ಜಸ್ಟ್​​ ಹತ್ತೇ ನಿಮಿಷ ಲೇಟ್ ಆಗಿದ್ದಕ್ಕೆ​ ನೀಟ್ ಎಕ್ಸಾಂ ಬರೆಯಲು ನಿರಾಕರಣೆ: ಕಣ್ಣೀರಿಟ್ಟ ವಿದ್ಯಾರ್ಥಿನಿಯರು – Kannada News | Students Denied NEET Entry for Arriving 10 Minutes Late, Left in Tears

ಕಣ್ಣೀರು ಹಾಕಿದ ವಿದ್ಯಾರ್ಥಿನಿImage Credit source: tv9 kannada

ಬೆಂಗಳೂರು, ಮೇ 03: ನೀಟ್ (NEET) ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಕೆಲವೇ ನಿಮಿಷ ತಡವಾಗಿ ಆಗಮಿಸಿದ ಇಬ್ಬರು ವಿದ್ಯಾರ್ಥಿನಿಯರಿಗೆ (Students) ಪ್ರವೇಶ ನಿರಾಕರಿಸಿದ ಘಟನೆ ಬೆಂಗಳೂರಿನ ಎರಡು ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. 10 ನಿಮಿಷ ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಬ್ಬಂದಿ ನಿರಾಕರಿಸಿದ್ದಾರೆ. ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ.

ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜ್​ ಮತ್ತು ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನ ಎಕ್ಸಾಂ ಸೆಂಟರ್‌ನಲ್ಲಿ ಘಟನೆ ಕಂಡುಬಂದಿವೆ. ಮಧ್ಯಾಹ್ನ 2 ಗಂಟೆಗೆ ನೀಟ್ ಎಕ್ಸಾಂ ಆರಂಭವಾಗಿದೆ. ಮಧ್ಯಾಹ್ನ 1.30ರವರೆಗೆ ಎಕ್ಸಾಂ ಸೆಂಟರ್‌ನ ಗೇಟ್‌ ಓಪನ್​ ಮಾಡಲಾಗಿತ್ತು.

ಇದನ್ನೂ ಓದಿ: NEET UG 2026: ನೀಟ್ ಯುಜಿ ಪರೀಕ್ಷಾ ದಿನದ ಡ್ರೆಸ್ ಕೋಡ್ ಮತ್ತು ಪ್ರಮುಖ ಮಾರ್ಗಸೂಚಿ ಪ್ರಕಟ!

ಯಲಹಂಕದ ಪ್ರಥಮ ದರ್ಜೆ ಕಾಲೇಜಿಗೆ ನೀಟ್ ಎಕ್ಸಾಂ ಬರೆಯಲು ಓರ್ವ ವಿದ್ಯಾರ್ಥಿನಿ ಆಗಮಿಸಿದ್ದಾರೆ. ಆದರೆ ಅಷ್ಟರಲ್ಲಿ 10 ನಿಮಿಷ ತಡವಾಗಿದೆ. ಹೀಗಾಗಿ ಸಿಬ್ಬಂದಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದಾರೆ. ಇನ್ನು ಇದೇ ರೀತಿಯಾಗಿ ನಗರದ ಚಾಲುಕ್ಯ ಸರ್ಕಲ್ ಬಳಿಯ ಆರ್​ಸಿ ಕಾಲೇಜಿನಲ್ಲೂ ಘಟನೆ ನಡೆದಿದೆ.

ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು 

ಅತ್ತಿಬೆಲೆಯಿಂದ ಓರ್ವ ವಿದ್ಯಾರ್ಥಿನಿ ಎಕ್ಸಾಂ ಸೆಂಟರ್​ಗೆ ತಡವಾಗಿ ಆಗಮಿಸಿದ್ದಾಳೆ. ಟ್ರಾಫಿಕ್‌ಜಾಮ್‌ನಿಂದ 20 ನಿಮಿಷ ತಡವಾಗಿ ಬಂದಿದ್ದ ಯುವತಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಗೇಟ್ ಕ್ಲೋಸ್ ಆಗಿದೆ, ಪ್ರೊಸೀಜರ್ ಮುಗಿದಿದೆ. ಏನು ಮಾಡುವುದಕ್ಕೆ ಆಗಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯಲು ಆಗದ ಹಿನ್ನಲೆ ವಿದ್ಯಾರ್ಥಿನಿಯರು ಕಣ್ಣೀರು ಹಾಕಿದ್ದಾರೆ. ವರ್ಷವಿಡೀ ಕಷ್ಟಪಟ್ಟು ಓದಿದರೂ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲವಲ್ಲ ಎಂದು ವಿದ್ಯಾರ್ಥಿನಿಯರು ಮರುಗಿದರು.

ಇದನ್ನೂ ಓದಿ: UGC NET 2026: ಜೂನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಹತೆ, ಶುಲ್ಕ ಮತ್ತು ಪ್ರಮುಖ ದಿನಾಂಕಗಳ ಮಾಹಿತಿ ಇಲ್ಲಿದೆ

2026-27ನೇ ಸಾಲಿನ ವೈದ್ಯಕೀಯ ಪ್ರವೇಶಾತಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಇಂದು ನಡೆದಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆದಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಒಳಗೆ ಬರಬೇಕು. ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪ್ಯಾನ್‌ ಕಾರ್ಡ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸಹಿತ ಹಾಜರಾಗುವಂತೆ ತಿಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:45 pm, Sun, 3 May 26

Source link

ವಿಜಯ್ ರಾಘವೇಂದ್ರ ನಟನೆಯ ‘ಶ್ರೀಮತಿ ಸಿಂಧೂರ’ ಟೀಸರ್, ಹಾಡು ರಿಲೀಸ್ – Kannada News | Vijay Raghavendra starrer Srimathi Sindhura Kannada movie song and teaser released

ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಹೊಸ ಸಿನಿಮಾ ‘ಶ್ರೀಮತಿ ಸಿಂಧೂರ’ (Srimathi Sindhura) ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಆರ್ ಆ್ಯಂಡ್ ಆರ್ ಎಂಟರ್‌ಪ್ರೈಸಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್. ನಾಗೀರೆಡ್ಡಿ ಅವರು ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಆರ್. ಅನಂತರಾಜು ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ವಿಜಯ್ ರಾಘವೇಂದ್ರ (Vijay Raghavendra) ಜೊತೆ ನಾಯಕಿಯಾಗಿ ಪ್ರಿಯಾ ಹೆಗಡೆ ಅವರು ಅಭಿನಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಲಾಯಿತು.

ಡಿ.ಎನ್. ಲಿಯೋ ಮನೋಜ್, ಸಹ ನಿರ್ಮಾಪಕ ಡಿ.ಎನ್. ಜೈ ನಾರಾಯಾಣ್, ಗಣೇಶ್‌ ರಾವ್ ಕೇಸರಕರ್, ರೇಷ್ಮಾ ವಿ. ಗೌಡ, ಸಾಹಿತಿ ಕವಿರಾಜ್, ಪ್ರಸನ್ನ ಬಾಗೀನ, ಉಗ್ರಂ ರವಿ, ಮಾಸ್ಟರ್ ಮೌರ್ಯ, ನೃತ್ಯ ಸಂಯೋಜಕ ಫೈವ್‌ ಸ್ಟಾರ್ ಗಣೇಶ್, ಗಂಗಾಧರ್ ಅವರು ಟೀಸರ್ ಮತ್ತು ಹಾಡುಗಳ ಬಿಡುಗಡೆಯ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

‘ಶ್ರೀಮತಿ ಸಿಂಧೂರ’ ಸಿನಿಮಾದ ಹಾಡು:

ಈ ವೇಳೆ ನಟ ವಿಜಯ್ ರಾಘವೇಂದ್ರ ಅವರು ಮಾತನಾಡಿದರು. ‘ನಿರ್ಮಾಪಕರು ಹರಸಾಹಸ ಮಾಡಿದ್ದಾರೆ. ಮನೆಗೆ ಬಂದು ನಿರ್ದೇಶಕರು ಸಾರಾಂಶ ಹೇಳಿದಾಗ, ಸಿನಿಮಾ ನೋಡಿದಂತೆ ಭಾಸವಾಯಿತು. ಈಗಿನ ಸಿನಿಮಾಗಳ ಟ್ರೆಂಡ್ ಹೊಡಿ, ಬಡಿ, ಹಾರರ್, ಥ್ರಿಲ್ಲರ್ ಎಂದು ಹೇಳುತ್ತದೆ. ಇವುಗಳ ಮಧ್ಯೆ ಅಪ್ಪಟ ಕುಟುಂಬಸಮೇತ ಮನಸ್ಸಿಗೆ ಮುದ ನೀಡುವ ಸಿನಿಮಾ ಇದಾಗಿದೆ. ಇದನ್ನು ಯಾವುದೇ ವರ್ಗಕ್ಕೆ ಬೇಕಾದರೂ ಸೇರಿಸಬಹುದು. ಯಾವ ಕಾಲಕ್ಕಾದರೂ ಜನರು ಇಂತಹ ಚಿತ್ರವನ್ನು ಇಷ್ಟಪಡುತ್ತಾರೆ’ ಎಂದು ಅವರು ಹೇಳಿದರು.

Srimathi Sindhura Movie Team

ನಿರ್ಮಾಪಕರಿಗೆ ಈ ಸಿನಿಮಾ 20 ವರ್ಷಗಳ ಕನಸು. ‘ಸಿನಿಮಾ ಕಾರ್ಮಿಕರಿಗೆ ಏನಾದರೂ ಕೆಲಸ ಕೊಡಬೇಕೆಂಬ ಒಳ್ಳೆಯ ಉದ್ದೇಶದಿಂದ ಬಂಡವಾಳ ಹೂಡಿದ್ದೇನೆ. ಆಂಜನೇಯನ ಹಾಡು ಸಿನಿಮಾದ ಹೈಲೈಟ್. ಕೈಲಾಶ್‌ ಖೇರ್ ಅವರು ಈ ಗೀತೆ ಹಾಡಿ ಇದು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಇಡೀ ಇಂಡಿಯಾಗೆ ಹಾಡಿದ್ದೇನೆಂದು ಸಂತಸ ಪಟ್ಟರು. ಇದೊಂದು ಪಕ್ಕಾ ಕೌಟುಂಬಿಕ ಮನರಂಜನೆಯಿಂದ ಕೂಡಿದ ಸಿನಿಮಾ’ ಎಂದು ಅವರು ಹೇಳಿದರು.

ಇದನ್ನೂ ಓದಿ: ವಿಜಯ್ ರಾಘವೇಂದ್ರ ಟಾರ್ಚರ್​​ಗೆ ಸುಸ್ತಾದ ಅನುಶ್ರೀ; ಕೊನೆಗೂ ಮೂಡಿತು ನಗು

ಕವಿರಾಜ್, ಕೆ. ಕಲ್ಯಾಣ್ ಮತ್ತು ನಿರ್ದೇಶಕ ಆರ್. ಅನಂತರಾಜು ಅವರು ಹಾಹಿತ್ಯ ಬರೆದಿದ್ದಾರೆ. ರಾಜೇಶ್‌ ರಾಮನಾಥ್ ಅವರು ಸಂಗೀತ ಸಂಯೋಜಿಸಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಆರ್. ಗಂಗಾಧರ್ ಅವರು ಕೆಲಸ ಮಾಡಿದ್ದಾರೆ. ಮೂಡಿಗೆರೆ, ಸಕಲೇಶಪುರ, ಚಿಕ್ಕಮಗಳೂರು ಮುಂತಾದ ಕಡೆಗಳಲ್ಲಿ ಶೂಟಿಂಗ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಒಂದೇ ಸೂರಿನಡಿ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ಪರಿಚಯಿಸಿದ ಟಿವಿ9 – Kannada News | TV9 Education Expo 2026: Bringing Premier Institutions to Shivamogga

ಶಿವಮೊಗ್ಗದಲ್ಲಿ ನಡೆದ ಟಿವಿ9 ಎಜುಕೇಷನ್ ಎಕ್ಸ್​ಪೋ , ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣದ ಕುರಿತು ಮಹತ್ವದ ಮಾಹಿತಿ ಒದಗಿಸಿದೆ. ಶಿವಮೊಗ್ಗದ ಪೊಲೀಸ್ ಭವನದಲ್ಲಿ ನಡೆದ ಈ ಎರಡು ದಿನಗಳ ಕಾರ್ಯಕ್ರಮದಲ್ಲಿ ರಾಜ್ಯದ ಹಾಗೂ ನೆರೆಯ ಚೆನ್ನೈನ 24 ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಭಾಗವಹಿಸಿದ್ದವು.

ಈ ಮೇಳವು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಶೈಕ್ಷಣಿಕ ಆಯ್ಕೆಗಳನ್ನು ಒಂದೇ ಸ್ಥಳದಲ್ಲಿ ಅನ್ವೇಷಿಸಲು ಅನುವಾಗಿದೆ. ದೂರದ ಬೆಂಗಳೂರಿಗೆ ಪ್ರಯಾಣಿಸಿ ವಿವಿಧ ಸಂಸ್ಥೆಗಳನ್ನು ಸಂದರ್ಶಿಸುವ ಶ್ರಮವನ್ನು ತಪ್ಪಿಸಿದೆ. ಭಾಗವಹಿಸಿದ ಸಂಸ್ಥೆಗಳು ಶುಲ್ಕ ರಚನೆ, ಹಾಸ್ಟೆಲ್ ಸೌಲಭ್ಯಗಳು ಮತ್ತು ಸಾರಿಗೆ ವ್ಯವಸ್ಥೆಗಳ ಕುರಿತು ಸಮಗ್ರ ಮಾಹಿತಿಯನ್ನು ಉಚಿತವಾಗಿ ಒದಗಿಸಿದವು. ಶಿಕ್ಷಣದ ಜೊತೆಗೆ, ಟಿವಿ9 ಈ ಹಿಂದೆ ಆಯೋಜಿಸಿದ್ದ ವಸತಿ, ಸಾಲ, ಮತ್ತು ಕಾರು ಎಕ್ಸ್​ಪೋಗಳಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹೋಲಿಸಿ, ಶಿಕ್ಷಣ ಮೇಳವು ಇನ್ನೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾಗರಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

Source link

SRH vs KKR: ಸುನಿಲ್ ನರೈನ್ ‘ಡಬಲ್ ಸೆಂಚುರಿ’; ಐಪಿಎಲ್​ನಲ್ಲಿ ಈ ಸಾಧನೆ ಮಾಡಿದ ಮೊದಲ ವಿದೇಶಿಗ

Source link

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಗೆ ಕ್ಷಣಗಣನೆ:ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ? – Kannada News | Counting for Bagalkot, Davanagere South bypolls on May 4 amid tight security

ದಾವಣಗೆರೆ, (ಮೇ 03) : ತೀವ್ರ ಜಿದ್ದಾಜಿದ್ದಿನಿಂದ ನಡೆದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ನಾಳೆ ಅಂದರೆ ಮೇ 04ರಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕಡೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಇನ್ನು  ದಾವಣಗೆರೆ ನಗರದ ಡಿಆರ್‌ಆರ್ ವಿದ್ಯಾಸಂಸ್ಥೆಯಲ್ಲಿ ನಾಳೆ(ಮೇ 04) ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಹೀಗಾಗಿ ಇಂದು (ಮೇ 03) ಡಿಆರ್‌ಆರ್ ವಿದ್ಯಾಸಂಸ್ಥೆಗೆ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಭೇಟಿ ನೀಡಿ ಮತ ಎಣಿಕೆ ಕೇಂದ್ರವನ್ನು ಪರಿಶೀಲಿಸಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚುನಾವಣಾ ಅಧಿಕಾರಿ ಸಂತೋಷ ಕುಮಾರ್, ನಾಳೆ ಅಂದರೆ ಸೋಮವಾರ ಬೆಳಿಗ್ಗೆ ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, 7.35 ರಿಂದ 7.45 ರೊಳಗೆ ಅಭ್ಯರ್ಥಿ ಗಳ ಎಜೆಂಟರ್ ಸಮ್ಮುಖದಲ್ಲಿ ಇವಿಎಂ ಇಟ್ಟಿರುವ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗುವುದು. ಮೊದಲಿಗೆ ಅಂಚೆ ಮತ ಮತಗಳಿ ಎಣಿಕೆ ಮಾಡಲಾಗುವುದು. ಒಟ್ಟು 217 ಅಂಚೆ ಮತಗಳಿವೆ. ಸೇವಾ ಮತದಾರು ಇನ್ನೂ 25 ಮತಗಳ ಬೇಕು. ನಾಳೆ 7.45 ವರೆಗೆ ಬರುವ ಇಂತಹ ಮತಗಳನ್ನ ಸ್ವೀಕರಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

SRH vs KKR: ಕನ್ನಡಿಗ ಸ್ಮರಣ್​ಗೆ ಸ್ಮರಣೀಯವಾಗದ ಚೊಚ್ಚಲ ಐಪಿಎಲ್ ಪಂದ್ಯ – Kannada News | IPL 2026: Smaran Ravichandran’s SRH Debut vs KKR; Kannada Star’s First Match

ಐಪಿಎಲ್ 2026 (IPL 2026) ರ 45ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ (SRH vs KKR )​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳು ಕನ್ನಡಿಗರಿಗೆ ಪ್ಲೇಯಿಂಗ್ 11ನಲ್ಲಿ ಅವಕಾಶ ನೀಡಿದ್ದವು. ಸನ್‌ರೈಸರ್ಸ್ ಪರ ಸ್ಮರಣ್ ರವಿಚಂದ್ರನ್ (Smaran Ravichandran) ತಮ್ಮ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದರೆ, ಇತ್ತ ಕೆಕೆಆರ್ ಪರ ಮನೀಶ್ ಪಾಂಡೆ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ಪರ ಸ್ಮರಣ್​ಗೆ ಬ್ಯಾಟಿಂಗ್‌ ಮಾಡುವ ಅವಕಾಶ ಸಿಕ್ಕಿತು. ಆದರೆ ಸಿಕ್ಕ ಜೊಚ್ಚಲ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸ್ಮರಣ್ ಎಡವಿದರು.

ಬದಲಿ ಆಟಗಾರನಾಗಿ ಆಯ್ಕೆ

ನಿತೀಶ್ ಕುಮಾರ್ ರೆಡ್ಡಿ ಅನುಪಸ್ಥಿತಿಯಿಂದಾಗಿ ಸ್ಮರಣ್​ಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿತು. ವಾಸ್ತವವಾಗಿ 2025 ರ ಐಪಿಎಲ್‌ನಲ್ಲಿ ಆಡಮ್ ಜಂಪಾ ಗಾಯಗೊಂಡ ನಂತರ ಸ್ಮರಣ್ ಅವರನ್ನು ಸನ್‌ರೈಸರ್ಸ್ ಫ್ರಾಂಚೈಸಿ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದಾಗ್ಯೂ ಆ ಆವೃತ್ತಿಯಲ್ಲಿ ಸ್ಮರಣ್​ಗೆ ಆಡುವ ಅವಕಾಶ ಸಿಗಲಿಲ್ಲ. ಇದರ ಹೊರತಾಗಿಯೂ ಸನ್‌ರೈಸರ್ಸ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿತ್ತು. ಇದೀಗ ಪ್ಲೇಯಿಂಗ್​ 11 ನಲ್ಲಿ ಆಡುವ ಅವಕಾಶ ಪಡೆದ ಸ್ಮರಣ್ 4 ಎಸೆತಗಳಲ್ಲಿ 1 ಬೌಂಡರಿ ಸಹಿತ 4 ರನ್ ಕಲೆಹಾಕಲಷ್ಟೇ ಶಕ್ತರಾಗಿ ವಿಕೆಟ್ ಒಪ್ಪಿಸಿದರು. ಅಂದರೆ ಸ್ಮರಣ್​ಗೆ ತಮ್ಮ ಚೊಚ್ಚಲ ಐಪಿಎಲ್ ಪಂದ್ಯ ಸ್ಮರಣೀಯವಾಗಲಿಲ್ಲ.

ದೇಶಿ ಟೂರ್ನಿಯಲ್ಲಿ ಅಬ್ಬರ

ದೇಶಿ ಟೂರ್ನಿಯಲ್ಲಿ ಕರ್ನಾಟಕದ ಪರ ಆಡುವ ಸ್ಮರಣ್, ತಮ್ಮ ಅಲ್ಪ ವೃತ್ತಿಜೀವನದಲ್ಲೇ ತಂಡದ ನಂಬಿಕಸ್ತ ಆಟಗಾರನಾಗಿದ್ದಾರೆ. 2024 ರಲ್ಲಿ ಕರ್ನಾಟಕ ಪರ ದೇಶೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಸ್ಮರಣ್, 2024-25 ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ ಏಳು ಇನ್ನಿಂಗ್ಸ್‌ಗಳಲ್ಲಿ 72.16 ಸರಾಸರಿಯಲ್ಲಿ ಮತ್ತು 100 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 433 ರನ್ ಗಳಿಸಿದರು ಮತ್ತು ಕರ್ನಾಟಕ ಟ್ರೋಫಿ ಗೆಲ್ಲಲು ಸಹಾಯ ಮಾಡಿದರು.

CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್

ರಣಜಿಯಲ್ಲಿ ರನ್ ಮಳೆ

ಅದೇ ಆವೃತ್ತಿಯಲ್ಲಿ ಸ್ಮರಣ್, ಕರ್ನಾಟಕ ಪರ ಏಳು ರಣಜಿ ಟ್ರೋಫಿ ಪಂದ್ಯಗಳಲ್ಲಿ 64.50 ಸರಾಸರಿಯಲ್ಲಿ 516 ರನ್ ಗಳಿಸಿದ್ದರು. ಇನ್ನು ಕಳೆದ ರಣಜಿ ಟ್ರೋಫಿಯಲ್ಲಿ ರನ್​ಗಳ ಶಿಖರ ಕಟ್ಟಿದ್ದ ಸ್ಮರಣ್, ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಶತಕಗಳು ಮತ್ತು ಮೂರು ಅರ್ಧಶತಕಗಳೊಂದಿಗೆ 86.36 ಸರಾಸರಿಯೊಂದಿಗೆ 950 ರನ್ ಗಳಿಸಿ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರ ಎನಿಸಿಕೊಂಡಿದ್ದರು. ಅವರ ವಿಜಯ್ ಹಜಾರೆ ಟ್ರೋಫಿ ಅಭಿಯಾನವು ಅಷ್ಟೇನೂ ಯಶಸ್ವಿಯಾಗಲಿಲ್ಲ, ಆದರೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಆಡಿದ ಏಳು ಪಂದ್ಯಗಳಲ್ಲಿ 63.80 ಸರಾಸರಿ ಮತ್ತು 158.70 ಸ್ಟ್ರೈಕ್ ರೇಟ್‌ನಲ್ಲಿ ವೃತ್ತಿಜೀವನದ ಅತ್ಯಧಿಕ 319 ರನ್ ಕಲೆಹಾಕಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ, ನಿಂದನೆ: ಹಲವು ಕಷ್ಟ ಹೇಳಿಕೊಂಡ ದರ್ಶನ್ – Kannada News | Actor Darshan Supreme Court Bail plea prison hardships and health issues update

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜಾಮೀನು (Bail) ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಜಾಮೀನಿಗಾಗಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದ್ದು, ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಜೈಲಿನಲ್ಲಿ ಸಹ-ಕೈದಿಗಳಿಂದ ಬೆದರಿಕೆ ಹಾಕಲಾಗುತ್ತಿದೆ. ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ತಮ್ಮನ್ನು ಕ್ವಾರಂಟೈನ್ ಸೆಲ್​ನಲ್ಲಿಡಲಾಗಿದೆ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ಹಾನಿಕಾರಕ ಪರಿಣಾಮವಾಗುತ್ತಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ (Darshan) ಅವರು ಕಷ್ಟ ಹೇಳಿಕೊಂಡಿದ್ದಾರೆ.

ಜೈಲಿನಲ್ಲಿ ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮದಲ್ಲಿ ನೆಗೆಟಿವ್ ಪ್ರಚಾರದಿಂದ ಸಮಸ್ಯೆ ಬಿಗಡಾಯಿಸಿದೆ. ಜೈಲಿನಲ್ಲಿ ಇತರೆ ಕೈದಿಗಳಿಗಿಂತ ತಾರತಮ್ಯ ಮಾಡಲಾಗುತ್ತಿದೆ. ಕುಟುಂಬದವರ ಭೇಟಿಗೆ ಸಮಾನ ಸಮಯ ನೀಡುತ್ತಿಲ್ಲ. ಆಹಾರ, ಬಟ್ಟೆ, ಹಾಸಿಗೆ ಪಡೆಯಲೂ ಬಿಡುತ್ತಿಲ್ಲ. ಜೈಲು ಸೆಲ್​ನ ಕಾರಿಡಾರ್​​ನಲ್ಲಿ ಮಾತ್ರ ವಾಕ್ ಮಾಡಲು ಬಿಡುತ್ತಿದ್ದಾರೆ. ಬೆನ್ನು ನೋವಿದ್ದರೂ ಕೇವಲ 2-3 ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಜಾಮೀನು ಅರ್ಜಿಯಲ್ಲಿ ತಿಳಿಸಲಾಗಿದೆ.

ಸುದೀರ್ಘ ಜೈಲುವಾಸದಿಂದ ಜೀವನೋಪಾಯಕ್ಕೂ ಸಮಸ್ಯೆ ಆಗಿದೆ. ಪ್ರತಿ ವರ್ಷ 2 ಅಥವಾ 3 ಚಿತ್ರಗಳಿಗೆ ಸಹಿ ಮಾಡುತ್ತಿದ್ದೆ. ಜಾಮೀನು ರದ್ದುಪಡಿಸುವ ವೇಳೆಯೂ 3 ಸಿನಿಮಾಗಳಿಗೆ ಸಹಿ ಮಾಡಿದ್ದೆ. ಕೆವಿಎನ್ ಪ್ರೊಡಕ್ಷನ್ಸ್, ಮೀಡಿಯಾ ಹೌಸ್ ಸ್ಟೂಡಿಯೋಸ್​ನ ಸಿನಿಮಾಗಳಿಗೆ ಸಹಿ ಮಾಡಲಾಗಿತ್ತು. ನಿರ್ಮಾಪಕರು 6 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಜೈಲು ಸೇರಿದ್ದರಿಂದ ಸಿನಿಮಾ ನಿಂತುಹೋಗಿದೆ ಎಂದು ದರ್ಶನ್ ಸಮಸ್ಯೆ ಹೇಳಿಕೊಂಡಿದ್ದಾರೆ.

ಹೊಸ ಚಿತ್ರಗಳನ್ನೂ ಕಳೆದುಕೊಂಡಿರುವುದರಿಂದ ನಷ್ಟ ಆಗಿದೆ. ಸುದೀರ್ಘ ಜೈಲುವಾಸವು ವೃತ್ತಿಜೀವನಕ್ಕೆ ಮರಣಗಂಟೆಯಾಗಲಿದೆ. ವೃತ್ತಿ ನಡೆಸುವ ಮೂಲಭೂತ ಹಕ್ಕಿನ ಹರಣವಾಗಲಿದೆ. 262 ಸಾಕ್ಷಿಗಳ ವಿಚಾರಣೆ ಆಗಬೇಕೆಂದು ಆರೋಪಪಟ್ಟಿ ಸಲ್ಲಿಸಲಾಗಿದೆ. 8 ತಿಂಗಳಿನಿಂದ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ಆಗಿದೆ
ಶೀಘ್ರದಲ್ಲಿ ಸಾಕ್ಷ್ಯ ವಿಚಾರಣೆ ಮುಗಿಯುವ ಲಕ್ಷಣಗಳಿಲ್ಲ. ಹೀಗಾಗಿ ಜಾಮೀನು ನೀಡುವಂತೆ ದರ್ಶನ್ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ, ಜಾಮೀನು ಕೊಡಿ’; ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ಸೋಮವಾರ (ಮೇ 4) ಸುಪ್ರೀಂಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಮೊದಲು ಅವರಿಗೆ ನೀಡಿದ್ದ ಜಾಮೀನನ್ನು ರದ್ದು ಮಾಡಲಾಗಿತ್ತು. ಈ ಬಾರಿ ಅವರಿಗೆ ರಿಲೀಫ್ ಸಿಗುತ್ತಾ ಅಥವಾ ಇಲ್ಲವಾ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 5:08 pm, Sun, 3 May 26

Source link

ICAI CA Exam: CA ವಿದ್ಯಾರ್ಥಿಗಳ ಗಮನಕ್ಕೆ; ಸೆಪ್ಟೆಂಬರ್ – ನವೆಂಬರ್ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ – Kannada News | ICAI CA Exam Schedule Sep Nov 2026: Foundation, Inter, Final Dates and Application Details

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) 2026 ರ ಸೆಪ್ಟೆಂಬರ್ ಮತ್ತು ನವೆಂಬರ್ ಅವಧಿಯಲ್ಲಿ ನಡೆಯಲಿರುವ ಚಾರ್ಟರ್ಡ್ ಅಕೌಂಟೆನ್ಸಿ (CA) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೌಂಡೇಶನ್, ಇಂಟರ್ಮೀಡಿಯೇಟ್ ಮತ್ತು ಫೈನಲ್ ಪರೀಕ್ಷೆಗಳ ದಿನಾಂಕಗಳ ಜೊತೆಗೆ ಅರ್ಜಿಯ ವಿವರಗಳನ್ನು ಸಂಸ್ಥೆಯು ಹಂಚಿಕೊಂಡಿದೆ.

ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಅಭ್ಯರ್ಥಿಗಳು ಜುಲೈ 6 ರಿಂದ ತಮ್ಮ ಪರೀಕ್ಷಾ ನಮೂನೆಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗುತ್ತದೆ. ಇದಕ್ಕಾಗಿ ವಿದ್ಯಾರ್ಥಿಗಳು ICAI ನ ಅಧಿಕೃತ ಸ್ವಯಂ ಸೇವಾ ಪೋರ್ಟಲ್ (eservices.icai.org) ಬಳಸಬಹುದು. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಅಥವಾ ಹಿಂದಿ ಮಾಧ್ಯಮದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ:

ಪರೀಕ್ಷೆಯ ವಿವರ ಪರೀಕ್ಷಾ ದಿನಾಂಕಗಳು
CA ಫೌಂಡೇಶನ್ ಸೆಪ್ಟೆಂಬರ್ 2, 5, 7, 9
CA ಇಂಟರ್ಮೀಡಿಯೇಟ್ (ಗ್ರೂಪ್ I) ಸೆಪ್ಟೆಂಬರ್ 1, 3, 6
CA ಇಂಟರ್ಮೀಡಿಯೇಟ್ (ಗ್ರೂಪ್ II) ಸೆಪ್ಟೆಂಬರ್ 8, 10, 12
CA ಫೈನಲ್ (ಗುಂಪು I) ನವೆಂಬರ್ 2, 4, 6
CA ಫೈನಲ್ (ಗುಂಪು II) ನವೆಂಬರ್ 9, 11, 13
INTT-AT ಪರೀಕ್ಷೆ ನವೆಂಬರ್ 11, 13
IRM ತಾಂತ್ರಿಕ ಪರೀಕ್ಷೆ ನವೆಂಬರ್ 6, 9, 11, 13

ವೇಳಾಪಟ್ಟಿಯಲ್ಲಿ ಬದಲಾವಣೆ ಇರುವುದಿಲ್ಲ:

ಪರೀಕ್ಷಾ ದಿನಗಳಂದು ಸರ್ಕಾರವು ಸಾರ್ವಜನಿಕ ರಜಾದಿನ ಘೋಷಿಸಿದರೂ ಸಹ, ನಿಗದಿತ ವೇಳಾಪಟ್ಟಿಯಲ್ಲೇ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ICAI ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಒಎನ್‌ಜಿಸಿ ವಿದ್ಯಾರ್ಥಿವೇತನ; ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 48,000ರೂ. ಆರ್ಥಿಕ ನೆರವು

ಪರೀಕ್ಷಾ ಸಮಯ ಮತ್ತು ಅವಧಿ

  • ಹೆಚ್ಚಿನ ಪರೀಕ್ಷೆಗಳು ಮಧ್ಯಾಹ್ನ 2:00 ರಿಂದ ಸಂಜೆ 5:00 ರವರೆಗೆ ನಡೆಯಲಿವೆ.

  • ಫೌಂಡೇಶನ್ ಪೇಪರ್ 3 ಮತ್ತು 4 ಕ್ಕೆ 2 ಗಂಟೆಗಳ ಕಾಲಾವಕಾಶವಿರುತ್ತದೆ.

  • ಫೈನಲ್ ಪೇಪರ್ 6 ಮತ್ತು ಅಂತರರಾಷ್ಟ್ರೀಯ ತೆರಿಗೆ ಮೌಲ್ಯಮಾಪನ ಪರೀಕ್ಷೆಗೆ 4 ಗಂಟೆಗಳ ಕಾಲಾವಕಾಶ ನೀಡಲಾಗಿದೆ.

  • ಪ್ರಶ್ನೆ ಪತ್ರಿಕೆ ಓದಲು ಹೆಚ್ಚಿನ ಪರೀಕ್ಷೆಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯ (ಮಧ್ಯಾಹ್ನ 1:45 ರಿಂದ) ನೀಡಲಾಗುವುದು.

ಪರೀಕ್ಷಾ ಅರ್ಜಿ ಶುಲ್ಕದ ವಿವರಗಳು:

  • CA ಫೌಂಡೇಶನ್: 1,500 ರೂ.

  • CA ಇಂಟರ್ಮೀಡಿಯೇಟ್: ಒಂದು ಗ್ರೂಪ್‌ಗೆ 1,500 ರೂ., ಎರಡೂ ಗ್ರೂಪ್‌ಗಳಿಗೆ 2,700 ರೂ.

  • CA ಫೈನಲ್: ಒಂದು ಗ್ರೂಪ್‌ಗೆ 1,800 ರೂ., ಎರಡೂ ಗ್ರೂಪ್‌ಗಳಿಗೆ 3,300 ರೂ.

ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅಪ್‌ಡೇಟ್‌ಗಳಿಗಾಗಿ ನಿಯಮಿತವಾಗಿ ICAI ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು ಬೆಂಗಳೂರು ಎಕ್ಸ್‌‍‌ಪ್ರೆಸ್‌ವೇನಲ್ಲಿ ವಾಹನ ಪಲ್ಟಿ, ಕಾರಿನ ಡ್ಯಾಶ್ ಕ್ಯಾಮ್ ನಲ್ಲಿ ಭೀಕರ ದೃಶ್ಯ ಸೆರೆ – Kannada News | Tender coconut vehicle overturns In mysuru bengaluru expressway, here is Video

ಮಂಡ್ಯ, (ಮೇ 03): ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಳನೀರು ತುಂಬಿಕೊಂಡು ಹೋಗುತ್ತಿದ್ದ ಪಿಕ್ಅಪ್ ವಾಹನ ಏಕಾಏಕಿ ಪಲ್ಟಿಯಾಗಿದೆ. ಅತೀಯಾದ ಲೋಡ್, ಜೊತೆಗೆ ಅತೀಯಾದ ಬಿಸಿಲಿನ ವಾತಾವರಣದಿಂದ ಪಿಕ್ಅಪ್ ವಾಹನದ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ ಪಿಕ್ ಅಪ್ ವಾಹನದ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಎಳನೀರು ಹೆದ್ದಾರಿಯಲ್ಲಿ ಚೆಲ್ಲಿದೆ. ಅತೀ ವೇಗವಾಗಿ ಬರುತ್ತಿದ್ದ ಇತರ ವಾಹನಗಳು ಸಹ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದೆ. ಈ ಘಟನೆಯ ದೃಶ್ಯ ಕಾರಿನ ಡ್ಯಾಶ್ ಕ್ಯಾಮ್​​ನಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ – Kannada News | Hubballi Dharwad Corporation Split Controversy: whats BJP’s demand; Here is the real reason

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Image Credit source: tv9 kannada

ಧಾರವಾಡ, ಮೇ 03: ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರವೇ (Hubballi-Dharwad Corporation) ದೊಡ್ಡದು. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಧಾರವಾಡಕ್ಕೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ ನಡೆಯಿತು. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಧಾರವಾಡ (Dharwad) ಪ್ರತ್ಯೇಕ ಪಾಲಿಕೆಗೆ ನಿರ್ಣಯ ಮಂಡಿಸಿ, ಸರಕಾರಕ್ಕೆ ಕಳಿಸಲಾಗಿತ್ತು. ಒತ್ತಡ ಹೆಚ್ಚಾಗಿದ್ದರಿಂದಾಗಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷವಷ್ಟೇ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಣೆ ಮಾಡಿದ್ದರು. ಆದರೆ ಇದೀಗ ಪಾಲಿಕೆಯಲ್ಲಿ ಆಡಳಿತಾರೂಢ ಬಿಜೆಪಿ (Bjp) ಪ್ರತ್ಯೇಕ ಪಾಲಿಕೆ ಬೇಡ ಅಂತಾ ನಿರ್ಣಯಿಸಿ, ಬೃಹತ್ ಮಹಾನಗರ ಪಾಲಿಕೆಗೆ ಬೇಡಿಕೆ ಇಟ್ಟು, ನಿರ್ಣಯ ಮಂಡಿಸಿದೆ. ಇದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಅತ್ಯಂತ ದೊಡ್ಡ ಮಹಾನಗರ ಪಾಲಿಕೆ ಅನ್ನೋ ಖ್ಯಾತಿಗೆ ಒಳಗಾಗಿದ್ದು, ಒಟ್ಟು 82 ವಾರ್ಡ್​ಗಳನ್ನು ಹೊಂದಿದೆ. ಸದ್ಯಕ್ಕೆ ಯೋಜಿತ 13 ಲಕ್ಷ ಜನಸಂಖ್ಯೆ ಹೊಂದಿರುವ ಈ ಪಾಲಿಕೆಯಿಂದ ಧಾರವಾಡವನ್ನು ಪ್ರತ್ಯೇಕ ಪಾಲಿಕೆಯನ್ನಾಗಿ ಮಾಡಬೇಕೆನ್ನೋದು ಹಲವಾರು ವರ್ಷಗಳ ಬೇಡಿಕೆ. ಹುಬ್ಬಳ್ಳಿ ರಾಜಕೀಯ ಕೇಂದ್ರವಾಗಿರೋದ್ರಿಂದಾಗಿ ಅಲ್ಲಿಗೆ ಹೆಚ್ಚಿನ ಅನುದಾನ ಬಳಕೆಯಾಗುತ್ತೆ ಅನ್ನೋದು ಧಾರವಾಡಿಗರ ಆಕ್ಷೇಪ. ಅಲ್ಲದೇ ಪಾಲಿಕೆ ವ್ಯಾಪ್ತಿಯಲ್ಲಿ ಎಷ್ಟೇ ಅನುದಾನ ಬಳಕೆಯಾದರೂ ಹೆಚ್ಚಿನ ಪಾಲು ಹುಬ್ಬಳ್ಳಿಗೆ ಹೋಗುತ್ತೆ ಅನ್ನೋದು ಕೂಡ ಧಾರವಾಡಿಗರ ಆಕ್ರೋಶ. ಇದೇ ಕಾರಣಕ್ಕೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಅನ್ನೋ ಕೂಗು ಹಲವಾರು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು.

ಬಿಜೆಪಿ ಹೊಸ ವರಸೆ

ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ಸೇರಿಕೊಂಡು ಸಾಮಾನ್ಯ ಸಭೆಯಲ್ಲಿ ಪ್ರತ್ಯೇಕ ಪಾಲಿಕೆಗೆ ನಿರ್ಣಯ ಮಂಡಿಸಿ, ರಾಜ್ಯ ಸರಕಾರಕ್ಕೆ ಪ್ರಸ್ತಾವನೆಯನ್ನೂ ಸಲ್ಲಿಸಿದ್ದವು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಳೆದ ವರ್ಷ ಪ್ರತ್ಯೇಕ ಪಾಲಿಕೆಯ ಘೋಷಣೆ ಮಾಡಿದ್ದರು. ಆದರೆ ಇದೀಗ ಅದೇ ಆಡಳಿತಾರೂಢ ಬಿಜೆಪಿ ಹೊಸ ವರಸೆಯೊಂದನ್ನು ತೆಗೆದಿದ್ದು, ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಬದಲು ಇದೇ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆ ಅಂತಾ ಘೋಷಿಸಲು ನಿರ್ಣಯ ಮಂಡಿಸಿದೆ. ಇದು ಧಾರವಾಡ ಜನರ ಕಂಗೆಣ್ಣಿಗೆ ಗುರಿಯಾಗಿದೆ.

ಬಿಜೆಪಿಗರ ವಾದವೇನು?

ಪಾಲಿಕೆಯ ಈ ಹೊಸ ನಿರ್ಣಯದ ಹಿಂದೆ ಬೇರೆಯದೇ ಆದ ಉದ್ದೇಶವಿದೆ ಅನ್ನೋದು ಬಿಜೆಪಿಗರ ಹೇಳಿಕೆ. ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಣೆಯಾದಾಗ ಈಗಿರುವ ವಾರ್ಡುಗಳನ್ನು ಸಮಾನಾಂತರವಾಗಿ ವಿಭಜಿಸಲಾಗುತ್ತೆ ಅಂದುಕೊಳ್ಳಲಾಗಿತ್ತು. ಅದರೆ 82 ವಾರ್ಡುಗಳಲ್ಲಿ ಧಾರವಾಡಕ್ಕೆ ಕೇವಲ 26 ವಾರ್ಡುಗಳನ್ನು ಬಿಟ್ಟುಕೊಟ್ಟರೆ ಪಾಲಿಕೆಯ ಆರ್ಥಿಕ ಪರಿಸ್ಥಿತಿಯ ಕಥೆ ಏನು ಅನ್ನೋದು ಬಿಜೆಪಿ ಸದಸ್ಯರ ವಾದ. ಅಲ್ಲದೇ ಧಾರವಾಡ ತಾಲೂಕಿನ ನಾಲ್ಕು ಗ್ರಾಮ ಪಂಚಾಯತ್​​ಗಳನ್ನು ಧಾರವಾಡ ಪಾಲಿಕೆಗೆ ಸೇರಿಸಬೇಕು ಅನ್ನೋದು ಸರಕಾರದ ಲೆಕ್ಕಾಚಾರವಾಗಿತ್ತು. ಆದರೆ ಆ ಗ್ರಾಮ ಪಂಚಾಯತ್​ನವರು ಇದಕ್ಕೆ ಒಪ್ಪಲೇ ಇಲ್ಲ. ಇದೇ ಕಾರಣಕ್ಕೆ ಗ್ರಾಮ ಪಂಚಾಯತ್ ಜಾಗವನ್ನಷ್ಟೇ ಪಾಲಿಕೆಗೆ ಸೇರಿಸಿ, ಆ ನಾಲ್ಕೂ ಗ್ರಾಮ ಪಂಚಾಯತ್​ಗಳನ್ನು ಹಾಗೆಯೇ ಬಿಡಲು ಯೋಜನೆ ರೂಪಿಸಲಾಯಿತು. ಇದರಿಂದಾಗಿ ಸಮಸ್ಯೆ ಹೆಚ್ಚಾಗುತ್ತೆಯೇ ಹೊರತು ಪರಿಹಾರ ಸಿಗುವುದಿಲ್ಲ.

ಇದನ್ನು ಓದಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆ ಫೈಟ್: ಬೃಹತ್ ಪಾಲಿಕೆಗೆ ಬಿಜೆಪಿ ಪಟ್ಟು, ವಿಭಜನೆಯೇ ಲೇಸು ಎಂದ ಕಾಂಗ್ರೆಸ್

ಅಲ್ಲದೇ ಮೈಸೂರು ಮಹಾನಗರ ಪಾಲಿಕೆಗಿಂತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದೊಡ್ಡದು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮೈಸೂರನ್ನು ಬೃಹತ್ ಮಹಾನಗರ ಪಾಲಿಕೆ ಮಾಡಲು ಹೊರಟಿದ್ದಾರೆ. ಒಂದು ವೇಳೆ ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆ ಅಸ್ವಿತ್ವದಲ್ಲಿದ್ದರೆ ಮೊದಲಿಗೆ ಇದನ್ನೇ ಬೃಹತ್ ಮಹಾನಗರ ಪಾಲಿಕೆ ಮಾಡಬೇಕಾಗುತ್ತೆ. ಹೀಗಾಗಿ ಇದನ್ನು ಒಡೆದು, ಬಳಿಕ ಮೈಸೂರನ್ನು ಬೃಹತ್ ಮಹಾನಗರ ಪಾಲಿಕೆ ಮಾಡಲು ತಂತ್ರ ರೂಪಿಸಿದ್ದಾರೆ ಅನ್ನೋದು ಬಿಜೆಪಿ ಮುಖಂಡರ ಆರೋಪ. ಹೀಗಾಗಿ ಯಾವುದೇ ಕಾರಣಕ್ಕೂ ಪ್ರತ್ಯೇಕ ಪಾಲಿಕೆ ಮಾಡೋದು ಬೇಡ ಅನ್ನೋದು ಅವರ ವಾದ.

ಅನುದಾನಕ್ಕೂ ಕೊರತೆ?

ಇನ್ನು 16ನೇ ಹಣಕಾಸು ಆಯೋಗದಿಂದ ಸುಮಾರು 56 ಸಾವಿರ ಕೋಟಿ ರೂ ಅನುದಾನ ಬರುತ್ತೆ. ಈ ಅನುದಾನ ಸಿಗಬೇಕೆಂದರೆ ಪಾಲಿಕೆಯ ವ್ಯಾಪ್ತಿಯಲ್ಲಿ 10 ರಿಂದ 40 ಲಕ್ಷ ಜನಸಂಖ್ಯೆ ಇರಬೇಕು ಅನ್ನೋ ನಿಯಮವಿದೆ. ಇದೀಗ ಅವಳಿ ನಗರದ ಪಾಲಿಕೆ ವಿಭಜನೆಯಾದರೆ ಎರಡರಲ್ಲೂ 10 ಲಕ್ಷಕ್ಕೂ ಕಡಿಮೆ ಜನಸಂಖ್ಯೆ ಆಗುತ್ತೆ. ಇದರಿಂದಾಗಿ ಅನುದಾನ ಸಿಗುವುದಿಲ್ಲ. ಅಲ್ಲದೇ ಇಂಥ ಅನೇಕ ತಾಂತ್ರಿಕ ಸಮಸ್ಯೆಗಳು ತಲೆದೋರೋದರಿಂದಾಗಿ ಎರಡೂ ಪಾಲಿಕೆಗಳಿಗೆ ಅನುದಾನ ಸಿಗೋದೇ ಕಡಿಮೆಯಾಗುತ್ತೆ ಅನ್ನೋದು ಕೂಡ ಆಡಳಿತಾರೂಢ ಬಿಜೆಪಿ ಸದಸ್ಯರ ವಾದ. ಒಟ್ಟಿನಲ್ಲಿ ಈ ಪ್ರಕರಣ ಮುಂದೆ ಎಲ್ಲಿಗೆ ಬಂದು ನಿಲ್ಲುತ್ತೆ ಅನ್ನೋದೇ ಇದೀಗ ಕುತೂಹಲಕಾರಿ ವಿಚಾರವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version