Headlines

CSK vs MI: ಟಿ20ಯಲ್ಲಿ ಹಾರ್ದಿಕ್ ಪಾಂಡ್ಯ ಟೆಸ್ಟ್ ಮಾದರಿಯ ಇನ್ನಿಂಗ್ಸ್: ಮುಂಬೈ ತಂಡಕ್ಕೆ ನಾಯಕನೇ ವಿಲನ್? – Kannada News | Mumbai Indians Captain Hardik Pandya’s Test like innings in IPL 2026 vs CSK

ಬೆಂಗಳೂರು (ಮೇ. 03): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 44 ನೇ ಪಂದ್ಯ ಮೇ 2 ರಂದು ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಮುಂಬೈ ಇಂಡಿಯನ್ಸ್ (Mumbai Indians) ಈ ಪಂದ್ಯವನ್ನು ಹೀನಾಯವಾಗಿ ಸೋತಿತು. ಇದು ಅವರ ಸತತ ಮೂರನೇ ಸೋಲು. ಈ ಸೋಲಿನ ಮೂಲಕ ಮುಂಬೈ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ. ಒಂದು ಪವಾಡ ನಡೆದರೆ ಮಾತ್ರ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯ. ನಿನ್ನೆಯ ಪಂದ್ಯದಲ್ಲಿ ಮುಂಬೈನ…

Read More

World Laughter Day: ಇಂದು ವಿಶ್ವ ನಗು ದಿನ; ಭಾರತದಿಂದ ಜಗತ್ತಿಗೆ ಹರಡಿದ ಆನಂದದ ಅಲೆ – Kannada News | World Laughter Day: Discover the Power and Benefits of Laughter for Health

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಪ್ರತಿದಿನವೂ ಒಂದಲ್ಲ ಒಂದು ವಿಶೇಷ ದಿನವಾಗಿ ಆಚರಿಸಲ್ಪಡುತ್ತಿದೆ. ಕಾಫಿ ದಿನ, ಚಾಕಲೇಟ್ ದಿನ ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಆದರೆ, ಈ ದಿನಗಳಲ್ಲಿ ಬಹುತೇಕವು ಅಮೆರಿಕದಂತಹ ದೇಶಗಳ “ರಾಷ್ಟ್ರೀಯ ದಿನಗಳು” ಅಥವಾ ಖಾಸಗಿ ಸಂಸ್ಥೆಗಳ ಪ್ರಚಾರದ ತಂತ್ರಗಳಾಗಿರುತ್ತವೆ. ಇವುಗಳ ನಡುವೆ ನಿಜವಾದ ಜಾಗತಿಕ ಮಾನ್ಯತೆ ಪಡೆದ ಮತ್ತು ಭಾರತೀಯ ಮೂಲದಿಂದ ವಿಶ್ವದಾದ್ಯಂತ ಪಸರಿಸಿದ ವಿಶೇಷ ದಿನವೆಂದರೆ ಅದು “ವಿಶ್ವ ನಗು ದಿನ”. ವಿಶ್ವ ನಗು ದಿನವನ್ನು ಪ್ರತಿ ವರ್ಷ ಮೇ…

Read More

ಶೃಂಗೇರಿ ಅಂಚೆ ಮತಗಳ ಮರು ಎಣಿಕೆ : ಬಿಜೆಪಿ, ಕಾಂಗ್ರೆಸ್​​​ಗೆ ಸಿಕ್ಕ ವೋಟ್​ ಎಷ್ಟು? ಫಲಿತಾಂಶ ಯಾವಾಗ ಘೋಷಣೆ; ಚುನಾವಣಾಧಿಕಾರಿ ಮಹತ್ವದ ಹೇಳಿಕೆ – Kannada News | Sringeri Postal Ballot Recount: Jeevaraj and Rajegowda Vote Counts Altered

ಚಿಕ್ಕಮಗಳೂರು, ಮೇ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆಯು ಹೈಕೋರ್ಟ್‌ನ ಆದೇಶದಂತೆ ಪೂರ್ಣಗೊಂಡಿದೆ. ಏಪ್ರಿಲ್ 6, 2026 ರಂದು ಹೈಕೋರ್ಟ್ ಹೊರಡಿಸಿದ ತೀರ್ಪಿನ ಪ್ರಕಾರ, ಸುಮಾರು 279 ಅಂಚೆ ಮತಪತ್ರಗಳನ್ನು ಮರು ಪರಿಶೀಲನೆ ಮತ್ತು ಮರು ಎಣಿಕೆ ಮಾಡಲಾಯಿತು. ಇವಿಎಂ ಮತಗಳ ಬಗ್ಗೆ ಯಾವುದೇ ಆದೇಶವಿರಲಿಲ್ಲ. ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಅಂಚೆ ಮತಗಳ ಟ್ಯಾಂಪರಿಂಗ್ ಆರೋಪದ ಮೇಲೆ ಚಿಕ್ಕಮಗಳೂರು ನಗರ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಏಕ್ ದಿನ್’ ಸಿನಿಮಾಗೆ ಸೋಲು; 2ನೇ ದಿನ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ – Kannada News | Junaid Khan Sai Pallavi starrer Ek Din Box Office Collection day 2 report

ಆಮಿರ್ ಖಾನ್ ಪುತ್ರ ಜುನೈದ್ ಖಾನ್ (Junaid Khan) ಮತ್ತು ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಕಾಂಬಿನೇಷನ್‌ನ ‘ಏಕ್ ದಿನ್’ (Ek Din) ಸಿನಿಮಾ ಕಳೆದ ಶುಕ್ರವಾರವಷ್ಟೇ ತೆರೆಕಂಡಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ಸೆಳೆಯಲು ಈ ಸಿನಿಮಾ ವಿಫಲವಾಗಿದೆ. ಮೊದಲ ದಿನವೇ ನೆಗೆಟಿವ್ ವಿಮರ್ಶೆ ಪಡೆದುಕೊಂಡಿದ್ದ ಈ ಚಿತ್ರ, ಎರಡನೇ ದಿನವೂ (ಶನಿವಾರ, ಮೇ 2) ಚೇತರಿಕೆ ಕಾಣದೆ ಗಳಿಕೆಯಲ್ಲಿ ಕುಸಿತ ಕಂಡಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಚಿತ್ರತಂಡಕ್ಕೆ ದೊಡ್ಡ ಪ್ರಮಾಣದ ನಷ್ಟ ಆಗಲಿದೆ….

Read More

ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು? – Kannada News | Sringeri Recount Saga: Invalid Ballots Challenge Rajegowda’s Win, EC Decision Awaited

ಚಿಕ್ಕಮಗಳೂರು, ಮೇ. 3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆ ಏಳು ಗಂಟೆಗೆ ಆರಂಭವಾಗಿ ದಿನವಿಡೀ ಮುಂದುವರಿದು ಅಂತಿಮವಾಗಿ ಅಂತ್ಯಗೊಂಡಿದೆ. ಈ ಘಟನೆಯ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಂನಿಂದಲೂ ಗೊಂದಲ ಶುರುವಾಗಿದ್ದು, ಇವಿಎಂಗಳನ್ನು ಇರಿಸಿರುವ ಕೋಣೆಯಲ್ಲಿ ಅನಗತ್ಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಅವರು ಆರೋಪಿಸಿದ್ದಾರೆ. ಒಂಬತ್ತು ಗಂಟೆಗೆ ಎಲ್ಲಾ 22 ಟ್ರಂಕ್‌ಗಳನ್ನು ತೆರೆದು ಬ್ಯಾಲೆಟ್‌ಗಳನ್ನು ಎಣಿಕೆ ಮಾಡಲಾಗಿದೆ. ಅಮಾನ್ಯ ಎಂದು ಪರಿಗಣಿಸಲಾಗಿದ್ದ…

Read More

ಸಾಗರದ ಮಧ್ಯೆ ಭಾರತದ ಶಕ್ತಿಯ ಉದಯ: ಗ್ರೇಟ್ ನಿಕೋಬಾರ್ ಮಹಾಯೋಜನೆ ಬಗೆಗಿನ ಪ್ರಶ್ನೆಗಳಿಗೆ ಸರ್ಕಾರದ ಉತ್ತರ – Kannada News | Great Nicobar Project: India’s Power Rise, Govt Answers Rahul Gandhi on Security and Growth

ಶ್ರೀವಿಜಯಪುರಂ, ಮೇ 03: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅಂಡಮಾನ್-ನಿಕೋಬಾರ್​ನಲ್ಲಿನ ಗ್ರೇಟ್ ನಿಕೋಬಾರ್ ಯೋಜನೆ ಬಗ್ಗೆ ಅಪಸ್ವರ ಎತ್ತಿದ್ದಾರೆ. ಅವರು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಿದೆ. ಸರ್ಕಾರ ಈ ಯೋಜನೆಯನ್ನು ರಾಷ್ಟ್ರೀಯ ರಕ್ಷಣೆಗೆ ಅತ್ಯಗತ್ಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆ ಎಂದು ಕರೆಯುತ್ತಿದೆ ಆದರೆ ಕೆಲವರು ಇದನ್ನು ವಿರೋಧಿಸುತ್ತಿದ್ದಾರೆ. ರಾಹುಲ್ ಗಾಂಧಿ ಕೆಲವು ದಿನಗಳ ಹಿಂದಷ್ಟೇ ಅಂಡಮಾನ್-ನಿಕೋಬಾರ್ ದ್ವೀಪಕ್ಕೆ ಭೇಟಿ ನೀಡಿದ್ದರು. ಗ್ರೇಟ್ ನಿಕೋಬಾರ್ ದ್ವೀಪದಲ್ಲಿನ ಪರಿಸರ ನಾಶ ಮತ್ತು ಸ್ಥಳೀಯ ಬುಡಕಟ್ಟು…

Read More

IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ – Kannada News | Rohit Sharma teaches Hardik Pandya a lesson in Captain from the dugout Watch the video

ಬೆಂಗಳೂರು (ಮೇ. 03): ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ (Rohit Sharma) ಪ್ರಸ್ತುತ ಐಪಿಎಲ್ 2026 ರಲ್ಲಿ ಆಟದಿಂದ ಹೊರಗುಳಿದಿದ್ದಾರೆ. ಇಂಜುರಿ ಮಧ್ಯೆಯೂ ಅವರು ತಂಡದೊಂದಿಗೆ ಪ್ರತಿ ಪಂದ್ಯದಲ್ಲೂ ಕಾಣಿಸಿಕೊಳ್ಳುತ್ತಾರೆ, ಪ್ಲೇಯಿಂಗ್ ಇಲೆವೆನ್‌ನಲ್ಲಿ ಇಲ್ಲದಿದ್ದರೂ ಡಗೌಟ್​ನಲ್ಲಿದ್ದು ತಂಡಕ್ಕೆ ಸಪೋರ್ಟ್ ಮಾಡುತ್ತಿದ್ದಾರೆ. ಆರ್‌ಸಿಬಿ ವಿರುದ್ಧದ ಋತುವಿನ 20 ನೇ ಪಂದ್ಯದ ಸಮಯದಲ್ಲಿ, ರೋಹಿತ್ ಮಂಡಿರಜ್ಜು ಗಾಯಕ್ಕೆ ತುತ್ತಾದರು. ಗಂಭೀರ ಗಾಯವಾಗಿಲ್ಲ ಎಂದು ವರದಿಯಾಗಿದ್ದರೂ ಅವರನ್ನು ಇನ್ನೂ ಸಂಪೂರ್ಣ ಫೀಟ್ ಆಗಿಲ್ಲ. ರೋಹಿತ್ ಅವರ ಸಲಹೆಯಿಂದ ಸಿಎಸ್​ಕೆ ವಿಕೆಟ್‌ ಪತನ…

Read More

ಏನು ಮಾಡ್ತಿದ್ದೀರಾ? ರೋಹಿತ್ ಶರ್ಮಾ ಮುಖದಲ್ಲಿ ಹತಾಶೆ, ನೋವು, ನಿರಾಸೆ! – Kannada News | Rohit Sharma in the dugout unhappy MI vs CSK Match

ಐಪಿಎಲ್ 2026ರ ಅತ್ಯಂತ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿಯು ಅಭಿಮಾನಿಗಳಿಗೆ ಕೇವಲ ಆಟದ ರೋಮಾಂಚನವನ್ನಷ್ಟೇ ನೀಡಲಿಲ್ಲ, ಬದಲಿಗೆ ಒಂದು ಭಾವನಾತ್ಮಕ ಕ್ಷಣಕ್ಕೂ ಸಾಕ್ಷಿಯಾಯಿತು. ಮೇ 2ರಂದು ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು ಡಗೌಟ್‌ನಲ್ಲಿ ಅತ್ಯಂತ ನಿರಾಶೆ ಮತ್ತು ಅಸಮಾಧಾನದಿಂದ ಕುಳಿತಿದ್ದ ದೃಶ್ಯಗಳು ಈಗ ಕ್ರೀಡಾ ಲೋಕದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಪಂದ್ಯದ ವೇಳೆ ನಾಯಕ ಹಾರ್ದಿಕ್…

Read More

‘ಜೀ5’ ಮೂಲಕ ಒಟಿಟಿ ಅಂಗಳಕ್ಕೆ ಕಾಲಿಡುತ್ತಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ; ಪ್ರಸಾರ ಯಾವಾಗ? – Kannada News | Love Mocktail 3 Movie OTT Release Darling Krishna new movie streaming on Zee5 on 8 May

ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ (Darling Krishna) ಅವರು ‘ಲವ್ ಮಾಕ್ಟೇಲ್’ ಸರಣಿಯ ಮೂರು ಸಿನಿಮಾಗಳ ಮೂಲಕ ಗೆಲುವು ಕಂಡಿದ್ದಾರೆ. ‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಯಶಸ್ಸಿನ ಬಳಿಕ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾಗೆ ನಿರ್ದೇಶನ ಮಾಡಿದರು. ಅಲ್ಲದೇ, ಅವರೇ ಮುಖ್ಯ ಭೂಮಿಕೆ ನಿಭಾಯಿಸಿದರು. ಮಾರ್ಚ್ 19ಕ್ಕೆ ಬಿಡುಗಡೆ ಆಗಿದ್ದ ಈ ಸಿನಿಮಾ ಹಿಟ್ ಆಗಿದೆ. ಈಗ ಒಟಿಟಿಯಲ್ಲಿ (OTT) ಈ ಸಿನಿಮಾವನ್ನು ನೋಡುವ ಸಮಯ ಹತ್ತಿರ ಆಗಿದೆ….

Read More

Video: ಸೂಪರ್​ ಮಾರ್ಕೆಟ್​​ ಲೂಟಿ ಮಾಡಲು ಬಂದ ಕಳ್ಳರಿಗೆ ಸಿಬ್ಬಂದಿ ಕಲಿಸಿದ ಪಾಠ ನೋಡಿ – Kannada News | Robbery Attempt in Brazil Foiled as Staff Fight Back, Suspects Arrested

ಬ್ರೆಜಿಲ್‌ನಲ್ಲಿ ನಡೆದ ಈ ದರೋಡೆ ಯತ್ನವು ಕಳ್ಳರ ಪಾಲಿಗೆ ಅಕ್ಷರಶಃ ದುಸ್ವಪ್ನವಾಗಿ ಪರಿಣಮಿಸಿತ್ತು. ಶಸ್ತ್ರಸಜ್ಜಿತರಾಗಿ ಬಂದ ದರೋಡೆಕೋರರಿಗೆ ಸೂಪರ್​ ಮಾರ್ಕೆಟ್​ನ ಸಿಬ್ಬಂದಿ ನೀಡಿರುವ ತಿರುಗೇಟು ಎಲ್ಲೆಡೆ ಚರ್ಚೆಯಾಗುತ್ತಿದೆ. ಬ್ರೆಜಿಲ್‌ನ ಮಳಿಗೆಯೊಂದಕ್ಕೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು, ಸಿಬ್ಬಂದಿಯನ್ನು ಬೆದರಿಸಿ ನಗದು ರಿಜಿಸ್ಟರ್‌ನಲ್ಲಿದ್ದ ಹಣವನ್ನು ಲೂಟಿ ಮಾಡಲು ಯತ್ನಿಸಿದ್ದಾರೆ. ದರೋಡೆಕೋರರಲ್ಲೊಬ್ಬ ಹಣವನ್ನು ಚೀಲಕ್ಕೆ ತುಂಬಿಸಿಕೊಳ್ಳುತ್ತಿದ್ದಾಗ, ಅಲ್ಲಿನ ಸಿಬ್ಬಂದಿ ಧೈರ್ಯ ಪ್ರದರ್ಶಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ.ದರೋಡೆಕೋರರಲ್ಲಿ ಒಬ್ಬನನ್ನು ಬಂಧಿಸಿ ಈಗಾಗಲೇ ಜೈಲಿಗೆ ಕಳುಹಿಸಲಾಗಿದೆ. ಉದ್ಯೋಗಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ…

Read More