Headlines

ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಎಂದ ಸಿದ್ದರಾಮಯ್ಯ: ಏನಿದು ಸಿಎಂ ಸರಣಿ ಪೋಸ್ಟ್​ಗಳ ಮರ್ಮ? – Kannada News | I will not run away from the battle, says Siddaramaiah; what is the secret behind the CM series of posts

ಬೆಂಗಳೂರು, ಫೆಬ್ರವರಿ 21: ಸಿಎಂ ಸಿದ್ದರಾಮಯ್ಯ (Siddaramaiah) ನಿನ್ನೆ ಮಾಡಿದ ಸರಣಿ ಟ್ವೀಟ್​ಗಳು ಸದ್ಯ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷಗಳ ನಾಯಕರಿಗೆ ಸಿದ್ದರಾಮಯ್ಯ ಮಾಡಿರುವ ಪೋಸ್ಟ್​ಗಳೇ ಅಸ್ತ್ರವಾಗಿವೆ. ಇನ್ನು ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ ಅಂತಾ ಅವರ ಆಪ್ತ ಶಾಸಕರು ನೀಡುತ್ತಿರುವ ಡೇಟ್​ಗಳು ಕಾಂಗ್ರೆಸ್​ ಪಕ್ಷದಲ್ಲಿ ಪಟ್ಟದ ಕಾಳಗವನ್ನ ತೀವ್ರಗೊಳಿಸಿದೆ. ರಣರಂಗದಿಂದ ಓಡಿ ಹೋಗುವ ಹೇಡಿ ನಾನಲ್ಲ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರ ಇರೋವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ…

Read More

Video: ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?

ಖ್ಯಾತ ಶಿಕ್ಷಣ ತಜ್ಞರಾದ ಡಾ.ಗುರುರಾಜ ಕರ್ಜಗಿ ಯವರು ಟಿವಿ9ನ ವಿಶೇಷ ಪಾಡ್‌ಕಾಸ್ಟ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಎದುರಾಗುವ ಸವಾಲುಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಅವರು ಅಂಕಗಳಿಗಿಂತ ಜ್ಞಾನ ಸಂಪಾದನೆ ಹೆಚ್ಚು ಮುಖ್ಯ ಎಂದು ಪ್ರತಿಪಾದಿಸಿದ್ದಾರೆ. ಸಚಿನ್ ತೆಂಡೂಲ್ಕರ್, ಅಣ್ಣಾ ಹಜಾರೆ ಮತ್ತು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹವರ ಉದಾಹರಣೆಗಳನ್ನು ನೀಡಿ, ಜೀವನದಲ್ಲಿ ಅಂಕಗಳಷ್ಟೇ ನಿರ್ಣಾಯಕವಲ್ಲ ಎಂದು ತಿಳಿಸಿದ್ದಾರೆ. ಆತ್ಮವಿಶ್ವಾಸ ನಮ್ಮೊಳಗೆ ಇರಬೇಕು ಮತ್ತು ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ತಪ್ಪಿಸಬೇಕು. ಸ್ವಯಂ ಸ್ಪರ್ಧೆಯು ಯಶಸ್ಸಿಗೆ…

Read More

ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ – Kannada News | Studying Developments Indias First Reaction After US Supreme Court Order On Trump Tariffs

ನವದೆಹಲಿ, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ (Donald Trump) ವಿಧಿಸಿದ ಸುಂಕಗಳನ್ನು ರದ್ದುಗೊಳಿಸುವ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳನ್ನು ಭಾರತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. “ನಿನ್ನೆ ಸುಂಕಗಳ ಕುರಿತು ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಆ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುಎಸ್ ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮಗಳಿ ಬಗ್ಗೆ…

Read More

ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ! ಎಲ್ಲವೂ ಸುಟ್ಟು ಭಸ್ಮ – Kannada News | Karnataka Village Fury: Enraged Father in Law Burns Son in Law’s Home Over Love Marriage

ಮಂಡ್ಯ, ಫೆ.21: ಪ್ರೀತಿಸಿ ಮದುವೆಯಾದ ಅಳಿಯನ ಮೇಲೆ ಕೋಪಗೊಂಡ ಮಾವನೊಬ್ಬ ಅಳಿಯನ ಮನೆಗೇ ಬೆಂಕಿ ಹಚ್ಚಿರುವ ಘಟನೆ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದೆ. ಚುಂಚಗಹಳ್ಳಿ ಗ್ರಾಮದ ವಿನೋದ್ ಮತ್ತು ಕಾವ್ಯಾ ಎಂಬುವರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಕಾವ್ಯಾ ಮನೆಯಲ್ಲಿ ತೀವ್ರ ವಿರೋಧವಿತ್ತು. ಮನೆಯವರ ವಿರೋಧದ ನಡುವೆಯೂ ಈ ಜೋಡಿ ಕಳೆದ ಗುರುವಾರ ಮದುವೆಯಾಗಿತ್ತು. ತನ್ನ ಮಗಳು ವಿರೋಧದ ನಡುವೆ ಮದುವೆಯಾಗಿದ್ದರಿಂದ…

Read More

IND vs AUS: ಆಸ್ಟ್ರೇಲಿಯಾವನ್ನು ಆಸ್ಟ್ರೇಲಿಯಾದಲ್ಲೇ ಸೋಲಿಸಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ – Kannada News | India Women Dominate Australia T20s: Harmanpreet’s Team Wins Series 2 1

ಪ್ರಸ್ತುತ ಭಾರತ ಮಹಿಳಾ ಪಡೆ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ಪ್ರವಾಸದಲ್ಲಿ ಮೂರು ಮಾದರಿಗಳ ಸರಣಿಯನ್ನು ಆಡಲಿದೆ. ಅದರ ಭಾಗವಾಗಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಳ್ಳುವ ಮೂಲಕ ಹರ್ಮನ್​ಪ್ರೀತ್ ಕೌರ್ ಪಡೆ ಪ್ರವಾಸವನ್ನು ಸರಣಿ ಗೆಲುವಿನೊಂದಿಗೆ ಆರಂಭಿಸಿದೆ. ಸರಣಿಯ ಮೊದಲ ಪಂದ್ಯವನ್ನು ಗೆದ್ದಿದ್ದ ಭಾರತ ವನಿತಾ ಪಡೆ, ಎರಡನೇ ಪಂದ್ಯದಲ್ಲಿ ಸೋಲು ಕಂಡಿತ್ತು. ಆದರೆ ಮೂರನೇ ಹಾಗೂ ಸರಣಿ ನಿರ್ಧಾರಕ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್‌ ಹಾಗೂ ಕನ್ನಡತಿ…

Read More

‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ – Kannada News | Priyanka Chopra Reveals Shocking Truth: “Was Forced to Leave Bollywood for Global Career

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ  (Priyanka Chopra) ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ಪ್ರಿಯಾಂಕಾ ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಅಮೆರಿಕಕ್ಕೆ ಹೋದರು. ಅಲ್ಲಿ ಅವರು ಮತ್ತೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದಾಗ್ಯೂ, ಅವರು ತಮ್ಮ ಹಾಲಿವುಡ್ ಪ್ರಯಾಣದ ಬಗ್ಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ನಾನು ಎಂದಿಗೂ ಬಾಲಿವುಡ್ ಬಿಡಲು ಬಯಸಲಿಲ್ಲ, ಆದರೆ ಹೊರಗೆ ಅವಕಾಶಗಳನ್ನು ಹುಡುಕಲು ನನ್ನನ್ನು ಬಲವಂತವಾಗಿ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ…

Read More

ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಲೇವಡಿ – Kannada News | HD Kumaraswamy Reacts to Siddaramaiahs CM Tweet

ಬೆಂಗಳೂರು, ಫೆಬ್ರವರಿ 21: ಸಿಎಂ ಆಗಿರುವುದನ್ನು ಸಹಿಸುತ್ತಿಲ್ಲ ಎಂಬ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇದು ಸಿದ್ದರಾಮಯ್ಯ ಅವರ ಒಳಗಿನ ದುಗುಡವನ್ನು ತೋರಿಸುತ್ತದೆ. ಅಧಿಕಾರ ಶಾಶ್ವತವಲ್ಲ, ಸಿದ್ದರಾಮಯ್ಯ ಅವರು ಎಂಟು ವರ್ಷ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಕೇವಲ ಕುರುಬ ಸಮುದಾಯದವರು ಮಾತ್ರವಲ್ಲ, ಮೈಸೂರಿನ ರಾಜಕಾರಣದಲ್ಲಿ ಜಾತಿ ಭೇದ ಮರೆತು ಹಲವು ಸಮಾಜಗಳು ಅವರ ರಾಜಕೀಯ ಬೆಳವಣಿಗೆಗೆ ಶಕ್ತಿ ತುಂಬಿವೆ. ಈ ಸಾಮಾನ್ಯ ಜ್ಞಾನ ಅವರಿಗೆ ಇಲ್ವಾ ಎಂದು ಪ್ರಶ್ನಿಸಿದರು. ತಮ್ಮ…

Read More

ಸರ್​​ 12 ಬೇಡ.. 11 ಪರ್ಸೆಂಟ್ ಸಾಕು: ಕಮಿಷನ್​​ ಪಡೆಯುವಾಗಲೇ ಬಿಜೆಪಿ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ – Kannada News | Shirahatti MLA Dr Chandru Lamani Arrested in Bribery Case by Lokayukta

ಗದಗ, ಫೆ.21: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಅವರು 5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಅವರ ಬಾಲಾಜಿ ಆಸ್ಪತ್ರೆಯಲ್ಲಿ ಈ ದಾಳಿ ನಡೆದಿದೆ. ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ…

Read More

ಆ ಡೀಲ್​​ನಿಂದ ಅಸಮಾಧಾನಗೊಂಡ ‘ಟೈಟಾನಿಕ್’ ನಿರ್ದೇಶಕ; ಹಾಲಿವುಡ್​​ಗೆ ಎಚ್ಚರಿಕೆ ಕೊಟ್ಟ ಜೇಮ್ಸ್ ಕ್ಯಾಮೆರಾನ್ – Kannada News | James Cameron Warns: Netflix Warner Bros Deal Threatens Cinema’s Future and Theaters

ಹಾಲಿವುಡ್​​ನಲ್ಲಿ ‘ಟೈಟಾನಿಕ್’, ‘ಅವತಾರ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಜೇಮ್ಸ್ ಕ್ಯಾಮೆರಾನ್ ಅವರಿಗೆ ಇದೆ. ಅವರು ಸಿನಿಮಾ ರಂಗದ ಬಗ್ಗೆ ಕಾಳಜಿ ವಹಿಸುತ್ತಾರೆ. ಈಗ ಮುಂದಿನ ದಿನಗಳಲ್ಲಿ ಹಾಲಿವುಡ್​ಗೆ ಬರಬಹುದಾದ ತೊಂದರೆ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ. ಈ ಎಚ್ಚರಿಕೆ ನೀಡಲು ಕಾರಣ ಆಗಿದ್ದು, ಆ ಒಂದು ಡೀಲ್. ಅಷ್ಟಕ್ಕೂ ಜೇಮ್ಸ್ ಕ್ಯಾಮೆರಾನ್ (James Cameron) ಮಾತನಾಡಿದ್ದು, ಯಾವ ವಿಷಯದ ಬಗ್ಗೆ? ಇಲ್ಲಿದೆ ವಿವರ. ಇತ್ತೀಚೆಗೆ ನೆಟ್​ಫ್ಲಿಕ್ಸ್ ಸಂಸ್ಥೆ ದೊಡ್ಡ ಮೊತ್ತ ನೀಡಿ ವಾರ್ನರ್…

Read More

ದೆಹಲಿ, ಉತ್ತರ ಪ್ರದೇಶದ ದೇವಾಲಯಗಳ ಮೇಲೆ ದಾಳಿಗೆ ಎಲ್‌ಇಟಿ, ಜೈಶ್ ಸಂಚು; ಗುಪ್ತಚರ ಮಾಹಿತಿ – Kannada News | LeT and Jaish may Target Temples In Delhi and Uttar Pradesh around Red Fort Intel Suggests

ನವದೆಹಲಿ, ಫೆಬ್ರವರಿ 21: ಪಾಕಿಸ್ತಾನ ಮೂಲದ ಉಗ್ರಗಾಮಿ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಕೆಂಪು ಕೋಟೆ ಮತ್ತು ಚಾಂದನಿ ಚೌಕ್ ಸುತ್ತಮುತ್ತ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಒಳಗೊಂಡ ಪ್ರಮುಖ ಭಯೋತ್ಪಾದಕ ದಾಳಿಯನ್ನು (Terror Attack) ಪ್ಲಾನ್ ಮಾಡುತ್ತಿದೆ ಎಂಬ ಹೊಸ ಗುಪ್ತಚರ ಮಾಹಿತಿಯ ನಂತರ ನವದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಉಗ್ರರ ಟಾರ್ಗೆಟ್ ಪಟ್ಟಿಯಲ್ಲಿ ದೆಹಲಿ ಹಾಗೂ ಉತ್ತರ ಪ್ರದೇಶದ ದೇವಾಲಯವೂ ಸೇರಿರುವ ಸಾಧ್ಯತೆಯಿದೆ. ಫೆಬ್ರವರಿ 6ರಂದು ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ಪ್ರಯತ್ನವಾಗಿ…

Read More