Headlines

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ? – Kannada News | Minister SS Mallikarjuns Resignation Offer Sparks Davangere By Election Ticket Controversy

ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.  ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ….

Read More

ಈ ಒಂದು ತಪ್ಪು ಸರಿಪಡಿಸದಿದ್ದರೆ ಟೀಮ್ ಇಂಡಿಯಾಗೆ ಅಪಾಯ ಕಟ್ಟಿಟ್ಟ ಬುತ್ತಿ! – Kannada News | Team India have dropped 9 catches so far in this T20 World Cup 2026

T20 World Cup 2026: ಕ್ಯಾಚಸ್ ವಿನ್ ಮ್ಯಾಚಸ್ ಎಂಬುದು ಕ್ರಿಕೆಟ್‌ನ ಅತ್ಯಂತ ಜನಪ್ರಿಯ ನಾಣ್ಣುಡಿ. ಫೀಲ್ಡಿಂಗ್ ಪಂದ್ಯದ ಫಲಿತಾಂಶವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದನ್ನು ಇದು ಒತ್ತಿಹೇಳುತ್ತದೆ. ಈ ಹೇಳಿಕೆ ಟೀಮ್ ಇಂಡಿಯಾಗೆ ಅನ್ವಯಿಸಲಿದೆಯಾ ಎಂದು ಕೇಳಿದ್ರೆ ಸದ್ಯದ ಮಟ್ಟಿಗೆ ಇಲ್ಲ ಎನ್ನಬಹುದು. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಟಗಾರರು ಕೈ ಬಿಟ್ಟಿರುವುದು ಬರೋಬ್ಬರಿ 9 ಕ್ಯಾಚ್​ಗಳನ್ನು. ಇದಾಗ್ಯೂ ಭಾರತ ತಂಡ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ಆದರೆ ಮುಂದಿನ ಸುತ್ತಿನಲ್ಲೂ ಇದೇ…

Read More

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸಿಎಂಗೆ ಕಾಂಗ್ರೆಸ್​​ ಶಾಸಕ ರಂಗನಾಥ್ ಪತ್ರ – Kannada News | Kunigal MLA Ranganath Seeks Special Status, Incentives for Girls Marrying Farmers

ಸಿಎಂಗೆ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಪತ್ರImage Credit source: Tv9 Kannada ತುಮಕೂರು, ಫೆಬ್ರವರಿ 19: ಇತ್ತೀಚಿಗೆ ಹುಡುಗರಿಗೆ ಮದುವೆ ಆಗಲು ಹುಡುಗಿಯರು ಸಿಗುವುದೇ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರೈತರು, ಹಳ್ಳಿಯಲ್ಲಿ ಇರುವವರು ಎಂದರಂತೂ ಮುಗೀತು. ಹೆಣ್ಣು ಕೊಡಲು ಮುಂದೆ ಬರುವವರೇ ಇಲ್ಲ ಎನ್ನುವ ಹಂತಕ್ಕೆ ಸಮಾಜ ತಲುಪಿದೆ. ಈ ನಡುವೆ ಕುಣಿಗಲ್​​ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಡಾ. ಹೆಚ್​​. ಡಿ. ರಂಗನಾಥ್ ಅವರು ಸಿಎಂ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರವೊಂದು ಭಾರಿ…

Read More

ಸಿನಿಮಾ ಆಗಲಿದೆ ಆಪರೇಷನ್ ಸಿಂಧೂರ್: ನಿರ್ದೇಶಕ ಯಾರು? – Kannada News | Operation Sindhur is likely to became movie, Vivek Agnihotri directing it

ಭಾರತೀಯ ಸೇನೆಯ ವೀರತೆ, ಶೂರತೆ ಕುರಿತಾಗಿ ಬಾಲಿವುಡ್​ನಲ್ಲಿ ಹಲವಾರು ಸಿನಿಮಾಗಳು (Cinema) ಈ ವರೆಗೆ ಬಂದಿವೆ. ಈಗಲೂ ಬರುತ್ತಿವೆ. ಉರಿ ದಾಳಿಯ ಪ್ರತಿಯಾಗಿ ಮಾಡಲಾದ ಸರ್ಜಿಕಲ್ ಸ್ಟೈಕ್ ಅನ್ನು ಆಧರಿಸಿ ‘ಉರಿ’ ಹೆಸರಿನ ಸಿನಿಮಾ ಬಂದಿತ್ತು. ಇದೀಗ ಉಗ್ರರ ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ಮಾಡಿದ ಆಪರೇಷನ್ ಸಿಂಧೂರ್ ಕುರಿತಾದ ಸಿನಿಮಾ ಬರಲಿದೆ. ಇದಕ್ಕಾಗಿ ತಯಾರಿ ಆರಂಭವಾಗಿದೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’ ಮತ್ತು ‘ದಿ ಬೆಂಗಾಲ್ ಫೈಲ್ಸ್’ ನಂತಹ ಸಿನಿಮಾಗಳನ್ನು ಮಾಡಿರುವ ಬಾಲಿವುಡ್…

Read More

ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿ: ಸುಪ್ರೀಂಕೋರ್ಟ್ – Kannada News | Supreme Court Slams Freebies: How Political Guarantees Hinder India’s Economic Growth

ನವದೆಹಲಿ, ಫೆಬ್ರವರಿ 19: ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಗಳು ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ ಎಂದು ಸುಪ್ರೀಂಕೋರ್ಟ್(Supreme Court)​ ಇಂದು ಅಭಿಪ್ರಾಯಪಟ್ಟಿದೆ.ರಾಜ್ಯಗಳು ವಿತರಿಸುತ್ತಿರುವ ಉಚಿತ ಕೊಡುಗೆಗಳ ಬಗ್ಗೆ ಸುಪ್ರೀಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಾಮಾನ್ಯವಾಗಿ ಈಗ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳನ್ನು ಮಾಡಲಾಗುತ್ತಿದೆ. ಅಧಿಕಾರಕ್ಕೆ ಬಂದ ಬಳಿಕ ಅದರಲ್ಲಿರುವ ಕೆಲವಾದರೂ ಈಡೇರಿಸುವುದು ಪಕ್ಷಕ್ಕೆ ಅನಿವಾರ್ಯ ಕೂಡ, ಆದರೆ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಆಲೋಚಿಸಬೇಕೆಂದು ನ್ಯಾಯಾಲಯ ಹೇಳಿದೆ. ವಿವೇಚನೆಯಿಲ್ಲದೆ ಉಚಿತ ಕೊಡುಗೆಗಳನ್ನು ನೀಡುವುದರಿಂದ ದೇಶದ…

Read More

ನ್ಯಾವಿಟೇರ್​​ನಲ್ಲಿ ಸಾಫ್ಟ್​ವೇರ್ ಸಮಸ್ಯೆ: ಭಾರತ, ಯುರೋಪ್​​ನಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ – Kannada News | Navitaire System Glitch Disrupts Airline Operations Across India and Europe

ನವದೆಹಲಿ, ಫೆಬ್ರವರಿ 19: ನ್ಯಾವಿಟೇರ್​​ನಲ್ಲಿ ಉಂಟಾದ ಸಾಫ್ಟ್​ವೇರ್ ಸಮಸ್ಯೆಯಿಂದಾಗಿ ಗುರುವಾರ ಬೆಳಗ್ಗೆ ವಿವಿಧ ವಿಮಾನ ನಿಲ್ದಾಣ(Airport)ಗಳಲ್ಲಿ 40 ನಿಮಿಷಗಳಿಗೂ ಹೆಚ್ಚು ಕಾಲ ವಿಮಾನಯಾನ ಸಂಸ್ಥೆಗಳು ಸಮಸ್ಯೆಯನ್ನು ಎದುರಿಸಬೇಕಾಯಿತು. ಕೇವಲ ಭಾರತದಲ್ಲಿ ಮಾತ್ರವಲ್ಲ ಯುರೋಪ್​ನಲ್ಲಿ ಕೂಡ ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಲಾಯಿತು. ದೆಹಲಿ, ಮುಂಬೈ ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿ ಇಂಡಿಗೋ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ವಿಮಾನಗಳ ಹಾರಾಟದ ಪರಿಣಾಮ ಬೀರಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಸಾಫ್ಟ್‌ವೇರ್ ವ್ಯತ್ಯಯದಿಂದಾಗಿ ಚೆಕ್-ಇನ್ ವ್ಯವಸ್ಥೆಗಳು…

Read More

ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಪೈಕಿ ಯಾರು ಶ್ರೀಮಂತರು? ಇಲ್ಲಿದೆ ವಿವರ – Kannada News | Vijay Deverakonda and Rashmika Mandanna Wedding: Net Worth, Assets and Udaipur Ceremony Details

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಫೆಬ್ರವರಿ 26ರಂದು ಮದುವೆ ಆಗೋದು ಬಹುತೇಕ ಖಚಿತ ಆಗಿದೆ. ಅವರ ಆಮಂತ್ರಣಪತ್ರ ವೈರಲ್ ಆಗಿ ಗಮನ ಸೆಳೆದಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಉದಯಪುರದಲ್ಲಿ ಮದುವೆ ನಡೆಯಲಿದೆಯಂತೆ. ಆದರೆ, ಯಾವ ಜಾಗದಲ್ಲಿ ವಿವಾಹ ನಡೆಯಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಹೀಗಿರುವಾಗಲೇ ದಂಪತಿಗಳ ಒಟ್ಟೂ ಆಸ್ತಿ ಎಷ್ಟು ಎಂಬ ವಿಷಯದ ಬಗ್ಗೆ ಚರ್ಚೆ ನಡೆದಿದೆ. ವಿಜಯ್ ದೇವರಕೊಂಡ ಅವರು ಕಷ್ಟದಿಂದ ಸಿನಿಮಾ ರಂಗಕ್ಕೆ ಬಂದವರು. ಈಗ ಅವರು ತಮ್ಮದೇ…

Read More

Viral: ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ಮೊದಲ ವಾರದ ತನ್ನ ಖರ್ಚು ವೆಚ್ಚ ಹಂಚಿಕೊಂಡ ವ್ಯಕ್ತಿ – Kannada News | Bengaluru: Man reveals his one week expenses in Bengaluru

ಬೆಂಗಳೂರು, ಫೆಬ್ರವರಿ 19: ಓದು ಮುಗಿಯುತ್ತಿದ್ದಂತೆ ಬೆಂಗಳೂರಿನತ್ತ (Bengaluru) ಹೆಜ್ಜೆ ಹಾಕುವವರೇ ಹೆಚ್ಚು. ಇಲ್ಲಿ ಒಂದೊಳ್ಳೆ ಕೆಲಸ ಗಿಟ್ಟಿಸಿಕೊಂಡು ಸೆಟಲ್ ಆಗಬೇಕೆನ್ನುವ ಕನಸು ಅನೇಕರದ್ದು. ಆದರೆ ಈ ದುಬಾರಿ ದುನಿಯಾದಲ್ಲಿ ಕೈಯಲ್ಲಿ ಎಷ್ಟು ದುಡ್ಡಿದ್ರು ಸಾಲದು. ಇದೇ ರೀತಿ ಅನುಭವ ವ್ಯಕ್ತಿಯೊಬ್ಬರಿಗೆ ಆಗಿದೆ. ಬೆಂಗಳೂರಿಗೆ ಬಂದ ಒಂದೇ ವಾರಕ್ಕೆ ತಮ್ಮ ಖರ್ಚು ವೆಚ್ಚಗಳನ್ನು ಬಹಿರಂಗ ಪಡಿಸಿದ್ದಾರೆ. ತಿಂಗಳ ಬಾಡಿಗೆ 18 ಸಾವಿರ, ಏಳು ದಿನದ ಊಟಕ್ಕೆ ಸರಿಸುಮಾರು 12 ಸಾವಿರ ರೂ ಖರ್ಚು ಆಯ್ತು ಎಂದು ಹೇಳಿದ್ದಾರೆ….

Read More

ಒಕ್ಕಲಿಗರಿಗೆ ಅವಕಾಶ ಸಿಕ್ಕಿದೆ, ದಲಿತರು, ಅಲ್ಪಸಂಖ್ಯಾತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ – Kannada News | Former Minister KN Rajanna Questions Lack of Dalit and Minority Chief Ministers

ತುಮಕೂರು, ಫೆ.19: ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಅವರು ಕರ್ನಾಟಕದಲ್ಲಿ ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು ಎಂದು ಮತ್ತೊಮ್ಮೆ ಹೇಳಿಕೆಯನ್ನು ನೀಡಿದ್ದಾರೆ. ಈ ವಿಷಯದಲ್ಲಿ ಈಗಾಗಲೇ ಮಹದೇವಪ್ಪ ಅವರು ಮಾತನಾಡಿದ್ದು, ಇತರೆ ರಾಜ್ಯಗಳ ಉದಾಹರಣೆಗಳನ್ನು ನೀಡಿ ದಲಿತ ಸಿಎಂ ಸಾಧ್ಯತೆಯನ್ನು ಸಮರ್ಥಿಸಿದ್ದಾರೆ ಎಂದು ರಾಜಣ್ಣ ನೆನಪಿಸಿಕೊಂಡರು. ದಲಿತರು, ಅಲ್ಪಸಂಖ್ಯಾತರು, ವಾಲ್ಮೀಕಿ ಸಮುದಾಯದವರು ಅಥವಾ ಬಲಿಜ ಸಮುದಾಯದವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಲ್ಲವೇ ಎಂದು ರಾಜಣ್ಣ ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ವಿವರಿಸಿದ ರಾಜಣ್ಣ, ಕಾಂಗ್ರೆಸ್…

Read More

ಬಗೆದಷ್ಟು ಬಯಲಾಗ್ತಿದೆ ಪಿಲಿಕುಳದ ಅಕ್ರಮ: ಕಾಳಿಂಗ ಸರ್ಪದ ಹೆಸರಲ್ಲೂ ಭ್ರಷ್ಟಾಚಾರ? – Kannada News | Pilikula Scam Deepens: Corruption Alleged Even in the Name of King Cobra

ಮಂಗಳೂರು, ಫೆಬ್ರವರಿ 19: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಆ ಬೆನ್ನಲ್ಲೇ ಕಾಳಿಂಗ ಸರ್ಪದ ಹೆಸರಲ್ಲೂ ಇಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕಾಳಿಂಗ ಸರ್ಪ ಸಂತಾನಾಭಿವೃದ್ಧಿ ಕೇಂದ್ರ ತೆರೆದು 2 ಕೋಟಿಗೂ ಅಧಿಕ ಅನುದಾನ ಪಡೆದಿದ್ದ ಇಲ್ಲಿಯ ಆಡಳಿತ ಅವುಗಳ ಪಾಲನೆ ಮರೆತಿದೆ. ಹೀಗಾಗಿ ಸರಿಯಾಗಿ ಆಹಾರ, ಆರೈಕೆ ಸಿಗದೆ ಅವು ಸಾವನ್ನಪ್ಪಿವೆ ಎಂದು ದೂರಲಾಗಿದೆ. 2022ರ ಜುಲೈನಲ್ಲಿ ಮೊಟ್ಟೆಯೊಡೆದು 38…

Read More