ತಿಂಗಳ ಕೊನೆಯಲ್ಲಿ ಜೇಬು ಖಾಲಿಯಾಗಬಾರದು ಎಂದರೆ ಈ ಸ್ಮಾರ್ಟ್‌ ಅಭ್ಯಾಸಗಳನ್ನು ಪಾಲಿಸಿ – Kannada News | You can easily save money by following these smart tricks

ಇಂದಿನ ಈ ದುಬಾರಿ ದುನಿಯಾದಲ್ಲಿ ಹಣ ಉಳಿತಾಯ (money Saving) ಮಾಡುವುದೇ ಸವಾಲಿನ ಸಂಗತಿಯಾಗಿದೆ. ಎಷ್ಟೇ ಸಂಪಾದನೆ ಮಾಡಿದರೂ ಹಲವರಿಗೆ ಹಣ ಉಳಿತಾಯ ಮಾಡಲಿ ಸಾಧ್ಯವೇ ಆಗುವುದಿಲ್ಲ. ಸಂಬಳದ ಹಣವೆಲ್ಲಾ ಬಹು ಬೇಗನೇ ಖರ್ಚಾಗಿ ತಿಂಗಳ ಕೊನೆಯಲ್ಲಿ ಜೇಬು ಖಾಲಿಯಾಗುತ್ತದೆ. ತಿಂಗಳ ಕೊನೆಯಲ್ಲಿ ಇದೇ ರೀತಿ ನಿಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಕೂಡ ಸಂಪೂರ್ಣವಾಗಿ ಖಾಯಿಯಾಗಿಬಿಡುತ್ತಾ, ಅಗತ್ಯ ಖರ್ಚಿಗಳಿಗೂ ಸಹ ಹಣ ಇರಲ್ವಾ? ಹಾಗಿದ್ರೆ ಈ ಹಣಕಾಸು ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸ್ಮಾರ್ಟ್‌ ಮನಿ ಮ್ಯಾನೇಜ್‌ಮೆಂಟ್‌ ಟಿಪ್ಸ್‌ ಪಾಲಿಸಿ. ಇದರ ಮೂಲಕ ನೀವು ಉಳಿತಾಯಕ್ಕಾಗಿ ನಿಗದಿತ ಮೊತ್ತವನ್ನು ಮೀಸಲಿಡಬಹುದು ಮತ್ತು ತಿಂಗಳ ಕೊನೆಯಲ್ಲಿ ಜೇಬು ಕೂಡ ಸಂಪೂರ್ಣವಾಗಿ ಖಾಲಿಯಾಗುವುದಿಲ್ಲ.

ಈ ಸ್ಮಾರ್ಟ್‌ ಟ್ರಿಕ್ಸ್‌ ಪಾಲಿಸುವ ಮೂಲಕ ಹಣ ಉಳಿತಾಯ ಮಾಡಬಹುದು:

ನಿಮ್ಮ ಖರ್ಚುಗಳನ್ನು ಯೋಜಿಸಿ: ಉಳಿತಾಯದ ಮೊದಲ ಹೆಜ್ಜೆ ಎಂದರೆ ನಿಮ್ಮ ಹಣ ಎಲ್ಲಿಗೆ ಹೋಗುತ್ತಿದೆ ಎಂದು ತಿಳಿದುಕೊಳ್ಳುವುದು. ದಿನನಿತ್ಯದ ಚಿಕ್ಕ ಖರ್ಚುಗಳನ್ನು ಸಹ ನೋಟ್‌ಬುಕ್‌ನಲ್ಲಿ ಬರೆಯುವ ಅಭ್ಯಾಸ ಮಾಡಿಕೊಳ್ಳಿ. ನಿಮ್ಮ ಹಾಲಿನ ಬಿಲ್‌ನಿಂದ ಹಿಡಿದು ತರಕಾರಿ ಖರೀದಿ ಮತ್ತು ಚಹಾದವರೆಗೆ ಎಲ್ಲವನ್ನೂ ಟ್ರ್ಯಾಕ್ ಮಾಡುವುದರಿಂದ ತಿಂಗಳ ಕೊನೆಯಲ್ಲಿ ನೀವು ಎಲ್ಲಿ ಹೆಚ್ಚು ಖರ್ಚು ಮಾಡಿದ್ದೀರಿ ಎಂದು ತಿಳಿಯಲು ಸಹಾಯ ಮಾಡುತ್ತದೆ. ಇದು ಅನಗತ್ಯ ಖರ್ಚುಗಳನ್ನು ಗುರುತಿಸಲು ಮತ್ತು ಮುಂದಿನ ತಿಂಗಳು ಅವುಗಳನ್ನು ತಪ್ಪಿಸಲು ನಿಮಗೆ ಸಹಾಯ ಮಾಡುತ್ತದೆ. ನೀವು ಮಾಸಿಕ ಖರ್ಚು ಮಿತಿಯನ್ನು ನಿಗದಿಪಡಿಸಿದರೆ, ನಿಮ್ಮ ಹಣದ ವ್ಯರ್ಥ ಸ್ವಯಂಚಾಲಿತವಾಗಿ ಕಡಿಮೆಯಾಗುತ್ತದೆ.

ಚಂದಾದಾರಿಕೆಗಳನ್ನು ಕಡಿಮೆ ಮಾಡಿ: ಇತ್ತೀಚಿನ ದಿನಗಳಲ್ಲಿ, ಮೊಬೈಲ್ ಅಪ್ಲಿಕೇಶನ್‌ಗಳು, ಚಲನಚಿತ್ರ ಸ್ಟ್ರೀಮಿಂಗ್ ಅಪ್ಲಿಕೇಶನ್‌ಗಳು ಮುಂತಾದ ಹಲವು ವಿಷಯಗಳಿಗೆ ನಾವು ಪ್ರತಿ ತಿಂಗಳು ಹಣ ಪಾವತಿಸುತ್ತೇವೆ. ನಿಮಗೆ ನಿಜವಾಗಿಯೂ ಅಗತ್ಯವಿರುವ ಅಪ್ಲಿಕೇಶನ್‌ಗಳನ್ನು ಮಾತ್ರ ಇರಿಸಿ ಮತ್ತು OTT ಪ್ಲಾಟ್‌ಫಾರ್ಮ್, ಸಂಗೀತ ಅಪ್ಲಿಕೇಶನ್, ಜಿಮ್ ಅಥವಾ ಯಾವುದೇ ಆನ್‌ಲೈನ್ ಕೋರ್ಸ್‌ನ ಚಂದಾದಾರಿಕೆ ಬಳಕೆಯಲ್ಲಿಲ್ಲದಿದ್ದರೆ, ಅದನ್ನು ತಕ್ಷಣವೇ ನಿಲ್ಲಿಸಿ.  ಏಕೆಂದರೆ ಸಣ್ಣ ಆಟೋ-ಡೆಬಿಟ್‌ಗಳು ಒಟ್ಟಾಗಿ ತಿಂಗಳ ದೊಡ್ಡ ಮೊತ್ತವನ್ನು ತಿಂದು ಹಾಕುತ್ತವೆ.

ಮನೆಯಲ್ಲಿಯೇ ಆಹಾರ ತಯಾರಿಸಿ: ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಹೊರಗೆ ಊಟ ಮಾಡುವುದಕ್ಕೆ ಒಗ್ಗಿಕೊಂಡಿದ್ದಾರೆ. ಇದಕ್ಕಾಗಿ ನಾವು ಬಹಳಷ್ಟು ಹಣವನ್ನು ಖರ್ಚು ಮಾಡುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ಮನೆಯಲ್ಲಿ ಅಡುಗೆ ಮಾಡುವುದು ಮತ್ತು ತಿನ್ನುವುದು ನಿಮ್ಮ ಆರೋಗ್ಯ ಮತ್ತು ಬಜೆಟ್ ಎರಡಕ್ಕೂ ತುಂಬಾ ಪ್ರಯೋಜನಕಾರಿ. ಇದು ನಿಮ್ಮ ಹಣವನ್ನು ಉಳಿಸುವುದಲ್ಲದೆ, ನೀವು ತಾಜಾ ಮತ್ತು ಪೌಷ್ಟಿಕ ಆಹಾರ ಸೇವಿಸುವುದನ್ನು ಖಚಿತಪಡಿಸುತ್ತದೆ. ಅಲ್ಲದೆ ಇದು ನಿಮ್ಮ ಮಾಸಿಕ ವೆಚ್ಚವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ.

ಸಾರಿಗೆ ವೆಚ್ಚಗಳು: ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿರುವುದರಿಂದ, ನಿಮ್ಮ ಕಾರನ್ನು ಬಳಸುವುದು ದುಬಾರಿಯಾಗಬಹುದು. ಸ್ನೇಹಿತರೊಂದಿಗೆ ಶೇರಿಂಗ್‌ನೊಂದಿಗೆ ಕಾರಿನಲ್ಲಿ ಹೋಗಿ ಅಥವಾ ಕೆಲಸಕ್ಕೆ ಹೋಗಲು ಸಾರ್ವಜನಿಕ ಸಾರಿಗೆಯನ್ನು ಬಳಸಿ. ಇದು ನಿಮ್ಮ ಹಣವನ್ನು ಉಳಿಸುತ್ತದೆ.

ಇದನ್ನೂ ಓದಿ: ಪದೇ ಪದೇ ಹಣವನ್ನು ಸಾಲ ಪಡೆಯುವುದರಿಂದ ಏನಾಗುತ್ತದೆ ಗೊತ್ತಾ?

ಹಣ ನಿರ್ವಹಣೆ: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಮೊಬೈಲ್ ಪಾವತಿಗಳನ್ನು ಬಳಸುತ್ತಾರೆ. ಇದರಿಂದಾಗಿ ವೆಚ್ಚದ ಬಗ್ಗೆ ಯೋಚಿಸದೆ ನಾವು ಸುಲಭವಾಗಿ ಹಣವನ್ನು ಖರ್ಚು ಮಾಡುತ್ತೇವೆ. ಬದಲಾಗಿ, ನೀವು ಏನನ್ನಾದರೂ ಖರೀದಿಸಿದಾಗಲೆಲ್ಲಾ ನಗದು ರೂಪದಲ್ಲಿ ಪಾವತಿಸುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇದರಿಂದ ನಮ್ಮ ಬಳಿ ಎಷ್ಟು ಹಣವಿದೆ ಮತ್ತು ಎಷ್ಟು ಹಣ ಖಾಲಿಯಾಗಿದೆ ಎಂಬ ಅಂದಾಜು ದೊರೆಯುತ್ತದೆ. ಇದು ಅನಗತ್ಯ ಖರೀದಿ, ಖರ್ಚನ್ನು ತಪ್ಪಿಸಲು ನಮಗೆ ಸಹಾಯ ಮಾಡುತ್ತದೆ.

ಬೃಹತ್ ಖರೀದಿ: ಒಂದು ತಿಂಗಳಿಗೆ ಬೇಕಾಗುವ ದಿನಸಿ ಮತ್ತು ಗೃಹೋಪಯೋಗಿ ವಸ್ತುಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸುವುದು ಪ್ರಯೋಜನಕಾರಿ. ನೀವು ವಸ್ತುಗಳನ್ನು ಪ್ರತ್ಯೇಕವಾಗಿ ಖರೀದಿಸಿದರೆ, ನೀವು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ರಿಯಾಯಿತಿ ಇದ್ದಾಗ, ಅಗತ್ಯ ವಸ್ತುಗಳನ್ನು ಮಾತ್ರ ಖರೀದಿಸಿ. ರಿಯಾಯಿತಿಗಾಗಿ ಅನಗತ್ಯ ವಸ್ತುಗಳನ್ನು ಖರೀದಿಸಿ ನಿಮ್ಮ ಹಣವನ್ನು ವ್ಯರ್ಥ ಮಾಡಬೇಡಿ. ಏನನ್ನಾದರೂ ಖರೀದಿಸುವ ಮೊದಲು, ನಿಮಗೆ ನಿಜವಾಗಿಯೂ ಅದು ಅಗತ್ಯವಿದೆಯೇ ಎಂದು ಖಚಿತಪಡಿಸಿಕೊಳ್ಳಿ ಮತ್ತು ನಂತರ ಅದನ್ನು ಖರೀದಿಸಿ. ಸರಿಯಾದ ಯೋಜನೆ ಹಣವನ್ನು ಉಳಿಸಲು ಉತ್ತಮ ಮಾರ್ಗವಾಗಿದೆ.

50-30-20 ನಿಯಮವನ್ನು ಅಳವಡಿಸಿಕೊಳ್ಳಿ: ಹಣ ನಿರ್ವಹಣೆಗೆ ಒಂದು ಜನಪ್ರಿಯ ವಿಧಾನವೆಂದರೆ 50-30-20 ನಿಯಮ. ಇದು ಆದಾಯದ 50 ಪ್ರತಿಶತವನ್ನು ಅಗತ್ಯಗಳಿಗೆ, 30 ಪ್ರತಿಶತವನ್ನು ಖರ್ಚಿಗೆ ಮತ್ತು 20 ಪ್ರತಿಶತವನ್ನು ಉಳಿತಾಯ ಅಥವಾ ಹೂಡಿಕೆಗಳಿಗೆ ಮೀಸಲಿಡುತ್ತದೆ. ಇದು ಕೂಡ ಹಣ ಉಳಿತಾಯ ಮಾಡಲು ತುಂಬಾನೇ ಸಹಕಾರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಂದಿನ 9 ವರ್ಷದಲ್ಲಿ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ನಗರ ಬೆಂಗಳೂರು; ಸಾವಿಲ್ಸ್ ವರದಿ – Kannada News | Bangalore’s Growth: IT Hub to Global Leader by 2035, says Savills Report

ಬೆಂಗಳೂರು, ಮೇ 5: ಭಾರತದ ಐಟಿ ಹಬ್ ಹಾಗೂ ಸಿಲಿಕಾನ್ ವ್ಯಾಲಿ ಖ್ಯಾತಿಯ ಬೆಂಗಳೂರು ನಗರದ (Bengaluru city) ಕಿರೀಟಕ್ಕೆ ಮತ್ತೊಂದು ಐತಿಹಾಸಿಕ ಗರಿ ಸಿಕ್ಕಿದೆ. ಜಾಗತಿಕ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆಯಾದ ‘ಸಾವಿಲ್ಸ್’ (Savills) ನಡೆಸಿರುವ ಸಂಶೋಧನಾ ವರದಿಯ ಪ್ರಕಾರ, 2035ರ ವೇಳೆಗೆ ಬೆಂಗಳೂರು ಇಡೀ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುವ ಪ್ರಮುಖ ಮಹಾನಗರವಾಗಿ (World’s Fastest-Growing Major City) ಹೊರಹೊಮ್ಮಲಿದೆ. ವಿಶ್ವದ ಪ್ರಮುಖ 245 ನಗರಗಳನ್ನು ವಿವಿಧ ಆರ್ಥಿಕ ಮತ್ತು ಸಾಮಾಜಿಕ ಮಾನದಂಡಗಳ ಆಧಾರದ ಮೇಲೆ ಸಮೀಕ್ಷೆ ನಡೆಸಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯಲ್ಲಿ ಭಾರತದ ಹಲವು ನಗರಗಳು ಮೊದಲ 20 ಸ್ಥಾನಗಳಲ್ಲಿ ಗುರುತಿಸಿಕೊಂಡು ಭಾರತದ ಆರ್ಥಿಕ ಬಲವನ್ನು ಪ್ರದರ್ಶಿಸಿವೆ.

ಬೆಂಗಳೂರು ಮೊದಲ ಸ್ಥಾನ ಪಡೆಯಲು ಕಾರಣಗಳೇನು?

  • ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್ಸ್ (GCC): ವಿಶ್ವದ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳು ತಂತ್ರಜ್ಞಾನ, ಹಣಕಾಸು ಮತ್ತು ಕಾರ್ಯಾಚರಣೆಗಾಗಿ ಬೆಂಗಳೂರಿನಲ್ಲಿ ತಮ್ಮ ‘ಗ್ಲೋಬಲ್ ಕ್ಯಾಪಬಿಲಿಟಿ ಸೆಂಟರ್’ಗಳನ್ನು (GCC) ಸ್ಥಾಪಿಸುತ್ತಿವೆ. ಇದು ನಗರದ ಬೆಳವಣಿಗೆಗೆ ಮುಖ್ಯ ಇಂಧನವಾಗಿದೆ.
  • ಉನ್ನತ ಐಟಿ ಪ್ರತಿಭೆಗಳು: ಬೆಂಗಳೂರಿನಲ್ಲಿರುವ ಅಪಾರ ಸಂಖ್ಯೆಯ ತಾಂತ್ರಿಕ ನೈಪುಣ್ಯತೆ ಹೊಂದಿದ ಯುವ ಸಮೂಹ ಮತ್ತು ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಜಾಗತಿಕ ಕಂಪನಿಗಳನ್ನು ಆಕರ್ಷಿಸುತ್ತಿವೆ.
  • ಸ್ಥಳಾಂತರ ಮತ್ತು ಜನಸಂಖ್ಯೆ: ದೇಶದ ಮೂಲೆ ಮೂಲೆಗಳಿಂದ ಉದ್ಯೋಗ ಅರಸಿ ಬರುವ ಯುವ ವಲಸಿಗರ ಸಂಖ್ಯೆ ಹೆಚ್ಚುತ್ತಿರುವುದು ಹಾಗೂ ಶ್ರೀಮಂತ ಕುಟುಂಬಗಳ (ವರ್ಷಕ್ಕೆ ಸುಮಾರು 70,000 ಡಾಲರ್​ಗಿಂತ ಹೆಚ್ಚು ಗಳಿಸುವ ಕುಟುಂಬಗಳು) ಸಂಖ್ಯೆ ವೃದ್ಧಿಸುತ್ತಿರುವುದು ನಗರದ ಆರ್ಥಿಕತೆಗೆ ದೊಡ್ಡ ಬಲ ನೀಡಿದೆ.

ಇದನ್ನೂ ಓದಿ: ವಿಜಯ್​ನ ಪೋರ್ಟ್​ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ?

ರೇಸ್‌ನಲ್ಲಿ ಏಷ್ಯಾ ಪೆಸಿಫಿಕ್ ದೇಶಗಳು ಮತ್ತು ಭಾರತದ ಪ್ರಾಬಲ್ಯ

ಸಾವಿಲ್ಸ್ ವರದಿಯ ಪ್ರಕಾರ, ಜಗತ್ತಿನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮೊದಲ 20 ನಗರಗಳ ಪೈಕಿ ಶೇಕಡಾ 85 ರಷ್ಟು ನಗರಗಳು ಏಷ್ಯಾ ಪೆಸಿಫಿಕ್ ವಲಯಕ್ಕೆ ಸೇರಿವೆ. ಮೊದಲ 50 ನಗರಗಳಲ್ಲಿ ಮುಕ್ಕಾಲು ಭಾಗ ಏಷ್ಯಾದ್ದಾಗಿದ್ದು, ಇದರಲ್ಲಿ ಭಾರತ, ವಿಯೆಟ್ನಾಂ ಮತ್ತು ಚೀನಾ ದೇಶಗಳು ಮುಂಚೂಣಿಯಲ್ಲಿವೆ. ಭಾರತದ ದೆಹಲಿ, ಮುಂಬೈ, ಹೈದರಾಬಾದ್ ಮತ್ತು ಕೋಲ್ಕತ್ತಾ ನಗರಗಳು ಸಹ ಅಗ್ರ ಸ್ಥಾನಗಳಲ್ಲಿ ಗುರುತಿಸಿಕೊಂಡಿವೆ.

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಭಾರಿ ಜಿಗಿತ

ಬೆಂಗಳೂರಿನ ಈ ಅಭೂತಪೂರ್ವ ಬೆಳವಣಿಗೆಯಿಂದಾಗಿ ಮುಂದಿನ ಒಂದು ದಶಕದಲ್ಲಿ ನಗರದ ರಿಯಲ್ ಎಸ್ಟೇಟ್ ಉದ್ಯಮವು ಸಂಪೂರ್ಣವಾಗಿ ಬದಲಾಗಲಿದೆ ಎಂದು ವರದಿ ಹೇಳಿದೆ.

  • ಕಚೇರಿ ಜಾಗಕ್ಕೆ ಭಾರಿ ಬೇಡಿಕೆ: ಜಾಗತಿಕ ಸಂಸ್ಥೆಗಳ ವಿಸ್ತರಣೆಯಿಂದಾಗಿ ಅತ್ಯಾಧುನಿಕ ಹಾಗೂ ಪರಿಸರಸ್ನೇಹಿ (Grade-A workspaces) ಆಫೀಸ್ ಸ್ಪೇಸ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ.
  • ವಿದೇಶಿ ಬಂಡವಾಳ: ಭಾರತದ ರಿಯಲ್ ಎಸ್ಟೇಟ್ ವಲಯಕ್ಕೆ ಖಾಸಗಿ ಈಕ್ವಿಟಿ (Private Equity) ಹೂಡಿಕೆಯು ಶೇಕಡಾ 66 ರಷ್ಟು ಹೆಚ್ಚಾಗಿದ್ದು, ಭಾರಿ ಪ್ರಮಾಣದ ವಿದೇಶಿ ಹಣ ಹರಿದುಬರುತ್ತಿದೆ.
  • ವಸತಿ ವಲಯದ ವಿಸ್ತರಣೆ: ಐಟಿ ಉದ್ಯೋಗಿಗಳ ವಲಸೆ ಹೆಚ್ಚಾಗುತ್ತಿದ್ದಂತೆ ವಸತಿ ಸಮುಚ್ಚಯಗಳು, ಲಗ್ಜರಿ ಅಪಾರ್ಟ್‌ಮೆಂಟ್‌ಗಳು ಮತ್ತು ಮೂಲಸೌಕರ್ಯ ಯೋಜನೆಗಳು ವೇಗವಾಗಿ ವಿಸ್ತರಣೆಯಾಗುತ್ತಿವೆ.

ಇದನ್ನೂ ಓದಿ: ಕ್ರೆಡಿಟ್ ಕಾರ್ಡ್ ಇದ್ದೂ ಅದನ್ನು ಬಳಸದೇ ಇದ್ದರೆ ಏನಾಗುತ್ತೆ? ಕ್ರೆಡಿಟ್ ಸ್ಕೋರ್ ಕಡಿಮೆ ಆಗುತ್ತಾ?

ವರದಿಯ ಮಾನದಂಡಗಳು ಏನಾಗಿದ್ದವು?

ಈ ಜಾಗತಿಕ ಸೂಚ್ಯಂಕವನ್ನು ತಯಾರಿಸಲು ಸಾವಿಲ್ಸ್ ಸಂಸ್ಥೆಯು 2035ರವರೆಗಿನ ನಗರದ ಜಿಡಿಪಿ (GDP) ಬೆಳವಣಿಗೆ, ವೈಯಕ್ತಿಕ ಆದಾಯದ ವೃದ್ಧಿ, ಯುವ ಉದ್ಯೋಗಿಗಳ ಅನುಪಾತ (Population dependency ratio), ನಗರಕ್ಕೆ ಆಗುವ ವಲಸೆ ಮತ್ತು ಶ್ರೀಮಂತ ಕುಟುಂಬಗಳ ಬೆಳವಣಿಗೆಯನ್ನು ಆಧಾರವಾಗಿಟ್ಟುಕೊಂಡು ಸಮೀಕ್ಷೆ ನಡೆಸಿತ್ತು.

ಒಟ್ಟಾರೆ, ಮುಂದಿನ ದಿನಗಳಲ್ಲಿ ಕೇವಲ ತಂತ್ರಜ್ಞಾನದಲ್ಲಿ ಮಾತ್ರವಲ್ಲದೆ, ಆರ್ಥಿಕತೆ, ನಗರೀಕರಣ ಮತ್ತು ಹೂಡಿಕೆಯಲ್ಲೂ ಬೆಂಗಳೂರು ಇಡೀ ಜಗತ್ತಿಗೆ ‘ಬಾಸ್’ ಆಗಿ ನಿಲ್ಲಲಿದೆ ಎಂಬುದನ್ನು ಈ ವರದಿ ಸಾಬೀತುಪಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Bangalore Rain: ಬೆಂಗಳೂರಿನಲ್ಲಿ ಮತ್ತೆ ವರುಣನ ಆಗಮನ: ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆ ಶುರು! – Kannada News | Bangalore Rains Return: Weather Forecast, Safety Tips for Low Lying Areas and Commuters

ಬೆಂಗಳೂರು, ಮೇ.5: ನಗರದಲ್ಲಿ ಭಾರೀ ಮಳೆ ಆರಂಭವಾಗಿದೆ, ಮಧ್ಯಾಹ್ನದಿಂದ ಭಾರೀ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಇದೀಗ ಬೆಂಗಳೂರಿನ ಹಲವು ಕಡೆ ಮಳೆ ಶುರುವಾಗಿದೆ. ಒಂದು ವಾರದ ಹಿಂದೆ ಮಳೆಯಿಂದ ಬೆಂಗಳೂರಿನಲ್ಲಿ ಭಾರೀ ದೊಡ್ಡಮಟ್ಟದ ಅನಾಹುತಗಳು ಸೃಷ್ಟಿಯಾಗಿತ್ತು. ಈ ರಣ ಮಳೆಗೆ 10 ಜನ ಸಾವನ್ನಪ್ಪಿದ್ದರು. ಇದೀಗ ಹವಾಮಾನ ಇಲಾಖೆ ತಿಳಿಸಿರುವಂತೆ ಬೆಂಗಳೂರಿನ ಹಲವು ಭಾಗದಲ್ಲಿ ಮಳೆ ಬರುತ್ತಿದೆ.

ಮಧ್ಯಾಹ್ನದಿಂದಲೇ ದಟ್ಟವಾದ ಮೋಡಗಳು ಆವರಿಸಿದ್ದು, ಸದ್ಯ ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನ ಹಲವು ಭಾಗಗಳಲ್ಲಿ ಮುಂದಿನ ಕೆಲ ಗಂಟೆಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಗ್ಗು ಪ್ರದೇಶದ ನಿವಾಸಿಗಳು ಮತ್ತು ವಾಹನ ಸವಾರರು ಜಾಗರೂಕರಾಗಿರಲು ಸೂಚಿಸಲಾಗಿದೆ. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನಗರದಲ್ಲಿ ಗರಿಷ್ಠ ತಾಪಮಾನವು ಸುಮಾರು 35°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ. ಬೆಂಗಳೂರು ನಗರ (Urban) ಮತ್ತು ಬೆಂಗಳೂರು ಗ್ರಾಮಾಂತರ (Rural) ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಬರುತ್ತಿದೆ ಎಂದು ಹೇಳಲಾಗಿದೆ. ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೇ 8 ರವರೆಗೆ ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮಳೆಯು ಸದ್ಯಕ್ಕೆ ಅಲ್ಲಲ್ಲಿ ಚದುರಿದಂತೆ ಇರುವ ನಿರೀಕ್ಷೆ ಇರುವುದರಿಂದ, ಸಂಚಾರ ದಟ್ಟಣೆ ಹಾಗೂ ತಗ್ಗು ಪ್ರದೇಶಗಳಲ್ಲಿ ಜಾಗರೂಕರಾಗಿರುವುದು ಉತ್ತಮ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯಾವ ಕಾರಣಕ್ಕೂ ನಾನು ರಾಜೀನಾಮೆ ನೀಡೋದಿಲ್ಲ; ಹೊಸ ಬಾಂಬ್ ಸಿಡಿಸಿದ ಸಿಎಂ ಮಮತಾ ಬ್ಯಾನರ್ಜಿ – Kannada News | We Have not lost Election, I will Not Resign; Mamata Banerjee says in West Bengal

ಕೊಲ್ಕತ್ತಾ, ಮೇ 5: ಯಾವುದೇ ರಾಜ್ಯದಲ್ಲೇ ಆದರೂ ಚುನಾವಣೆ ನಡೆದು ಫಲಿತಾಂಶ ಪ್ರಕಟವಾದ ನಂತರ ಆ ರಾಜ್ಯದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು. ಆದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯವಾಗಿ ಸೋಲನ್ನು ಅನುಭವಿಸಿ ಬಿಜೆಪಿ ಭಾರೀ ಬಹುಮತದ ಗೆಲುವು ಸಾಧಿಸಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮಮತಾ ಬ್ಯಾನರ್ಜಿ ಒಪ್ಪುತ್ತಿಲ್ಲ! ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

Published On – 4:55 pm, Tue, 5 May 26

Source link

ಕಾಸರಗೋಡಿನಲ್ಲಿ ಅಚ್ಚರಿಯ ಘಟನೆ: ಚಿನ್ನದ ಉಂಗುರ ಕದ್ದ ಹಾವು; ಡ್ರಾಯರ್ ತೆರೆದ ಮಕ್ಕಳಿಗೆ ಕಾದಿತ್ತು ಬಿಗ್ ಶಾಕ್! – Kannada News | Viral: Snake Found in Kasaragod Drawer with Gold Ring, Rescued Safely

ಕೇರೆ ಹಾವಿನ ಮೈಗೆ ಸಿಲುಕಿತು ಚಿನ್ನದ ಉಂಗುರ

ಕಾಸರಗೋಡು, ಮೇ.5: ಪ್ರಕೃತಿ ಯಾವಾಗ ಎಂತಹ ಅಚ್ಚರಿ ನೀಡುತ್ತದೆ ಎಂದು ಹೇಳಲಾಗದು. ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ರವಿ ಎಂಬುವವರ ಮನೆಯಲ್ಲಿ ಇಂತಹದ್ದೇ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ನಡೆದಿದ್ದು, ಮನೆಯ ಡ್ರಾಯರ್ ಒಳಗೆ ಸೇರಿಕೊಂಡಿದ್ದ ಹಾವಿನ ಮೈಗೆ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿದೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಅಷ್ಟಕ್ಕೂ ರವಿ ಅವರ ಮನೆಯಲ್ಲಿ ನಡೆದಿದ್ದೇನು? ಎಂಬ ಬಗ್ಗೆ ವಿವರವಾದ ಮಾಹಿತಿ ಇಲ್ಲಿದೆ ನೋಡಿ. ರವಿ ಅವರ ಮಕ್ಕಳು ಮನೆಯೊಳಗೆ ಆಟವಾಡುತ್ತಾ ಟೇಬಲ್‌ನ ಡ್ರಾಯರ್ ತೆರೆದಾಗ ಅದರೊಳಗೆ ದೊಡ್ಡ ಕೇರೆ ಹಾವೊಂದು ಸುರುಳಿ ಸುತ್ತಿಕೊಂಡು ಕುಳಿತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ.

ಹಾವನ್ನು ಗಮನಿಸಿದಾಗ ಅದರ ದೇಹದ ಮಧ್ಯಭಾಗದಲ್ಲಿ ಚಿನ್ನದ ಉಂಗುರವೊಂದು ಬಿಗಿಯಾಗಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ಬಹುಶಃ ಆಹಾರದ ಹುಡುಕಾಟದಲ್ಲಿ ಡ್ರಾಯರ್‌ನ ಸಣ್ಣ ಸೀಳಿನ ಮೂಲಕ ಒಳಗೆ ಹೋಗುವಾಗ ಡ್ರಾಯರ್‌ನಲ್ಲಿದ್ದ ಉಂಗುರ ಹಾವಿನ ಮೈಗೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ!

ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಬಂದ ರಕ್ಷಣಾ ಸಿಬ್ಬಂದಿ ಅತ್ಯಂತ ನಾಜೂಕಿನಿಂದ ಹಾವನ್ನು ಹೊರತೆಗೆದು, ಅದರ ಮೈಗೆ ಯಾವುದೇ ಗಾಯವಾಗದಂತೆ ಚಿನ್ನದ ಉಂಗುರವನ್ನು ಕತ್ತರಿಸಿ ತೆಗೆಯುವಲ್ಲಿ ಯಶಸ್ವಿಯಾದರು. ನಂತರ ಹಾವನ್ನು ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಯಿತು. ಮಕ್ಕಳು ಹಾವನ್ನು ಮುಟ್ಟಲು ಹೋಗದ ಕಾರಣ ದೊಡ್ಡ ಅಪಾಯವೊಂದು ತಪ್ಪಿದಂತಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಆಘಾತ: ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ, ವಧುವಿಗೆಂದು ತಂದಿದ್ದ ಆಭರಣ ಕದ್ದ ಕಳ್ಳರು – Kannada News | Nelamangala Wedding Shock: Bridal Jewelry Stolen While Family Away for Invites

ಬಂಗಾರದ ಆಭರಣಗಳ ಕಳವುImage Credit source: Tv9 Kannada

ನೆಲಮಂಗಲ, ಮೇ 05: ಮಗಳ ಮದುವೆ ತಯಾರಿಯಲ್ಲಿದ್ದ ಕುಟುಂಬವೊಂದು ಆಮಂತ್ರಣಪತ್ರ ಕೊಡಲು ಪರವೂರಿಗೆ ಹೋಗಿಬರುವುದರ ಒಳಗೆ ವಿವಾಹಕ್ಕೆಂದು ಮಾಡಿಸಿಟ್ಟ ಮನೆಯಲ್ಲಿದ್ದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನೆಲಮಂಗಲ ಬಳಿಯ ದಾಸನಪುರದ ಮುನೇಶ್ವರ ಬಡಾವಣೆಯಲ್ಲಿ ನಡೆದಿದೆ. ಶಿವ ಮತ್ತು ಲೋಕೇಶ್ವರಿ ಎಂಬುವವರ ಮನೆಯ ಡೋರ್ ಒಡೆದು ಒಳ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ, ನಗದು ದೋಚಿ ಎಸ್ಕೇಪ್​​ ಆಗಿದ್ದಾರೆ.

  • ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಬಿಗ್​​ ಶಾಕ್​​
  • ಆಮಂತ್ರಣ ಕೊಡಲು ಹೋದ ವೇಳೆ ಮನೆಗೆ ಕನ್ನ
  • ವಧುವಿಗೆಂದು ತಂದಿದ್ದ ಬಂಗಾರದ ಆಭರಣಗಳು ಕಳವು

ತಮಿಳುನಾಡಿನ ಮೂಲವರಾದ ಲೋಕೇಶ್ವರಿ ಹಾಗೂ ಶಿವ ಎಂಬವರು ಸಾಕಷ್ಟು ವರ್ಷದಿಂದ ನೆಲಮಂಗಲದಲ್ಲಿ ನೆಲೆಸಿ ತಮ್ಮ ಜೀವನ ಕಟ್ಟುಕೊಂಡಿದ್ದರು. ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದ ಇವರು ತಮ್ಮ ಮೂರನೇ ಮಗಳಾದ ಶಂಕರಿ ಮದುವೆ ತಯಾರಿಯಲ್ಲಿದ್ದರು. ಈ ಹಿನ್ನೆಲೆ ಕೂಡಿಟ್ಟ ಹಣದ ಜೊತೆಗೆ ಸಾಲ ಮಾಡಿ ಮಗಳಿಗೆ ಚಿನ್ನಾಭರಣ ತಂದಿದ್ದರು. ಈ ನಡುವೆ ಮದುವೆ ಆಮಂತ್ರಣ ಪತ್ರಿಕೆಯನ್ನ ವರನ ಮನೆಯವರಿಗೆ ಕೊಡಲೆಂದು ತಮಿಳುನಾಡಿಗೆ ಹೋಗಿ ಬರುವುದರ ಒಳಗೆ ಅವು ಕಳ್ಳರಪಾಲಾಗಿವೆ. ವಧುವಿಗೆಂದು ಖರೀದಿಸಿದ್ದ ನೆಕ್ಲೆಸ್, ಕಿವಿ ಓಲೆ, ಸೇರಿದಂತೆ 60 ಗ್ರಾಂಗಳಿಗೂ ಅಧಿಕ ಒಡವೆ ಮನೆಯಲ್ಲಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

ಮಗಳ ಮದುವೆಯನ್ನು ಸಡಗರದಿಂದ ಮಾಡಬೇಕೆಂಬ ಆಸೆಯಲ್ಲಿದ್ದ ಕುಟುಂಬಕ್ಕೆ ಈ ಘಟನೆ ಭಾರಿ ಆಘಾತ ತಂದಿದ್ದು, ವಿವಾಹ ನೆರವೇರಿಸೋದು ಹೇಗೆಂಬ ಆತಂಕ ಕಾಡತೊಡಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೀಘ್ರ ಕಳ್ಳರನ್ನು ಪತ್ತೆ ಮಾಡಿ ತಮ್ಮ ಬಂಗಾರ ಮರಳಿ ಸಿಗುವಂತೆ ಮಾಡಿ ಎಂದು ಕುಟುಂಬ ಅಂಗಲಾಚಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕೂಡ ಬಲೆ ಬೀಸಿದ್ದಾರೆ. ಘಟನೆಯಿಂದ ಸ್ಥಳೀಯರೂ ಬೆಚ್ಚಿಬಿದ್ದಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಆತಂಕ ಮನೆ ಮಾಡಿದೆ.

ವರದಿ: ಮಂಜುನಾಥ್​​, ಟಿವಿ9, ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸಚಿವ ಜಮೀರ್ ಮನೆಯಲ್ಲಿ 1.13 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ – Kannada News | Shivajinagar Police Arrests Two Accused for theft Gold In Minister Zameer ahmed khan House at Bengaluru

ಬೆಂಗಳೂರು(ಮೇ 05): ಸಚಿವ ಜಮೀರ್ ಅಹಮದ್ ಖಾನ್ (Zameer ahmed khan )ಅವರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರನ್ನು ಶಿವಾಜಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೈಯದ್ ಅಮೀರ್, ಅಮಿರ್ ಅಹ್ಮದ್ ಬಂಧಿತ ಆರೋಪಿಗಳು. ಕಂಟೋನ್ಮೆಂಟ್ ಬಳಿ ಇರುವ ಸಚಿವ ಜಮೀರ್ ಮನೆಯಲ್ಲಿ ಕಳೆದೊಂದು ವರ್ಷದಿಂದ ಹಂತ ಹಂತವಾಗಿ 1.13 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದಿದ್ದರು. ಬಳಿಕ ಜಮೀರ್ ಅಹಮ್ಮದ್ ಅವರ ತಾಯಿ ನೀಡಿದ ದೂರಿನ ಮೇರೆಗೆ ಶಿವಾಜಿನಗರ ಪೊಲೀಸರು ತನಿಖೆಯ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಟ್ರಾವೆಲ್ಸ್ ಬ್ಯುಸಿನೆಸ್​ನಲ್ಲಿ ಲಾಸ್ ಆಗಿದ್ದಕ್ಕೆ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಕಳ್ಳತನ ಮಾಡಿದ್ದ 1.13 ಕೋಟಿ ಮೌಲ್ಯದ ಚಿನ್ನಾಭರಣಗಳನ್ನ ಅಡವಿಟ್ಟು ಹಣ ಪಡೆದಿದ್ದು,
ಆ ಹಣ ರಿಯಲ್ ಎಸ್ಟೇಟ್​ನಲ್ಲಿ ಹೂಡಿಕೆ ಮಾಡಿ ಲಾಭಕ್ಕೆ ಪ್ಲ್ಯಾನ್​ ಮಾಡಿದ್ದರು. ಆದ್ರೆ, ಕಾಲ್ ಮಾಡಿದಾಗ ರಿಸೀವ್ ಮಾಡದಿದ್ದಾಗ ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಿಗೆ ಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಆಟೋ ಚಾಲಕನ ರೌಡಿಸಂ: ಪೊಲೀಸ್ ಮುಂದೆಯೇ ಆಟೋ ಗ್ಲಾಸ್ ಹೊಡೆದು ಪುಂಡಾಟ! – Kannada News | Silicon City Traffic Violence: Auto Drivers’ Clash Sparks Fear and Outrage

ಬೆಂಗಳೂರು, ಮೇ.5: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಸಾಮಾನ್ಯ ಜನರ ಮೇಲೆ ಮಾತ್ರವಲ್ಲದೆ, ಈಗ ಆಟೋ ಚಾಲಕರು ತಮ್ಮ ಸಹೋದ್ಯೋಗಿಗಳ ಮೇಲೆಯೇ ಗೂಂಡಾ ವರ್ತನೆ ತೋರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಟೋ ಟಚ್ ಆಗಿದೆ ಎಂಬ ಸಣ್ಣ ಕಾರಣಕ್ಕೆ ಶುರುವಾದ ಗಲಾಟೆ, ಆಟೋ ಗ್ಲಾಸ್ ಹೊಡೆಯುವ ಮಟ್ಟಕ್ಕೆ ತಲುಪಿದೆ. ರಸ್ತೆಯಲ್ಲಿ ಚಲಿಸುವಾಗ ಆಟೋ ಟಚ್ ಆಗಿದೆ ಎಂದು ಆರೋಪಿಸಿ ಮತ್ತೊಬ್ಬ ಆಟೋ ಚಾಲಕನ ಮೇಲೆ ಗೂಂಡಾ ವರ್ತನೆ ತೋರಲಾಗಿದೆ. ಇಲ್ಲಿ ಇನ್ನೊಂದು ಅಚ್ಚರಿ ಎಂದರೆ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಇದ್ದರೂ ಯಾವುದಕ್ಕೂ ಕ್ಯಾರೆ ಎನ್ನದ ಆಟೋ ಚಾಲಕ, ಆಟೋವನ್ನು ತಡೆದು ರೌಡಿಸಂ ಪ್ರದರ್ಶಿಸಿದ್ದಾನೆ. ಸಿಟ್ಟಿನ ಭರದಲ್ಲಿ ಎದುರಾಳಿ ಆಟೋದ ಗ್ಲಾಸ್ ಅನ್ನು ಹೊಡೆದು ಹಾಕಿ, ಸ್ಥಳದಿಂದ ಆರೋಪಿ ಚಾಲಕ ಎಸ್ಕೇಪ್ ಆಗಿದ್ದಾನೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಆಟೋ ಚಾಲಕರ ಇಂತಹ ವರ್ತನೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ಸಂಚಾರ ವ್ಯವಸ್ಥೆಯಲ್ಲಿ ಇಂತಹ ಪುಂಡಾಟಿಕೆಗಳು ಹೆಚ್ಚಾಗುತ್ತಿರುವುದು ಪ್ರಯಾಣಿಕರಲ್ಲಿ ಭಯವನ್ನು ಉಂಟುಮಾಡುತ್ತಿದೆ. ಪೊಲೀಸರು ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ವರದಿ: ನಟರಾಜ್​​​ ಮೆಟ್ರೋ 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಹಾರ್ದಿಕ್ ಪಾಂಡ್ಯ ಸೇಫ್: ಇಬ್ಬರಿಗೆ ಖಡಕ್ ಎಚ್ಚರಿಕೆ! – Kannada News | Hardik Pandya Stays as MI Captain; SKY and Tilak Varma on Thin Ice!

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI), 2026ರ ಆವೃತ್ತಿಯಲ್ಲಿ ತನ್ನ ಬಲಿಷ್ಠ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಚಾಂಪಿಯನ್ ಪಟ್ಟಕ್ಕೇರುವ ನೆಚ್ಚಿನ ತಂಡವಾಗಿ ಕಣಕ್ಕಿಳಿದಿದ್ದ ಮುಂಬೈ, ಈ ಸೀಸನ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ಜಯ ದಾಖಲಿಸಿರುವ ತಂಡವು ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದ್ದರೂ, ಮ್ಯಾನೇಜ್‌ಮೆಂಟ್ ಮಾತ್ರ ನಾಯಕತ್ವದ ಬದಲಾವಣೆಗೆ ಮುಂದಾಗದೆ ಹಾರ್ದಿಕ್ ಪಾಂಡ್ಯ ಅವರ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್​ ಕಳಪೆ ಪ್ರದರ್ಶನ ನೀಡುತ್ತಿದ್ದರೂ, ಅವರನ್ನು ಬದಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅಲ್ಲದೆ ಪಾಂಡ್ಯ ಅವರನ್ನೇ ನಾಯಕನಾಗಿ ಮುಂದುವರಿಸಲು ಎಂಐ ಮ್ಯಾನೇಜ್ಮೆಂಟ್ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಪಾಂಡ್ಯ ಮೇಲಿನ ವಿಶ್ವಾಸ:

ಪ್ರಸಕ್ತ ಸೀಸನ್‌ನಲ್ಲಿ ಮುಂಬೈ ತಂಡ ಆಡಿದ 10 ಪಂದ್ಯಗಳಲ್ಲಿ ಕೇವಲ 3ರಲ್ಲಿ ಜಯಗಳಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಪ್ರದರ್ಶನ ಮತ್ತು ನಾಯಕತ್ವದ ನಿರ್ಧಾರಗಳು ಟೀಕೆಗೆ ಗುರಿಯಾಗಿದ್ದರೂ, ಫ್ರಾಂಚೈಸಿಯು ಈ ಹಂತದಲ್ಲಿ ನಾಯಕತ್ವ ಬದಲಾವಣೆಗೆ ಮುಂದಾಗುತ್ತಿಲ್ಲ. ಹಾರ್ದಿಕ್ ಪಾಂಡ್ಯ ಅವರ ಬೆನ್ನುನೋವಿನ ಸಮಸ್ಯೆಯ ನಡುವೆಯೂ ಅವರ ಮೇಲೆಯೇ ಭರವಸೆ ಇಡಲಾಗಿದೆ.

ಇಬ್ಬರು ಆಟಗಾರರಿಗೆ ಎಚ್ಚರಿಕೆ:

ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನಕ್ಕೆ ಕೇವಲ ನಾಯಕನನ್ನೇ ಹೊಣೆ ಮಾಡದ ಮ್ಯಾನೇಜ್‌ಮೆಂಟ್, ಸ್ಟಾರ್ ಬ್ಯಾಟರ್‌ಗಳಾದ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಅವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

  • ಸೂರ್ಯಕುಮಾರ್ ಯಾದವ್: ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ರನ್ ಗಳಿಸಲು ವಿಫಲರಾಗಿರುವ ಸೂರ್ಯಕುಮಾರ್ ಅವರಿಗೆ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್​ ಕಡೆಯಿಂದ ಎಚ್ಚರಿಕೆ ಸಿಕ್ಕಿದೆ. ಏಕೆಂದರೆ ಈ ಬಾರಿ ಪ್ರತಿ ಪಂದ್ಯದಲ್ಲೂ ಕಣಕ್ಕಿಳಿದಿರುವ ಅವರು ಕೇವಲ 19.50 ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಪಾಂಡ್ಯ ಅನುಪಸ್ಥಿತಿಯಲ್ಲಿ ಅವರು ತಂಡವನ್ನು ಮುನ್ನಡೆಸಿದ್ದರೂ, ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ.
  • ತಿಲಕ್ ವರ್ಮಾ: ಯುವ ಪ್ರತಿಭಾವಂತ ಎಡಗೈ ದಾಂಡಿಗ ತಿಲಕ್ ವರ್ಮಾ ಈ ಬಾರಿ ಮುಂಬೈ ಇಂಡಿಯನ್ಸ್ ಪರ ಶತಕ ಸಿಡಿಸಿದ್ದರು. ಈ ಶತಕದ ಹೊರತಾಗಿಯೂ ಅವರು ಕಳೆದ 10 ಪಂದ್ಯಗಳಿಂದ ಕಲೆಹಾಕಿರುವ ಒಟ್ಟು ಸ್ಕೋರ್ ಕೇವಲ 204 ರನ್​ಗಳು. ಹೀಗಾಗಿಯೇ ತಿಲಕ್ ವರ್ಮಾ ಕೂಡ ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇತ್ತ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿರುವ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾರ ಕಳಪೆ ಪ್ರದರ್ಶನವು ಮುಂಬೈ ಇಂಡಿಯನ್ಸ್ ಪಾಲಿಗೆ ಹೊರೆಯಾಗಿ ಮಾರ್ಪಟ್ಟಿದೆ. ಹೀಗಾಗಿಯೇ ಇದೀಗ ಇಬ್ಬರು ಆಟಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಮುಂದಿನ ಪಂದ್ಯದಲ್ಲೂ ಕಳಪೆ ಪ್ರದರ್ಶನ ನೀಡಿದರೆ ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆಯಿದೆ.

ಪ್ಲೇ-ಆಫ್ ಕನಸು ಜೀವಂತವೇ?

ಮುಂಬೈ ಇಂಡಿಯನ್ಸ್ ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಬೇಕಾದರೆ ಮುಂದಿನ ನಾಲ್ಕು ಪಂದ್ಯಗಳಲ್ಲಿ ಕಡ್ಡಾಯವಾಗಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಕೇವಲ ಗೆಲುವು ಮಾತ್ರವಲ್ಲದೆ, ಇತರೆ ತಂಡಗಳ ಫಲಿತಾಂಶದ ಮೇಲೆಯೂ ಮುಂಬೈ ಭವಿಷ್ಯ ಅಡಗಿದೆ.

ಇದನ್ನೂ ಓದಿ: RCB ಅಭಿಮಾನಿಗಳಿಗೆ ಬಿಸಿಸಿಐ ಕಡೆಯಿಂದ ಶೀಘ್ರದಲ್ಲೇ ಕಹಿ ಸುದ್ದಿ!

ಒಟ್ಟಾರೆಯಾಗಿ ಹೇಳುವುದಾದರೆ, ಮುಂಬೈ ಇಂಡಿಯನ್ಸ್ ತಂಡವು ಈಗ ಮಾಡು ಇಲ್ಲವೇ ಮಡಿ ಎಂಬಂತಹ ಪರಿಸ್ಥಿತಿಯಲ್ಲಿದೆ. ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ಮೇಲೆ ಮ್ಯಾನೇಜ್‌ಮೆಂಟ್ ಅಚಲ ವಿಶ್ವಾಸ ತೋರಿದ್ದರೂ, ಆ ವಿಶ್ವಾಸವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಈಗ ಆಟಗಾರರ ಮೇಲಿದೆ. ಅಲ್ಲದೆ ತಮ್ಮ ವೈಯಕ್ತಿಕ ವೈಫಲ್ಯಗಳನ್ನು ಬದಿಗಿಟ್ಟು, ತಂಡದ ಹಿತದೃಷ್ಟಿಯಿಂದ ಎಲ್ಲರೂ ಮುಂದಿನ ಪಂದ್ಯಗಳಲ್ಲಿ ಜವಾಬ್ದಾರಿಯುತ ಆಟವಾಡಬೇಕಿದೆ. ಈ ಆಟದೊಂದಿಗೆ ಮುಂಬೈ ಪಡೆ ಪ್ಲೇಆಫ್​ಗೇರಲಿದೆಯಾ ಎಂಬುದೇ ಈಗ ಕುತೂಹಲ.

Source link

ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್ – Kannada News | Prohibitory Orders Imposed at Harihar Panchamasali Mutt; Gates Shut

ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್‌ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಈ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿ ಶಾಂತಿಯುತವಾಗುವವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version