Headlines

ಮೊದಲ ಪಂದ್ಯದಲ್ಲೇ 7 ಗೋಲು ಬಾರಿಸಿ ವಿಶ್ವ ದಾಖಲೆ ಬರೆದ ಜರ್ಮನಿ! – Kannada News | Fifa World Cup 2026: Germany vs Curacao Highlights

ಫಿಫಾ ವಿಶ್ವಕಪ್ 2026 ರಲ್ಲಿ ಜರ್ಮನಿ ತಂಡ ಶುಭಾರಂಭ ಮಾಡಿದೆ. ಹೂಸ್ಟನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಜರ್ಮನಿ (Germany) ಮತ್ತು ಕುರಾಸಾವೊ (Curaçao) ತಂಡಗಳು ಮುಖಾಮುಖಿಯಾಗಿದ್ದವು. ಫಿಫಾ ರ್ಯಾಂಕಿಂಗ್​ನಲ್ಲಿ 82ನೇ ಸ್ಥಾನದಲ್ಲಿರುವ ಕುರಾಸಾವೊ ವಿರುದ್ಧ ಆರಂಭದಲ್ಲೇ ಸಂಪೂರ್ಣ ಹಿಡಿತ ಸಾಧಿಸಿದ ಜರ್ಮನಿ ಪಡೆ ಗೋಲುಗಳ ಮೇಲೆ ಗೋಲು ಬಾರಿಸಿದರು. ಈ ಮೂಲಕ 7-1 ಅಂತರದಿಂದ ಪಂದ್ಯ ಗೆದ್ದುಕೊಂಡಿದ್ದಾರೆ. ಈ ಗೆಲುವಿನೊಂದಿಗೆ ಜರ್ಮನಿ ತಂಡವು ಫುಟ್​ಬಾಲ್ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಜರ್ಮನಿ ವರ್ಲ್ಡ್​…

Read More

ಆಗಸದಲ್ಲೇ ಸಿಲುಕಿದ ಮುಂಗಾರು ಎಕ್ಸ್​ಪ್ರೆಸ್, ದೇಶಾದ್ಯಂತ ಸಾಮಾನ್ಯಕ್ಕಿಂತ ಶೇ.28ರಷ್ಟು ಕಡಿಯಾದ ಮಳೆ, ಜೂ. 20ರ ನಂತರ ಭಾರಿ ಮಳೆ – Kannada News | Monsoon Rain 2026: India’s Rain Down 28 Percent, Heavy Showers Forecast After June 20

ನವದೆಹಲಿ, ಜೂನ್ 15: ಧರಗೆ ಧಾರಾಕಾರವಾಗಿ ಮಳೆ ತರಬೇಕಿದ್ದ ಮುಂಗಾರು(Monsoon) ಎಕ್ಸ್​​ಪ್ರೆಸ್ ಆಗಸದಲ್ಲೇ ನಿಂತುಬಿಟ್ಟಿದೆ. ತೀವ್ರ ಬೇಸಿಗೆಯಿಂದ ಕಂಗಾಲಾಗಿದ್ದ ಭಾರತಕ್ಕೆ ಕಳೆದ ಒಂದು ವಾರದಿಂದ ಮಳೆ ಸ್ವಲ್ಪ ಮುದ ನೀಡಿದೆ. ಆದರೂ ಕೂಡ ಜೂನ್ ಮೊದಲ ಎರಡು ವಾರಗಳಲ್ಲಿ (ಜೂನ್ 4 ರಿಂದ ಜೂನ್ 14) ದೇಶಾದ್ಯಂತ ಮಳೆ ಸಾಮಾನ್ಯಕ್ಕಿಂತ ಶೇ. 28 ರಷ್ಟು ಕಡಿಮೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಈ ಅವಧಿಯಲ್ಲಿ ದೇಶದಲ್ಲಿ ಸರಾಸರಿ 47.7 ಮಿಮೀ ಮಳೆಯಾಗಬೇಕಿತ್ತು, ಆದರೆ ವಾಸ್ತವದಲ್ಲಿ 34.3 ಮಿಮೀ ದಾಖಲಾಗಿದೆ….

Read More

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ – Kannada News | Ram Charan Sukumar Film Delayed: Script Refinement and RC’s Injury Recovery Time

ರಾಮ್ ಚರಣ್ (Ram Charan) ಮತ್ತು ಸುಕುಮಾರ್ ಕಾಂಬಿನೇಷನ್‌ ಅಲ್ಲಿ ‘ರಂಗಸ್ಥಳಂ’ ಸಿನಿಮಾ ಮೂಡಿ ಬಂದಿತ್ತು. ಇದಕ್ಕೆ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ಇವರಿಬ್ಬರ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಆರಂಭವಾಗುವುದು ಮತ್ತಷ್ಟು ತಡವಾಗಲಿದೆ ಎಂದು ಸಿನಿಮಾ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಆದರೆ, ಇದು ರಾಮ್ ಚರಣ್​​ಗೆ ವರದಾನವಾಗಿದೆ. ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಅವರು ಈ ಚಿತ್ರದ ಚಿತ್ರಕಥೆಯನ್ನು ಇನ್ನೂ ಸಂಪೂರ್ಣವಾಗಿ ಫೈನಲ್ ಮಾಡಿಲ್ಲ ಎನ್ನಲಾಗಿದೆ. ಕಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮತ್ತು ಪ್ರತಿಯೊಂದು…

Read More

ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ – Kannada News | Male Mahadeshwara Betta Crowded on Amavasya: Lakhs of Devotees Offer Prayers to Madappa on Monday

ಚಾಮರಾಜನಗರ, ಜೂನ್ 15: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಭಕ್ತರ ಮಹಾಪೂರವೇ ಹರಿದುಬಂದಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರದಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತವೆ. ಆದರೆ, ಈ ಬಾರಿ ಸೋಮವಾರದಂದೇ ಅಮಾವಾಸ್ಯೆ ಒದಗಿ ಬಂದಿರುವುದರಿಂದ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ಅಮಾವಾಸ್ಯೆಯ ವಿಶೇಷ ದಿನವಾದ ಇಂದು ಮುಂಜಾನೆಯಿಂದಲೇ ಶ್ರೀ ಮಹದೇಶ್ವರ ಸ್ವಾಮಿಗೆ ಸಾಂಪ್ರದಾಯಿಕವಾಗಿ ವಿಶೇಷ…

Read More

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ…

Read More

ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು: ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ – Kannada News | Heavy Rains Lash Mantralaya, Devotees Witness Waterlogged Temple Town

ರಾಯಚೂರು, ಜೂನ್​​ 15: ಧಾರಾಕಾರ ಮಳೆಗೆ ಮಂತ್ರಾಲಯ ತತ್ತರಿಸಿದ್ದು, ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಪರಿಣಾಮ ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಸಹಸ್ರಾರು ಭಕ್ತರು ಪರದಾಟ ನಡೆಸಿದ್ದಾರೆ. ಮಳೆಯಾರ್ಭಟಕ್ಕೆ ರಸ್ತೆಗಳು ಹೊಳೆಯಂತಾಗಿದ್ದು, ಹರಿಯುವ ನೀರಿನಲ್ಲಿಯೇ ತೆರಳಿ ಭಕ್ತರು ರಾಯರ ದರ್ಶನ ಮಾಡಿದ್ದಾರೆ. ಮಠದ ಆಡಳಿತ ಮಂಡಳಿಯು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ತುರ್ತು ಕ್ರಮಗಳನ್ನು ಕೈಗೊಂಡಿದ್ದ ಹಿನ್ನೆಲೆ ಹೆಚ್ಚಿನ ಸಮಸ್ಯೆ ತಪ್ಪಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

Breaking News Today Live: ಅಮೆರಿಕ-ಇರಾನ್ ಯುದ್ಧಕ್ಕೆ ಕೊನೆಗೂ ವಿರಾಮ: ಕಚ್ಚಾ ತೈಲ ಬೆಲೆ ಇಳಿಕೆ, ಷೇರು ಮಾರುಕಟ್ಟೆ ಚೇತರಿಕೆ – Kannada News | Breaking News 15 June 2026 Live; Monsoon Forecast, Legislative Council Election, US Iran Deal, Crude Oil Price Latest Updates

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ…

Read More

ಸದ್ಗುರು ‘ಕಾವೇರಿ ಕೂಗು’ ಆಂದೋಲನದ ಭಾಗವಾಗಿ ಬೃಹತ್ ಸಮಾವೇಶ, 6 ಸಾವಿರಕ್ಕೂ ಹೆಚ್ಚು ರೈತರ ದಂಡು – Kannada News | Sadguru’s Cauvery Calling: 600 Plus Farmers Embrace Tree Based Farming in Tiruchy

ತಿರುಚಿರಾಪಳ್ಳಿ, ಜೂನ್ 14: ಕಳೆದ ಏಳು ದಶಕಗಳಲ್ಲಿ ಶೇ. 40ರಷ್ಟು ಬತ್ತಿಹೋಗಿರುವ ಕಾವೇರಿ ನದಿಯ ಪುನಃಶ್ಚೇತನಕ್ಕಾಗಿ ಕಾವೇರಿ ಕೂಗು(Cauvery Calling) ಅಭಿಯಾನವನ್ನು ಈಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಆರಂಬಿಸಿದ್ದಾರೆ. ಸದ್ಗುರು ಅವರ ಸೇವ್ ಸಾಯಿಲ್(ಮಣ್ಣು ಉಳಿಸಿ), ಕಾವೇರಿ ಕಾಲಿಂಗ್(ಕಾವೇರಿ ಕೂಗು) ಆಂದೋಲನದ ಭಾಗವಾಗಿ ತಿರುಚಿರಾಪಳ್ಳಿಯ ಎಸ್​ಆರ್​ಎಂ ವಿಶ್ವವಿದ್ಯಾಲಯದ ಆವರಣದಲ್ಲಿ ‘ಫುಡ್ ಫಾರೆಸ್ಟ್​ ಕಲ್ಟಿವೇಷನ್ ಆ್ಯಂಡ್ ಸೌತ್ ಇಂಡಿಯನ್ ಫ್ರೂಟ್ ಫೆಸ್ಟಿವಲ್’ ಬೃಹತ್ ಸಮಾವೇಶ ನಡೆಯಿತು. ಪ್ರಕೃತಿ ಸ್ನೇಹಿ ಕೃಷಿಯತ್ತ ಹೊಸ ಕ್ರಾಂತಿ ಸೃಷ್ಟಿಸಿರುವ ಈ ಸಮಾವೇಶದಲ್ಲಿ 6…

Read More

ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ – Kannada News | Shivamogga Tragedy: 6 Year Old Class 1 Student Collapses and Dies While Playing at Govt School in Sagara; Heart Attack Suspected

ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ…

Read More

BBL ಆಡಲು ಆಸ್ಟ್ರೇಲಿಯಾ ಆಟಗಾರರ ಹೊಸ ಡಿಮ್ಯಾಂಡ್..! – Kannada News | Australia Players Block BBL Privatisation Drive Amid Pay Dispute

ಆಸ್ಟ್ರೇಲಿಯಾದ ಟಿ20 ಟೂರ್ನಿಯಾದ ಬಿಗ್ ಬ್ಯಾಷ್ ಲೀಗ್ (BBL) ಅನ್ನು ಖಾಸಗೀಕರಣಗೊಳಿಸುವ ಕ್ರಿಕೆಟ್ ಆಸ್ಟ್ರೇಲಿಯಾ (CA) ಯೋಜನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೀಗೆ ಬ್ರೇಕ್ ಹಾಕಿರುವುದು ಮತ್ಯಾರೂ ಅಲ್ಲ, ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ (ACA). ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ, ಆಟಗಾರರ ಸಂಘಟನೆಯ ಒಪ್ಪಿಗೆಯಿಲ್ಲದೆ ಕ್ರಿಕೆಟ್ ಆಸ್ಟ್ರೇಲಿಯಾ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಈ ಮೂಲಕ ಬಿಗ್ ಬ್ಯಾಷ್ ಲೀಗ್​ ಅನ್ನು ಖಾಸಗೀಕರಣಗೊಳಿಸುವ ಯೋಜನೆಗೆ ತಡೆ ನೀಡಿದೆ. ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್​ ನಿರ್ಧಾರಕ್ಕೆ ಮುಖ್ಯ…

Read More