ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies
ಬೆಂಗಳೂರು, ಜೂನ್ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ…