ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ – Kannada News | Karnataka Government orders Hikes transport employees salary after bengaluru Chalo

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಕೆಗಾಗಿ ಕರ್ನಾಟಕ ಸಾರಿಗೆ ನೌಕರರು (Karnataka Transport employees)  ನಾಳೆ (ಫೆಬ್ರವರಿ 18) ಬೆಂಗಳೂರು ಚಲೋ (Bengaluru Chalo) ಕೈಗೊಂಡಿದ್ದು, ಈ ಬಾರಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಲು ಮುಂದಾಗಿದೆ. ಹೌದು…ಈವರೆಗೂ ಸಾರಿಗೆ ನೌಕರರ ಹಿಂಬಾಕಿ ನೀಡುವಲ್ಲಿ ವಿಳಂಬ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿಂಬಾಕಿ ಪಾವತಿಗಾಗಿ ಬರೋಬ್ಬರಿ 1,239 ಕೋಟಿ ರೂಪಾಯಿ ಬಿಡುಗಡೆ ನಿರ್ಧರಿಸಿದೆ. ಜೊತೆಗೆ ವೇತನ ಪರಿಷ್ಕರಣೆಗೂ ಆದೇಶಿಸಿದೆ.

ನಾಳೆ(ಫೆಬ್ರವರಿ 18) ಪ್ರತಿಭಟನೆ ತೀವ್ರಗೊಳ್ಳುವ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಸಿಎಂ ಹಾಗೂ ಹಣಕಾಸು ಇಲಾಖೆ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ಅಂತಿಮವಾಗಿ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಮುಂದಾಗಿದೆ.

ಇದನ್ನೂ ನೋಡಿ: KSRTC BMTC Employees Strike: ನಾಳೆ ಸಾರಿಗೆ ಬಸ್ ಇರೋದಿಲ್ವಾ? ಹೇಗಿರುತ್ತೆ ಮುಷ್ಕರ?

ಸಾರಿಗೆ ನಿಗಮಗಳ ಸಿಬ್ಬಂದಿಗೆ 26 ತಿಂಗಳ ಹಿಂಬಾಕಿ ನೀಡಲು ನಿರ್ಧಾರ ಮಾಡಿದೆ. ಹಾಗೇ 38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡಲು ನಿರ್ಧರಿಸಿದೆ. ಇನ್ನು 2024ರ ಜನವರಿ 1ರಿಂದ ವೇತನ ಪರಿಷ್ಕೃತ ಆಗಬೇಕಿತ್ತು. ಆದ್ರೆ, 2025ರ ಮಾರ್ಚ್ 1ರಿಂದ ವೇತನ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ 1271.92 ಕೋಟಿ ರೂಪಾಯಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಆದೇಶದಲ್ಲೇನಿದೆ?

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ 01.01.2021ರಿಂದ 28.02.2023ರವರೆಗೆ ಒಟ್ಟು 26 ತಿಂಗಳ ಹಿಂಬಾಕಿ ಮೊತ್ತ ರೂ.1271.92 ಕೋಟಿಗಳನ್ನು ಪಾವತಿಸಲು ಅನುಮೋದನೆ ನೀಡಿ ಆದೇಶಿಸಿದೆ. ಮುಂದುವರೆದು, ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ (ಪೂರ್ವ ಕಿಂಕೋ ನೌಕರರು ಸೇರಿದಂತೆ) ಮೂಲವೇತನವನ್ನು ದಿನಾಂಕ 01.04.2025 ರಿಂದ ಜಾರಿಗೆ ಬರುವಂತೆ ಶೇಕಡಾವಾರು ಎಷ್ಟು ಪ್ರಮಾಣದಲ್ಲಿ ಪರಿಷ್ಕರಿಸುವ ಕುರಿತು ಕಾರ್ಮಿಕ ಸಂಘಟನೆಗಳ ಜೊತೆ ಚರ್ಚಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಹ ಆದೇಶಿಸಿದೆ. ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ:ಆಇ 135 ವೆಚ್ಚ-11/2023, ದಿನಾಂಕ:18.02.2026 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:55 pm, Wed, 18 February 26

Source link

ರಾತ್ರಿ 11 ಆದ್ರೂ ನಿದ್ದೆ ಬರಲ್ವಾ? ಹಾಗಿದ್ರೆ ಡಯಟ್, ವ್ಯಾಯಾಮ ಏನು ಮಾಡ್ಬೇಡಿ ಎಲ್ಲಾ ವ್ಯರ್ಥ! – Kannada News | How Late Sleep Affects Your Weight

ತೂಕ ಇಳಿಸಿಕೊಳ್ಳುವುದೆಂದರೆ ಕೇವಲ ಕ್ಯಾಲೊರಿಗಳನ್ನು ಲೆಕ್ಕಹಾಕಿ, ಬೆವರು ಸುರಿಸಿ ವ್ಯಾಯಾಮ ಮಾಡುವುದು ಮಾತ್ರವಲ್ಲ. ನಮ್ಮ ದೇಹವು ಜೈವಿಕ ಗಡಿಯಾರವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಹೌದು, ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆಯೇ ನೀವು ಯಾವುದೇ ರೀತಿಯ ಡಯಟ್, ವ್ಯಾಯಾಮ ಮಾಡಿದರೂ ಕೂಡ ಪ್ರಯೋಜನಕ್ಕೆ ಬರುವುದಿಲ್ಲ. ಸಾಮಾನ್ಯವಾಗಿ ರಾತ್ರಿ 11 ಗಂಟೆಯವರೆಗೂ ಎಚ್ಚರವಾಗಿರುವುದು ಅಥವಾ ನಿದ್ರೆಯನ್ನು (Sleep) ಒಂದೇ ಸಮಯಕ್ಕೆ ಮಾಡದಿರುವುದು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆಯ ಸಮಯ ಮತ್ತು ತೂಕದ ನಡುವಿನ ಸಂಬಂಧದ ಬಗ್ಗೆ ಸರಿಯಾಗಿ ತಿಳಿದುಕೊಳ್ಳದಿದ್ದರೆ ಈ ರೀತಿಯ ಸಮಸ್ಯೆ ಉಂಟಾಗುತ್ತದೆ. ಹಾಗಾದರೆ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಛಿಸುವವರು ತಮ್ಮ ದಿನಚರಿಯನ್ನು ಯಾವ ರೀತಿ ಇಟ್ಟುಕೊಳ್ಳಬೇಕು, ಯಾವ ಸಮಯದಲ್ಲಿ ಮತ್ತು ಎಷ್ಟು ಹೊತ್ತು ನಿದ್ರಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಸಾಮಾನ್ಯವಾಗಿ ರಾತ್ರಿ 10:30 ರ ನಂತರ, ನಮ್ಮ ದೇಹದ ಜೀರ್ಣಕ್ರಿಯೆ ನಿಧಾನಗತಿಗೆ ಪ್ರವೇಶಿಸುತ್ತದೆ. ಈ ಸಮಯದಲ್ಲಿ ನಾವು ಎಚ್ಚರವಾಗಿದ್ದರೆ, ದೇಹ ಒತ್ತಡಕ್ಕೆ ಒಳಗಾಗುತ್ತದೆ, ಆಗ ಕಾರ್ಟಿಸೋಲ್ ಎಂಬ ಒತ್ತಡದ ಹಾರ್ಮೋನ್ ಬಿಡುಗಡೆಯಾಗುತ್ತದೆ. ಈ ಹಾರ್ಮೋನ್ ರಕ್ತದಲ್ಲಿ ಇದ್ದಾಗ, ದೇಹವು ಕೊಬ್ಬನ್ನು ಕರಗಿಸುವುದನ್ನು ನಿಲ್ಲಿಸುತ್ತದೆ ಮಾತ್ರವಲ್ಲ ಅದನ್ನು ಸಂಗ್ರಹಿಸಲು ಪ್ರಾರಂಭಿಸುತ್ತದೆ. ನೀವು ಎಷ್ಟೇ ಆರೋಗ್ಯಕರ ಆಹಾರವನ್ನು ಅನುಸರಿಸಿದರೂ, ಕಾರ್ಟಿಸೋಲ್ ಮಟ್ಟಗಳು ಹೆಚ್ಚಿದ್ದರೆ, ತೂಕ ಇಳಿಸುವುದು ತುಂಬಾ ಕಷ್ಟಕರವಾಗುತ್ತದೆ. ದೇಹದ ಜೀವಕೋಶಗಳ ದುರಸ್ತಿ ಕೆಲಸ ರಾತ್ರಿ 11 ರಿಂದ ಬೆಳಗಿನ ಜಾವ 3 ರ ನಡುವೆ ನಡೆಯುತ್ತದೆ. ಈ ಸಮಯದಲ್ಲಿ ನೀವು ನಿದ್ರೆ ಮಾಡದಿದ್ದರೆ, ಚಯಾಪಚಯ ಕ್ರಿಯೆ ಸರಿಯಾಗಿ ನಡೆಯುವುದಿಲ್ಲ. ಜೊತೆಗೆ ಇದು ಹಸಿವನ್ನು ನಿಯಂತ್ರಿಸುವ ಹಾರ್ಮೋನುಗಳನ್ನು ಅಡ್ಡಿಪಡಿಸುತ್ತದೆ. ಇದಲ್ಲದೆ, ರಾತ್ರಿ ಬೇಗನೆ ಮಲಗದವರು ಹೆಚ್ಚಿನ ಇನ್ಸುಲಿನ್ ಸ್ಪೈಕ್‌ಗಳನ್ನು ಹೊಂದಿರುತ್ತಾರೆ, ಇದು ತೂಕ ಹೆಚ್ಚಾಗಲು ಪ್ರಮುಖ ಕಾರಣವಾಗುತ್ತದೆ.

ಇದನ್ನೂ ಓದಿ: ನಿದ್ದೆಯಿಂದ ಪದೇ ಪದೇ ಎಚ್ಚರವಾಗಿ ನಿದ್ರೆ ಹಾಳಾಗುತ್ತಿದ್ದರೆ ತಡಮಾಡದೆಯೇ ಈ ವಿಷಯಗಳನ್ನು ತಿಳಿದುಕೊಳ್ಳಿ

ನಾವು ನಮ್ಮ ದೇಹಕ್ಕೆ ಅಗತ್ಯವಿರುವಷ್ಟು ನಿದ್ರೆ ಮಾಡದಿದ್ದರೆ, ನಾವು ಸೇವಿಸುವ ಎಲ್ಲಾ ಡಿಟಾಕ್ಸ್ ಪಾನೀಯಗಳು ಮತ್ತು ಆಹಾರಗಳು ವ್ಯರ್ಥವಾಗುತ್ತದೆ. ರಾತ್ರಿ 11 ಗಂಟೆಯ ನಂತರ ಎಚ್ಚರವಾಗಿದ್ದರೆ, ದೇಹದ ನೈಸರ್ಗಿಕ ತ್ಯಾಜ್ಯ ನಿರ್ವಿಶೀಕರಣ ಪ್ರಕ್ರಿಯೆಯು ನಿಲ್ಲುತ್ತದೆ. ಇದು ಅಜೀರ್ಣ ಮತ್ತು ಉಬ್ಬರದಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಜೀರ್ಣಕ್ರಿಯೆ ದುರ್ಬಲಗೊಂಡರೆ, ಚಯಾಪಚಯ ಕ್ರಿಯೆ ಕಡಿಮೆಯಾಗುತ್ತದೆ ಮತ್ತು ದೇಹವು ಹೆಚ್ಚು ಹೆಚ್ಚು ಕೊಬ್ಬನ್ನು ಸಂಗ್ರಹಿಸುತ್ತದೆ.

ಈ ಸಮಸ್ಯೆ ತಡೆಯಲು ಸಲಹೆಗಳು:

  • ತೂಕ ಇಳಿಸಿಕೊಳ್ಳಲು ಬಯಸುವವರು ರಾತ್ರಿ 11ರ ಮೊದಲು ನಿದ್ರೆ ಮಾಡಬೇಕು.
  • ಪ್ರತಿದಿನ ನಿಗದಿತ ಸಮಯಕ್ಕಿಂತ 15- 20 ನಿಮಿಷ ಮುಂಚಿತವಾಗಿ ಮಲಗುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು.
  • ಮಲಗುವ ಒಂದು ಗಂಟೆ ಮೊದಲು ಮೊಬೈಲ್ ಮತ್ತು ಲ್ಯಾಪ್‌ಟಾಪ್ ದೂರ ಇಡುವುದನ್ನು ಮರೆಯಬೇಡಿ.
  • ಮಲಗುವ ಸಮಯಕ್ಕೆ ಕನಿಷ್ಠ ಮೂರು ಗಂಟೆಗಳ ಮೊದಲು ನಿಮ್ಮ ಊಟವನ್ನು ಮುಗಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಗೆ ಹೋಲಿಸಿದ ಹಾಲಿವುಡ್ ಸ್ಟಾರ್ ವಿನ್ ಡೀಸೆಲ್ – Kannada News | Vin Diesel compares Priyanka Chopra to Nelson Mandela

ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಸ್ಟಾರ್ ನಟಿ. ಕೆಲ ವರ್ಷಗಳ ಹಿಂದೆ ಬಾಲಿವುಡ್​ನಿಂದ ದೂರಾಗಿ ಹಾಲಿವುಡ್​​ಗೆ ಹಾರಿದ್ದ ಪ್ರಿಯಾಂಕಾರನ್ನು ಹಲವರು ಅಣಕಿಸಿದ್ದರು. ಆರಂಭದಲ್ಲಿ ಪ್ರಿಯಾಂಕಾಗೆ ಹಾಲಿವುಡ್​​ನಲ್ಲಿ ಗಟ್ಟಿ ಪಾತ್ರಗಳು ಸಿಗದಿದ್ದಾಗ ಟೀಕೆ ಮಾಡಿದ್ದರು. ಆದರೆ ಈಗ ಪ್ರಿಯಾಂಕಾ ಚೋಪ್ರಾ, ಹಾಲಿವುಡ್​ನ ಸ್ಟಾರ್ ನಟರು, ನಿರ್ದೇಶಕರುಗಳೊಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಮಾತ್ರವಲ್ಲದೆ ಹಾಲಿವುಡ್​​ನಲ್ಲಿ ತಮ್ಮದೇ ಆದ ಪ್ರತ್ಯೇಕ ಗುರುತನ್ನು ಸಂಪಾದಿಸಿಕೊಂಡಿದ್ದಾರೆ. ಹಾಲಿವುಡ್​​ನ ಸ್ಟಾರ್ ನಟ ವಿನ್ ಡೀಸೆಲ್ ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಯೊಬ್ಬರಿಗೆ ಹೋಲಿಕೆ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ‘ದಿ ಬ್ಲಫ್’ (The Bluff) ಹೆಸರಿನ ಆಕ್ಷನ್ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಇದು ಮಹಿಳಾ ಪ್ರಧಾನ ಸಿನಿಮಾ ಆಗಿದ್ದು, ತಾಯಿಯೊಬ್ಬಾಕೆ ತನ್ನ ಕುಟುಂಬವನ್ನು ವಿಲನ್​​ಗಳಿಂದ ಉಳಿಸಲು ಮಾಡುವ ಹೋರಾಟದ ಕತೆಯನ್ನು ಸಿನಿಮಾ ಒಳಗೊಂಡಿದೆ. ‘ದಿ ಬ್ಲಫ್’ ಸಿನಿಮಾದ ಪ್ರೀಮಿಯರ್ ಶೋ ಇತ್ತೀಚೆಗಷ್ಟೆ ಆಯೋಜನೆಗೊಂಡಿತ್ತು, ಪ್ರೀಮಿಯರ್ ಶೋಗೆ ಹಲವಾರು ಹಾಲಿವುಡ್ ಸೆಲೆಬ್ರಿಟಿಗಳು ಅತಿಥಿಗಳಾಗಿ ಆಗಮಿಸಿದ್ದರು. ಅವರನ್ನು ‘ತ್ರಿಬಲ್ ಎಕ್ಸ್’, ‘ಫಾಸ್ಟ್ ಆಂಡ್ ಫ್ಯೂರಿಯಸ್’ ಖ್ಯಾತಿಯ ವಿನ್ ಡೀಸೆಲ್ ಸಹ ಒಬ್ಬರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿನ್ ಡೀಸೆಲ್ ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ಮಾನವತಾವಾದಿ ನೆಲ್ಸನ್ ಮಂಡೆಲಾಗೆ ಹೋಲಿಕೆ ಮಾಡಿದರು. ‘ಪ್ರಿಯಾಂಕಾ ಕೇವಲ ಅದ್ಭುತ ನಟಿ ಮಾತ್ರವಲ್ಲ, ಬದಲಾಗಿ ಜಗತ್ತನ್ನು ಉತ್ತಮಗೊಳಿಸಲು ಶ್ರಮಿಸುತ್ತಿರುವ ಶಕ್ತಿ ಎಂದು ಬಣ್ಣಿಸಿದರು. ಕೆಲವು ವ್ಯಕ್ತಿಗಳು ಜಗತ್ತನ್ನು ಬದಲಿಸಲು ಹುಟ್ಟಿರುತ್ತಾರೆ. ಅಂತಹವರ ಸಾಲಿನಲ್ಲಿ ನಾನು ನೆಲ್ಸನ್ ಮಂಡೇಲಾ ಅವರನ್ನು ನೋಡುತ್ತೇನೆ. ಇಂದು ಪ್ರಿಯಾಂಕಾ ಚೋಪ್ರಾ ಅವರಲ್ಲಿ ನನಗೆ ಅಂತಹದ್ದೇ ಗುಣಗಳು ಕಾಣಿಸುತ್ತಿವೆ. ಅವರು ಕೇವಲ ಸಿನಿಮಾ ರಂಗಕ್ಕೆ ಸೀಮಿತವಾಗದೆ, ಸಾಮಾಜಿಕ ಕಳಕಳಿಯ ಮೂಲಕ ಜಗತ್ತನ್ನು ಸುಂದರಗೊಳಿಸಲು ಶ್ರಮಿಸುತ್ತಿದ್ದಾರೆ’ ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ನೆಲ್ಸನ್ ಮಂಡೇಲ ಅವರಂಥಹಾ ಮಹಾನ್ ನಾಯಕರಿಗೆ ಪ್ರಿಯಾಂಕಾರನ್ನು ಹೋಲಿಸಿರುವುದು ನಿಜಕ್ಕೂ ಬಹುದೊಡ್ಡ ಹೊಗಳಿಕೆಯಾಗಿದೆ.

ಇದನ್ನೂ ಓದಿ:ದೋಸೆ ತಿನ್ನುತ್ತಾ ಪತ್ನಿ ಪ್ರಿಯಾಂಕಾ ಚೋಪ್ರಾ ಸಿನಿಮಾ ಹಾಡು ಕೇಳಿದ ನಿಕ್ ಜೋನಸ್

ಪ್ರಿಯಾಂಕಾ ಅವರ ಮಾನವೀಯ ಕಾರ್ಯಗಳು ಮತ್ತು ಯುನಿಸೆಫ್ (UNICEF) ರಾಯಭಾರಿಯಾಗಿ ಅವರು ಮಾಡುತ್ತಿರುವ ಕೆಲಸಗಳನ್ನು ವಿನ್ ಡೀಸೆಲ್ ಈ ಸಂದರ್ಭದಲ್ಲಿ ನೆನಪಿಸಿಕೊಂಡರು. ಅವರ ಈ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಭಾರತೀಯ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಹಲವು ವರ್ಷಗಳಿಂದಲೂ ಯುನೆಸೆಫ್ ಜೊತೆಗೆ ಗುರುತಿಸಿಕೊಂಡಿದ್ದು ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ದಿ ಬ್ಲಫ್’ ಆಕ್ಷನ್ ಮತ್ತು ಸಾಹಸಮಯ ಕಥೆಯನ್ನು ಹೊಂದಿದೆ. ಈ ಚಿತ್ರದ ಮೂಲಕ ಪ್ರಿಯಾಂಕಾ ಮತ್ತೊಮ್ಮೆ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ಸಿನಿಮಾವನ್ನು ಫ್ರ್ಯಾಂಕ್ ಇ ಫ್ಲವರ್ಸ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಪ್ರಿಯಾಂಕಾ ಜೊತೆಗೆ ಖ್ಯಾತ ನಟ ಕಾರ್ಲ್ ಅರ್ಬಲ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಖಾಲಿ ಟ್ರಂಕ್ ಹಿಡಿದು ಬಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಸಂಕಷ್ಟ – Kannada News | Tejasvi Surya Metro Protest: Court Notice for Empty Trunk Rally Against Fare Hike

ಮೆಟ್ರೋ, ಸಂಸದ ತೇಜಸ್ವಿ ಸೂರ್ಯImage Credit source: google

ಬೆಂಗಳೂರು, ಫೆಬ್ರವರಿ 18: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ಏರಿಕೆ ವಿಚಾರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಇತ್ತೀಚೆಗೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು. ಕೊನೆಗೆ ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಆದರೆ ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಾಯಿಸ್ತಿದೆ ಅಂತಾ ಆರೋಪಿಸಿ ಖಾಲಿ ಟ್ರಂಕ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಇದೀಗ ಪೊಲೀಸರಿಂದ ಖಾಸಗಿ ದೂರು ದಾಖಲಾಗಿದೆ. ಈ ಸಂಬಂಧ ತೇಜಸ್ವಿ ಸೂರ್ಯ ಸೇರಿ ಒಂಭತ್ತು ಜನರಿಗೆ 42ನೇ ಎಸಿಜೆಎಂ ಕೋರ್ಟ್​ನಿಂದ ನೋಟಿಸ್ ಜಾರಿ ಮಾಡಲಾಗಿದೆ.

9 ಜನರಿಗೆ ನೋಟಿಸ್ 

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಹಿಡಿದು ಪ್ರತಿಭಟಿಸಿದ್ದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಜಯನಗರ ಠಾಣೆ ಇನ್ಸ್​ಪೆಕ್ಟರ್ ಆರ್.ದೀಪಕ್​ರಿಂದ ಖಾಸಗಿ ದೂರು ನೀಡಲಾಗಿದೆ. ಖಾಸಗಿ ದೂರು ಸಂಬಂಧ ಸಂಸದ ತೇಜಸ್ವಿ ಸೂರ್ಯ, ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಸೇರಿ 9 ಜನರಿಗೆ 42ನೇ ಎಸಿಜೆಎಂ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಾಯಿಸಿದೆ ಅಂತಾ ಆರೋಪಿಸಿರುವ ಸಂಸದ ತೇಜಸ್ವಿ ಸೂರ್ಯ, ಇತ್ತೀಚೆಗೆ ವಿಭಿನ್ನವಾಗಿ ಪ್ರತಿಭಟನೆಗೆ ಮುಂದಾಗಿದ್ದರು. ಬೆಂಗಳೂರಿನ ಆರ್‌.ವಿ ರೋಡ್ ಮೆಟ್ರೋ ಸ್ಟೇಷನ್ ಬಳಿ ಖಾಲಿ ಟ್ರಂಕ್ ಪ್ರದರ್ಶಿಸಿದ್ದರು. ರಾಜ್ಯ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ. ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರವೇ ದರ ಏರಿಕೆ ಸಮಿತಿಗೆ ಒತ್ತಾಯಿಸಿದೆ ಅಂತಾ ಕಿಡಿಕಾರಿದ್ದರು.

ಇದನ್ನೂ ಓದಿ: ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ, ನಮ್ಮ ಏರಿಯಾದಲ್ಲೇ ಹೆದರಿಸ್ತೀರಾ? ಸರ್ಕಾರದ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಇನ್ನೂ ಪ್ರತಿಭಟನೆ ಮಾಡದಂತೆ ತೇಜಸ್ವಿ ಸೂರ್ಯಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್‌ಗೆ ಕಿಡಿಕಾರಿದ್ದ ಸಂಸದ, ನಾನು ಪ್ರತಿಭಟನೆ ಮಾಡಿಲ್ಲ. ಖಾಲಿ ಟ್ರಂಕ್ ಹಿಡಿದುಕೊಂಡು ಮೆಟ್ರೋದಲ್ಲಿ ಹೋಗುತ್ತಿದ್ದೆ. ನನಗೆ ನೋಟಿಸ್ ಕೊಡುತ್ತೀರಾ ಅಂತಾ ಗುಡುಗಿದ್ದರು. ಬಳಿಕ ತೇಜಸ್ವಿ ಸೂರ್ಯರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಒಬ್ಬಂಟಿಯಾದೆ ನಾ: ‘ಲವ್ ಮಾಕ್ಟೇಲ್ 3’ ಸಿನಿಮಾದ ಹೊಸ ಹಾಡು ರಿಲೀಸ್ – Kannada News | Darling Krishna starrer Love Mocktail 3 movie new song Obbantiyaade Naa released

ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ದೊಡ್ಡ ಸಕ್ಸಸ್ ಕೊಟ್ಟ ಸಿನಿಮಾ ‘ಲವ್ ಮಾಕ್ಟೇಲ್’. ಆ ಸಿನಿಮಾದ ಸೀಕ್ವೆಲ್ (ಲವ್ ಮಾಕ್ಟೇಲ್ 2) ಕೂಡ ಜನಮೆಚ್ಚುಗೆ ಪಡೆಯಿತು. ಈಗ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಸಹ ಬಿಡುಗಡೆಗೆ ಸಿದ್ಧವಾಗಿದೆ. ಹಾಡುಗಳ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರೇಮಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದ್ದ ಎರಡು ಸಿನಿಮಾಗಳ ರೀತಿಯೇ ಮೂರನೇ ಪಾರ್ಟ್​ ಕೂಡ ಸಿದ್ಧವಾಗಿದೆ ಎಂಬುದಕ್ಕೆ ಹಾಡುಗಳು ಸಾಕ್ಷಿಯಾಗಿವೆ. ‘ಲವ್ ಮಾಕ್ಟೇಲ್ 3’ ಸಿನಿಮಾದ ‘ಒಬ್ಬಂಟಿಯಾದೆ ನಾ’ (Obbantiyaade Naa) ಹಾಡು ಇತ್ತೀಚೆಗೆ ರಿಲೀಸ್ ಆಯಿತು.

ಈ ಬಾರಿ ಕೂಡ ಡಾರ್ಲಿಂಗ್ ಕೃಷ್ಣ ಅವರೇ ‘ಲವ್ ಮಾಕ್ಟೇಲ್ 3’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರೇ ನಾಯಕನಾಗಿ ನಟಿಸಿದ್ದಾರೆ ಕೂಡ. ಇತ್ತೀಚೆಗಷ್ಟೇ ತಂದೆ-ಮಗಳ ಬಾಂಧವ್ಯ ತಿಳಿಸುವ ಹಾಡೊಂದು ಬಿಡುಗಡೆ ಆಗಿತ್ತು. ಅದರ ಬೆನ್ನಲ್ಲೇ ‘ಒಬ್ಬಂಟಿಯಾದೆ ನಾ’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ಜನರು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.

ಪ್ರೇಕ್ಷಕರು ‘ಲವ್ ಮಾಕ್ಟೇಲ್ 3’ ಸಿನಿಮಾದ ಟ್ರೇಲರ್ ನೋಡಲು ಕಾದಿದ್ದಾರೆ. ಅದಕ್ಕೂ ಮುನ್ನ, ಪ್ರೇಮಿಗಳ ದಿನದ ಸಲುವಾಗಿ ‘ಒಬ್ಬಂಟಿಯಾದೆ ನಾ’ ಹಾಡನ್ನು ರಿಲೀಸ್ ಮಾಡಿತು ಚಿತ್ರತಂಡ. ಈ ಸಿನಿಮಾಗೆ ನಕುಲ್ ಅಭ್ಯಂಕರ್ ಅವರು ಸಂಗೀತ ಸಂಯೋಜಿಸಿದ್ದಾರೆ. ‘ಒಬ್ಬಂಟಿಯಾದೆ ನಾ’ ಹಾಡಿಗೆ ಅವರೇ ಧ್ವನಿ ನೀಡಿದ್ದಾರೆ. ‘ಮಾತು ಮೌನವಾಗಿದೆ, ಶೋಕ ಭಾವ ಮೂಡಿದೆ..’ ಎಂದು ಆರಂಭ ಆಗುವ ಈ ಗೀತೆಯನ್ನು ರಾಘವೇಂದ್ರ ಕಾಮತ್ ಅವರು ಬರೆದಿದ್ದಾರೆ.

‘ಲವ್ ಮಾಕ್ಟೇಲ್ 3’ ಸಿನಿಮಾ ಏಪ್ರಿಲ್ 10ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ‘ಕ್ರಿಸ್‌ಮಿ’ ಬ್ಯಾನರ್ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಅಮೃತಾ ಅಯ್ಯಂಗಾರ್, ಮಿಲನಾ ನಾಗರಾಜ್, ಸಂವೃತಾ, ರೇಚಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ವರ್ಷಗಳ ಕಾಲ ನೆನಪುಳಿವ ಸಿನಿಮಾ: ‘ಫಾದರ್’ ಬಗ್ಗೆ ಡಾರ್ಲಿಂಗ್ ಕೃಷ್ಣ ಮಾತು

ಡಾರ್ಲಿಂಗ್ ಕೃಷ್ಣ ಅವರು ‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚಿನ ಮಹತ್ವ ನೀಡಿದ್ದರು. ಆ ಸಿನಿಮಾಗಳ ಗೆಲುವಿನಲ್ಲಿ ಹಾಡುಗಳ ಕೊಡುಗೆ ದೊಡ್ಡದಿತ್ತು. ಈಗ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಕೂಡ ಹಾಡುಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಸಿನಿಮಾ ನೋಡಲು ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ – Kannada News | Actor Rajpal Yadav wants designated smoking area inside jail

ಬಾಲಿವುಡ್ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್​ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ.

ಹಲವು ವರ್ಷಗಳ ಹಿಂದೆ ರಾಜ್​ಪಾಲ್ ಯಾದವ್ ಅವರು ಸಿನಿಮಾ ನಿರ್ಮಾಣಕ್ಕಾಗಿ ಸಾಲ ಮಾಡಿದ್ದರು. ಆದರೆ ಅವರು ಮಾಡಿದ ಸಿನಿಮಾ ಗೆಲ್ಲಲಿಲ್ಲ. ಅದರಿಂದ ಅವರಿಗೆ ಸಾಲ ಮರುಪಾವತಿ ಮಾಡುವುದು ಕಷ್ಟ ಆಯಿತು. ದಿನದಿಂದ ದಿನಕ್ಕೆ ಬಡ್ಡಿ ಹೆಚ್ಚಿತು. ಒಟ್ಟು 9 ಕೋಟಿ ರೂಪಾಯಿ ಸಾಲ ಅವರ ಮೇಲಿದೆ. ಪದೇ ಪದೇ ಚೆಕ್ ಬೌನ್ಸ್ ಆಗಿದ್ದರಿಂದ ಅವರನ್ನು ಜೈಲಿಗೆ ಕಳಿಸಲಾಯಿತು.

‘ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಇರುವಂತೆ ಜೈಲಿನ ಒಳಗೆ ಧೂಮಪಾನ ಮಾಡಲು ಪ್ರತ್ಯೇಕವಾದ ಜಾಗ ಇರಬೇಕು. ಜೈಲುಗಳನ್ನು ಬದಲಾವಣೆಯ ಕೇಂದ್ರದ ರೀತಿ ಪರಿಗಣಿಸಬೇಕು. ತಮ್ಮನ್ನು ಬದಲಾಯಿಸಿಕೊಳ್ಳಲು ಖೈದಿಗಳಿಗೆ ಅವಕಾಶ ನೀಡಬೇಕು’ ಎಂದು ರಾಜ್​ಪಾಲ್ ಯಾದವ್ ಹೇಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗದೆ.

ಸಂಬಂಧಿಕರ ಮದುವೆಯ ಕಾರಣ ನೀಡಿ ರಾಜ್​ಪಾಲ್ ಯಾದವ್ ಅವರು ಸದ್ಯಕ್ಕೆ ಜಾಮೀನು ಪಡೆದಿದ್ದಾರೆ. ಒಂದೂವರೆ ಕೋಟಿ ರೂಪಾಯಿ ಪಾವತಿ ಮಾಡಿದ ನಂತರ ಅವರಿಗೆ ಜಾಮೀನು ಸಿಕ್ಕಿತು. ಮಾರ್ಚ್ 18ರವರೆಗೂ ಜಾಮೀನಿನ ಮೇಲೆ ಅವರು ಹೊರಗೆ ಇರಲಿದ್ದಾರೆ. ಬಳಿಕ ಮತ್ತೆ ವಿಚಾರಣೆ ನಡೆಯಲಿದೆ. ಅಷ್ಟರಲ್ಲಿ ಅವರು ಇನ್ನುಳಿದ ಹಣ ಹೊಂದಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ: ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ?

ರಾಜ್​ಪಾಲ್ ಯಾದವ್ ಅವರು ಮತ್ತೆ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಬೇಕು ಎಂದರೆ ಇನ್ನುಳಿದ ಸಾಲವನ್ನು ಮರುಪಾವತಿ ಮಾಡಲು ಹಣ ಹೊಂದಿಸಿಕೊಳ್ಳಬೇಕಿದೆ. ಈಗಾಗಲೇ ಸೋನು ಸೂದ್, ಮಿಕಾ ಸಿಂಗ್ ಮುಂತಾದವರು ರಾಜ್​ಪಾಲ್ ಯಾದವ್ ಅವರ ನೆರವಿಗೆ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊಪ್ಪಳದಲ್ಲಿ ಮರ್ಯಾದಾ ಹತ್ಯೆ ಯತ್ನ: ಅದೃಷ್ಟವಶಾತ್ 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು – Kannada News | Honor killing attempts In Koppal: Brother Try to Kill Sister Over Love marriage

ಕೊಪ್ಪಳ, (ಫೆಬ್ರವರಿ 18): ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. 23 ವರ್ಷದ ಮೀನಾಕ್ಷಿ ಕಳೆದ ಎರಡು ವರ್ಷಗಳ ಹಿಂದೆ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದು, ಸದ್ಯ ಮೀನಾಕ್ಷಿ ನಾಲ್ಕು ತಿಂಗಳು ಗರ್ಭಿಣಿ. ಇದನ್ನು ಲೆಕ್ಕಿಸದ ಸಹೋದರ ಮಂಜುನಾಥ್ ಎನ್ನುವಾತ ಮೀನಾಕ್ಷಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಮೀನಾಕ್ಷಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ,

ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಚಿತ್ತಾಪೂರದ ಕುರುಬ ಸಮುದಾಯದ ಮೀನಾಕ್ಷಿ ಕುಟುಂಬದ ವಿರೋಧದ ನಡುವೆಯೂ ಎರಡು ವರ್ಷಗಳ ಹಿಂದೆ ಹಂದ್ರಾಳ ಗ್ರಾಮದ ಉದಯ ಎನ್ನುವ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದಳು. ಇದರಿಂದ ಮೀನಾಕ್ಷಿ ಸಹೋದರ ಮಂಜುನಾಥ್ ಕೆರಳಿದ್ದು, ಸಿಟ್ಟಿನಲ್ಲೇ ಇದ್ದ. ಆದ್ರೆ, ಇಂದು (ಫೆಬ್ರವರಿ 18) ಮೀನಾಕ್ಷಿ ಪತಿ ಉದಯ ಸಹೋದರನ ಮದುವೆ ಇದ್ದರಿಂದ ಹಂದ್ರಾಳ ಗ್ರಾಮಕ್ಕೆ ಬಂದಿದ್ದರು.

ಇದನ್ನೂ ಓದಿ: ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿಗನ ಕೊಲೆ ಕೇಸ್: ಮೂವರಿಗೆ ಗಲ್ಲು ಶಿಕ್ಷೆ

ಮತ್ತೊಂದೆಡೆ ಮೀನಾಕ್ಷಿ ಸಹೋದರ ಮಂಜುನಾಥ್ ಸಿಟ್ಟಿನಲ್ಲಿದ್ದ. ಯಾವಾಗ ಸಹೋದರಿ ಮೀನಾಕ್ಷಿ ಹಂದ್ರಾಳ ಬಂದಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಮಂಜುನಾಥ್, ಮದುವೆ ಸಮಯದಲ್ಲಿ ಕಾದು ಕೊಡಲಿಯಿಂದ ಸಹೋದರಿಗೆ ಮೀನಾಕ್ಷಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಡಲಿ ಏಟಿನಿಂದ ಗಾಯಗೊಂಡಿರುವ ಮೀನಾಕ್ಷಿ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಳವಂಡಿ ಪೊಲೀಸರು ದೌಡಾಯಿಸಿ, ಸಹೋದರಿಯನ್ನು ಕೊಲೆ ಮಾಡಲು ಯತ್ನಿಸಿದ್ದ ಸಹೋದರ ಮಂಜುನಾಥನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಕುಟುಂಬದ ವಿರೋಧದ ನಡುವೆ ಅನ್ಯ ಜಾತಿ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಕೋಪಗೊಂಡು ಸಹೋದರಿಯನ್ನು ಹತ್ಯೆಗೆ ಯತ್ನಿಸಿದ್ದಾನೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

“ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ – Kannada News | Australia: Indian Nurse Harman Preet Singh Brutally Attacked in Geelong; Rising Hate Crimes Concern NRIs

ಜೀಲಾಂಗ್, ಫೆ.18: ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ (Corio) ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಅವರ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17 ತಡರಾತ್ರಿ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ. ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ ಬಿಳಿ ಬಣ್ಣದ ಟಿ-ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಹರ್ಮನ್ ಅವರನ್ನು “ಇಂಡಿಯನ್ ಡಾಗ್” (ಭಾರತೀಯ ನಾಯಿ) ಎಂದು ಜನಾಂಗೀಯವಾಗಿ ನಿಂದಿಸುತ್ತಿರುವುದು ಕೂಡ ಕಾಣಬಹುದು.

ಹರ್ಮನ್ ಅವರ ಮುಖಕ್ಕೆ ತಲೆಯಿಂದ ಜೋರಾಗಿ ಗುದ್ದಿದ ಪರಿಣಾಮ ಅವರ ಮೂಗಿನಿಂದ ರಕ್ತ ಬಂದು ದೊಡ್ಡ ಗಾಯಗಳಾಗಿವೆ. ಹರ್ಮನ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. ಈ ಘಟನೆಯಿಂದ ಹರ್ಮನ್ ತೀವ್ರ ಆಘಾತಕ್ಕೊಳಗಾಗಿದ್ದಾರೆ. “ನನಗೆ ಈಗ ಸುರಕ್ಷತೆಯ ಭಯವಾಗುತ್ತಿದೆ, ಮತ್ತೆ ಜಿಮ್‌ಗೆ ಹೋಗಲು ಸಾಧ್ಯವೇ ಎಂಬುದು ತಿಳಿಯುತ್ತಿಲ್ಲ ಎಂದು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಅವರ ಕುಟುಂಬ ಕೂಡ ಇದರಿಂದ ಭಯಗೊಂಡಿದೆ.

ಕಳೆದ ವರ್ಷ ಅಂದರೆ ಡಿಸೆಂಬರ್​​ನಲ್ಲಿ ಇಂತಹದೇ ಒಂದು ಘಟನೆ ಸಿಡ್ನಿಯ ಪ್ರಸಿದ್ಧ ಬಾಂಡಿ ಬೀಚ್‌ನಲ್ಲಿ ಹನುಕ್ಕಾ ಹಬ್ಬದ ಆಚರಣೆಯ ವೇಳೆ ಸಾಮೂಹಿಕ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 15 ಜನ ಸಾವನ್ನಪ್ಪಿದ್ದರು. ಈ ದಾಳಿಯ ಹಿಂದೆ ತಂದೆ-ಮಗ (ಸಜಿದ್ ಅಕ್ರಮ್ ಮತ್ತು ನವೀದ್ ಅಕ್ರಮ್) ಇರುವುದು ದೃಢಪಟ್ಟಿತ್ತು. ಸಜಿದ್ ಅಕ್ರಮ್ ಮೂಲತಃ ಹೈದರಾಬಾದ್‌ನವರು ಮತ್ತು ಅವರು ಇಂದಿಗೂ ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದರು. ಸುಮಾರು 30 ವರ್ಷಗಳ ಹಿಂದೆ ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿದ್ದರೂ, ಅವರು ಇಸ್ಲಾಮಿಕ್ ಸ್ಟೇಟ್ (IS) ಸಿದ್ಧಾಂತದಿಂದ ಪ್ರೇರಿತರಾಗಿ ಈ ಕೃತ್ಯ ಎಸಗಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಸ್ಕೂಬಿ ಡೂ ಪಾತ್ರಧಾರಿಗಳ ವೇಷ ತೊಟ್ಟು ಕಳ್ಳತನ ಮಾಡುತ್ತಿದ್ದವರ ಸ್ಕ್ವಿಡ್ ಗೇಮ್ ಪಾತ್ರಧಾರಿಯಂತೆ ಬಂದು ಹಿಡಿದ ಪೊಲೀಸ್

ಆಸ್ಟ್ರೇಲಿಯಾದಲ್ಲಿ ಇತ್ತೀಚೆಗೆ ಭಾರತೀಯ ಮೂಲದವರ ಮೇಲೆ ನಡೆಯುತ್ತಿರುವ ಇಂತಹ ಹಲ್ಲೆಗಳು ಅಲ್ಲಿನ ಅನಿವಾಸಿ ಭಾರತೀಯರಲ್ಲಿ ಆತಂಕ ಮೂಡಿಸಿವೆ. ಜೀಲಾಂಗ್ ಪೊಲೀಸರು ಹರ್ಮನ್ ಪ್ರೀತ್ ಸಿಂಗ್ ಮೇಲಿನ ಹಲ್ಲೆಯನ್ನು ಜನಾಂಗೀಯ ದ್ವೇಷದ ಅಪರಾಧವೆಂದು ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ; ವಿಡಿಯೋ ವೈರಲ್ – Kannada News | 55 year old Businessman dies of heart attack while playing badminton in Raipur

ರಾಯ್‌ಪುರ, ಫೆಬ್ರವರಿ 18: ರಾಯ್‌ಪುರದ ಅಶ್ವಿನಿ ನಗರದ ಉದ್ಯಮಿ ತನ್ನ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಘಾತದಿಂದ (Heart Attack) ಮೃತಪಟ್ಟಿದ್ದಾರೆ. ಗೆಳೆಯರೊಂದಿಗೆ ಎಂಜಾಯ್ ಮಾಡುತ್ತಾ ಆಟವಾಡುತ್ತಿದ್ದ ಅವರು ಕೈಯಲ್ಲಿ ಬ್ಯಾಡ್ಮಿಂಟನ್ ಬ್ಯಾಟ್ ಹಿಡಿದುಕೊಂಡೇ ಮೃತಪಟ್ಟಿದ್ದಾರೆ. ಆದರೆ ಮುಂದಿನ ಕ್ಷಣದಲ್ಲಿ ಎಲ್ಲವೂ ಮೌನವಾಯಿತು. 57 ವರ್ಷದ ಹಾರ್ಡ್‌ವೇರ್ ಉದ್ಯಮಿ ಅಮೃತ್ ಬಜಾಜ್ ಸಂಜೆ ಆಟವಾಡಲು ಅಶ್ವಿನಿ ನಗರದ ಮೈದಾನಕ್ಕೆ ಬಂದಿದ್ದರು. ಈ ವೇಳೆ ದುರಂತವಾಗಿ ಮೃತಪಟ್ಟಿದ್ದಾರೆ. ಮೈದಾನದಲ್ಲಿ ಅವರು ಹೊಡೆದ ಅದ್ಭುತ ಶಾಟ್ ಅವರ ಜೀವನದ ಕೊನೆಯ ಶಾಟ್ ಆಗಲಿದೆ ಎಂದು ಯಾರಿಗೂ ತಿಳಿದಿರಲಿಲ್ಲ.

ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ಮಾಡಿದ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಹಠಾತ್ ಹೃದಯ ಸ್ತಂಭನವೇ ಸಾವಿಗೆ ಕಾರಣ ಎಂದು ಹೇಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ನಿ‌ ಕೊಲೆ ಮಾಡಿ ಮನೆ ಆವರಣದಲ್ಲೇ ಶವ ಹೂತ ಪತಿ: ತನಿಖೆ ವೇಳೆ ಬಯಲಾಯ್ತು ಹೆಂಡತಿ ನಾಪತ್ತೆ ನಾಟಕ – Kannada News | Vijayapura: Husband Murders Wife Over Debt Dispute, Buries Her and Files False Missing Complaint

ಆರೋಪಿ ಮತ್ತು ಮೃತ ಮಹಿಳೆImage Credit source: Tv9 Kannada

ವಿಜಯಪುರ, ಫೆಬ್ರವರಿ 18: ಪತ್ನಿಯನ್ನು ತಾನೇ ಕೊಂದು ಶವವವನ್ನು ಮನೆ ಆವರಣದಲ್ಲಿಯೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕತೆ ಕಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟದಲ್ಲಿ ನಡೆದಿದೆ. ಕೊಲೆ ನಡೆದು ಬರೋಬ್ಬರಿ 24 ದಿನಗಳ ಬಳಿಕ ಆರೋಪಿಯ ಅಸಲೀ ಮುಖ ಅನಾವರಣಗೊಂಡಿದ್ದು, ಸಾಲದ ವಿಚಾರಕ್ಕೆ ಜಗಳ ನಡೆದ ಹಿನ್ನೆಲೆ ಹೆಂಡತಿಯನ್ನ ದುಷ್ಟ ಕೊಂದಿದ್ದ ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಸರೋಜಿನಿ (45) ಪತಿಯಿಂದಲೇ ದಾರುಣವಾಗಿ ಹತ್ಯೆಯಾದ ದುರ್ದೈವಿ ಮಹಿಳೆಯಾಗಿದ್ದು, ಆರೋಪಿ ಪ್ರಭು ರತ್ನಾಕರ್​​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ನಿ ಸರೋಜಿನಿ ಹೆಸರಲ್ಲಿ ಆರೋಪಿ ಸಾಲಮಾಡಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಕಳೆದ ಜ.24ರಂದೂ ಗಲಾಟೆ ನಡೆದಿತ್ತು. ಈ ವೇಳೆ ಸರೋಜಿನಿ ತಲೆಗೆ ಕಬ್ಬಿಣದ ರಾಡ್​​ನಿಂದ ಹೊಡೆದು ಪ್ರಭು ರತ್ನಾಕರ ಹತ್ಯೆ ಮಾಡಿದ್ದ. ಬಳಿಕ ಶವವನ್ನು ಮನೆ ಆವರಣದಲ್ಲಿಯೇ ಹೂತು ಹಾಕಿದ್ದ ಎಂಬ ವಿಚಾರ ತನಿಖೆ ವೇಳೆ ಗೊರರಬಂದಿದೆ.

ಇದನ್ನೂ ಓದಿ: ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ; ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ

ತಾನೇ ಪತ್ನಿ ಕೊಂದು ನಾಪತ್ತೆ ದೂರು ನೀಡಿದ್ದ ಆರೋಪಿ

ಇನ್ನು ಪತ್ನಿ ಸರೋಜಿನಿಯನ್ನು ತಾನೇ ಕೊಂದಿದ್ದ ಪ್ರಭು ರತ್ನಾಕರ ಆಕೆ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಸವದತ್ತಿಗೆ ಹೋಗುವ ಸಲುವಾಗಿ ದೇವರಹಿಪ್ಪರಗಿ ಪಟ್ಟದ ಕಿರಾಣಿ ಅಂಗಡಿಗೆ ಅಗತ್ಯ ಸಾಮಗ್ರಿ ತರೋದಾಗಿ ಹೇಳಿ ಹೋಗಿದ್ದ ಪತ್ನಿ ಸರೋಜಿನಿ ತಿರುಗಿ ಬಂದಿಲ್ಲ. ಹೀಗಾಗಿ ಆಕೆಗಾಗಿ ತಾನು ಮತ್ತು ಮಗ ಪಟ್ಟದ ತುಂಬೆಲ್ಲ ಹುಡುಕಾಡಿದ್ದೇವೆ. ಆದರೆ ಆಕೆಯ ಪತ್ತೆಯಾಗಿಲ್ಲ. ಇದರಿಂದ ಮತ್ತಷ್ಟು ಆತಂಕಗೊಂಡು ಸಂಬಂಧಿಕರ ಜೊತೆಗೂಡಿ ಹುಡುಕಾಡಿದ್ದೇನೆ. ನೆಂಟರಿಷ್ಟರ ಮನೆಗಳಿಗೂ ಕರೆ ಮಾಡಿ ಆಕೆಯ ಬಗ್ಗೆ ವಿಚಾರಿಸಿದರೂ ಪತ್ನಿಯ ಸುಳಿವು ಸಿಕ್ಕಿಲ್ಲ ಎಂದು ದೇವರಹಿಪ್ಪರಗಿ ಪೊಲೀಸ್ ಠಾಣೆಗೆ ಕಂಪ್ಲೇಂಟ್​​​ ನೀಡಿದ್ದ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ವೇಳೆ ಪ್ರಭು ರತ್ನಾಕರನ ಮೇಲೆಯೇ ಅನುಮಾನಗೊಂಡಿದ್ದಾರೆ. ಹೀಗಾಗಿ ಆತನನ್ನು ಕರೆಸಿ ವಿಚಾರಣೆ ನಡೆಸಿದಾಗ ಅಸಲೀ ಸತ್ಯ ಬಯಲಾಗಿದೆ. ಸದ್ಯ ಕಾನೂನು ಪ್ರಕಾರ ಹೂತಿರುವ ಶವ ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಶವ ಹಸ್ತಾಂತರಿಸಲಾಗಿದೆ. ಸರೋಜಿನಿ ತಾಯಿ ಪ್ರಭು ರತ್ನಾಕರ್​​ ವಿರುದ್ಧ ದೂರು ನೀಡಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version