Headlines

ರಾಯಚೂರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ದಿಗಿಲು ಹುಟ್ಟಿಸುವ ದೃಶ್ಯ!

ರಾಯಚೂರು, ಮಾ.18: ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಂಭವಿಸಿದ ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುತ್ತಿತ್ತು. ಈ ವೇಳೆ ಜಮೀನಿನಲ್ಲಿದ್ದ ಎತ್ತರದ ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ…

Read More

ಪ್ರತ್ಯೇಕ ಪ್ರಕರಣ: ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಇಬ್ಬರು ಯುವಕರು ಆತ್ಮಹತ್ಯೆ

ವಿಜಯಪುರ/ಚಿಕ್ಕಮಗಳೂರು, ಏಪ್ರಿಲ್​​ 04: ಹಳ್ಳಿಗಳಲ್ಲಿ ನೆಲೆಸಿರುವವರಿಗೆ ಅದರಲ್ಲೂ ಕೃಷಿಕ ಯುವಕರಿಗೆ ಮದುವೆಗೆ ಹೆಣ್ಣು ಸಿಗೋದೇ ಕಷ್ಟ ಎಂಬ ಸ್ಥಿತಿ ಸದ್ಯ ಸಮಾಜದಲ್ಲಿದೆ. ಇದೇ ಕಾರಣಕ್ಕೆ ಅದೆಷ್ಟೋ ಯುವಕರಿಗೆ ಈವರೆಗೂ ಕಂಕಣ ಭಾಗ್ಯವೇ ಕೂಡಿಬರುತ್ತಿಲ್ಲ. ಈ ನಡುವೆ ವಿವಾಹಕ್ಕೆ ಹುಡುಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮಾನಸಿಕವಾಗಿ ತೀವ್ರ ನೊಂದು ಯುವಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ರಾಜ್ಯದಲ್ಲಿ ನಡೆದಿವೆ. ವಿಜಯಪುರದಲ್ಲಿ ಕುರಿಗಾಹಿ ನೇಣಿಗೆ ಶರಣಾಗಿದ್ದರೆ ಇತ್ತ ಚಿಕ್ಕಮಗಳೂರಲ್ಲಿ ಕುಡಿದ ಮತ್ತಿನಲ್ಲಿ ಮತ್ತೋರ್ವ ಪ್ರಾಣ ಕಳೆದುಕೊಂಡಿದ್ದಾನೆ. ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ…

Read More

ಓರ್ವಳ ನಂಬಿಸಿ ದೈಹಿಕ ಸಂಪರ್ಕ, ಈಗ ಮತ್ತೊಬ್ಬಳ ಜೊತೆ ನಿಶ್ಚಿರ್ತಾರ್ಥ: ಯುವತಿ ಬಾಳಲ್ಲಿ ಕಾಂಗ್ರೆಸ್​​ ನಾಯಕನ ಚೆಲ್ಲಾಟ? – Kannada News | Former T. Narasipura Municipal President Accused of Love, Physical Relationship and Dhoka

ಮೈಸೂರು, ಮೇ 1: ಟಿ. ನರಸೀಪುರ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್​​ ನಾಯಕ ಮದನ್ ರಾಜ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪದಡಿ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳು ಹಲವು ವರ್ಷಗಳಿಂದ ತನ್ನನ್ನು ಪ್ರೀತಿಸುತ್ತಿದ್ದ ಮದನ್ ರಾಜ್ ದೈಹಿಕ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿರೋದಾಗಿ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮದನ್​​ ರಾಜ್​​ ಈಗ ಮತ್ತೋರ್ವ ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಒಪ್ಪುತ್ತಿಲ್ಲ ಎಂದು ನೆಪ ಹೇಳಿ, ಇಬ್ಬರು ಜೊತೆಯಾಗಿ…

Read More

Karnataka Weather Forecast: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು, ಮೇ 30: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ. ಸಾರ್ವಜನಿಕರು ಹಾಗೂ ರೈತರು ಸಿಡಿಲು ಮತ್ತು ಗಾಳಿಗೆ ಎಚ್ಚರಿಕೆ ವಹಿಸಿ….

Read More

ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ಬಗ್ಗೆ ಭಾರತ ತೀವ್ರ ಕಳವಳ

ನವದೆಹಲಿ, ಏಪ್ರಿಲ್ 10: ಲೆಬನಾನ್ ಮೇಲಿನ ಇಸ್ರೇಲ್ ದಾಳಿಯಿಂದ (Israel Attack) ಜನರ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಸ್ರೇಲ್ ದಾಳಿಯಿಂದಾಗಿ ಲೆಬನಾನ್‌ನಲ್ಲಿ ಹೆಚ್ಚುತ್ತಿರುವ ಜನರ ಸಾವಿನ ಸಂಖ್ಯೆಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಕದನವಿರಾಮದ ನಂತರ ಲೆಬನಾನ್‌ನಲ್ಲಿ ಇಸ್ರೇಲ್ ತನ್ನ ಅತ್ಯಂತ ವಿನಾಶಕಾರಿ ದಾಳಿಗಳನ್ನು ನಡೆಸಿತ್ತು. ಈ ದಾಳಿಯಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು ಮತ್ತು 1,150 ಜನರು ಗಾಯಗೊಂಡಿದ್ದರು. ಈ…

Read More

Ashada Masa: ಆಷಾಢ ಮಾಸದಲ್ಲಿ ಚಿನ್ನದ ಬೆಲೆ ಕುಸಿಯುವುದೇಕೆ? ಈ ಸಮಯದಲ್ಲಿ ಖರೀದಿಸುವುದು ಅಶುಭವೇ? – Kannada News | Gold and Silver Prices Plummet in Aashadha: Seize the Low Price Opportunity

ಆಷಾಢ ಮಾಸದಲ್ಲಿ ಚಿನ್ನದ ಬೆಲೆImage Credit source: Pinterest ಭಾರತೀಯ ಆರ್ಥಿಕತೆ ಮತ್ತು ಸಂಸ್ಕೃತಿಯಲ್ಲಿ ಹಳದಿ ಲೋಹಕ್ಕೆ (ಚಿನ್ನ) ಯಾವಾಗಲೂ ವಿಶೇಷ ಹಾಗೂ ಪವಿತ್ರವಾದ ಸ್ಥಾನವಿದೆ. ಆದರೆ ಆಷಾಢ ಬಂತು ಅಂದ್ರೆ ಸಾಕು ಚಿನ್ನ, ಬೆಳ್ಳಿ ದರಗಳು ಸಾಮಾನ್ಯವಾಗಿ ಕಡಿಮೆ ಆಗುತ್ತದೆ.  ಆಷಾಢ ಮಾಸ ಜುಲೈ 15 ರಿಂದ ಆರಂಭವಾಗುತ್ತಿದೆ. ಸಾಮಾನ್ಯವಾಗಿ ಈ ಮಾಸದಲ್ಲಿ ಯಾವುದೇ ರೀತಿಯ ಸಾಂಪ್ರದಾಯಿಕ ಶುಭ ಸಂದರ್ಭಗಳು ಬರುವುದಿಲ್ಲ. ಮದುವೆ, ಉಪನಯನ, ಗೃಹಪ್ರವೇಶದಂತಹ ಯಾವುದೇ ದೊಡ್ಡ ಹಬ್ಬ ಹರಿದಿನಗಳು ಅಥವಾ ಮಂಗಲ ಕಾರ್ಯಗಳು…

Read More

ಗೋಕರ್ಣ ಮಹಾಗಣಪತಿ ದೇವರ ಸ್ಪರ್ಶ ದರ್ಶನ, ಪೂಜೆಗೆ ನಿರ್ಬಂಧ: ಮೂರ್ತಿ ಸಂರಕ್ಷಣೆಗೆ ದತ್ತಿ ಇಲಾಖೆ ಕ್ರಮ – Kannada News | Touch Darshan Restricted at Gokarna Temple Mahaganapathi as Idol Shows Signs of Wear

ಕಾರವಾರ, ಜುಲೈ 24: ಗೋಕರ್ಣದ ಪ್ರಸಿದ್ಧ ಮಹಾಬಲೇಶ್ವರ ದೇಗುಲದ ಮಹಾಗಣಪತಿ ಗುಡಿಯಲ್ಲಿ ಇನ್ನುಮುಂದೆ ಭಕ್ತರು ಮೂರ್ತಿಯನ್ನು ಸ್ಪರ್ಶಿಸಿ ದರ್ಶನ ಪಡೆಯುವಂತಿಲ್ಲ. ಅಲ್ಲದೆ, ನೇರವಾಗಿ ಪೂಜೆ, ಪಂಚಾಮೃತ ಅಭಿಷೇಕ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಗಣಪತಿ ಮೂರ್ತಿಯಲ್ಲಿ ಸವಕಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತೆ ಸುಧಾ ತಳವಾರ ತಿಳಿಸಿದ್ದಾರೆ. ಸಾವಿರಾರು ಭಕ್ತರು ಪ್ರತಿದಿನ ಸ್ಪರ್ಶ ದರ್ಶನ ಹಾಗೂ ಅಭಿಷೇಕ ನಡೆಸುತ್ತಿದ್ದ ಪರಿಣಾಮ ಮೂರ್ತಿಗೆ ಸವಕಳಿ ಉಂಟಾಗಿದ್ದು,…

Read More

ಪ್ಲೇಆಫ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು? – Kannada News | How many matches to win rcb women to qualify Playoffs 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್​ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್​ ರೇಟ್​ನೊಂದಿಗೆ. Source link

Read More

ಕ್ಷೇತ್ರ ಪುನರ್ ವಿಂಗಡಣೆಯಾದರೆ ನಿಜಕ್ಕೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಾ? ಸ್ಥಾನಗಳ ಲೆಕ್ಕಾಚಾರ ಇಲ್ಲಿದೆ – Kannada News | Delimitation Became Flashpoint Between Centre And South Indian States what New Numbers says

ನವದೆಹಲಿ, ಏಪ್ರಿಲ್ 15: ಪ್ರಸ್ತಾವಿತ ಸೀಮಾ ನಿರ್ಣಯದ (Delimitation) ಕುರಿತಾದ ಚರ್ಚೆ ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ದಕ್ಷಿಣ ಭಾರತದ ರಾಜ್ಯಗಳಿಂದ ಹೆಚ್ಚುತ್ತಿರುವ ಪ್ರತಿರೋಧವನ್ನು ಎದುರಿಸುತ್ತಿದೆ. ಕರ್ನಾಟಕ, ತೆಲಂಗಾಣ, ತಮಿಳುನಾಡು ಕ್ಷೇತ್ರ ಮರು ವಿಂಗಡಣೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಇದರಿಂದ ತಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂಬ ಕಳವಳ ವ್ಯಕ್ತಪಡಿಸಿವೆ. ಈ ಸೀಮಾ ನಿರ್ಣಯ ಜಾರಿಯಾದರೆ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಆಗುವ ಪರಿಣಾಮಗಳೇನು? ಜನಸಂಖ್ಯೆ ಆಧಾರಿತ ಸೀಮಾ ನಿರ್ಣಯವು ಉತ್ತರದ ರಾಜ್ಯಗಳಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ದಕ್ಷಿಣದ ರಾಜ್ಯಗಳ…

Read More

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ – Kannada News | Two Brothers Drown in Javagal Lake While Washing Sheep

ಹಾಸನ, ಏಪ್ರಿಲ್​ 16: ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ (drowning) ಸಾವನ್ನಪ್ಪಿರುವಂತಹ (death) ದಾರುಣ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ನಡೆದಿದ್ದೇನು? ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು…

Read More