ದೇವನಹಳ್ಳಿ: 15 ದಿನದಿಂದ ವಿದ್ಯುತ್ ಇಲ್ಲದೆ ಜನ ಹೈರಾಣು; ಬೆಸ್ಕಾಂ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು – Kannada News | Devanahalli: 15 Days Power Outage Ignites Villager Protest Against BESCOM Negligence
ಹಾಳಾದ ಟ್ರಾನ್ಸ್ಫಾರ್ಮರ್, ಕತ್ತಲಲ್ಲಿ ಅಡುಗೆ ಮಾಡುತ್ತಿರುವ ಮಹಿಳೆ ದೇವನಹಳ್ಳಿ, ಫೆಬ್ರವರಿ 19: ಅದು ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರ ಸ್ವಕ್ಷೇತ್ರದ ಕುಗ್ರಾಮ. ದಲಿತರೇ ವಾಸಿಸುವ ಆ ಗ್ರಾಮದಲ್ಲಿ ಕಳೆದ 15 ದಿನಗಳ ಹಿಂದೆ ಟ್ರಾನ್ಸ್ಫಾರ್ಮರ್ ಸುಟ್ಟು ಹೋಗಿದೆ. ಹೀಗಾಗಿ 15 ದಿನಗಳಿಂದ ವಿದ್ಯುತ್ (power outage) ಇಲ್ಲಿದೆ ಕತ್ತಲಲ್ಲಿ ಜೀವನ ಕಳೆಯುವಂತಾಗಿದೆ. ಬೆಸ್ಕಾಂ (BESCOM) ಕಚೇರಿಗೆ ಅಲೆದು ಅಲೆದು ಸುಸ್ತಾದ ಗ್ರಾಮಸ್ಥರು ಇದೀಗ ಕರೆಂಟ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಬೆಸ್ಕಾಂ ವಿರುದ್ಧ…