ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ – Kannada News | TMC party office set ablaze amid clashes with BJP workers in West Bengal

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ ಬೆಂಕಿಯನ್ನೂ ಹಚ್ಚಲಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs LSG: ಅಪರೂಪಕ್ಕೆ ಸಿಕ್ಕಿತ್ತು ವಿಕೆಟ್; ಬುಮ್ರಾ ಮಾಡಿದ್ರ ಎಡವಟ್ಟು..! ವಿಡಿಯೋ ನೋಡಿ – Kannada News | IPL 2026: Jasprit Bumrah’s Poor Form & No Balls Cost Mumbai Indians Dearly

2026 ರ ಐಪಿಎಲ್‌ನಲ್ಲಿ (IPL 2026) ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಬ್ಯಾಟಿಂಗ್‌ ವಿಭಾಗದ ಪಾತ್ರ ಎಷ್ಟಿದೆಯೋ, ಬೌಲಿಂಗ್ ವಿಭಾಗದ್ದು ಅಷ್ಟೇ ಕೊಡುಗೆ ಇದೆ. ಅದರಲ್ಲೂ ಮುಂಬೈ ತಂಡದ ಬೌಲಿಂಗ್ ವಿಭಾಗದ ಜೀವಾಳ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ (Jasprit Bumrah) ಈ ಆವೃತ್ತಿಯಲ್ಲಿ ವಿಕೆಟ್ ಬರ ಎದುರಿಸುತ್ತಿದ್ದಾರೆ. ಇದು ಮುಂಬೈ ತಂಡದ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎನ್ನಬಹುದು. ಇದುವರೆಗೆ ಬುಮ್ರಾ ಈ ಆವೃತ್ತಿಯಲ್ಲಿ 10 ಪಂದ್ಯಗಳನ್ನಾಡಿದ್ದಾರೆ. ಈ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ.

ನೋ ಬಾಲ್ ಎಸೆದ ಬುಮ್ರಾ

ಇಂದು ನಡೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಪವರ್‌ಪ್ಲೇನಲ್ಲಿ ಎರಡು ಓವರ್​ಗಳನ್ನು ಬೌಲ್ ಮಾಡಿದ ಬುಮ್ರಾ ದುಬಾರಿಯಾಗಿದ್ದರು. ಇದರ ಜೊತೆಗೆ ವಿಕೆಟ್ ಕೂಡ ಪಡೆದಿರಲಿಲ್ಲ. ಆ ನಂತರ ಡೆತ್ ಓವರ್​ನಲ್ಲಿ ಬೌಲಿಂಗ್​ಗೆ ಬಂದ ಬುಮ್ರಾಗೆ ವಿಕೆಟ್ ಪಡೆಯುವ ಅವಕಾಶ ಸಿಕ್ಕಿತು. ಲಕ್ನೋ ಪರ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಹಿಮ್ಮತ್ ಸಿಂಗ್, ಬುಮ್ರಾ ಬೌಲ್ ಮಾಡಿದ 14ನೇ ಓವರ್​ನಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಆದರೆ ದುರಾದೃಷ್ಟವೆಂಬಂತೆ ಬುಮ್ರಾ ಆ ಎಸೆತವನ್ನು ನೋ ಬಾಲ್ ಮಾಡಿದ್ದರು. ಹೀಗಾಗಿ ಹಿಮ್ಮತ್​ಗೆ ಜೀವದಾನ ಸಿಕ್ಕಿತು.

 2 ರನ್​ಗೆ ಸಿಕ್ಕಿತು ಜೀವದಾನ

ಹಿಮ್ಮತ್​ಗೆ ಜೀವದಾನ ಸಿಕ್ಕಾಗ ಅವರು ಕೇವಲ 2 ರನ್ ಮಾತ್ರ ಗಳಿಸಿದ್ದರು. ನೋ ಬಾಲ್ ಎಸೆದು ಎದುರಾಳಿ ಬ್ಯಾಟರ್​ಗೆ ಜೀವದಾನ ಮಾಡಿದ್ದು ಮಾತ್ರವಲ್ಲದೆ ಬುಮ್ರಾ, ಅದೇ ಓವರ್​ನಲ್ಲಿ ಎರಡನೇ ನೋ ಬಾಲ್ ಮಾಡಿದರು. ಒಟ್ಟಾರೆ ಈ ಪಂದ್ಯದಲ್ಲಿ ಬುಮ್ರಾ ಬರೋಬ್ಬರಿ 3 ನೋ ಬಾಲ್​ಗಳನ್ನು ಎಸೆದರು. ಮಾತ್ರವಲ್ಲದೆ ಬುಮ್ರಾ ಈ ಆವೃತ್ತಿಯಲ್ಲಿ ಈಗಾಗಲೇ ಒಂಬತ್ತು ನೋ-ಬಾಲ್‌ಗಳನ್ನು ಎಸೆದಿದ್ದಾರೆ. ಬುಮ್ರಾ ಈ ರೀತಿಯಾಗಿ ಲಯ ತಪ್ಪಿರುವುದನ್ನು ನೋಡುವುದು ತುಂಬಾ ವಿರಳ ಆದರೆ ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಬುಮ್ರಾ ಲಯ ಕಳೆದುಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

40 ರನ್ ಬಾರಿಸಿದ ಹಿಮ್ಮತ್

ಇನ್ನು ಬುಮ್ರಾರಿಂದ ಜೀವದಾನ ಪಡೆದ ಹಿಮ್ಮತ್ 31 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 40 ರನ್​ಗಳ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಮಾರ್ಕ್ರಾಮ್ ಅವರೊಂದಿಗೆ 6ನೇ ವಿಕೆಟ್​ಗೆ ಅಜೇಯ ಅರ್ಧಶತಕದ ಜೊತೆಯಾಟವನ್ನು ಕಟ್ಟಿ ಲಕ್ನೋ ತಂಡವನ್ನು 228 ರನ್​ಗಳಿಗೆ ಕೊಂಡೊಯ್ದರು. ಅಂದರೆ ಬುಮ್ರಾ ಮಾಡಿದ ಎಡವಟ್ಟು ಮುಂಬೈ ತಂಡಕ್ಕೆ 38 ರನ್​ಗಳ ದಂಡವಾಗಿ ಪರಿಣಮಿಸಿತು.

MI vs LSG: 6,6,6,6,6,6,6.. 2ನೇ ವೇಗದ ಅರ್ಧಶತಕ ಬಾರಿಸಿದ ಪೂರನ್

ಬುಮ್ರಾಗೆ ವಿಕೆಟ್ ಬರ

ನಿರ್ಣಾಯಕ ವಿಕೆಟ್ ಟೇಕಿಂಗ್ ಪ್ರದರ್ಶನಕ್ಕೆ ಹೆಸರುವಾಸಿಯಾದ ಜಸ್ಪ್ರೀತ್ ಬುಮ್ರಾ ಈ ಆವೃತ್ತಿಯಲ್ಲಿ ವಿಕೆಟ್ ಪಡೆಯಲು ಕಷ್ಟಪಡುತ್ತಿದ್ದಾರೆ. ಈ ಆವೃತ್ತಿಯಲ್ಲಿ ಆಡಿರುವ 10 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ, 100 ಕ್ಕಿಂತ ಹೆಚ್ಚು ಬೌಲಿಂಗ್ ಸರಾಸರಿ ಹೊಂದಿದ್ದಾರೆ. ತವರು ಮೈದಾನವಾದ ವಾಂಖೆಡೆಯಲ್ಲಿ, ಬುಮ್ರಾ ತಮ್ಮ ಮೊದಲ ಆರು ಪಂದ್ಯಗಳಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದಾರೆ. ಈ ಆವೃತ್ತಿಯಲ್ಲಿ ಬುಮ್ರಾ ಅವರ ಎಕಾನಮಿ ರೇಟ್​ ಕೂಡ ಪ್ರತಿ ಓವರ್‌ಗೆ ಸುಮಾರು 9 ರನ್‌ಗಳಷ್ಟಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:07 pm, Mon, 4 May 26

Source link

West Bengal Election 2026 Result: ಬಂಗಾಳದ ಭವಾನಿಪುರದಲ್ಲಿ ಸುವೇಂದು ಅಧಿಕಾರಿ ಎದುರು ಸಿಎಂ ಮಮತಾ ಬ್ಯಾನರ್ಜಿ ಹೀನಾಯ ಸೋಲು – Kannada News | West Bengal Election Results Mamata Banerjee Loses Bhabanipur To Suvendu Adhikari

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ 4ನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಉತ್ಸಾಹ ಮತ್ತು ವಿಶ್ವಾಸದಲ್ಲಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರಿಗೆ ಭಾರೀ ಮುಖಭಂಗವಾಗಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಬಿಜೆಪಿ ಬಹುಮತದ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಆದರೂ ಧೃತಿಗೆಡದ ಮಮತಾ ಬ್ಯಾನರ್ಜಿ ಸೂರ್ಯಾಸ್ತವಾಗುವಷ್ಟರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಡಿಯೋ ಮೂಲಕ ತಮ್ಮ ಬೆಂಬಲಿಗರಿಗೆ ಧೈರ್ಯ ತುಂಬಿದ್ದರು. ಸಂಜೆ ಟಿಎಂಸಿ ಭಾರೀ ಸೋಲನ್ನು ಅನುಭವಿಸುತ್ತಿದ್ದಂತೆ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪ ಮಾಡಿದ್ದರು. ಇದೀಗ ತಮ್ಮ ತವರು ಕ್ಷೇತ್ರವಾದ ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಎದುರು ಹೀನಾಯವಾಗಿ ಸೋತಿದ್ದಾರೆ.

ಸುವೇಂದು ಅಧಿಕಾರಿ ಬಂಗಾಳದ ಭವಾನಿಪುರ ಸ್ಥಾನವನ್ನು ಗೆದ್ದಿದ್ದಾರೆ. ಅವರು 20ನೇ ಸುತ್ತಿನ ಎಣಿಕೆಯ ನಂತರ 73,463 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ 58,349 ಮತಗಳನ್ನು ಪಡೆದರು. ಹೀಗಾಗಿ, ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಅವರನ್ನು 15,114 ಮತಗಳಿಂದ ಸೋಲಿಸಿದರು. ಮಮತಾ ಬ್ಯಾನರ್ಜಿಯವರ ರಾಜಕೀಯ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಈ ಕ್ಷೇತ್ರದಲ್ಲಿ ಈ ಬಾರಿ ಮತದಾರರು ಬಿಜೆಪಿಗೆ ಅಧಿಕಾರ ನೀಡಿದ್ದಾರೆ. ಇದು ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನಕ್ಕೆ ದೊಡ್ಡ ಹೊಡೆತ ನೀಡಿದೆ.

ಕಳೆದ ಚುನಾವಣೆಯಲ್ಲೂ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ಸೋತಿದ್ದರು ಎಂಬುದು ಗಮನಾರ್ಹ. ಆದರೆ, ಆ ಚುನಾವಣೆಯಲ್ಲಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಸೋತಿದ್ದರು. ಈ ಬಾರಿ ಭವಾನಿಪುರ ಕ್ಷೇತ್ರದಿಂದ ಸೋತಿದ್ದಾರೆ.

ಇದನ್ನೂ ಓದಿ: West Bengal CM: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ?

ಏಳನೇ ಸುತ್ತಿನ ಅಂತ್ಯದ ವೇಳೆಗೆ ಮಮತಾ ಬ್ಯಾನರ್ಜಿ 17,000ಕ್ಕೂ ಹೆಚ್ಚು ಮತಗಳ ಮುನ್ನಡೆಯನ್ನು ಹೊಂದಿದ್ದರು. ಆದರೆ ನಂತರದ ಸುತ್ತುಗಳಲ್ಲಿ ಅಂತರ ಕಡಿಮೆಯಾಯಿತು. 14 ನೇ ಸುತ್ತಿನ ವೇಳೆಗೆ 4,000ಕ್ಕಿಂತ ಕಡಿಮೆಯಾಯಿತು. ದಕ್ಷಿಣ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ನ ಭದ್ರಕೋಟೆ ಎಂದು ದೀರ್ಘಕಾಲದಿಂದ ಪರಿಗಣಿಸಲ್ಪಟ್ಟ ಈ ಸ್ಥಾನವು ಇಬ್ಬರೂ ನಾಯಕರ ನಡುವಿನ ಪ್ರತಿಷ್ಠೆಯ ಸ್ಪರ್ಧೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಸದಾ ಇತರರ ಮಾತನ್ನು ಕೇಳುವುದರಿಂದ ಜೀವನದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತವೆ ಗೊತ್ತಾ? – Kannada News | Chanakya Niti: What are the effects on life of always listening to others?

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಶ್ರೀಮಂತಿಕೆ, ಸಂಬಂಧಗಳು ಮಾತ್ರವಲ್ಲ ನಮಗೆ ಸರಿಯಾದ ಮಾರ್ಗವನ್ನು ತೋರಿಸುವ ಅನೇಕ ಜೀವನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ. ಜೊತೆಗೆ ಇತರರನ್ನು ಕುರುಡಾಗಿ ನಂಬಿದಾಗ ಉಂಟಾಗುವ ಕೆಲವು ಅಪಾಯಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಇತರರನ್ನು ಕುರುಡಾಗಿ ನಂಬುವ, ಸದಾ ಇತರರ ಮಾತನ್ನೇ ಕೇಳುವ ಅಭ್ಯಾಸ ಒಬ್ಬ ವ್ಯಕ್ತಿಗಿದ್ದರೆ, ಅವನು ವೇಗವಾಗಿ ವಿನಾಶದತ್ತ ಸಾಗುತ್ತದೆ ಎಂಬುದನ್ನು ಸಹ ಎಚ್ಚರಿಸಿದ್ದಾರೆ. ಹಾಗಿದ್ರೆ ಈ ಒಂದು ತಪ್ಪಿನಿಂದ ಜೀವನದಲ್ಲಿ ಏನೆಲ್ಲಾ ಅಪಾಯಗಳು ಎದುರಾಗುತ್ತವೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳೋಣ.

ಇತರರ ಮಾತನ್ನು ಕೇಳುವುದರಿಂದ ಜೀವನ ಹೇಗೆಲ್ಲಾ ಹಾಳಾಗುತ್ತದೆ ಗೊತ್ತಾ?

ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ: ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಇತರರನ್ನು ಕುರುಡಾಗಿ ನಂಬಿದಾಗ, ಆತ ಬೇಗನೆ ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾನೆ. ಕೆಲವೊಮ್ಮೆ, ಜನರು ತಮ್ಮ ಮಾತುಗಳ ಹಿಂದೆ ಸ್ವಾರ್ಥ, ಕೆಟ್ಟ ಉದ್ದೇಶಗಳನ್ನು ಇಟ್ಟುಕೊಂಡಿರುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಅವರ ಮಾತುಗಳನ್ನು ನಂಬಿ ತಪ್ಪು ದಿಕ್ಕಿನಲ್ಲಿ ಮುಂದುವರಿದರೆ, ಅದರಿಂದ ನಿಮ್ಮ ಸಂಪೂರ್ಣ ಜೀವನವೇ ಹಾಳಾಗುತ್ತದೆ.

ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ದುರ್ಬಲಗೊಳ್ಳುತ್ತದೆ: ಆಚಾರ್ಯ ಚಾಣಕ್ಯರು ಹೇಳುವಂತೆ, ಒಬ್ಬ ವ್ಯಕ್ತಿಯು ಇತರರ ಸಲಹೆಗೆ ಮಣಿದು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿದಾಗ, ಆತ ಸಣ್ಣ ಕೆಲಸಗಳಿಗೂ ಇತರರನ್ನು ಅವಲಂಬಿಸಲು ಪ್ರಾರಂಭಿಸುತ್ತಾನೆ. ಇದು ಆತನ ಯೋಚಿಸುವ ಮತ್ತು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು   ದುರ್ಬಲಗೊಳಿಸುತ್ತದೆ.  ನೀವು ಜೀವನದಲ್ಲಿ ಯಶಸ್ವಿಯಾಗಲು ಬಯಸಿದರೆ, ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸುವುದು ತುಂಬಾನೇ ಮುಖ್ಯ.

ಇದನ್ನೂ ಓದಿ: ಗಂಡನಾದವನು ತನ್ನ ಹೆಂಡತಿಯ ಬಳಿ ಆಡುವ ಮಾತುಗಳು ಸುಂದರ ಸಂಬಂಧವನ್ನೇ ಹಾಳು ಮಾಡುತ್ತದೆ

ಆತ್ಮವಿಶ್ವಾಸದ ನಷ್ಟ: ಚಾಣಕ್ಯ ನೀತಿಯ ಪ್ರಕಾರ, ಒಬ್ಬ ವ್ಯಕ್ತಿಯು ಎಲ್ಲದಕ್ಕೂ ಇತರರನ್ನು ಅವಲಂಬಿಸಲು ಪ್ರಾರಂಭಿಸಿದಾಗ, ಇತರರ ಮಾತನ್ನೇ ಕೇಳಿ ಮುಂದೆ ಸಾಗಿದಾಗ ಆತನ ಆತ್ಮವಿಶ್ವಾಸವು ಬೇಗನೆ ಕುಸಿಯುತ್ತದೆ. ಒಂದು ನಿರ್ದಿಷ್ಟ ಹಂತದ ನಂತರ, ಆತ ತನ್ನಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಾನೆ ಮತ್ತು ಜೀವನದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಇತರರ ಅಭಿಪ್ರಾಯಗಳನ್ನು ಮಾತ್ರ ಅವಲಂಬಿಸಲು ಪ್ರಾರಂಭಿಸುತ್ತಾನೆ. ಈ ಅಭ್ಯಾಸವು ಕೊನೆಗೆ ವ್ಯಕ್ತಿಯ ವ್ಯಕ್ತಿತ್ವವನ್ನೇ ದುರ್ಬಲಗೊಳಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಟಾಕ್ಸಿಕ್’ ಸಿನಿಮಾದ ಬೋಲ್ಡ್ ದೃಶ್ಯಕ್ಕೆ ಕಿಯಾರಾ ಕಿರಿಕ್ ಇಲ್ಲ: ವದಂತಿಗಳಿಗೆ ತೆರೆ ಎಳೆದ ನಟಿ – Kannada News | Kiara Advani denies rumours about toning down bold scenes in Yash starrer Toxic

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಅನೌನ್ಸ್ ಆದ ದಿನದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈಗ ಈ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರು ತಮ್ಮ ಬಗ್ಗೆ ಹರಿದಾಡುತ್ತಿದ್ದ ದೊಡ್ಡ ಸುಳ್ಳು ಸುದ್ದಿಯೊಂದಕ್ಕೆ ಬ್ರೇಕ್ ಹಾಕಿದ್ದಾರೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಯಶ್ ಮತ್ತು ಕಿಯಾರಾ ಅಡ್ವಾಣಿ ಅವರ ನಡುವೆ ಬೋಲ್ಡ್ ದೃಶ್ಯಗಳು ಇವೆ. ಅವುಗಳ ಬಗ್ಗೆ ಕಿಯಾರಾ ತಕರಾರು ತೆಗೆಯುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಅದು ನಿಜವಲ್ಲ ಎಂದು ಸ್ವತಃ ಕಿಯಾರಾ ಅವರು ಸ್ಪಷ್ಟಪಡಿಸಿದ್ದಾರೆ.

‘ಟಾಕ್ಸಿಕ್’ ಚಿತ್ರದಲ್ಲಿರುವ ತಮ್ಮ ಬೋಲ್ಡ್ ದೃಶ್ಯಗಳನ್ನು ಕತ್ತರಿಸುವಂತೆ ಅಥವಾ ಅವುಗಳ ತೀವ್ರತೆಯನ್ನು ಕಡಿಮೆ ಮಾಡುವಂತೆ ಕಿಯಾರಾ ಅವರು ಚಿತ್ರತಂಡಕ್ಕೆ ಕೇಳಿಕೊಂಡಿದ್ದಾರೆ ಎಂಬ ವದಂತಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡುತ್ತಿದ್ದವು. ಹಲವು ಮನರಂಜನಾ ಪೋರ್ಟಲ್‌ಗಳು ಇದನ್ನು ನಿಜವೆಂಬಂತೆ ವರದಿ ಮಾಡಿದ್ದವು.

ಈ ಬಗ್ಗೆ ಮೌನ ಮುರಿದಿರುವ ಕಿಯಾರಾ ಅಡ್ವಾಣಿ ಅವರು, ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಅಂತಹ ವರದಿಯೊಂದರ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಅದರ ಮೇಲೆ ದೊಡ್ಡ ಅಕ್ಷರಗಳಲ್ಲಿ ‘ಸಂಪೂರ್ಣ ಅಸಂಬದ್ಧ’ ಎಂದು ಬರೆಯುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇದರಿಂದಾಗಿ ಅಭಿಮಾನಿಗಳ ಅನುಮಾನ ಬಗೆಹರಿದಿದೆ.

ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರವು ಸದ್ಯ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಮೊದಲು ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ, ಜಾಗತಿಕ ರಾಜಕೀಯ ಉದ್ವಿಗ್ನತೆಗಳ ಕಾರಣದಿಂದ ಜೂನ್ 4ಕ್ಕೆ ಮುಂದೂಡಲ್ಪಟ್ಟಿತ್ತು. ಆದರೆ ಏಪ್ರಿಲ್ 29ರಂದು ಚಿತ್ರತಂಡ ಮತ್ತೊಂದು ಅಪ್‌ಡೇಟ್ ನೀಡಿ, ಜಾಗತಿಕವಾಗಿ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಸೂಕ್ತ ಸಮಯಕ್ಕಾಗಿ ಕಾಯುತ್ತಿದ್ದೇವೆ, ಆದ್ದರಿಂದ ಜೂನ್ 4ರ ಬಿಡುಗಡೆಯನ್ನೂ ಮುಂದೂಡಲಾಗಿದೆ ಎಂದು ತಿಳಿಸಿದೆ. ಸದ್ಯಕ್ಕೆ ಚಿತ್ರದ ಹೊಸ ಬಿಡುಗಡೆ ದಿನಾಂಕ ಘೋಷಣೆಯಾಗಿಲ್ಲ.

ಇದನ್ನೂ ಓದಿ: ‘ಟಾಕ್ಸಿಕ್’ ಕಥೆ ಏನು ಎಂಬುದನ್ನು ಓಪನ್ ಆಗಿ ಹೇಳಿದ ಯಶ್; ವಿಡಿಯೋ ವೈರಲ್

ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರದಲ್ಲಿ ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಅವರಂತಹ ದೊಡ್ಡ ತಾರಾಗಣವೇ ಇದೆ. ಟೀಸರ್ ಮೂಲಕವೇ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿರುವ ಈ ಆ್ಯಕ್ಷನ್-ಥ್ರಿಲ್ಲರ್ ಚಿತ್ರಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸದ್ಯ ಕಿಯಾರಾ ಅವರ ಈ ಖಡಕ್ ಸ್ಪಷ್ಟನೆಯು ಅಭಿಮಾನಿಗಳಲ್ಲಿನ ಗೊಂದಲವನ್ನು ದೂರ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

West Bengal CM: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? – Kannada News | BJP set to make history in West Bengal, Who will be the Next Chief Minister?

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Assembly Elections) ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈ ಐತಿಹಾಸಿಕ ಕ್ಷಣದಲ್ಲಿ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲವೂ ಮೂಡಿದೆ. ಬಿಜೆಪಿ ತನ್ನ ಪ್ರಚಾರದಲ್ಲಿ ಮಹಿಳಾ ಭದ್ರತೆಯನ್ನು ಮುಂಚೂಣಿಯಲ್ಲಿಟ್ಟುಕೊಂಡಿರುವುದರಿಂದ ಕೇಸರಿ ಪಕ್ಷವು ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಬಹುದು ಎಂಬ ವದಂತಿಯೂ ಹರಡಿದೆ. ದೆಹಲಿಯೊಂದರಲ್ಲೇ ಬಿಜೆಪಿಯ ಮಹಿಳಾ ಮುಖ್ಯಮಂತ್ರಿ ಇರುವುದರಿಂದ ಮಹಿಳಾ ಮೀಸಲಾತಿ ಕಾಯ್ದೆಯ ಗೊಂದಲದ ನಂತರ ಬಿಜೆಪಿ ತನ್ನ ಮಹಿಳಾ ಪರ ಇಮೇಜ್ ಅನ್ನು ಉಳಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದರ ಜೊತೆಗೆ ಬಂಗಾಳದ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ರಾಜ್ಯಾಧ್ಯಕ್ಷರ ಹೆಸರುಗಳು ಕೂಡ ಸಿಎಂ ರೇಸ್​​ನಲ್ಲಿ ಮುಂಚೂಣಿಯಲ್ಲಿವೆ.

ಯಾರಾಗಲಿದ್ದಾರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ?:

ಸುವೇಂದು ಅಧಿಕಾರಿ:

ಟಿಎಂಸಿಯ ಮಾಜಿ ನಾಯಕ ಮತ್ತು ಮಮತಾ ಬ್ಯಾನರ್ಜಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸುವೇಂದು ಅಧಿಕಾರಿ ಬಳಿಕ ಬಿಜೆಪಿ ಸೇರಿ ರಾಜ್ಯಾಧ್ಯಕ್ಷರಾಗಿದ್ದರು. 2021ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಅವರು ಟಿಎಂಸಿಯಿಂದ ಹೊರಬಂದು ಬಿಜೆಪಿ ಸೇರಿದರು. ಅವರನ್ನು ಸಿಎಂ ಸ್ಥಾನದ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ನಾಯಕನಾಗಿರುವ ಸುವೇಂದು ಅಧಿಕಾರಿ, 2021ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಯನ್ನು ಸೋಲಿಸುವ ಮೂಲಕ ಗಮನ ಸೆಳೆದಿದ್ದರು.

ಇದನ್ನೂ ಓದಿ: ಬಂಗಾಳಿ ಧೋತಿ ಧರಿಸಿ ಬಿಜೆಪಿ ಕಚೇರಿಗೆ ಭರ್ಜರಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ

ಸಮಿಕ್ ಭಟ್ಟಾಚಾರ್ಯ:

ಹೊಸದಾಗಿ ನೇಮಕಗೊಂಡ ಬಂಗಾಳದ ಬಿಜೆಪಿ ಮುಖ್ಯಸ್ಥರಾದ ಸಮಿಕ್ ಭಟ್ಟಾಚಾರ್ಯ ಆರ್‌ಎಸ್‌ಎಸ್‌ ಹಿನ್ನೆಲೆಯಿಂದ ಬಂದವರು. ತೆರೆಮರೆಯಲ್ಲಿ ಕೆಲಸ ಮಾಡಲು ಹೆಸರುವಾಸಿಯಾದ ಭಟ್ಟಾಚಾರ್ಯ ಅವರು ವೈವಿಧ್ಯಮಯ ಸಾಮಾಜಿಕ ಗುಂಪುಗಳಲ್ಲಿ ಬಿಜೆಪಿಯ ವ್ಯಾಪ್ತಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಅಗ್ನಿಮಿತ್ರ ಪಾಲ್:

ಫ್ಯಾಷನ್ ಡಿಸೈನರ್ ಆಗಿರುವ ಅಗ್ನಿಮಿತ್ರ ಪಾಲ್, ಬಂಗಾಳದಲ್ಲಿ ಬಿಜೆಪಿಯ ಪ್ರಮುಖ ಮಹಿಳಾ ನಾಯಕಿಯರಲ್ಲಿ ಒಬ್ಬರು. ಬಿಜೆಪಿ ಮಹಿಳಾ ಮೋರ್ಚಾದ ಬಂಗಾಳ ಘಟಕದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸಿದ್ದ ಇವರು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗುವ ಮೂಲಕ ಪ್ರಮುಖ ಹುದ್ದೆಯನ್ನು ಏರಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಿಂದ ಪದವೀಧರೆಯಾಗಿರುವ ಪಾಲ್ ಹೆಸರು ಸಿಎಂ ಸಂಭಾವ್ಯ ಪಟ್ಟಿಯಲ್ಲಿ ಕೇಳಿಬರುತ್ತಿದೆ.

ರೂಪಾ ಗಂಗೂಲಿ:

ಬಿಆರ್ ಚೋಪ್ರಾ ಅವರ ಮಹಾಭಾರತದಲ್ಲಿ ದ್ರೌಪದಿ ಪಾತ್ರದ ಮೂಲಕ ಪ್ರಸಿದ್ಧಿ ಪಡೆದಿದ್ದ ರೂಪಾ ಗಂಗೂಲಿ, ಬಿಜೆಪಿಯ ಮತ್ತೊಬ್ಬ ಜನಪ್ರಿಯ ಮಹಿಳಾ ನಾಯಕಿ. ಅವರು ರಾಜ್ಯಸಭಾ ಸಂಸದೆಯೂ ಆಗಿದ್ದಾರೆ. ಬಂಗಾಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಎರಡು ವರ್ಷಗಳ ಅವಧಿಯಿಂದಾಗಿ ಜನಸಾಮಾನ್ಯರ ಸಂಪರ್ಕವನ್ನು ಹೊಂದಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿ ಅರಳಿದ ಕಮಲ; ಬಿಜೆಪಿಯ ಗೆಲುವಿಗೆ ಟೊಂಕ ಕಟ್ಟಿ ನಿಂತ ಮೋದಿ-ಅಮಿತ್ ಶಾ ಜೋಡಿ

ದಿಲೀಪ್ ಘೋಷ್:

ತಮ್ಮ ಆಕ್ರಮಣಕಾರಿ ರಾಜಕೀಯ ಶೈಲಿ ಮತ್ತು ಜನಸಾಮಾನ್ಯರ ಸಂಪರ್ಕಕ್ಕೆ ಹೆಸರುವಾಸಿಯಾದ ಮಾಜಿ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಪಶ್ಚಿಮ ಬಂಗಾಳದಲ್ಲಿ ಪಕ್ಷದ ಅಸ್ತಿತ್ವವನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯ ಬಿಜೆಪಿ ಮುಖ್ಯಸ್ಥರಾಗಿಲ್ಲದಿದ್ದರೂ ಇವರು ಬಂಗಾಳದ ರಾಜಕೀಯದಲ್ಲಿ ಪ್ರಭಾವಿ ವ್ಯಕ್ತಿಯಾಗಿ ಉಳಿದಿದ್ದಾರೆ. ಆರ್​ಎಸ್​ಎಸ್​ ಹಿನ್ನೆಲೆಯ ದಿಲೀಪ್ ಘೋಷ್ 2014ರಲ್ಲಿ ಬಂಗಾಳ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಸೇರಿದರು.

ಶಂಕರ್ ಘೋಷ್:

ಸಿಲಿಗುರಿಯ ಬಿಜೆಪಿ ಶಾಸಕ ಶಂಕರ್ ಘೋಷ್ ಅವರು ಉತ್ತರ ಬಂಗಾಳದ ಪ್ರಮುಖ ಪ್ರಾದೇಶಿಕ ನಾಯಕ. ಅವರ ಪ್ರಭಾವ ರಾಜ್ಯವ್ಯಾಪಿಗಿಂತ ಹೆಚ್ಚು ಪ್ರಾದೇಶಿಕವಾಗಿದೆ. ಅವರ ಹೆಸರು ಕೂಡ ಸಿಎಂ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಉತ್ತರ ಬಂಗಾಳದ ನಾಯಕರಾದ ಇವರು ಸ್ಥಳೀಯ ಮಟ್ಟದಲ್ಲಿ ಸಂಘಟನಾ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

MI vs LSG: ಮೊದಲ ಸೀಸನ್​ನಲ್ಲೇ 15 ವರ್ಷಗಳ ಹಳೆಯ ದಾಖಲೆ ಮುರಿದ ಮುಂಬೈ ಬೌಲರ್ – Kannada News | Alla Ghazanfar Shatters Harbhajan Singh’s 15 Year IPL Record for MI Powerplay Wickets in 2026

ಅಲ್ಲಾ ಗಜನ್ಫರ್ , ಇಂಗ್ಲಿಸ್ ಅವರ ವಿಕೆಟ್ ಪಡೆಯುವ ಮೂಲಕ ಒಂದೇ ಆವೃತ್ತಿಯಲ್ಲಿ ಮುಂಬೈ ಪರ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್ 2026 ರಲ್ಲಿ ಪವರ್‌ಪ್ಲೇನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಲ್ಲಾ ಗಜನ್ಫರ್, 2011 ರಲ್ಲಿ ಹರ್ಭಜನ್ ಸಿಂಗ್ ಪವರ್‌ಪ್ಲೇನಲ್ಲಿ ಐದು ವಿಕೆಟ್‌ ಪಡೆದು ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ.

Source link

ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ: ಇದೀಗ ಬದಲಾವಣೆ ಪರ್ವ ಶುರು ಎಂದ ಮೋದಿ – Kannada News | BJPs Grand Victory in West Bengal: A new sun has risen on Bengal, says PM Modi

ನವದೆಹಲಿ, ಮೇ 04: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಹೀಗಾಗಿ ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಂಗಾಳ ಚುನಾವಣೆ ವೇಳೆ ಅಮಾಯಕರ ಹತ್ಯೆಗಳಾಗಿವೆ. ಆದರೆ ಬಂಗಾಳದಲ್ಲಿ ಮೊದಲ ಬಾರಿಗೆ ಹಿಂಸಾಚಾರ ರಹಿತ ಚುನಾವಣೆ ನಡೆದಿದೆ. ಹಿಂಸಾಚಾರ ರಾಜಕೀಯವನ್ನು ಬೇರು ಸಹಿತ ಕಿತ್ತುಹಾಕಿದ್ದೇವೆ. ಬಂಗಾಳ ನೆಲದಲ್ಲಿ ಹೊಸ ಸೂರ್ಯೋದಯವಾಗಿದೆ. ಈಗ ಬದಲಾವಣೆ ಪರ್ವ ಶುರು, ಸೇಡು ತೀರಿಸಿಕೊಳ್ಳುವುದಲ್ಲ. ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವ ಗೆದ್ದಿದೆ ಎಂದರು. ಪಶ್ಚಿಮ ಬಂಗಾಳದ ಮಹಿಳೆಯರು ಟಿಎಂಸಿಗೆ ತಕ್ಕ ಪಾಠ ಕಲಿಸಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ಪಶ್ಚಿಮ ಬಂಗಾಳದಲ್ಲಿ ದಾಖಲೆ ಮತದಾನವಾಗಿದೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ಶಾಮನೂರ ಮನೆತನದ 3ನೇ‌ ಪೀಳಿಗೆ ವಿಧಾನಸಭೆಗೆ:ತಂದೆ ರೀತಿ ಚಿಕ್ಕ ವಯಸ್ಸಿನಲ್ಲಿಯೇ ಸಮರ್ಥ ಶಾಸಕ – Kannada News | Davanagere South By Election Result: Samarth Shamanur youngest MLA In Karnataka

ದಾವಣಗೆರೆ, (ಮೇ 04): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South Assembly By Poll Result) ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್ ಶಾಮನೂರು (Samarth Shamanur) ಗೆಲುವು ಸಾಧಿಸಿದ್ದಾರೆ. ತೀವ್ರ ಪೈಪೋಟಿ ನಡುವೆಯೂ ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್​ ದಾಸಕರಿಯಪ್ಪ ಅವರ ವಿರುದ್ಧ 5,708 ಮತಗಳ ಅಂತರದಿಂದ ಜಯ ಸಾಧಿಸಿದ್ದು, ತಂದೆ ತಾಯಿ ಜೊತೆ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಮೂಲಕ ಅಜ್ಜ ಶಾಮನೂರು ಶಿವಶಂಕರಪ್ಪನವರ ಗೆಲುವಿನ ಹಾದಿಯನ್ನು ಮೊಮ್ಮಗ ಸಮರ್ಥ ಮುಂದುವರಿಸಿದ್ದು, ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದಂತಾಗಿದೆ.

ಅಜ್ಜ ಶಾಮನೂರು ಶಿವಶಂಕರಪ್ಪ ನಿಧನದಿಂದ ದಾವಣಗೆರೆ ದಕ್ಷಿಣ ವಿಧಾಸಭೆಗೆ ನಡೆದ ಉಪಚುನಾವಣೆಯಲ್ಲಿ ಮೊಮ್ಮಗ ಸಮರ್ಥ ಶಾಮನೂರು ಗೆದ್ದು ಬೀಗಿದ್ದು, ಇದರೊಂದಿಗೆ ಶಾಮನೂರು ಮನೆತನದ ಮೂರನೇ ಪೀಳಿಗೆ ವಿಧಾನಸಭೆ ಪ್ರವೇಶ ಮಾಡಿದೆ. ಇನ್ನು ತಂದೆ ಮಲ್ಲಿಕಾರ್ಜುನ ರೀತಿ ಪುತ್ರ ಸಮರ್ಥ ಸಹ ಚಿಕ್ಕ ವಯಸ್ಸಿನಲ್ಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಚಿವರಾಗಿರುವ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್​​ಎಸ್​​ ಮಲ್ಲಿಕಾರ್ಜುನ ಅವರು 28ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶ ಮಾಡಿದ್ದರು. ಅದರಂತೆ ಇದೀಗ ಪುತ್ರ ಸಮರ್ಥ ಸಹ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ತಂದೆ ರೀತಿಯಲ್ಲೇ ಚಿಕ್ಕ ವಯಸ್ಸಿನಲ್ಲೇ ಅಂದರೆ 27ನೇ ವಯಸ್ಸಿಗೆ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಇದು ನಿಜಕ್ಕೂ ಒಂದು ಕ್ರಾಂತಿ’: ಟಿವಿಕೆ ವಿಜಯ್ ಗೆಲುವಿಗೆ ಕೆವಿಎನ್ ಪ್ರೊಡಕ್ಷನ್ಸ್ ಸಂತಸ – Kannada News | KVN Productions congratulates Jana Nayagan actor Thalapathy Vijay for TVK win

Thalapathy Vijay, Venkat K. Narayana

ನಟ ದಳಪತಿ ವಿಜಯ್ (Thalapathy Vijay) ಅವರು ಈಗ ಪೂರ್ಣಾವಧಿ ರಾಜಕಾರಣಿ. ಚುನಾವಣೆಯ ಅಖಾಡಕ್ಕೆ ಇಳಿದ ಅವರಿಗೆ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಿಕ್ಕಿದೆ. ಅವರ ಈ ಗೆಲುವನ್ನು ಆಪ್ತರು ಸಂಭ್ರಮಿಸುತ್ತಿದ್ದಾರೆ. ಚುನಾವಣೆಗೂ ಮುನ್ನ ವಿಜಯ್ ಅವರ ಕೊನೇ ಸಿನಿಮಾ ‘ಜನ ನಾಯಗನ್’ (Jana Nayagan) ಬಿಡುಗಡೆಗೆ ಸಾಕಷ್ಟು ತೊಂದರೆ ಉಂಟಾಯಿತು. ಈಗ ಆ ಸಿನಿಮಾದ ನಿರ್ಮಾಣ ಸಂಸ್ಥೆಯಿಂದ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ಸಂಸ್ಥೆಯ ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರು ಅಭಿನಂದನೆ ತಿಳಿಸಿದ್ದಾರೆ.

‘ನಮ್ಮ ಜನ ನಾಯಕನಿಗೆ ಹೃತ್ಪೂರ್ವಕ ಅಭಿನಂದನೆಗಳು’ ಎಂಬ ಕ್ಯಾಪ್ಷನ್​ನೊಂದಿಗೆ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಅದರಲ್ಲಿ ದಳಪತಿ ವಿಜಯ್ ಅವರು ದೀವಟಿಗೆ ಹಿಡಿದಿರುವ ಚಿತ್ರ ಇದೆ. ‘ಪ್ರಜಾಪ್ರಭುತ್ವದ ದಾರಿದೀಪ ಹಿಡಿದವರು’ ಎಂದು ಬರೆಯಲಾಗಿದೆ. ಈ ಮೂಲಕ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ದಳಪತಿ ವಿಜಯ್ ಅವರಿಗೆ ಶುಭ ಹಾರೈಸಿದೆ.

‘ಎಲ್ಲಾ ಅಡೆತಡೆಗಳನ್ನು ಮೀರಿ ಇಂದು ಹೊಸ ಇತಿಹಾಸ ಬರೆದಿರುವ ದಳಪತಿ ವಿಜಯ್ ಸರ್ ಅವರಿಗೆ ಅಭಿನಂದನೆಗಳು. ಇದು ನಿಜಕ್ಕೂ ಒಂದು ಕ್ರಾಂತಿ ಮತ್ತು ಮುಂದಿನ ಹಲವು ತಲೆಮಾರುಗಳವರೆಗೆ ಇದು ಪ್ರತಿಧ್ವನಿಸಲಿದೆ’ ಎಂದು ನಿರ್ಮಾಪಕ ವೆಂಕಟ್ ಕೆ. ನಾರಾಯಣ ಅವರ ಪರವಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಜನ ನಾಯಗನ್’ ಸಿನಿಮಾ ಹಲವು ತಿಂಗಳ ಹಿಂದೆಯೇ ಬಿಡುಗಡೆ ಆಗಬೇಕಿತ್ತು. ಆದರೆ ಅನೇಕ ಕಾರಣಗಳಿಂದ ಈ ಚಿತ್ರಕ್ಕೆ ಅಡ್ಡಿ ಉಂಟುಮಾಡಲಾಯಿತು. ಅದರ ಹಿಂದೆ ರಾಜಕೀಯದ ಹುನ್ನಾರ ಇದೆ ಎಂಬುದು ಹಲವರ ಆರೋಪ. ಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣದಿಂದ ಸಿನಿಮಾ ಬಿಡುಗಡೆ ಆಗಲಿಲ್ಲ.

ಇದನ್ನೂ ಓದಿ: ನೀವು ಇತಿಹಾಸ ಸೃಷ್ಟಿ ಮಾಡಿದ್ರಿ: ಟಿವಿಕೆ ಗೆಲುವಿನ ಬಳಿಕ ವಿಜಯ್​ಗೆ ಸೆಲೆಬ್ರಿಟಿಗಳ ಅಭಿನಂದನೆ

ಈ ಪ್ರಕರಣ ಸುಪ್ರೀಂ ಕೋರ್ಟ್ ತನಕ ಹೋಯಿತು. ತಮ್ಮ ಚುನಾವಣಾ ಭಾಷಣದಲ್ಲಿ ದಳಪತಿ ವಿಜಯ್ ಅವರು ಆ ಬಗ್ಗೆ ಮಾತನಾಡಿದ್ದರು. ಸಿನಿಮಾ ತಡೆ ಹಿಡಿದಿರುವುದಕ್ಕೆ ತಮಗೆ ನ್ಯಾಯ ಬೇಕು ಎಂದು ಅವರು ಹೇಳಿದ್ದರು. ಚುನಾವಣೆಗೂ ಮುನ್ನ ‘ಜನ ನಾಯಗನ್’ ಸಿನಿಮಾವನ್ನು ಲೀಕ್ ಕೂಡ ಮಾಡಲಾಯಿತು. ಈ ಎಲ್ಲ ಅಡೆತಡೆಗಳನ್ನು ದಾಟಿಕೊಂಡು ವಿಜಯ್ ಅವರು ಜಯ ಸಾಧಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version