ಮೊದಲ ಪಂದ್ಯದಲ್ಲೇ 7 ಗೋಲು ಬಾರಿಸಿ ವಿಶ್ವ ದಾಖಲೆ ಬರೆದ ಜರ್ಮನಿ! – Kannada News | Fifa World Cup 2026: Germany vs Curacao Highlights

ಫಿಫಾ ವಿಶ್ವಕಪ್ 2026 ರಲ್ಲಿ ಜರ್ಮನಿ ತಂಡ ಶುಭಾರಂಭ ಮಾಡಿದೆ. ಹೂಸ್ಟನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಜರ್ಮನಿ (Germany) ಮತ್ತು ಕುರಾಸಾವೊ (Curaçao) ತಂಡಗಳು ಮುಖಾಮುಖಿಯಾಗಿದ್ದವು. ಫಿಫಾ ರ್ಯಾಂಕಿಂಗ್​ನಲ್ಲಿ 82ನೇ ಸ್ಥಾನದಲ್ಲಿರುವ ಕುರಾಸಾವೊ ವಿರುದ್ಧ ಆರಂಭದಲ್ಲೇ ಸಂಪೂರ್ಣ ಹಿಡಿತ ಸಾಧಿಸಿದ ಜರ್ಮನಿ ಪಡೆ ಗೋಲುಗಳ ಮೇಲೆ ಗೋಲು ಬಾರಿಸಿದರು. ಈ ಮೂಲಕ 7-1 ಅಂತರದಿಂದ ಪಂದ್ಯ ಗೆದ್ದುಕೊಂಡಿದ್ದಾರೆ. ಈ ಗೆಲುವಿನೊಂದಿಗೆ ಜರ್ಮನಿ ತಂಡವು ಫುಟ್​ಬಾಲ್ ವಿಶ್ವಕಪ್​ನಲ್ಲಿ ಹೊಸ ವಿಶ್ವ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಜರ್ಮನಿ ವರ್ಲ್ಡ್​ ರೆಕಾರ್ಡ್​:

ಈ ಪಂದ್ಯದಲ್ಲಿ 7 ಗೋಲುಗಳನ್ನು ಬಾರಿಸುವ ಮೂಲಕ ಜರ್ಮನಿ ತಂಡವು ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು ಗಳಿಸಿದ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಒಟ್ಟು 239 ಗೋಲುಗಳೊಂದಿಗೆ ಜರ್ಮನಿಯು ಬ್ರೆಝಿಲ್ (238 ಗೋಲುಗಳು) ತಂಡದ ಸಾರ್ವಕಾಲಿಕ ದಾಖಲೆಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಸೋತರೂ ಇತಿಹಾಸ ಬರೆದ ಕುರಾಸಾವೊ:

ಫಿಫಾ ವಿಶ್ವಕಪ್​ನಲ್ಲಿ ಆಡಿದ ಅತ್ಯಂತ ಕಡಿಮೆ ಜನಸಂಖ್ಯೆಯ ಸಣ್ಣ ದೇಶ ಎಂಬ ಹೆಗ್ಗಳಿಕೆಯುವ ಇದೀಗ ಕುರಾಸಾವೊ ಪಾಲಾಗಿದೆ. ವಿಶ್ವಸಂಸ್ಥೆಯ ಜಾಗತಿಕ ಜನಸಂಖ್ಯಾ ದಾಖಲೆಗಳ ಆಧಾರದ ಮೇಲೆ Worldometer ಸಂಸ್ಥೆಯು ಕುರಾಸಾವೊದ 2026 ರ ಮಧ್ಯಭಾಗದ ಜನಸಂಖ್ಯೆಯನ್ನು 1,85,440 ಎಂದು ಅಂದಾಜಿಸಿದೆ.

ಅಂದರೆ 2 ಲಕ್ಷಕ್ಕೂ ಕಡಿಮೆ ಜನಸಂಖ್ಯೆ ಹೊಂದಿರುವ ದ್ವೀಪ ರಾಷ್ಟ್ರ ಕುರಾಸಾವೊ ಫಿಫಾ ವಿಶ್ವಕಪ್ ಅಂಗಳದಲ್ಲಿ ಕಣಕ್ಕಿಳಿಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಫುಟ್​ಬಾಲ್ ವಿಶ್ವಕಪ್​ ಆಡಿದ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ಇನ್ನು ಈ ಪಂದ್ಯದ ಆರಂಭದಲ್ಲಿ ಜರ್ಮನಿ ಮುನ್ನಡೆ ಪಡೆದರೂ, ಕುರಾಸಾವೊ ತಂಡದ ಲಿವಾನೊ ಕೊಮೆನೆನ್ಸಿಯಾ ಗಳಿಸಿದ ಐತಿಹಾಸಿಕ ಗೋಲು ಪಂದ್ಯವನ್ನು 1–1 ರಿಂದ ಸಮಬಲಗೊಳಿಸಿತು. ಇದು ವಿಶ್ವಕಪ್ ಇತಿಹಾಸದಲ್ಲಿ ಕುರಾಸಾವೊ ದೇಶದ ಮೊದಲ ಗೋಲು ಎಂಬುದು ವಿಶೇಷ.

 ನುಯೆರ್ ಹೊಸ ದಾಖಲೆ:

ಜರ್ಮನಿಯ ಅನುಭವಿ ಗೋಲ್‌ಕೀಪರ್ ಮ್ಯಾನುಯೆಲ್ ನುಯೆರ್ ತಮ್ಮ 40ನೇ ವಯಸ್ಸಿನಲ್ಲೂ (40 ವರ್ಷ, 79 ದಿನಗಳು) ಕಣಕ್ಕಿಳಿಯುವ ಮೂಲಕ ಜರ್ಮನಿ ಪರ ವಿಶ್ವಕಪ್ ಆಡಿದ ಅತ್ಯಂತ ಹಿರಿಯ ಆಟಗಾರ ಎಂಬ ಕೀರ್ತಿಗೆ ಭಾಜನರಾದರು.

ಪಂದ್ಯದ ಮುಖ್ಯಾಂಶಗಳು:

ಕೋಚ್ ಜೂಲಿಯನ್ ನಾಗೆಲ್ಸ್‌ಮನ್ ಮಾರ್ಗದರ್ಶನದಲ್ಲಿ ಕಣಕ್ಕಿಳಿದ ಜರ್ಮನಿ ಪಡೆಯು ಪಂದ್ಯದುದ್ದಕ್ಕೂ ಶೇ. 64.7 ರಷ್ಟು ಚೆಂಡಿನ ಮೇಲೆ ನಿಯಂತ್ರಣ ಸಾಧಿಸಿ ಸಂಪೂರ್ಣ ಪ್ರಾಬಲ್ಯ ಮೆರೆಯಿತು. ಅಲ್ಲದೆ ಕುರಾಸಾವೊ ರಕ್ಷಣಾ ಕೋಟೆಯನ್ನು ಸುಲಭವಾಗಿ ಭೇದಿಸಿದ ಜರ್ಮನ್ ಮುನ್ಪಡೆ ಆಟಗಾರರು ಬ್ಯಾಕ್ ಟು ಬ್ಯಾಕ್ ಗೋಲು ದಾಖಲಿಸಿದ್ದಾರೆ.

  • ಜರ್ಮನಿ ಪರ ಗೋಲು ಬಾರಿಸಿದವರು: ಕೈ ಹಾವರ್ಟ್ಜ್ (2), ಫೆಲಿಕ್ಸ್ ನ್ಮೆಚಾ, ನಿಕೋ ಶ್ಲೋಟರ್‌ಬೆಕ್, ಜಮಾಲ್ ಮುಸಿಯಾಲಾ, ನಥಾನಿಯಲ್ ಬ್ರೌನ್ ಮತ್ತು ಡೆನಿಜ್ ಉಂದಾವ್.
  • ಕುರಾಸಾವೊ ಪರ ಗೋಲು ಬಾರಿಸಿದವರು: ಲಿವಾನೊ ಕೊಮೆನೆನ್ಸಿಯಾ.

ಈ ಭರ್ಜರಿ ಗೆಲುವಿನೊಂದಿಗೆ ಜರ್ಮನಿ ತಂಡವು ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ಮುಂದಿನ ಪಂದ್ಯಗಳಲ್ಲಿ ಐವರಿ ಕೋಸ್ಟ್ ಮತ್ತು ಈಕ್ವೆಡಾರ್ ತಂಡಗಳನ್ನು ಎದುರಿಸಲಿದೆ.

ಇದನ್ನೂ ಓದಿ: BBL ಆಡಲು ಆಸ್ಟ್ರೇಲಿಯಾ ಆಟಗಾರರ ಹೊಸ ಡಿಮ್ಯಾಂಡ್..!

ಸಾರ್ವಕಾಲಿಕ ವಿಶ್ವ ದಾಖಲೆ:

ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಒಂದು ತಂಡ ತನ್ನ ಮೊದಲ ಪಂದ್ಯದಲ್ಲಿ ಅತ್ಯಂತ ಹೆಚ್ಚು ಗೋಲು ಬಾರಿಸಿದ ಸಾರ್ವಕಾಲಿಕ ದಾಖಲೆ ಹಂಗೇರಿ ತಂಡದ ಹೆಸರಿನಲ್ಲಿದೆ. 1982ರ ವಿಶ್ವಕಪ್‌ನ ತನ್ನ ಮೊದಲ ಗ್ರೂಪ್ ಪಂದ್ಯದಲ್ಲಿ ಹಂಗೇರಿಯು ಎಲ್ ಸಾಲ್ವಡಾರ್ ವಿರುದ್ಧ 10 ಗೋಲುಗಳನ್ನು ಬಾರಿಸಿ 10-1 ರಿಂದ ಐತಿಹಾಸಿಕ ಜಯ ಸಾಧಿಸಿತ್ತು. ಕಳೆದ 44 ವರ್ಷಗಳಿಂದ ಈ ದಾಖಲೆಯನ್ನು ಮುರಿಯಲು ಯಾವುದೇ ತಂಡಕ್ಕೆ ಸಾಧ್ಯವಾಗಿಲ್ಲ. ಇದೀಗ ಮೊದಲ ಮ್ಯಾಚ್​ನಲ್ಲಿ 7 ಗೋಲು ದಾಖಲಿಸಿ ಮಿಂಚಿರುವ ಜರ್ಮನಿ ಪಡೆ ಮುಂದಿನ ಪಂದ್ಯದಲ್ಲಿ ಈ ದಾಖಲೆಯನ್ನು ಮುರಿಯಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

Published On – 10:36 am, Mon, 15 June 26

Source link

ಆಗಸದಲ್ಲೇ ಸಿಲುಕಿದ ಮುಂಗಾರು ಎಕ್ಸ್​ಪ್ರೆಸ್, ದೇಶಾದ್ಯಂತ ಸಾಮಾನ್ಯಕ್ಕಿಂತ ಶೇ.28ರಷ್ಟು ಕಡಿಯಾದ ಮಳೆ, ಜೂ. 20ರ ನಂತರ ಭಾರಿ ಮಳೆ – Kannada News | Monsoon Rain 2026: India’s Rain Down 28 Percent, Heavy Showers Forecast After June 20

ನವದೆಹಲಿ, ಜೂನ್ 15: ಧರಗೆ ಧಾರಾಕಾರವಾಗಿ ಮಳೆ ತರಬೇಕಿದ್ದ ಮುಂಗಾರು(Monsoon) ಎಕ್ಸ್​​ಪ್ರೆಸ್ ಆಗಸದಲ್ಲೇ ನಿಂತುಬಿಟ್ಟಿದೆ. ತೀವ್ರ ಬೇಸಿಗೆಯಿಂದ ಕಂಗಾಲಾಗಿದ್ದ ಭಾರತಕ್ಕೆ ಕಳೆದ ಒಂದು ವಾರದಿಂದ ಮಳೆ ಸ್ವಲ್ಪ ಮುದ ನೀಡಿದೆ. ಆದರೂ ಕೂಡ ಜೂನ್ ಮೊದಲ ಎರಡು ವಾರಗಳಲ್ಲಿ (ಜೂನ್ 4 ರಿಂದ ಜೂನ್ 14) ದೇಶಾದ್ಯಂತ ಮಳೆ ಸಾಮಾನ್ಯಕ್ಕಿಂತ ಶೇ. 28 ರಷ್ಟು ಕಡಿಮೆಯಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಈ ಅವಧಿಯಲ್ಲಿ ದೇಶದಲ್ಲಿ ಸರಾಸರಿ 47.7 ಮಿಮೀ ಮಳೆಯಾಗಬೇಕಿತ್ತು, ಆದರೆ ವಾಸ್ತವದಲ್ಲಿ 34.3 ಮಿಮೀ ದಾಖಲಾಗಿದೆ. ವಿಜ್ಞಾನಿಗಳ ಪ್ರಕಾರ, ಸಾಗರದಲ್ಲಿ ತೇವಾಂಶದ ಕೊರತೆಯೇನೂ ಇಲ್ಲ. ಬದಲಿಗೆ, ಮೇಲಿನ ವಾತಾವರಣದಲ್ಲಿ ಉಂಟಾಗಿರುವ ಅಸಾಮಾನ್ಯ ಗಾಳಿಯ ಸೆಳೆತವು ಮೋಡಗಳ ಮುನ್ನಡೆಯನ್ನು ತಾತ್ಕಾಲಿಕವಾಗಿ ತಡೆದಿದೆ.

ಜೂನ್ 20 ರ ನಂತರ ಕಳೆದುಹೋದ ವೇಗ ಪಡೆದುಕೊಳ್ಳಲಿರುವ ಮುಂಗಾರು
ಮೇ ತಿಂಗಳ ದೀರ್ಘಾವಧಿ ಮುನ್ಸೂಚನೆಗಳಲ್ಲಿ ಮುಂಗಾರು ಸಾಮಾನ್ಯವಾಗಿರಲಿದೆ ಎಂದು ಊಹಿಸಲಾಗಿತ್ತು, ಆದರೆ ಮಳೆ ಕಡಿಮೆಯಾಗಿತ್ತು, ಸಮುದ್ರದಲ್ಲಿರುವ ಸಕಾರಾತ್ಮಕ ಪರಿಸ್ಥಿತಿಗಳು ಇಂದಿಗೂ ಹಾಗೇ ಇರುವುದರಿಂದ, ಸದ್ಯ ಎದುರಾಗಿರುವ ವಾತಾವರಣದ ಅಡಚಣೆ ಶೀಘ್ರದಲ್ಲೇ ದೂರವಾಗಲಿದೆ ಎಂದು ಹವಾಮಾನ ಮುನ್ಸೂಚಕರು ಆಶಾವಾದ ವ್ಯಕ್ತಪಡಿಸಿದ್ದಾರೆ.

ಜೂನ್ 20ರಿಂದ ಮುಂಗಾರು ಕಳೆದುಹೋದ ತನ್ನ ಸಂಪೂರ್ಣ ಆವೇಗವನ್ನು ಪುನಃ ಪಡೆದುಕೊಳ್ಳಲಿದೆ. ಹವಾಮಾನ ಇಲಾಖೆಯ ವಿಜ್ಞಾನಿಗಳು ವಾತಾವರಣದ ಪ್ರಸ್ತುತ ಬದಲಾವಣೆಗಳನ್ನು ಜಾಗರೂಕತೆಯಿಂದ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜೂನ್ ದ್ವಿತೀಯಾರ್ಧದಲ್ಲಿ ಪ್ರಕೃತಿಯು ಮರುಸೃಷ್ಟಿಸಲಿರುವ ಈ ಸಕಾರಾತ್ಮಕ ಬದಲಾವಣೆಯು ಕೃಷಿ ಚಟುವಟಿಕೆಗಳಿಗೆ ಭಾರಿ ವೇಗವನ್ನು ನೀಡಲಿದ್ದು, ಮುಂಬರುವ ದಿನಗಳಲ್ಲಿ ದೇಶದ ಜಲಮೂಲಗಳು ತುಂಬಿ ತುಳುಕಲಿವೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಮತ್ತು ಮಧ್ಯ ಭಾರತದ ಕೆಲವು ಭಾಗಗಳಿಗೆ ಮಾನ್ಸೂನ್ ಮತ್ತಷ್ಟು ಪ್ರವೇಶಿಸುತ್ತಿದ್ದರೂ ಸಹ ಈ ನಿಧಾನಗತಿ ಕಂಡುಬಂದಿದೆ.

ಮತ್ತಷ್ಟು ಓದಿ: ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ಕರ್ನಾಟಕದಲ್ಲಿ ಮಳೆ
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ.
ಬೆಂಗಳೂರು, ಬ್ರಹ್ಮಾವರ, ಕುಂದಾಪುರ, ಗೇರುಸೊಪ್ಪ, ಗೋಕರ್ಣ, ಕಾರವಾರ, ಕೋಟಾ, ಮಾನ್ವಿ, ಆಗುಂಬೆ, ಚಿಕ್ಕನಹಳ್ಳಿಮ ಕುಡತಿನಿ, ರಾಯಚೂರು, ಸೈದಾಪುರ, ಪರಶುರಾಂಪುರ, ಗುರುಮಿಟ್ಕಲ್, ಅಂಕೋಲಾ, ಮಾಣಿ, ಮುನೀರಾಬಾದ್, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:46 am, Mon, 15 June 26

Source link

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ – Kannada News | Ram Charan Sukumar Film Delayed: Script Refinement and RC’s Injury Recovery Time

ರಾಮ್ ಚರಣ್ (Ram Charan) ಮತ್ತು ಸುಕುಮಾರ್ ಕಾಂಬಿನೇಷನ್‌ ಅಲ್ಲಿ ‘ರಂಗಸ್ಥಳಂ’ ಸಿನಿಮಾ ಮೂಡಿ ಬಂದಿತ್ತು. ಇದಕ್ಕೆ ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ಇವರಿಬ್ಬರ ಬಹುನಿರೀಕ್ಷಿತ ಚಿತ್ರದ ಶೂಟಿಂಗ್ ಆರಂಭವಾಗುವುದು ಮತ್ತಷ್ಟು ತಡವಾಗಲಿದೆ ಎಂದು ಸಿನಿಮಾ ವಲಯದಲ್ಲಿ ಬಲವಾಗಿ ಕೇಳಿಬರುತ್ತಿದೆ. ಆದರೆ, ಇದು ರಾಮ್ ಚರಣ್​​ಗೆ ವರದಾನವಾಗಿದೆ.

ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಅವರು ಈ ಚಿತ್ರದ ಚಿತ್ರಕಥೆಯನ್ನು ಇನ್ನೂ ಸಂಪೂರ್ಣವಾಗಿ ಫೈನಲ್ ಮಾಡಿಲ್ಲ ಎನ್ನಲಾಗಿದೆ. ಕಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮತ್ತು ಪ್ರತಿಯೊಂದು ದೃಶ್ಯವನ್ನು ಅಚ್ಚುಕಟ್ಟಾಗಿ ರೂಪಿಸಲು ಸುಕುಮಾರ್ ಅವರು ಇನ್ನೂ ಸ್ವಲ್ಪ ಸಮಯಾವಕಾಶ ಕೇಳಿದ್ದಾರಂತೆ. ಹೀಗಾಗಿ, ಈ ಮೆಗಾ ಪ್ರಾಜೆಕ್ಟ್‌ನ ಅಧಿಕೃತ ಲಾಂಚ್ ಈ ವರ್ಷದ ದಸರಾ ಹಬ್ಬದ ನಂತರವಷ್ಟೇ ನಡೆಯುವ ಸಾಧ್ಯತೆ ಇದೆ.

ಈ ವಿಳಂಬ ನಟ ರಾಮ್ ಚರಣ್ ಅವರಿಗೆ ಒಂದು ರೀತಿಯಲ್ಲಿ ವರವಾಗಲಿದೆ ಎನ್ನಲಾಗುತ್ತಿದೆ. ಏಕೆಂದರೆ, ರಾಮ್ ಚರಣ್ ಸದ್ಯಕ್ಕೆ ತಮ್ಮ ಇತ್ತೀಚಿನ ಸೆನ್ಸೇಷನಲ್ ಬ್ಲಾಕ್‌ಬಸ್ಟರ್ ‘ಪೆದ್ದಿ’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಜೂನ್ 4 ರಂದು ಬಿಡುಗಡೆಯಾದ ‘ಪೆದ್ದಿ’ ಸಿನಿಮಾ 2026ರಲ್ಲಿ ದಕ್ಷಿಣ ಭಾರತದಲ್ಲೇ ನಂಬರ್ ಒನ್ ಗಳಿಕೆ ಮಾಡಿ ಭರ್ಜರಿ ದಾಖಲೆ ಬರೆಯುತ್ತಿದ್ದು, ರಾಮ್ ಚರಣ್ ಸದ್ಯ ಅದರ ಸಕ್ಸಸ್ ಸಂಭ್ರಮದಲ್ಲಿದ್ದಾರೆ.

ಇದರ ಜೊತೆಗೆ, ರಾಮ್ ಚರಣ್ ಇತ್ತೀಚೆಗೆ ಮಣಿಕಟ್ಟಿನ ಗಾಯದಿಂದ ಬಳಲುತ್ತಿದ್ದು, ಸುಕುಮಾರ್ ಸಿನಿಮಾ ತಡವಾಗುತ್ತಿರುವುದರಿಂದ ಅವರಿಗೆ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಉತ್ತಮ ಬ್ರೇಕ್ ಸಿಕ್ಕಂತಾಗಿದೆ. ಗಾಯದಿಂದ ಪೂರ್ತಿಯಾಗಿ ಗುಣಮುಖರಾದ ಬಳಿಕವೇ ಅವರು ಸುಕುಮಾರ್ ಅವರ ಬಿಗ್ ಬಜೆಟ್ ಚಿತ್ರದ ಸೆಟ್‌ಗೆ ಜಾಯಿನ್ ಆಗಲಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿಗೆ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ರಾಮ್ ಚರಣ್-ಉಪಾಸನಾ

ನಿರ್ದೇಶಕರು ಕಥೆಗಾಗಿ ಸಮಯ ತೆಗೆದುಕೊಳ್ಳುತ್ತಿರುವುದು ಮತ್ತು ನಟನಿಗೆ ಗಾಯದಿಂದ ಚೇತರಿಸಿಕೊಳ್ಳಲು ಗ್ಯಾಪ್ ಸಿಕ್ಕಿರುವುದು ಇಬ್ಬರಿಗೂ ಪ್ಲಸ್ ಪಾಯಿಂಟ್ ಆಗಿದೆ. ಸಿನಿಮಾ ತಡವಾದರೂ ಇವರಿಬ್ಬರ ಕಾಂಬಿನೇಷನ್ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇರುವುದರಿಂದ, ಗಲ್ಲಾಪೆಟ್ಟಿಗೆಯಲ್ಲಿ ಮತ್ತೊಂದು ಧೂಳೆಬ್ಬಿಸುವ ಸಿನಿಮಾ ಬರುವುದು ಗ್ಯಾರಂಟಿ ಎಂಬ ನಂಬಿಕೆಯಲ್ಲಿ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:43 am, Mon, 15 June 26

Source link

ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ – Kannada News | Male Mahadeshwara Betta Crowded on Amavasya: Lakhs of Devotees Offer Prayers to Madappa on Monday

ಚಾಮರಾಜನಗರ, ಜೂನ್ 15: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪವಿತ್ರ ಪುಣ್ಯಕ್ಷೇತ್ರವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಭಕ್ತರ ಮಹಾಪೂರವೇ ಹರಿದುಬಂದಿದೆ. ಸಾಮಾನ್ಯವಾಗಿ ಪ್ರತಿ ಸೋಮವಾರದಂದು ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತವೆ. ಆದರೆ, ಈ ಬಾರಿ ಸೋಮವಾರದಂದೇ ಅಮಾವಾಸ್ಯೆ ಒದಗಿ ಬಂದಿರುವುದರಿಂದ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ.

ಅಮಾವಾಸ್ಯೆಯ ವಿಶೇಷ ದಿನವಾದ ಇಂದು ಮುಂಜಾನೆಯಿಂದಲೇ ಶ್ರೀ ಮಹದೇಶ್ವರ ಸ್ವಾಮಿಗೆ ಸಾಂಪ್ರದಾಯಿಕವಾಗಿ ವಿಶೇಷ ಎಣ್ಣೆ ಮಜ್ಜನ (ಅಭಿಷೇಕ) ಹಾಗೂ ಅತ್ಯಂತ ಆಕರ್ಷಕ ಪುಷ್ಪಾಲಂಕಾರಗಳನ್ನು ನೆರವೇರಿಸಲಾಯಿತು. ಸಹಸ್ರಾರು ಭಕ್ತರು ಏಕಕಾಲದಲ್ಲಿ ಬೆಟ್ಟಕ್ಕೆ ಲಗ್ಗೆ ಇಟ್ಟಿರುವುದರಿಂದ ಮಲೆ ಮಹದೇಶ್ವರ ಬೆಟ್ಟದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣವು ಸಂಪೂರ್ಣವಾಗಿ ಜನಸಾಗರದಿಂದ ತುಂಬಿ ತುಳುಕುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ – Kannada News | Union Minister HD Kumaraswamy Begins Sabarimala Pilgrimage After Wearing Ayyappa Mala

ಬೆಂಗಳೂರು, ಜೂನ್​​ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಒತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡ, ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ ಸಾಗಲಿದೆ. ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರ, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಜನರ ತಂಡದೊಂದಿಗೆ ಹೆಚ್ಡಿಕೆ​​ ಯಾತ್ರೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಂತ್ರಾಲಯದಲ್ಲಿ ವರುಣನ ಅಬ್ಬರಕ್ಕೆ ಭಕ್ತರು ಕಂಗಾಲು: ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೂ ಪರದಾಟ – Kannada News | Heavy Rains Lash Mantralaya, Devotees Witness Waterlogged Temple Town

ರಾಯಚೂರು, ಜೂನ್​​ 15: ಧಾರಾಕಾರ ಮಳೆಗೆ ಮಂತ್ರಾಲಯ ತತ್ತರಿಸಿದ್ದು, ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುತ್ತಮುತ್ತಲ ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಪರಿಣಾಮ ಮಂತ್ರಾಲಯಕ್ಕೆ ಭೇಟಿ ನೀಡಿದ್ದ ಸಹಸ್ರಾರು ಭಕ್ತರು ಪರದಾಟ ನಡೆಸಿದ್ದಾರೆ. ಮಳೆಯಾರ್ಭಟಕ್ಕೆ ರಸ್ತೆಗಳು ಹೊಳೆಯಂತಾಗಿದ್ದು, ಹರಿಯುವ ನೀರಿನಲ್ಲಿಯೇ ತೆರಳಿ ಭಕ್ತರು ರಾಯರ ದರ್ಶನ ಮಾಡಿದ್ದಾರೆ. ಮಠದ ಆಡಳಿತ ಮಂಡಳಿಯು ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ತುರ್ತು ಕ್ರಮಗಳನ್ನು ಕೈಗೊಂಡಿದ್ದ ಹಿನ್ನೆಲೆ ಹೆಚ್ಚಿನ ಸಮಸ್ಯೆ ತಪ್ಪಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Breaking News Today Live: ಅಮೆರಿಕ-ಇರಾನ್ ಯುದ್ಧಕ್ಕೆ ಕೊನೆಗೂ ವಿರಾಮ: ಕಚ್ಚಾ ತೈಲ ಬೆಲೆ ಇಳಿಕೆ, ಷೇರು ಮಾರುಕಟ್ಟೆ ಚೇತರಿಕೆ – Kannada News | Breaking News 15 June 2026 Live; Monsoon Forecast, Legislative Council Election, US Iran Deal, Crude Oil Price Latest Updates

Breaking News 15 June 2026 Live Updates in Kannada: ಜಗತ್ತನ್ನೇ ತಲ್ಲಣಗೊಳಿಸಿದ್ದ ಅಮೆರಿಕ-ಇರಾನ್ ಯುದ್ಧ ಕೊನೆಗೊಳ್ಳುವ ಹಂತಕ್ಕೆ ಬಂದಿದೆ. ಯುದ್ಧವಿರಾಮದ ನಿಟ್ಟಿನಲ್ಲಿ ಉಭಯ ದೇಶಗಳು ಒಪ್ಪಂದಕ್ಕೆ ಬಂದಿದ್ದು, ಜೂನ್ 19ರಂದು ಜಿನಿವಾದಲ್ಲಿ ಸಹಿ ಹಾಕಲಿವೆ. ಇದರೊಂದಿಗೆ ಹಾರ್ಮುಝ್ ಜಲಸಂಧಿ ಸಹ ವಿಶ್ವದ ಎಲ್ಲ ದೇಶಗಳ ಹಡಗು ಸಂಚಾರಕ್ಕೆ ಮುಕ್ತವಾಗಲಿದೆ. ಪರಿಣಾಮವಾಗಿ ಕಚ್ಚಾ ತೈಲ ಬೆಲೆ ಒಂದೇ ದಿನ ಶೇ 4 ರಷ್ಟು ಇಳಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯ ನಿರೀಕ್ಷೆ ಇದೆ. ಈ ಎಲ್ಲ ಬೆಳವಣಿಗೆಗಳ ಪರಿಣಾಮ ಷೇರುಮಾರುಕಟ್ಟೆ ಚೇತರಿಕೆ ಕಂಡಿದೆ. ಇತ್ತ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಪರಿಷತ್ ಚುನಾವಣೆಯ ರಾಜಕೀಯ ಕಾವೇರಿದೆ. ಅಡ್ಡಮತದಾನದ ಭೀತಿ ಹಿನ್ನೆಲೆ ರೆಸಾಟರ್ಟ್ ರಾಜಕೀಯ ಶುರುವಾಗಿದೆ. ದಿನದ ಪ್ರಮುಖ ವಿದ್ಯಮಾನಗಳ ತಾಜಾ ಅಪ್​ಡೇಟ್ ಪಡೆಯಲು ಈ ಪುಟವನ್ನು ಆಗಾಗ್ಗೆ ರಿಫ್ರೆಷ್ ಮಾಡುತ್ತಿರಿ.

Source link

ಸದ್ಗುರು ‘ಕಾವೇರಿ ಕೂಗು’ ಆಂದೋಲನದ ಭಾಗವಾಗಿ ಬೃಹತ್ ಸಮಾವೇಶ, 6 ಸಾವಿರಕ್ಕೂ ಹೆಚ್ಚು ರೈತರ ದಂಡು – Kannada News | Sadguru’s Cauvery Calling: 600 Plus Farmers Embrace Tree Based Farming in Tiruchy

ತಿರುಚಿರಾಪಳ್ಳಿ, ಜೂನ್ 14: ಕಳೆದ ಏಳು ದಶಕಗಳಲ್ಲಿ ಶೇ. 40ರಷ್ಟು ಬತ್ತಿಹೋಗಿರುವ ಕಾವೇರಿ ನದಿಯ ಪುನಃಶ್ಚೇತನಕ್ಕಾಗಿ ಕಾವೇರಿ ಕೂಗು(Cauvery Calling) ಅಭಿಯಾನವನ್ನು ಈಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಆರಂಬಿಸಿದ್ದಾರೆ. ಸದ್ಗುರು ಅವರ ಸೇವ್ ಸಾಯಿಲ್(ಮಣ್ಣು ಉಳಿಸಿ), ಕಾವೇರಿ ಕಾಲಿಂಗ್(ಕಾವೇರಿ ಕೂಗು) ಆಂದೋಲನದ ಭಾಗವಾಗಿ ತಿರುಚಿರಾಪಳ್ಳಿಯ ಎಸ್​ಆರ್​ಎಂ ವಿಶ್ವವಿದ್ಯಾಲಯದ ಆವರಣದಲ್ಲಿ ‘ಫುಡ್ ಫಾರೆಸ್ಟ್​ ಕಲ್ಟಿವೇಷನ್ ಆ್ಯಂಡ್ ಸೌತ್ ಇಂಡಿಯನ್ ಫ್ರೂಟ್ ಫೆಸ್ಟಿವಲ್’ ಬೃಹತ್ ಸಮಾವೇಶ ನಡೆಯಿತು. ಪ್ರಕೃತಿ ಸ್ನೇಹಿ ಕೃಷಿಯತ್ತ ಹೊಸ ಕ್ರಾಂತಿ ಸೃಷ್ಟಿಸಿರುವ ಈ ಸಮಾವೇಶದಲ್ಲಿ 6 ಸಾವಿರಕ್ಕೂ ಹೆಚ್ಚು ಪ್ರಗತಿಪರ ರೈತರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಮರ ಆಧಾರಿತ ಕೃಷಿ ಮತ್ತು ಆಹಾರ ಅರಣ್ಯಗಳ ನಿರ್ಮಾಣವು ರೈತರ ಆದಾಯವನ್ನು ಹೆಚ್ಚಿಸುವುದಲ್ಲದೆ, ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಅತ್ಯಂತ ಪರಿಣಾಮಕಾರಿ ಪರಿಹಾರವಾಗಿದೆ ಎಂದು ಸಮಾವೇಶದಲ್ಲಿ ಭಾಗವಹಿಸಿದ್ದ ಕೃಷಿ ವಿಜ್ಞಾನಿಗಳು ಏಕಕಂಠದಿಂದ ಪ್ರತಿಪಾದಿಸಿದರು.

‘ಆಗ್ರೋಫಾರೆಸ್ಟ್ರಿ’ ಇನ್ಮುಂದೆ ‘ಮರ ಆಧಾರಿತ ಕೃಷಿ
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾವೇರಿ ಕೂಗು ಆಂದೋಲನದ ಸಂಯೋಜಕ ತಮಿಳ್‌ಮಾರನ್, ನಮ್ಮ ಆಂದೋಲನದ ಮೂಲಕ ರೈತರಲ್ಲಿ ಮರ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಗಮನಾರ್ಹವಾಗಿ ಹೆಚ್ಚಾಗಿದೆ. ಇದು ಮಣ್ಣಿನ ಫಲವತ್ತತೆ, ಅಂತರ್ಜಲ ವೃದ್ಧಿ ಮತ್ತು ನದಿಗಳ ಆರೋಗ್ಯವನ್ನು ಸುಧಾರಿಸುತ್ತಿದೆ. ಇತ್ತೀಚೆಗೆ ಹೊಸೂರಿನಲ್ಲಿ ನಡೆದ ಕೃಷಿ ಸಮಾವೇಶದಲ್ಲಿ ನಾವು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ‘ಅಗ್ರೋಫಾರೆಸ್ಟ್ರಿ’ ಎಂಬ ಹೆಸರನ್ನು ‘ಮರ ಆಧಾರಿತ ಕೃಷಿ’ (Tree-Based Agriculture) ಎಂದು ಮರುನಾಮಕರಣ ಮಾಡಲು ವಿನಂತಿಸಿದ್ದೆವು. ಈ ಮನವಿಯನ್ನು ಪುರಸ್ಕರಿಸಿದ ಸಚಿವರು, ಶೀಘ್ರದಲ್ಲೇ ಈ ಹೆಸರು ಬದಲಾವಣೆಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ” ಎಂದು ಹರ್ಷ ಹಂಚಿಕೊಂಡರು.

ಮಧುಮೇಹಿಗಳಿಗಾಗಿ ಬಂತು ವಿಶೇಷ ‘ಕಾವೇರಿ’ ಬಾಳೆಹಣ್ಣು!
ರಾಷ್ಟ್ರೀಯ ಬಾಳೆ ಸಂಶೋಧನಾ ಕೇಂದ್ರದ (NRCB) ನಿರ್ದೇಶಕರಾದ ಡಾ. ಸೆಲ್ವರಾಜನ್ ಅವರು ಮಾತನಾಡುತ್ತಾ, ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿದ್ದು, ಮರ ಆಧಾರಿತ ಕೃಷಿ ಇಂದಿನ ತುರ್ತು ಅಗತ್ಯವಾಗಿದೆ ಎಂದರು.
ತಮ್ಮ ಸಂಶೋಧನಾ ಕೇಂದ್ರವು ಸಂಪೂರ್ಣವಾಗಿ ಸುಕ್ರೋಸ್-ಮುಕ್ತ (Sucrose-free) ಹೊಂದಿರುವ, ಮಧುಮೇಹ (Diabetic) ರೋಗಿಗಳಿಗೂ ಸೂಕ್ತವಾದ ‘ಕಾವೇರಿ’ ಎಂಬ ಹೊಸ ತಳಿಯ ಬಾಳೆಹಣ್ಣನ್ನು ಅಭಿವೃದ್ಧಿಪಡಿಸಿದೆ ಎಂದು  ಹೇಳಿದರು. ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳ (Value-added products) ಮೂಲಕ ರೈತರು ತಮ್ಮ ಆದಾಯವನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳಬಹುದು ಎಂದು ಅವರು ವಿವರಿಸಿದರು.

ಮತ್ತಷ್ಟು ಓದಿ: ಕಾವೇರಿ ಪುನರುಜ್ಜೀವನಕ್ಕೆ ‘ಕಾವೇರಿ ಕೂಗು’ ಮಹಾ ಸಂಕಲ್ಪ: 1.2 ಕೋಟಿ ಹೊಸ ಸಸಿ ನೆಡಲು ಸಜ್ಜಾದ 2.6 ಲಕ್ಷ ರೈತರು

ತೆಂಗಿನ ತೋಟದಲ್ಲಿ ಕೋಟಿ ಆದಾಯ
ತೆಂಗಿನ ತೋಟಗಳಲ್ಲಿ ಬಹು ಬೆಳೆ ಆಧಾರಿತ ಕೃಷಿ ಮಾಡುವ ಕುರಿತು ಕೃಷಿ ತಜ್ಞ ಬಾಲಮೋಹನ್ ಮಹತ್ವದ ಮಾಹಿತಿ ನೀಡಿದರು. ಒಂದು ಎಕರೆ ತೆಂಗಿನ ತೋಟದಲ್ಲಿ ಹೆಚ್ಚಿನ ಜಾಗ ಬಳಕೆಯಾಗದೆ ಉಳಿಯುತ್ತದೆ. ಬಹು ಬೆಳೆಗಳನ್ನು ಬೆಳೆಯಬಹುದು. ಇದು ಸೂರ್ಯನ ಬೆಳಕನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನೆರವಾಗುತ್ತದೆ. ಎಲೆಗಳ ತ್ಯಾಜ್ಯಗಳು ಮಣ್ಣಿನಲ್ಲಿ ತೇವಾಂಶವನ್ನು ಕಾಯ್ದಿಟ್ಟುಕೊಳ್ಳುತ್ತವೆ ಮತ್ತು ಮಣ್ಣಿನ ಜೈವಿಕ ಇಂಗಾಲದ ಮಟ್ಟವನ್ನು ಹೆಚ್ಚಿಸಿ, ಪ್ರಯೋಜನಕಾರಿ ಸೂಕ್ಷ್ಮಜೀವಿಗಳನ್ನು ಸೃಷ್ಟಿಸುತ್ತವೆ ಎಂದರು.

ವಿಶ್ವಸಂಸ್ಥೆಯ (UN) ಪ್ರಶಸ್ತಿ ವಿಜೇತ ಕೊಯಮತ್ತೂರಿನ ಪ್ರಗತಿಪರ ರೈತ ವಲ್ಲುವನ್ ಮಾತನಾಡಿ,ನಾನು ಕೇವಲ ತೆಂಗು ಬೆಳೆಯುತ್ತಿದ್ದೆ. ಸದ್ಗುರು ಮಾರ್ಗದರ್ಶನದ ನಂತರ, ಈಗ ನನ್ನ ತೋಟದಲ್ಲಿ ಮಾವು, ಹಲಸು, ಬಾಳೆ, ಸಪೋಟ, ಜಾಜಿಕಾಯಿ, ಕಾಳುಮೆಣಸು ಸೇರಿದಂತೆ 14 ವಿಭಿನ್ನ ಬೆಳೆಗಳನ್ನು ಯಶಸ್ವಿಯಾಗಿ ಬೆಳೆಯುತ್ತಿದ್ದೇನೆ. ಸಾಮಾನ್ಯ ರೈತನಾಗಿದ್ದ ನನ್ನನ್ನು ವಿಶ್ವಸಂಸ್ಥೆಯ ವೇದಿಕೆಯವರೆಗೆ ಕರೆದೊಯ್ದ ಈಶಾ ಮತ್ತು ಸದ್ಗುರುಗಳಿಗೆ ನಾನು ಕೃತಜ್ಞನಾಗಿದ್ದೇನೆ ಎಂದರು.

ಸಮಾವೇಶದ ಪ್ರಮುಖ ಆಕರ್ಷಣೆಯಾಗಿ ಪದ್ಮಶ್ರೀ ಪುರಸ್ಕೃತ ಕಲೀಮ್ ಉಲ್ಲಾ ಖಾನ್ (ಭಾರತದ ಹೆಮ್ಮೆಯ ‘ಮ್ಯಾಂಗೋ ಮ್ಯಾನ್’) ಭಾಗವಹಿಸಿದ್ದರು. ಒಂದೇ ಮರದಲ್ಲಿ 300 ವಿವಿಧ ತಳಿಯ ಮಾವಿನಹಣ್ಣುಗಳನ್ನು ಬೆಳೆದು ಜಾಗತಿಕ ದಾಖಲೆ ಬರೆದಿರುವ ಅವರು, ಮಾವು ಕೃಷಿಯಲ್ಲಿ ಯಶಸ್ಸು ಗಳಿಸುವ ತಂತ್ರಗಳನ್ನು ರೈತರೊಂದಿಗೆ ಹಂಚಿಕೊಂಡರು.

ಬರೋಬ್ಬರಿ 60ಕ್ಕೂ ಹೆಚ್ಚು ತಳಿಯ ಬಾಳೆಹಣ್ಣುಗಳ ಪ್ರದರ್ಶನ, ತಲಾ 100ಕ್ಕೂ ಹೆಚ್ಚು ತಳಿಯ ವೈವಿಧ್ಯಮಯ ಮಾವು ಮತ್ತು ಹಲಸಿನ ಹಣ್ಣುಗಳ ಅನಾವರಣ. ಮಾವು, ಹಲಸು, ಆವಕಾಡೊ (ಬೆಣ್ಣೆಹಣ್ಣು), ಆಪಲ್ ಮತ್ತು ವಿವಿಧ ಹಣ್ಣುಗಳ ಸಸಿಗಳನ್ನು ರೈತರಿಗೆ ರಿಯಾಯಿತಿ ದರದಲ್ಲಿ ವಿತರಣೆ ನಡೆಯಿತು.

ಐಸಿಎಆರ್ (ICAR) ಮತ್ತು ತಂಜಾವೂರಿನ ನಿಫ್ಟೆಮ್ (NIFTEM) ಸೇರಿದಂತೆ ದೇಶದ 4 ಪ್ರಮುಖ ಕೃಷಿ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಹಣ್ಣುಗಳ ಕೃಷಿ, ಮಾರುಕಟ್ಟೆ ಅವಕಾಶ ಮತ್ತು ತಾಂತ್ರಿಕ ಮೌಲ್ಯವರ್ಧನೆಯ ಕುರಿತು ರೈತರಿಗೆ ನೇರ ತರಬೇತಿ ನೀಡಿದರು. ಸದ್ಗುರುಗಳ ಈ ಕ್ರಾಂತಿಕಾರಿ ಆಂದೋಲನವು ದಕ್ಷಿಣ ಭಾರತದ ಕೃಷಿ ವಲಯವನ್ನು ಪರಿಸರ ಸ್ನೇಹಿ ಹಾಗೂ ಆರ್ಥಿಕವಾಗಿ ಸದೃಢಗೊಳಿಸುವಲ್ಲಿ ಮೈಲಿಗಲ್ಲಾಗಿದೆ.

ಆಂದೋಲನದ ಮೂಲಕ ಕರ್ನಾಟಕ, ತಮಿಳುನಾಡು ಎರಡೂ ರಾಜ್ಯಗಳಲ್ಲಿರುವ ಕಾವೇರಿ ನದಿ ಪಾತ್ರದ ರೈತರು 242 ಕೋಟಿ ಮರಗಳನ್ನು ಬೆಳೆಸಲು ಸಸಿಗಳನ್ನು ನೆಡಲು ಸಾಧ್ಯವಾಗಿಸುತ್ತದೆ. ಈ ರೀತಿಯ ಸಮಗ್ರ ಅರಣ್ಯೀಕರಣ ಪ್ರಯತ್ನವು ಬತ್ತಿ ಹೋಗುತ್ತಿರುವ ಕಾವೇರಿ ನದಿಯಲ್ಲಿ ಮುಂದಿನ ಒಂದು ದಶಕದಲ್ಲಿ ಪುನಃ ನೀರು ತುಂಬಿ ಹರಿಯುವಂತೆ ಮಾಡುತ್ತದೆ ಎನ್ನುವ ನಿರೀಕ್ಷೆಯಿದೆ.

ಕೃಷಿಯು ವಾಣಿಜ್ಯವಾಗಿ ಲಾಭದಾಯಕ ಎಂದು ಸಾಬೀತಾಗಿದ್ದು, ಕಾವೇರಿ ಕೂಗು ಅಭಿಯಾನವು ಅಂತಹ ನಾವಿನ್ಯತೆಯನ್ನು ಒದಗಿಸುತ್ತದೆ. ಇಂತಹ ಕೃಷಿ ಮಾದರಿಯು ಮಣ್ಣಿನ ಫಲವತ್ತತೆ ಹೆಚ್ಚಿಸಿ ಅಂತರ್ಜಲ ಮಟ್ಟವನ್ನು ವೃದ್ಧಿಸಿರುವುದಲ್ಲದೇ ಐದರಿಂದ ಎಂಟು ವರ್ಷಗಳ ಅವಧಿಯಲ್ಲಿ ಕೃಷಿಕರ ಆರ್ಥಿಕ ಸಮೃದ್ಧಿಯ ಹೆಚ್ಚಳಕ್ಕೆ ಕಾರಣವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:12 am, Mon, 15 June 26

Source link

ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ – Kannada News | Shivamogga Tragedy: 6 Year Old Class 1 Student Collapses and Dies While Playing at Govt School in Sagara; Heart Attack Suspected

ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದುಬಂದಿದೆ. ಇದು ಹೃದಯಾಘಾತದಿಂದ ಸಂಭವಿಸಿದ ಹಠಾತ್ ನಿಧನವೋ ಅಥವಾ ತ್ರಿಲೋಕ್‌ಗೆ ಈ ಹಿಂದೆ ಯಾವುದಾದರೂ ಹೃದಯ ಸಂಬಂಧಿ ಕಾಯಿಲೆ ಇತ್ತೇ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

BBL ಆಡಲು ಆಸ್ಟ್ರೇಲಿಯಾ ಆಟಗಾರರ ಹೊಸ ಡಿಮ್ಯಾಂಡ್..! – Kannada News | Australia Players Block BBL Privatisation Drive Amid Pay Dispute

ಆಸ್ಟ್ರೇಲಿಯಾದ ಟಿ20 ಟೂರ್ನಿಯಾದ ಬಿಗ್ ಬ್ಯಾಷ್ ಲೀಗ್ (BBL) ಅನ್ನು ಖಾಸಗೀಕರಣಗೊಳಿಸುವ ಕ್ರಿಕೆಟ್ ಆಸ್ಟ್ರೇಲಿಯಾ (CA) ಯೋಜನೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಹೀಗೆ ಬ್ರೇಕ್ ಹಾಕಿರುವುದು ಮತ್ಯಾರೂ ಅಲ್ಲ, ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ (ACA).

ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಪ್ರಕಾರ, ಆಟಗಾರರ ಸಂಘಟನೆಯ ಒಪ್ಪಿಗೆಯಿಲ್ಲದೆ ಕ್ರಿಕೆಟ್ ಆಸ್ಟ್ರೇಲಿಯಾ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಈ ಮೂಲಕ ಬಿಗ್ ಬ್ಯಾಷ್ ಲೀಗ್​ ಅನ್ನು ಖಾಸಗೀಕರಣಗೊಳಿಸುವ ಯೋಜನೆಗೆ ತಡೆ ನೀಡಿದೆ.

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್​ ನಿರ್ಧಾರಕ್ಕೆ ಮುಖ್ಯ ಕಾರಣ ಆಟಗಾರರ ವೇತನ ತಾರತಮ್ಯ ಮತ್ತು ಜಾಗತಿಕ ಟಿ20 ಮಾರುಕಟ್ಟೆಯಲ್ಲಿನ ಸಂಭಾವನೆ.

ಆಸೀಸ್ ಆಟಗಾರರ ಅಸಮಾಧಾನ:

ಬಿಬಿಎಲ್ ಟೂರ್ನಿಯಲ್ಲಿ ಆಡುತ್ತಿರುವ ಆಸ್ಟ್ರೇಲಿಯಾದ ಸ್ಟಾರ್ ಆಟಗಾರರು ತಮ್ಮ ವೇತನ ವಿಷಯದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರಮುಖ ಕಾರಣಗಳು ಈ ಕೆಳಗಿನಂತಿವೆ…

  • ವೇತನ ವ್ಯತ್ಯಾಸ: ಬಿಬಿಎಲ್ ಡ್ರಾಫ್ಟ್ ಮೂಲಕ ಬರುವ ವಿದೇಶಿ ಆಟಗಾರರಿಗೆ ಗರಿಷ್ಠ ಅಂದಾಜು 4.20 ಲಕ್ಷ ಆಸ್ಟ್ರೇಲಿಯನ್ ಡಾಲರ್ (AU$) ವರೆಗೆ ವೇತನ ಸಿಗುತ್ತಿದೆ. ಆದರೆ, ಅದೇ ತಂಡವನ್ನು ಮುನ್ನಡೆಸುವ ಹಾಗೂ ಪಂದ್ಯ ಗೆಲ್ಲಿಸಿಕೊಡುವ ಆಸ್ಟ್ರೇಲಿಯಾದ ಪ್ರಮುಖ ದೇಶಿ ಆಟಗಾರರ ಗರಿಷ್ಠ ವೇತನ ಕೇವಲ 2 ಲಕ್ಷ ಆಸ್ಟ್ರೇಲಿಯನ್ ಡಾಲರ್ ಆಸುಪಾಸಿನಲ್ಲಿದೆ.
  • ಜಾಗತಿಕ ಲೀಗ್‌ಗಳ ಪೈಪೋಟಿ: ಸೌತ್ ಆಫ್ರಿಕಾ ಟಿ20 ಲೀಗ್ ಮತ್ತು ಯುಎಇಯ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಗಳಲ್ಲಿ ಆಟಗಾರರಿಗೆ ಭಾರಿ ಪ್ರಮಾಣದ ಹಣವನ್ನು ಆಫರ್ ಮಾಡುತ್ತಿವೆ. ಉದಾಹರಣೆಗೆ, SA20 ಲೀಗ್‌ನಲ್ಲಿ ಆಡುವ ಪ್ರಮುಖ ಆಟಗಾರರು 13 ಲಕ್ಷ ಆಸ್ಟ್ರೇಲಿಯನ್ ಡಾಲರ್ ವರೆಗೆ ಸಂಪಾದಿಸುತ್ತಿದ್ದಾರೆ. ಇದು ಬಿಬಿಎಲ್‌ನಲ್ಲಿ ಸಿಗುವ ವೇತನಕ್ಕಿಂತ 4 ರಿಂದ 5 ಪಟ್ಟು ಹೆಚ್ಚಾಗಿದೆ.

ಆಸ್ಟ್ರೇಲಿಯನ್ನರ ಡಿಮ್ಯಾಂಡ್:

ಬಿಗ್ ಬ್ಯಾಷ್ ಲೀಗ್​ನ ವೇತನದ ಮಿತಿಯನ್ನು ಹೆಚ್ಚಿಸದಿದ್ದರೆ, ಆಸ್ಟ್ರೇಲಿಯಾದ ಯುವ ಮತ್ತು ಅನುಭವಿ ಆಟಗಾರರು ಡಿಸೆಂಬರ್-ಜನವರಿ ಅವಧಿಯಲ್ಲಿ ಬಿಬಿಎಲ್ ಬಿಟ್ಟು ವಿದೇಶಿ ಲೀಗ್‌ಗಳ ಕಡೆ ಮುಖ ಮಾಡಲಿದ್ದಾರೆ. ಹೀಗಾಗಿ ಬಿಬಿಎಲ್​ ಖಾಸಗೀಕರಣಕ್ಕೂ ಮುನ್ನವೇ ಆಟಗಾರರ ವೇತನದ ಬಗ್ಗೆ ಸ್ಪಷ್ಟತೆ ನೀಡಬೇಕೆಂದು ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್​ ಆಗ್ರಹಿಸಿದೆ.

ಬಿಬಿಎಲ್​ ಖಾಸಗೀಕರಣದ ಯೋಜನೆ ಏನು?

ಬಿಗ್ ಬ್ಯಾಷ್ ಲೀಗ್​ನ ತಂಡಗಳನ್ನು ಇಷ್ಟು ವರ್ಷ ಆಯಾ ಕ್ರಿಕೆಟ್ ಮಂಡಳಿಗಳು ನಡೆಸುತ್ತಿಸುತ್ತಿದ್ದರು. ಉದಾಹರಣೆಗೆ, ಮೆಲ್ಬೋರ್ನ್​​ ಸ್ಟಾರ್ಸ್ ಫ್ರಾಂಚೈಸಿಯ ಮಾಲೀಕರು ಕ್ರಿಕೆಟ್ ವಿಕ್ಟೋರಿಯಾ. ಇದು ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದ ಅಧಿಕೃತ ಕ್ರಿಕೆಟ್ ಮಂಡಳಿಯಾಗಿದೆ.

ಇದೀಗ ಮಂಡಳಿಗಳು ತಮ್ಮ ಫ್ರಾಂಚೈಸಿಗಳನ್ನು ಖಾಸಗಿ ಹೂಡಿಕೆದಾರರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ಅದರಂತೆ ಇದೀಗ ಕ್ರಿಕೆಟ್ ಆಸ್ಟ್ರೇಲಿಯಾ ಎಲ್ಲಾ ತಂಡಗಳ ಮಾರಾಟಕ್ಕೆ ಸಿದ್ಧತೆಗಳನ್ನು ಆರಂಭಿಸಿದೆ.

ಬಿಬಿಎಲ್ ಫ್ರಾಂಚೈಸಿಗಳ ಮಾಲೀಕತ್ವದ ಪಾಲನ್ನು ಖಾಸಗಿ ಹೂಡಿಕೆದಾರರಿಗೆ ಮಾರಾಟ ಮಾಡುವ ಮೂಲಕ 60 ರಿಂದ 80 ಕೋಟಿ ಆಸ್ಟ್ರೇಲಿಯನ್ ಡಾಲರ್ ಬಂಡವಾಳ ಸಂಗ್ರಹಿಸುವುದು ಕ್ರಿಕೆಟ್ ಆಸ್ಟ್ರೇಲಿಯಾದ ಯೋಜನೆಯಾಗಿದೆ.

ಖಾಸಗಿ ಹೂಡಿಕೆ ಬಂದರೆ, ಬಿಬಿಎಲ್ ಮತ್ತು ಡಬ್ಲ್ಯೂಬಿಬಿಎಲ್ (WBBL) ತಂಡಗಳ ಒಟ್ಟು ವೇತನ ಮಿತಿಯನ್ನು ತಲಾ 20 ಲಕ್ಷ ಆಸ್ಟ್ರೇಲಿಯನ್ ಡಾಲರ್ ಹೆಚ್ಚಿಸುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ಭರವಸೆ ನೀಡಿದೆ.

ಮುಂದಿನ ದಿನಗಳಲ್ಲಿ ವೇತನ ಜಾಸ್ತಿ ಮಾಡುವ ಭರವಸೆ ಸಿಕ್ಕಿದ್ದರೂ, ಆಸ್ಟ್ರೇಲಿಯಾ ಆಟಗಾರರ ಸಂಘಟನೆ (ACA) ಮತ್ತು ಪ್ರಮುಖ ರಾಜ್ಯ ಕ್ರಿಕೆಟ್ ಮಂಡಳಿಗಳು ಈ ಯೋಜನೆಯನ್ನು ಒಪ್ಪುತ್ತಿಲ್ಲ.

ಇದಕ್ಕೆ ಮುಖ್ಯ ಕಾರಣ, ಒಮ್ಮೆ ತಂಡದ ಮಾಲೀಕತ್ವವನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಿದರೆ ಅದನ್ನು ಮತ್ತೆ ಮರಳಿ ಪಡೆಯಲು ಸಾಧ್ಯವಿಲ್ಲ. ವಿದೇಶಿ ಅಥವಾ ಖಾಸಗಿ ಮಾಲೀಕರು ಸ್ಥಳೀಯ ಕ್ರಿಕೆಟ್‌ನ ಅಭಿವೃದ್ಧಿಗಿಂತ ತಮ್ಮ ಲಾಭಕ್ಕಷ್ಟೇ ಆದ್ಯತೆ ನೀಡಬಹುದು ಎಂಬ ಆತಂಕ ಆಟಗಾರರದ್ದಾಗಿದೆ.

ಇನ್ನು ನ್ಯೂ ಸೌತ್ ವೇಲ್ಸ್ ಮತ್ತು ಕ್ವೀನ್ಸ್‌ಲ್ಯಾಂಡ್ ಕ್ರಿಕೆಟ್ ಮಂಡಳಿಗಳು ಈ ಸಂಪೂರ್ಣ ಮಾರಾಟ ಪ್ರಕ್ರಿಯೆಯನ್ನು ಬಲವಾಗಿ ವಿರೋಧಿಸಿವೆ. ಕೇವಲ ವಿಕ್ಟೋರಿಯಾದಂತಹ ಕೆಲವು ರಾಜ್ಯಗಳು ಮಾತ್ರ ಆಸಕ್ತಿ ತೋರಿಸಿರುವುದರಿಂದ ಇಡೀ ಯೋಜನೆ ಗೊಂದಲದಲ್ಲಿದೆ.

ಮುಂದಿನ ನಡೆಯೇನು?

ಆಸ್ಟ್ರೇಲಿಯಾ ಆಟಗಾರರ ಸಂಘಟನೆಯು ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ವಿವಿಧ ರಾಜ್ಯಗಳ ಕ್ರಿಕೆಟ್ ಮಂಡಳಿಗಳೊಂದಿಗೆ ಮಾತುಕತೆಯನ್ನು ಮುಂದುವರಿಸಲು ನಿರ್ಧರಿಸಿದೆ. ಮುಂದಿನ ಬಿಬಿಎಲ್ ಸೀಸನ್ ಆರಂಭವಾಗುವ ಮೊದಲು ಆಟಗಾರರ ವೇತನ ಮತ್ತು ಹಕ್ಕುಗಳನ್ನು ರಕ್ಷಿಸುವ ಹೊಸ ಒಪ್ಪಂದಕ್ಕೆ ಬರಲು ಪ್ರಯತ್ನಗಳು ನಡೆಯುತ್ತಿವೆ.

ಇದನ್ನೂ ಓದಿ: 100 ಓವರ್​, 600 ಎಸೆತಗಳು: ವೈಭವ್ ಸೂರ್ಯವಂಶಿ ಸಿಕ್ರೇಟ್ ಬಹಿರಂಗ!

ಜಾಗತಿಕ ಕ್ರಿಕೆಟ್ ಮಾರುಕಟ್ಟೆಯಲ್ಲಿ ಬಿಬಿಎಲ್ ತನ್ನ ಮೌಲ್ಯವನ್ನು ಉಳಿಸಿಕೊಳ್ಳಬೇಕಾದರೆ, ಸ್ಥಳೀಯ ಆಟಗಾರರ ಬೇಡಿಕೆಗಳನ್ನು ಈಡೇರಿಸುವುದು ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಬಿಬಿಎಲ್ ಆರಂಭಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ ಹೊಸ ಒಪ್ಪಂದಕ್ಕೆ ಬರುವ ಸಾಧ್ಯತೆಯಿದೆ.

Source link

Exit mobile version