ಬಿಪಿ ನಿಯಂತ್ರಣದಲ್ಲಿಡಲು ಈ ಅಭ್ಯಾಸಗಳನ್ನು ತಪ್ಪದೆ ಅಳವಡಿಸಿಕೊಳ್ಳಿ! ಯಾವುದು ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಹೈ ಬ್ಲಡ್ ಪ್ರೆಶರ್ (ಬಿಪಿ) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಹಿಂದೆ ಈ ಸಮಸ್ಯೆ ಹಿರಿಯರಲ್ಲಿ ಮಾತ್ರ ಕಂಡುಬರುತ್ತಿತ್ತು. ಆದರೆ ಈಗ ಯುವಕರಲ್ಲೂ ಇದು ಸಾಮಾನ್ಯವಾಗಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಒತ್ತಡ, ದೈಹಿಕ ಚಟುವಟಿಕೆಗಳ ಕೊರತೆ, ಹೆಚ್ಚು ಉಪ್ಪಿನ ಸೇವನೆ ಹಾಗೂ ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆಗಳು ಬಿಪಿ (Blood Pressure) ಹೆಚ್ಚಾಗಲು ಪ್ರಮುಖ ಕಾರಣಗಳೆಂದು ವೈದ್ಯರು ಹೇಳುತ್ತಾರೆ. ಅದರಲ್ಲಿಯೂ ಬಿಪಿ ದೀರ್ಘಕಾಲದ ವರೆಗೆ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಿದ್ದರೆ ಹೃದಯ, ಮೂತ್ರಪಿಂಡ ಮತ್ತು ಮೆದುಳಿಗೆ ಸಂಬಂಧಿಸಿದ…

Read More

Good Governance Day 2025: ಉತ್ತಮ ಆಡಳಿತ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | Good Governance Day 2025: What is the purpose behind celebrating Good Governance Day on December 25?

ಉತ್ತಮ ಆಡಳಿತ (Good Governance) ಎಂದರೆ ಪಾರದರ್ಶಕತೆ, ಹೊಣೆಗಾರಿಕೆ, ಸಾರ್ವಜನಿಕ ಕಲ್ಯಾಣ ಮತ್ತು ಜವಾಬ್ದಾರಿಯುತವಾಗಿ, ಪರಿಣಾಮಕಾರಿಯಾಗಿ ಆಡಳಿತವನ್ನು ನಡೆಸುವುದಾಗಿದೆ. ಸರ್ಕಾರಿ ನೀತಿಗಳನ್ನು ಸಾಮಾನ್ಯ ನಾಗರಿಕರಿಗೆ ಪ್ರಾಮಾಣಿಕವಾಗಿ ತಲುಪಿಸಿದಾಗ, ಭ್ರಷ್ಟಾಚಾರವನ್ನು ನಿಗ್ರಹಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಅವಕಾಶಗಳನ್ನು ಒದಗಿಸಿದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹಾಗಾಗಿ ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಿಯೊಂದು ಆಡಳಿತ ವರ್ಗಗಳು ಉತ್ತಮ ರೀತಿಯಲ್ಲಿ ಆಡಳಿತ ನಡೆಸಬೇಕು ಹಾಗೂ ಸರ್ಕಾರದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಡಿಸೆಂಬರ್‌…

Read More

‘ಟಾಕ್ಸಿಕ್’ ಚಿತ್ರಕ್ಕೆ ಯೋಗರಾಜ್ ಭಟ್ ಬರೆದ ಹಾಡುಗಳೆಷ್ಟು? ಲೆಕ್ಕ ಕೊಟ್ಟ ನಿರ್ದೇಶಕ – Kannada News

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಪ್​​ಡೇಟ್ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಇರುತ್ತಾರೆ. ಈ ಸಿನಿಮಾ ಬಗ್ಗೆ ಯಾರೇ ಅಪ್​​ಡೇಟ್ ಕೊಟ್ಟರೂ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಯೋಗರಾಜ್ ಭಟ್ ಮಾತನಾಡಿದ್ದಾರೆ. ಈ ಚಿತ್ರದ ‘ತಬಾಹಿ..’ ಹಾಡಿಗೆ ಸಾಹಿತ್ಯ ಬರೆದಿದ್ದು ಯೋಗರಾಜ್ ಭಟ್ ಅವರೇ. ಈಗ ಸಿನಿಮಾದ ಹಾಡುಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೀರ್ತಿ ಇಎನ್​ಟಿ ಕ್ಲೀನಿಕ್ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಯೋಗರಾಜ್​ ಭಟ್ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More

48 ಗಂಟೆಗಳಲ್ಲಿ ಒಪ್ಪಂದವಾಗದಿದ್ದರೆ ನರಕ ನೋಡುತ್ತೀರಿ; ಇರಾನ್‌ಗೆ ಟ್ರಂಪ್ ಹೊಸ ಎಚ್ಚರಿಕೆ

ವಾಷಿಂಗ್ಟನ್, ಏಪ್ರಿಲ್ 4: ನಾನು ನೀಡಿದ್ದ ಸಮಯ ಮೀರುತ್ತಿದೆ. ಇರಾನ್ ಮೇಲೆ ಭೀಕರ ದಾಳಿ ನಡೆಸಲು ಕೇವಲ 48 ಗಂಟೆಗಳು ಮಾತ್ರ ಉಳಿದಿವೆ. ಅಷ್ಟರೊಳಗೆ ಒಪ್ಪಂದ ಮಾಡಿಕೊಳ್ಳದಿದ್ದರೆ ನರಕ ತೋರಿಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಹೊಸ ಎಚ್ಚರಿಕೆ ನೀಡಿದ್ದಾರೆ. “ನಾನು ಇರಾನ್‌ಗೆ ಒಪ್ಪಂದ ಮಾಡಿಕೊಳ್ಳಲು ಅಥವಾ ಹಾರ್ಮುಜ್ ಜಲಸಂಧಿಯನ್ನು ತೆರೆಯಲು 10 ದಿನಗಳನ್ನು ನೀಡಿದ್ದನ್ನು ಮತ್ತೊಮ್ಮೆ ನೆನಪಿಸುತ್ತಿದ್ದೇನೆ. ಗಡುವು ಮುಗಿಯುತ್ತಿದೆ. ಮುಂದಿನ 48 ಗಂಟೆಗಳ ಮೊದಲು ಒಪ್ಪಂದಕ್ಕೆ ಒಪ್ಪದಿದ್ದರೆ ನರಕವನ್ನೇ…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

IND vs SA: ಕೊನೆಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | India vs SA 5th T20: Ahmedabad Decider, Preview, Pitch and Playing XI

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯವು ಡಿಸೆಂಬರ್ 19, ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪ್ರಾರಂಭವಾಗಲಿದೆ. ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರೀ ಮಂಜಿನಿಂದಾಗಿ ರದ್ದಾಗಿತ್ತು. ಈ ಟಿ20 ಸರಣಿಯಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ ಸಾಧಿಸಿದೆ….

Read More

ಬೈ ಎಲೆಕ್ಷನ್: ಬಾಗಲ’ಕೋಟೆ’ ಯಾರಿಗೆ? ಹೇಗಿದೆ ಕಾಂಗ್ರೆಸ್-ಬಿಜೆಪಿ ನಾಯಕರ ಗೆಲುವಿನ ಲೆಕ್ಕಾಚಾರ?

ಬಾಗಲಕೋಟೆ, (ಏಪ್ರಿಲ್ 12): ಕಾಂಗ್ರೆಸ್ ಶಾಸಕರಾಗಿದ್ದ ಹೆಚ್ ವೈ ಮೇಟಿ ಅಕಾಲಿಕ ನಿಧನದಿಂದ ನಡೆದ ಬಾಗಲಕೋಟೆ ಉಪಚುನಾವಣೆ (Bagalkot By Election) ಅಂತ್ಯವಾಗಿದ್ದು. ಇದೀಗ ಎಲ್ಲರ ಚಿತ್ತ ಮೇ 4ರ ಫಲಿತಾಂಶದತ್ತ ನೆಟ್ಟಿದೆ. ಉಪಚುನಾವಣೆಯಲ್ಲಿ ಶೇ.68.74ರಷ್ಟು ಮತದಾನವಾಗಿದೆ.  ಆದ್ರೆ, ಕಳೆದ ಬಾರಿ ಅಂದರೆ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಶೇ. 69.40ರಷ್ಟು ವೋಟಿಂಗ್ ಆಗಿದ್ದು,  ಈ ಬಾರಿ ಕಳೆದ ಬಾರಿಗಿಂತ‌ ಕಡಿಮೆ ಆಗಿದೆ. ಈ ಹಿನ್ನೆಲೆಯಲ್ಲಿ  ಮತದಾನದ ಪ್ರತಿಶತ ಆಧಾರದ ಮೇಲೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ…

Read More

Job Fair: ಜೂ. 22ಕ್ಕೆ ಮಂಗಳೂರಿನಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! – Kannada News | Dakshina Kannada Job and Apprenticeship Fair: ITI Graduates, June 22nd Mangaluru Opportunity

ಮಂಗಳೂರಿನಲ್ಲಿ ಉದ್ಯೋಗ ಮೇಳImage Credit source: Pinterest ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ, ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್ 22ರಂದು ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಮೇಳವು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ಜರುಗಲಿದೆ. ವಿವಿಧ ಉದ್ಯಮ ಸಂಸ್ಥೆಗಳಿಂದ ನೇಮಕಾತಿ ಪ್ರಕ್ರಿಯೆ: ದಕ್ಷಿಣ…

Read More

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಳಿಸಿ ರಾಜ್ಯಪಾಲರಿಂದ ಆದೇಶ: ತನಿಖೆಗೆ ಶಿಫಾರಸು – Kannada News | KPSC Chairman Shivashankarappa Sahukar Suspended by Karnataka Governor Amid Nepotism Allegations

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಅವರ ಆದೇಶದ ಕುರಿತ ಲೋಕಭವನದ ಪ್ರಕಟಣೆಯ ಪ್ರತಿImage Credit source: tv9 ಬೆಂಗಳೂರು, ಜುಲೈ 13: ಕೆಪಿಎಸ್‌ಸಿ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ. ಇದರ ಜೊತೆಗೆ, ಪ್ರಕರಣವನ್ನು…

Read More