Headlines

ವಿಜಯ್​ನ ಪೋರ್ಟ್​ಫೋಲಿಯೋ ಇಂಟರೆಸ್ಟಿಂಗ್; ಹೂಡಿಕೆಯಲ್ಲಿ ಸಂಪ್ರದಾಯವಾದಿ; ಎಲ್ಲೆಲ್ಲಿದೆ ಅವರ 624 ಕೋಟಿ ರೂ ಹಣ? – Kannada News | Actor turned politician Vijay’s Wealth Revealed: Rs 624 Crore Assets & Traditional Investments

ಚೆನ್ನೈ, ಮೇ 5: ನಟ ವಿಜಯ್ (Vijay) ತಮಿಳುನಾಡು ರಾಜಕೀಯವನ್ನೇ ಅಲುಗಾಡಿಸಿಬಿಟ್ಟಿದ್ದಾರೆ. ವಿಧಾನಸಭೆಯಲ್ಲಿ ಇಡೀ ರಾಜ್ಯವೇ ಸಂಚಲನಗೊಳ್ಳುವಂತೆ ಅವರ ಟಿವಿಕೆ ಪಕ್ಷ (TVK- Tamilaga Vetri Kazhagam) ದಿಗ್ವಿಜಯ ಸಾಧಿಸಿದೆ. ಏಕವ್ಯಕ್ತಿ ಈ ಮಹಾನ್ ಕ್ರಾಂತಿ ಮಾಡಿರುವುದು ಸಾಮಾನ್ಯದ ಸಂಗತಿಯಲ್ಲ. ಅಂತೆಯೇ, ಬಹಳ ಜನರು ವಿಜಯ್ ಅವರ ಹಣಕಾಸು ಶಕ್ತಿ ಮತ್ತು ಹಿನ್ನೆಲೆ ಬಗ್ಗೆ ಮಾಹಿತಿ ತಿಳಿಯಲು ಆಸಕ್ತರಾಗಿದ್ದಾರೆ. ಅವರ ಆಸ್ತಿಪಾಸ್ತಿ, ಹೂಡಿಕೆಯ ವಿವರ ನಿಜಕ್ಕೂ ಕುತೂಹಲಕಾರಿ ಎನಿಸಿದೆ. ಹೊಸ ತಲೆಮಾರಿನ ಜನರನ್ನು ಮತಪೆಟ್ಟಿಗೆಗೆ ಆಕರ್ಷಿಸಿದ ವಿಜಯ್…

Read More

ಬಂಗಾಳದಲ್ಲಿ ಬಿಜೆಪಿ ಗೆಲುವಿನಿಂದ ದುರ್ಗಾ ದೇವಸ್ಥಾನಕ್ಕೂ ಸಿಕ್ಕಿತು ಮುಕ್ತಿ! – Kannada News | West Bengal Asansol Durga temple shut for several years reopened after BJPs huge win

ಕೊಲ್ಕತ್ತಾ, ಮೇ 5: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಯಾರೂ ಊಹಿಸದ ರೀತಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದೆ. ಭಾರೀ ಬಹುಮತದಿಂದ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಗೆಲುವು ಯಾವೆಲ್ಲ ರೀತಿಯ ಬದಲಾವಣೆಗಳನ್ನು ತರಬಹುದು ಎಂಬ ಕುತೂಹಲ ಇಡೀ ದೇಶದ ಜನರಲ್ಲಿ ಇದೆ. ಏಕೆಂದರೆ, ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಒಂದು ಬಾರಿಯೂ ಬಿಜೆಪಿ ಅಧಿಕಾರ ಪಡೆದಿರಲಿಲ್ಲ. ಬಿಜೆಪಿ ಗೆದ್ದ ಮರುದಿನವೇ ಹಲವಾರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಅಸನ್ಸೋಲ್ ದುರ್ಗಾ ದೇವಸ್ಥಾನದ ಬಾಗಿಲನ್ನು ತೆರೆಯಲಾಗಿದೆ. ಪಶ್ಚಿಮ ಬಂಗಾಳದ…

Read More

ಪೋಕ್ಸೋ ಕೇಸ್​​ ಆರೋಪಿಯ ಬರ್ಬರ ಕೊಲೆ: ಶವ ಸಿಕ್ಕಿದ್ದು ರಾಜಕಾಲುವೆಯಲ್ಲಿ! – Kannada News | Revenge Killing in Bengaluru: Girl’s Father, 3 Arrested in POCSO Accused Murder

ಬೆಂಗಳೂರು, ಮೇ 05: ಪೋಕ್ಸೋ ಕೇಸ್​​ನ ಆರೋಪಿಯನ್ನು ಬಾಲಕಿಯ ತಂದೆಯೇ ಕೊಲೆ ಮಾಡಿಸಿರುವ ಆಘಾತಕಾರಿ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೂಲದ ರಮೇಶ್ ಶ್ರೀಶೈಲ ಪಟ್ಟದಕಲ್ಮಠ (36) ಮೃತ ವ್ಯಕ್ತಿಯಾಗಿದ್ದು, ಕೊಲೆ ಬಳಿಕ ಆರೋಪಿಗಳು ಶವವನ್ನು ಯಲಹಂಕ ಸಮೀಪದ ಅಲ್ಲಾಳಸಂದ್ರ ರಾಜಕಾಲುವೆಯಲ್ಲಿ ಎಸೆದಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಕ್ಸೋ ಪ್ರಕರಣದ ಆರೋಪಿಯ ಭೀಕರ ಕೊಲೆ ಬಾಲಕಿ ತಂದೆ ಮೇಲೆಯೇ ಕೊಲೆ ಮಾಡಿಸಿದ ಆರೋಪ ಹತ್ಯೆ ಬಳಿಕ ಶವವನ್ನು…

Read More

TV9 Kannada News Live: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ – Kannada News | TV9 Kannada News Live: Muslim Votes shifts From Congress in Dvanagere, Vijay’s Alliance curiosity in Tamilnadu

ಬೆಂಗಳೂರು, ಮೇ 05: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಎಲೆಕ್ಷನ್​​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಸಮರ್ಥ್​​ ಶಾಮನೂರು ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿರೋದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತಿದೆ ಎಂದು ವಿಶ್ಲೇಷಿಸಲಾಗಿದೆ. ಎಸ್​​ಡಿಪಿಐ ಅಭ್ಯರ್ಥಿ ಸೇರಿದಂತೆ ಚುನಾವಣೆಗೆ ಸ್ಪರ್ಧಿಸಿದ್ದ ಮುಸ್ಲಿಂ ಸಮಉದಾಯಕ್ಕೆ ಸೇರಿರುವ ಕ್ಯಾಂಡಿಡೇಟ್​​ಗಳು 20 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದ ಹಾನಿಯನ್ನುಂಟು…

Read More

ಎಸ್​ಐಆರ್​​ನಲ್ಲಿ ಅತಿ ಹೆಚ್ಚು ಮತದಾರರು ಡಿಲೀಟ್ ಆಗಿದ್ದ ಕ್ಷೇತ್ರಗಳಲ್ಲಿ ಟಿಎಂಸಿ ಪ್ರದರ್ಶನ ಹೇಗಿತ್ತು? – Kannada News | SIR Impact in West Bengal How TMC performed where voter deletions were highest

ಕೊಲ್ಕತ್ತಾ, ಮೇ 5: ಎಸ್​ಐಆರ್​​ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಮರ ಸಾರಿತ್ತು. ಇದಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್​ನಲ್ಲಿ ತಾವೇ ವಾದವನ್ನೂ ಮಾಡಿಕೊಂಡು ಬಂಗಾಳದಲ್ಲಿ ಎಸ್​ಐಆರ್​ (SIR) ರದ್ದುಗೊಳಿಸಬೇಕೆಂದು ಪಟ್ಟು ಹಿಡಿದಿದ್ದರು. ಆದರೂ ಎಸ್​ಐಆರ್​​ ಪ್ರಕ್ರಿಯೆಯನ್ನು ರದ್ದುಗೊಳಿಸಿರಲಿಲ್ಲ. ಎಸ್​ಐಆರ್​​ನಿಂದಾಗಿ ಲಕ್ಷಾಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಟಿಎಂಸಿ ಹೆಚ್ಚು ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಆರೋಪಿಸಿದ್ದರು. ಹಾಗಾದರೆ, ಪಶ್ಚಿಮ ಬಂಗಾಳದಲ್ಲಿ ನಡೆದ…

Read More

ತಮಿಳುನಾಡಿನಲ್ಲಿ ಅಧಿಕಾರ ಹಸ್ತಾಂತರದ ಪರ್ವ: ಸಚಿವರ ಕೊಠಡಿಗಳು ಖಾಲಿ ಖಾಲಿ, ಬಿರುಸಿನ ಚಟುವಟಿಕೆ – Kannada News | Tamil Nadu Power Transition: Stalin Resigns, Secretariat Buzzes for New Govt

ಚೆನ್ನೈ, ಮೇ 05: ತಮಿಳುನಾಡು(Tamil Nadu) ರಾಜಕೀಯದಲ್ಲಿ ಒಂದು ಯುಗಾಂತ್ಯವಾಗಿದ್ದು, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್  ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಚೆನ್ನೈನ ಐತಿಹಾಸಿಕ ಫೋರ್ಟ್ ಸೇಂಟ್ ಜಾರ್ಜ್ ಸಚಿವಾಲಯದಲ್ಲಿ ಹೊಸ ಬದಲಾವಣೆಯ ಗಾಳಿ ಬೀಸುತ್ತಿದೆ. ಸ್ಟಾಲಿನ್ ಅವರ ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ, ಸಚಿವಾಲಯದ ಸಿಬ್ಬಂದಿಗಳು ಸಚಿವರ ಕೊಠಡಿಗಳನ್ನು ಖಾಲಿ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಸಚಿವರ ಕಚೇರಿಗಳನ್ನು ಅಲಂಕರಿಸಿದ್ದ ಸ್ಟಾಲಿನ್ ಹಾಗೂ ಇತರ ನಾಯಕರ ಭಾವಚಿತ್ರಗಳನ್ನು ಅಧಿಕಾರಿಗಳು ಗೌರವಪೂರ್ವಕವಾಗಿ…

Read More

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಹೊಸ ಹಾದಿ; ಮಂಜು ಮುಸುಕಿದರೂ ಇನ್ನು ವಿಮಾನ ಹಾರಾಟ ಫುಲ್ ಸೇಫ್! – Kannada News | KIA Airport Gets Smarter: New AI Safety System Enhances Airside Operations

ವಿಮಾನ ನಿಲ್ದಾಣ ಸುರಕ್ಷತೆ, AI ತಂತ್ರಜ್ಞಾನ ಬೆಂಗಳೂರು, ಮೇ.6: ಇತ್ತೀಚಿನ ದಿನಗಳಲ್ಲಿ ದೇಶ, ವಿದೇಶಗಳಲ್ಲಿ ವಿಮಾನ ಅಪಘಾತಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಕೆಐಎ) ಪ್ರಯಾಣಿಕರ ಮತ್ತು ವಿಮಾನಗಳ ಸುರಕ್ಷತೆಗಾಗಿ ಹೊಸ ಹೆಜ್ಜೆ ಇಟ್ಟಿದೆ. ವಿಮಾನಗಳು ಓಡಾಡುವ ಜಾಗದಲ್ಲಿ (ಏರ್‌ಸೈಡ್) ಭದ್ರತೆ ಹೆಚ್ಚಿಸಲು ‘ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು (ಬಿಐಎಎಲ್‌) ಜಾರಿಗೆ ತಂದಿದೆ. ಅಪಾಯಕಾರಿ ಜಾಗದಲ್ಲಿ ಹೊಸ ಸುರಕ್ಷತಾ ವ್ಯವಸ್ಥೆ ವಿಮಾನ ನಿಲ್ದಾಣದೊಳಗೆ ‘ಕ್ರಾಸ್…

Read More

30 ಎಸೆತಗಳಲ್ಲಿ 95 ರನ್: ರಿಷಭ್ ಪಂತ್‌ ರುದ್ರತಾಂಡವ ಬಿಚ್ಚಿಟ್ಟ ಕೋಚ್! – Kannada News | 95 Off 30 Balls: LSG Coach Defends Pant’s Form

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ LSG ತಂಡದ ಭವಿಷ್ಯ ಮತ್ತು ನಾಯಕ ರಿಷಭ್ ಪಂತ್ ಅವರ ಫಾರ್ಮ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಚರ್ಚೆಯ ನಡುವೆ ತಂಡದ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಸುದ್ದಿಗೋಷ್ಠಿಯಲ್ಲಿ ನೀಡಿದ ಒಂದು ಹೇಳಿಕೆ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ಅಭ್ಯಾಸದ ವೇಳೆ ಪಂತ್ ಆರ್ಭಟ! ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್…

Read More

‘ಟಾಕ್ಸಿಕ್’ ಡೇಟ್ ಮೇಲೆ ‘ಜನ ನಾಯಗನ್’ ಕಣ್ಣು? ಅಪರೂಪದ ಘಟನೆಗೆ ಸಾಕ್ಷಿಯಾಗಲಿದೆ ತಮಿಳುನಾಡು – Kannada News | Thalapathy Vijay CM: Jan Nayagan Release Marks New Political Cinema Era

ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 106 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಭರ್ಜರಿ ಯಶಸ್ಸಿನ ಬೆನ್ನಲ್ಲೇ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಮಾತುಕತೆ ನಡೆಯುತ್ತಿದೆ. ಬೆಳವಣಿಗೆಯ ನಡುವೆ, ಅವರ ಅಂತಿಮ ಸಿನಿಮಾ ಎನ್ನಲಾದ ‘ಜನ ನಾಯಗನ್’ ಬಿಡುಗಡೆಯ ಕುರಿತು ಈಗ ಹೊಸ ಚರ್ಚೆಗಳು ಶುರುವಾಗಿವೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲು ವಿಜಯ್​​ ಸಿನಿಮಾ…

Read More

ಮತಗಳ ಮರುಎಣಿಕೆ ಬಗ್ಗೆ ಬಿಜೆಪಿ ಶಾಸಕ ಜೀವರಾಜ್ ಬಿಚ್ಚಿಟ್ಟ ರಹಸ್ಯ ಕೇಳಿ – Kannada News | Sringeri assembly constituency Result Row: BJP MLA Jeevaraj Talks about Vote Recounting

ಬೆಂಗಳೂರು, (ಮೇ 05): ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಮುಗಿದಿದ್ದು, ಇದರಲ್ಲಿ ಬಿಜೆಪಿಯ ಜೀವರಾಜ್ ಗೆಲುವು ಸಾಧಿಸಿದ್ದಾರೆ. ಇದರಿಂದ ಕೆರಳದ ಡಿಸಿಎ. ಡಿಕೆ ಶಿವಕುಮಾರ್, ಇಡೀ ದೇಶದಲ್ಲಿ ಇಂತಹ ಕ್ರಿಮಿನಲ್ ಎಲ್ಲೂ ನಡೆದಿಲ್ಲ. ತನಿಖೆ ನಡೆಸುತ್ತೇವೆ ಮತ್ತು ಕಾನೂನುಬದ್ಧವಾಗಿ ಹೋರಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದಕ್ಕೆ ಬಿಜೆಪಿಯ ಜೀವರಾಜ್ ಪ್ರತಿಕ್ರಿಯಿಸಿದ್ದು, 2023ರಲ್ಲಿ ಮತ ಎಣಿಕೆ ವೇಳೆ ಏನೇನಾಯ್ತು? ಕೋರ್ಟ್​​ ಗೆ ಮನವಿ ಮಾಡಿದ್ದೇನು ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕದ ಮತ್ತಷ್ಟು…

Read More