ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ: ಗಣಂಗೂರು ಟೋಲ್ ಪ್ಲಾಜಾ ಬಳಿ ಹೈಡ್ರಾಮ – Kannada News | High Drama at Gananguru Toll Plaza: Farmers Protest Against Toll Collection on Agricultural Vehicles on Bengaluru Mysuru Expressway
ರೈತರಿಂದ ಪ್ರತಿಭಟನೆImage Credit source: Tv9 Kannada ಮಂಡ್ಯ, ಜೂನ್ 23: ಕೃಷಿ ಉತ್ಪನ್ನಗಳ ವಾಹನಗಳಿಗೆ ಟೋಲ್ ಹಾಕುತ್ತಿರುವ ಆರೋಪ ಹಿನ್ನೆಲೆ ಮಂಡ್ಯ ಜಿಲ್ಲೆಯ ಗಣಂಗೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯ ಟೋಲ್ ಪ್ಲಾಜಾ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ಕಾನೂನು ಬಾಹಿರವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ರೈತರು, ಎಕ್ಸ್ಪ್ರೆಸ್ ವೇ ಮಾಡಲು ರೈತರು ಭೂಮಿ ಕೊಟ್ಟಿದ್ದರು. ಈಗ ಅದೇ ರೈತರ ಉತ್ಪನ್ನಗಳ ವಾಹನಕ್ಕೂ ಟೋಲ್ ಕಟ್ಟಿ ಅಂದ್ರೆ ಹೇಗೆ ಎಂದು ಆಕ್ರೋಶ ಹೊರಹಾಕಿದ್ದಾರೆ….