆ ಸಿಗೋ ಹೈಪ್ ಹೆಚ್ಚು. ಹೀಗಾಗಿ, ಹೋಳಿ ಹಬ್ಬದ ಪ್ರಯುಕ್ತ ಫೆಬ್ರವರಿ 3ರಂದು ‘ಧುರಂಧರ್ 2’ ಟ್ರೇಲರ್ ಲಾಂಚ್ ಮಾಡಲು ಪ್ಲ್ಯಾನ್ ರೂಪಿಸಲಾಗಿದೆಯಂತೆ. ಈ ಮೂಲಕ ಹಲ್ಚಲ್ ಎಬ್ಬಿಸಲು ಯೋಜನೆ ರೆಡಿ ಆಗಿದೆ.

‘ಟಾಕ್ಸಿಕ್’ ತಂಡ ನಿರಂತರವಾಗಿ ಸಿನಿಮಾ ಪ್ರಚಾರ ಮಾಡುತ್ತಿದೆ. ದಿನಕ್ಕೊಂದು ಅಪ್​​ಡೇಟ್ ಕೊಡುವ ಮೂಲಕ ಕುತೂಹಲ ಮೂಡಿಸುತ್ತಿದೆ. ಆದರೆ, ‘ಧುರಂಧರ್ 2’ ಟೀಂ ಆ ರೀತಿ ಅಲ್ಲ. ಈ ಮೊದಲು ‘ಧುರಂದರ್ 2’ ತಂಡದವರು ಟೀಸರ್ ರಿಲೀಸ್ ಮಾಡಿದ್ದರು. ಅದು ಮೊದಲ ಪಾರ್ಟ್​​ನ ಕೊನೆಯಲ್ಲಿ ಬರುವ ದೃಶ್ಯಗಳೇ ಇದ್ದವು. ಹೀಗಾಗಿ ಈ ಟೀಸರ್ ಗಮನ ಸೆಳೆಯುವಲ್ಲಿ ವಿಫಲವಾಗಿತ್ತು. ಈ ಕಾರಣದಿಂದ ಈಗ ಟ್ರೇಲರ್ ರಿಲೀಸ್ ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ‘ಧುರಂದರ್ 2’ ತಂಡ ಪ್ಲ್ಯಾನ್ ಮಾಡಿಕೊಂಡಿದೆ.

ಇದನ್ನೂ ಓದಿ: ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ?

‘ಟಾಕ್ಸಿಕ್’ ವಿರುದ್ಧ ಗೆಲ್ಲಬೇಕು ಎಂದರೆ ಅದು ಸುಲಭದಲ್ಲಿ ಇಲ್ಲ. ಯಶ್ ಅವರು ಏನೇ ಪ್ಲ್ಯಾನ್ ಮಾಡಿದರೂ ದೊಡ್ಡ ಮಟ್ಟದಲ್ಲಿ ಆಲೋಚಿಸಿರುತ್ತಾರೆ. ಎದುರಾಳಿಯ ಪ್ಲ್ಯಾನ್ ಏನು ಎಂಬುದನ್ನು ತಿಳಿದೇ ‘ಟಾಕ್ಸಿಕ್’ ರಿಲೀಸ್ ಮಾಡಲು ಅವರು ಮುಂದೆ ಬಂದಿದ್ದಾರೆ. ದಕ್ಷಿಣ ಭಾರತದ ಜೊತೆಗೆ ಬಾಲಿವುಡ್​​​ನಲ್ಲೂ ಸಿನಿಮಾ ಅಬ್ಬರಿಸೋದು ಫಿಕ್ಸ್ ಆಗಿದೆ. ಹೀಗಾಗಿ,ಈ ಚಿತ್ರದ ಎದುರು ಅಬ್ಬರಿಸಲು ‘ಧುರಂಧರ್ 2’ ಸಿನಿಮಾ ದೊಡ್ಡ ಮಟ್ಟದಲ್ಲಿ ಪ್ಲ್ಯಾನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version