Headlines

ದೇವನಹಳ್ಳಿಯಲ್ಲಿ ಭೀಕರ ಅಪಘಾತ: ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸಾವು!

ದೇವನಹಳ್ಳಿ, ಮಾ.20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.ಬೆಟ್ಟಕೋಟೆ ನಿವಾಸಿ ವೆಂಕಟೇಗೌಡ (45) ಎಂಬುವವರು ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ. ಬೆಟ್ಟಕೋಟೆ ಗ್ರಾಮದ ಬಳಿ ಅತಿವೇಗವಾಗಿ ಬಂದ ಕಾರು ಮೊದಲು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಕಾರು, ಮುಂದೆ ಚಲಿಸುತ್ತಿದ್ದ…

Read More

ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಎಲ್ಲರ ಗಮನ ಸೆಳೆದಿರುವುದು ಯುವ ವೇಗಿ ಅರ್ಜುನ್ ತೆಂಡೂಲ್ಕರ್. ಲಕ್ನೋ ಸೂಪರ್ ಜೈಂಟ್ಸ್ ತಂಡದ ಭಾಗವಾಗಿರುವ ಅರ್ಜುನ್ ತೆಂಡೂಲ್ಕರ್ ನೆಟ್ಸ್​ನಲ್ಲಿ, ತಮ್ಮ ನಿಖರವಾದ ಯಾರ್ಕರ್ ದಾಳಿಯ ಮೂಲಕ ತಂಡದ ಪ್ರಮುಖ ಬ್ಯಾಟರ್‌ಗಳನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರಿಗೆ ಅರ್ಜುನ್ ತೆಂಡೂಲ್ಕರ್ ಸತತವಾಗಿ ಯಾರ್ಕರ್‌ಗಳನ್ನು ಎಸೆಯುವ ಮೂಲಕ ಬೆವರಿಳಿಸಿದರು….

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್​ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ…

Read More

Basava Jayanti 2026: ದಯವೇ ಧರ್ಮದ ಮೂಲವಯ್ಯ; ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ವಿಶ್ವಗುರು ಬಸವಣ್ಣ – Kannada News | Basava Jayanti 2026: What is the significance behind celebration of Basava Jayanti?

ಕಾಯಕವೇ ಕೈಲಾಸ, ದಯೆಯೇ ಧರ್ಮದ ಮೂಲ ಎಂದು ಮನುಕುಲಕ್ಕೆ ಮಹಾ ಸಂದೇಶವನ್ನು ಸಾರಿದ ಬಸವಣ್ಣನವರ (Basavanna) ಜನ್ಮ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ತಮ್ಮ ವಚನಗಳ ಮೂಲಕವೇ 12 ಶತಮಾನದಲ್ಲಿ ಸಮಾಜದಲ್ಲಿ ಆಚರಣೆಯಲ್ಲಿದ್ದ ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಇತ್ಯಾದಿ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆ ಮಾಡಿ, ಜ್ಞಾನದ ಬೆಳಕು ಚೆಲ್ಲಿ ಕ್ರಾಂತಿಯ ಬೀಜ ಬಿತ್ತಿದವರು ವಿಶ್ವ ಗುರು ಬಸವಣ್ಣ. ಪ್ರಸಿದ್ಧ ಸಂತರಾಗಿದ್ದ ಇವರು ರಾಜನೀತಿಜ್ಞರಾಗಿ, ಸಮಾಜ ಸುಧಾರಕರಾಗಿ ತಮ್ಮ ಕಾವ್ಯ ಮತ್ತು ಬರವಣಿಗೆಯ ಮತ್ತು ವಿಚಾರಧಾರೆಗಳ ಮೂಲಕ ಸಮಾಜದಲ್ಲಿನ…

Read More

Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಪವರ್ ಕಟ್, ಇಲ್ಲಿದೆ ವಿವರ – Kannada News | Bangalore Power Cut Today: BESCOM Announces Power Outage in Several Areas on December 20

ಬೆಂಗಳೂರು, ಡಿಸೆಂಬರ್ 20: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಸ್ಕಾಂ (BESCOM) ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ಹಾಗೂ ಇನ್ನು ಕೆಲವು ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಪವರ್ ಕಟ್ ಇರಲಿದೆ. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಪವರ್ ಕಟ್? ಎಸ್1-ನಿಮ್ಹಾನ್ಸ್…

Read More

IND vs AFG: ಅರ್ಷದೀಪ್ ಮಾತು ಕೇಳದೆ ಕೆಟ್ಟ ಗಿಲ್; 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ – Kannada News | Rahmanullah Gurbaz Century vs India: Gill’s DRS Blunder Costs Dearly in Dharamshala ODI

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಮಳೆಯಿಂದ ತಡವಾಗಿ ಆರಂಭವಾದ ಪಂದ್ಯವನ್ನು ತಲಾ 25 ಓವರ್​ಗಳಿಗೆ ನಿಗದಿಪಡಿಸಲಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ ತಂಡದ ಪರ ಅನುಭವಿ ಆರಂಭಿಕ ರಹಮಾನುಲ್ಲಾ ಗುರ್ಬಾಜ್ ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 48 ಎಸೆತಗಳಲ್ಲಿ ಶತಕ ಬಾರಿಸಿದ ಗುರ್ಬಾಜ್ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳನ್ನು…

Read More

ಗದಗದಲ್ಲಿ ನಕಲಿ ಲಾಟರಿ ಜಾಲ ಸಕ್ರಿಯ: ಕೇರಳ ಸರ್ಕಾರದ ಚಿಹ್ನೆ ದುರ್ಬಳಕೆ ಮಾಡಿ ವಂಚನೆ ಆರೋಪ

ಗದಗ, ಮಾರ್ಚ್​​ 12: ನಕಲಿ ಲಾಟರಿ ಯೋಜನೆಯ ಮೂಲಕ ಜನರನ್ನು ಮೋಸಗೊಳಿಸುತ್ತಿರುವ ವಂಚಕ ಜಾಲ ಗದಗ ಜಿಲ್ಲೆಯಲ್ಲಿ ಸಕ್ರಿಯವಾಗಿದೆ ಎಂಬ ಆರೋಪ ಕೇಳಿಬಂದಿದೆ. ಖದೀಮರು ಕೇರಳ ಸರ್ಕಾರದ ಹೆಸರು ಮತ್ತು ಚಿಹ್ನೆಯನ್ನು ದುರುಪಯೋಗಪಡಿಸಿಕೊಂಡು ಲಾಟರಿ ಯೋಜನೆಯ ಹೆಸರಲ್ಲಿ ರ‍್ಯಾಂಡಮ್‌ ಮೊಬೈಲ್​​ ಸಂಖ್ಯೆಗಳಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನೀವು 15 ಲಕ್ಷ ರೂ. ಲಾಟರಿ ಬಹುಮಾನ ಗೆದ್ದಿದ್ದೀರಿ ಎಂಬ ಮಾಹಿತಿ ಮೆಸೇಜ್​​ನಲ್ಲಿ ಇರಲಿದ್ದು, ಜೊತೆಗೆ ಕೇರಳ ಸರ್ಕಾರದ ಚಿಹ್ನೆ ಹೊಂದಿರುವ PDF ಪ್ರಮಾಣಪತ್ರವನ್ನೂ ಕಳುಹಿಸಲಾಗುತ್ತಿದೆ. ಇದರಿಂದ ಲಾಟರಿ ನಿಜವಾದದ್ದು ಎಂಬ…

Read More

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ – Kannada News | Duologue with Barun Das returns with season 4 featuring legends including sourav ganguly aamir khan

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ…

Read More

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ,…

Read More

Video: ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ

ಆಂಧ್ರಪ್ರದೇಶ, ಮಾರ್ಚ್​ 05: ವಿದ್ಯಾರ್ಥಿಗಳಿಗೆ ಹೊಡೆದು ಬುದ್ಧಿ ಹೇಳಿ ಪಾಠ ಕಲಿಸುವುದು ಹಾಗಿರಲಿ, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದ್ದಾರೆ ಎನ್ನುವುದೇ ಆತಂಕಕಾರಿ ಸಂಗತಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವೀರವಳ್ಳಿಯ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶಿಕ್ಷಕರು ಬೈದರೆಂದು ಅವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ, ಮಕ್ಕಳ ಭವಿಷ್ಯವನ್ನು ರೂಪಿಸುತ್ತಾರೆ. ಆದರೆ ಅವರ ಬೆಲೆ ಗೊತ್ತಿಲ್ಲದ್ದ ವಿದ್ಯಾರ್ಥಿಗಳು ಇಂಥಾ ತಪ್ಪು ಮಾಡಿಬಿಡುತ್ತಾರೆ. ಇಂತಹ ನಡವಳಿಕೆಯು…

Read More