Headlines

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಲಖನೌ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದಿಂದ ಕೌಶಂಬಿಯಲ್ಲಿ ನಡೆಯಬೇಕಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಹೆಲಿಕಾಪ್ಟರ್ ಗಾಳಿಯಲ್ಲಿರುವಾಗಲೇ…

Read More

Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ? – Kannada News | Bank strike on January 27 These banks to remain closed Tomorrow

ನವದೆಹಲಿ, ಜನವರಿ 26: ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಮುಷ್ಕರ ನಡೆಸುತ್ತಿದೆ. ಹೀಗಾಗಿ, ನಾಳೆ (ಮಂಗಳವಾರ) ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ (Banks) ಬ್ಯಾಂಕಿಂಗ್ ಕಾರ್ಯಾಚರಣೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ. ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ ನಂತರ ಈ ಮುಷ್ಕರದ…

Read More

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ, ಕೇವಲಮ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…

Read More

‘ತ್ರಿಕಾರಂ’ ಚಿತ್ರತಂಡದಿಂದ ಮತ್ತೊಂದು ಲವ್ ಹಾಡು ರಿಲೀಸ್ – Kannada News | Seedanintru Lokayako song released from Trikaaram movie

ಈ ಮೊದಲು ಬಿಡುಗಡೆ ಆಗಿದ್ದ ಹಾಡಿಗೆ ಜನರಿಂದ ಸಿಕ್ಕ ಪ್ರತಿಕ್ರಿಯೆಗೆ ‘ತ್ರಿಕಾರಂ’ (Trikaaram) ಚಿತ್ರತಂಡ ಖುಷಿಯಾಗಿದೆ. ಅದರ ಬೆನ್ನಲ್ಲೇ ಇನ್ನೊಂದು ಹಾಡು (Kannada Song) ರಿಲೀಸ್ ಮಾಡಲಾಗಿದೆ. ಫೆಬ್ರವರಿ ಎಂದರೆ ಪ್ರೇಮಿಗಳ ತಿಂಗಳು. ಪ್ರೇಮಿಗಳ ದಿನಾಚರಣೆ ಪ್ರಯುಕ್ತ ಇತ್ತೀಚೆಗೆ ಈ ಸಿನಿಮಾದ ಹೊಸ ಹಾಡನ್ನು ಅನಾವರಣ ಮಾಡಲಾಯಿತು. ಉತ್ಸವ್ ಲೆಗೆಸಿಯಲ್ಲಿ ಹಾಡಿನ ರಿಲೀಸ್ ಕಾರ್ಯಕ್ರಮ ನಡೆಯಿತು. ರವೀಂದ್ರ, ಶಿವರಾಜ್ ಕೆ.ಆರ್. ಪೇಟೆ, ಖದರ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು. ‘ತ್ರಿಕಾರಂ’ ಸಿನಿಮಾದ…

Read More

ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: IAS ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ  ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್​ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ…

Read More

ಕಂಬ್ಯಾಕ್ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ ಒಲಿದ ನಾಯಕತ್ವ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ವಿಜಯ ಹಝಾರೆ ಟೂರ್ನಿಯ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪಂದ್ಯದಲ್ಲಿ ಅಯ್ಯರ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಹೀಗಾಗಿ ಉಳಿದ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ಸಾರಥ್ಯವನ್ನು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್​ಗೆ ವಹಿಸಲಾಗಿದೆ.  ಅದರಂತೆ…

Read More

Horoscope Today 21 December: ಇಂದು ಈ ರಾಶಿಯವರಿಗೆ ವ್ಯವಹಾರಿಕ ಸೋಲಿನಿಂದ ಅಸಮಾಧಾನ

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಧೃತಿ, ಕರಣ : ನಾಗವಾನ್, ಸೂರ್ಯೋದಯ – 06 – 45 am, ಸೂರ್ಯಾಸ್ತ – 06 – 00 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಹಿಂದುತ್ವಕ್ಕೆ ನಿಷ್ಠನಾಗಿದ್ದೇನೆ ಎಂಬುದನ್ನು ಸಾಬೀತು ಮಾಡಿದ್ರೆ ಮಾತ್ರ ನಟಿ ಸಾರಾಗೆ ಕೇದರನಾಥಕ್ಕೆ ಎಂಟ್ರಿ

ಚಾರ್ ಧಾಮ್ ಯಾತ್ರೆ 2026 ಇನ್ನೇನು ಆರಂಭ ಆಗಲಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan) ಅವರು ಪ್ರತಿ ವರ್ಷವೂ ಅಲ್ಲಿಗೆ ತೆರಳುತ್ತಾರೆ. ಈ ಬಾರಿಯೂ ಅವರು ದೇವಸ್ಥಾನಕ್ಕೆ ಹೋಗುವ ಆಲೋಚನೆಯಲ್ಲಿ ಇದ್ದರು ಎನ್ನಲಾಗಿದೆ. ಅದಕ್ಕೂ ಮೊದಲೇ ದೇವಸ್ಥಾನದಲ್ಲಿ ಹೊಸ ನಿಯಮ ಜಾರಿಗೆ ತರಲಾಗಿದೆ. ವಿಶೇಷವಾಗಿ ಹಿಂದೂಯೇತರ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ ಮಾಡಲಾಗಿದೆ. ಬದರಿನಾಥ ಮತ್ತು ಕೇದಾರನಾಥಕ್ಕೆ ಬರುವ ಸನಾತನಿಗಳಲ್ಲದವರು ದೇವಾಲಯವನ್ನು ಪ್ರವೇಶಿಸಲು ಅಫಿಡವಿಟ್ ನೀಡಬೇಕಾಗುತ್ತದೆ ಎಂದು ಕೇದಾರನಾಥ ದೇವಾಲಯ ಸಮಿತಿಯ…

Read More

Weekly Horoscope: ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿಯಾಗಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 23 ರಿಂದ ಮಾರ್ಚ್ 29 ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ವಾರ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದಿಂದ ಕೂಡಿದೆ. ಪಂಚಮಿಯಿಂದ ಏಕಾದಶಿಯವರೆಗೆ ತಿಥಿಗಳಿವೆ. ಈ ವಾರದಲ್ಲಿ ದೇವರ ದಾಸಿಮಯ್ಯ ಜಯಂತಿ, ದಾವಣಗೆರೆ ಜಾತ್ರಾ ಮಹೋತ್ಸವ, ಅಶೋಕ ಅಷ್ಟಮಿ, ಸ್ಕಂದ ದವನಾರ್ಪಣೆ, ಸಂತಾನ ಸಪ್ತಮಿ, ಶ್ರೀರಾಮ ನವಮಿ, ಸರ್ವತ್ರ ಏಕಾದಶಿ ಸೇರಿದಂತೆ ಹಲವು ಹಬ್ಬ…

Read More

ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ – Kannada News | India US interim trade deal talks, Indian delegation’s US visit postponed

ನವದೆಹಲಿ, ಫೆಬ್ರುವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಕ್ರಮವನ್ನು ಅವರ ದೇಶದ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ರೂಪುರೇಖೆಯಲ್ಲಿ (India US interim trade deal framework) ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಧ್ಯಂತರ ಒಪ್ಪಂದಕ್ಕೆ ನಿಯಮಾವಳಿಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳ ಮಧ್ಯೆ ನಡೆಯಬೇಕಿದ್ದ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಭಾರತ ತಂಡದ ಅಮೆರಿಕ ಭೇಟಿಯು ಮುಂದೂಡಿಕೆ ಆಗಿದೆ. ಮಾತುಕತೆ ಮುಂದೂಡಿಕೆ ಮಾಡಬೇಕೆನ್ನುವ ನಿರ್ಧಾರ ಭಾರತದ ವತಿಯಿಂದ…

Read More