ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ: ಏನಿದು ಬಿ-ಸ್ಮೈಲ್ ಹೊಸ ಪ್ಲಾನ್? – Kannada News | Bengaluru to Raze IOC Junction Flyover: Rs 436 Cr Elevated Rotary Plan for SMVT Connectivity

ಜಯದೇವ ಆಯ್ತು, ಈಗ ಬೆಂಗಳೂರಿನ ಮತ್ತೊಂದು ಫ್ಲೈ ಓವರ್ ಧರೆಗೆ

ಬೆಂಗಳೂರು, ಮೇ 05: ಜಯದೇವ ಮತ್ತು ಡಾಲ್ಮಿಯಾ ಫ್ಲೈ ಓವರ್‌ಗಳ ತೆರವು ಕಾರ್ಯಾಚರಣೆಯ ಬೆನ್ನಲ್ಲೇ, ಈಗ ಪೂರ್ವ ಬೆಂಗಳೂರಿನ ಮತ್ತೊಂದು ಪ್ರಮುಖ ಮೇಲ್ಸೇತುವೆ (Flyover) ಇತಿಹಾಸ ಸೇರಲು ಸಿದ್ಧವಾಗಿದೆ. ಐಒಸಿ ಜಂಕ್ಷನ್‌ನಲ್ಲಿರುವ ಹಳೆಯ ಫ್ಲೈ ಓವರ್ ಅನ್ನು ಕೆಡವಿ, ಅಲ್ಲಿ 436 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಿಸಲು ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ಯೋಜನೆ ರೂಪಿಸಿದೆ. 2001-02ರ ಅವಧಿಯಲ್ಲಿ ರೈಲ್ವೇ ಇಲಾಖೆಯಿಂದ ನಿರ್ಮಾಣವಾಗಿದ್ದ ಈ ಹಳೆಯ ಸೇತುವೆಯು ಹೊಸ ವಿನ್ಯಾಸದ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಯೋಜನೆಯ ವೆಚ್ಚ ಮತ್ತು ವಿನ್ಯಾಸದ ಬದಲಾವಣೆ

ಆರಂಭದಲ್ಲಿ ಈ ರೋಟರಿ ಫ್ಲೈ ಓವರ್ ಯೋಜನೆಯನ್ನು 263 ಕೋಟಿ ರೂ. ವೆಚ್ಚದಲ್ಲಿ ಅಂದಾಜಿಸಲಾಗಿತ್ತು. ಆದರೆ ಕಾಮಗಾರಿ ವಿಳಂಬ ಮತ್ತು ಯೋಜನೆಯ ವಿನ್ಯಾಸದಲ್ಲಿ ಮಾಡಲಾದ ಮಹತ್ವದ ಬದಲಾವಣೆಗಳಿಂದಾಗಿ ಈಗ ಇದರ ವೆಚ್ಚ 436 ಕೋಟಿ ರೂ.ಗೆ ಏರಿಕೆಯಾಗಿದೆ. ಮಾರುತಿ ಸೇವಾನಗರ ರಸ್ತೆಯಿಂದ ಸುಮಾರು 1.5 ಕಿಲೋಮೀಟರ್ ಉದ್ದದ ಹೆಚ್ಚುವರಿ ಫ್ಲೈ ಓವರ್ ಅನ್ನು ಈ ಯೋಜನೆಗೆ ಸೇರ್ಪಡೆಗೊಳಿಸಿರುವುದು ಈ ದುಬಾರಿ ವೆಚ್ಚಕ್ಕೆ ಪ್ರಮುಖ ಕಾರಣವಾಗಿದೆ. ಜಿಎಸ್‌ಟಿ ಮತ್ತು ಇತರ ತಾಂತ್ರಿಕ ಘಟಕಗಳ ಸೇರ್ಪಡೆಯೂ ಅಂತಿಮ ಅಂದಾಜು ಮೊತ್ತದ ಮೇಲೆ ಪ್ರಭಾವ ಬೀರಿದೆ ಎಂದು ಬಿ-ಸ್ಮೈಲ್ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ಗೆ ಸುಗಮ ಕನೆಕ್ಟಿವಿಟಿ

2022ರಲ್ಲಿ ಉದ್ಘಾಟನೆಗೊಂಡ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೇ ಟರ್ಮಿನಲ್ (SMVT) ಸದ್ಯ ಕಿರಿದಾದ ರಸ್ತೆಗಳು ಮತ್ತು ಸಂಪರ್ಕದ ಕೊರತೆಯಿಂದಾಗಿ ಪ್ರಯಾಣಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಹೊಸ ಎಲಿವೇಟೆಡ್ ರೋಟರಿ ಫ್ಲೈ ಓವರ್ ನಿರ್ಮಾಣವಾದರೆ, ಹಳೆ ಮದ್ರಾಸ್ ರಸ್ತೆ, ಕಮ್ಮನಹಳ್ಳಿ, ಬಾಣಸವಾಡಿ ಮತ್ತು ಬೈಯಪ್ಪನಹಳ್ಳಿ ಭಾಗಗಳಿಂದ ಬರುವ ಜನರಿಗೆ ಯಾವುದೇ ಅಡೆತಡೆಯಿಲ್ಲದೆ ರೈಲ್ವೇ ನಿಲ್ದಾಣ ತಲುಪಲು ಸಾಧ್ಯವಾಗುತ್ತದೆ. ಇದರ ಜೊತೆಗೆ ಬೈಯಪ್ಪನಹಳ್ಳಿ ರಸ್ತೆಯಲ್ಲಿ ಹೊಸ ರೈಲ್ವೇ ಮೇಲ್ಸೇತುವೆಯನ್ನು ಕೂಡ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದು ಎಸ್.ವಿ. ರಸ್ತೆ ಮೆಟ್ರೋ ನಿಲ್ದಾಣದ ಕಡೆಯಿಂದ ಬರುವವರಿಗೂ ಸಹಕಾರಿಯಾಗಲಿದೆ.

ಇದನ್ನೂ ಓದಿ ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಸಂಚಾರ ದಟ್ಟಣೆ ಮತ್ತು ಪರ್ಯಾಯ ಮಾರ್ಗಗಳ ಸವಾಲು

ಈ ಬೃಹತ್ ಕಾಮಗಾರಿ ಆರಂಭವಾದರೆ ದೊಡ್ಡ ಬಾಣಸವಾಡಿ ರಸ್ತೆ, ಕಮ್ಮನಹಳ್ಳಿ ಮುಖ್ಯ ರಸ್ತೆ ಮತ್ತು ಬೈಯಪ್ಪನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ಆತಂಕವಿದೆ. ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಕಂಗೆಟ್ಟಿರುವ ಈ ಭಾಗದ ಜನರಿಗೆ ಕಾಮಗಾರಿಯ ಅವಧಿಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಈ ಸವಾಲನ್ನು ಎದುರಿಸಲು ಬಿ-ಸ್ಮೈಲ್ ಸಂಸ್ಥೆಯು ಸಂಚಾರಿ ಪೊಲೀಸರೊಂದಿಗೆ ಸಭೆ ನಡೆಸಿ, ಕಾಮಗಾರಿ ಆರಂಭವಾಗುವ ಮುನ್ನವೇ ವೈಜ್ಞಾನಿಕವಾದ ಟ್ರಾಫಿಕ್ ಡೈವರ್ಷನ್ ಪ್ಲಾನ್ ಸಿದ್ಧಪಡಿಸಲು ಮುಂದಾಗಿದೆ. ಸ್ಥಳೀಯ ವಾಹನಗಳು ಮತ್ತು ಟರ್ಮಿನಲ್‌ಗೆ ಹೋಗುವ ವಾಹನಗಳನ್ನು ಪ್ರತ್ಯೇಕಿಸುವ ಮೂಲಕ ದಟ್ಟಣೆ ಕಡಿಮೆ ಮಾಡುವುದು ಯೋಜನೆಯ ಮುಖ್ಯ ಗುರಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೆಟ್ ಗಾಲಾ ವೇದಿಕೆ ಮೇಲೆ ಮಿಂಚಿದ ಕರಣ್​ ಜೋಹರ್-ಇಶಾ ಅಂಬಾನಿ

Source link

TV9 Kannada News Live: ಪೀಣ್ಯ ಫ್ಲೈಓವರ್ ಬಂದ್, ಹೋಟೆಲ್ ತಿಂಡಿ ದುಬಾರಿ! ಇಲ್ಲಿವೆ ಇಂದಿನ ಪ್ರಮುಖ ಅಪ್​ಡೇಟ್ಸ್ – Kannada News | TV9 Kannada News live: Bengaluru Peenya Flyover Closed, Hotel Food Prices Hike by 20 percent, Demand for Auto Fare Increase

ಬೆಂಗಳೂರು, ಮೇ 5: ಬೆಂಗಳೂರು (Bengaluru) ಇನ್ನಷ್ಟು ದುಬಾರಿ ದುನಿಯಾ ಆಗುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಇದೀಗ ಬಲವಾಗಲು ಕಾರಣ ಇದೆ. ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯ ಕಾರಣ ಹೋಟೆಲ್​ಗಳು ಊಟ-ತಿಂಡಿ, ಕಾಪಿ-ಚಹಾ ದರ ಏರಿಕೆ ಮಾಡಿವೆ. ಮತ್ತೊಂದೆಡೆ, ಆಟೋ ದರ ಹೆಚ್ಚಳಕ್ಕೆ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲದರ ಮಧ್ಯೆ, ಪೀಣ್ಯ ಫ್ಲೈಓವರ್​ನಲ್ಲಿ ಇಂದಿನಿಂದ (ಮೇ 5) 4 ದಿನ ಸಂಚಾರ ನಿರ್ಬಂಧ ಇದ್ದು, ಗೊರಗುಂಟೆ ಪಾಳ್ಯ ಸಹಿತ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಸಾಧ್ಯತೆ ಇದೆ.

ಹೋಟೆಲ್ ಗ್ರಾಹಕರಿಗೆ ದರ ಏರಿಕೆಯ ಶಾಕ್

ಬೆಂಗಳೂರಿನ ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ದರ ಶೇ 20ರಷ್ಟು ಹೆಚ್ಚಳವಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 3,154 ರೂ.ಗೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹೋಟೆಲ್ ಮಾಲೀಕರು ಮುಂದಾಗಿದ್ದಾರೆ. ಊಟ, ದೋಸೆ ಹಾಗೂ ಕಾಫಿ-ಟೀ ಬೆಲೆಗಳಲ್ಲಿ 5 ರಿಂದ 20 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಅನಿವಾರ್ಯವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೋಟೆಲ್ ಉದ್ಯಮಿಗಳು ತಿಳಿಸಿದ್ದಾರೆ.

ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್!

ಕೇಬಲ್ ದುರಸ್ತಿ ಮತ್ತು ಲೋಡ್ ಟೆಸ್ಟಿಂಗ್ ಕಾಮಗಾರಿಯ ಕಾರಣ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಮೇ 8ರ ವರೆಗೆ ಸಂಚಾರ ನಿಷೇಧಿಸಲಾಗಿದೆ. ಇದರ ಪರಿಣಾಮವಾಗಿ ಗೊರಗುಂಟೆ ಪಾಳ್ಯ ಸೇರಿದಂತೆ ತುಮಕೂರು, ನೆಲಮಂಗಲ ಕಡೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಆಟೋ ಪ್ರಯಾಣಿಕರಿಗೆ ತಟ್ಟಲಿದೆ ದರ ಏರಿಕೆ ಬಿಸಿ

ಆಟೋ LPG ದರ ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆಯಾಗಿರುವುದರಿಂದ ಆಟೋ ಚಾಲಕರು ಪ್ರಯಾಣ ದರ ಹೆಚ್ಚಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (2 ಕಿ.ಮೀ ಗೆ) 36 ರೂ. ಹಾಗೂ ನಂತರದ ಪ್ರತಿ ಕಿ.ಮೀ ಗೆ 18 ರೂ. ಇದೆ. ಇದನ್ನು ಕ್ರಮವಾಗಿ 50 ರೂ. ಹಾಗೂ 25 ರೂ. ಏರಿಸಬೇಕೆಂದು ಆಟೋ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ: ಇಂದಿನಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್! ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳಗಾವಿ: ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲವೆಂದು ಅತ್ತೆಗೆ ಚಾಕುವಿನಿಂದ ಇರಿದ ಅಳಿಯ, ಕೃತ್ಯ ಎಸಗಿ ಸ್ಟೇಟಸ್ ಹಾಕಿ ವಿಕೃತಿ – Kannada News | Belagavi Crime: Man Stabs Mother in Law for Not Showing Baby on Video Call; Posts WhatsApp Status from Prison

ಬೆಳಗಾವಿ, ಮೇ 5: ಕ್ಷುಲ್ಲಕ ಕಾರಣಕ್ಕಾಗಿ ಅಳಿಯನೊಬ್ಬ ತನ್ನ ಅತ್ತೆಗೆ ಚಾಕುವಿನಿಂದ ಇರಿದ ಘೋರ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿಯಲ್ಲಿ ನಡೆದಿದೆ. ವಿಡಿಯೋ ಕಾಲ್‌ನಲ್ಲಿ ಮಗು ತೋರಿಸಿಲ್ಲ ಎನ್ನುವ ಕಾರಣಕ್ಕೆ ಆಕ್ರೋಶಗೊಂಡ ಅರವಿಂದ ಗವಳಿ ಎಂಬಾತ ಅತ್ತೆ ಮಹಾದೇವಿ (45) ಅವರಿಗೆ ಚಾಕು ಇರಿದಿದ್ದಾನೆ. ಸದ್ಯ ಮಹಾದೇವಿ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಅರವಿಂದ ಗವಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ

ಅರವಿಂದ ಗವಳಿಯ ಪತ್ನಿಗೆ ಎರಡು ತಿಂಗಳ ಹಿಂದೆಯಷ್ಟೇ ಹೆರಿಗೆಯಾಗಿದ್ದು, ಆಕೆ ಸದ್ಯ ತವರು ಮನೆಯಲ್ಲಿದ್ದಳು. ಅಲ್ಲಿಯೂ ಪತ್ನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಅರವಿಂದ, ಪದೇಪದೆ ವಿಡಿಯೋ ಕಾಲ್ ಮಾಡಿ ಮಗುವನ್ನು ತೋರಿಸುವಂತೆ ಪಟ್ಟು ಹಿಡಿಯುತ್ತಿದ್ದ. ಇದಕ್ಕೆ ಪ್ರತಿಕ್ರಿಯಿಸಿದ್ದ ಅತ್ತೆ ಮಹಾದೇವಿ, ‘ಕೆಲಸ ಬಿಟ್ಟು ಸದಾ ಮೊಬೈಲ್ ಹಿಡಿದು ಕೂರಲು ಸಾಧ್ಯವಿಲ್ಲ, ದಿನಕ್ಕೆ ಒಂದು ಬಾರಿ ಮಾತ್ರ ಕಾಲ್ ಮಾಡು’ ಎಂದು ಬುದ್ಧಿ ಹೇಳಿದ್ದರು.

ಇದರಿಂದ ಸಿಟ್ಟಾದ ಅರವಿಂದ ಅತ್ತೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅತ್ತೆ ಕೂಡ ‘ನನ್ನ ಮನೆ ಬಾಗಿಲಿಗೆ ಬಂದರೆ ಸುಮ್ಮನೆ ಬಿಡಲ್ಲ’ ಎಂದು ಎಚ್ಚರಿಸಿದ್ದರು. ಇದೇ ದ್ವೇಷದಲ್ಲಿ ಆಕೆಯ ಮನೆಗೆ ನುಗ್ಗಿದ ಅರವಿಂದ, ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸದ್ಯ ತೀವ್ರವಾಗಿ ಗಾಯಗೊಂಡಿರುವ ಮಹಾದೇವಿ ಅವರು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಜೈಲು-ಬೇಲ್’ ಎಂದು ಸ್ಟೇಟಸ್ ಹಾಕಿದ ಆರೋಪಿ

ಅಷ್ಟಕ್ಕೇ ಸುಮ್ಮನಾಗದ ಅರವಿಂದ, ಅತ್ತೆಗೆ ಚಾಕುವಿನಿಂದ ಇರಿದ ಬಳಿಕ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾನೆ. ‘‘ಇಂದು ಜೈಲು, ನಾಳೆ ಬೇಲ್… ನಿನ್ನನ್ನು ಬಿಡಲ್ಲ’’ ಎಂದು ಬರೆದುಕೊಂಡು ತನ್ನ ವಿಕೃತಿ ಮೆರೆದಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಮುರಗೋಡ ಪೊಲೀಸರು ಆರೋಪಿ ಅರವಿಂದನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಮೆಜೆಸ್ಟಿಕ್​ನಲ್ಲಿ ತನ್ನ 2 ವರ್ಷದ ಮಗುವನ್ನೇ ಮಾರಿದಳಾ ತಾಯಿ? ತಂದೆಯಿಂದಲೇ ಗಂಭೀರ ಆರೋಪ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾವೇರಿ: ಧಗಧಗನೆ ಹೊತ್ತಿ ಉರಿದ ಕೆಎಸ್​ಆರ್​ಟಿಸಿ ಬಸ್, ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಜಸ್ಟ್ ಮಿಸ್ – Kannada News | Haveri Bus Fire Accident: 17 Passengers Escaped Narrowly as KSRTC Pallakki Bus Caught Fire Near Ranebennur

ಹಾವೇರಿ, ಮೇ 5: ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಉರಿಯಿತು. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಹಾವೇರಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಹಾಗಾಗಿದ್ದರೆ..’; ವಿಜಯ್ ಗೆಲುವಿನಿಂದ ರಜನಿ ಫ್ಯಾನ್ಸ್​​ಗೆ ಭಾರಿ ನಿರಾಸೆ – Kannada News | Thalapathy Vijay’s TVK Sweeps TN Elections: Why Rajinikanth Fans Are Disappointed

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಮ್’ (TVK) ಪಕ್ಷದ ಭರ್ಜರಿ ಜಯ ಹೊಸ ಸಂಚಲನ ಮೂಡಿಸಿದೆ. ಮೊದಲ ಚುನಾವಣೆಯಲ್ಲೇ 108 ಸ್ಥಾನಗಳನ್ನು ಗೆದ್ದು ಅವರು ಇತಿಹಾಸ ಬರೆದಿದ್ದಾರೆ. ಆದರೆ, ವಿಜಯ್ ಅವರ ಈ ಗೆಲುವು ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಲ್ಲಿ ಮಾತ್ರ ಒಂದು ರೀತಿಯ ನಿರಾಸೆ ಮತ್ತು ಬೇಸರವನ್ನು ಉಂಟುಮಾಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ದಳಪತಿ ವಿಜಯ್ ಅವರು ತಮ್ಮ ಸಿನಿಮಾ ವೃತ್ತಿಜೀವನದ ಉತ್ತುಂಗದಲ್ಲಿರುವಾಗಲೇ ರಾಜಕೀಯ ಪ್ರವೇಶಿಸುವ ಧೈರ್ಯ ಮಾಡಿದರು. ಇದಕ್ಕಾಗಿ ಅವರು ಚಿತ್ರರಂಗವನ್ನೇ ತೊರೆಯಲು ನಿರ್ಧರಿಸಿದರು. 2026ರ ಚುನಾವಣೆಯಲ್ಲಿ ಅವರ ಪಕ್ಷ 108 ಸ್ಥಾನಗಳನ್ನು ಗೆದ್ದಿದ್ದು, ವಿಜಯ್ ಮುಖ್ಯಮಂತ್ರಿಯಾಗುವುದು ಈಗ ಬಹುತೇಕ ಖಚಿತವಾಗಿದೆ. ವಿಜಯ್ ಫ್ಯಾನ್ ಬೇಸ್ ಇರುವಾಗಲೇ ರಾಜಕೀಯಕ್ಕೆ ಬಂದಿದ್ದು ಅವರಿಗೆ ಪ್ಲಸ್ ಪಾಯಿಂಟ್ ಆಯಿತು ಎಂಬುದು ವಿಶ್ಲೇಷಕರ ಅಭಿಪ್ರಾಯ.

ರಜನಿ ಅಭಿಮಾನಿಗಳ ನಿರಾಸೆಗೆ ಕಾರಣವೇನು?

ರಜನಿಕಾಂತ್ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತು ಕಳೆದ 20-25 ವರ್ಷಗಳಿಂದ ಕೇಳಿಬರುತ್ತಲೇ ಇತ್ತು. ಪ್ರತಿ ಬಾರಿ ಚುನಾವಣೆ ಬಂದಾಗಲೂ ಅಭಿಮಾನಿಗಳು ‘ತಲೈವಾ’ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಕಾಯುತ್ತಿದ್ದರು. ಆದರೆ, ರಜನಿಕಾಂತ್ ಅವರು ಸುದೀರ್ಘ ಕಾಲ ಆಲೋಚಿಸಿ, ಕೊನೆಯ ಕ್ಷಣದಲ್ಲಿ ಆರೋಗ್ಯದ ಕಾರಣ ನೀಡಿ ಹಿಂದೆ ಸರಿದರು.

‘ರಜನಿಕಾಂತ್ ಅವರು 20 ವರ್ಷಗಳ ಹಿಂದೆಯೇ, ರಾಜಕೀಯಕ್ಕೆ ಬಂದಿದ್ದರೆ, ಇವತ್ತು ತಮಿಳುನಾಡಿನ ಚಿತ್ರಣವೇ ಬೇರೆಯಾಗಿರುತ್ತಿತ್ತು. ಅವರು ಸುಲಭವಾಗಿ ಮುಖ್ಯಮಂತ್ರಿಯಾಗುತ್ತಿದ್ದರು’ ಎಂಬುದು ರಜನಿ ಅಭಿಮಾನಿಗಳ ಅಭಿಪ್ರಾಯ.

ಕಮಲ್ ಸೋಲು – ವಿಜಯ್ ಗೆಲುವು:

ರಜನಿಕಾಂತ್ ಅವರಿಗಿಂತ ಮೊದಲೇ ಕಮಲ್ ಹಾಸನ್ ರಾಜಕೀಯಕ್ಕೆ ಬಂದರೂ, ಮತದಾರರು ಅವರನ್ನು ಪೂರ್ಣ ಪ್ರಮಾಣದಲ್ಲಿ ಒಪ್ಪಿಕೊಳ್ಳಲಿಲ್ಲ. ಆದರೆ ವಿಜಯ್ ವಿಷಯದಲ್ಲಿ ಮತದಾರರು ಭರ್ಜರಿ ಬೆಂಬಲ ನೀಡಿದ್ದಾರೆ. ವಿಜಯ್ ಅವರ ಈ ಗೆಲುವನ್ನು ಕಂಡ ರಜನಿ ಅಭಿಮಾನಿಗಳು, ‘ನಮ್ಮ ನೆಚ್ಚಿನ ನಟನಿಗೂ ಇಂತಹ ಸುವರ್ಣ ಅವಕಾಶವಿತ್ತು, ಆದರೆ ಕಾಲ ಮೀರಿ ಹೋಯಿತು’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ‘2026ಕ್ಕೆ ನಾನೇ ಸಿಎಂ’; 2024ರಲ್ಲೇ ಸೂಚನೆ ಕೊಟ್ಟಿದ್ದ ದಳಪತಿ ವಿಜಯ್

ಒಟ್ಟಾರೆಯಾಗಿ, ವಿಜಯ್ ಅವರ ಯಶಸ್ಸು ಒಂದು ಕಡೆ ಸಂಭ್ರಮ ತಂದಿದ್ದರೆ, ಮತ್ತೊಂದೆಡೆ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಕನಸು ಭಗ್ನಗೊಂಡಿರುವುದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಇಂದಿಗೂ ಮರೆಯಲಾಗದ ನೋವಾಗಿ ಉಳಿದಿದೆ. ಅಂದು ರಜನಿ ಮಾಡದ ಸಾಧನೆಯನ್ನು ಇಂದು ವಿಜಯ್ ಮಾಡಿ ತೋರಿಸಿದ್ದಾರೆ ಎಂಬ ಚರ್ಚೆ ಎಲ್ಲೆಡೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 9:01 am, Tue, 5 May 26

Source link

ಫೈಬರ್ ಕೇಬಲ್‌ಗಳೇ ಕಳ್ಳರ ಟಾರ್ಗೆಟ್: ಲಾಹೋರ್ ಇಂಟರ್ನೆಟ್ ಕಡಿತದ ಹಿಂದೆ ಅಡಗಿದೆ ಸ್ಕ್ರ್ಯಾಪ್ ಮಾಫಿಯಾ – Kannada News | Internet Outages in Lahore Linked to Fiber Cable Theft

ಲಾಹೋರ್, ಮೇ 05: ಪಾಕಿಸ್ತಾನದ ರಾಜಧಾನಿ ಲಾಹೋರ್‌ನ ಅನೇಕ ನಿವಾಸಿಗಳು ಇತ್ತೀಚಿನ ದಿನಗಳಲ್ಲಿ ನಿರಂತರ ಇಂಟರ್ನೆಟ್ ಕಡಿತದ ಸಮಸ್ಯೆಯಿಂದ ಹೈರಾಣಾಗಿದ್ದರು. ಮೊದಲು ಇದನ್ನು ತಾಂತ್ರಿಕ ದೋಷ ಅಥವಾ ವಿದ್ಯುತ್ ವ್ಯತ್ಯಯದ ಪರಿಣಾಮ ಎಂದು ಭಾವಿಸಲಾಗಿತ್ತು. ಆದರೆ, ಈ ವ್ಯವಸ್ಥಿತ ಇಂಟರ್ನೆಟ್ ಸ್ಥಗಿತದ ಹಿಂದೆ ಸ್ಕ್ರ್ಯಾಪ್ ಕಳ್ಳರ ಜಾಲವಿರುವುದು ತನಿಖೆಯ ವೇಳೆ ಬಯಲಾಗಿದೆ.
ಲಾಹೋರ್‌ನ ವಿವಿಧ ಬಡಾವಣೆಗಳಲ್ಲಿ ರಾತ್ರೋರಾತ್ರಿ ಇಂಟರ್ನೆಟ್ ಸಂಪರ್ಕ ಕಡಿತಗೊಳ್ಳುತ್ತಿತ್ತು.

ಇದರಿಂದಾಗಿ ಸಾವಿರಾರು ಗ್ರಾಹಕರು, ವಿಶೇಷವಾಗಿ ಮನೆಯಿಂದ ಕೆಲಸ ಮಾಡುವವರು ಮತ್ತು ವಿದ್ಯಾರ್ಥಿಗಳು ಭಾರಿ ತೊಂದರೆ ಅನುಭವಿಸಿದ್ದರು. ಇಂಟರ್ನೆಟ್ ಸೇವಾ ಪೂರೈಕೆದಾರರು (ISPs) ಪರಿಶೀಲಿಸಿದಾಗ, ಫೈಬರ್ ಆಪ್ಟಿಕ್ ಕೇಬಲ್‌ಗಳನ್ನು ವ್ಯವಸ್ಥಿತವಾಗಿ ಕತ್ತರಿಸಿ ಕಳವು ಮಾಡಿರುವುದು ಕಂಡುಬಂದಿದೆ.

ಇಂಟರ್ನೆಟ್ ಪೂರೈಕೆಗೆ ಬಳಸುವ ಫೈಬರ್ ಆಪ್ಟಿಕ್ ಕೇಬಲ್‌ಗಳು ಸ್ಕ್ರ್ಯಾಪ್ ಮಾರುಕಟ್ಟೆಯಲ್ಲಿ ಅತ್ಯಂತ ದುಬಾರಿ ಬೆಲೆಗೆ ಮಾರಾಟವಾಗುತ್ತಿವೆ ಎಂಬ ಅಂಶ ಕಳ್ಳರ ಗಮನಕ್ಕೆ ಬಂದಿದೆ. ಕೇಬಲ್‌ಗಳ ಒಳಭಾಗದಲ್ಲಿರುವ ಲೋಹದ ಅಂಶಗಳು ಮತ್ತು ವಿಶೇಷ ಸಂಯುಕ್ತಗಳಿಗೆ ಹಳೆಯ ಕಬ್ಬಿಣದ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಿದೆ. ಈ ಹಣದ ಆಸೆಗೆ ಬಿದ್ದ ಕಳ್ಳರು ಇಡೀ ನಗರದ ಇಂಟರ್ನೆಟ್ ಜಾಲವನ್ನೇ ಹದಗೆಡಿಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

MI vs LSG: ಪೋಸ್ಟ್ ಮ್ಯಾಚ್​ನಲ್ಲಿ ಉಲ್ಟಾ ಹೊಡೆದ ರಿಷಭ್ ಪಂತ್: ಸೋಲಿಗೆ ಬೌಲರ್ಸ್ ಅಲ್ಲ ಬ್ಯಾಟರ್ಸ್ ಕಾರಣವಂತೆ – Kannada News | Rishabh Pant shocking statement in the post match Batters are responsible for the defeat

ಬೆಂಗಳೂರು (ಮೇ. 05): ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ 47 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋತಿತು. ಸೋಲಿನ ನಂತರ, ಲಕ್ನೋ ನಾಯಕ ರಿಷಭ್ ಪಂತ್ (Rishabh Pant) ನೀಡಿದ ಹೇಳಿಕೆ ಎಲ್ಲರನ್ನೂ ಅಚ್ಚರಿಗೊಳಿಸಿತು. ಬ್ಯಾಟರ್​ಗಳ ಕೊಡುಗೆಯಿಂದ ತಂಡ 228 ರನ್ ಗಳಿಸಿದ್ದರೂ, ‘‘ತಮ್ಮ ತಂಡ ಹೆಚ್ಚಿನ ರನ್ ಗಳಿಸಬೇಕಿತ್ತು’’ ಎಂದು ಪಂತ್ ಹೇಳಿದರು. ಲಕ್ನೋ ಬೌಲರ್​ಗಳು ಮುಂಬೈ ಬ್ಯಾಟರ್​ಗಳನ್ನು ಕಟ್ಟಿ ಹಾಕಲು ವಿಫಲವಾಗಿದ್ದರೂ ತಮ್ಮ ಬೌಲರ್​ಗಳನ್ನು ರಿಷಭ್ ಹೊಗಳಿದ್ದಾರೆ.

ಸೋಲಿಗೆ ತಮ್ಮ ಬ್ಯಾಟಿಂಗ್ ಕಾರಣ ಎಂದ ರಿಷಭ್ ಪಂತ್

ಪಂದ್ಯದ ನಂತರ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಎಲ್‌ಎಸ್‌ಜಿ ನಾಯಕ ರಿಷಭ್ ಪಂತ್, “ನಾವು ಆಟ ಆರಂಭಿಸಿದ ರೀತಿ ನೋಡಿದರೆ ಹೆಚ್ಚಿನ ರನ್ ಗಳಿಸಬೇಕಿತ್ತು ಎಂದು ನನಗನ್ನಿಸುತ್ತದೆ. ಕೆಲವು ಒಳ್ಳೆಯ ಲಕ್ಷಣಗಳು ಕಂಡುಬಂದವು. ಅದನ್ನು ನಿರಾಕರಿಸಲಾಗದು. ಹುಡುಗರು ಮುಕ್ತವಾಗಿ ಆಡಿದರು, ಆದರೆ ಕೊನೆಯಲ್ಲಿ, ಈ ಪರಿಸ್ಥಿತಿಗಳಿಗೆ ಒಗ್ಗಿಕೊಂಡಿರುವುದರಿಂದ ಮುಂಬೈ ಚೆನ್ನಾಗಿ ಬೌಲಿಂಗ್ ಮಾಡಿತು ಎಂದು ನಾನು ಭಾವಿಸುತ್ತೇನೆ. ನಾವು ಖಂಡಿತವಾಗಿಯೂ 10-15 ರನ್‌ಗಳಿಂದ ಸೋತಿದ್ದೇವೆ” ಎಂದು ಹೇಳಿದರು.

ಬೌಲರ್‌ಗಳನ್ನು ಸಮರ್ಥಿಸಿಕೊಂಡ ಪಂತ್

ತಮ್ಮ ತಂಡದ ಬೌಲರ್‌ಗಳನ್ನು ಸಮರ್ಥಿಸಿಕೊಳ್ಳುತ್ತಾ, ರಿಷಭ್ ಪಂತ್ ಅವರು ಇಂತಹ ವಿಕೆಟ್‌ಗಳ ಮೇಲೆ ಬೌಲರ್​ಗನ್ನು ದೂಷಿಸಲಾಗುವುದಿಲ್ಲ ಎಂದು ಹೇಳಿದರು. “ಒಂದು ಹಂತದಲ್ಲಿ, ನಾವು ಮುಂಬೈ ವಿರುದ್ಧ ಮೇಲುಗೈ ಸಾಧಿಸಿದ್ದೆವು. ಇಂತಹ ವಿಕೆಟ್‌ಗಳ ಮೇಲೆ ನೀವು ಬೌಲರ್‌ಗಳನ್ನು ದೂಷಿಸಲು ಸಾಧ್ಯವಿಲ್ಲ. ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಮಗೆ ಸ್ವಲ್ಪ ಅದೃಷ್ಟ ಬೇಕು” ಎಂದು ಅವರು ಹೇಳಿದರು.

Raghu Sharma: ‘‘ಜೈ ಶ್ರೀ ರಾಮ್’’: ಚೊಚ್ಚಲ ಐಪಿಎಲ್ ವಿಕೆಟ್ ಸಿಕ್ಕ ಕೂಡಲೇ ಜೇಬಿನಿಂದ ಚೀಟಿ ತೆಗೆದು ತೋರಿಸಿದ ರಘು ಶರ್ಮಾ

ರೋಹಿತ್ ಮತ್ತು ರಯಾನ್ ರಿಕಲ್ಟನ್ ಅವರಿಂದ ಬಿರುಗಾಳಿಯ ಇನ್ನಿಂಗ್ಸ್

229 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್, ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದ ರೋಹಿತ್ ಶರ್ಮಾ ಮತ್ತು ರಯಾನ್ ರಿಕಲ್ಟನ್ ನಡುವಿನ 143 ರನ್‌ಗಳ ಆರಂಭಿಕ ಪಾಲುದಾರಿಕೆಯಿಂದಾಗಿ, ಇನ್ನೂ ಎಂಟು ಎಸೆತಗಳು ಬಾಕಿ ಇರುವಾಗ ನಾಲ್ಕು ವಿಕೆಟ್‌ಗಳಿಗೆ 229 ರನ್ ಗಳಿಸುವ ಮೂಲಕ ಆರಾಮದಾಯಕ ಗೆಲುವು ಸಾಧಿಸಿತು. ರೋಹಿತ್ ಶರ್ಮಾ 44 ಎಸೆತಗಳಲ್ಲಿ 84 ರನ್ ಗಳಿಸಿದರೆ, ರಿಕಲ್ಟನ್ ಕೇವಲ 32 ಎಸೆತಗಳಲ್ಲಿ 83 ರನ್ ಗಳಿಸಿದರು.

ಇದಕ್ಕೂ ಮೊದಲು, ಲಕ್ನೋ ಸೂಪರ್ ಜೈಂಟ್ಸ್ ಪರ ನಿಕೋಲಸ್ ಪೂರನ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಈ ಋತುವಿನಲ್ಲಿ ಫಾರ್ಮ್‌ನಲ್ಲಿ ಎಡವಿರುವ ಪೂರನ್ 21 ಎಸೆತಗಳಲ್ಲಿ ಒಂದು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳು ಸೇರಿದಂತೆ 63 ರನ್ ಗಳಿಸಿದರು. 25 ಎಸೆತಗಳಲ್ಲಿ 44 ರನ್ ಗಳಿಸಿದ ಆರಂಭಿಕ ಮಿಚೆಲ್ ಮಾರ್ಷ್ ಅವರೊಂದಿಗೆ ಎರಡನೇ ವಿಕೆಟ್‌ಗೆ 94 ರನ್ ಸೇರಿಸುವ ಮೂಲಕ ಸೂಪರ್ ಜೈಂಟ್ಸ್ ತಂಡವು ಐದು ವಿಕೆಟ್‌ಗಳಿಗೆ 228 ರನ್ ಗಳಿಸಲು ಸಹಾಯ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ರಸ್ತೆಯಲ್ಲಿ ತನ್ನಷ್ಟಕ್ಕೆ ಹೋಗುತ್ತಿದ್ದ ಗೂಳಿಗೆ ಹೊಡೆಯಲು ಹೋದವನ ಗತಿ ಏನಾಯ್ತು ನೋಡಿ

ಮಿರ್ಜಾಪುರ, ಮೇ 05: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಕಚ್ವಾ ಎಂಬಲ್ಲಿ ವ್ಯಕ್ತಿಯ ಮೂರ್ಖತನಕ್ಕೆ ಗೂಳಿಯೊಂದು ತಕ್ಕ ಪಾಠ ಕಲಿಸಿದ ವಿಡಿಯೋ ವೈರಲ್ ಆಗಿದೆ. ಅಲೆದಾಡುತ್ತಿದ್ದ ಹೋರಿಯನ್ನು ವಿನಾಕಾರಣ ಕೆಣಕಿದ ವ್ಯಕ್ತಿಯೊಬ್ಬ ಈಗ ಆಸ್ಪತ್ರೆ ಪಾಲಾಗಿದ್ದಾರೆ. ಸ್ಥಳೀಯ ನಿವಾಸಿಯಾದ ರಾಜು ಸಿಂಗ್ ಎಂಬ ವ್ಯಕ್ತಿ ರಸ್ತೆಯಲ್ಲಿ ಸುಮ್ಮನೆ ಓಡಾಡುತ್ತಿದ್ದ ಹೋರಿಗೆ ಹೊಡೆಯಲು ಹೋಗಿದ್ದಾರೆ. ಮೊದಲು ಇಟ್ಟಿಗೆಗಳನ್ನು ಹೋರಿಯ ಮೇಲೆ ಎಸೆದು ಅದನ್ನು ಓಡಿಸಲು ಪ್ರಯತ್ನಿಸಿದ ಆತ, ನಂತರ ಕೋಲನ್ನು ಹಿಡಿದು ಹೋರಿಗೆ ಮನಬಂದಂತೆ ಹೊಡೆಯಲು ಆರಂಭಿಸಿದ್ದ.

ಸತತವಾಗಿ ಏಟು ತಿಂದ ಹೋರಿಯ ತಾಳ್ಮೆ ಕಟ್ಟೆಯೊಡೆದಿದೆ. ರಾಜು ಸಿಂಗ್‌ನ ಹಲ್ಲೆಯಿಂದ ಕೆರಳಿದ ಹೋರಿ, ಕ್ಷಣಾರ್ಧದಲ್ಲಿ ಆತನ ಮೇಲೆರಗಿದೆ. ರಾಜು ತಪ್ಪಿಸಿಕೊಳ್ಳುವ ಮೊದಲೇ ತನ್ನ ಬಲಿಷ್ಠವಾದ ಕೊಂಬುಗಳಿಂದ ಆತನನ್ನು ತಿವಿದು ದೂರಕ್ಕೆ ಎಸೆದಿದೆ.ಸುತ್ತಮುತ್ತಲಿದ್ದ ಜನರು ಹೋರಿಯನ್ನು ಓಡಿಸಿ ರಾಜು ಸಿಂಗ್‌ನನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ! – Kannada News | Bengaluru Auto Fare Hike: LPG Gas crisis leads to raise in Fuel price, Auto drivers demand Rs 50 Minimum Fare

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ?

ಬೆಂಗಳೂರು, ಮೇ 05: ರಾಜಧಾನಿಯ ಜನತೆಗೆ ಈಗ ಮತ್ತೊಂದು ಬೆಲೆ ಏರಿಕೆಯ ಭೀತಿ ಎದುರಾಗಿದೆ. ಕೇಂದ್ರ ಸರ್ಕಾರವು ಆಟೋ ಎಲ್.ಪಿ.ಜಿ (LPG) ದರವನ್ನು ಪ್ರತಿ ಲೀಟರ್‌ಗೆ 5.73 ರೂಪಾಯಿ ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಆಟೋ ಚಾಲಕರು, ಈಗ ಆಟೋ ಪ್ರಯಾಣ ದರವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿಗರಿಗೆ ಆಟೋ ಚಾರ್ಜ್​ ಏರಿಕೆಯ ಬಿಸಿ ಮುಟ್ಟುವ ಸಾಧ್ಯತೆ ಇದೆ.

ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕಳೆದ ಕೆಲವು ದಿನಗಳಿಂದ ಎಲ್.ಪಿ.ಜಿ ಕೊರತೆ ಎದುರಾಗಿತ್ತು. ಇದರಿಂದಾಗಿ ಚಾಲಕರು ಗಂಟೆಗಟ್ಟಲೆ ಕ್ಯೂ ನಿಂತು ಕಂಗಾಲಾಗಿದ್ದರು. ಈ ಸಂಕಷ್ಟದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಬಂಕ್‌ಗಳಲ್ಲಿ ಬೆಲೆ ಏರಿಕೆ ಮಾಡಿರುವುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಬಂಕ್​ಗಳೆ ಬೆಲೆ ಏರಿಕೆ ಮಾಡಿದಾಗ, ಇದನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಂಕ್‌ಗಳು ಕೂಡ ದರವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದ ಆಟೋ ಚಾಲಕರು ಕೆಂಡಾಮಂಡಲಾಗಿದ್ದಾರೆ.

ಬೇಡಿಕೆಗಳೇನು?

ಸದ್ಯ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (2 ಕಿ.ಮೀ ಗೆ) 36 ರೂ. ಹಾಗೂ ನಂತರದ ಪ್ರತಿ ಕಿ.ಮೀ ಗೆ 18 ರೂ. ಇದೆ. ಇದನ್ನು ಕ್ರಮವಾಗಿ 50 ರೂ. ಹಾಗೂ 25 ರೂ. ಏರಿಸಬೇಕೆಂದು ಆಟೋ ಸಂಘಟನೆಗಳು ಒತ್ತಾಯಿಸಿವೆ. ಗ್ಯಾಸ್ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಸಾರಿಗೆ ಸಚಿವರು ಕೂಡಲೇ ಸಭೆ ನಡೆಸಿ ನಮ್ಮ ಕಷ್ಟ ಆಲಿಸಬೇಕು ಎಂದು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ರಾಜ್ಯಾಧ್ಯಕ್ಷರಾದ ಸಂತೋಷ್ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ, ಚುನಾವಣೆ ಬೆನ್ನಲ್ಲೇ ಕೇಂದ್ರದ ಈ ಬೆಲೆ ಏರಿಕೆ ನಿರ್ಧಾರವು ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ.

ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version