Headlines

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ – Kannada News | India to buy fighter jets missiles and other war items worth over rs 3 6 crore

ನವದೆಹಲಿ, ಫೆಬ್ರುವರಿ 13: ರಷ್ಯಾದಿಂದ ಸುಮಾರು 10,000 ಕೋಟಿ ರೂ ಮೌಲ್ಯದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಅನುಮೋದನೆ ನೀಡಿದೆ. ಮೊನ್ನೆಯಷ್ಟೇ ಸರ್ಕಾರವು 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುತ್ತಿರುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ 3.6 ಲಕ್ಷ ಕೋಟಿ ರೂ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳನ್ನು ಭಾರತ ಖರೀದಿಸಲು ಹೊರಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ನಿನ್ನೆ ಗುರುವಾರ (ಫೆ. 12) ವಿವಿಧ ಖರೀದಿಗಳಿಗೆ ಎಒಎನ್ (ಅವಶ್ಯಕವೆಂದು ಮಾನ್ಯತೆ)…

Read More

ಬೆಂಗಳೂರಿನ ಈ ಕೆರೆಗಳಲ್ಲಿ ಇನ್ನು ಬೋಟಿಂಗ್ ಮಾಡಬಹುದು! ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್ – Kannada News | Boating Soon in Bengaluru Lakes! GBA Plans Tourism Boost Across City Waterbodies

ಕೆರೆಗಳ ನಿರ್ವಹಣೆಗೆ ಜಿಬಿಎ ಹೊಸ ಪ್ಲ್ಯಾನ್Image Credit source: tv9 ಬೆಂಗಳೂರು, ಫೆಬ್ರವರಿ 13: ಬೆಂಗಳೂರು (Bangalore) ಒಂದು ಕಾಲದಲ್ಲಿ ಕೆರೆಗಳಿಂದಲೇ ಹೆಸರುವಾಸಿಯಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಕೆರೆಗಳು ನಿರ್ವಹಣೆಯ ಕೊರತೆಯಿಂದ ಕಲುಷಿತಗೊಂಡು, ಡ್ರೈನೇಜ್ ನೀರು ಸೇರಿ ಅವನತಿಯ ಹಾದಿ ಹಿಡಿದಿವೆ. ಈ ಹಿನ್ನೆಲೆಯಲ್ಲಿ, ಜಿಬಿಎ (GBA) ಬೆಂಗಳೂರಿನ ಕೆರೆಗಳ ನಿರ್ವಹಣೆಗೆ ಹೊಸ ಯೋಜನೆಯನ್ನು ಪ್ರಸ್ತಾಪಿಸಿದೆ. ಈ ಯೋಜನೆಯು ನಗರದ ಪ್ರಮುಖ 10 ಕೆರೆಗಳಲ್ಲಿ ಬೋಟಿಂಗ್ ವ್ಯವಸ್ಥೆಯನ್ನು ಜಾರಿಗೆ ತರುವ ಗುರಿ ಹೊಂದಿದೆ. ಬೆಂಗಳೂರು ನಗರದಲ್ಲಿ…

Read More

Video: ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕುಡಿಸಿ ಬಾಯಾರಿಕೆ ನೀಗಿಸಿದ ಕರ್ತವ್ಯ ನಿರತ ಪೊಲೀಸ್ – Kannada News | Policeman quenches thirst of sparrow that fell on road by giving it water

ನಮ್ಮಲ್ಲಿ ಕೆಲವರಿಗೆ ಈ ಪ್ರಾಣಿ (Animal), ಪಕ್ಷಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಅವುಗಳಿಗೆ ಆಹಾರ ಹಾಕುವುದು, ನೀರು ಕುಡಿಯಲು ಇಡುವುದು ಹೀಗೆ ಅವುಗಳ ಹಸಿವು ನೀಗಿಸುವಂತಹ ಪ್ರಯತ್ನ ಮಾಡ್ತಾರೆ. ಈ ಮೂಕ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕಿದೆ ಎಂದರೆ ತಮ್ಮ ಪ್ರಾಣ ಒತ್ತೆ ಇಟ್ಟು ಅವುಗಳನ್ನು ರಕ್ಷಿಸುತ್ತಾರೆ. ಈ ವಿಡಿಯೋ ನೋಡಿದರೆ ಪೊಲೀಸಪ್ಪನ ಒಳ್ಳೆಯ ಮನಸ್ಸಿಗೆ ನೀವು ಕರಗಿ ಹೋಗ್ತೀರಾ. ಬಿಸಿಲಿನ ಝಳಕ್ಕೆ ರಸ್ತೆಯಲ್ಲಿ ಬಿದ್ದಿದ್ದ ಗುಬ್ಬಚ್ಚಿಗೆ ನೀರು ಕೊಟ್ಟು ಪೊಲೀಸರೊಬ್ಬರು ಬಾಯಾರಿಕೆ ನೀಗಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ…

Read More

Solar Eclipse 2026: ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ – Kannada News | Solar Eclipse 2026: Astrological Predictions for Gemini by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ಮಿಥುನ ರಾಶಿಯವರಿಗೆ, ವಿಶೇಷವಾಗಿ ಮೃಗಶಿರಾ, ಆರಿದ್ರಾ ಮತ್ತು ಪುನರ್ವಸು ನಕ್ಷತ್ರದವರಿಗೆ ಬಹಳಷ್ಟು ಶುಭ ಫಲಗಳನ್ನು ನೀಡಲಿದೆ. ಒಂಬತ್ತನೇ ಮನೆಯಲ್ಲಿ ಸಂಭವಿಸುತ್ತಿರುವ ಈ ಗ್ರಹಣವನ್ನು ಗುರು ಗ್ರಹವೂ ವೀಕ್ಷಿಸುತ್ತಿರುವುದರಿಂದ ಕಲಹಗಳು ಮತ್ತು ಅಪವಾದಗಳಿಂದ ದೂರವಿರಲು ಸಹಾಯವಾಗುತ್ತದೆ. ಧನ ಯೋಗ, ಆರ್ಥಿಕ ಲಾಭ, ಪೂರ್ವಿಕರ ಆಸ್ತಿ ವಿಚಾರದಲ್ಲಿ ಶುಭ, ಪ್ರಯತ್ನಗಳಲ್ಲಿ ಸಫಲತೆ, ಹಾಗೂ ಉದ್ಯೋಗದಲ್ಲಿ ಸ್ಥಿರತೆ ಮತ್ತು ಜವಾಬ್ದಾರಿಗಳ ಹೆಚ್ಚಳ ಸಾಧ್ಯ. ಮಾರಾಟಗಾರರು, ಆನ್‌ಲೈನ್ ಉದ್ಯಮಿಗಳು, ಸಾಫ್ಟ್‌ವೇರ್…

Read More

Video: ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ – Kannada News | Mumbai: Ticket Collector Turns Lifesaver for Elderly Man in Dramatic Station Incident

ಮುಂಬೈ, ಫೆಬ್ರವರಿ 13: ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆಯನ್ನು ಟಿಸಿ ದೇವರಂತೆ ಬಂದು ರಕ್ಷಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಜನದಟ್ಟಣೆ, ರಶ್ ಮತ್ತು ಸಮಯದ ಕೊರತೆಯ ನಡುವೆ, ಸಣ್ಣ ನಿರ್ಲಕ್ಷ್ಯವೂ ಸಹ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ಕುರ್ಲಾ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಚಲಿಸುತ್ತಿರುವ ರೈಲಿನಿಂದ ಬಿದ್ದಿದ್ದರು. ಟಿಸಿ ಈ ಘಟನೆಯನ್ನು ಗಮನಿಸಿ ಕೂಡಲೇ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ಇಡೀ ಘಟನೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source…

Read More

ವಾರಕ್ಕೆ 800 ರೂ. ಸಂಬಳ: ಜೀತಕ್ಕೆ ದುಡಿಯುತ್ತಿದ್ದ ಒಡಿಶಾ ಮುಲದ 24 ಮಂದಿ ಕಾರ್ಮಿಕರ ರಕ್ಷಣೆ – Kannada News | Odisha Bonded Laborers Rescued from Bagalkot Brick Kiln: Case Filled Against Owner

ರಕ್ಷಣೆ ಮಾಡಲಾದ ಕಾರ್ಮಿಕರುImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 13: ಜಿಲ್ಲೆಯ ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ದುಡಿಯುತ್ತಿದ್ದ ಐವರು ಬಾಲ ಕಾರ್ಮಿಕರು ಸೇರಿದಂತೆ ಒಡಿಶಾ ಮೂಲದ ಒಟ್ಟು 24 ಮಂದಿಯನ್ನು ಇಳಕಲ್ ತಹಶೀಲ್ದಾರ್, ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಈರಪ್ಪ ಕುಂಬಾರ ಎಂಬುವರ ಇಟ್ಟಿಗೆ ಭಟ್ಟಿಯಲ್ಲಿ ಇವರು ಕೆಲಸ ಮಾಡುತ್ತಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬಾಲ ಕಾರ್ಮಿಕ ನಿಷೇಧ‌‌ ಮತ್ತು ಜೀತ ಪದ್ಧತಿ ನಿಷೇಧ ಕಾಯ್ದೆಯಡಿ…

Read More

ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ; ಬಿಗ್ ಬಾಸ್ ಸ್ಪರ್ಧಿಗಳ ಪಾಡು ನೋಡಿ

‘ಬಿಗ್ ಬಾಸ್’ ಈ ಸೀಸನ್ ಸ್ಪರ್ಧಿಗಳನ್ನು ಇಟ್ಟುಕೊಂಡು ‘ದೊಡ್ಮನೆ ಹಬ್ಬ’ ಆಯೋಜನೆ ಮಾಡಲಾಗಿದೆ. ಈ ಹಬ್ಬದಲ್ಲಿ ಸಾಕಷ್ಟು ಫನ್ ಇತ್ತು. ಕಿವಿಗೆ ಹೆಡ್ ಫೋನ್ ಮಾದರಿಯನ್ನು ಹಾಕಿ ಒಂದು ಲೈನ್ ಹೇಳಿಸಲಾಯಿತು. ಆರಂಭದಲ್ಲಿ ಹೇಳಿದ್ದು ಒಂದಾದರೆ, ಕೊನೆಯ ವ್ಯಕ್ತಿ ಬರೋವರೆಗೆ ಅದು ಇನ್ನೊಂದು ರೀತಿಯಲ್ಲಿ ತಿರುಗಿತು. ಈ ಫನ್ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಜನವರಿ 14 ಅಂದರೆ ಶನಿವಾರ ಸಂಜೆ 6ಕ್ಕೆ ಈ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಬಾಂಗ್ಲಾದೇಶದ ಪ್ರಧಾನಿಯಾಗಲಿರುವ ಬಿಎನ್​​ಪಿಯ ತಾರಿಕ್ ರೆಹಮಾನ್ ಒಟ್ಟು ಆಸ್ತಿ ಎಷ್ಟು? – Kannada News | Bangladesh’s next PM Tarique Rahman: BNP Leader’s Assets and Election Victory Overview

ಢಾಕಾ, ಫೆಬ್ರವರಿ 13: ಬಾಂಗ್ಲಾದೇಶ(Bangladesh)ದಲ್ಲಿ ಅಶಾಂತಿ ನೆಲೆಸಿದೆ. ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಚುನಾವಣಾ ಫಲಿತಾಂಶಗಳು ಸೂಚಿಸುತ್ತಿಚೆ. ಸುಮಾರು ಎರಡು ದಶಕಗಳ ನಂತರ ಬಿಎನ್‌ಪಿ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಅವರ ಮೈತ್ರಿಕೂಟ ಈಗಾಗಲೇ ಬಹುಮತದ ಗಡಿ ದಾಟಿದೆ. ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಬಿಎನ್‌ಪಿ ಸರ್ಕಾರದಲ್ಲಿ ಪ್ರಧಾನಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿದೆ. 17 ವರ್ಷಗಳ ವನವಾಸದ ನಂತರ ಬಾಂಗ್ಲಾದೇಶಕ್ಕೆ ಮರಳಿರುವ ತಾರಿಕ್ ರೆಹಮಾನ್, ಒಂದೂವರೆ ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿಯಾಗುವ ಹಾದಿಯಲ್ಲಿದ್ದಾರೆ….

Read More

ಭಾರತದಲ್ಲಿ ಹಣದುಬ್ಬರಕ್ಕೆ ಹೊಸ ಸ್ವರೂಪ; ಮೂಲ ವರ್ಷ ಬದಲಾವಣೆ; ಜನವರಿಯಲ್ಲಿ ಶೇ. 2.8 ಇನ್​ಫ್ಲೇಶನ್ ದಾಖಲು – Kannada News | Retail inflation at 2.8pc in January 2026, based on new CPI series with 2024 as base year

ನವದೆಹಲಿ, ಫೆಬ್ರುವರಿ 13: ಭಾರತದ ರೀಟೇಲ್ ಹಣದುಬ್ಬರ (Retail Inflation) ಜನವರಿಯಲ್ಲಿ ಶೇ. 2.8 ಎಂದು ದಾಖಲಾಗಿದೆ. ಬದಲಾವಣೆ ಮಾಡಲಾದ ಮಾನಕದ ಪ್ರಕಾರ ಹಣದುಬ್ಬರ ಲೆಕ್ಕಾಚಾರ ಮಾಡಲಾಗಿದೆ. ಮೂಲ ವರ್ಷ ಅಥವಾ ಬೇಸ್ ವರ್ಷವನ್ನು 2012ರಿಂದ 2024ಕ್ಕೆ ಬದಲಾಯಿಸಲಾಗಿದೆ. 2023-24ರ ಗೃಹ ಅನುಭೋಗ ಸಮೀಕ್ಷೆಯ ದತ್ತಾಂಶವನ್ನು ಬಳಸಿ ದೇಶಾದ್ಯಂತ ಅನುಭೋಗ ಮಾದರಿ (consumption pattern) ಆಗಿರುವ ಬದಲಾವಣೆಯನ್ನು ಗುರುತಿಸಲಾಗಿದೆ. ಹಣದುಬ್ಬರ ಲೆಕ್ಕಾಚಾರ ಪಟ್ಟಿಯಲ್ಲಿರುವ ಸರಕುಗಳಿಗೆ ಹೊಸ ಸೇರ್ಪಡೆ ಮತ್ತು ವೈಟೇಜ್ ಅನ್ನು ಕೊಡಲಾಗಿದೆ. ಆಹಾರಕ್ಕಿರುವ ವೈಟೇಜ್ ಅನ್ನು…

Read More

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More