CSK vs DC: ಸಿಎಸ್​​ಕೆ ವಿರುದ್ಧ ಸೋತ ಮುಂಬೈ ಐಪಿಎಲ್​ನಿಂದ ಭಾಗಶಃ ಔಟ್ – Kannada News | IPL 2026: CSK Dominates MI in Match 44, Mumbai’s Playoff Hopes Dim

ಐಪಿಎಲ್ 2026 ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಮುಂಬೈ ವಿರುದ್ಧ ಸಿಎಸ್​ಕೆ ಭರ್ಜರಿ ಜಯ ಸಾಧಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲಿ ಮುಂಬೈ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಯಿತು. ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಹೀನಾಯವಾಗಿ ಸೋತ ಮುಂಬೈ ಈ ಆವೃತ್ತಿಯಲ್ಲಿ 7ನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇತ್ತ ಈ ಆವೃತ್ತಿಯಲ್ಲಿ 4ನೇ ಗೆಲುವು ದಾಖಲಿಸಿದ ಸಿಎಸ್​ಕೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಈ ಸೋಲಿನೊಂದಿಗೆ ಮುಂಬೈ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವುದು ಭಾಗಶಃ ಖಚಿತವಾದ್ದಂತ್ತಾಗಿದೆ.

Source link

ನಿಂತು ಹೋಯ್ತೆ ‘ದೇವರ 2’, ಜೂ ಎನ್​​ಟಿಆರ್​​ಗೆ ಕೈ ಕೊಟ್ಟರೇ ಕೊರಟಾಲ ಶಿವ – Kannada News | Koratala Shiva announce movie with Nandamuri Balakrishna what about Devara 2

ಜೂ ಎನ್​ಟಿಆರ್ (Jr NTR) ಪ್ರಸ್ತುತ ಪ್ರಶಾಂತ್ ನೀಲ್ (Prashant Neel) ನಿರ್ದೇಶನದ ಸಿನಿಮಾನಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಈಗಾಗಲೇ ಒಂದು ವರ್ಷ ಆಗಿದ್ದು, ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಯುವ ಹಂತದಲ್ಲಿದೆ ಎನ್ನಲಾಗುತ್ತಿದೆ. ಜೂ ಎನ್​​ಟಿಆರ್ ಅವರ ಈ ಹಿಂದಿನ ಸಿನಿಮಾ ‘ದೇವರ’. ಆ ಸಿನಿಮಾದ ಬಗ್ಗೆ ಆರಂಭದಲ್ಲಿ ನೆಗೆಟಿವ್ ವಿಮರ್ಶೆಗಳು ಬಂದರೂ ಸಹ ಜೂ ಎನ್​​ಟಿಆರ್ ಅಭಿಮಾನಿಗಳು ಸಿನಿಮಾವನ್ನು ಹಿಟ್ ಮಾಡಿಸುವಲ್ಲಿ ಸಫಲರಾಗಿದ್ದರು. ಸಿನಿಮಾದ ಎರಡನೇ ಭಾಗಕ್ಕಾಗಿ ಜೂ ಎನ್​​ಟಿಆರ್ ಅಭಿಮಾನಿಗಳು ಎದುರು ನೋಡುತ್ತಿದ್ದರು. ಆದರೆ ಆ ಸಿನಿಮಾ ನಿರ್ದೇಶಿಸಿದ್ದ ಕೊರಟಾಲ ಶಿವ ಇದೀಗ ಹೊಸ ಪ್ರಾಜೆಕ್ಟ್​​ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

‘ದೇವರ’ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದ ಕಾರಣ, ‘ದೇವರ 2’ ಬರುವುದಿಲ್ಲವೇನೋ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಈ ಹಿಂದೆ ಜೂ ಎನ್​ಟಿಆರ್ ಮತ್ತು ಅವರ ಸಹೋದರ ಹಾಗೂ ‘ದೇವರ’ ಸಿನಿಮಾದ ಸಹ ನಿರ್ಮಾಪಕರೂ ಆಗಿರುವ ಕಲ್ಯಾಣ್ ರಾಮ್, ‘ದೇವರ 2’ ಖಂಡಿತ ಬರುತ್ತದೆ ಎಂದಿದ್ದರು. ಆದರೆ ಈಗ ಕೊರಟಾಲ ಶಿವ ಬೇರೆ ಸಿನಿಮಾನಲ್ಲಿ ತೊಡಗಿಕೊಂಡಿರುವುದು ಗಮನಿಸಿದರೆ ‘ದೇವರ 2’ ಬರುವುದು ಅನುಮಾನ ಎಂಬಂತಾಗಿದೆ.

ಕೊರಟಾಲ ಶಿವ, ಜೂ ಎನ್​​ಟಿಆರ್ ಅವರ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಜೊತೆಗೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಸಿನಿಮಾಕ್ಕೆ ಯಾವುದೇ ಹೆಸರಿಟ್ಟಿಲ್ಲವಾದರೂ, ಬಾಲಕೃಷ್ಣ ಮತ್ತು ಕೊರಟಾಲ ಶಿವ ಒಟ್ಟಿಗೆ ಇರುವ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಪೋಸ್ಟರ್​​ನಲ್ಲಿ ‘ಪವರ್ ಮೀಟ್ಸ್ ಪರ್ಪಸ್’ ಮತ್ತು ‘ಮಾಸ್ ಬಿಕೇಮ್ ಮೂಮೆಂಟ್’ ಎಂಬ ಪವರ್​​ಫುಲ್ ಸಾಲುಗಳನ್ನು ಬರೆಯಲಾಗಿದೆ. ಇದು ನಂದಮೂರಿ ಬಾಲಕೃಷ್ಣ ಅವರ 112 ನೇ ಸಿನಿಮಾ ಆಗಿರಲಿದೆ.

ಇದನ್ನೂ ಓದಿ:ಜೂ ಎನ್​​ಟಿಆರ್ ಸಿನಿಮಾಕ್ಕೆ ಬಾಲಿವುಡ್ ನಟನಿಗೆ ಗಾಳ ಹಾಕಿದ ಪ್ರಶಾಂತ್ ನೀಲ್

ಬಾಲಕೃಷ್ಣ ಪ್ರಸ್ತುತ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಆ ಸಿನಿಮಾದ ಚಿತ್ರೀಕರಣ ಪೂರ್ಣವಾಗುವ ಮುಂಚೆಯೇ ಹೊಸ ಸಿನಿಮಾವನ್ನು ಬಾಲಯ್ಯ ಘೋಷಣೆ ಮಾಡಿದ್ದಾರೆ. ಕೊರಟಾಲ ಶಿವ ಅವರು, ಬಾಲಯ್ಯನ ಮಾಸ್ ಅಪೀಲಿಗೆ ಹೊಂದಿಕೆ ಆಗುವ ಕತೆಯನ್ನು ರೆಡಿ ಮಾಡಿಕೊಂಡಿದ್ದು, ಈ ಸಿನಿಮಾವು ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಕತೆಯನ್ನು ಹೊಂದಿರಲಿದೆ ಎನ್ನಲಾಗುತ್ತಿದೆ.

ಬಾಲಯ್ಯ ಬಹು ಬೇಗನೆ ಸಿನಿಮಾಗಳನ್ನು ಮುಗಿಸುತ್ತಾರೆ. ಜೂ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಸಿನಿಮಾ ಬಿಡುಗಡೆ ಆಗಲು ಇನ್ನೂ ಆರೇಳು ತಿಂಗಳು ಹಿಡಿಲಿದೆ ಎನ್ನಲಾಗುತ್ತಿದೆ. ಒಂದೊಮ್ಮೆ ಅಷ್ಟರಲ್ಲಿ ಬಾಲಯ್ಯ ಹಾಗೂ ಕೊರಟಾಲ ಶಿವ ಸಿನಿಮಾ ಸಹ ಮುಗಿದರೆ ‘ದೇವರ 2’ ಸಿನಿಮಾವನ್ನು ಜೂ ಎನ್​ಟಿಆರ್ ಶುರು ಮಾಡುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Assembly Elections 2026 Result Live Streaming: ತಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ? – Kannada News | When Where and How to Watch 5 State Assembly Election 2026 Counting and Results Live Streaming Online in Kannada

ನವದೆಹಲಿ, ಮೇ 2: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು (Assembly Elections Results 2026) ಚುನಾವಣಾ ಆಯೋಗವು ಮೇ 4ರಂದು ಪ್ರಕಟಿಸಲಿದೆ. ಮೊದಲು ಅಂಚೆ ಮತಪತ್ರಗಳನ್ನು ಎಣಿಸಿ ನಂತರ ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಎಣಿಸುವ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ.

ಈ ಬಾರಿಯ ಚುನಾವಣೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಹಳ ನಿರ್ಣಾಯಕವಾಗಿದೆ. ಏಕೆಂದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ ಈ ಬಾರಿ ಬಿಜೆಪಿ ನೇರ ಪೈಪೋಟಿಗೆ ಇಳಿದಿದೆ. ಎಕ್ಸಿಟ್ ಪೋಲ್ ವರದಿ ಪ್ರಕಾರ ಈ ಬಾರಿ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಹೀಗಾಗಿ, ಮಮತಾ ಬ್ಯಾನರ್ಜಿ ತನ್ನ ಖುರ್ಚಿ ಉಳಿಸಿಕೊಳ್ಳುತ್ತಾರೋ ಇಲ್ಲವೋ ಎಂಬ ಕುತೂಹಲ ಹೆಚ್ಚಾಗಿದೆ.

ಇದನ್ನೂ ಓದಿ: Tamil Nadu Election Exit Poll Results 2026: ತಮಿಳುನಾಡಿನಲ್ಲಿ ನಡೆಯಲಿಲ್ಲ ಬಿಜೆಪಿ ಕಮಾಲ್; ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ 

ತಮಿಳುನಾಡಿನಲ್ಲಿ, ಆಡಳಿತಾರೂಢ ಡಿಎಂಕೆ ತನ್ನ ಹಿಡಿತವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಆದರೆ ಬಿಜೆಪಿ ಬೆಂಬಲಿತ ಎಐಎಡಿಎಂಕೆ ಕೂಡ ಸಾಕಷ್ಟು ಪೈಪೋಟಿ ನೀಡಿದೆ. ಸದ್ಯದ ಸಮೀಕ್ಷೆ ಪ್ರಕಾರ ತಮಿಳುನಾಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಡಿಎಂಕೆ ಮತ್ತೆ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಾಗಿದೆ. ಕೇರಳದಲ್ಲಿ ಈ ಬಾರಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಬರುವ ನಿರೀಕ್ಷೆಯಿದೆ.

ಅಸ್ಸಾಂನಲ್ಲಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ತನ್ನ ಭದ್ರಕೋಟೆಯನ್ನು ರಕ್ಷಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: 5 State Assembly Election Exit Poll Results 2026: ಅಸ್ಸಾಂ, ಬಂಗಾಳದಲ್ಲಿ ಬಿಜೆಪಿಗೆ ಭರ್ಜರಿ ಜಯ, ಕೇರಳ, ತಮಿಳುನಾಡಿನಲ್ಲಿ ಕಾಂಗ್ರೆಸ್ ಮೈತ್ರಿಗೆ ಗೆಲುವು; ಎಕ್ಸಿಟ್ ಪೋಲ್ ಸಮೀಕ್ಷೆ ಇಲ್ಲಿದೆ

ಚುನಾವಣಾ ಫಲಿತಾಂಶಗಳ ದಿನಾಂಕ ಮತ್ತು ಸಮಯ:

ದಿನಾಂಕ: ಮೇ 4ರ ಸೋಮವಾರ

ಮತ ಎಣಿಕೆ: ಬೆಳಿಗ್ಗೆ 8 ಗಂಟೆಗೆ ಆರಂಭ

ಫಲಿತಾಂಶವನ್ನು ಎಲ್ಲಿ ನೋಡಬಹುದು?:

ವಿಧಾನಸಭಾ ಚುನಾವಣೆಯ ಅಧಿಕೃತ ಫಲಿತಾಂಶಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ (eci.gov.in) ವೀಕ್ಷಿಸಬಹುದು. ಫಲಿತಾಂಶದ ವಿವರವಾದ ವರದಿ ಮತ್ತು ಅಪ್ಡೇಟ್​​ಗಾಗಿ ಟಿವಿ9 ವಾಹಿನಿ ಮತ್ತು ವೆಬ್​ಸೈಟ್​ ವೀಕ್ಷಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಾವಣಗೆರೆ: 20 ಲಕ್ಷ ಮೌಲ್ಯದ ಚಿನ್ನ ಹಿಂದಿರುಗಿಸಿದ ಅಂಗಡಿ ಮಾಲೀಕ; ರುದ್ರೇಶ್ ಪ್ರಾಮಾಣಿಕತೆಗೆ ಪೊಲೀಸರ ಮೆಚ್ಚುಗೆ – Kannada News | Davangere Shop Owner Returns 20 Lakh Gold, Praised for Honesty

ದಾವಣಗೆರೆ, ಮೇ 02: ಗ್ರಾಹಕರೊಬ್ಬರು ಅಂಗಡಿಯಲ್ಲಿ ಬಿಟ್ಟುಹೋಗಿದ್ದ 20 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಮಾಲೀಕ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿರುವಂತಹ ಘಟನೆ ದಾವಣಗೆರೆ ನಗರ ಗಡಿಯಾರ ಕಂಬದ ವಿಜಯಲಕ್ಷ್ಮಿ ರಸ್ತೆಯಲ್ಲಿರುವ ಎ ಟು ಝಡ್ ಡ್ರೈ ಫುಡ್ಸ್ ಅಂಗಡಿಯಲ್ಲಿ ನಿನ್ನೆ ನಡೆದಿದೆ. ರುದೇಶ್​ ನಾಯ್ಕ್ ಅವರ ಅಂಗಡಿಗೆ ಬಂದಿದ್ದ ಮಹಿಳಾ ಗ್ರಾಹಕಿಯೊಬ್ಬರು ಚಿನ್ನಾಭರಣದ ಬ್ಯಾಗ್ ಮರೆತು ಹೋಗಿದ್ದರು. ಇಂದು ಬಂದು ತೆಗೆದುಕೊಂಡು ಹೋಗಬಹುದು ಎಂದು ಬ್ಯಾಗ್ ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಆದರೆ ಯಾರು ಬಾರದ ಹಿನ್ನಲೆ ಬಸವನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಷ್ಟರಲ್ಲಿ ಚಿನ್ನಾಭರಣ ಬಿಟ್ಟುಹೋಗಿದ್ದ ಮಾಲೀಕರು ಸಹ ಪತ್ತೆ ಆಗಿದ್ದು, ಪೊಲೀಸರ ಸಮ್ಮುಖದಲ್ಲೇ ಚಿನ್ನಾಭರಣ ಹಿಂದಿರುಗಿಸಲಾಗಿದೆ. ಸದ್ಯ ರುದ್ರೇಶ್ ನಾಯ್ಕ್ ಪ್ರಾಮಾಣಿಕತೆ ಬಗ್ಗೆ ಪೊಲೀಸರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಕ್ಕಟ್ಟಿನ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಬಂದ 45,000 ಟನ್ ಎಲ್​ಪಿಜಿ ಹೊತ್ತ ಟ್ಯಾಂಕರ್ – Kannada News | Indian 45,000 tonne LPG tanker Sarv Shakti crosses Strait of Hormuz

ನವದೆಹಲಿ, ಮೇ 2: ಪಶ್ಚಿಮ ಏಷ್ಯಾ ಇನ್ನೂ ಯುದ್ಧದ ಬಿಸಿಯಿಂದ ಸಂಪೂರ್ಣವಾಗಿ ತಣ್ಣಗಾಗಿಲ್ಲ. ಅಮೆರಿಕ-ಇರಾನ್ ಸಂಘರ್ಷದಿಂದ ಸಮುದ್ರಗಳು ಸ್ತಬ್ಧಗೊಂಡಿರುವಂತೆಯೇ ಭಾರತ ತನ್ನ ರಾಜತಾಂತ್ರಿಕ ಪರಾಕ್ರಮವನ್ನು ಪ್ರದರ್ಶಿಸಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಬಿಕ್ಕಟ್ಟಿನ ನಡುವೆ 45,000 ಟನ್ ಎಲ್‌ಪಿಜಿಯನ್ನು ಹೊತ್ತ ಬೃಹತ್ ಸೂಪರ್‌ಟ್ಯಾಂಕರ್ “ಸರ್ವ ಶಕ್ತಿ” ಹಾರ್ಮುಜ್ ಜಲಸಂಧಿಯಲ್ಲಿನ ದಿಗ್ಬಂಧನವನ್ನು ದಾಟಿ ಹೋಗಲು ಪ್ರಯತ್ನಿಸುತ್ತಿದೆ.

ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಮತ್ತು LPGಯ ಎರಡನೇ ಅತಿದೊಡ್ಡ ಬಳಕೆದಾರ ರಾಷ್ಟ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದಿಂದ ಪೂರೈಕೆ ಸರಪಳಿಯಲ್ಲಿನ ಅಡಚಣೆಯಿಂದಾಗಿ ದೇಶವು ಅಡುಗೆ ಅನಿಲದ ತೀವ್ರ ಕೊರತೆಯನ್ನು ಅನುಭವಿಸಿದೆ. ಈ ಸಮಯದಲ್ಲಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಈ ಬೃಹತ್ ಸರಕುಗಳನ್ನು ಖರೀದಿಸಿದೆ. ‘ಸರ್ವ ಶಕ್ತಿ’ ಸುರಕ್ಷಿತವಾಗಿ ಭಾರತದ ತೀರವನ್ನು ತಲುಪಿದರೆ ಮಾರುಕಟ್ಟೆಯಲ್ಲಿನ ಎಲ್​ಪಿಜಿ ಕೊರತೆಯನ್ನು ನಿವಾರಿಸಲು ಇದು ಸಹಾಯಕವಾಗಲಿದೆ.

ಇದನ್ನೂ ಓದಿ: ಮೊಜ್ತಬಾ ಖಮೇನಿ ವಿರುದ್ಧ ಶತ್ರುಗಳು ವದಂತಿ ಹರಡುತ್ತಿದ್ದಾರೆ; ಇರಾನ್​ನಿಂದ ಸುಪ್ರೀಂ ನಾಯಕನ ಆರೋಗ್ಯದ ಬಗ್ಗೆ ಸ್ಪಷ್ಟನೆ

18 ಭಾರತೀಯ ಪ್ರಜೆಗಳು ಸೇರಿದಂತೆ 20 ಸಿಬ್ಬಂದಿಗಳನ್ನು ಹೊಂದಿರುವ ಈ ಹಡಗು ಈಗ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದು, ಮೇ 13ರಂದು ಆಗಮಿಸುವ ನಿರೀಕ್ಷೆಯಿದೆ. ಈ ಹಿಂದೆ ಸೂಪರ್‌ಟ್ಯಾಂಕರ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಲು ಪ್ರಯತ್ನಿಸುತ್ತಿದೆ ಎಂದು ಹಡಗು ಟ್ರ್ಯಾಕಿಂಗ್ ಡೇಟಾವನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ವರದಿ ಮಾಡಿತ್ತು.

ಇದನ್ನೂ ಓದಿ: ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ

ಫೆಬ್ರವರಿ ಅಂತ್ಯದಲ್ಲಿ ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆ ಬಹುತೇಕ ಸ್ಥಗಿತಗೊಂಡಿದೆ. ಇರಾನಿನ ಸಾಗಣೆಯ ಮೇಲೆ ಅಮೆರಿಕ ಕಠಿಣ ದಿಗ್ಬಂಧನ ವಿಧಿಸಿದೆ. ಕಳೆದ ತಿಂಗಳು ಇರಾನ್​ನ ಜಲಸಂಧಿಯನ್ನು ದಾಟಲು ಪ್ರಯತ್ನಿಸುತ್ತಿರುವ ಹಡಗುಗಳ ಮೇಲೆ ಗುಂಡು ಹಾರಿಸಲಾಗಿತ್ತು. ಇದರಿಂದಾಗಿ ಹಲವಾರು ಹಡಗುಗಳು ಹಿಂತಿರುಗಬೇಕಾಯಿತು. ಅದರಲ್ಲಿ ಭಾರತದ ಹಡಗೂ ಸೇರಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಖಲ್ ಜಾಕ್ಸನ್ ಅಪಹರಣಕ್ಕೆ ನಡೆದಿತ್ತು ಸಂಚು: ಯತ್ನಿಸಿದವರು ಯಾರು ಗೊತ್ತೆ? – Kannada News | Pablo Escobar wanted to Kidnap Michael Jackson

ಮೈಖಲ್ ಜಾಕ್ಸನ್ (Michael Jackson), ವಿಶ್ವದ ಅತ್ಯುತ್ತಮ ಎಂಟರ್ಟೈನರ್​. ಇಂದಿನ ಹಾಲಿವುಡ್​ ಪಾಪ್ ಸ್ಟಾರ್​​ಗಳಾದ ಟೈಲರ್ ಸ್ವಿಫ್ಟ್, ಕಾನ್ಯೆ, ಜಸ್ಟಿನ್ ಬೀಬರ್ ಇನ್ನೂ ಹಲವರ ಒಟ್ಟು ಅಭಿಮಾನಿಗಳು, ಜನಪ್ರಿಯತೆಯನ್ನು ಒಟ್ಟು ಮಾಡಿದರೂ ಸಹ ಮೈಖಲ್ ಜಾಕ್ಸನ್ ಅವರ ಜನಪ್ರಿಯತೆ ಹೆಚ್ಚು ತೂಗುತ್ತದೆ. ಮೈಖಲ್ ಯಾವುದಾದರೂ ನಗರಕ್ಕೆ ಹೋದರೆಂದರೆ ಆ ನಗರವೇ ಬಂದ್ ಆಗಿಬಿಡುತ್ತಿತ್ತು. ಮೈಖಲ್ ಅನ್ನು ನೊಡಲು ಜನ ಊಟ, ನಿದ್ದೆ ಬಿಟ್ಟು ಕಾಯುತ್ತಿದ್ದರು. ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿ ಆಗಿದ್ದರು ಮೈಖಲ್. ಇಂಥಹಾ ಮೈಖಲ್ ಜಾಕ್ಸನ್ ಅನ್ನು ಅಪಹರಣ ಮಾಡಲು ಪ್ರಯತ್ನವೊಂದು ನಡೆದಿತ್ತು.

ಪಾಬ್ಲೊ ಎಸ್ಕೊಬಾರ್, ವಿಶ್ವದ ಕುಖ್ಯಾತ ಪಾತಕಿ. ಕೊಲಂಬಿಯಾದ ಈ ಪಾತಕಿ, ವಿಶ್ವದಾದ್ಯಂತ ಮಾದಕ ವಸ್ತು ಜಾಲವನ್ನು ಹೊಂದಿದ್ದ. ಮಾದಕ ವಸ್ತು ಮಾರಾಟ ಮಾಡಿ ಲಕ್ಷಾಂತರ ಕೋಟಿ ಹಣ ಗಳಿಸಿದ್ದ. ಅದು ಮಾತ್ರವೆಂಬಂತೆ ಹಲವಾರು ಕೊಲೆ, ಸುಲಿಗೆಗಳನ್ನು ಸಹ ಮಾಡಿದ್ದ. ಕೊಲಂಬಿಯಾದ ಸರ್ಕಾರವನ್ನೇ ಖರೀದಿ ಮಾಡಲು ಸಹ ಮುಂದಾಗಿದ್ದ. ಇಂಥಹಾ ನಟೋರಿಯಸ್ ವ್ಯಕ್ತಿಗೆ ಮೈಖಲ್ ಜಾಕ್ಸನ್ ಅನ್ನು ಅಪಹರಿಸುವ ಐಡಿಯಾ ಬಂದಿತ್ತು.

ಪಾಬ್ಲೊ ಎಸ್ಕೋಬಾರ್​​ಗೆ ಐಶಾರಾಮಿ ಜೀವನದ ಗೀಳಿತ್ತು. ಕೊಲಂಬಿಯಾನಲ್ಲಿ ನೂರಾರು ಎಕರೆ ಭೂಪ್ರದೇಶದಲ್ಲಿ ಅತ್ಯಂತ ಐಶಾರಾಮಿ ಮನೆ ಹೊಂದಿದ್ದ. ತನ್ನದೇ ಖಾಸಗಿ ಮೃಗಾಲಯ ಸಹ ಹೊಂದಿದ್ದ. ಹಾಲಿವುಡ್​​ನಿಂದ ಸ್ಟಾರ್​​ಗಳನ್ನು ಕರೆಸಿ ಪಾರ್ಟಿಗಳನ್ನು ಮಾಡುತ್ತಿದ್ದ. ಪಾಬ್ಲೊ ಎಸ್ಕೋಬಾರ್ ಮಗ, ಮೈಖಲ್ ಜಾಕ್ಸನ್​​ನ ದೊಡ್ಡ ಅಭಿಮಾನಿ ಆಗಿದ್ದ. ಒಮ್ಮೆ ತಂದೆ ಪಾಬ್ಲೊ ಬಳಿ ನನ್ನ ಹುಟ್ಟುಹಬ್ಬಕ್ಕೆ ಮೈಖಲ್ ಜಾಕ್ಸನ್ ಅನ್ನು ಕರೆಸುವಂತೆ ಕೇಳಿದ್ದ.

ಇದನ್ನೂ ಓದಿ:ಹೊಸ ಸಿನಿಮಾ ಘೋಷಿಸಿದ ವಿಜಯ್ ದೇವರಕೊಂಡ; ಇದರಲ್ಲಿದ್ದಾರೆ ಹಾಲಿವುಡ್ ತಂತ್ರಜ್ಞರು

ಅದಕ್ಕೆ ಪಾಬ್ಲೊ, ಇದು ಒಳ್ಳೆಯ ಐಡಿಯಾ, ಕಾನ್ಸರ್ಟ್​ ಮಾಡಲೆಂದು ಮೈಖಲ್ ಅನ್ನು ಕರೆಯುತ್ತೇನೆ. ಆತ ಕಾನ್ಸರ್ಟ್ ಮಾಡಲು ಬಂದಾಗ ಆತನನ್ನು ಅಪಹರಣ ಮಾಡಿ, ಅಮೆರಿಕದಿಂದ ಒಂದು ಬಿಲಿಯನ್ ಡಾಲರ್ (ಈಗಿನ ಒಂದು ಲಕ್ಷ ಕೋಟಿಗೆ ಸಮ) ಹಣ ಕೇಳುತ್ತೇನೆ’ ಎಂದಿದ್ದನಂತೆ. ಈ ವಿಷಯವನ್ನು ಸ್ವತಃ ಪಾಬ್ಲೊ ಎಸ್ಕೋಬಾರ್ ಪುತ್ರನೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಆದರೆ ತಂದೆಯ ಮಾತು ನನಗೆ ಇಷ್ಟ ಆಗಲಿಲ್ಲ. ನನಗೆ ಮೈಖಲ್ ಜಾಕ್ಸನ್ ಎಂದರೆ ಅಚ್ಚು ಮೆಚ್ಚು, ನಾನು ಆತನನ್ನು ಆರಾಧಿಸುತ್ತಿದ್ದೆ, ಆತನಿಗೆ ನೋವು ಮಾಡುವ ಮಾತುಗಳನ್ನು ನನ್ನ ತಂದೆ ಆಡಿದಾಗ ನನಗೆ ಆಘಾತವಾಗಿತ್ತು. ಮತ್ತೆಂದೂ ನಾನು ತಂದೆಯ ಬಳಿ ಮೈಖಲ್ ಅನ್ನು ಕರೆಸುವ ಬಗ್ಗೆ ಮಾತನಾಡಲಿಲ್ಲ ಎಂದಿದ್ದಾರೆ.

ಇದೀಗ ಮೈಖಲ್ ಜಾಕ್ಸನ್ ಜೀವನ ಕುರಿತ ‘ಮೈಖಲ್’ ಸಿನಿಮಾ ಬಿಡುಗಡೆ ಆಗಿದೆ. ಮೈಖಲ್ ಜಾಕ್ಸನ್ ಅವರ ಸಹೋದರ ಪುತ್ರ ಜಫಾರ್ ಜಾಕ್ಸನ್ ಅವರೇ ಮೈಖಲ್ ಜಾಕ್ಸನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆ ಒಂದು ವಾರವಾಗಿತ್ತು. ಈಗಲೇ ಸುಮಾರು 2600 ಕೋಟಿಗೂ ಹೆಚ್ಚು ಮೊತ್ತವನ್ನು ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿದೆ. ಭಾರತದಲ್ಲಿ ಒಂದು ವಾರಕ್ಕೆ 32 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

CSK vs DC: ಸತತ 8ನೇ ಪಂದ್ಯದಲ್ಲೂ ಫೇಲ್; ಸೂರ್ಯನಿಗೆ ಗ್ರಹಣ – Kannada News | IPL 2026: Suryakumar Yadav’s Form Woes Continue; Debutant Ghosh Shines for CSK vs MI

ಐಪಿಎಲ್ 2026 (IPL 2026) ರ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ (CSK vs MI) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡಕ್ಕೆ ಮತ್ತೆ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ನಮನ್ ಧೀರ್ ಅವರನ್ನು ಹೊರತುಪಡಿಸಿ ತಂಡದ ಯಾವೊಬ್ಬ ಆಟಗಾರನಿಗೂ ಒಂದೊಳ್ಳೆ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಈ ಆವೃತ್ತಿಯ ಐಪಿಎಲ್‌ನಲ್ಲಿ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಅನುಭವಿ ಸೂರ್ಯಕುಮಾರ್ ಯಾದವ್ (Suryakumar Yadav) ಸತತ 8ನೇ ಪಂದ್ಯದಲ್ಲೂ ನಿರಾಸೆ ಮೂಡಿಸಿದರು. ಸಿಎಸ್​ಕೆ ಪರ ಮೊದಲ ಪಂದ್ಯವನ್ನಾಡಿದ ರಾಮಕೃಷ್ಣ ಘೋಷ್ ಅವರ ಬೌಲಿಂಗ್​ನಲ್ಲಿ ಸೂರ್ಯ ಕ್ಯಾಚಿತ್ತು ನಿರ್ಗಮಿಸಿದರು.

ಚೊಚ್ಚಲ ಪಂದ್ಯದಲ್ಲೇ ವಿಕೆಟ್

ಮುಂಬೈ ಇನ್ನಿಂಗ್ಸ್‌ನ ಒಂಬತ್ತನೇ ಓವರ್‌ನಲ್ಲಿ ಬೌಲಿಂಗ್ ಮಾಡುವ ಅವಕಾಶ ಪಡೆದ ರಾಮಕೃಷ್ಣ ತಮ್ಮ ಮೊದಲ ಓವರ್‌ನಲ್ಲಿ ಬೌಂಡರಿ ಸೇರಿದಂತೆ ಕೇವಲ ಏಳು ರನ್‌ಗಳನ್ನು ಬಿಟ್ಟುಕೊಟ್ಟರು. ಮೊದಲ ಓವರ್‌ನಲ್ಲಿ ಅದ್ಭುತ ಬೌಲಿಂಗ್ ಮಾಡಿದ ರಾಮಕೃಷ್ಣ ಘೋಷ್ ಮುಂದಿನ ಓವರ್​ನಲ್ಲಿ ತಮ್ಮ ಚೊಚ್ಚಲ ಐಪಿಎಲ್ ವಿಕೆಟ್ ಪಡೆಯುವಲ್ಲೂ ಯಶಸ್ವಿಯಾದರು.

ರಾಮಕೃಷ್ಣ ಘೋಷ್ ತಮ್ಮ ಎರಡನೇ ಓವರ್‌ನ (ಇನಿಂಗ್ಸ್‌ನ 11ನೇ) ಮೊದಲ ಎರಡು ಎಸೆತಗಳಲ್ಲಿ ಬೌಂಡರಿಗಳನ್ನು ಬಿಟ್ಟುಕೊಟ್ಟರು, ಆದರೆ ನಾಲ್ಕನೇ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶಸ್ವಿಯಾದರು. ಸೂರ್ಯ ಬಿಗ್ ಶಾಟ್ ಆಡಲು ಪ್ರಯತ್ನಿಸಿದರು, ಆದರೆ ಡೀಪ್ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಡೆವಾಲ್ಡ್ ಬ್ರೆವಿಸ್ ಸುಲಭ ಕ್ಯಾಚ್ ಹಿಡಿದು ಸೂರ್ಯ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು. ಸೂರ್ಯ 12 ಎಸೆತಗಳಲ್ಲಿ 21 ರನ್ ಗಳಿಸಿ ಔಟಾದರು.

ಸೂರ್ಯನಿಗೆ ಗ್ರಹಣ

ಸೂರ್ಯಕುಮಾರ್ ಈ ರೀತಿಯ ಬೇಗನೇ ವಿಕೆಟ್ ಒಪ್ಪಿಸುತ್ತಿರುವುದು ಇದು 8ನೇ ಪಂದ್ಯ. ಈ ಬಾರಿಯ ಐಪಿಎಲ್‌ನಲ್ಲಿ ಸೂರ್ಯನಿಗೆ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಮುಂಬೈ ತಂಡಕ್ಕೆ ಆಸರೆಯಾಗಬೇಕಿದ್ದ ಸೂರ್ಯ, ತಮ್ಮ ಕಳಪೆ ಪ್ರದರ್ಶನದಿಂದಾಗಿ ತಂಡಕ್ಕೆ ಹೊರೆಯಾಗಿದ್ದಾರೆ. ಸೂರ್ಯ ಅವರ ಸಪ್ಪೆ ಆಡ ಮುಂಬೈ ತಂಡದ ಸೋಲಿಗೆ ಪ್ರಮುಖ ಕಾರಣವಾಗಿದೆ. ಸೂರ್ಯ ಅವರ ಫಾರ್ಮ್​ ಇದೇ ರೀತಿ ಮುಂದುವರೆದರೆ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ.

CSK vs MI IPL 2026 Live Score: ಚೆನ್ನೈ ಮೊದಲ ವಿಕೆಟ್ ಪತನ

ರಾಮಕೃಷ್ಣ ಘೋಷ್ ಯಾರು?

ಸೂರ್ಯ ಅವರ ವಿಕೆಟ್ ಪಡೆದ 28 ವರ್ಷದ ರಾಮಕೃಷ್ಣ ಘೋಷ್​ಗೆ ಇದು ಎರಡನೇ ಐಪಿಎಲ್‌ ಸೀಸನ್ ಆಗಿದೆ. ಕಳೆದ ಸೀಸನ್‌ನಲ್ಲಿ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 50 ಲಕ್ಷ ರೂ.ಗೆ ಖರೀದಿಸಿತ್ತು ಆದರೆ ಇಡೀ ಸೀಸನ್‌ನಲ್ಲಿ ಆಡುವ ಅವಕಾಶ ಸಿಗಲಿಲ್ಲ. ಇನ್ನು ದೇಶೀಯ ಕ್ರಿಕೆಟ್‌ನಲ್ಲಿ ಮಹಾರಾಷ್ಟ್ರ ಪರ ಆಡುವ ರಾಮಕೃಷ್ಣ 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ದಾಖಲೆಯ ಪ್ರದರ್ಶನ ನೀಡಿದ್ದರು. ಹಿಮಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ, ಘೋಷ್ 9.4 ಓವರ್‌ಗಳಲ್ಲಿ 42 ರನ್‌ಗಳಿಗೆ 7 ವಿಕೆಟ್‌ಗಳನ್ನು ಪಡೆದಿದ್ದರು. ಇದು ಪಂದ್ಯಾವಳಿಯ ಇತಿಹಾಸದಲ್ಲಿ ಮಹಾರಾಷ್ಟ್ರದ ಅತ್ಯುತ್ತಮ ಬೌಲಿಂಗ್ ದಾಖಲೆಯಾಗಿದೆ. ಘೋಷ್ 13 ಪ್ರಥಮ ದರ್ಜೆ ಪಂದ್ಯಗಳಲ್ಲಿ 28 ವಿಕೆಟ್‌ಗಳು, 11 ಲಿಸ್ಟ್ ಎ ಪಂದ್ಯಗಳಲ್ಲಿ 21 ವಿಕೆಟ್‌ಗಳು ಮತ್ತು 9 ಟಿ20 ಪಂದ್ಯಗಳಲ್ಲಿ ಕೇವಲ 2 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬುಮ್ರಾಗೆ 8 ಪಂದ್ಯಗಳಲ್ಲಿ ಮಾಡಲಾಗದ್ದನ್ನು ಒಂದೇ ಪಂದ್ಯದಲ್ಲಿ ಮಾಡಿದ ಮಿಚೆಲ್ ಸ್ಟಾರ್ಕ್

Source link

ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ – Kannada News | Femina Miss India 2026 winner Sadhvi Satish Sail gets grand well come in Karavar

ಕಾರವಾರ ಶಾಸಕ ಸತೀಶ್ ಸೈಲ್ (Satish Sail) ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರು ಫೆಮಿನಾ ಮಿಸ್ ಇಂಡಿಯಾ 2026 ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ಫಿನಾಲೆ ನಡೆದಿತ್ತು. ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿ ಕಾರವಾರಕ್ಕೆ ಬಂದ ಸಾಧ್ವಿ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾಧ್ವಿ ಅವರು ಸ್ಪರ್ಧೆಯಲ್ಲಿ ತಮಗೆ ತೊಡಿಸಲಾದ ಕಿರೀಟವನ್ನು ದೇವರ ಮುಂದಿರಿಸಿ ಆಶೀರ್ವಾದ ಸಹ ಪಡೆದಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:46 pm, Sat, 2 May 26

Source link

ಕೋಲಾರದಲ್ಲಿ ಬಿಸಿಲ ತಾಪಕ್ಕೆ ತತ್ತರಿಸಿದ ವಾನರ ಸೈನ್ಯ: ಅನ್ನ, ನೀರಿಲ್ಲದೇ ನರಳಾಟ; ನಾಲ್ಕೈದು ಕೋತಿಗಳು ಸಾವು – Kannada News | Antaragange Heatwave Crisis: Monkeys Dying Amid Water, Food Scarcity and Negligence

ನೀರಿಗಾಗಿ ಹುಡುಕಾಟ ನಡೆಸಿರುವ ಕೋತಿImage Credit source: tv9 kannada

ಕೋಲಾರ, ಮೇ 02: ಅಲ್ಲಿ ವರ್ಷದ 365 ದಿನಗಳು ಗಂಗೆ ನಿರಂತರವಾಗಿ ಹರಿಯುತ್ತಾಳೆ. ಹಾಗಾಗಿ ಆ ಜಾಗವನ್ನ ಅಂತರಗಂಗೆ ಎಂದೆ ಕರೆಯಲಾಗುತ್ತದೆ. ಆದರೆ ಈ ಬಾರಿಯ ಬಿಸಿಲ (Heatwave) ಬೇಗೆ ಅಂತರಗಂಗೆಗೂ ತಟ್ಟಿದ್ದು, ಪ್ರಾಣಿ-ಪಕ್ಷಿಗಳು ಆಹಾರ, ನೀರಿಲ್ಲದೆ ಪ್ರಾಣ ಕಳೆದುಕೊಳ್ಳುತ್ತಿವೆ. ಕಳೆದ ಒಂದು ವಾರದಲ್ಲಿ ನಾಲ್ಕರಿಂದ ಐದು ಕೋತಿಗಳು (Monkeys) ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ವರ್ಷ ಕೋಲಾರದಲ್ಲಿ ಬಿಸಿಲ ಬೇಗೆಯಿಂದ ತಾಪಮಾನ ಹೆಚ್ಚಾಗಿದೆ. ಕಾಶಿವಿಶ್ವೇಶ್ವರ ಸ್ವಾಮಿಯ ಸನ್ನಿಧಿ ಹಾಗೂ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಅಂತರಗಂಗೆಯಲ್ಲಿ, ಹಲವು ವರ್ಷಗಳಿಂದ ಸಾವಿರಾರು ಕೋತಿಗಳು, ನವಿಲುಗಳು ಮತ್ತು ಮೊಲಗಳು ವಾಸಿಸುತ್ತಿವೆ. ಆದರೆ, ಈ ವರ್ಷದ ಬಿಸಿಲ ತಾಪ ತಾರಕಕ್ಕೇರಿದ್ದು, ಪ್ರಾಣಿಗಳು ತೀವ್ರ ನಿತ್ರಾಣ ಸ್ಥಿತಿಗೆ ತಲುಪಿವೆ. ಈ ಪ್ರದೇಶವು ಅರಣ್ಯ ಇಲಾಖೆ, ಮುಜರಾಯಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಕೊಂಡರಾಜನಹಳ್ಳಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಗೆ ಬರುತ್ತದೆ. ಇಷ್ಟು ಜವಾಬ್ದಾರಿಯುತ ಇಲಾಖೆಗಳಿದ್ದರೂ, ಬೆಟ್ಟದ ಮೇಲೆ ವಾಸಿಸುವ ಮೂಕ ಪ್ರಾಣಿಗಳಿಗೆ ಕನಿಷ್ಠ ಕುಡಿಯುವ ನೀರು ಅಥವಾ ಆಹಾರದ ವ್ಯವಸ್ಥೆ ಮಾಡದಿರುವುದು ದುರ್ದೈವದ ಸಂಗತಿಯಾಗಿದೆ.

ಇದನ್ನೂ ಓದಿ: ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ!

ಇನ್ನು ಕೋಲಾರ ನಗರಕ್ಕೆ ಕೂಗಳತೆ ದೂರದಲ್ಲಿರುವ ಅಂತರಗಂಗೆಯಲ್ಲಿ ಸಾವಿರಾರು ಕೋತಿಗಳು, ನವಿಲುಗಳು, ಮೊಲ ಸೇರಿದಂತೆ ಹಲವು ಪ್ರಾಣಿಗಳನ್ನು ಬೆಟ್ಟದಲ್ಲಿ ಕಾಣಬಹುದು. ಪ್ರತಿ ವರ್ಷ ಬೇಸಿಗೆ ಬಂದರೆ ಸಾಕು ಇಲ್ಲಿರುವ ವಾನರ ಸೈನ್ಯಕ್ಕೆ ನೀರು, ಆಹಾರದ ಸಮಸ್ಯೆ ತಲೆದೂರುತ್ತೆ. ಕೆಲ ಕೋತಿಗಳು ಪ್ರವಾಸಿಗರ ಕೈಕಾಲು ಹಿಡಿದು ಕೊಟ್ಟ ತಿಂಡಿ ತಿಂದು ಬದುಕುತ್ತಿವೆ.

ಕೆಲವು ದಾನಿಗಳು ವಾರದಲ್ಲಿ ಎರಡ್ಮೂರು ದಿನ ಮಾರುಕಟ್ಟೆಯಿಂದ ಹಣ್ಣು, ತರಕಾರಿಗಳನ್ನ ತಂದುಕೊಡುತ್ತಾರೆ. ಇನ್ನು ಅರಣ್ಯ ಇಲಾಖೆಯು ಕಾಡು ಪ್ರಾಣಿಗಳಿಗಾಗಿ ರೂಪಿಸಿದ ಕೋಟ್ಯಂತರ ರೂ ಯೋಜನೆ ಕೇವಲ ಪುಸ್ತಕದಲ್ಲಿ ಮಾತ್ರ ಇದೆ. ಇಲ್ಲಿನ ಕೆಲವು ಪ್ರಾಣಿ ಪ್ರಿಯರು ಈ ಕೋತಿಗಳ ಪರಿಸ್ಥಿತಿಯನ್ನು ನೋಡಲಾಗದೆ ಆಗಾಗ ಮುದ್ದೆ, ತರಕಾರಿ, ಹಣ್ಣುಗಳನ್ನು ನೀಡುತ್ತಾರೆ. ಅದನ್ನು ಹೊರತು ಪಡಿಸಿದರೆ ಕೋತಿಗಳಿಗೆ ಹೊಟ್ಟೆಗೆ ತಣ್ಣೀರು ಬಟ್ಟೆನೆ ಗತಿ ಎನ್ನುವಂತ್ತಾಗಿದೆ.

ಸ್ಥಳೀಯರು ಹೇಳುವುದೇನು?

ಅರಣ್ಯ ಇಲಾಖೆ ಬೆಟ್ಟದಲ್ಲಿ ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗುವ ಮರ-ಗಿಡಗಳನ್ನು ಬೆಳೆಸಿಲ್ಲ. ಹಣ್ಣು ಸಿಗುವ ಗಿಡಮರಗಳನ್ನ ಬೆಳೆಸಬೇಕು ಹಾಗೂ ಅವುಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸ್ಥಳೀಯರಾದ ಮುನಿರಾಜು ಅವರ ಮಾತು.

ಇದನ್ನೂ ಓದಿ: ತುಮಕೂರಿನಲ್ಲಿ ಹಕ್ಕಿ ಜ್ವರದ ಭೀತಿ: ನವಿಲುಗಳ ಸಾವಿನ ಬೆನ್ನಲ್ಲೇ ಈಗ 30 ಕೋಳಿಗಳ ಸಾವು! ಜಿಲ್ಲೆಯಲ್ಲಿ ಹೈ ಅಲರ್ಟ್​

ಪ್ರವಾಸೋದ್ಯಮದ ಹೆಸರಿನಲ್ಲಿ ನಿತ್ಯ ಸಾವಿರಾರು ಜನರು ಭೇಟಿ ನೀಡುವ ಈ ಸ್ಥಳದಲ್ಲಿ, ಮೂಕ ಪ್ರಾಣಿಗಳು ಹಸಿವಿನಿಂದ ಸಾಯುತ್ತಿರುವುದು ಇಲಾಖೆಗಳ ವೈಫಲ್ಯವನ್ನು ಎತ್ತಿ ತೋರಿಸುವಂತಿದೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಈ ವಾನರ ಸೈನ್ಯವನ್ನು ರಕ್ಷಿಸುವತ್ತ ಗಮನ ಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:32 pm, Sat, 2 May 26

Source link

Exit mobile version