Headlines

RCB vs DC ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 26ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಒಟ್ಟು ನಾಲ್ವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ…. ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಂಡಿಲ್ಲ. ಇದೇ ಕಾರಣದಿಂದಾಗಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ…

Read More

Bengaluru Air Quality: ಇಂದು ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ! – Kannada News | Bangalore Air Pollution Crisis: Bengaluru Air Quality is getting better in Belagavi

ಇಂದು ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ! ಬೆಂಗಳೂರು, ಏಪ್ರಿಲ್ 18: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಕಲಬುರ್ಗಿ, ಉಡುಪಿಯಲ್ಲಿ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ,…

Read More

ಸತತ ಸೋಲಿನ ಸುಳಿಯಲ್ಲಿರುವ ಅಕ್ಷಯ್ ಕುಮಾರ್ ಸಂಭಾವನೆಯಲ್ಲಿ ಭಾರೀ ಕಡಿತ – Kannada News | Akshay Kumar’s ‘Bhoot Bangla’: Priyadarshan Reunion, Pay Cut and Cast Salaries

ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಪ್ರಿಯದರ್ಶನ್ ಸುಮಾರು 16 ವರ್ಷಗಳ ನಂತರ ‘ಭೂತ್ ಬಾಂಗ್ಲಾ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಇದಕ್ಕೂ ಮೊದಲು, ಇಬ್ಬರೂ ‘ಹೇರಾ ಫೇರಿ’, ‘ಭೂಲ್ ಭುಲೈಯಾ’, ‘ಗರಂ ಮಸಾಲಾ’, ‘ಭಾಗಂ ಭಾಗ್’, ‘ದೇ ದನಾ ದನ್’ ಚಿತ್ರಗಳಿಗೆ ಒಟ್ಟಿಗೆ ಕೆಲಸ ಮಾಡಿದ್ದರು. ಇತ್ತೀಚೆಗೆ ಅಕ್ಷಯ್ ಕುಮಾರ್ ಅವರು ಅಂದುಕೊಂಡ ರೀತಿಯಲ್ಲಿ ಸಿನಿಮಾ ಯಶಸ್ಸು ಕಾಣುತ್ತಿಲ್ಲ. ಹಾಗಾದರೆ, ಅವರ ಸಂಭಾವನೆ ಕಡಿಮೆ ಆಗಿದೆಯೇ? ಆ ಬಗ್ಗೆ ಇಲ್ಲಿದೆ ವಿವರ. ಅಕ್ಷಯ್ ಕುಮಾರ್ ಅಭಿನಯದ ‘ಭೂತ್…

Read More

ಅಕ್ರಮ ಸಂಬಂಧದ ಗುಟ್ಟು ರಟ್ಟು: ಬೆಂಗಳೂರಿನಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ಹಲ್ಲೆ – Kannada News | Bengaluru Crime: Woman Assaulted by Father Son Duo in Vyalikaval Over Extra Marital Affair Dispute; Case Registered

ಬೆಂಗಳೂರು, ಏಪ್ರಿಲ್ 18: ಬೆಂಗಳೂರಿನ ವಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಸಂಬಂಧದ ಬಗ್ಗೆ ಪತ್ನಿಗೆ ತಿಳಿಸಿದ್ದಾರೆ ಎಂಬ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಶುಕ್ರವಾರ ರಾತ್ರಿ ಹಲ್ಲೆ ನಡೆದ ಬಗ್ಗೆ ವರದಿಯಾಗಿದೆ. ನಾಗರಾಜ್ ಎಂಬಾತ ಮತ್ತು ಅವರ ಮಗ ಲೋಕೇಶ್ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಘಟನೆ ರಾತ್ರಿ 10 ಗಂಟೆ ಸುಮಾರಿಗೆ ಮಹಿಳೆಯ ಮನೆಯ ಬಳಿ ಸಂಭವಿಸಿದೆ. ಆರೋಪಿಗಳಾದ ನಾಗರಾಜ್ ಮತ್ತು ಲೋಕೇಶ್ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಅವರನ್ನು ಕರೆಸಿ ವಿಚಾರಣೆ…

Read More

ಅಂಬರೀಷ್ ಬೈದರೂ ಜನರಿಗೆ ಏಕೆ ಇಷ್ಟ ಆಗುತ್ತಿತ್ತು? ವಿವರಿಸಿದ್ದ ರೆಬೆಲ್ ಸ್ಟಾರ್ – Kannada News | Rebel Star Ambareesh: Why Fans Loved His Scolding and Unique Personality

ನಟ ಅಂಬರೀಷ್ ಅವರು ಇಂದು ನಮ್ಮ ಜೊತೆ ಇಲ್ಲ ಎಂಬುದು ದುಃಖದ ವಿಷಯ. ಅವರು ನಟನಾಗಿ, ರಾಜಕಾರಣಿ ಆಗಿ ಇಷ್ಟ ಆಗಿದ್ದರು. ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಅಂಬರೀಷ್ ಅವರುದ್ದು ಭಿನ್ನ ವ್ಯಕ್ತಿತ್ವ ಆಗಿತ್ತು. ಅವರು ಬೈದರೂ ಜನರಿಗೆ ಇಷ್ಟ ಆಗುತ್ತಿತ್ತು. ಅದು ಹೇಗೆ ಮತ್ತು ಏಕೆ ಎಂಬುದನ್ನು ಸ್ವತಃ ಅಂಬರೀಷ್ ಅವರೇ ವಿವರಿಸಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಎಲ್ಲ ಹೀರೋಗಳು ಪ್ರೀತಿ ತೋರಿಸುತ್ತಾ ಇದ್ದಿದ್ದು ತಮ್ಮ ಪ್ರೀತಿಯ ಮಾತುಗಳಿಂದ. ಆದರೆ, ಅಂಬರೀಷ್…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ; ಮನೆಯಿಂದ ಹೊರ ಬರುವ ಮುನ್ನ ಎಚ್ಚರ! – Kannada News | Karnataka Weather Forecast: Heat wave alert in Udupi, Uttara Kannada and Dakshina Kannada

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆImage Credit source: google Gemini ಬೆಂಗಳೂರು, ಏಪ್ರಿಲ್ 18: ಬೇಸಿಗೆಗೆ ಕಾಲಿಡುವಷ್ಟರಲ್ಲೇ ರಾಜ್ಯದಾದ್ಯಂತ ಉಷ್ಣ ಅಲೆ (Karnataka Weather) ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10…

Read More

ಬೆಂಗಳೂರು ಹೃದಯಭಾಗದಲ್ಲೇ ಜಲಕ್ಷಾಮ: ನೀರಿಗಾಗಿ ನಿದ್ದೆಬಿಟ್ಟ ರಾಜಾಜಿನಗರದ ಜನ, ಜಲಮಂಡಳಿ ವಿರುದ್ಧ ಆಕ್ರೋಶ – Kannada News | Bengaluru Water Crisis: Rajajinagar Residents Wait Until Midnight for Water; Slam BWSSB Over Bills Without Supply

ಬೆಂಗಳೂರು, ಏಪ್ರಿಲ್ 18: ಒಂದೆಡೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಗ್ಯಾಸ್ ಸಿಗದೆ ಚಾಲಕರು ಹೈರಾಣಾಗಿ ಕ್ಯೂ ನಿಲ್ಲುವಂತಾಗಿದ್ದರೆ, ಮತ್ತೊಂದೆಡೆ ಕುಡಿಯುವ ನೀರಿಗಾಗಿ ಜನ ಕಿಲೋಮೀಟರ್‌ಗಟ್ಟಲೆ ಅಲೆಯುವಂತಾಗಿದೆ. ನಗರದ ಹೃದಯಭಾಗದಲ್ಲಿರುವ ರಾಜಾಜಿನಗರದ ಚಾಮುಂಡಿನಗರದ ನಿವಾಸಿಗಳ ಸ್ಥಿತಿ ಈಗ ಕರುಣಾಜನಕವಾಗಿದ್ದು, ಹನಿ ನೀರಿಗಾಗಿ ಮಧ್ಯರಾತ್ರಿ ನಿದ್ದೆ ಬಿಟ್ಟು ಕಾಯುವ ಪರಿಸ್ಥಿತಿ ಬಂದೊದಗಿದೆ. ರಾಜಾಜಿನಗರದ ವಾರ್ಡ್ ನಂ. 130ರ 5ನೇ ಬ್ಲಾಕ್ ವ್ಯಾಪ್ತಿಯ ಚಾಮುಂಡಿನಗರದಲ್ಲಿ ಸುಮಾರು 3,000ಕ್ಕೂ ಹೆಚ್ಚು ಕುಟುಂಬಗಳಿವೆ. ಆದರೆ, ಇಲ್ಲಿಗೆ ಬಿಡಬ್ಲ್ಯೂಎಸ್‌ಎಸ್‌ಬಿ (BWSSB) ಪೂರೈಸುವ ನೀರು ಯಾರ…

Read More

‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’; ಶಿವಣ್ಣನ ಎದುರು ಫ್ಯಾನ್ಸ್ ಈ ಬೇಡಿಕೆ ಇಟ್ಟಿದ್ದೇಕೆ? – Kannada News | Shiva Rajkumar’s Viral Dance: Fans Say He Should Be Dhurandhar’s Rehman Dakait

ಕನ್ನಡದ ನಟ ಶಿವರಾಜ್​​ಕುಮಾರ್ ಅವರು (Shiva Rajkumar) ವಿವಿಧ ರೀತಿಯ ಪಾತ್ರಗಳ ಮೂಲಕ ಜನರ ಗಮನ ಸೆಳೆದಿದ್ದಾರೆ. ಓಂ ಚಿತ್ರದಲ್ಲಿ ಲಾಂಗ್ ಹಿಡಿದು ಮಿಂಚಿದ್ದರು. ಆ ಬಳಿಕ ಅವರಿಗೂ ಮಚ್ಚಿಗೂ ಒಂದು ನಂಟು ಬೆಳೆಯಿತು. ಈ ರೀತಿಯ ಪಾತ್ರಗಳು ಶಿವಣ್ಣಗೆ ಹೆಚ್ಚು ಹೊಂದುತ್ತವೆ. ಶಿವಣ್ಣ ಓರ್ವ ಅದ್ಭುತ ಡ್ಯಾನ್ಸರ್ ಕೂಡ ಹೌದು. ಇತ್ತೀಚೆಗೆ ಅವರು ಡ್ಯಾನ್ಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಬಳಿಕ ಅನೇಕರು ‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’ ಎಂದು ಕಮೆಂಟ್…

Read More

ತಮಿಳುನಾಡು: ವಾಲ್ಪಾರೈ ಘಾಟ್​ನಲ್ಲಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ವ್ಯಾನ್, ಕೇರಳದ 9 ಮಂದಿ ಸಾವು – Kannada News | Tamil Nadu Valparai Ghat Road Accident: 9 Tourists from Kerala Killed as Van Plunges into Deep Gorge Near Pollachi

ಕೊಯಮತ್ತೂರು, ಏಪ್ರಿಲ್ 18: ತಮಿಳುನಾಡಿನ (Tamil Nadu) ಪ್ರಸಿದ್ಧ ಪ್ರವಾಸಿ ತಾಣವಾದ ವಾಲ್ಪಾರೈ-ಪೊಳ್ಳಾಚಿ ಘಾಟ್ (Valparai Ghat) ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೇರಳ ಮೂಲದ ಒಂಬತ್ತು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಹತ್ತಾರು ಅಡಿ ಆಳದ ಪ್ರಪಾತಕ್ಕೆ ಉರುಳಿದ್ದರಿಂದ ಈ ದುರಂತ ಸಂಭವಿಸಿದೆ. ಮೃತಪಟ್ಟವರಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಪಾಂಗು ಎಂಬಲ್ಲಿನ ಸರ್ಕಾರಿ ಎಲ್‌ಪಿ ಶಾಲೆಯ ಐವರು ಶಿಕ್ಷಕಿಯರು ಸೇರಿದ್ದಾರೆ. ಮೃತರನ್ನು ಅಜಿತಾ (54), ರಮ್ಲಾ (52),…

Read More

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02…

Read More