Headlines

ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ – Kannada News | Sanchita Ugale, ‘Kumkum Bhagya’ Actress, ends her life at the age of 30; Hindi TV Serial Industry Shocked

ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಕೇವಲ 30 ವರ್ಷ ವಯಸ್ಸಾಗಿತ್ತು. ಭಾನುವಾರ (ಜೂನ್ 14) ಸಂಜೆ ಮುಂಬೈ ಸಮೀಪದ ನಲಸೋಪಾರಾದಲ್ಲಿ ಅವರು ತಮ್ಮ ಜೀವ ಕೊನೆ ಮಾಡಿಕೊಂಡಿದ್ದು, ಬೆಡ್‌ರೂಮ್‌ನಲ್ಲಿ ಅವರ ಶವ ಸಿಕ್ಕಿದೆ. ಸೋಮವಾರ ಈ ವಿಷಯ ಅಧಿಕೃತವಾಗಿ ಬೆಳಕಿಗೆ ಬಂದಿದೆ. ಈ ಸುದ್ದಿ ಕಿರುತೆರೆ ಲೋಕಕ್ಕೆ ಭಾರಿ ಆಘಾತವನ್ನು ನೀಡಿದೆ. ಪೊಲೀಸ್ ಮೂಲಗಳ ಪ್ರಕಾರ, ಘಟನೆ ನಡೆದ…

Read More

ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಕಬ್ಬು, ಬಾಳೆಹಣ್ಣು ನೀಡಿದ ಗ್ರಾಮಸ್ಥರು!

ಬೆಂಗಳೂರು, ಜೂನ್ 15: ತಾಯಿಯಿಂದ ಬೇರ್ಪಟ್ಟ ಮರಿಯಾನೆಯೊಂದು ಆಹಾರ ಅರಸಿಕೊಂಡು ಕರ್ನಾಟಕ-ತಮಿಳುನಾಡು ಗಡಿಭಾಗದ ಡೊಂಕರೆಕೋಟೆ ಸಮೀಪದ ಗ್ರಾಮವೊಂದಕ್ಕೆ ಬಂದಿದೆ. ಇದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು, ಅದರ ಹಸಿವನ್ನು ನೀಗಿಸಲು ಮುಂದಾಗಿದ್ದಾರೆ. ಮಾನವೀಯತೆ ಮೆರೆದ ಗ್ರಾಮಸ್ಥರು ಮರಿಯಾನೆಗೆ ಕಬ್ಬು ಮತ್ತು ಬಾಳೆಹಣ್ಣು ನೀಡಿ ಉಪಚರಿಸಿದ್ದಾರೆ. ಗ್ರಾಮಸ್ಥರ ಆರೈಕೆಯಿಂದ ಹಸಿವು ನೀಗಿಸಿಕೊಂಡ ಮರಿಯಾನೆ ಸ್ವಲ್ಪ ಸಮಯದ ನಂತರ ಆ ಪ್ರದೇಶದಲ್ಲಿಯೇ ಉಳಿದುಕೊಂಡಿತ್ತು. ಈ ಬಗ್ಗೆ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದಾವಿಸಿದ್ದಾರೆ. ಮರಿಯಾನೆ ಸದ್ಯ ಸುರಕ್ಷಿತವಾಗಿದ್ದು,…

Read More

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – Kannada News | Tamil Nadu CM Vijay wife Sangeetha Sornalingam Divorce case hearing Adjourned to August 7

ತಮಿಳುನಾಡು ಮುಖ್ಯಮಂತ್ರಿ, ಖ್ಯಾತ ನಟ ದಳಪತಿ ವಿಜಯ್ (Tamil Nadu CM Vijay) ಮತ್ತು ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ನಡುವಿನ ವಿಚ್ಛೇದನ (Divorce) ಪ್ರಕರಣದ ವಿಚಾರಣೆಯನ್ನು ಚೆಂಗಲ್ಪಟ್ಟು ಮಹಿಳಾ ನ್ಯಾಯಾಲಯವು ಆಗಸ್ಟ್ 7ಕ್ಕೆ ಮುಂದೂಡಿದೆ. ಜೂನ್ 15ರ ಸೋಮವಾರದಂದು ನಡೆದ ವಿಚಾರಣೆಗೆ ಕೋರ್ಟ್ ಸೂಚನೆಯಂತೆ ವಿಜಯ್ ಮತ್ತು ಸಂಗೀತಾ (Sangeetha Sornalingam) ಖುದ್ದಾಗಿ ಹಾಜರಾಗಿದ್ದರು. ಬೆಳಿಗ್ಗೆ 10.30ರ ಸುಮಾರಿಗೆ ಆರಂಭವಾದ ವಿಚಾರಣೆಯಲ್ಲಿ ದಂಪತಿ ಉಪಸ್ಥಿತರಿದ್ದರಾದರೂ, ಯಾವುದೇ ಪ್ರಮುಖ ನಿರ್ಧಾರ ಅಥವಾ ಸಂಧಾನ ಸೂತ್ರಗಳು ಮೂಡಿಬರದೆ ಸೆಷನ್…

Read More

ಹಳೆಯ ಕಾರಿಗೆ ಇ20 ಪೆಟ್ರೋಲ್ ಹಾಕಿಸಿದ್ರೆ ಇನ್ಷೂರೆನ್ಸ್ ಸಿಗಲ್ಲವಾ? ವಿಮಾ ಕಂಪನಿ ಹೇಳಿದ್ದಿದು – Kannada News | E20 Fuel in Old Cars: Risk Your Insurance Claim & Engine Damage Warning for Non Compatible Vehicles

ನವದೆಹಲಿ, ಜೂನ್ 15: ಹಳೆಯ ಕಾರುಗಳಲ್ಲಿ E20 ಇಂಧನವನ್ನು (80% ಪೆಟ್ರೋಲ್ ಮತ್ತು 20% ಎಥೆನಾಲ್ ಮಿಶ್ರಣ) ಬಳಸುವುದು ನಿಮ್ಮ ವಾಹನ ವಿಮಾ ಕ್ಲೈಮ್‌ (Insurance Claim) ತಿರಸ್ಕೃತವಾಗಲು ಕಾರಣವಾಗಬಹುದು ಎಂದು ಇನ್ಷೂರೆನ್ಸ್ ಕಂಪನಿಯಾದ ಐಸಿಐಸಿಐ ಲೊಂಬಾರ್ಡ್ (ICICI Lombard) ಎಚ್ಚರಿಸಿದೆ. ಏಪ್ರಿಲ್ 2023ಕ್ಕಿಂತ ಮುಂಚೆ ತಯಾರಾದ ಮತ್ತು E20 ಇಂಧನಕ್ಕೆ ಹೊಂದಿಕೆಯಾಗದ (non-compatible) ವಾಹನಗಳಲ್ಲಿ ಈ ಇಂಧನವನ್ನು ಬಳಸಿದರೆ, ವಿಮಾ ಕಂಪನಿಗಳು ಇಂಜಿನ್ ಹಾನಿಗೆ ಸಂಬಂಧಿಸಿದ ಕ್ಲೈಮ್‌ಗಳನ್ನು ತಿರಸ್ಕರಿಸಬಹುದು ಎಂದು ಈ ಸಂಸ್ಥೆ ತಿಳಿಸಿದೆ. ವಾಹನ…

Read More

420ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿ ಪಂದ್ಯ ಗೆಲ್ಲಿಸಿದ ಜೇಸನ್ ಹೋಲ್ಡರ್ – Kannada News | Jason Holder’s Blazing 420 Strike Rate Powers Thrilling Run Chase Victory

ವೆಸ್ಟ್ ಇಂಡೀಸ್ ತಂಡವು ಕೊನೆಗೂ ಟಿ20 ಸರಣಿ ಗೆದ್ದುಕೊಂಡಿದೆ. ಅದು ಸಹ ಒಂದು ವರ್ಷಗಳ ಬಳಿಕ. ಅಂದರೆ ಕಳೆದುಕೊಂದು ವರ್ಷದಿಂದ ವಿಂಡೀಸ್ ಪಾಲಿಗೆ ಮರೀಚಿಕೆಯಾಗಿದ್ದ ಟಿ20 ಸರಣಿ ಗೆಲುವು ಕೊನೆಗೂ 2-1 ಅಂತರದಿಂದ ದಕ್ಕಿದೆ. ಜಮೈಕಾದ ಸೆಬೀನಾ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್​ಗಳಲ್ಲಿ 169…

Read More

ಸತತ ಸೋಲಿನ ಬಳಿಕ ಸಂಭಾವನೆಯನ್ನು ಗಣನೀಯವಾಗಿ ಇಳಿಸಿಕೊಂಡ ವಿಕ್ರಮ್

ತಮಿಳು ಚಿತ್ರರಂಗದ ವರ್ಸಟೈಲ್ ನಟ ‘ಚಿಯಾನ್’ ವಿಕ್ರಮ್ ತಮ್ಮ ಮುಂದಿನ ಬಹುನಿರೀಕ್ಷಿತ ಚಿತ್ರ ‘ಚಿಯಾನ್ 63’ ಸಿನಿಮಾಕ್ಕಾಗಿ ತಯಾರಿ ನಡೆಸುತ್ತಿದ್ದಾರೆ. ಸತತವಾಗಿ ಸಿನಿಮಾ ಫ್ಲಾಪ್ ಆಗುತ್ತಿರುವುದರಿಂದ ಅವರಿಗೆ ದೊಡ್ಡ ಮಟ್ಟದಲ್ಲಿ ಸಂಭಾವನೆ ಕೊಡಲು ಯಾರೊಬ್ಬರೂ ಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಸಂಭಾವನೆ ಕಡಿತ ಮಾಡಿಕೊಂಡಿದ್ದಾರೆ. ಹೊಸ ಚಿತ್ರಕ್ಕಾಗಿ ವಿಕ್ರಮ್ ಅವರು ಸುಮಾರು 20 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ. ಇದು ವಿಕ್ರಮ್ ಹಿಂದಿನ ಸಿನಿಮಾಗಳ ಸಂಭಾವನೆಗೆ ಹೋಲಿಸಿದರೆ ತುಂಬಾನೇ ಕಡಿಮೆ ಆದಂತೆ ಆಗಿದೆ. ಸದ್ಯದ…

Read More

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿ: ಅನರ್ಹರಿಗೆ ಭರ್ಜರಿ ಶಾಕ್​​ ಕೊಡಲು ಸರ್ಕಾರದ ಸಿದ್ಧತೆ – Kannada News | After Gruhalakshmi, Karnataka Government Set to Revamp Gruha Jyothi Scheme

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಪರಿಷ್ಕರಣೆಗೆ ತಯಾರಿImage Credit source: DK Shivakumar X Account ಬೆಂಗಳೂರು, ಜೂನ್​​ 15: ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮೇಜರ್​​ ಸರ್ಜರಿಗೆ ಮುಂದಾಗಿರುವ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಬೆನ್ನಲ್ಲೇ ಮನೆಗೆ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ಮುಂದಾಗಿದೆ. 2 ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ. ಗೃಹಜ್ಯೋತಿ ಯೊಜನೆಯಡಿ ರಾಜ್ಯದ…

Read More

Video: ಪಾಕಿಸ್ತಾನದಲ್ಲಿ ವಾಯುಸೇನೆಯ ತರಬೇತಿ ವಿಮಾನ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ, ಮೂವರಿಗೆ ಗಾಯ – Kannada News | Tragedy in Khyber Pakhtunkhwa as Air Force Training Jet Goes Down During Flight

ಇಸ್ಲಾಮಾಬಾದ್, ಜೂನ್ 15: ಪಾಕಿಸ್ತಾನದ ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಮರ್ದಾನ್ ಜಿಲ್ಲೆಯ ಕಟ್ಲಂಗ್ ಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಪಾಕಿಸ್ತಾನ ವಾಯುಸೇನೆಗೆ (PAF) ಸೇರಿದ ತರಬೇತಿ ವಿಮಾನವೊಂದು (Trainer Aircraft) ಹಾರಾಟದ ವೇಳೆ ಇದ್ದಕ್ಕಿದ್ದಂತೆ ತಾಂತ್ರಿಕ ದೋಷದಿಂದಾಗಿ ಅಪಘಾತಕ್ಕೀಡಾಗಿದೆ. ಈ ದುರದೃಷ್ಟಕರ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ವಿಡಿಯೋ #BREAKING: खैबर पख्तूनख्वा के मर्दान जिले के कटलंग क्षेत्र में पाकिस्तान एयर फोर्स का ट्रेनर…

Read More

ಕರ್ನಾಟಕ ಕರಾವಳಿಯ ಸೌಂದರ್ಯಕ್ಕೆ ಮನಸೋತ ಆನಂದ್ ಮಹೀಂದ್ರಾ! ಶರಾವತಿ ಹಿನ್ನೀರಿನ ಸೌಂದರ್ಯ ಬಣ್ಣಿಸಿ ಪೋಸ್ಟ್ – Kannada News | Anand Mahindra Praises Honnavar Backwaters and Sharavathi Mangroves as Karnataka’s Hidden Gem

ಶರಾವತಿ ನದಿ ಹಿನ್ನೀರು ಸೌಂದರ್ಯ (ಚಿತ್ರ ಕೃಪೆ: ಆನಂದ್ ಮಹೀಂದ್ರಾ ಎಕ್ಸ್ ಹ್ಯಾಂಡಲ್)Image Credit source: @anandmahindra ಬೆಂಗಳೂರು, ಜೂನ್ 15: ಭಾರತದ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಅಷ್ಟಾಗಿ ಪರಿಚಿತವಲ್ಲದ, ಆದರೆ ಅದ್ಭುತ ಪ್ರಕೃತಿ ಸೌಂದರ್ಯ ಹೊಂದಿರುವ ರಹಸ್ಯ ತಾಣಗಳ ಹುಡುಕಾಟದಲ್ಲಿದ್ದೇನೆ ಎಂದಿರುವ ಖ್ಯಾತ ಉದ್ಯಮಿ, ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ (Anand Mahindra) ಕಣ್ಣು ಈಗ ಕರ್ನಾಟಕದ ಕರಾವಳಿಯ ಮೇಲಿದೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರದ ಮನಮೋಹಕ ಹಿನ್ನೀರು (Backwaters)…

Read More

ಸರ್ವಿಸ್ ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ ಇ. ತುಕಾರಾಂ – Kannada News | Controversy Sparks as Bellary MP E Tukaram Allegedly Abuses Locals Questioning Poor Quality Service Road Work

ಕಳಪೆ ಕಾಮಗಾರಿ ಪ್ರಶ್ನಿಸಿದವರ ವಿರುದ್ಧ ಅಶ್ಲೀಲ ಪದ ಬಳಸಿದ ಕಾಂಗ್ರೆಸ್​​ ಸಂಸದ Image Credit source: Tv9 Kannada ಬಳ್ಳಾರಿ, ಜೂನ್​​ 15: ನಿರ್ಮಾಣಗೊಂಡ ಕೆಲವೇ ದಿನದಲ್ಲೇ ಸರ್ವಿಸ್ ರಸ್ತೆ ಕುಸಿದ ಹಿನ್ನೆಲೆ ಪರಿಶೀಲನೆಗಾಗಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಬಳ್ಳಾರಿ ಸಂಸದ ಇ. ತುಕಾರಾಂ ಸ್ಥಳೀಯ ನಿವಾಸಿಗಳ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವ ಘಟನೆ ನಡೆದಿದೆ. ಕಳಪೆ ಕಾಮಗಾರಿಗೆ ಬಗ್ಗೆ ಸಂಸದರನ್ನು ಸ್ಥಳೀಯರು ಪ್ರಶ್ನೆ ಮಾಡಿದ ವೇಳೆ ತುಕಾರಾಂ ಗರಂ ಆಗಿದ್ದು, ತುಕಾರಾಂ ನಿಂದನೆ…

Read More