ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 19ರ ದಿನಭವಿಷ್ಯ

ಮೂರು ಅಥವಾ ಐವರು ಮುತ್ತೈದೆಯರಿಗೆ ಈ ದಿನ ಸಂಜೆಯ ವೇಳೆ ಅರಿಶಿನ- ಕುಂಕುಮ, ಕುಪ್ಪಸದ ಕಣದೊಂದಿಗೆ ನೀಡಿ. ಮನೆ ಅಥವಾ ಸೈಟು ಖರೀದಿ ಮಾಡಬೇಕು ಎಂಬ ಪ್ರಯತ್ನದಲ್ಲಿ ಇದ್ದಲ್ಲಿ, ಸಾಲ ತೀರಿಸುವ ಪ್ರಯತ್ನ ಮಾಡುತ್ತಿದ್ದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ.

 

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಜೊತೆಯಲ್ಲಿ ಇರುವ ಕುಟುಂಬ ಸದಸ್ಯರು ಅಥವಾ ಸಹೋದ್ಯೋಗಿಗಳು ಏನು ಆಲೋಚನೆ ಮಾಡುತ್ತಾರೆ ಹಾಗೂ ಆಯಾ ಸನ್ನಿವೇಶಕ್ಕೆ ತಕ್ಕಂತೆ ನಿರ್ಧಾರ ಮಾಡುವುದನ್ನು ಗಂಭೀರವಾಗಿ ಪರಿಗಣಿಸಿ. ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದಲ್ಲಿ ಆದಾಯ ಹೆಚ್ಚಳ ಆಗಲಿದೆ. ಹೊಸದಾದ ಆದಾಯ ಮೂಲಗಳು ತೆರೆದುಕೊಳ್ಳಲಿವೆ. ಶ್ವಾಸಕೋಶದ ಸಮಸ್ಯೆ ಇರುವವರು ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳುವುದಕ್ಕೆ ಆದ್ಯತೆಯನ್ನು ನೀಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಮನೆ ಅಥವಾ ಜಮೀನಿಗೆ ಸಂಬಂಧಿಸಿದ ಕಾಗದಪತ್ರ/ದಾಖಲೆಗಳನ್ನು ಹೊಂದಿಸಿಕೊಳ್ಳುತ್ತಾ ಇದ್ದಲ್ಲಿ ನಿಮಗೆ ಮತ್ತೊಬ್ಬರ ಸಹಾಯದಿಂದ ದೊರೆಯಲಿದೆ. ಹಳೇ ಪರಿಚಯದ ವ್ಯಕ್ತಿಯೊಬ್ಬರು ಈ ಹಿಂದೆ ನೀವು ಮಾಡಿಕೊಟ್ಟ ಕೆಲಸಕ್ಕೆ ಪ್ರತಿಯಾಗಿ ಉಡುಗೊರೆ ಅಥವಾ ಹಣವನ್ನು ನೀಡಬಹುದು. ಟೈಲ್ಸ್- ಗ್ರಾನೈಟ್ ಹಾಕುವಂಥ ಕೆಲಸ ಮಾಡುವವರಿಗೆ ದೊಡ್ಡ ಮಟ್ಟದ ಕೆಲಸವೊಂದು ಹುಡುಕಿಕೊಂಡು ಬರುವ ಯೋಗ ಇದ್ದು, ಆದಾಯವೂ ಜಾಸ್ತಿಯಾಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ಸಂಬಂಧಿಕರ ಮನೆಯಲ್ಲಿನ ಕಾರ್ಯಕ್ರಮಗಳಿಗೆ ಸ್ವಲ್ಪ ಮುಂಚಿತವಾಗಿಯೇ ಬಂದು ಸಹಾಯ ಮಾಡುವಂತೆ ನಿಮ್ಮನ್ನು ಕೇಳಿಕೊಳ್ಳಬಹುದು. ಇನ್ನು ಮನೆಗೆ ಟೀವಿ, ಸ್ಪೀಕರ್ ಈ ರೀತಿಯಾದದ್ದನ್ನು ಖರೀದಿಸಬೇಕು ಎಂದು ತೀರ್ಮಾನವನ್ನು ಮಾಡಲಿದ್ದೀರಿ. ಅಧ್ಯಾತ್ಮ ವಿಚಾರಗಳಲ್ಲಿಯೂ ತೊಡಗಿಕೊಳ್ಳುವ ಯೋಗ ಬರಲಿದೆ. ಅಧ್ಯಾತ್ಮ ಕಾರ್ಯಕ್ರಮಗಳಿಗೆ ದೇಣಿಗೆ ಕೇಳಿಕೊಂಡು ಬಂದಲ್ಲಿ ನಿಮ್ಮಿಂದ ಸಾಧ್ಯವಾದಷ್ಟು/ ನಿಮ್ಮಿಂದ ಸಾಧ್ಯವಾದದ್ದನ್ನು ನೀಡಿ.

ಲೇಖನ- ಸ್ವಾತಿ ಎನ್.ಕೆ.

 

Source link

ಆಪರೇಷನ್ ಸಿಂದೂರ್ ಕುರಿತು ಸಿನಿಮಾ ಮಾಡಲಿರುವ ವಿವೇಕ್ ಅಗ್ನಿಹೋತ್ರಿ – Kannada News | Director Vivek Agnihotri to make a film on Operation Sindoor

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರು ಸತ್ಯ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡುವ ಮೂಲಕ ಫೇಮಸ್ ಆಗಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’, ‘ದಿ ವ್ಯಾಕ್ಸಿನ್ ವಾರ್’, ‘ದಿ ಬೆಂಗಾಲ್ ಫೈಲ್ಸ್’ ಮುಂತಾದ ಸಿನಿಮಾಗಳನ್ನು ಅವರು ಮಾಡಿದ್ದಾರೆ. ಈಗ ಮತ್ತೊಂದು ನೈಜ ಘಟನೆ ಆಧಾರಿತ ಸಿನಿಮಾಗೆ ಅವರು ಸಜ್ಜಾಗುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ‘ಆಪರೇಷನ್ ಸಿಂದೂರ್’ (Operation Sindoor) ಕುರಿತು ಅವರು ಸಿನಿಮಾ ಮಾಡುತ್ತಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅವರು ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

ಪಾಕ್ ಉಗ್ರರು ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಪಹಲ್ಗಾಮ್​​ನಲ್ಲಿ ಗುಂಡಿನ ದಾಳಿ ಮಾಡಿದ್ದರು. ಅದರಿಂದ ಅಮಾಯಕರ ಪ್ರಾಣಿಹಾನಿ ಆಗಿತ್ತು. ಆ ಘಟನೆಗೆ ಪ್ರತ್ಯುತ್ತರ ನೀಡಲು ಭಾರತವು ‘ಆಪರೇಷನ್ ಸಿಂದೂರ್’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿತು. ಪಾಕ್ ಉಗ್ರರ ಅಡುಗುತಾಣಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿತು. ಆ ಘಟನೆಗಳನ್ನು ಕೇಂದ್ರವಾಗಿ ಇಟ್ಟುಕೊಂಡು ಸಿನಿಮಾ ಸಿದ್ಧವಾಗಲಿದೆ.

‘ಆಪರೇಷನ್ ಸಿಂದೂರ್’ ಸಿನಿಮಾಗೆ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಟಿ ಸಿರೀಸ್’ ಬಂಡವಾಳ ಹೂಡಲಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ಈ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಅವರ ಜೊತೆಗೆ ವಿವೇಕ್ ಅಗ್ನಿಹೋತ್ರಿ ಅವರ ‘ಐ ಆ್ಯಮ್ ಬುದ್ಧ ಪ್ರೊಡಕ್ಷನ್ಸ್’ ಸಂಸ್ಥೆ ಕೂಡ ನಿರ್ಮಾಣದಲ್ಲಿ ಕೈಜೋಡಿಸಲಿದೆ ಎಂಬ ಸುದ್ದಿ ಹಬ್ಬಿದೆ.

ಸದ್ಯಕ್ಕೆ ಈ ಮಾಹಿತಿ ಕೇವಲ ಅಂತೆ-ಕಂತೆಗಳ ಹಂತದಲ್ಲಿ ಇದೆ. ಟಿ-ಸಿರೀಸ್ ಕಡೆಯಿಂದಾಗಿ, ವಿವೇಕ್ ಅಗ್ನಿಹೋತ್ರಿ ಅವರ ಕಡೆಯಿಂದಾಗಲಿ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಹಾಗಾಗಿ ಸಿನಿಮಾದಲ್ಲಿ ಯಾವೆಲ್ಲ ಕಲಾವಿದರು ನಟಿಸುತ್ತಾರೆ? ಶೂಟಿಂಗ್ ಯಾವಾಗ ಆರಂಭ ಆಗಲಿದೆ ಎಂಬಿತ್ಯಾದಿ ಮಾಹಿತಿ ಕೂಡ ಸದ್ಯಕ್ಕೆ ಲಭ್ಯವಾಗಿಲ್ಲ.

ಇದನ್ನೂ ಓದಿ: ‘ಧುರಂಧರ್’ ನಿರ್ದೇಶಕ ದೇವರ ಮಗ: ಸಿಕ್ಕಾಪಟ್ಟೆ ಹೊಗಳಿದ ವಿವೇಕ್ ಅಗ್ನಿಹೋತ್ರಿ

ವಿವೇಕ್ ಅಗ್ನಿಹೋತ್ರಿ ಅವರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿತ್ತು. ಆದರೆ ನಂತರದ ಸಿನಿಮಾಗಳು ಅವರ ಕೈ ಹಿಡಿಯಲಿಲ್ಲ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಲಿಲ್ಲ. ‘ದಿ ಬೆಂಗಾಲ್ ಫೈಲ್ಸ್’ ಮೇಲೆ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಈ ಸಿನಿಮಾ ಕೂಡ ಸೋತಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್ – Kannada News | Dog spotted standing on classroom table at IIT Bombay Video goes Viral

ಮುಂಬೈ, ಫೆಬ್ರವರಿ 18: IIT ಬಾಂಬೆಯಲ್ಲಿ ವಿದ್ಯಾರ್ಥಿಗಳ ಜೊತೆ ಇನ್ನೊಬ್ಬರು ವಿಶೇಷ ಅತಿಥಿ ಪಾಠ ಕೇಳಲು ಬಂದಿದ್ದರು. ನಾಯಿಯೊಂದು ಐಐಟಿ ಬಾಂಬೆಯ ಕ್ಲಾಸ್​​ರೂಂನೊಳಗೆ ಬಂದು ಟೇಬಲ್ ಹತ್ತಿ ನಿಂತಿರುವ ವಿಡಿಯೋ ವೈರಲ್ (Video Viral) ಆಗಿದೆ. ಪಿಯೂಷ್ ಜೈಸ್ವಾಲ್ ಎಂಬುವವರು Instagramನಲ್ಲಿ ಹಂಚಿಕೊಂಡಿರುವ ವಿಡಿಯೋವನ್ನು ತರಗತಿಯ ಸಮಯದಲ್ಲಿ ಚಿತ್ರೀಕರಿಸಲಾಗಿದೆ. ಈ ವೇಳೆ ನಾಯಿ ಟೇಬಲ್ ಮೇಲೆ ಹತ್ತಿ ನಿಂತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎ ಖಾತಾ ವರ್ಗಾವಣೆಗೆ ಆನ್​ಲೈನ್​​ನಲ್ಲಿ ಹಣ ಪಾವತಿಸುವ ಮುನ್ನ ಎಚ್ಚರ: ಎ ಖಾತಾ ಮಾಡಿಸುವವರು ಇದನ್ನ ಓದಲೇಬೇಕು – Kannada News | Bangaluru: B Khata to A Khata Online: Payment Pending Glitches Worry Property Owners

ಬೆಂಗಳೂರು, ಫೆಬ್ರವರಿ 18: ಸಾರ್ವಜನಿಕರು ಪಾಲಿಕೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇತ್ತೀಚೆಗೆ ಬಿ ಖಾತಾ (B Khata) ಹೊಂದಿರುವ ಆಸ್ತಿ ಮಾಲೀಕರು ಎ ಖಾತಾಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಆನ್‌ಲೈನ್‌ ವ್ಯವಸ್ಥೆ ಕಲ್ಪಿಸಿದೆ. ಆದರೆ ಇದೇ ಆನ್​​​ಲೈನ್​​ ವ್ಯವಸ್ಥೆಯಲ್ಲಿ ಸಮಸ್ಯೆಗಳು ಉಂಟಾಗಿವೆ. ಆಸ್ತಿ ಮಾಲೀಕರು ಖಾತಾ ವರ್ಗಾವಣೆಗೆ ಲಕ್ಷಾಂತರ ರೂ ಹಣ ಪಾವತಿಸಿದ ಬಳಿಕವೂ ವೆಬ್​​ಸೈಟ್​ನಲ್ಲಿ ಮಾತ್ರ ಪೆಂಡಿಂಗ್​ ತೋರಿಸುತ್ತಿದೆ. ಹೀಗಾಗಿ ಆಸ್ತಿ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರಿಗೆ ಜಿಬಿಎ ದೋಖಾ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಈ ಬಗ್ಗೆ ಟಿವಿ9 ಡಿಜಿಟಲ್​ ಕನ್ನಡಗೆ ಬೆಂಗಳೂರಿನ ಆಸ್ತಿ ಮಾಲೀಕರಾದ ಎಮ್. ಶ್ರೀನಿವಾಸ ಎಂಬುವವರು ತಮಗಾದ ಸಮಸ್ಯೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಗರದ ವಾರ್ಡ್ 161ರ ವ್ಯಾಪ್ತಿಗೆ ಬರುವ ಹೊಸಕೆರೆಹಳ್ಳಿಯಲ್ಲಿ ವಾಸವಾಗಿರುವ ಎಮ್. ಶ್ರೀನಿವಾಸ ಅವರು, ಅಲ್ಲಿ ಇರುವಂತಹ ಬಿ ಖಾತಾ ಸ್ವತ್ತಿನ ಮನೆಗೆ ಎ ಖಾತಾಗೆ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು.

ಆಸ್ತಿ ಮಾಲೀಕರಾದ ಎಮ್. ಶ್ರೀನಿವಾಸ ಟ್ವೀಟ್​​

ಈ ಸ್ವತ್ತು ಅವರ ಪತ್ನಿ ಸ್ವಾತಿ ಎನ್.ಕೆ. ಹೆಸರಿನಲ್ಲಿದ್ದು, ಕಳೆದ ಶುಕ್ರವಾರ ಅಂದರೆ ಫೆಬ್ರವರಿ 12ರಂದು ಒಟ್ಟು ಮೊತ್ತ ಒಂದು ಲಕ್ಷದ ಅರವತ್ತೇಳು ಸಾವಿರದ ಏಳು ನೂರಾ ಎಪ್ಪತ್ತೊಂದು ರೂಪಾಯಿ ಆನ್​​ಲೈನ್ ಮೂಲಕ ಪಾವತಿ ಮಾಡಿದ್ದಾರೆ. ಆದರೆ ಏಳು ದಿನಗಳ ನಂತರವೂ ಆ ಪಾವತಿಯು ಪೆಂಡಿಂಗ್ ಎಂಬ ಸ್ಟೇಟಸ್​ನಲ್ಲಿಯೇ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಮ್. ಶ್ರೀನಿವಾಸ ಅವರಿಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

ಇದನ್ನೂ ಓದಿ: ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ!

ಇನ್ನು ಲಕ್ಷಾಂತರ ರೂ ಹಣ ಮಾತ್ರ ಖಾತೆಯಿಂದ ಡೆಬಿಟ್ ಆಗಿದೆ. ಆದರೆ ಆ ಮೊತ್ತಕ್ಕೆ ಜಿಬಿಎ ಕಡೆಯಿಂದ ಯಾವುದೇ ರಸೀದಿ ಕೂಡ ಇವರಿಗೆ ತಲುಪಿಲ್ಲ. ಇಷ್ಟು ದೊಡ್ಡ ಮೊತ್ತ ಹೀಗೆ ಒಂದು ವಾರ ಕಳೆದರೂ ಯಾವ ಸ್ಥಿತಿಯಲ್ಲಿದೆ ಎಂಬುದು ಗೊತ್ತಾಗದೇ ಪರದಾಡಿದ್ದಾರೆ. ಇನ್ನು ಈ ಸಮಸ್ಯೆಯನ್ನು ಯಾರು ಬಗೆಹರಿಸುತ್ತಾರೆ ಎಂಬುವುದು ತಿಳಿಯದೇ ಕಂಗಾಲಾಗಿದ್ದಾರೆ.

ಇದನ್ನೂ ಓದಿ: BBMP Khata Services: ಎಲ್ಲ ಬಿ ಖಾತಾದಾರರಿಗೆ ಸಿಗಲಿದೆ ಎ ಖಾತಾ ಮಾನ್ಯತೆ: ಆಸ್ತಿ ಮಾಲೀಕರಿಗೆ ಸಂಪುಟ ಭರ್ಜರಿ ಗುಡ್ ನ್ಯೂಸ್

ಅವರ ವಾರ್ಡ್ ವ್ಯಾಪ್ತಿಯ ಎಆರ್​ಒ ಹಿಡಿದು, ಜಿಬಿಎ ಕೇಂದ್ರ ಕಚೇರಿ ತನಕ ಹೋದರೂ ಯಾವುದೇ ಪ್ರಯೋಜನವಾಗಿಲ್ಲ. ಪಾವತಿ ಮಾಡಿರುವ ಮೊತ್ತದ ಬಗ್ಗೆ ಆತಂಕಗೊಂಡಿದ್ದು, ದಯವಿಟ್ಟು ಸಮಸ್ಯೆಗೆ ಪರಿಹಾರ ತಿಳಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:38 pm, Wed, 18 February 26

Source link

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು – Kannada News | Minister ramalinga reddy Talks about Transport Employees Salary Hike And other matter after Meeting With CM

ಬೆಂಗಳೂರು, ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಮಗದ ಸಾರಿಗೆ ನೌಕರರು (Transport Employees) ನಾಳೆ ಬೆಂಗಳೂರು ಚಲೋ ಪ್ರತಿಭಟನೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಸಾರಿಗೆ ನೌಕರರ ಬೇಡಿಕೆಗಳನ್ನ ಕೊಂಚ ಈಡೇರಿಸಲು ಮುಂದಾಗಿದೆ. ಹೌದು..ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರ (Congress Government) ಸ್ವಲ್ಪ ಸಂದನೆ ಮಾಡಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮವಾಗಿ ನೌಕರರ ಬೇಡಿಕೆ ಈಡೇರಿಗೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ನು ಈ ಬಗ್ಗೆ ರಾಮಲಿಂಗಾ ರೆಡ್ಡಿ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ

Source link

ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ – Kannada News | Sathish Ninasam gets emotional while talking in The Rise of Ashoka movie event

ಸತೀಶ್ ನೀನಾಸಂ ಅಭಿನಯದ ‘ದಿ ರೈಸ್ ಆಫ್ ಅಶೋಕ’ (The Rise of Ashoka) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ಭಾಷೆಯಲ್ಲಿ ಕೂಡ ಈ ಸಿನಿಮಾ ರಿಲೀಸ್ ಆಗಲಿದೆ. ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸತೀಶ್ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದರು. ಈ ಸಿನಿಮಾ ಎಷ್ಟು ಸ್ಪೆಷಲ್ ಎಂಬುದನ್ನು ಅವರು ವಿವರಿಸಿದರು. ತೆಲುಗು ಮತ್ತು ತಮಿಳಿನ ವಿತರಕರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಮೂಡಿಬರಲು ಸಹಕರಿಸಿದ ಎಲ್ಲರಿಗೂ ಸತೀಶ್ ಅವರು ಧನ್ಯವಾದ ಅರ್ಪಿಸಿದರು. ರವಿಚಂದ್ರನ್, ದುನಿಯಾ ವಿಜಯ್, ಲೂಸ್ ಮಾದ ಯೋಗಿ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ವೇದಿಕೆ ಮೇಲೆ ಮಾತನಾಡುವಾಗ ಸತೀಶ್ ನೀನಾಸಂ (Sathish Ninasam) ಅವರು ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs NED: ಅಜೇಯ ತಂಡವಾಗಿ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟ ಟೀಂ ಇಂಡಿಯಾ – Kannada News | T20 World Cup: India Dominates Netherlands, Secures Super 8 Spot Unbeaten

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ 17 ರನ್​ಗಳ ಗೆಲುವು ದಾಖಲಿಸಿ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದವರೆಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ ಅಗ್ರಸ್ಥಾನ ಪಡೆದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶಿವಂ ದುಬೆ ಅವರ ಅರ್ಧಶತಕದ ನೆರವಿನಿಂದ 193 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡರೂ ಭಾರತದ ಬೌಲರ್​ಗಳ ಎದುರು ಹೋರಾಟದ ಪ್ರದರ್ಶನ ನೀಡಿ 176 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

Source link

ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ – Kannada News | Kodi mutt Dr Shivananda Shivayogi Rajendra Swamiji prediction about Karnataka CM Change

ದೇವನಹಳ್ಳಿ, (ಫೆಬ್ರವರಿ 18): ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್​ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ ರಾಜ್ಯ ರಾಜಕೀಯ, ರಾಜ್ಯ ಕಾಂಗ್ರೆಸ್ ಪಕ್ಷದ ಬಗ್ಗೆ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ.

ಇನ್ನು ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಅವರು, ನಾನು ಈ ಮೊದಲೇ ಹೇಳಿದ್ದೆ ಸಂಕ್ರಾಂತಿ ನಂತರ ಬಜೆಟ್ ಆಗುತ್ತೆ ಅಂತ. ಯುಗಾದಿ ನಂತರ ಅವರಾಗೆ ಅಧಿಕಾರ ಬಿಟ್ಟರೆ ಬದಲಾವಣೆ ಆಗುತ್ತೆ. ರಾಜಕಾರಣದಲ್ಲಿ ಸದ್ಯಕ್ಕೆ ಯಾವುದೇ ಪ್ರಾಬ್ಲಮ್ ಇಲ್ಲ. ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.

ನಾನು ಶಿವರಾತ್ರಿಗೆ ಕಾಶಿ ವಿಶ್ವನಾಥನ ದರ್ಶನಕ್ಕೆ ಹೋಗಿದ್ದೆ. ಪ್ರಯಾಗಕ್ಕೆ ಹೋಗಿದ್ದು, ಕರ್ನಾಟಕಕ್ಕೆ ಸುಖ ಶಾಂತಿ ಮಳೆ ಬೆಳೆಯಾಗಲಿ ಅಂತ ಪ್ರಾರ್ಥನೆ ಮಾಡಿದೆ. ಈ ವರ್ಷದಲ್ಲಿ ಕರ್ನಾಟಕ ರಾಜ್ಯಕ್ಕೆ ಮಳೆ ಬೆಳೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಗತ್ತಿನಾದ್ಯಂತೆ ಸಮಸ್ಯೆ ಇರಲಿದೆ. ಈ ಹಿಂದೆ ಆದಂತಹ ಅವಾಂತರಗಳಿಗಿಂತ ಹೆಚ್ಚಿನ ಹಾನಿ ಆಗುತ್ತೆ. ಯುದ್ಧ ಆಗುವ ಲಕ್ಷಣಗಳು ಸಹ ಇವೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು – Kannada News | India AI Impact Summit 2026 PM Modi and world leaders enjoys cultural displays at Bharat Mandapam

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ (PM Modi) ಅವರು AI ಶೃಂಗಸಭೆ ನಡೆಯುವ ಸ್ಥಳವಾದ ದೆಹಲಿಯ ಭಾರತ್ ಮಂಟಪಕ್ಕೆ ಆಗಮಿಸಿದ ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅವರು ಭಾರತ್ ಮಂಟಪದಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಬಿತ್ತರಿಸುವ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಬೇರೆ ದೇಶಗಳ ನಾಯಕರನ್ನು ಕರೆದುಕೊಂಡು ಹೋಗಿ ಸಾಂಸ್ಕೃತಿಕ ಕಲೆಯನ್ನು ವಿವರಿಸಿದ್ದಾರೆ. ಭಾರತವು ಫೆಬ್ರವರಿ 20ರವರೆಗೆ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸುತ್ತಿದೆ. ನಾಳೆ ಪ್ರಧಾನಿ ಮೋದಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ, ಕಝಕಿಸ್ತಾನ್ ಪ್ರಧಾನಿ ಓಲ್ಜಾಸ್ ಬೆಕ್ಟೆನೋವ್, ಫಿನ್ಲ್ಯಾಂಡ್ ಪ್ರಧಾನಿ ಪೆಟ್ಟೇರಿ ಓರ್ಪೊ, ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ, ಎಸ್ಟೋನಿಯಾ ಅಧ್ಯಕ್ಷ ಅಲರ್ ಕರಿಸ್ ಸೇರಿದ್ದಾರೆ.

ಪ್ರಧಾನಿ ಮೋದಿ ಮಾರಿಷಸ್ ಪ್ರಧಾನಿ ನವೀನ್​ಚಂದ್ರ ರಾಮ್ಗೂಲಮ್, ಭೂತಾನ್ ಪ್ರಧಾನಿ ತ್ಸೆರಿಂಗ್ ಟೋಬ್ಗೆ, ಸೀಶೆಲ್ಸ್ ಉಪಾಧ್ಯಕ್ಷ ಸೆಬಾಸ್ಟಿಯನ್ ಪಿಳ್ಳೆ, ನೆದರ್ಲ್ಯಾಂಡ್ಸ್ ಪ್ರಧಾನಿ ಡಿಕ್ ಸ್ಕಫ್, ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಮತ್ತು ಕ್ರೊಯೇಷಿಯಾದ ಪ್ರಧಾನಿ ಆಂಡ್ರೆಜ್ ಪ್ಲೆಂಕೋವಿಕ್ ಅವರನ್ನು ಕೂಡ ಸ್ವಾಗತಿಸಿದರು.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಚೀನಾದ ರೋಬೋಟ್ ಪ್ರದರ್ಶನ; ವಿವಾದಕ್ಕೆ ಕ್ಷಮೆ ಯಾಚಿಸಿದ ಗಾಲ್ಗೋಟಿಯಾಸ್ ವಿವಿ

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ, ಉಪಾಧ್ಯಕ್ಷರಾದ ಗಯಾನಾದ ಭರತ್ ಜಗದಿಯೊ ಮತ್ತು ಬೊಲಿವಿಯಾದ ಎಡ್ಮಂಡ್ ಲಾರಾ ಮೊಂಟಾನೊ ಜಾಗತಿಕ ಸಂಸ್ಥೆಗಳ ಪ್ರತಿನಿಧಿಯಾಗಿ ಆಗಮಿಸಿದ್ದರು.

ಭಾರತ್ ಮಂಟಪದಲ್ಲಿ ನಡೆದ ಉನ್ನತ ಮಟ್ಟದ ಸ್ವಾಗತಗಳ ಸರಣಿಯು ಕೃತಕ ಬುದ್ಧಿಮತ್ತೆ, ನಾವೀನ್ಯತೆ ಮತ್ತು ಡಿಜಿಟಲ್ ರೂಪಾಂತರದ ಕುರಿತು ಜಾಗತಿಕ ಸಹಕಾರವನ್ನು ಉತ್ತೇಜಿಸುವಲ್ಲಿ ಭಾರತದ ನಾಯಕತ್ವವನ್ನು ಎತ್ತಿ ತೋರಿಸಿತು. ಈ ಶೃಂಗಸಭೆಯಲ್ಲಿ ಭಾಗವಹಿಸುವ ನಾಯಕರು AI-ಚಾಲಿತ ಪರಿಹಾರಗಳು, ಆರ್ಥಿಕ ಬೆಳವಣಿಗೆ, ಸುಸ್ಥಿರ ಅಭಿವೃದ್ಧಿ ಮತ್ತು ತಂತ್ರಜ್ಞಾನ ಪಾಲುದಾರಿಕೆಗಳ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್

ಭಾರತವು ಫೆಬ್ರವರಿ 20ರವರೆಗೆ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸುತ್ತಿದೆ. ಸೋಮವಾರ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರಧಾನ ಮಂತ್ರಿ ಮೋದಿ ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ 2026 ಅನ್ನು ಉದ್ಘಾಟಿಸಿದರು.

ಜಾಗತಿಕ ದಕ್ಷಿಣದಲ್ಲಿ ಆಯೋಜಿಸಲಾದ ಮೊದಲ ಜಾಗತಿಕ AI ಸಭೆಯಾದ ಶೃಂಗಸಭೆಯಲ್ಲಿ 20ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು, 60 ಮಂತ್ರಿಗಳು ಮತ್ತು 500 ಜಾಗತಿಕ ನಾಯಕರು ಪಾಲ್ಗೊಂಡಿದ್ದಾರೆ. ಪ್ರಧಾನ ಮಂತ್ರಿ ಮೋದಿ ಫೆಬ್ರವರಿ 19ರಂದು ಉದ್ಘಾಟನಾ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:05 pm, Wed, 18 February 26

Source link

Exit mobile version