ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ.

ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್ ಬ್ರೋಸ್​​ನ ಖರೀದಿ ಮಾಡಿತ್ತು. ಈ ಡೀಲ್​​ನಿಂದ ನೆಟ್​ಫ್ಲಿಕ್ಸ್ ದೊಡ್ಡ ಲಾಭ ಕಾಣುತ್ತಿದೆ. ಅತಿ ದೊಡ್ಡ ಸ್ಟುಡಿಯೋನ ತನ್ನ ತೆಕ್ಕೆಗೆ ತೆಗೆದುಕೊಂಡ ಖುಷಿ ನೆಟ್​ಫ್ಲಿಕ್ಸ್​ಗೆ ಇದೆ. ಆದರೆ, ಈ ಸಂಸ್ಥೆ ಒಟಿಟಿ ಚಿತ್ರಗಳನ್ನು ನಿರ್ಮಿಸುತ್ತದೆ. ಹೀಗಾಗಿ, ಆ ನಿಟ್ಟಿನಲ್ಲಿ ಮಾತ್ರ ಯೋಚಿಸುತ್ತದೆ ಎಂಬ ಭಯ ಜೆಮ್ಸ್ ಕ್ಯಾಮೆರೂನ್ ಅವರದ್ದು.

‘ವಾರ್ನರ್ ಬ್ರದರ್ಸ್ ಡಿಸ್ಕವರಿಯನ್ನು ನೆಟ್‌ಫ್ಲಿಕ್ಸ್‌ಗೆ ಮಾರಾಟ ಮಾಡುವ ಪ್ರಸ್ತಾಪವು ಸಿನಿಮಾ ರಂಗಕ್ಕೆ ಹಾನಿ ತರುವಂಥದ್ದು. ನಾನು ಚಿತ್ರರಂಗ ಹಾಗೂ ರಂಗಭೂಮಿಗೆ ನನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದೇನೆ. ನನ್ನ ಎಲ್ಲಾ ಸಿನಿಮಾಗಳು ಕೆಳಮಟ್ಟದ ವಿಡಯೋ ಮಾರುಕಟ್ಟೆಗಳಲ್ಲಿಯೂ ಪ್ರದರ್ಶನಗೊಳ್ಳುತ್ತವೆ ಅನ್ನೋದು ನನಗೆ ಗೊತ್ತು. ಆದರೆ ನನ್ನ ಮೊದಲ ಪ್ರೀತಿ ಸಿನಿಮಾ’ ಎಂದು ಜೇಮ್ಸ್ ಕ್ಯಾಮೆರಾನ್ ಅಮೇರಿಕನ್ ಸೆನೆಟರ್ ಮೈಕ್ ಲೀಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಇಂತಹ ಒಪ್ಪಂದ ಜಾರಿಗೆ ಬಂದರೆ ಚಿತ್ರಮಂದಿರಗಳು ಮುಚ್ಚಲ್ಪಡುತ್ತವೆ ಎಂದು ಜೇಮ್ಸ್ ಕ್ಯಾಮೆರಾನ್ ಆತಂಕ ಹೊರಹಾಕಿದ್ದಾರೆ. ಈ ಡೀಲ್​​ನಿಂದ ಕೆಲವೇ ಸಿನಿಮಾಗಳು ನಿರ್ಮಾಣ ಆಗುತ್ತವಂತೆ. ಸಾಕಷ್ಟು ಜನರಿಗೆ ಕೆಲಸ ಕೊಟ್ಟ ಚಿತ್ರರಂಗಕ್ಕೆ ಇದರಿಂದ ನಷ್ಟ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಾಲಿವುಡ್ ಫೇಮಸ್ ಸ್ಟುಡಿಯೋನ 74 ಲಕ್ಷ ಕೋಟಿ ರೂಪಾಯಿಗೆ ಖರೀದಿಸಿದ ನೆಟ್​ಫ್ಲಿಕ್ಸ್

‘ಉಳಿದಿರುವ ಕೆಲವೇ ಚಲನಚಿತ್ರ ನಿರ್ಮಾಣ ಸ್ಟುಡಿಯೋಗಳಲ್ಲಿ ವಾರ್ನರ್ ಬ್ರದರ್ಸ್ ಒಂದಾಗಿದೆ. ಅದು ಕೂಡ ಪಥವನ್ನು ಬದಲಾಯಿಸಿದರೆ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಲಿದೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ – Kannada News | LeT and Jaish may Target Temples In Delhi and Uttar Pradesh around Red Fort Intel Suggests

ನವದೆಹಲಿ, ಫೆಬ್ರವರಿ 21: ಪಾಕಿಸ್ತಾನ ಮೂಲದ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಕೆಂಪು ಕೋಟೆ ಮತ್ತು ಚಾಂದನಿ ಚೌಕ್ ಸುತ್ತಮುತ್ತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಒಳಗೊಂಡ ಪ್ರಮುಖ ಭಯೋತ್ಪಾದಕ ದಾಳಿಯನ್ನು (Terror Attack) ಪ್ಲಾನ್ ಮಾಡುತ್ತಿದೆ ಎಂಬ ಹೊಸ ಗುಪ್ತಚರ ಮಾಹಿತಿಯ ನಂತರ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರ ಟಾರ್ಗೆಟ್ ಪಟ್ಟಿಯಲ್ಲಿ ದೆಹಲಿ ಹಾಗೂ ಉತ್ತರ ಪ್ರದೇಶದ ದೇವಾಲಯವೂ ಸೇರಿರುವ ಸಾಧ್ಯತೆಯಿದೆ. ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ಪ್ರಯತ್ನವಾಗಿ ದಾಳಿಯ ಪ್ಲಾನ್ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ.

ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರ ವಹಿಸಿವೆ, ಪ್ರಮುಖ ಧಾರ್ಮಿಕ ಮತ್ತು ಪರಂಪರೆಯ ತಾಣಗಳ ಸುತ್ತಲೂ ನಿಯೋಜನೆಗಳನ್ನು ಹೆಚ್ಚಿಸಿವೆ. ವಾಹನಗಳು ಮತ್ತು ಜನಸಂದಣಿ ಕೇಂದ್ರಗಳ ಮೇಲೆ ತಪಾಸಣೆಗಳನ್ನು ತೀವ್ರಗೊಳಿಸಿವೆ. ಗುಪ್ತಚರ ಇಲಾಖೆ ಈ ಬಗ್ಗೆ ನಿರಂತರವಾಗಿ ತನಿಖೆ ನಡೆಸುತ್ತಿದೆ. ನವೆಂಬರ್ 2025ರಲ್ಲಿ ಕೆಂಪು ಕೋಟೆ ಬಳಿ ನಡೆದ ಮಾರಕ ಸ್ಫೋಟದ ನಂತರವೂ ಈ ಎಚ್ಚರಿಕೆ ನೀಡಲಾಗಿತ್ತು. ದೇಶಾದ್ಯಂತದ ಪ್ರಮುಖ ಧಾರ್ಮಿಕ ಸ್ಥಳಗಳಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಏಜೆನ್ಸಿಗಳು ಈ ಬಗ್ಗೆ ಕಣ್ಣಿಟ್ಟಿವೆ.

ಇದನ್ನೂ ಓದಿ: Video: ಐಇಡಿ ನಿಷ್ಕ್ರಿಯ, ದೀಪಾವಳಿ ಸಮಯದಲ್ಲಿ ತಪ್ಪಿದ ದೊಡ್ಡ ಅನಾಹುತ, ಶೋಪಿಯಾನ್​ನಲ್ಲಿ ಭಯೋತ್ಪಾದಕ ದಾಳಿ ವಿಫಲ

ದೆಹಲಿಯ ಭದ್ರತಾ ಸಂಸ್ಥೆಗಳು ಮತ್ತು ಕೇಂದ್ರ ಪಡೆಗಳು ಸೂಕ್ಷ್ಮ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ಭಾರತದ ಅತ್ಯಂತ ಪ್ರಸಿದ್ಧ ಪರಂಪರೆಯ ತಾಣಗಳಲ್ಲಿ ಒಂದಾದ ಮತ್ತು ರಾಷ್ಟ್ರೀಯ ಹೆಮ್ಮೆಯ ಸಾಂಕೇತಿಕ ಸ್ಥಳವಾದ ಐತಿಹಾಸಿಕ ಕೆಂಪು ಕೋಟೆ ಮತ್ತು ಹಳೆಯ ದೆಹಲಿಯನ್ನು ಸುತ್ತುವರೆದಿರುವ ಜನನಿಬಿಡ ಮಾರುಕಟ್ಟೆಗಳು ಮತ್ತು ದೇವಾಲಯಗಳ ಸುತ್ತಲೂ ಭದ್ರತೆ ಹೆಚ್ಚಿಸಿವೆ. ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳ ನಡುವೆ ಹಂಚಿಕೊಂಡ ಗುಪ್ತಚರ ಮಾಹಿತಿಗಳು, ಲಷ್ಕರ್-ಎ-ತೈಬಾ ನಗರದಲ್ಲಿ ಐಇಡಿ ದಾಳಿಯನ್ನು ಯೋಜಿಸುತ್ತಿರಬಹುದು ಎಂದು ಹೇಳಿವೆ. ಇದು ಜನದಟ್ಟಣೆಯ ಸಾರ್ವಜನಿಕ ಪ್ರದೇಶಗಳು, ದೇವಸ್ಥಾನಗಳು ಮತ್ತು ಚಾಂದನಿ ಚೌಕ್ ಪ್ರದೇಶವನ್ನು ಗುರಿಯಾಗಿರಿಸಿಕೊಳ್ಳಬಹುದು ಎನ್ನಲಾಗಿದೆ.

ಇದನ್ನೂ ಓದಿ: Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿ; ಕಾಶ್ಮೀರದ 1,500 ಜನರು ವಶಕ್ಕೆ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಭಾರತೀಯ ಪಡೆಗಳು ಪಾಕಿಸ್ತಾನದಲ್ಲಿ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡವು. ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಮತ್ತು ಎಲ್‌ಇಟಿ ಸಂಸ್ಥಾಪಕ ಹಫೀಜ್ ಸಯೀದ್‌ನ ಸಹಚರರೊಂದಿಗೆ ಸಂಪರ್ಕ ಹೊಂದಿರುವ ಪ್ರಮುಖ ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AUS: ಆಸ್ಟ್ರೇಲಿಯಾದಲ್ಲಿ ಅಬ್ಬರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ – Kannada News | India Women vs Australia T20: Smriti Mandhana’s Historic 82 Runs, New Records

ಫೆಬ್ರವರಿ 21 ರ ಶನಿವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತೆ ಮೊದಲು ಬ್ಯಾಟಿಂಗ್ ಮಾಡಿತು. ಹಿಂದಿನ ಪಂದ್ಯದಲ್ಲಿ ಮಂಧಾನಾ ಕೇವಲ 31 ರನ್ ಗಳಿಸಿದ್ದರು, ಆದರೆ ಈ ಬಾರಿ ಅಮೋಘ ಪ್ರದರ್ಶನ ನೀಡಿದ ಮಂಧಾನ ತಮ್ಮ 35ನೇ ಟಿ20 ಅರ್ಧಶತಕವನ್ನೂ ಪೂರ್ಣಗೊಳಿಸಿದರು. ಮಾತ್ರವಲ್ಲದೆ ಮಂಧಾನ, ಜೆಮಿಮಾ ರೊಡ್ರಿಗಸ್ ಜೊತೆಗೂಡಿ ಉತ್ತಮಜೊತೆಯಾಟವನ್ನು ಕಟ್ಟಿದರು.

Source link

ಸಿಸಿಬಿ ವಿಚಾರಣೆ ಬಳಿಕ ಉಲ್ಟಾ ಹೊಡೆದ ಸ್ನೇಹಮಯಿ ಕೃಷ್ಣ: ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸಾಮಾಜಿಕ ಕಾರ್ಯಕರ್ತ – Kannada News | Snehamayi Krishna U turns after CCB interrogation; social activist apologizes to Shalini Rajneesh over alleged bribe claim

ಸ್ನೇಹಮಯಿ ಕೃಷ್ಣ, ಶಾಲಿನಿ ರಜನೀಶ್Image Credit source: google

ಬೆಂಗಳೂರು, ಫೆಬ್ರವರಿ 21: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೇ ಗಂಭೀರ ಆರೋಪಿಸಿದ್ದರು. ಶಾಲಿನಿ ರಜನೀಶ್ ವಿರುದ್ಧ 1.60 ಕೋಟಿ ರೂ ಲಂಚದ ಆರೋಪ ಮಾಡಿದ್ದರು. ಮುಡಾ ಮಾಜಿ ಆಯುಕ್ತ ನಟೇಶ್ ಸಿಎಸ್​ಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಆರೋಪಿಸಿದ್ದು ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು. ಆದರೆ 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (snehamayi krishna) ಇದೀಗ ಉಲ್ಟಾ ಹೊಡೆದಿದ್ದಾರೆ.

ನಿನ್ನೆಯಷ್ಟೇ ದೂರುದಾರ ಸ್ನೇಹಮಯಿ ಕೃಷ್ಣರನ್ನ ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ ಮಾಡಿತ್ತು. ಆಡಿಯೋವನ್ನ ಕೋರ್ಟ್​ಗೂ ಸಲ್ಲಿಕೆ ಮಾಡೋಕೂ ಸಜ್ಜಾಗಿದ್ದರು. ಆದರೆ ಕೋರ್ಟ್​ಗೆ ಸಲ್ಲಿಸೋಕೆ ಮುಂದಾಗ್ತಿದ್ದಂತೆಯೇ ಸಿಸಿಬಿ ವಶಕ್ಕೆ ಪಡೆದಿತ್ತು. ಜೊತೆಗೆ ಮೈಸೂರಿನ 2 ಮನೆ, ಒಂದು ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಕೆಲವು ಪ್ರಮುಖ ದಾಖಲೆಗಳನ್ನ ಸೀಜ್ ಮಾಡಿದ್ದರು.

ಇದನ್ನೂ ಓದಿ: ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್

ಇದೀಗ ಸಿಸಿಬಿ ವಿಚಾರಣೆ ಬಳಿಕ ತಪ್ಪೊಪ್ಪಿಕೊಂಡಿರೋ ಸ್ನೇಹಮಯಿ ಕೃಷ್ಣ, ಆಡಿಯೋ ನಿಜ, ಆದರೆ ಶಾಲಿನಿ ರಜನೀಶ್ ವಿರುದ್ಧದ ಆರೋಪ ಸುಳ್ಳು ಅಂದಿದ್ದಾರೆ. ಮುಡಾ ಪ್ರಕರಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಸ್ಪಷ್ಟನೆ ಕೊಟ್ಟಿದ್ದಾರೆ.

ಮುಡಾ ಕೇಸ್​ಗೂ ಇದಕ್ಕೂ ಸಂಬಂಧ ಇಲ್ಲ ಅಂತಿರೋ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಮಾಜಿ ಆಯುಕ್ತ ನಟೇಶ್ ವಿರುದ್ಧ ನನ್ನ ಆರೋಪ ಸರಿಯಾಗೇ ಇದೆ ಅಂತಿದ್ದಾರೆ. ನಟೇಶ್, ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ಇದರಲ್ಲಿ ನನ್ನನ್ನೂ ಬಳಸಿಕೊಳ್ಳೋ ಪ್ರಯತ್ನ ಆಗಿತ್ತು ಅಂದಿದ್ದಾರೆ.

ಶಾಲಿನಿ ರಜನೀಶ್​​ಗೆ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ

ಸ್ನೇಹಮಯಿ ಕೃಷ್ಣ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ವಿನೋದ್ ಮತ್ತು ನಟೇಶ್ ನಡುವಿನ ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಆಡಿಯೋದಲ್ಲಿ, ಶಾಲಿನಿ ರಜನೀಶ್ ಅವರ ಬಗ್ಗೆ ನೀಡಲಾದ ಮಾಹಿತಿ ಸುಳ್ಳು ಎಂದು ಅವರು ಒಪ್ಪಿಕೊಂಡಿದ್ದಾರೆ. ಹೀಗಾಗಿ ತಮ್ಮ ತಪ್ಪಿಗಾಗಿ ಶಾಲಿನಿ ರಜನೀಶ್​ಗೆ ಕ್ಷಮೆ ಕೋರಿದ್ದಾರೆ.

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಹಲವು ಅನುಮಾನ!

ಇನ್ನು ಶಾಲಿನಿ ರಜನೀಶ್ ವಿರುದ್ಧ ಆರೋಪದಲ್ಲಿ ಕೋರ್ಟ್​ಗೆ ಸಾಕ್ಷಿ ಸಲ್ಲಿಕೆಯಾಗೋದನ್ನ ತಪ್ಪಿಸೋ ಹುನ್ನಾರ ನಡೀತಾ? ಅನ್ನೋ ಅನುಮಾನವೂ ಇದೆ. ಇಂದು ಜನಪ್ರತಿನಿಧಿಗಳ ಕೋರ್ಟ್​ಗೆ ನಟೇಶ್​ ಮಾತನಾಡಿದ್ದ ಆಡಿಯೋ ಸಲ್ಲಿಕೆಗೂ ಮುಂದಾಗಿದ್ದರು. ಆದರೆ ಕೋರ್ಟ್​ಗೆ ಆಡಿಯೋ ಸಲ್ಲಿಕೆಗೂ ಮುನ್ನವೇ ಸ್ನೇಹಮಯಿಯನ್ನ ವಶಕ್ಕೆ ಪಡೆದಿರೋದು ಹಲವು ಅನುಮಾನಕ್ಕೂ ಕಾರಣವಾಗಿತ್ತು.

ಇನ್ನು ಕೇಸ್ ಇಲ್ಲಿಗೆ ಮುಗೀತಾ? ಇಲ್ಲ, ಆಡಿಯೋ ಮಾಡಿದ್ದ ವಿನೋದ್​ನನ್ನ ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ. ಹಣಕಾಸು ವಿಚಾರದಲ್ಲಿ ನಟೇಶ್ ಮಾತನಾಡಿದ್ದ ಆಡಿಯೋವನ್ನ ಪರಿಶೀಲನೆ ಮಾಡಲಾಗುತ್ತಿದೆ. ಸ್ನೇಹಮಯಿ ವಶದ ವಿಚಾರದಲ್ಲಿ ಸಿಎಂ ಸೇರಿ ಹಲವರ ಕೈವಾಡ ಇದೆ ಅಂತಾ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಆರೋಪಿಸಿದರು. ಇದಕ್ಕೆ ತಿರುಗೇಟು ಕೊಟ್ಟ ಸಚಿವ ಪ್ರಿಯಾಂಕ್ ಖರ್ಗೆ, ಎಲ್ಲದನ್ನೂ ದ್ವೇಷ ಅನ್ನೋದು ಸರಿಯಲ್ಲ ಎಂದಿದ್ದಾರೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಆಗುತ್ತೆ ಅಂತಾ ಸಚಿವ ದಿನೇಶ್​ ಗುಂಡೂರಾವ್​ ಹೇಳಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಒಟ್ಟಿನಲ್ಲಿ ಶಾಲಿನಿ ರಜನೀಶ್ ವಿರುದ್ಧ ನನ್ನ ಆರೋಪ ಸುಳ್ಳು ಅಂತಾ ಸ್ನೇಹಮಯಿ ಕೃಷ್ಣ ಇದೀಗ ಉಲ್ಟಾ ಹೊಡೆದಿದ್ದಾರೆ. ಆದರೆ ಮುಡಾ ಮಾಜಿ ಆಯುಕ್ತ ನಟೇಶ್​ ಆಡಿಯೋದ ಬಗ್ಗೆ ಸಿಸಿಬಿ ತನಿಖೆ ಮುಂದುವರಿದಿದೆ.

ವರದಿ: ಬ್ಯರೋ ರಿಪೋರ್ಟ್​ TV9

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನೀವು ವಾಸಮಾಡುವ ಪ್ರದೇಶದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ಯಾ? ಹಾಗಿದ್ರೆ ನಿಮಗೂ ಬರಬಹುದು ಮರೆವಿನ ಕಾಯಿಲೆ – Kannada News | Air Pollution and Alzheimer’s: The Link

ವಾಯು ಮಾಲಿನ್ಯವು ವಿಶ್ವಾದ್ಯಂತ ಹೆಚ್ಚುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಮಾಲಿನ್ಯವು ಶ್ವಾಸಕೋಶದ (Lungs) ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸ್ಪಷ್ಟ, ಆದರೆ ಇತ್ತೀಚಿನ ಅಧ್ಯಯನವು ಇದು ಅಲ್ಝೈಮರ್ ( Alzheimer’s) ಕಾಯಿಲೆಯನ್ನು ಹೆಚ್ಚಿಸುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ನಿಮಗೆ ತಿಳಿದಿರುವಂತೆ ಇದೊಂದು ಮರೆವಿನ ಕಾಯಿಲೆ ಇದರಲ್ಲಿ ವ್ಯಕ್ತಿಯ ಸ್ಮರಣಶಕ್ತಿ ತುಂಬಾ ದುರ್ಬಲಗೊಂಡು ತಮ್ಮ ದೈನಂದಿನ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹಾಗಾದರೆ ಮಾಲಿನ್ಯ ಈ ಕಾಯಿಲೆಯ ಅಪಾಯವನ್ನು ಹೇಗೆ ಹೆಚ್ಚಿಸುತ್ತಿದೆ, ಅಧ್ಯಯನದಿಂದ ಸಿಕ್ಕ ಮತ್ತಷ್ಟು ಮಾಹಿತಿಗಳು ಹೇಳುವುದೇನು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ವಾಯು ಮಾಲಿನ್ಯದಿಂದ ಅಲ್ಝೈಮರ್ ಹೇಗೆ ಉಂಟಾಗುತ್ತದೆ?

ಈ ಸಂಶೋಧನೆಯನ್ನು ಎಮೋರಿ ವಿಶ್ವವಿದ್ಯಾಲಯದ ತಂಡ ವೃದ್ಧರ ಮೇಲೆ ನಡೆಸಿದ್ದು ಅಧ್ಯಯನವು ಮಾಲಿನ್ಯದಲ್ಲಿರುವ ಅತ್ಯಂತ ಸಣ್ಣ ಕಣಗಳು ಉಸಿರಾಟದ ಮೂಲಕ ದೇಹವನ್ನು ಪ್ರವೇಶಿಸಿ ರಕ್ತಪ್ರವಾಹವನ್ನು ತಲುಪಬಹುದು ಇದೆ ಕಣಗಳು ಮುಂದೆ ಆಲ್ಝೈಮರ್ನ ಅಪಾಯವನ್ನು ಹೆಚ್ಚಿಸಬಹುದು ಎಂಬುದನ್ನು ಕಂಡುಹಿಡಿದಿದೆ. ಕಲುಷಿತ ಕಣಗಳು ಮೆದುಳನ್ನು ಪ್ರವೇಶಿಸಿ ಮೆದುಳಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುವುದರಿಂದ ಈ ರೀತಿಯ ಅಪಾಯ ಹೆಚ್ಚಾಗುತ್ತದೆ. ಅದರಲ್ಲಿಯೂ ವಯಸ್ಸಾದವರಲ್ಲಿ ಇದು ಹೆಚ್ಚಾಗಿ ಕಂಡುಬರಬಹುದು. ಜೊತೆಗೆ ಈ ಹಿಂದೆ ಪಾರ್ಶ್ವವಾಯುವಿಗೆ ಒಳಗಾದವರಿಗೆ ಮಾಲಿನ್ಯದಿಂದಾಗಿ ಆಲ್ಝೈಮರ್ ಬರುವ ಅಪಾಯ ಹೆಚ್ಚಿದ್ದು ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ಮತ್ತು ಖಿನ್ನತೆಗೆ ಕಾರಣವಾಗಬಹುದು.

ಇದನ್ನೂ ಓದಿ: ಅಲ್​ಝೈಮರ್​, ಕ್ಯಾನ್ಸರ್​ ನಿಯಂತ್ರಣಕ್ಕೆ ಅಣಬೆ!

ವಾಯು ಮಾಲಿನ್ಯದಿಂದ ದೇಹವನ್ನು ಸೇರುವ ಕಣಗಳು ಮೆದುಳಿನಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ, ಇದರಿಂದ ನರ ಅಸ್ವಸ್ಥತೆಗಳ ಅಪಾಯ ಹೆಚ್ಚಾಗುತ್ತದೆ, ಮೆದುಳಿನ ಕೋಶಗಳ (ನ್ಯೂರಾನ್‌ಗಳು) ನಡುವಿನ ಸಂವಹನವು ದುರ್ಬಲಗೊಳ್ಳುತ್ತದೆ. ಅಷ್ಟೇಅಲ್ಲ ಇದು ಮೆದುಳಿನಲ್ಲಿ ಟೌ ಪ್ರೋಟೀನ್ ಸಂಗ್ರಹಕ್ಕೂ ಕಾರಣವಾಗುತ್ತದೆ. ಇದು ಮೆದುಳಿನ ಸ್ಮರಣಶಕ್ತಿಗೆ ಸಂಬಂಧಿಸಿದ ಭಾಗಗಳ ಮೇಲೆ ಪರಿಣಾಮ ಬೀರುತ್ತದೆ ಕ್ರಮೇಣ ಆಲ್ಝೈಮರ್‌ಗೆ ಕಾರಣವಾಗಬಹುದು. ಹಾಗಾಗಿ ಮಾಲಿನ್ಯ ಹೆಚ್ಚಿರುವ ಪ್ರದೇಶಗಳಲ್ಲಿ ವಾಸಿಸುವವರು ಹೆಚ್ಚುವರಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಸಂಶೋಧನೆ ಹೇಳುತ್ತದೆ. ಮಾಲಿನ್ಯವು ಶ್ವಾಸಕೋಶದ ಕ್ಯಾನ್ಸರ್ ಮತ್ತು ಆಸ್ತಮಾದಂತಹ ಶ್ವಾಸಕೋಶದ ಕಾಯಿಲೆಗಳನ್ನು ಉಂಟುಮಾಡುವುದಲ್ಲದೆ, ಮೆದುಳಿಗೆ ಹಾನಿ ಮಾಡುತ್ತಿದೆ. ಇದು ಆಲ್ಝೈಮರ್ ಅಪಾಯವನ್ನು ಹೆಚ್ಚಿಸುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ! – Kannada News | Karnataka CET 2026: KEA Extends Application Date to Feb 27 – Don’t Miss Out!

ಬೆಂಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ.

ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು 3.18 ಲಕ್ಷ ಅಭ್ಯರ್ಥಿಗಳು ಯಶಸ್ವಿಯಾಗಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದಾರೆ.

ಎಕ್ಸ್​​ ಪೋಸ್ಟ್​​ ಇಲ್ಲಿದೆ ನೋಡಿ:

ಪ್ರಮುಖ ದಿನಾಂಕಗಳು:

ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2026 ರ ರಾತ್ರಿ 11:59 ರವರೆಗೆ.

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-03-2026 ರ ಸಂಜೆ 5:30 ರವರೆಗೆ.

ಇದನ್ನೂ ಓದಿ: SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಪರೀಕ್ಷೆ ಶುರುವಾಗುವ ಸಮಯ ವಿವರ

ಅರ್ಜಿ ಸಲ್ಲಿಸಿದವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ‘ಸ್ಯಾಟ್ಸ್’ (SATS) ಮೂಲಕ ಆನ್‌ಲೈನ್‌ನಲ್ಲಿ ಪರಿಶೀಲಿಸಲಾಗಿದೆ. ಇನ್ನು 1.08 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಲಾಗಿದೆ. ಅಭ್ಯರ್ಥಿಗಳು ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ತಕ್ಷಣವೇ ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ತನ್ನ ಎಕ್ಸ್​​ ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದೆ. ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in, ಕೆಇಎ ವೆಬ್‌ಸೈಟ್‌ನ ‘UGCET 2026 Online Application’ ಲಿಂಕ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ತೊಂದರೆ ಎದುರಾದರೆ 080-23460460 ಸಂಖ್ಯೆಗೆ ಕರೆ ಮಾಡಬಹುದು ಅಥವಾ keaugcet2026@gmail.com ಗೆ ಇಮೇಲ್ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Weekly Career Horoscope: ನಿಮ್ಮ ರಾಶಿಗನುಗುಣವಾಗಿ ಫೆಬ್ರವರಿ ಕೊನೆಯ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Job Horoscope Feb 22 28, 2026: Career Growth and New Opportunities

ಫೆಬ್ರವರಿ 22ರಿಂದ 28 ರವರೆಗೆ ಕೊನೆಯ ವಾರವಾಗಿದೆ. ಗ್ರಹಗತಿಗಳ ಪರಿವರ್ತನೆಯಿಂದ ಸಂಪತ್ತು, ಅಧಿಕಾರಿಗಳು ಬರಲಿದ್ದು, ಕೆಲವರಿಗೆ ಬರುವ ಸೂಚನೆಯೂ ಸಿಗುವುದು. ಯಾವುದನ್ನೂ ನಿರ್ಲಕ್ಷಿಸದೇ ಪ್ರಾಮಾಣಿಕತೆಯಿಂದ ಇರುವಂತೆ ನೋಡಿಕೊಳ್ಳಿ.

​ಮೇಷ:

ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಹೆಗಲೇರಲಿವೆ. ಮೇಲಧಿಕಾರಿಗಳ ಬೆಂಬಲ ಸಿಗಲಿದ್ದು, ನಿಮ್ಮ ಕಾರ್ಯಕ್ಷಮತೆಗೆ ಮೆಚ್ಚುಗೆ ದೊರೆಯಲಿದೆ. ಆದರೂ ಸಹೋದ್ಯೋಗಿಗಳ ನಡುವೆ ಸಣ್ಣಪುಟ್ಟ ಪೈಪೋಟಿ ಎದುರಾಗಬಹುದು, ಎಚ್ಚರಿಕೆ ಇರಲಿ.

​ವೃಷಭ:

ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಅಥವಾ ರಫ್ತು-ಆಮದು ವ್ಯವಹಾರದವರಿಗೆ ಈ ವಾರ ಅತ್ಯಂತ ಲಾಭದಾಯಕ. ಕೆಲಸದ ನಿಮಿತ್ತ ದೂರದ ಪ್ರಯಾಣದ ಯೋಗವಿದೆ. ಪದೋನ್ನತಿಯ ಮಾತುಕತೆಗಳು ಸಕಾರಾತ್ಮಕವಾಗಿ ಮುಗಿಯಲಿವೆ.

​ಮಿಥುನ:

ಕೆಲಸದ ಒತ್ತಡ ಹೆಚ್ಚಾಗುವುದರಿಂದ ಮಾನಸಿಕ ಆಯಾಸವಾಗಬಹುದು. ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿರುವವರಿಗೆ ಸಂದರ್ಶನ ಕರೆಗಳು ಬರುವ ಸಾಧ್ಯತೆಯಿದೆ. ಬುದ್ಧಿವಂತಿಕೆಯಿಂದ ಕಠಿಣ ಸವಾಲುಗಳನ್ನು ಎದುರಿಸಿ ಯಶಸ್ವಿಯಾಗುವಿರಿ.

​ಕರ್ಕಾಟಕ:

ವೃತ್ತಿರಂಗದಲ್ಲಿ ಸ್ಥಿರತೆ ಇರಲಿದೆ. ನಿಮ್ಮ ಸೃಜನಶೀಲತೆಗೆ ಸೂಕ್ತ ವೇದಿಕೆ ಸಿಗಲಿದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಯಿಂದ ಲಾಭ ದೊರೆಯಲಿದೆ. ಕಚೇರಿಯ ರಾಜಕೀಯದಿಂದ ದೂರವಿದ್ದರೆ ನಿಮ್ಮ ಗೌರವ ವೃದ್ಧಿಯಾಗುವುದು.

​ಸಿಂಹ:

ಅಧಿಕಾರ ಮತ್ತು ಪ್ರತಿಷ್ಠೆ ಹೆಚ್ಚಾಗುವ ಸಮಯವಿದು. ಸರ್ಕಾರಿ ಕೆಲಸಗಳಲ್ಲಿರುವವರಿಗೆ ವರ್ಗಾವಣೆ ಅಥವಾ ಬಡ್ತಿಯ ಸೂಚನೆಗಳಿವೆ. ನಿಮ್ಮ ನಿರ್ಧಾರಗಳು ಸಂಸ್ಥೆಗೆ ಲಾಭ ತರಲಿವೆ. ಕೆಲಸದಲ್ಲಿ ಅತಿಯಾದ ಆತ್ಮವಿಶ್ವಾಸ ಪ್ರದರ್ಶಿಸಬೇಡಿ.

​ಕನ್ಯಾ:

ತಾಂತ್ರಿಕ ಮತ್ತು ಸಂವಹನ ಕ್ಷೇತ್ರದಲ್ಲಿರುವವರಿಗೆ ಈ ವಾರ ಶುಭ ಫಲಗಳಿವೆ. ಹೊಸ ಕೌಶಲ್ಯಗಳನ್ನು ಕಲಿಯಲು ಇದು ಸಕಾಲ. ಕೆಲಸದ ಸ್ಥಳದಲ್ಲಿ ಬಾಕಿ ಉಳಿದಿದ್ದ ಯೋಜನೆಗಳು ಪೂರ್ಣಗೊಳ್ಳಲಿವೆ. ಹಣಕಾಸಿನ ವ್ಯವಹಾರದಲ್ಲಿ ಜಾಗ್ರತೆ ಇರಲಿ.

​ತುಲಾ:

ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಉದ್ಯೋಗ ಬದಲಾವಣೆಗೆ ಇದು ಪೂರಕ ಸಮಯವಲ್ಲ, ಇದ್ದಲ್ಲಿಯೇ ಉತ್ತಮ ಪ್ರಗತಿ ಕಾಣುವಿರಿ. ನಿಮ್ಮ ಕಾರ್ಯವೈಖರಿಯಲ್ಲಿ ಬದಲಾವಣೆ ತಂದುಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದು.

​ವೃಶ್ಚಿಕ:

ವೃತ್ತಿಯಲ್ಲಿ ಶತ್ರುಗಳ ಬಾಧೆ ಹೆಚ್ಚಾಗಬಹುದು, ನಿಮ್ಮ ಕೆಲಸದ ಮೇಲೆ ಮಾತ್ರ ಗಮನವಿರಲಿ. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ತಡವಾಗಿ ಸಿಗಲಿದೆ. ನ್ಯಾಯಾಲಯದ ಕೆಲಸಗಳಲ್ಲಿ ತೊಡಗಿರುವವರಿಗೆ ಅನುಕೂಲಕರ ವಾತಾವರಣವಿರಲಿದೆ.

​ಧನುಸ್ಸು:

ಕಲಾತ್ಮಕ ಮತ್ತು ಸೃಜನಶೀಲ ವೃತ್ತಿಯಲ್ಲಿರುವವರಿಗೆ ಅಪಾರ ಕೀರ್ತಿ ಬರಲಿದೆ. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ದೊರೆಯುವ ಲಕ್ಷಣಗಳಿವೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನವು ನಿಮ್ಮ ವೃತ್ತಿಜೀವನಕ್ಕೆ ಹೊಸ ತಿರುವು ನೀಡಲಿದೆ.

​ಮಕರ:

ಕೆಲಸದ ಸ್ಥಳದಲ್ಲಿ ಹೊಸ ಸವಾಲುಗಳು ಎದುರಾಗಲಿವೆ. ನಿಮ್ಮ ತಾಳ್ಮೆ ಮತ್ತು ಶಿಸ್ತು ನಿಮಗೆ ವಿಜಯ ತಂದುಕೊಡಲಿದೆ. ಸ್ವಂತ ಉದ್ಯಮ ಆರಂಭಿಸುವ ಆಲೋಚನೆ ಇದ್ದರೆ ಈಗ ಕಾರ್ಯರೂಪಕ್ಕೆ ತರಬಹುದು. ಆರ್ಥಿಕ ಲಾಭ ಸುಧಾರಿಸಲಿದೆ.

​ಕುಂಭ:

ಬರವಣಿಗೆ, ಮಾಧ್ಯಮ ಮತ್ತು ಐಟಿ ಕ್ಷೇತ್ರದಲ್ಲಿರುವವರಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ. ನಿಮ್ಮ ಯೋಜನೆಗಳಿಗೆ ಸಹೋದ್ಯೋಗಿಗಳಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ. ಕಿರು ಪ್ರವಾಸಗಳು ಕೆಲಸದ ನಿಮಿತ್ತ ಅನಿವಾರ್ಯವಾಗಬಹುದು.

​ಮೀನ:

ಉದ್ಯೋಗದಲ್ಲಿ ಲಾಭದಾಯಕ ಬದಲಾವಣೆಗಳನ್ನು ನಿರೀಕ್ಷಿಸಬಹುದು. ಆದಾಯದ ಮೂಲಗಳು ಹೆಚ್ಚಾಗಲಿವೆ. ನಿಮ್ಮ ಮಾತಿನ ಚತುರತೆಯಿಂದ ಕಠಿಣ ಗ್ರಾಹಕರನ್ನು ಒಪ್ಪಿಸುವಲ್ಲಿ ಯಶಸ್ವಿಯಾಗುವಿರಿ. ಸಹೋದ್ಯೋಗಿಗಳೊಂದಿಗೆ ಸೌಹಾರ್ದತೆಯಿಂದ ಇರಿ. ಈ ವಾರದ ಅಂತ್ಯದೊಳಗೆ ನೀವು ಯಾವುದಾದರೂ ಪ್ರಮುಖ ನಿರ್ಧಾರ ತೆಗೆದುಕೊಳ್ಳುವಿರಿ.

– ಲೋಹಿತ ಹೆಬ್ಬಾರ್ – 8762924271 (what’s app only)

Source link

ಈ ವರ್ಣ ರಂಜಿತ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ ಗೊತ್ತಾ? – Kannada News | Do you know the purpose of putting the Tibetan flag on bikes?

ಟಿಬೆಟಿಯನ್‌ ಪ್ರಾರ್ಥನಾ ಧ್ವಜImage Credit source: Pinterest

ಇತ್ತೀಚಿನ ದಿನಗಳಲ್ಲಿ ಲಡಾಕ್‌ನಂತಹ ಹಿಲ್‌ ಸ್ಟೇಷನ್‌ಗಳಿ ಬೈಕ್‌ ರೈಡ್‌ ಹೋಗುವಂತಹದ್ದು ಟ್ರೆಂಡ್‌ ಆಗಿದೆ. ಯುವ ಜನರಂತೂ ರಜಾ ದಿನಗಳಲ್ಲಿ ಬ್ಯಾಗ್‌ ಪ್ಯಾಕ್‌ ಮಾಡಿ ಈ ರೀತಿ ರೈಡ್‌ಗಳಿಗೆ ಹೋಗುತ್ತಿರುತ್ತಾರೆ. ಹೀಗೆ ದೂರದೂರುಗಳಿಗೆ ರೈಡ್‌ ಹೋಗುವವರು ತಮ್ಮ ಬೈಕ್‌ಗಳಲ್ಲಿ (bikes)ಐದು ಬಣ್ಣಗಳಿಂದ ಕೂಡಿದ ಟಿಬೆಟಿಯನ್ ಫ್ಲ್ಯಾಗ್‌ ಒಂದನ್ನು ನೇತುಹಾಕಿರುತ್ತಾರೆ. ಬಹುಶಃ ನೀವು ಕೂಡ ಇದನ್ನು ಗಮನಿಸಿರುತ್ತೀರಿ ಅಲ್ವಾ. ಸಾಕಷ್ಟು ಮಂದಿ ಇದನ್ನು ಫ್ಯಾಶನ್‌ ಮತ್ತು ಅಲಂಕಾರಕ್ಕಾಗಿ ಹಾಕಿರುತ್ತಾರೆ ಎಂದು ಭಾವಿಸುತ್ತಾರೆ. ಆದರೆ ಇದರ ಹಿಂದಿನ ಕಾರಣವೇ ಬೇರೆಯಿದೆ. ಹಾಗಿದ್ರೆ ಈ ಐದು ಬಣ್ಣದ ಧ್ವಜವನ್ನು ಬೈಕ್‌ಗಳಲ್ಲಿ ಹಾಕುವುದೇಕೆ? ಅದರ ಅರ್ಥವೇನು ಎಂಬುದನ್ನು ನೋಡೋಣ ಬನ್ನಿ.

ಬೌದ್ಧ ಸಂಪ್ರದಾಯದ ಸಂಕೇತ ಈ ಧ್ವಜ:

ಬೈಕ್‌ಗಳಲ್ಲಿ ಹಾಕಿರುವಂತಹ ಈ ಫ್ಲ್ಯಾಗ್‌ಗಳನ್ನು ಟಿಬೆಟಿಯನ್‌ ಪ್ರೇಯರ್‌ ಫ್ಲ್ಯಾಗ್‌ ಎಂದು ಕರೆಯಲಾಗುತ್ತದೆ. ಈ ಟಿಬೆಟಿಯನ್ ಧ್ವಜಗಳು ಬೌದ್ಧ ಸಂಪ್ರದಾಯ, ಧಾರ್ಮಿಕ ನಂಬಿಕೆ ಮತ್ತು ಪ್ರಕೃತಿಯ ಮೇಲಿನ ಗೌರವವನ್ನು ಸಂಕೇತಿಸುತ್ತವೆ. ಅಲ್ಲದೆ ಧ್ವಜದ ಐದು ಬಣ್ಣಗಳು ಐದು ಅಂಶಗಳು ಮತ್ತು ಐದು ದಿಕ್ಕುಗಳನ್ನು ಸಂಕೇತಿಸುತ್ತವೆ.  ಟಿಬೆಟ್ ನನ್ಸ್ ಪ್ರಾಜೆಕ್ಟ್ ವೆಬ್‌ಸೈಟ್ ಪ್ರಕಾರ, ಇವು ಟಿಬೆಟಿಯನ್ ಪ್ರಾರ್ಥನಾ ಧ್ವಜಗಳು. ಟಿಬೆಟ್‌ನ ಜನರು ಅವುಗಳನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಈ ಧ್ವಜದಲ್ಲಿ ನೀಲಿ, ಬಿಳಿ, ಕೆಂಪು, ಹಸಿರು ಮತ್ತು ಹಳದಿ ಬಣ್ಣಗಳಿದ್ದು, ಈ ಬಣ್ಣಗಳಲ್ಲಿ ಪ್ರತಿಯೊಂದೂ ವಿಭಿನ್ನ ಅರ್ಥವನ್ನು ಹೊಂದಿದೆ.

ಈ ಧ್ವಜಗಳ ಐದು ಬಣ್ಣಗಳು ಐದು ಅಂಶಗಳನ್ನು ಸಂಕೇತಿಸುತ್ತವೆ. ಮೊದಲ ಬಣ್ಣ ನೀಲಿ, ಇದು ಆಕಾಶ  ಮತ್ತು ಪೂರ್ವ ದಿಕ್ಕನ್ನು ಸಂಕೇತಿಸುತ್ತದೆ. ಬಿಳಿ ಬಣ್ಣ ಗಾಳಿಯನ್ನು ಮತ್ತು ಪಶ್ಚಿಮ ದಿಕ್ಕನ್ನು ಪ್ರತಿನಿಧಿಸುತ್ತದೆ. ಕೆಂಪು ಬಣ್ಣವು ಬೆಂಕಿಯನ್ನು ಮತ್ತು ದಕ್ಷಿಣ ದಿಕ್ಕನ್ನು ಸಹ ಸಂಕೇತಿಸುತ್ತದೆ. ಹಸಿರು ನೀರು ಮತ್ತು ಉತ್ತರ ದಿಕ್ಕಿನೊಂದಿಗೆ ಸಂಬಂಧ ಹೊಂದಿದೆ. ಹಳದಿ ಭೂಮಿ ಮತ್ತು ಅದರ ಕೇಂದ್ರವನ್ನು ಸಂಕೇತಿಸುತ್ತದೆ.

ಟಿಬೆಟಿಯನ್ ಧ್ವಜ ಬೌದ್ಧಧರ್ಮದ ನಂಬಿಕೆಗಳೊಂದಿಗೆ ಸಂಬಂಧ ಹೊಂದಿರುವುದರಿಂದ ಈ ಧ್ವಜಗಳನ್ನು ಶಾಂತಿ ಮತ್ತು ಕರುಣೆಯನ್ನು ಸಹ ಸಂಕೇತಿಸುತ್ತವೆ. ಟಿಬೆಟಿಯನ್ ಸಂಸ್ಕೃತಿಯಲ್ಲಿ ಅವುಗಳನ್ನು ದಾರ್-ಚೋ ಎಂದು ಕರೆಯಲಾಗುತ್ತದೆ. ದಾರ್ ಎಂದರೆ ಜೀವನ, ಸಂಪತ್ತು, ಸಮೃದ್ಧಿ ಮತ್ತು ಆರೋಗ್ಯ, ಆದರೆ ಚೋ ಎಂದರೆ ಎಲ್ಲಾ ಜೀವಿಗಳು. ಈ ಧ್ವಜಗಳು ಗಾಳಿಯಲ್ಲಿ ಹಾರಿದಾಗ, ಅವುಗಳ ಶಕ್ತಿಯು ದೂರದವರೆಗೆ ಹರಡಿ ಎಲ್ಲರಿಗೂ ಯೋಗಕ್ಷೇಮವನ್ನು ಕರುಣಿಸುತ್ತದೆ ಎಂಬ ನಂಬಿಕೆಯಿದೆ.

ಇದನ್ನೂ ಓದಿ: ಚುಂಬನದಲ್ಲಿ ಎಷ್ಟು ಪ್ರಕಾರಗಳಿವೆ, ಅವುಗಳ ಅರ್ಥವೇನು ಗೊತ್ತಾ?

ಟಿಬೆಟಿಯನ್‌ ಧ್ವಜದ ಮೇಲೆ ಬರೆದ ಮಂತ್ರಗಳ ಅರ್ಥವೇನು?

ಧ್ವಜದ ಮೇಲೆ ಟಿಬೆಟಿಯನ್ ಅಕ್ಷರ “ಓಂ ಮಣಿ ಪದ್ಮೇ ಹಮ್” ಇದೆ. ಓಂ ಎಂಬುದು ಅತ್ಯಂತ ಪವಿತ್ರ ಪದ, ನಂತರ ಮಣಿ ಎಂದರೆ ರತ್ನ, ಪದ್ಮೇ ಎಂದರೆ ಕಮಲ ಮತ್ತು ಹಮ್ ಎಂದರೆ ಪ್ರಬುದ್ಧ ಆತ್ಮ. ಇದು ಕರುಣೆ, ನೈತಿಕತೆ, ತಾಳ್ಮೆ, ಕಠಿಣ ಪರಿಶ್ರಮ, ತ್ಯಾಗ ಮತ್ತು ಬುದ್ಧಿವಂತಿಕೆಯಂತಹ ಮೌಲ್ಯಗಳ ಸಂಯೋಜನೆಯಾಗಿದೆ. ಧ್ಯಾನದ ಸಮಯದಲ್ಲಿ ಮಂತ್ರವನ್ನು ಪಠಿಸುವುದರಿಂದ ಅಹಂ, ಅಸೂಯೆ, ಅಜ್ಞಾನ, ದುರಾಸೆ ಮತ್ತು ಆಕ್ರಮಣಶೀಲತೆಯನ್ನು ಹೋಗಲಾಡಿಸಬಹುದು ಎಂದು ಹೇಳಲಾಗುತ್ತದೆ.

ಟಿಬೆಟಿಯನ್ ಧ್ವಜವನ್ನು ಬೈಕ್‌ಗಳಲ್ಲಿ ಏಕೆ ಹಾರಿಸಲಾಗುತ್ತದೆ?

ಓಂ ಮಣಿ ಪದ್ಮೇ ಹಮ್ ಎಂಬ ಮಂತ್ರವಿರುವ ಈ ಧ್ವಜಗಳು ಗಾಳಿಯಲ್ಲಿ ಹಾರಾಡಿದಾಗ ಮಂತ್ರದ ಶಕ್ತಿ ಸಕ್ರಿಯವಾಗುತ್ತದೆ. ಇದು ಎಲ್ಲಾ ಅಪಾಯಗಳಿಂದ ನಮ್ಮನ್ನು ರಕ್ಷಿಸುತ್ತದೆ ಮತ್ತು  ಈ ಮಂತ್ರಗಳ ಸಕಾರಾತ್ಮಕತೆಯು ವಾತಾವರಣಕ್ಕೆ ಹರಿಯುತ್ತದೆ ಎಂದು ಎಂದು ನಂಬಲಾಗಿದೆ. ಹಾಗಾಗಿ ಬೈಕ್‌ಗಳಲ್ಲಿ ಈ ಧ್ವಜ ಹಾಕುವುದು. ಟಿಬೆಟಿಯನ್ನರು ಅವುಗಳನ್ನು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ ಮತ್ತು ಈ ಧ್ವಜಗಳನ್ನು ಕಸದ ಬುಟ್ಟಿಗೆ ಎಸೆಯುವುದನ್ನು ಅಥವಾ ನೆಲದ ಮೇಲೆ ಇಡುವುದನ್ನು ನಿಷೇಧಿಸಲಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್ – Kannada News | Darshan Convey Happy To Fans After fans did good work on his birthday

ನಟ ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಪತ್ನಿ ವಿಜಯಲಕ್ಷ್ಮೀ, ಸಹೋದರನಂತೆ ಇರುವ ನಟ ಧನ್ವೀರ್ ಅವರು ಹೊರಗಿನ ಅಪ್​​ಡೇಟ್​​ನ ದರ್ಶನ್​ಗೆ ನೀಡುತ್ತಿದ್ದಾರೆ. ದರ್ಶನ್ ಜನ್ಮದಿನ (ಫೆಬ್ರವರಿ 16) ಪ್ರಯುಕ್ತ ಒಳ್ಳೊಳ್ಳೆಯ ಕೆಲಸಗಳನ್ನು ಅಭಿಮಾನಿಗಳು ಮಾಡಿದ್ದಾರೆ. ಈ ಸಂದರ್ಭದ ವಿಡಿಯೋನ ಕೊಲ್ಯಾಜ್ ಮಾಡಿ ದರ್ಶನ್ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಹಂಚಿಕೊಳ್ಳಲಾಗಿದೆ. ‘ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದ’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೇಶವೇ ನಾಚಿಕೆ ಪಡುವಂತಾಗಿದೆ; ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರ ಟೀಕೆ – Kannada News | No one should demean our country Opposition leaders slam Youth Congress protest at AI Impact Summit

ನವದೆಹಲಿ, ಫೆಬ್ರವರಿ 21: ನವದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ (AI Impact Summit) ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಪ್ರತಿಭಟನೆ ನಡೆಸಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಇಡೀ ಜಗತ್ತಿನ ನಾಯಕರು ಆಗಮಿಸಿದ್ದ ಕೃತಕ ಬುದ್ಧಿಮತ್ತೆ (ಎಐ) ಮೇಲೆ ಕೇಂದ್ರೀಕರಿಸಿದ ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಂಗ್ರೆಸ್​ ನಾಯಕರ ಇಂತಹ ವರ್ತನೆ ಸೂಕ್ತವಲ್ಲ ಎಂದು ಹಲವಾರು ವಿಪಕ್ಷ ನಾಯಕರು ಟೀಕಿಸಿದ್ದಾರೆ.

ಭಾರತ ಮತ್ತು ವಿದೇಶಗಳಿಂದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದ ಎಐ ಶೃಂಗಸಭೆಯು ಹೊಸ ತಂತ್ರಜ್ಞಾನಗಳಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನವನ್ನು ಪ್ರದರ್ಶಿಸುವ ಉದ್ದೇಶವನ್ನು ಹೊಂದಿತ್ತು. ಆದರೆ, ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಿಂದಾಗಿ ದೇಶದ ಇಮೇಜ್ ಹಾಳಾಗಿದೆ. ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಲು ಅದು ಸೂಕ್ತವಾದ ವೇದಿಕೆಯಾಗಿರಲಿಲ್ಲ ಎಂದು ಹಲವು ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ.

“ನಿನ್ನೆ ನಡೆದ AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ನಮ್ಮೆಲ್ಲರನ್ನೂ ತಲೆ ತಗ್ಗುವಂತೆ ಮಾಡಿತು. ನಮ್ಮ ರಾಜಕೀಯ ಎಲ್ಲಿಗೆ ಹೋಗುತ್ತಿದೆ! ಯಾರೂ ನಮ್ಮ ದೇಶವನ್ನು ಎಂದಿಗೂ ಕೀಳಾಗಿ ನೋಡಬಾರದು. ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ನಾವು ಯಾವಾಗಲೂ ಜಗತ್ತಿಗೆ ಒಗ್ಗಟ್ಟಿನ ಮುಖವನ್ನು ತೋರಿಸಬೇಕು” ಎಂದು ವೈಎಸ್​ಆರ್​ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ

ಈ ಘಟನೆಯನ್ನು ಅತ್ಯಂತ ಆಕ್ಷೇಪಾರ್ಹ ಎಂದು ಕರೆದ ಬಿಎಸ್​ಪಿ ನಾಯಕಿ ಮಾಯಾವತಿ, “ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಗೆ ಭಾರತ ಮತ್ತು ವಿದೇಶಗಳಿಂದ ಅನೇಕ ಪ್ರಮುಖ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಇದು ಅಂತಾರಾಷ್ಟ್ರೀಯ ಗಮನ ಸೆಳೆದಿತ್ತು. ಕಾಂಗ್ರೆಸ್ ಯುವ ಕಾರ್ಯಕರ್ತರು ಈ ವೇಳೆ ಶೃಂಗಸಭೆಯ ಆವರಣದೊಳಗೆ ಅರೆನಗ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿರುವುದು ಅತ್ಯಂತ ಅಸಭ್ಯ ಮತ್ತು ಖಂಡನೀಯ. ಈ ಶೃಂಗಸಭೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿಲ್ಲದಿದ್ದರೆ ವಿಷಯ ವಿಭಿನ್ನವಾಗಿರುತ್ತಿತ್ತು. ಆದರೆ, ಅಂತಾರಾಷ್ಟ್ರೀಯ ಶೃಂಗಸಭೆಯ ಸಮಯದಲ್ಲಿ ಇಂತಹ ನಡವಳಿಕೆಯು ಕಳವಳಕಾರಿ ವಿಷಯವಾಗಿದೆ. ಇದು ದೇಶದ ಘನತೆ ಮತ್ತು ಇಮೇಜ್‌ಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

“ಯುವ ಕಾಂಗ್ರೆಸ್ ಸದಸ್ಯರು AI ಇಂಪ್ಯಾಕ್ಟ್ ಶೃಂಗಸಭೆಯನ್ನು ರಾಜಕೀಯ ನಾಟಕಗಳಿಗೆ ಬಳಸಿಕೊಳ್ಳುತ್ತಿರುವುದು ಶೋಚನೀಯ. ಪ್ರತಿಭಟನೆಗಳಿಗೆ ಇಂತಹ ಜಾಗತಿಕ ವೇದಿಕೆಯನ್ನು ಬಳಸುವುದರಿಂದ ನಮ್ಮ ಮಹಾನ್ ರಾಷ್ಟ್ರ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟದಾಗಿ ಬಿಂಬಿತವಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ವ್ಯತ್ಯಾಸ ಸಹಜವಾದರೂ ಎಲ್ಲಿ ಮತ್ತು ಹೇಗೆ ಪ್ರತಿಭಟಿಸಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ರಾಜಕೀಯ ಭಿನ್ನಾಭಿಪ್ರಾಯಕ್ಕೆ ಒಂದು ಸಮಯ ಮತ್ತು ಸ್ಥಳ ಎಂಬುದು ಇರುತ್ತದೆ. ಅಂತಾರಾಷ್ಟ್ರೀಯ ಶೃಂಗಸಭೆಯನ್ನು ಇದಕ್ಕಾಗಿ ಬಳಸಿಕೊಳ್ಳುವುದು ಖಂಡಿತವಾಗಿಯೂ ಸರಿಯಲ್ಲ” ಎಂದು ಬಿಆರ್‌ಎಸ್ ಹಿರಿಯ ನಾಯಕ ಕೆ.ಟಿ. ರಾಮರಾವ್ ಹೇಳಿದ್ದಾರೆ.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್​​ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ

“ನಿನ್ನೆ ನಡೆದ AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ನಿಂದ ಉಂಟಾದ ಅಡಚಣೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ನಿರಾಶೆಗೊಂಡಿದ್ದೇನೆ. ಈ ಜಾಗತಿಕ ವೇದಿಕೆಯು AI ಸೂಪರ್ ಪವರ್ ಆಗಿ ಭಾರತದ ಬೆಳೆಯುತ್ತಿರುವ ನಾಯಕತ್ವವನ್ನು ಪ್ರದರ್ಶಿಸಲು ಉದ್ದೇಶಿಸಲಾಗಿತ್ತು. ಭಾರತವು ಇದಕ್ಕಿಂತ ಉತ್ತಮವಾದುದಕ್ಕೆ ಅರ್ಹವಾಗಿದೆ. ನಾವು ಕ್ಷುಲ್ಲಕ ರಾಜಕೀಯವನ್ನು ಮೀರಿ ನಾವೀನ್ಯತೆ ಮತ್ತು ಶ್ರೇಷ್ಠತೆಯ ಮೂಲಕ ರಾಷ್ಟ್ರ ನಿರ್ಮಾಣದತ್ತ ಗಮನಹರಿಸೋಣ” ಎಂದು ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version