ಬಾಗಲಕೋಟೆ ಬೈ ಎಲೆಕ್ಷನ್​​: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ – Kannada News | Bagalkot By poll: Congress’ Umesh Meti Wins Against BJP’s Veeranna Charantimath

ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ

ಬಾಗಲಕೋಟೆ, ಮೇ 04: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್​​ ಮೇಟಿ ಅಂತಿಮವಾಗಿ ಗೆದ್ದು ಬೀಗಿದ್ದಾರೆ.

‘ತಂದೆ ಆತ್ಮಕ್ಕೆ ಶಾಂತಿ ಸಿಕ್ಕಿದೆ’

ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಜಯಭೇರಿ ಸಂಬಂಧ ಅವರ ಸಹೋದರ ಮಲ್ಲಿಕಾರ್ಜುನ ಮೇಟಿ ಟಿವಿ9 ಜೊತೆ ಸಂತಸ ಹಂಚಿಕೊಂಡಿದ್ದಾರೆ. ಇದೊಂದು ಭಾವುಕ ಕ್ಷಣವಾಗಿದ್ದು, ಈ ಗೆಲುವಿನಿಂದ ನಮ್ಮ ತಂದೆ ಆತ್ಮಕ್ಕೆ ಶಾಂತಿ ಸಿಕ್ಕ ಹಾಗಾಗಿದೆ. ನಮ್ಮ ತಂದೆ ಕೈ ಹಿಡಿದಿದ್ದ ಜನರು ಈಗ ನಮ್ಮ ಸಹೋದರನ ಕೈಯನ್ನೂ ಹಿಡಿದಿದ್ದಾರೆ. ಸಿಎಂ, ಸಚಿವರು ಮತ್ತು ಮತದಾರರಿಗೆ ಧನ್ಯವಾದ ಹೇಳೋದಾಗಿ ಅವರು ತಿಳಿಸಿದ್ದಾರೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Published On – 12:17 pm, Mon, 4 May 26

Source link

Tamil Nadu: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ? – Kannada News | Thalapathi Vijay set to become next TN Chief Minister as TVK gets big win in Tamil Nadu elections

ಚೆನ್ನೈ, ಮೇ 4: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu assembly elections) ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ನಿರೀಕ್ಷೆ ಮೀರಿದ ಅಚ್ಚರಿ ಗೆಲುವು ದಾಖಲಿಸಿದೆ. 234 ವಿಧಾನಸಭಾ ಕ್ಷೇತ್ರಗಳ ಪೈಕಿ ವಿಜಯ್ ಅವರ TVK ಪಕ್ಷವು ಅಚ್ಚರಿಯ ರೀತಿಯಲ್ಲಿ ಮುನ್ನಡೆ ಸಾಧಿಸಿದೆ. ಪ್ರಸ್ತುತ ಟ್ರೆಂಡ್‌ಗಳ ಪ್ರಕಾರ, ವಿಜಯ್ ಅವರ ಪಕ್ಷವು ಬಹುಮತಕ್ಕೆ ಬೇಕಾದ 118 ಸ್ಥಾನಗಳ ಗಡಿ ದಾಟುತ್ತಿದೆ. ಇದು ತಮಿಳುನಾಡು ರಾಜಕಾರಣದಲ್ಲಿ ಹೊಸ ಯುಗದ ಆರಂಭ ಎಂದೇ ವಿಶ್ಲೇಷಿಸಲಾಗುತ್ತಿದೆ. ಆಡಳಿತಾರೂಢ ಡಿಎಂಕೆ ಪಕ್ಷ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಎಐಎಡಿಎಂಕೆ ನೇತೃತ್ವದ ಎನ್​ಡಿಎ ಮೈತ್ರಿಕೂಟ ಎರಡನೇ ಸ್ಥಾನ ಪಡೆಯುತ್ತಿದೆ. ಕಾಲಿವುಡ್​ನ ಸೂಪರ್ ಸ್ಟಾರ್ ದಳಪತಿ ವಿಜಯ್ ಅವರು ಮುಖ್ಯಮಂತ್ರಿ ಆಗುವ ಸಾಧ್ಯತೆ ದಟ್ಟವಾಗಿದೆ.

ತಾವೇ ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚ್ಚಿ ಈಸ್ಟ್ ಎರಡರಲ್ಲೂ ವಿಜಯ್ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟವು ತೀವ್ರ ಹಿನ್ನಡೆ ಅನುಭವಿಸಿದ್ದು, ಅನಿರೀಕ್ಷಿತವಾಗಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಮೈತ್ರಿಕೂಟವು ಸದ್ಯಕ್ಕೆ ಎರಡನೇ ಅತಿದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಡಿಎಂಕೆ ಸರ್ಕಾರದ ಸುಮಾರು 31 ಸಚಿವರು ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿರುವುದು ಆಡಳಿತ ವಿರೋಧಿ ಅಲೆಯ ತೀವ್ರತೆಯನ್ನು ತೋರಿಸುತ್ತಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಸ್ಥಾಪನೆಯತ್ತ ಬಿಜೆಪಿ; ನಿಚ್ಚಳ ಬಹುಮತ ಬಹುತೇಕ ನಿಶ್ಚಿತ

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶ (ಮಧ್ಯಾಹ್ನ 12ರ ಟ್ರೆಂಡ್)

ಒಟ್ಟು ಸ್ಥಾನಗಳು: 234

ಬಹುಮತಕ್ಕೆ ಬೇಕಾಗಿರುವುದು: 118

  • ತಮಿಳಗ ವೆಟ್ರಿ ಕಳಗಂ (ಟಿವಿಕೆ): 112
  • ಎಐಎಡಿಎಂಕೆ ಮೈತ್ರಿಕೂಟ: 68
  • ಡಿಎಂಕೆ ಮೈತ್ರಿಕೂಟ: 56

ಕಿಂಗ್ ಮೇಕರ್ ಅಲ್ಲ, ನೇರ ಕಿಂಗ್!

ಚುನಾವಣಾ ಪೂರ್ವದಲ್ಲಿ ವಿಜಯ್ ಅವರ ಪಕ್ಷವು ಕೇವಲ ‘ಕಿಂಗ್ ಮೇಕರ್’ ಆಗಬಹುದು ಎಂದು ಊಹಿಸಲಾಗಿತ್ತು. ಆದರೆ, ಈಗಿನ ಟ್ರೆಂಡ್‌ಗಳು ವಿಜಯ್ ಅವರೇ ನೇರವಾಗಿ ಮುಖ್ಯಮಂತ್ರಿ ಪೀಠ ಅಲಂಕರಿಸುವುದನ್ನು ಖಚಿತಪಡಿಸುತ್ತಿವೆ. ವಿಜಯ್ ಅವರ ಅಪಾರ ಅಭಿಮಾನಿ ಬಳಗ ಮತ್ತು ಯುವ ಮತದಾರರು ಬದಲಾವಣೆಯನ್ನು ಬಯಸಿ ದೊಡ್ಡ ಮಟ್ಟದಲ್ಲಿ ಮತ ಚಲಾಯಿಸಿದ್ದಾರೆ. ಡಿಎಂಕೆ ಮತ್ತು ಎಐಎಡಿಎಂಕೆ ಎರಡನ್ನೂ ‘ಭ್ರಷ್ಟ ಶಕ್ತಿಗಳು’ ಎಂದು ಕರೆದಿದ್ದ ವಿಜಯ್ ಅವರ ಮಾತುಗಳು ಜನಸಾಮಾನ್ಯರಿಗೆ ತಲುಪಿದೆ. ಯಾವುದೇ ದೊಡ್ಡ ಮೈತ್ರಿಕೂಟದ ಜೊತೆ ಸೇರದೆ ಒಂಟಿಯಾಗಿ ಸ್ಪರ್ಧಿಸುವ ವಿಜಯ್ ಅವರ ನಿರ್ಧಾರಕ್ಕೆ ಮತದಾರರು ಜೈ ಎಂದಿದ್ದಾರೆ.

ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾವಣೆ

ಎಂ.ಜಿ.ಆರ್ ಮತ್ತು ಜಯಲಲಿತಾ ಅವರ ನಂತರ ಸಿನಿಮಾ ರಂಗದಿಂದ ಬಂದು ಇಷ್ಟು ದೊಡ್ಡ ಮಟ್ಟದ ಯಶಸ್ಸು ಕಂಡ ನಟ ಎಂಬ ಹೆಗ್ಗಳಿಕೆಗೆ ವಿಜಯ್ ಪಾತ್ರರಾಗಿದ್ದಾರೆ. ಹಿರಿಯ ಸ್ಟಾರ್ ಹಾಗೂ ಜನಪ್ರಿಯ ನಟನೆನಿಸಿದ ಕಮಲಹಾಸನ್ ಅವರು ಕೆಲವಾರು ವರ್ಷಗಳಿಂದ ರಾಜಕೀಯ ಮಾಡುತ್ತಿದ್ದಾರಾದರೂ ಅವರಿಗೆ ಸಿಕ್ಕ ಯಶಸ್ಸು ಸೀಮಿತ. ಕ್ಯಾಪ್ಟನ್ ವಿಜಯಕಾಂತ್ ಅವರಿಗೂ ಸಿಕ್ಕ ಯಶಸ್ಸು ಅಷ್ಟಕಷ್ಟೇ. ಸೂಪರ್ ಸ್ಟಾರ್ ರಜನೀಕಾಂತ್ ಅವರೂ ರಾಜಕೀಯಕ್ಕೆ ಅಡಿ ಇಡುವ ಆಲೋಚನೆಯಲ್ಲಿ ಇದ್ದರಾದರೂ ಅದು ಸಾಧ್ಯವಾಗಲಿಲ್ಲ. ಹೀಗಾಗಿ, ದಳಪತಿ ವಿಜಯ್ ಅವರ ಆರಂಭದ ಹೆಜ್ಜೆಯಲ್ಲೇ ಸಿಕ್ಕ ಯಶಸ್ಸು ಸೋಜಿಗ.

ಇದನ್ನೂ ಓದಿ: ತ್ರಿಷಾ ಹುಟ್ಟುಹಬ್ಬದಂದೇ ವಿಜಯ್‌ಗೆ ರಾಜಕೀಯ ಪಟ್ಟ? ತಮಿಳುನಾಡಿನಲ್ಲಿ ‘ಟಿವಿಕೆ’ ಅಬ್ಬರ

ತಮಿಳುನಾಡಿನಲ್ಲಿ ಮುಂದಿನ ಐದು ವರ್ಷ ವಿಜಯ್ ಅವರ ಹವಾ ಜೋರಾಗಿರಲಿದೆ. ಡಿಎಂಕೆ ಕಚೇರಿಯಲ್ಲಿ ಹಾಕಲಾಗಿದ್ದ ವಿಜಯೋತ್ಸವದ ಟೆಂಟ್‌ಗಳನ್ನು ಕಾರ್ಯಕರ್ತರು ಹಿನ್ನಡೆಯ ಆತಂಕದಿಂದ ತೆರವುಗೊಳಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಸಂಜೆ ವೇಳೆಗೆ ಅಂತಿಮ ಫಲಿತಾಂಶ ಹೊರಬೀಳಲಿದ್ದು, ‘ದಳಪತಿ’ ತಮಿಳುನಾಡಿನ ಹೊಸ ‘ಸಿಎಂ’ ಆಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ನಿಶ್ಚಿತವಾಗಿದೆ.

ಟಿವಿಕೆ ಪಕ್ಷ ಸ್ವಂತವಾಗಿ 118 ಸ್ಥಾನಗಳನ್ನು ಮುಟ್ಟಿದರೆ ವಿಜಯ್ ಸಿಎಂ ಆಗುವುದರಲ್ಲಿ ಅನುಮಾನ ಇಲ್ಲ. ಬಹುಮತ ಕೊರತೆ ಬಂದರೂ ಎಐಎಡಿಎಂಕೆ ಬೆಂಬಲದೊಂದಿಗೆ ಅವರು ಸರ್ಕಾರ ರಚನೆ ಮಾಡಿ ಸಿಎಂ ಆಗುವ ಸಾಧ್ಯತೆ ಇದ್ದೇ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Amazon Summer Sale: ಅಮೆಜಾನ್​ನಲ್ಲಿ ಶುರುವಾಗುತ್ತಿದೆ ಸಮ್ಮರ್ ಸೇಲ್: ಫ್ಲಿಪ್​ಕಾರ್ಟ್​ನಲ್ಲಿ ಸಾಸಾ ಲೇಲೆ ಸೇಲ್ – Kannada News | Amazon Summer Sale 2026 and Flipkart Sasa Lele Sale 2026 Dates and Offer announced

ಬೆಂಗಳೂರು (ಮೇ. 04): ಅಮೆಜಾನ್ (Amazon) ತನ್ನ ಗ್ರೇಟ್ ಸಮ್ಮರ್ ಸೇಲ್ ದಿನಾಂಕವನ್ನು ಪ್ರಕಟಿಸಿದೆ. ಮುಂಬರುವ ಸೇಲ್​ನಲ್ಲಿ ಸ್ಮಾರ್ಟ್‌ಫೋನ್‌ಗಳು, ಟಿವಿಗಳು, ರೆಫ್ರಿಜರೇಟರ್‌ಗಳು, ಹವಾನಿಯಂತ್ರಣಗಳು, ಟ್ಯಾಬ್ಲೆಟ್‌ಗಳು ಮತ್ತು ಹೆಚ್ಚಿನವುಗಳ ಮೇಲೆ ಗಮನಾರ್ಹ ರಿಯಾಯಿತಿಗಳು ಇರಲಿವೆ. ಕಂಪನಿಯು ವಿವಿಧ ಬ್ರಾಂಡ್‌ಗಳ ಫೋನ್‌ಗಳ ಮೇಲೆ ಬ್ಯಾಂಕ್ ಕೊಡುಗೆಗಳು ಮತ್ತು ಡೀಲ್‌ಗಳನ್ನು ಬಹಿರಂಗಪಡಿಸಿದೆ. ಎಲೆಕ್ಟ್ರಾನಿಕ್ಸ್ ಜೊತೆಗೆ, ಗ್ರಾಹಕರು ಫ್ಯಾಷನ್ ಮತ್ತು ಇತರ ಉತ್ಪನ್ನಗಳ ಮೇಲೆ ಗಮನಾರ್ಹ ರಿಯಾಯಿತಿಗಳನ್ನು ಪಡೆಯುತ್ತಾರೆ.

ಅಮೆಜಾನ್‌ನಲ್ಲಿ ಈ ಮಾರಾಟವು ಮೇ 8 ರಂದು ಪ್ರಾರಂಭವಾಗಲಿದೆ. ಪ್ರೈಮ್ ಸದಸ್ಯರಿಗೆ ಆರಂಭಿಕ ಪ್ರವೇಶ ದೊರೆಯಲಿದೆ. ಬ್ಯಾಂಕ್ ಕೊಡುಗೆಗಳ ಜೊತೆಗೆ, ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು, ಹವಾನಿಯಂತ್ರಣಗಳು, ರೆಫ್ರಿಜರೇಟರ್‌ಗಳು ಮತ್ತು ಹೆಚ್ಚಿನವುಗಳ ಖರೀದಿಗಳ ಮೇಲೆ ಯಾವುದೇ ವೆಚ್ಚವಿಲ್ಲದ ಇಎಂಐ ಆಯ್ಕೆಗಳು ಮತ್ತು ವಿನಿಮಯ ಕೊಡುಗೆಗಳು ಸಹ ಲಭ್ಯವಿದೆ. ಪ್ರೈಮ್ ಸದಸ್ಯರು ಆರಂಭಿಕ ಪ್ರವೇಶ, ವಿಶೇಷ ರಿಯಾಯಿತಿಗಳು, ಕ್ಯಾಶ್‌ಬ್ಯಾಕ್ ಮತ್ತು ಇತರ ಪ್ರಯೋಜನಗಳನ್ನು ಸಹ ಪಡೆಯುತ್ತಾರೆ.

HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳಲ್ಲಿ ಸುಲಭ EMI ಲಭ್ಯವಿರುತ್ತದೆ ಎಂದು ಇ-ಕಾಮರ್ಸ್ ಕಂಪನಿ ಘೋಷಿಸಿದೆ. ಗ್ರಾಹಕರು 10% ವರೆಗೆ ತ್ವರಿತ ರಿಯಾಯಿತಿಯ ಪ್ರಯೋಜನವನ್ನು ಪಡೆಯುತ್ತಾರೆ. ಯಾವುದೇ ವೆಚ್ಚವಿಲ್ಲದ EMI ಸಹ ಲಭ್ಯವಿದೆ, ಇದು ನಿಮಗೆ ದಿನಕ್ಕೆ ₹9 ಕ್ಕಿಂತ ಕಡಿಮೆ ಬೆಲೆಯಲ್ಲಿ ಉತ್ಪನ್ನಗಳನ್ನು ಖರೀದಿಸಲು ಅನುವು ಮಾಡಿಕೊಡುತ್ತದೆ. ಪ್ರೈಮ್ ಬಳಕೆದಾರರು 200,000 ಕ್ಕೂ ಹೆಚ್ಚು ಉತ್ಪನ್ನಗಳ ಮೇಲೆ ಹೆಚ್ಚುವರಿ 3% ರಿಯಾಯಿತಿಯನ್ನು ಸಹ ಪಡೆಯುತ್ತಾರೆ.

Digital Arrest: 2-3 ಗಂಟೆಗಳಲ್ಲಿ ಸಿಮ್ ಕಾರ್ಡ್ ಬ್ಲಾಕ್, ಡಿಜಿಟಲ್ ಅರೆಸ್ಟ್ ತಡೆಯಲು ಸಂಪೂರ್ಣ ಸಿದ್ಧತೆ, ವಾಟ್ಸ್ಆ್ಯಪ್​ನಿಂದಲೂ ಕ್ರಮ

ಹೆಚ್ಚುವರಿಯಾಗಿ, ಅಮೆಜಾನ್ ಪೇ ಐಸಿಐಸಿಐ ಬ್ಯಾಂಕ್ ಕಾರ್ಡ್ ಬಳಸಿ ಉತ್ಪನ್ನಗಳನ್ನು ಖರೀದಿಸುವುದರಿಂದ 5% ವರೆಗೆ ಅನಿಯಮಿತ ಕ್ಯಾಶ್‌ಬ್ಯಾಕ್ ಸಿಗುತ್ತದೆ. ಕೆಲವು ಉತ್ಪನ್ನಗಳಿಗೆ ₹1,250 ರಿಂದ ₹2,500 ವರೆಗಿನ ಹೆಚ್ಚುವರಿ ಪ್ರಯೋಜನಗಳು ಲಭ್ಯವಿರುತ್ತವೆ. ನಿರ್ದಿಷ್ಟವಾಗಿ ಸ್ಮಾರ್ಟ್‌ಫೋನ್‌ಗಳು ಮತ್ತು ಗೃಹೋಪಯೋಗಿ ವಸ್ತುಗಳು ಗಮನಾರ್ಹ ರಿಯಾಯಿತಿಗಳನ್ನು ನೀಡುತ್ತವೆ. ಕಂಪನಿಯು ಹಲವಾರು ಪರಿಚಯಾತ್ಮಕ ಡೀಲ್‌ಗಳನ್ನು ಸಹ ಪ್ರಕಟಿಸಲು ಪ್ರಾರಂಭಿಸಿದೆ.

ಸ್ಮಾರ್ಟ್‌ಫೋನ್‌ಗಳ ಮೇಲಿನ ಕೊಡುಗೆಗಳು

ಅಮೆಜಾನ್ ಮಾರಾಟದ ಸಮಯದಲ್ಲಿ ಐಫೋನ್ 16 ₹60,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಪ್ರಸ್ತುತ, ಫೋನ್ ₹69,900 ಗೆ ಪಟ್ಟಿ ಮಾಡಲಾಗಿದೆ. ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 25 ಅಲ್ಟ್ರಾ ಗಾಗಿ ಡೀಲ್‌ಗಳನ್ನು ಬಹಿರಂಗಪಡಿಸಿದೆ. ಸ್ಯಾಮ್‌ಸಂಗ್‌ನ ಈ ಪ್ರಮುಖ ಫೋನ್ ಅನ್ನು ಇದುವರೆಗಿನ ಅತ್ಯಂತ ಕಡಿಮೆ ಬೆಲೆಗೆ ಖರೀದಿಸಬಹುದು. ಇದು ₹94,999 ರಿಂದ ಪ್ರಾರಂಭವಾಗುವ ಬೆಲೆಯಲ್ಲಿ ಲಭ್ಯವಿದೆ. ಐಕ್ಯೂ 15R ₹43,999 ಆರಂಭಿಕ ಬೆಲೆಗೆ ಖರೀದಿಗೆ ಲಭ್ಯವಿದೆ. iQOO ನಿಂದ ಈ ಗೇಮಿಂಗ್ ಫೋನ್ ₹53,999 ಬೆಲೆಗೆ ಬಿಡುಗಡೆಯಾಯಿತು.

ಫ್ಲಿಪ್‌ಕಾರ್ಟ್ ಸಾಸಾ ಲೇಲೆ ಸೇಲ್:

ಮತ್ತೊಂದೆಡೆ ಫ್ಲಿಪ್‌ಕಾರ್ಟ್ ಹೊಸ ಸಾಸಾ ಲೆಲೆ ಸೇಲ್ 2026 ಅನ್ನು ಅಧಿಕೃತವಾಗಿ ಘೋಷಿಸಿದೆ. ಈ ಸೇಲ್ ಮೇ 9 ರಂದು ಪ್ರಾರಂಭವಾಗಲಿದ್ದು, ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್ ಟಿವಿಗಳು, ಹವಾನಿಯಂತ್ರಣಗಳು ಮತ್ತು ಅನೇಕ ಗೃಹೋಪಯೋಗಿ ಉಪಕರಣಗಳ ಮೇಲೆ ಉತ್ತಮ ರಿಯಾಯಿತಿಗಳನ್ನು ನೀಡುತ್ತದೆ. ಮಾರಾಟಕ್ಕೂ ಮುನ್ನ ಫ್ಲಿಪ್‌ಕಾರ್ಟ್ ಈಗಾಗಲೇ ಹಲವಾರು ಉತ್ಪನ್ನಗಳನ್ನು ಟೀಸರ್ ಮಾಡಲು ಪ್ರಾರಂಭಿಸಿದೆ. ಬ್ಯಾಂಕ್ ಕೊಡುಗೆಗಳು, ವಿನಿಮಯ ಬೋನಸ್‌ಗಳು, ಯಾವುದೇ ವೆಚ್ಚವಿಲ್ಲದ ಇಎಂಐಗಳು ಮತ್ತು ಸೀಮಿತ-ಅವಧಿಯ ಫ್ಲ್ಯಾಶ್ ಡೀಲ್‌ಗಳು ಸಹ ಲಭ್ಯವಿರುತ್ತವೆ. ಹೊಸ ಬೇಸಿಗೆ ಖರೀದಿಗಳನ್ನು ಯೋಜಿಸುವ ಗ್ರಾಹಕರಿಗೆ ಇದು ಉತ್ತಮ ಅವಕಾಶವಾಗಬಹುದು. ಐಫೋನ್ 17 ಅನ್ನು ₹71,900 ಗೆ ಮತ್ತು ಗೂಗಲ್ ಪಿಕ್ಸೆಲ್ 10 ಅನ್ನು ₹60,000 ವರೆಗೆ ಖರೀದಿಸಬಹುದು. ಕಂಪನಿಯು ತನ್ನ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಟೀಸರ್ ಬ್ಯಾನರ್‌ಗಳು ಮತ್ತು ಪೂರ್ವವೀಕ್ಷಣೆ ಪಟ್ಟಿಗಳನ್ನು ಬಿಡುಗಡೆ ಮಾಡಿದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೈರತಿ ಬಸವರಾಜ್​ಗೆ ಮತ್ತೊಂದು ಸಂಕಷ್ಟ! ಆಪ್ ನಾಯಕಿಯ ಕಾರನ್ನೇ ಧ್ವಂಸಗೊಳಿಸಿದ ಆರೋಪ – Kannada News | Byrathi Basavaraj in Trouble Again: AAP Leader Accuses BJP MLA’s Supporters of Vandalism and Threats

ಬೈರತಿ ಬಸವರಾಜ್​ಗೆ ಮತ್ತೊಂದು ಸಂಕಷ್ಟ!

ಬೆಂಗಳೂರು, ಮೇ 04:  ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ (Byrathi Basavaraj) ಅವರಿಗೆ ಈಗ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ. ಈ ಹಿಂದೆ ಅವರು ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಜೈಲು ರುಚಿ ನೋಡಿದ ಬಳಿಕ ಇದೀಗ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ದೂರು ದಾಖಲಿಸಿದ್ದಾರೆ.

ನನಗೆ ಬೆದರಿಕೆ ಹಾಕಿದ್ದಾರೆ: ಆಪ್ ನಾಯಕಿ

ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ ನ್ಯಾಯಾಂಗ ಬಂಧನದಿಂದ ಜಾಮೀನಿನಲ್ಲಿ ಹೊರಬಂತ ನಂತರ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ (AAP) ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಕಳೆದ ತಿಂಗಳು ಕೂಡ ಶಾಸಕರು ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ಸುಮಾರು 50 ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ವಾರ್ಡ್‌ನಾದ್ಯಂತ ಹಾಕಿಸಿದ್ದರು ಎಂದು ಕಿಡಿಕಾರಿದ ಆಪ್ ನಾಯಕಿ, ಆರಂಭದಲ್ಲಿ ಈ ಬಗ್ಗೆ ದೂರು ನೀಡಲು ಹೋದಾಗ ಎಚ್‌ಎಎಲ್ ಪೊಲೀಸರು ಶಾಸಕರ ಒತ್ತಡಕ್ಕೆ ಮಣಿದು ದೂರು ಸ್ವೀಕರಿಸಲು ನಿರಾಕರಿಸಿದ್ದರು, ನಂತರ ಲೋಕಾಯುಕ್ತರ ಮೊರೆ ಹೋದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ದೂರಿದ್ದಾರೆ.

ನನಗೆ ಏನಾದರು ಆದರೆ ಅವರೇ ಹೊಣೆ ಎಂದ ನಾಯಕಿ

ಮುಂಬರುವ ಜಿಬಿಎ (GBA) ಚುನಾವಣೆಗಳಿಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ಕಾರಣಕ್ಕಾಗಿಯೇ ತನ್ನ ಮೇಲೆ ಇಂತಹ ಹಲ್ಲೆ ನಡೆಯುತ್ತಿದೆ ಮತ್ತು ನನಗೆ ಬೆದರಿಕೆಗಳು ಬರುತ್ತಿವೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ತನಗೆ ಏನಾದರೂ ತೊಂದರೆಯಾದರೆ ಅದಕ್ಕೆ ನೇರವಾಗಿ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಅವರು ಎಚ್ಚರಿಸಿದ್ದಾರೆ. ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಮತ್ತು ಈ ಘಟನೆಯು ಕೆ.ಆರ್. ಪುರಂನಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ ಬಿಕ್ಲು ಶಿವ ಕೊಲೆ ಕೇಸ್​​: ಶಾಸಕ ಬೈರತಿ ಬಸವರಾಜ್​​ ಫೆ.21ರವರೆಗೆ ಸಿಐಡಿ ಕಸ್ಟಡಿಗೆ

ಬಿಕ್ಲು ಶಿವ ಕೇಸ್​ನಲ್ಲಿ ಏನಾಗಿತ್ತು?

2025ರ ಜುಲೈ 15ರಂದು ಬೆಂಗಳೂರಿನ ಭಾರತಿನಗರದಲ್ಲಿ ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕಿತ್ತಗನೂರಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್‌ ಅವರನ್ನು 5ನೇ ಆರೋಪಿಯನ್ನಾಗಿ (A5) ಸೇರಿಸಲಾಗಿತ್ತು. ಅವರು ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ನಿರೀಕ್ಷಣಾ ಜಾಮೀನು ವಜಾಗೊಂಡ ಬಳಿಕ, 2026ರ ಫೆಬ್ರವರಿಯಲ್ಲಿ ಸಿಐಡಿ ಪೊಲೀಸರು ಇವರನ್ನು ಬಂಧಿಸಿದ್ದರು. ಸುಮಾರು 28 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಇವರಿಗೆ 2026ರ ಮಾರ್ಚ್ 12ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಇದೆಲ್ಲದರ ಬಳಿಕ ಮತ್ತೊಮ್ಮೆ ಆಪ್ ನಾಯಕಿ ಮೇಲೆ ಹಲ್ಲೆ ಮತ್ತು ಬೆದರಿಕೆ ಕೇಸ್​ನಲ್ಲಿ ಅವರ ಹೆಸರು ಕೇಳಿಬಂದಿರುವುದು ಶಾಸಕನಿಗೆ ಸಂಕಷ್ಟ ತಂದೊಡ್ಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ – Kannada News | All Party Alliance Wise Assembly Election Results 2026 and Winners LIVE Updates in Kannada BJP Congress TMC West Bengal Kerala Puducherry Tamil Nadu Assam

ಪಂಚ ರಾಜ್ಯ ಚುನಾವಣಾ ಫಲಿತಾಂಶImage Credit source: tv9

ನವದೆಹಲಿ, ಮೇ 4: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2026) ಪ್ರಕಟವಾಗುತ್ತಿದ್ದು, ಹಲವು ವರ್ಷಗಳ ಸತತ ಪರಿಶ್ರಮದ ನಂತರ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆ ಏರುವ ಹಾದಿಯಲ್ಲಿ ಬಿಜೆಪಿ ನಾಗಾಲೋಟ ಮುಂದುವರೆಸಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದ ಮುನ್ನಡೆ ಕಾಯ್ದುಕೊಂಡಿದೆ. ಕೇರಳದಲ್ಲಿ ಎಲ್‌ಡಿಎಫ್ ಮಣಿಸಿ ಮತ್ತೆ ಯುಡಿಎಫ್ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭಿಸಿದೆ. ತಮಿಳುನಾಡಿನಲ್ಲಿ ನಟ ದಳಪತಿ ವಿಜಯ ನೇತೃತ್ವದ ಟಿವಿಕೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವಾಗಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಸ್ಥಿತಿಗತಿ ಇಲ್ಲಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ

294 ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 293 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 11.45 ರ ಹೊತ್ತಿಗೆ ಬಿಜೆಪಿ 179 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಟಿಎಂಸಿ 109 ಕ್ಷೇತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ. ಕಾಂಗ್ರೆಸ್ 2 ಹಾಗೂ ಪಕ್ಷೇತರರು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವಿನ ನಿಕಟ ಸ್ಪರ್ಧೆಯ ನಡುವೆಯೂ, ಕಾಂಗ್ರೆಸ್ ಪಕ್ಷವು ಮುನ್ನಡೆಯ ವಿಷಯದಲ್ಲಿ ತನ್ನ ಖಾತೆ ತೆರೆದಿದೆ. 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಅಸ್ಸಾಂ ಚುನಾವಣೆ ಫಲಿತಾಂಶ

126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 11.45 ರ ಹೊತ್ತಿಗೆ ಬಿಜೆಪಿ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 23 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಎಐಯುಡಿಎಫ್ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಪುದುಚೇರಿ ಚುನಾವಣೆ ಫಲಿತಾಂಶ

30 ಕ್ಷೇತ್ರಗಳಿರುವ ಪುದುಚೇರಿಯಲ್ಲಿ ಬಹುಮತಕ್ಕೆ 16 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 11.45 ರ ಹೊತ್ತಿಗೆ ಬಿಜೆಪಿ 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 7 ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಕೇರಳ ಚುನಾವಣೆ ಫಲಿತಾಂಶ

140 ಕ್ಷೇತ್ರಗಳಿರುವ ಕೇರಳದಲ್ಲಿ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 11.45 ರ ಹೊತ್ತಿಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 96 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಆಡಳಿತಾರೂಢ ಎಲ್​​ಡಿಎಫ್ 42 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಕೇರಳದಲ್ಲಿ ಎಲ್​ಡಿಎಫ್ ಅಧಿಕಾರ ಕಳೆದುಕೊಳ್ಳುವ ಹಾದಿಯಲ್ಲಿದ್ದು, ಅಂತಿಮವಾಗಿ ಸೋಲೊಪ್ಪಿಕೊಂಡಲ್ಲಿ ಭಾರತದಿಂದ ಕಮ್ಯೂನಿಸ್ಟ್ ಪಕ್ಷದ ಆಡಳಿತ ಸಂಪೂರ್ಣ ನಿರ್ಮೂಲನೆಯಾದಂತಾಗಲಿದೆ.

ತಮಿಳುನಾಡು ಚುನಾವಣೆ ಫಲಿತಾಂಶ

234 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ಮಧ್ಯಾಹ್ನ 11.45 ರ ಹೊತ್ತಿಗೆ ದಳಪತಿ ವಿಜಯ್ ನೇತೃತ್ವದ ಟಿವಿಕೆ 108 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು ಸರಳ ಬಹುಮತದತ್ತ ಸಾಗುತ್ತಿದೆ. ಡಿಎಂಕೆ 53, ಎಐಎಡಿಎಂಕೆ 73 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮದುವೆ ಮನೆಯಲ್ಲೂ ಚುನಾವಣಾ ಫಲಿತಾಂಶದ ಕುತೂಹಲ: ಟಿವಿ9 ಕನ್ನಡ ವೀಕ್ಷಿಸಿದ ಅತಿಥಿಗಳು – Kannada News | By Election Fever: Davangere Wedding Hall Turns Into Result Viewing Centre

ದಾವಣಗೆರೆ, ಮೇ 04: ನಗರದಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಆಗಮಿಸಿದ್ದ ಅತಿಥಿಗಳು ಟಿವಿ9 ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಮತ ಎಣಿಕೆಯ ನೇರಪ್ರಸಾರದ ವೀಕ್ಷಣೆಯಲ್ಲಿ ನಿರತರಾಗಿದ್ದರು. ದಾವಣಗೆರೆ ದಕ್ಷಿಣ, ಬಾಗಲಕೋಟೆ ಹಾಗೂ ಪಂಚರಾಜ್ಯಗಳ ಚುನಾವಣೆ ಫಲಿತಾಂಶಗಳನ್ನು ಜನರು ವಿಶೇಷ ಆಸಕ್ತಿಯಿಂದ ವೀಕ್ಷಿಸುತ್ತಿರೋ ದೃಶ್ಯ ಕಂಡುಬಂತು. ಮದುವೆ ಮನೆಯ ಆವರಣದಲ್ಲಿ ಟಿವಿ ಅಳವಡಿಸಲಾಗಿದ್ದು, ಸಾಮಾಜಿಕ ಕಾರ್ಯಕ್ರಮದ ನಡುವೆಯೂ ಚುನಾವಣಾ ಫಲಿತಾಂಶಗಳಿಗೆ ನೀಡಿದ ಗಮನ ರಾಜಕೀಯ ಪ್ರಜ್ಞೆಗೆ ಸಾಕ್ಷಿ ಎಂಬಂತಿತ್ತು.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ದಳಪತಿ ವಿಜಯ್ ರಾಜಕೀಯ ಎಂಟ್ರಿ ಹಿಂದೆ ಮಾಸ್ಟರ್ ಮೈಂಡ್ ಪ್ರಶಾಂತ್ ಕಿಶೋರ್? ಹೇಗಿತ್ತು ನೋಡಿ ಚುನಾವಣೆ ಪ್ರಚಾರದ ಬ್ಲೂಪ್ರಿಂಟ್ – Kannada News | Thalapathy Vijay’s TVK and PK’s Strategy: Decoding Tamil Nadu’s New Political Power

ತಮಿಳುನಾಡು, ಮೇ.4: ಪ್ರಶಾಂತ್ ಕಿಶೋರ್ ಅವರ ಕಾರ್ಯತಂತ್ರ ಮತ್ತು ದಳಪತಿ ವಿಜಯ್ ಅವರ ನಾಯಕತ್ವದ ಶೈಲಿಗೆ ಸಂಬಂಧಿಸಿದಂತೆ ನೀವು ಹೇಳಿದ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿವೆ. ಟಿವಿಕೆ (TVK) ಪಕ್ಷದ ಅಡಿಪಾಯ ಮತ್ತು ವಿಜಯ್ ಅವರ ಸಿಸ್ಟಮ್ಯಾಟಿಕ್ ರಾಜಕೀಯ ಎಂಟ್ರಿ ಹಿಂದೆ ಪ್ರಶಾಂತ್ ಕಿಶೋರ್ ಅವರ ಬ್ಲೂಪ್ರಿಂಟ್ ಕೆಲಸ ಮಾಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಟಿವಿಕೆ ನಾಯಕ ವಿಜಯ್ ಅವರ ರಾಜಕೀಯ ನಡೆಗಳ ಹಿಂದೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಮಾರ್ಗದರ್ಶನವಿದೆ ಎನ್ನಲಾಗುತ್ತಿದೆ. ವಿಜಯ್ ಅವರು ಇತ್ತೀಚೆಗೆ ಹೇಳಿದ “ಕಾಡಿಗೆ ಒಬ್ಬನೇ ರಾಜ” ಎಂಬ ಮಾತುಗಳ ಹಿಂದೆ ದೊಡ್ಡ ಮಟ್ಟದ ಸಿದ್ಧತೆ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ. ನಾಯಕತ್ವದ ಶಕ್ತಿ ಮತ್ತು ಗುಂಪನ್ನು ಮುನ್ನಡೆಸುವ ಕಲೆಯನ್ನು ವಿಜಯ್ ಅವರು ತಮ್ಮ ಭಾಷಣಗಳಲ್ಲಿ ಸತತವಾಗಿ ಪ್ರದರ್ಶಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಲ್ ಈಗ ಕೇವಲ ಕ್ರಿಕೆಟ್​ ಅಲ್ಲ, ಇದು ದೊಡ್ಡ ಬಿಸಿನೆಸ್! – Kannada News | Muttiah Muralitharan’s Blunt Truth: IPL is Big Business

ಐಪಿಎಲ್ ಎಂದರೆ ಕೇವಲ ಬ್ಯಾಟ್ ಮತ್ತು ಬಾಲ್ ನಡುವಿನ ಸಮಬಲದ ಹೋರಾಟ ಎಂದು ನೀವು ಭಾವಿಸಿದ್ದರೆ, ಅದು ನಿಮ್ಮ ತಪ್ಪು ಕಲ್ಪನೆ! ಆಧುನಿಕ ಕ್ರಿಕೆಟ್‌ನ ಈ ಚುಟುಕು ಸಮರ ಈಗ ಕೇವಲ ಕ್ರೀಡೆಯಾಗಿ ಉಳಿದಿಲ್ಲ, ಬದಲಾಗಿ ಕೋಟಿ ಕೋಟಿ ಹಣ ಹರಿಯುವ ಒಂದು ಬೃಹತ್ ಉದ್ಯಮವಾಗಿ ಮಾರ್ಪಟ್ಟಿದೆ. ಹೀಗಂದಿರುವುದು ಮತ್ಯಾರೂ ಅಲ್ಲ. ಸನ್​ರೈಸರ್ಸ್ ಹೈದರಾಬಾದ್​ ತಂಡದ ಸ್ಪಿನ್ನರ್ ಕೋಚ್ ಹಾಗೂ ಕ್ರಿಕೆಟ್ ದಿಗ್ಗಜ ಮುತ್ತಯ್ಯ ಮುರಳೀಧರನ್.

ಮನೋರಂಜನೆಯೇ ಇಲ್ಲಿ ಮುಖ್ಯ:

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ 244 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ನಂತರ ಮಾತನಾಡಿದ ಮುತ್ತಯ್ಯ ಮುರಳೀಧರನ್, ಪ್ರೇಕ್ಷಕರು ಮೈದಾನಕ್ಕೆ ಬರುವುದು ಬೌಂಡರಿ ಮತ್ತು ಸಿಕ್ಸರ್‌ಗಳನ್ನು ನೋಡಲು. ಪಿಚ್ ಬೌಲರ್‌ಗಳಿಗೆ ಪೂರಕವಾಗಿದ್ದರೆ, ಪಂದ್ಯಗಳು ‘ಬೋರಿಂಗ್’ ಆಗುತ್ತವೆ ಎಂದು ಪ್ರಾಯೋಜಕರು ಮತ್ತು ಸಂಘಟಕರು ಭಾವಿಸುತ್ತಾರೆ. ಆದ್ದರಿಂದ, ಬ್ಯಾಟರ್‌ಗಳಿಗೆ ಪೂರಕವಾದ ಪಿಚ್‌ಗಳನ್ನು ಸಿದ್ಧಪಡಿಸುವುದು ಅನಿವಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬೌಲರ್​ಗಳ ಸವಾಲು:

ಈ ಬಾರಿ ರನ್ ಗತಿ ಹೆಚ್ಚಾಗಲು ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಮುಖ್ಯ ಕಾರಣ ಎಂದು ಮುತ್ತಯ್ಯ ಮುರಳಿಧರನ್ ಬೊಟ್ಟು ಮಾಡಿದ್ದಾರೆ. ಈ ನಿಯಮದಿಂದಾಗಿ ತಂಡಗಳಿಗೆ ಹೆಚ್ಚುವರಿ ಬ್ಯಾಟರ್ ಲಭ್ಯವಾಗುತ್ತಿದ್ದು, ವಿಕೆಟ್ ಬೀಳುವ ಭಯವಿಲ್ಲದೆ ಬ್ಯಾಟರ್‌ಗಳು ಮೊದಲ ಎಸೆತದಿಂದಲೇ ಆಕ್ರಮಣಕಾರಿ ಆಟವಾಡುತ್ತಿದ್ದಾರೆ. ವೈಭವ್ ಸೂರ್ಯವಂಶಿಯಂತಹ ಯುವ ಆಟಗಾರರು ಬುಮ್ರಾದಂತಹ ದಿಗ್ಗಜ ಬೌಲರ್‌ಗಳಿಗೂ ಗೌರವ ನೀಡದೆ ಆಡುತ್ತಿರುವುದು ಕ್ರಿಕೆಟ್ ಬದಲಾಗುತ್ತಿರುವುದಕ್ಕೆ ಸಾಕ್ಷಿ ಎಂದಿದ್ದಾರೆ. ಇವುಗಳನ್ನೆಲ್ಲಾ ಎದುರಿಸುವುದು ಪ್ರಸ್ತುತ ಬೌಲರ್​ಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ನಾನು ಅಥವಾ ಶೇನ್ ವಾರ್ನ್ ಈ ಕಾಲದಲ್ಲಿ ಬೌಲಿಂಗ್ ಮಾಡಿದ್ದರೂ ನಮಗೂ ಕೂಡ ಇದೇ ಪರಿಸ್ಥಿತಿ ಎದುರಾಗುತ್ತಿತ್ತು ಎಂದು ಹೇಳುವ ಮೂಲಕ ಬೌಲರ್‌ಗಳ ಅಸಹಾಯಕತೆಯನ್ನು ಅವರು ಒಪ್ಪಿಕೊಂಡಿದ್ದಾರೆ. ಆದರೆ, ಬೌಲರ್‌ಗಳು ಈ ಪರಿಸ್ಥಿತಿಯನ್ನು ದೂಷಿಸುವುದರಲ್ಲಿ ಅರ್ಥವಿಲ್ಲ.

ಐಪಿಎಲ್ ಎಂಬುದು ದೊಡ್ಡ ಬಿಸಿನೆಸ್ ಆಗಿರುವುದರಿಂದ ಬೌಲರ್‌ಗಳು ತಮ್ಮ ಕೌಶಲ್ಯವನ್ನು ಬದಲಾಯಿಸಿಕೊಂಡು, ರನ್ ನಿಯಂತ್ರಿಸುವುದನ್ನೇ ಸಾಧನೆ ಎಂದು ಭಾವಿಸಬೇಕಿದೆ ಎಂದು ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ.

ಇದನ್ನೂ ಓದಿ: ರೋವ್‌ಮನ್ ಪೊವೆಲ್ ಹಿಡಿದ ‘ಅಸಾಧ್ಯ’ ಕ್ಯಾಚ್‌ಗೆ ಕ್ರಿಕೆಟ್ ಲೋಕ ಫಿದಾ!

ಒಟ್ಟಾರೆಯಾಗಿ, ಐಪಿಎಲ್‌ನಲ್ಲಿ ಬ್ಯಾಟ್ ಮತ್ತು ಬಾಲ್ ನಡುವಿನ ಸಮತೋಲನವು ಹಣಕಾಸಿನ ಲಾಭ ಮತ್ತು ಪ್ರೇಕ್ಷಕರ ಮನೋರಂಜನೆಯ ಮುಂದೆ ಮರೆಯಾಗುತ್ತಿದೆ ಎಂಬುದು ಮುತ್ತಯ್ಯ ಮುರಳಿಧರನ್ ಅವರ ಮಾತಿನ ಸಾರಾಂಶವಾಗಿದೆ. ಸ್ಪಿನ್ ದಿಗ್ಗಜನ ಹೇಳಿಕೆಯು ಬೌಲರ್​ಗಳ ಅಸಹಾಯಕತೆಯನ್ನು ಎತ್ತಿ ತೋರಿಸಿದೆ. ಇದಾಗ್ಯೂ ಐಪಿಎಲ್​ನ ಈ ಬಿಸಿನೆಸ್ ಮಾಡೆಲ್ ಬದಲಾಗುವ ಯಾವುದೇ ಸೂಚನೆ ಇಲ್ಲ. ಹೀಗಾಗಿ ಐಪಿಎಲ್ ಅಂಗಳದಲ್ಲಿ ಬೌಲರ್​ಗಳ ದಂಡನೆ ಮುಂದುವರೆಯುವ ಸಾಧ್ಯತೆಯೇ ಹೆಚ್ಚು.

Source link

‘ಇವತ್ತು ರಿಸಲ್ಟ್ ನಮ್ಮದೇ’ ಎಂದಿದ್ದಕ್ಕೆ ಖುಷಿಯಿಂದ ನಕ್ಕ ತ್ರಿಷಾ

ತ್ರಿಷಾ ಕೃಷ್ಣನ್ ಅವರಿಗೆ ಇಂದು (ಮೇ 4) ಜನ್ಮದಿನ. ಹೀಗಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ. ದೇವಸ್ಥಾನ ಭೇಟಿಯ ಹಿಂದೆ ಇನ್ನೂ ಒಂದು ಕಾರಣ ಇರಬಹುದು ಎಂಬುದು ಅಭಿಮಾನಿಗಳ ಊಹೆ. ಅದೇನೆಂದರೆ ತ್ರಿಷಾ ಅವರು ವಿಜಯ್ ಜೊತೆ ಆಪ್ತತೆ ಹೊಂದಿದ್ದಾರೆ. ಹೀಗಾಗಿ, ವಿಜಯ್ ಅವರಿಗೆ ರಾಜಕೀಯ ದೃಷ್ಟಿಯಿಂದ ಪ್ರಮುಖ ದಿನ. ತಮಿಳುನಾಡು ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಕೋರುವ ಉದ್ದೇಶವೂ ಅವರಿಗೆ ಇದೆ ಎನ್ನಲಾಗಿದೆ. ದೇವಸ್ಥಾನದಲ್ಲಿ ‘ಮೇಡಂ ಇವತ್ತು ರಿಸಲ್ಟ್ ಪಕ್ಕಾ ಮನದೇ’ (ಮೇಡಂ, ಇಂದು ಫಲಿತಾಂಶ ಖಂಡಿತ ನಮ್ಮದೇ ಪಕ್ಕಾ) ಎಂದರು. ಆಗ ತ್ರಿಷಾ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸುನಾಮಿ: ಸುವೇಂದು ಅಧಿಕಾರಿ ಫಸ್ಟ್​​ ರಿಯಾಕ್ಷನ್​​ ನೋಡಿ – Kannada News | Suvendu Adhikari’s First Reaction to West Bengal Election 2026 Results

ಕೋಲ್ಕತ್ತಾ, ಮೇ 04: ಪಶ್ಚಿಮ ಬಂಗಾಳ ಚುನಾವಣೆ 2026 ಫಲಿತಾಂಶಗಳ ಕುರಿತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಮಮತಾ ಬ್ಯಾನರ್ಜಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಕೆಲವು ವಾರ್ಡ್‌ಗಳು ಬಿಜೆಪಿ ಪರವಾಗಿದ್ದರೂ, ಬಹುಸಂಖ್ಯಾತ ವಾರ್ಡ್‌ಗಳು ತೆರೆದಾಗ ತಮ್ಮ ಪರವಾಗಿ ಫಲಿತಾಂಶ ಬರುತ್ತದೆ ಎಂಬ ಟಿಎಂಸಿ ಹೇಳಿಕೆಯನ್ನೂ ಅಲ್ಲಗಳೆದಿರುವ ಅವರು ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರೋದು ನಿಶ್ಚಿತ ಎಂದಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version