ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph). ಅದು ಕೂಡ ಕ್ಯಾಚ್ ಹಿಡಿದು, ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ.
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ (Shamar Joseph). ಅದು ಕೂಡ ಕ್ಯಾಚ್ ಹಿಡಿದು, ವಿಕೆಟ್ ಪಡೆಯುವ ಮೂಲಕ ಎಂಬುದು ವಿಶೇಷ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕು ಕಾನೂನು ಸೇವಾ ಸಮಿತಿಯು ಅಧಿಕೃತ ಅಧಿಸೂಚನೆಯ ಮೂಲಕ ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿಡಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21ರ ಮೊದಲು ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು:
ಸದಸ್ಯ ಕಾರ್ಯದರ್ಶಿಗಳು,
ತಾಲೂಕು ಕಾನೂನು ಸೇವೆಗಳ ಸಮಿತಿ,
ನ್ಯಾಯಾಲಯ ಸಂಕೀರ್ಣ, ಲಕ್ಷ್ಮೇಶ್ವರ,
ಗದಗ ಜಿಲ್ಲೆ – 582116.
ಇದನ್ನೂ ಓದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ
ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇತ್ತೀಚಿನ ದಿನಗಳಲ್ಲಿ, ಯುವಜನರಲ್ಲಿ ಅಧಿಕ ರಕ್ತದೊತ್ತಡದ (High Blood Pressure) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ರಕ್ತನಾಳಗಳಲ್ಲಿನ ರಕ್ತದೊತ್ತಡ ಸಾಮಾನ್ಯಕ್ಕಿಂತ ಹೆಚ್ಚಾಗುವ ಸ್ಥಿತಿ ಇದಾಗಿದ್ದು. ಇದು ನಿರಂತರವಾಗಿ 140/90 ಅಥವಾ ಅದಕ್ಕಿಂತ ಹೆಚ್ಚಾಗಿದ್ದರೆ, ಅದನ್ನು ಅಧಿಕ ರಕ್ತದೊತ್ತಡ ಎಂದು ಕರೆಯಲಾಗುತ್ತದೆ. ಆರಂಭದಲ್ಲಿ, ಇದರ ಸ್ಪಷ್ಟ ಲಕ್ಷಣಗಳು ಕಂಡುಬರುವುದಿಲ್ಲ. ಕೆಲವರಲ್ಲಿ ತಲೆನೋವು, ತಲೆತಿರುಗುವಿಕೆ, ಆಯಾಸ, ಉಸಿರಾಟದ ತೊಂದರೆ, ಎದೆಯಲ್ಲಿ ಭಾರ ಅಥವಾ ತ್ವರಿತ ಹೃದಯ ಬಡಿತದಂತಹ ಲಕ್ಷಣ ಕಂಡುಬರಬಹುದು. ಮೂಗಿನಿಂದ ರಕ್ತಸ್ರಾವ ಅಥವಾ ದೃಷ್ಟಿ ಮಂದವಾಗುವುದು ಸಹ ಈ ಆರೋಗ್ಯ ಸಮಸ್ಯೆಯ ಮನ್ಸೂಚನೆ ಆಗಿರಬಹುದು. ಇದನ್ನು ಸಮಯಕ್ಕೆ ಸರಿಯಾಗಿ ಗುರುತಿಸದಿದ್ದರೆ, ಅದು ಹೃದಯ, ಮೂತ್ರಪಿಂಡ ಮತ್ತು ಮೆದುಳಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ, ಯುವಜನತೆ ಈ ಬಗ್ಗೆ ಜಾಗೃತರಾಗಿರುವುದು ಬಹಳ ಮುಖ್ಯವಾಗುತ್ತದೆ. ಅದರ ಜೊತೆಗೆ ಅಧಿಕ ರಕ್ತದೊತ್ತಡದ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಾರಣವೇನು, ಇದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ.
ಲೇಡಿ ಹಾರ್ಡಿಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಮತ್ತು ಮುಖ್ಯಸ್ಥರಾದ ಡಾ. ಎಲ್.ಎಚ್. ಘೋಟೇಕರ್ ಹೇಳುವ ಪ್ರಕಾರ, ಯುವಜನತೆಯಲ್ಲಿ ಅಧಿಕ ರಕ್ತದೊತ್ತಡ ಹೆಚ್ಚಳಕ್ಕೆ ಹಲವಾರು ಕಾರಣಗಳಿದ್ದು, ಆಧುನಿಕ ಜೀವನಶೈಲಿ ಕೂಡ ಕಾರಣವೆಂದು ಪರಿಗಣಿಸಲಾಗುತ್ತದೆ. ವೇಗದ ಜೀವನದಲ್ಲಿ, ಮಾನಸಿಕ ಒತ್ತಡ ಗಮನಾರ್ಹವಾಗಿ ಹೆಚ್ಚಾಗಿದೆ. ತಡರಾತ್ರಿ ಎಚ್ಚರವಾಗಿರುವುದು, ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ಗಳ ಅತಿಯಾದ ಬಳಕೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಿಯಮಿತ ದಿನಚರಿಯು ದೇಹದ ಸಮತೋಲನವನ್ನು ಅಡ್ಡಿಪಡಿಸುತ್ತದೆ.
ಫಾಸ್ಟ್ ಫುಡ್ ಮತ್ತು ಹೆಚ್ಚಿನ ಉಪ್ಪಿರುವ ಆಹಾರಗಳ ಸೇವನೆ ಕೂಡ ರಕ್ತದೊತ್ತಡದ ಮೇಲೆ ಪರಿಣಾಮ ಬೀರುತ್ತದೆ. ಇದರ ಜೊತೆಗೆ, ಧೂಮಪಾನ ಮತ್ತು ಮದ್ಯಪಾನದಂತಹ ಅಭ್ಯಾಸಗಳು ಈ ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಅಷ್ಟೇಅಲ್ಲ, ಬೊಜ್ಜು ಮತ್ತು ತೂಕ ಹೆಚ್ಚಳ ಕೂಡ ಒಂದು ಪ್ರಮುಖ ಸಮಸ್ಯೆಯಾಗಿದೆ, ಅಲ್ಲದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡದಿರುವುದು ಸಹ ಒಂದು ಕಾರಣವಾಗಿದೆ.
ಇದನ್ನೂ ಓದಿ: ಹೈಬಿಪಿ ಇರುವವರಿಗೆ ತಲೆಯ ಹಿಂಭಾಗದಲ್ಲಿ ನೋವು ಕಂಡುಬರುತ್ತದೆಯೇ?
ಸಾಮಾನ್ಯವಾಗಿ ಅಧಿಕ ರಕ್ತದೊತ್ತಡವನ್ನು ತಡೆಗಟ್ಟಲು, ಆರೋಗ್ಯಕರ ದಿನಚರಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ವ್ಯಾಯಾಮ ಮಾಡುವುದು, ಆಹಾರದಲ್ಲಿ ಉಪ್ಪಿನ ಪ್ರಮಾಣವನ್ನು ಮಿತಗೊಳಿಸುವುದು, ತಾಜಾ ಹಣ್ಣು, ತರಕಾರಿಗಳ ಸೇವನೆ ಮಾಡುವುದು, ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು, ಸರಿಯಾಗಿ ನಿದ್ರೆ ಮಾಡುವುದು, ಒತ್ತಡವನ್ನು ಕಡಿಮೆ ಮಾಡಲು ಯೋಗ ಮತ್ತು ಧ್ಯಾನವನ್ನು ಅಭ್ಯಾಸ ಮಾಡುವುದು ಇವೆಲ್ಲಾ ಅಧಿಕ ರಕ್ತದೊತ್ತಡವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ಆಗಾಗ ತಲೆನೋವು, ತಲೆತಿರುಗುವಿಕೆ, ಉಸಿರಾಟದ ತೊಂದರೆ, ಎದೆ ನೋವು ಅಥವಾ ದೃಷ್ಟಿ ಮಂದವಾಗುವಂತಹ ಲಕ್ಷಣಗಳನ್ನು ಕಂಡುಬಂದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಕುಟುಂಬದಲ್ಲಿ ಅಧಿಕ ರಕ್ತದೊತ್ತಡ ಅಥವಾ ಹೃದ್ರೋಗದ ಇತಿಹಾಸವಿದ್ದರೆ, ನಿಯಮಿತ ತಪಾಸಣೆ ಅಗತ್ಯ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹುಬ್ಬಳ್ಳಿ, (ಫೆಬ್ರವರಿ 19): ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ (Hubballi) ಬೀದಿ ಕಾಮಣ್ಣರ ಹಾವಳಿ ಹೆಚ್ಚಾಗಿದೆ. ಸ್ಕೂಟಿಯಲ್ಲಿ ಹೋಗ್ತಿದ್ದ ಯುವತಿಯರಿಗೆ ಇಬ್ಬರು ಬೀದಿ ಕಾಮಣ್ಣರು ಪ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ಯುವತಿಯರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಬಳಿಕ ದುರುಳರ ಅಸಭ್ಯ ವರ್ತನೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.ಸದ್ಯ ಈ ವಿಡಿಯೋvವನ್ನು ಗಮನಿಸಿದ ಹುಬ್ಬಳ್ಳಿ ಗೋಕುಲ ಠಾಣೆ ಪೊಲೀಸರು, ಯುವತಿಯರು ಯಾವುದೇ ದೂರು ನೀಡದೇ ಇದ್ದರೂ ಸಹ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಬಳಿಕ ಸ್ಕೂಟಿಯಲ್ಲಿನ ನಂಬರ್ ಪ್ಲೇಟ್ ನ್ನು ಪರಿಶೀಲಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ನಗರದ ಸಂದೇಶ್, ಸುರೇಶ ಎನ್ನುವರನ್ನು ಬಂಧಿಸಿದ್ದು, ಈ ಬಗ್ಗೆ ಹುಬ್ಬಳ್ಳಿ ಸಿಟಿ ಸ್ಪೆಷಲ್ ಬ್ರ್ಯಾಚ್ ಪಿಎಸ್ ಐ ರೂಪಾ ತಲೇವಾಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಪ್ಲೈಯಿಂಗ್ ಕಿಸ್ ನೀಡಿ ಅಸಭ್ಯವಾಗಿ ವರ್ತಿಸೋರನ್ನು ಬಂಧಿಸಿದ್ದೇವೆ. ಈ ರೀತಿವಾಗಿ ಮಹಿಳೆಯಯರು, ಮಕ್ಕಳ ಜೊತೆ ವರ್ತಿಸಿದ್ರೆ ಅವರ ವಿರುದ್ದ ಕಠೀಣ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಜಗತ್ತಿನ ಹಲವು ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ. ಅಷ್ಟೇ ಅಲ್ಲದೆ ವಿವಿಧ ಉದ್ಯಮಿಗಳು ಕೂಡ ಆಗಮಿಸಿದ್ದಾರೆ. ಗೂಗಲ್ ಸಿಇಒ ಸುಂದರ್ ಪಿಚ್ಚೈ ಕೂಡ ಎಐ ಶೃಂಗಸಭೆಗೆ ಆಗಮಿಸಿದ್ದು, ಈ ವೇಳೆ ದೆಹಲಿಯ ಭಾರತ್ ಮಂಟಪದಲ್ಲಿ ಹಾಕಲಾಗಿದ್ದ ‘ಭಾರತ್ GI’ ಕಾಫಿಯನ್ನು (Bharat GI Coffee) ಸವಿದಿದ್ದಾರೆ. ಇಲ್ಲಿ ಭಾರತದಲ್ಲಿ ಬೆಳೆಯಲಾಗುವ ಉತ್ಕೃಷ್ಟ ಗುಣಮಟ್ಟದ ಕಾಫಿ ಬೀಜಗಳಿಂದ ತಯಾರಾದ ಜಿಐ ಟ್ಯಾಗ್ ಇರುವ ಕಾಫಿ ವಿಧಗಳನ್ನು ಪ್ರದರ್ಶಿಸಲಾಗಿತ್ತು. ಗೂಗಲ್ ಸಿಇಒ ಸುಂದರ್ ಪಿಚೈ (Sundar Pichai) ಮಲಬಾರ್ ಕಾಫಿಯನ್ನು ಕುಡಿದು ಮನಸಾರೆ ಹೊಗಳಿದ್ದಾರೆ.
ಭಾರತ್ GI ಕಾಫಿಯನ್ನು ಸವಿದ ಸುಂದರ್ ಪಿಚ್ಚೈ ನಗುತ್ತಾ “ಮಲಬಾರ್ ಅರೇಬಿಕಾ ಕಾಫಿ ನನಗೆ ಬಹಳ ಇಷ್ಟವಾಗಿದೆ” ಎಂದು ಹೇಳಿದ್ದಾರೆ. ಅವರು ಬ್ಯಾರಿಸ್ಟಾಗಳೊಂದಿಗೆ ಮಾತನಾಡುತ್ತಾ ವಿವಿಧ ಪ್ರಭೇದಗಳ ಸ್ಯಾಂಪಲ್ ನೋಡಿದ್ದಾರೆ. ಭಾರತೀಯ ಜಿಐ ಟ್ಯಾಗ್ ಹೊಂದಿರುವ ಅರಕುವಿನಿಂದ ಕೂರ್ಗ್ವರೆಗೆ ಭಾರತದ ಪ್ರೀಮಿಯಂ GI ಟ್ಯಾಗ್ ಹೊಂದಿದ ಕಾಫಿಗಳನ್ನು ಇಲ್ಲಿ ಪ್ರದರ್ಶಿಸಲಾಗಿತ್ತು.
When @SundarPichai drops by for a sip, you know it’s truly worth it! ☕
The world is raising a cup to Bharat GI Coffee at #IndiaAIImpactSummit2026.
📍 Bharat GI Coffee Lounge, Bharat Mandapam (Hall 14, First Floor)
🗓️ 17–20 February pic.twitter.com/fMdgJocKU3— Piyush Goyal (@PiyushGoyal) February 19, 2026
ಇದನ್ನೂ ಓದಿ: AI Professional Courses: AI ಕೌಶಲ್ಯ ಹೆಚ್ಚಿಸಲು ಗೂಗಲ್ನಿಂದ ಹೊಸ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ
ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಉತ್ತೇಜಿಸುವ ಭಾರತ್ GI ಕಾಫಿ ಭಾರತದ ವಾಣಿಜ್ಯ ಸಚಿವಾಲಯದ ರಾಷ್ಟ್ರೀಯ ಬ್ರ್ಯಾಂಡ್ ಆಗಿದೆ. ಕರ್ನಾಟಕದ ಚಿಕ್ಕಮಗಳೂರು ಅರೇಬಿಕಾ ಕಾಫಿ, ಬಾಬಾಬುಡನ್ಗಿರಿ ಅರೇಬಿಕಾ ಕಾಫಿ, ಕೂರ್ಗ್ ಅರೇಬಿಕಾ ಕಾಫಿ, ಕೇರಳದ ವಯನಾಡ್ ರೋಬಸ್ಟಾ ಕಾಫಿ, ಆಂಧ್ರಪ್ರದೇಶದ ಅರಕು ಕಣಿವೆ ಅರೇಬಿಕಾ ಕಾಫಿ ಕೂಡ ಜಿಐ ಟ್ಯಾಗ್ ಹೊಂದಿದೆ.
Google and Alphabet CEO, Sundar Pichai visited the Bharat GI Coffee Experience Centre, organized by the Department for Promotion of Industry and Internal Trade (DPIIT), during the India AI Impact Summit 2026.
Savoring Malabar Arabica, Mr. Pichai interacted with baristas and… pic.twitter.com/MI4S6glH0h
— Coffee Board (@CoffeeboardI) February 19, 2026
ಫೆಬ್ರವರಿ 16 ರಿಂದ 20ರವರೆಗೆ ನಡೆಯುತ್ತಿರುವ ಐದು ದಿನಗಳ ಎಐ ಶೃಂಗಸಭೆಯು ಜಾಗತಿಕ ಬೆಳವಣಿಗೆಗಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳುವುದರ ಮೇಲೆ ಕೇಂದ್ರೀಕರಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 5:43 pm, Thu, 19 February 26
ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ ತೃಪ್ತಿ ತಂದಿಲ್ಲ. 38 ತಿಂಗಳ ಹಿಂಬಾಕಿ ಹಣ ನೀಡಬೇಕೆಂದು ಪಟ್ಟಿ ಹಿಡಿದಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಕೆಎಸ್ಆರ್ಟಿಸಿ ಎಂಡಿ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ ಜತೆ ಚರ್ಚಿಸಿದರು. ಬಳಿಕ ಅಂತಿಮವಾಗಿ ಸಭೆ ಮಾಡಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದಾರೆ.
ಅಡುಗೆ ಮನೆಯಲ್ಲಿ ಹೆಚ್ಚು ಬಳಸಲ್ಪಡುವ ವಸ್ತು ಎಂದ್ರೆ ಅದು ಗ್ಯಾಸ್ ಸ್ಟೌವ್. ಪ್ರತಿನಿತ್ಯ ಅಡುಗೆ ಮಾಡುವ ಕಾರಣ ಹಾಲು, ಎಣ್ಣೆ ಪದಾರ್ಥಗಳು ಬಿದ್ದು, ಗ್ಯಾಸ್ ಸ್ಟೌವ್ ಮತ್ತು ಬರ್ನರ್ (gas burner) ಮೇಲೆ ಕಲೆಗಳಾಗುತ್ತವೆ. ಇದನ್ನು ಪ್ರತಿನಿತ್ಯ ಕ್ಲೀನ್ ಮಾಡಿಲ್ಲ ಅಂದ್ರೆ ಆ ಜಿಡ್ಡು ಕಲೆಗಳು ಹಾಗೆಯೇ ಉಳಿದು ಬಿಡುತ್ತವೆ. ಹಾಗಾಗಿ ಸಾಮಾನ್ಯವಾಗಿ ಎಲ್ಲರೂ ನಿತ್ಯ ಸ್ಟೌವ್ ಸ್ವಚ್ಛಗೊಳಿಸುತ್ತಾರೆ. ಆದ್ರೆ ಗ್ಯಾಸ್ ಸ್ಟೌವ್ ಬರ್ನರ್ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದೇ ಇಲ್ಲ. ಹೀಗೆ ಅದನ್ನು ಕ್ಲೀನ್ ಮಾಡದಿದ್ದರೆ ಕಲೆ ಕೊಳೆಗಳು ಹಾಗೆಯೇ ಉಳಿಯುವುದು ಮಾತ್ರವಲ್ಲದೆ ಗ್ಯಾಸ್ ಸರಿಯಾಗಿ ಉರಿಯುವುದು ಕೂಡ ಇಲ್ಲ. ಆದ್ದರಿಂದ, ಬರ್ನರ್ ಸ್ವಚ್ಛಗೊಳಿಸುವುದು ಬಹಳ ಮುಖ್ಯ. ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಗ್ಯಾಸ್ ಬರ್ನರ್ ಅನ್ನು ಸುಲಭವಾಗಿ ಕ್ಲೀನ್ ಮಾಡಬಹುದು.
ಅಡಿಗೆ ಸೋಡಾ ಮತ್ತು ನಿಂಬೆ ರಸ: ಗ್ಯಾಸ್ ಬರ್ನರ್ ಸ್ವಚ್ಛಗೊಳಿಸಲು ನೀವು ಅಡಿಗೆ ಸೋಡಾ ಮತ್ತು ನಿಂಬೆ ರಸವನ್ನು ಬಳಸಬಹುದು. ಇದನ್ನು ಮಾಡಲು, ಒಂದು ಪಾತ್ರೆಗೆ ಉಗುರು ಬೆಚ್ಚಗಿನ ನೀರಿನಿಂದ ತುಂಬಿಸಿ, 2-3 ಚಮಚ ಅಡಿಗೆ ಸೋಡಾ ಸೇರಿಸಿ, ಮತ್ತು ಒಂದು ನಿಂಬೆಹಣ್ಣಿನ ರಸವನ್ನು ಹಿಂಡಿ. ಬರ್ನರ್ ಅನ್ನು ಈ ದ್ರಾವಣದಲ್ಲಿ 30 ನಿಮಿಷದಿಂದ ಒಂದು ಗಂಟೆಯವರೆಗೆ ನೆನೆಸಿಡಿ. ಬಳಿಕ ಹಳೆಯ ಟೂತ್ ಬ್ರಷ್ ಅಥವಾ ಸ್ಕ್ರಬ್ಬರ್ ಬಳಸಿ ಬರ್ನರ್ ಅನ್ನು ಸ್ವಚ್ಛಗೊಳಿಸಿ.
ವಿನೆಗರ್ : ಬರ್ನರ್ಗಳಲ್ಲಿ ಅಂಟಿರುವ ಗ್ರೀಸ್ ಮತ್ತು ಕಲೆಗಳನ್ನು ಹೋಗಲಾಡಿಸಲು ವಿನೆಗರ್ ಸಹ ತುಂಬಾ ಸಹಕಾರಿ. ಇದಕ್ಕಾಗಿ ಸ್ಪ್ರೇ ಬಾಟಲಿಯಲ್ಲಿ ಬಿಳಿ ವಿನೆಗರ್ ಮತ್ತು ನೀರನ್ನು ಸಮಾನ ಭಾಗಗಳಲ್ಲಿ ಮಿಶ್ರಣ ಮಾಡಿ. ಈ ದ್ರಾವಣವನ್ನು ಬರ್ನರ್ಗಳ ಮೇಲೆ ಸಿಂಪಡಿಸಿ. ಕನಿಷ್ಠ 15-20 ನಿಮಿಷಗಳ ಕಾಲ ಅದನ್ನು ಬಿಡಿ ಮತ್ತು ನಂತರ ಸ್ಕ್ರಬ್ಬರ್ನಿಂದ ಸ್ವಚ್ಛಗೊಳಿಸಿ.
ಡಿಶ್ವಾಶ್ ಸೋಪ್ ಮತ್ತು ಬೆಚ್ಚಗಿನ ನೀರು: ಇದನ್ನು ಮಾಡಲು, ಒಂದು ಪಾತ್ರೆಯಲ್ಲಿ ಬೆಚ್ಚಗಿನ ನೀರನ್ನು ತುಂಬಿಸಿ ಅದಕ್ಕೆ ಸ್ವಲ್ಪ ಡಿಶ್ ವಾಶ್ ಸೋಪ್ ಸೇರಿಸಿ. ನಂತರ, ಬರ್ನರ್ ಅನ್ನು ಈ ದ್ರಾವಣದಲ್ಲಿ ಅದ್ದಿ 30 ನಿಮಿಷಗಳ ಕಾಲ ಬಿಡಿ. ಈಗ, ಅದನ್ನು ಸ್ಕ್ರಬ್ಬರ್ನಿಂದ ಸ್ವಚ್ಛಗೊಳಿಸಿ. ಇದರಿಂದ ಬರ್ನರ್ ಹೊಸದರಂತೆ ಹೊಳೆಯುತ್ತದೆ.
ಇದನ್ನೂ ಓದಿ: ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಈ ಸಿಂಪಲ್ ಮನೆಮದ್ದುಗಳನ್ನು ಪ್ರಯತ್ನಿಸಿ
ವಿನೆಗರ್ ಮತ್ತು ಬೇಕಿಂಗ್ ಸೋಡಾ : ಈ ಪರಿಹಾರವು ಭಾರೀ ಕೊಳೆ ಮತ್ತು ಮಸಿ ಕಲೆಗಳನ್ನು ಹೋಗಲಾಡಿಸಲು ಉತ್ತಮವಾಗಿದೆ. ಇದಕ್ಕಾಗಿ ಒಂದು ಪಾತ್ರೆಗೆ ಸಮಾನ ಪ್ರಮಾಣದಲ್ಲಿ ನೀರು ಮತ್ತು ವಿನೆಗರ್ ಸೇರಿಸಿ. ಅದರಲ್ಲಿ ಬರ್ನರ್ ಹಾಕಿ ರಾತ್ರಿಯಿಡೀ ಅಥವಾ ಕನಿಷ್ಠ 2-3 ಗಂಟೆಗಳ ಕಾಲ ನೆನೆಸಿಡಿ. ಬಳಿಕ ಅದರ ಮೇಲೆ ಸ್ವಲ್ಪ ಅಡಿಗೆ ಸೋಡಾ ಸಿಂಪಡಿಸಿ ಮತ್ತು ಹಳೆಯ ಟೂತ್ ಬ್ರಷ್ನಿಂದ ಸ್ಕ್ರಬ್ ಮಾಡಿ. ಇದು ಈಸಿಯಾಗಿ ಕಲೆಗಳನ್ನು ನಿವಾರಿಸುತ್ತವೆ.
ನಿಂಬೆ ಮತ್ತು ಉಪ್ಪು: ಬರ್ನರ್ ಮೇಲೆ ಗ್ರೀಸ್ ಕಲೆಗಳಿದ್ದರೆ, ನಿಂಬೆಹಣ್ಣನ್ನು ಅರ್ಧದಷ್ಟು ಕತ್ತರಿಸಿ ಅದರ ಮೇಲೆ ಸ್ವಲ್ಪ ಉಪ್ಪು ಸಿಂಪಡಿಸಿ. ಅದನ್ನು ಬರ್ನರ್ ಮೇಲೆ ಉಜ್ಜಿಕೊಳ್ಳಿ. ಇದು ಕಲೆಗಳನ್ನು ನಿವಾರಿಸಿ, ಬರ್ನರ್ ಹೊಸದರಂತೆ ಹೊಳೆಯುವಂತೆ ಮಾಡುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
T20 World Cup 2026: ಟಿ20 ವಿಶ್ವಕಪ್ನ ಸೂಪರ್-8 ಸುತ್ತಿನ 3ನೇ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ (ಫೆ.22) ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಮರಿಯಾನಾ ಮೊರ್ಕೆಲ್ ಯಾರಿಗೆ ಸಪೋರ್ಟ್ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ. ಇಂತಹದೊಂದು ಗೊಂದಲಕ್ಕೆ ಕಾರಣ ಅವರ ಇಬ್ಬರು ಮಕ್ಕಳು ಎರಡು ತಂಡಗಳ ಜೊತೆ ಕಾಣಿಸಿಕೊಂಡಿರುವುದು.
ಹೌದು, ಸೌತ್ ಆಫ್ರಿಕಾ ತಂಡದ ಮಾಜಿ ಆಟಗಾರರಾದ ಅಲ್ಬಿ ಮೊರ್ಕೆಲ್ ಮತ್ತು ಮೋರ್ನೆ ಮೊರ್ಕೆಲ್ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳ ಕೋಚಿಂಗ್ ಸಿಬ್ಬಂದಿಯಲ್ಲಿದ್ದಾರೆ. ಅಣ್ಣ ಅಲ್ಬಿ ಮೊರ್ಕೆಲ್ ಆಫ್ರಿಕಾ ತಂಡದ ಸ್ಪೆಷಲಿಸ್ಟ್ ಕೋಚಿಂಗ್ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತ್ತ ತಮ್ಮ ಮೋರ್ನೆ ಮೊರ್ಕೆಲ್ ಟೀಮ್ ಇಂಡಿಯಾದ ಬೌಲಿಂಗ್ ಕೋಚ್.
ಹೀಗಾಗಿಯೇ ತಾಯಿ ಮರಿಯಾನಾ ಮಾರ್ಕೆಲ್ ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಪಂದ್ಯದಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಗೊಂದಲದಲ್ಲಿದ್ದಾರೆ. ಈ ವಿಚಾರವನ್ನು ಖುದ್ದು ಮೋರ್ನೆ ಮೊರ್ಕಲೆ್ ಬಹಿರಂಗಪಡಿಸಿದ್ದಾರೆ.
ತಾಯಿಯು ಅಣ್ಣನಿಗೆ ಸಪೋರ್ಟ್ ಮಾಡ್ಬೇಕಾ ಇಲ್ಲ ನನಗೆ ಸಪೋರ್ಟ್ ಮಾಡಬೇಕಾ ಎಂಬ ಗೊಂದಲದಲ್ಲಿ ಸಿಲುಕಿದ್ದಾರೆ. ಇಲ್ಲಿ ನಾವು ಪಂದ್ಯವನ್ನು ಗೆಲ್ಲುವ ಬಗ್ಗೆ ಯೋಚಿಸುತ್ತಿದ್ದರೆ, ಅಲ್ಲಿ ನಮ್ಮ ತಾಯಿ ಯಾರನ್ನು ಬೆಂಬಲಿಸಬೇಕು ಎಂದು ನಮಗಿಂತ ಹೆಚ್ಚು ಚಿಂತಿತರಾಗಿದ್ದಾರೆ ಮೋರ್ನೆ ಮೊರ್ಕೆಲ್ ತಿಳಿಸಿದ್ದಾರೆ.
ಇತ್ತ ಟೀಮ್ ಇಂಡಿಯಾ ಗೆದ್ದರೆ ಮೋರ್ನೆ ಮೊರ್ಕೆಲ್ ಖುಷಿಯಾದರೆ, ಅತ್ತ ಸೌತ್ ಆಫ್ರಿಕಾ ಸೋತರೆ ಅಲ್ಬಿ ಮೊರ್ಕೆಲ್ ದುಃಖಕ್ಕೀಡಾಗಲಿದ್ದಾರೆ. ಹೀಗಾಗಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಪಂದ್ಯವು ಇದೀಗ ಸಹೋದರರ ಸವಾಲ್ ಆಗಿ ಮಾರ್ಪಟ್ಟಿದೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಇದನ್ನೂ ಓದಿ: ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು!
ಸೌತ್ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಕ್ವೆನಾ ಮಫಕಾ, ಲುಂಗಿ ಎನ್ಗಿಡಿ, ಜೇಸನ್ ಸ್ಮಿತ್, ಜಾರ್ಜ್ ಲಿಂಡೆ, ಕಾರ್ಬಿನ್ ಬಾಷ್, ಅನ್ರಿಕ್ ನೋಕಿಯ.
Published On – 5:08 pm, Thu, 19 February 26
ಬೆಂಗಳೂರು, ಫೆಬ್ರವರಿ 19: ಕೋಮುವಾದ ಕಾರಣಕ್ಕೆ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಚಾರವಾಗಿ ಉದ್ಯಮಿ ಮೋಹನ್ ದಾಸ್ ಪೈ ಕೂಡ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ ಮೋಹನ್ ದಾಸ್ ಪೈ, ಇದು ಅತ್ಯಂತ ನಾಚಿಕೇಡಿನ ಹಾಗೂ ಅನಗತ್ಯ ಎಂದು ಹೇಳಿದ್ದಾರೆ. ಇನ್ನು ಇತ್ತೀಚೆಗೆ ಐಟಿ ಸಚಿವರು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಭಾರೀ ಪ್ರಮಾಣದ ಹೂಡಿಕೆಗಳು ಆಗುತ್ತಿರುವುದು, ಉದ್ಯೋಗಗಳು ಸೃಷ್ಟಿಯಾಗುತ್ತಿರುವುದು ಮತ್ತು ಅನೇಕರು ಮಂಗಳೂರಿನ ಅಭಿವೃದ್ಧಿಗಾಗಿ ಬಹಳ ಕಷ್ಟಪಡುತ್ತಿರುವುದನ್ನು ಅವರು ನೋಡಿದ್ದರು. ಅಂತಹ ಸಂದರ್ಭದಲ್ಲಿ ಅವರು ಈ ರೀತಿಯ ಹೇಳಿಕೆ ನೀಡಿರುವುದು ಅತ್ಯಂತ ನಾಚಿಕೇಡು ಮತ್ತು ಅನಗತ್ಯ ಎಂದು ವಾಗ್ದಾಳಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ನವದೆಹಲಿ, ಫೆಬ್ರವರಿ 19: ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ (ಶುಕ್ರವಾರ) 15 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 1,954 ಗಡಿ ಗ್ರಾಮಗಳನ್ನು ಒಳಗೊಂಡ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ) ಎರಡನೇ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಅಸ್ಸಾಂನಲ್ಲಿ 6,839 ಕೋಟಿ ರೂ. ಹೂಡಿಕೆಯೊಂದಿಗೆ ಎರಡನೇ ಹಂತದ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮಕ್ಕೆ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದಾರೆ.
ಅಸ್ಸಾಂನಲ್ಲಿ ಶುಕ್ರವಾರ ಅಮಿತ್ ಶಾ ವೈಬ್ರೆಂಟ್ ವಿಲೇಜಸ್ ಕಾರ್ಯಕ್ರಮದ (ವಿವಿಪಿ-II) ಎರಡನೇ ಹಂತವನ್ನು ಅಸ್ಸಾಂನ ಕಚಾರ್ ಜಿಲ್ಲೆಯ ನಾಥನ್ಪುರ ಗ್ರಾಮದಲ್ಲಿ ಉದ್ಘಾಟಿಸಲಿದ್ದಾರೆ. ಇದು ಭಾರತದ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. 2028-29ರ ಹಣಕಾಸು ವರ್ಷದವರೆಗೆ 6,839 ಕೋಟಿ ರೂ.ಗಳ ಆರ್ಥಿಕ ವೆಚ್ಚದೊಂದಿಗೆ ವಿವಿಪಿ-II ಅನ್ನು ಕೇಂದ್ರ ವಲಯದ ಯೋಜನೆಯಾಗಿ ಜಾರಿಗೆ ತರಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ತಿಳಿಸಿದೆ.
ಇದನ್ನೂ ಓದಿ: ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ
ವಿವಿಪಿ ಕಾರ್ಯಕ್ರಮವನ್ನು ಫೆಬ್ರವರಿ 15, 2023ರಂದು ಕೇಂದ್ರ ಸರ್ಕಾರ ಅನುಮೋದಿಸಿತು. ಇದು ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ, ಸಿಕ್ಕಿಂ, ಉತ್ತರಾಖಂಡ ಮತ್ತು ಲಡಾಖ್ ರಾಜ್ಯಗಳ 19 ಜಿಲ್ಲೆಗಳಲ್ಲಿ ಉತ್ತರ ಗಡಿಗೆ ಹೊಂದಿಕೊಂಡಿರುವ 46 ಬ್ಲಾಕ್ಗಳಲ್ಲಿ 662 ಆಯ್ದ ಹಳ್ಳಿಗಳನ್ನು ಒಳಗೊಂಡಿದೆ.
ಈ ಕಾರ್ಯಕ್ರಮವು 15 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಗಡಿ ಗ್ರಾಮಗಳನ್ನು ಒಳಗೊಳ್ಳಲಿದೆ. ಈ ಕಾರ್ಯಕ್ರಮವು ಅಂತಾರಾಷ್ಟ್ರೀಯ ಗಡಿಗಳಲ್ಲಿ ಇರುವ ಹಳ್ಳಿಗಳ ಸ್ಯಾಚುರೇಶನ್ ಆಧಾರಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾದ ಸಮಗ್ರ ಉಪಕ್ರಮವಾಗಿದೆ. ಇದು ಅಗತ್ಯ ಮೂಲಸೌಕರ್ಯಗಳನ್ನು ಸುಧಾರಿಸುವುದು, ಆರೋಗ್ಯ ರಕ್ಷಣೆ, ಶಿಕ್ಷಣ, ರಸ್ತೆ ಸಂಪರ್ಕ ಮತ್ತು ದೂರಸಂಪರ್ಕಕ್ಕೆ ಪ್ರವೇಶವನ್ನು ಹೆಚ್ಚಿಸುವುದು ಮತ್ತು ಸ್ಥಳೀಯ ನಿವಾಸಿಗಳಿಗೆ ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದೆ.
ವಿಕಸಿತ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿ ಸುರಕ್ಷಿತ, ಸ್ಥಿತಿಸ್ಥಾಪಕ ಮತ್ತು ಸಮೃದ್ಧ ಗಡಿ ಸಮುದಾಯಗಳನ್ನು ಸೃಷ್ಟಿಸುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ನಿರ್ಮಾಣಗೊಳ್ಳಲಿದೆ ಅವಳಿ ಕೊಳವೆ ಸುರಂಗ, ವೈಶಿಷ್ಟ್ಯವೇನು?
ವಿವಿಪಿ-I ಅಡಿಯಲ್ಲಿ 3,431 ಕೋಟಿ ರೂ. ವೆಚ್ಚದಲ್ಲಿ 2,558 ಯೋಜನೆಗಳನ್ನು ಗೃಹ ಸಚಿವಾಲಯ ಮಂಜೂರು ಮಾಡಿದೆ. ಜಾಗೃತಿ ಅಭಿಯಾನಗಳು, ಆರೋಗ್ಯ ಮತ್ತು ಪಶುವೈದ್ಯಕೀಯ ಶಿಬಿರಗಳು, ಜಾತ್ರೆಗಳು ಮತ್ತು ಉತ್ಸವಗಳು ಮತ್ತು ಪ್ರವಾಸೋದ್ಯಮದ ಪ್ರಚಾರ ಸೇರಿದಂತೆ 8,500ಕ್ಕೂ ಹೆಚ್ಚು ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ.
ಏಪ್ರಿಲ್ 2, 2025ರಂದು ಕೇಂದ್ರ ಸರ್ಕಾರವು ಎರಡನೇ ಹಂತಕ್ಕೆ ಅನುಮೋದನೆ ನೀಡಿತು. ಇದರಲ್ಲಿ 15 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಅಂತಾರಾಷ್ಟ್ರೀಯ ಭೂ ಗಡಿಗಳಿಗೆ ಹೊಂದಿಕೊಂಡಿರುವ 1,954 ಗ್ರಾಮಗಳನ್ನು ಸಮಗ್ರ ಅಭಿವೃದ್ಧಿಗಾಗಿ ಗುರುತಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ