CSK vs SRH: ನಾಯಕನಾಗಿ ಹೆಚ್ಚು ವಿಕೆಟ್; ಪಾಂಡ್ಯ ದಾಖಲೆ ಮುರಿದ ಕಮ್ಮಿನ್ಸ್ – Kannada News | Pat Cummins’ IPL 2026 Heroics: Overtakes Pandya in Captaincy Wickets Record

ಐಪಿಎಲ್ 2026 ರ 63ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದರು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡದ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಕಮ್ಮಿನ್ಸ್, ಸಿಎಸ್​ಕೆ ಆರಂಭಿಕರಾದ ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ಔಟ್ ಮಾಡಿದರು. ಕಾರ್ತಿಕ್ ಅವರನ್ನು ಔಟ್ ಮಾಡುವ ಮೂಲಕ, ಕಮ್ಮಿನ್ಸ್ ಮಹತ್ವದ ಮೈಲಿಗಲ್ಲನ್ನು ಸಾಧಿಸಿದರು.

ಐಪಿಎಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ನಾಯಕನಾಗಿ 42 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಮೂಲಕ ಅವರು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಹಿಂದಿಕ್ಕಿದ್ದಾರೆ. ಪಾಂಡ್ಯ ನಾಯಕನಾಗಿ 40 ವಿಕೆಟ್‌ಗಳನ್ನು ಹೊಂದಿದ್ದಾರೆ. ಇನ್ನು ಐಪಿಎಲ್‌ನಲ್ಲಿ ನಾಯಕನಾಗಿ ಅತಿ ಹೆಚ್ಚು ವಿಕೆಟ್ ಉರುಳಿಸಿದವರ ಪಟ್ಟಿಯಲ್ಲಿ ಶೇನ್ ವಾರ್ನ್ ಅಗ್ರಸ್ಥಾನದಲ್ಲಿದ್ದು, ಅವರ ಖಾತೆಯಲ್ಲಿ 57 ವಿಕೆಟ್‌ಗಳಿವೆ.

ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಅನಿಲ್ ಕುಂಬ್ಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ 30 ವಿಕೆಟ್ ಪಡೆದಿದ್ದರು. ಹಾಗೆಯೇ ರವಿಚಂದ್ರನ್ ಅಶ್ವಿನ್ ಕೂಡ ನಾಯಕನಾಗಿ 25 ವಿಕೆಟ್ ಪಡೆದಿದ್ದರೆ, ಜಹೀರ್ ಖಾನ್ 20 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಂಗಾಳದ ಸಿಎಂ ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊನೆಗೂ ಸೆರೆಸಿಕ್ಕ ಪ್ರಮುಖ ಶೂಟರ್ – Kannada News | West Bengal CM Suvendu Adhikari PA Murder Case Main Shooter Finally Captured

ಕೊಲ್ಕತ್ತಾ, ಮೇ 18: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಕೊನೆಗೂ ಯಶಸ್ಸು ಸಿಕ್ಕಿದೆ. ಈ ಹೈಪ್ರೊಫೈಲ್ ಸುಪಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮತ್ತು ಬಿಹಾರದ ಗಡಿ ಭಾಗಗಳಲ್ಲಿ ಮೂವರು ಶಾರ್ಪ್‌ಶೂಟರ್‌ಗಳನ್ನು ಪಶ್ಚಿಮ ಬಂಗಾಳದ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇವರಲ್ಲಿ ಪ್ರಮುಖ ಶೂಟರ್ ರಾಜ್‌ಕುಮಾರ್ ಅಲಿಯಾಸ್ ರಾಜ್ ಸಿಂಗ್ ಕೂಡ ಸೇರಿದ್ದಾರೆ. ಕೊಲೆ ನಡೆದ 12 ದಿನಗಳ ಬಳಿಕ ಕೊನೆಗೂ ಪ್ರಮುಖ ಆರೋಪಿ ಸೆರೆಸಿಕ್ಕಿದ್ದಾನೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ನಂತರ ಮೇ 6ರ ರಾತ್ರಿ ಸಿಎಂ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಚಂದ್ರನಾಥ್ ಕೊಲ್ಕತ್ತಾಗೆ ತೆರಳುತ್ತಿದ್ದಾಗ, ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದ ದೋಲತಲಾ ಪ್ರದೇಶದಲ್ಲಿ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಪ್ರಸ್ತುತ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ದೇಶಸೇವೆಯಿಂದ ರಾಜಕೀಯ ವ್ಯೂಹದತ್ತ, ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸುವೇಂದು ಆಪ್ತ ಚಂದ್ರನಾಥ್ ರಥ್ ಯಾರು?

ಏನಿದು ಪ್ರಕರಣ?:

ಮೇ 6ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್‌ನ ದೋಹಾರಿಯಾ ಎಂಬಲ್ಲಿ ಚಂದ್ರನಾಥ್ ರಥ್ ತಮ್ಮ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅತಿ ಹತ್ತಿರದಿಂದ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಚಂದ್ರನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರ ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆಯ ತನಿಖೆಗೆ ಎಸ್​ಐಟಿ ರಚಿಸಲಾಗಿತ್ತು. ಬಳಿಕ ಸಿಬಿಐಗೆ ತನಿಖೆ ವಹಿಸಲಾಗಿತ್ತು.

ಇದನ್ನೂ ಓದಿ: ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ; ಎಸ್​ಐಟಿ ತನಿಖೆಗೆ ಆದೇಶ

ಇದುವರೆಗೂ ಮಯಾಂಕ್ ರಾಜ್ ಮಿಶ್ರಾ, ವಿಕ್ಕಿ ಮೌರ್ಯ, ಮತ್ತು ರಾಜ್‌ಕುಮಾರ್ ಸಿಂಗ್ (ರಾಜ್ ಸಿಂಗ್) ಎಂಬುವವರನ್ನು ಬಂಧಿಸಲಾಗಿದೆ. ಇವರು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಕುಖ್ಯಾತ ಶಾರ್ಪ್‌ಶೂಟರ್‌ಗಳಾಗಿದ್ದಾರೆ. ನ್ಯಾಯಾಲಯವು ಅವರನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದು ಈಗ ರಾಷ್ಟ್ರೀಯ ದಾಖಲೆಯ ಹೊಸ್ತಿಲಲ್ಲಿ ಸಿದ್ದರಾಮಯ್ಯ – Kannada News | One And Only Siddaramaiah completed 8 Years as CM in history of Karnataka, here is His record details

ಬೆಂಗಳೂರು, (ಮೇ 18):  ನಾಯಕತ್ವ ಗೊಂದಲಗಳ ನಡುವೆ ಸಿಎಂ ಸಿದ್ದರಾಮಯ್ಯ (Siddaramaiah) ಕರ್ನಾಟಕ(Karnataka) ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ವ್ಯಕ್ತಿ ಎನ್ನುವ ದಾಖಲೆ ಬರೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ ಮೊದಲೇ ಸಿಎಂ ಸಿದ್ದರಾಮಯ್ಯ ತಮ್ಮ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಬರೆದಿದ್ದು ಕರ್ನಾಟಕದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ವ್ಯಕ್ತಿ ಎಂಬುದು ಅವರ ಮತ್ತೊಂದು ಗರಿಮೆ. ಇದರ ಜೊತೆಗೆ ಅತಿ ಹೆಚ್ಚು ಬಜೆಟ್ ಮಂಡಿಸಿದ ರಾಷ್ಟ್ರೀಯ ದಾಖಲೆ ಹೊಸ್ತಿಲಲ್ಲಿ ಸಹ ಇದ್ದಾರೆ.

  • ಅರಸು ದಾಖಲೆ ಹಿಂದಿಕ್ಕಿ ಸಿಎಂ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ
  • ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ
  • ಬಜೆಟ್ ಮಂಡಿಸಿದ ರಾಷ್ಟ್ರೀಯ ದಾಖಲೆ ಹೊಸ್ತಿಲಲ್ಲಿ ನಿಂತಿರುವ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ

ಮೈಸೂರು ತಾಲೂಕು ಬೋರ್ಡ್ ಚುನಾವಣೆಗೆ ಸ್ಪರ್ಧಿಸುವ ಮೂಲಕ 1977ರಲ್ಲಿ ಸಾರ್ವಜನಿಕ ಸೇವೆಗೆ ಪಾದಾರ್ಪಣೆ ಮಾಡಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ಬದುಕಿನ 50ನೇ ವರ್ಷಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಕಾಲಿರಿಸಲಿದ್ದಾರೆ. ಇದೇ ವೇಳೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯಲ್ಲಿ 8 ವರ್ಷಗಳನ್ನು ಪೂರೈಸಿದ್ದಾರೆ. ಈ ಮೂಲಕ ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ 8 ವರ್ಷ ಮುಖ್ಯಮಂತ್ರಿಯಾಗಿರುವ ಮೊದಲ ವ್ಯಕ್ತಿ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ.

ಇದನ್ನೂ ನೋಡಿ: ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು

ದೇವರಾಜ ಅರಸು ದಾಖಲೆ ಹಿಂದಿಕ್ಕಿದ ಸಿದ್ದರಾಮಯ್ಯ

ರಾಜ್ಯ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆ ಹೊಂದಿದ್ದರು. ಆ ದಾಖಲೆಯನ್ನು ಈಗಾಗಲೇ ಸಿದ್ದರಾಮಯ್ಯ ಹಿಂದಿಕ್ಕಿ ಮುಂದುವರಿದಿದ್ದಾರೆ. ವಿಶೇಷವೆಂದರೆ, ಅರಸು ಮತ್ತು ಸಿದ್ದರಾಮಯ್ಯ ಅವರ ಸಿದ್ಧಾಂತಗಳನ್ನು ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೋಲಿಕೆ ಮಾಡುತ್ತಾರೆ. ಸ್ವತಃ ಸಿದ್ದರಾಮಯ್ಯ ಅವರು ಈ ಹೋಲಿಕೆಯನ್ನು ನಿರಾಕರಿಸಿದ್ದರು. ಆದರೂ ಅಧಿಕಾರದಲ್ಲಿದ್ದಾಗ ರೂಪಿಸಿದ ಯೋಜನೆಗಳು, ನೀತಿ-ನಿರೂಪಣೆಗಳು ಪರಸ್ಪರ ತಾಳೆ ಆಗುತ್ತವೆ. ದೇವರಾಜ ಅರಸು ಅವರ ಸಿದ್ಧಾಂತ ಮತ್ತು ಯೋಜನೆಗಳು ಹಿಂದುಳಿದ ವರ್ಗಗಳ ಪಾಲಿಗೆ ಭಾಗ್ಯದ ಬೆಳಕು ಎಂದು ಬಣ್ಣಿಸಿದರೆ ಸಿದ್ದರಾಮಯ್ಯ ಅವರ ಮಾರ್ಗ ದಲಿತ ಮತ್ತು ಅಲ್ಪಸಂಖ್ಯಾತರನ್ನೂ ಒಳಗೊಂಡು ಅಹಿಂದ ವರ್ಗದ ಪಕ್ಷಪಾತಿ ಎಂದು ಗುರುತಿಸಲಾಗುತ್ತಿದೆ.

ರಾಷ್ಟ್ರೀಯ ದಾಖಲೆಯ ಹೊಸ್ತಿಲಲ್ಲಿ!

ಕೇವಲ ದಾಖಲೆ ಅವಧಿಗೆ ಆಡಳಿತ ಮಾಡಿದ ಹಿರಿಮೆ ಮಾತ್ರವಲ್ಲದೇ ಕರ್ನಾಟಕದಲ್ಲಿ 12 ಬಾರಿ ಮುಂಗಡ ಪತ್ರ ಮಂಡಿಸಿದ ಸಾಧನೆ ಮಾಡಿದ್ದಾರೆ. ಗುಜರಾತ್‌ನ ಹಣಕಾಸು ಸಚಿವರಾಗಿದ್ದ ವಜುಭಾಯಿ ವಾಲಾ ಅವರು ದೇಶದಲ್ಲೇ ಅತಿ ಹೆಚ್ಚು ಅಂದರೆ 18 ಬಾರಿ ಬಜೆಟ್ ಮಂಡಿಸಿದ ರಾಷ್ಟ್ರೀಯ ದಾಖಲೆ ಮಾಡಿದ್ದಾರೆ. ಆ ದಾಖಲೆ ಸರಿಗಟ್ಟಲು ಸಿದ್ದರಾಮಯ್ಯ ಅವರಿಗೆ ಇನ್ನೊಂದೇ ಬಜೆಟ್ ಬಾಕಿ ಇದೆ. ಕರ್ನಾಟಕದಲ್ಲಿ ಅಧಿಕಾರ ಹಸ್ತಾಂತರದ ಚರ್ಚೆಯ ನಡುವೆಯೇ ಸಿದ್ದರಾಮಯ್ಯ ಈ ರಾಷ್ಟ್ರೀಯ ದಾಖಲೆಯನ್ನು ಬರೆಯಲಿದ್ದಾರೆ ಎಂದೇ ಅವರ ಬೆಂಬಲಿಗರು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ನಿಜಲಿಂಗಪ್ಪ ದಾಖಲೆಯೂ ಇತಿಹಾಸದ ಪುಟಕ್ಕೆ

ಕರ್ನಾಟಕ ರಾಜ್ಯ ಘೋಷಣೆಗೂ ಮೊದಲು ಎಸ್.ನಿಜಲಿಂಗಪ್ಪ ಅವರೂ ಎರಡು ಬಾರಿ ಸುದೀರ್ಘ ಅವಧಿಗೆ ಸಿಎಂ ಆಗಿದ್ದರು. ಮೊದಲನೇ ಬಾರಿಗೆ 1956ರಲ್ಲಿ 1 ವರ್ಷ 197 ದಿನ ಹಾಗೂ ಎರಡನೇ ಬಾರಿಗೆ ೧೯೬೨ರಲ್ಲಿ ೫ ವರ್ಷ ೩೪೩ ದಿನಗಳ ಅವಧಿಗೆ ರಾಜ್ಯವನ್ನಾಳಿದ್ದರು. ತದನಂತರ ದೇವರಾಜ ಅರಸುರವರು ಮೈಸೂರು ರಾಜ್ಯದಲ್ಲಿ 1972ರಲ್ಲಿ 1 ವರ್ಷ 225 ದಿನಗಳಿಗೆ, ನಂತರ ಕರ್ನಾಟಕ ರಾಜ್ಯ ಘೋಷಣೆ ನಂತರ 1973 ರಿಂದ 4 ವರ್ಷ 60 ದಿನಗಳಿಗೆ ಹಾಗೂ ಮೂರನೇ ಬಾರಿಗೆ 1978ರಲ್ಲಿ 1 ವರ್ಷ 318 ದಿನಗಳಿಗೆ ಸಿಎಂ ಆಗಿ ಒಟ್ಟಾರೆ 7 ವರ್ಷ 239 ದಿನಗಳ ಕಾಲ ಸಿಎಂ ಆಗಿದ್ದರು. ಸಿದ್ದರಾಮಯ್ಯ ಅವರು 2013ರಿಂದ 5 ವರ್ಷ 4 ದಿನಗಳ ಕಾಲ ಮತ್ತು 2023ರಿಂದ ಇಂದಿನ ತನಕ 2 ವರ್ಷ 361 ದಿನಗಳವರೆಗೆ 8 ವರ್ಷ ಪೂರೈಸಿದ್ದಾರೆ. ಇದೇ ಮೇ 20ಕ್ಕೆ ಎರಡನೇ ಬಾರಿಗೆ ಸಿಎಂ ಆಗಿ 3 ವರ್ಷ ಪೂರೈಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಪ್ಲೇಆಫ್‌ ಸುತ್ತಿಗೆ ಮೀಸಲು ದಿನವಿಲ್ಲ; ಹೀಗಾಗಿ ಪಂದ್ಯ ರದ್ದಾದರೆ ಫಲಿತಾಂಶ ನಿರ್ಧರಿಸುವುದು ಹೇಗೆ? – Kannada News | IPL 2026 Playoffs: Rain Threat? How Points Table Decides Q1, Eliminator Winners

ಐಪಿಎಲ್ 2026 (IPL 2026) ರ ಗುಂಪು ಹಂತದ ಪಂದ್ಯಗಳು ಮೇ 24 ರಂದು ಕೊನೆಗೊಳ್ಳಲಿವೆ. ಅದಾದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿನಲ್ಲಿ 4 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಪ್ಲೇಆಫ್ ಪಂದ್ಯಗಳು ಮೇ 26 ರಿಂದ ಪ್ರಾರಂಭವಾಗಲಿದ್ದು, ಮೇ 31 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಕೊನೆಗೊಳ್ಳಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ನ್ಯೂ ಚಂಡೀಗಢದಲ್ಲಿ ನಡೆಯಲಿದೆ. ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಮಳೆ ಬಂದರೆ, ಫಲಿತಾಂಶವನ್ನು ಹೇಗೆ ನಿರ್ಧರಿಸಲಾಗುತ್ತದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ.

ಪ್ಲೇಆಫ್ ಸುತ್ತಿಗೆ ಮೀಸಲು ದಿನವಿಲ್ಲ

ಗುಂಪು ಹಂತದಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ, ಪ್ರತಿ ತಂಡಕ್ಕೆ ತಲಾ ಒಂದು ಅಂಕವನ್ನು ನೀಡಲಾಗುತ್ತಿತ್ತು. ಅಂದರೆ ಲೀಗ್ ಹಂತದಲ್ಲಿ ಯಾವುದೇ ಪಂದ್ಯಕ್ಕೆ ಮೀಸಲು ದಿನವಿರಲಿಲ್ಲ. ವಾಸ್ತವವಾಗಿ ಐಸಿಸಿ ಪಂದ್ಯಾವಳಿಗಳಲ್ಲಿ, ನಾಕೌಟ್ ಪಂದ್ಯಗಳಿಗೆ ಮೀಸಲು ದಿನವನ್ನು ನಿಗದಿ ಮಾಡಲಾಗಿರುತ್ತದೆ. ಆದರೆ ಐಪಿಎಲ್ ಪ್ಲೇಆಫ್‌ಗಳಿಗೆ ನಿಯಮಗಳು ಸ್ವಲ್ಪ ಭಿನ್ನವಾಗಿವೆ. ಮೊದಲ ಕ್ವಾಲಿಫೈಯರ್, ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್‌ಗೆ ಮೀಸಲು ದಿನವನ್ನು ಇರಿಸಲಾಗಿಲ್ಲ. ಫೈನಲ್ ಪಂದ್ಯಕ್ಕೆ ಮಾತ್ರ ಮೀಸಲು ದಿನವನ್ನು ನಿಗದಿ ಪಡಿಸಲಾಗಿದೆ. ಹಾಗಾದರೆ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳ ಸಮಯದಲ್ಲಿ ಮಳೆ ಬಂದರೆ, ವಿಜೇತರನ್ನು ಹೇಗೆ ಘೋಷಿಸಲಾಗುತ್ತದೆ?.

ಪಂದ್ಯ ರದ್ದಾದರೆ ಫಲಿತಾಂಶ ನಿರ್ಧಾರ ಹೇಗೆ?

ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯಗಳಲ್ಲಿ ಮಳೆ ಬಂದರೆ, ಅದೇ ದಿನ ಪಂದ್ಯವನ್ನು ಮುಗಿಸಲು ಪ್ರಯತ್ನಿಸಲಾಗುತ್ತದೆ. ಪಂದ್ಯದ ಆರಂಭ ವಿಳಂಬವಾದರೆ, ಕನಿಷ್ಠ ಐದು ಓವರ್‌ಗಳ ಪಂದ್ಯವನ್ನು ಆಡಿಸಲು ಪ್ರಯತ್ನಿಸಲಾಗುತ್ತದೆ. ಇದಕ್ಕಾಗಿ, 120 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಆದರೆ ಹೆಚ್ಚುವರಿ ಸಮಯದ 120 ನಿಮಿಷಗಳಲ್ಲೂ ಪಂದ್ಯ ಮುಗಿಯದಿದ್ದರೆ, ಆಗ ಪಾಯಿಂಟ್‌ ಪಟ್ಟಿ ಪ್ರಮುಖ ಪಾತ್ರವಹಿಸುತ್ತದೆ. ಅಂದರೆ ಪಾಯಿಂಟ್ ಪಟ್ಟಿಯಲ್ಲಿ ಯಾವ ತಂಡ ಮೇಲುಗೈ ಸಾಧಿಸಿರುತ್ತದೋ ಆ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ.

CSK vs SRH IPL 2026 Live Score: ಸಿಎಸ್​ಕೆ 3ನೇ ವಿಕೆಟ್ ಪತನ

ಉದಾಹರಣೆಗೆ, ತಂಡ ಎ ಮತ್ತು ತಂಡ ಬಿ ಕ್ವಾಲಿಫೈಯರ್ ಪಂದ್ಯವನ್ನು ಆಡುತ್ತಿವೆ. ತಂಡ ಎ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ತಂಡ ಬಿ ಎರಡನೇ ಸ್ಥಾನದಲ್ಲಿದೆ. ಮಳೆಯಿಂದಾಗಿ ಪಂದ್ಯ ನಡೆಯದಿದ್ದರೆ, ಎ ತಂಡವನ್ನು ವಿಜಯಿ ಎಂದು ಘೋಷಿಸಲಾಗುತ್ತದೆ. ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಕ್ಕೂ ಈ ನಿಯಮ ಅನ್ವಯಿಸುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯೂರಿಕ್ ಆಸಿಡ್ ಸಮಸ್ಯೆ ಇದ್ಯಾ? ಇದನ್ನು ವೇಗವಾಗಿ ಕಡಿಮೆ ಮಾಡಲು ವೈದ್ಯರು ಸೂಚಿಸಿರುವ ಈ ಆಹಾರ ಕ್ರಮ ಅನುಸರಿಸಿ – Kannada News | Uric Acid Diet Plan: Best Foods To Eat And Avoid For Gout Control

ಇತ್ತೀಚಿನ ದಿನಗಳಲ್ಲಿ ಹೈ ಯೂರಿಕ್ ಆಸಿಡ್ (Uric Acid) ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ನಿಮಗೆ ತಿಳಿದಿರುವಂತೆ, ಯೂರಿಕ್ ಆಸಿಡ್ ಎನ್ನುವುದು ದೇಹದಲ್ಲಿ ಪ್ಯೂರಿನ್ ಎಂಬ ಅಂಶ ಒಡೆಯುವಾಗ ಉತ್ಪತ್ತಿಯಾಗುವ ತ್ಯಾಜ್ಯ ಪದಾರ್ಥವಾಗಿದೆ. ಸಾಮಾನ್ಯವಾಗಿ ಇದು ಮೂತ್ರಪಿಂಡಗಳ ಮೂಲಕ ದೇಹದಿಂದ ಹೊರಹೋಗುತ್ತದೆ. ಆದರೆ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚು ಉತ್ಪತ್ತಿಯಾದರೆ ಅಥವಾ ಕಿಡ್ನಿಗಳು ಅದನ್ನು ಸರಿಯಾಗಿ ಹೊರಹಾಕಲು ಸಾಧ್ಯವಾಗದಿದ್ದರೆ ಅದರ ಪ್ರಮಾಣ ಹೆಚ್ಚಾಗಬಹುದು. ತಜ್ಞರ ಪ್ರಕಾರ, ಪ್ಯೂರಿನ್ ಅಧಿಕವಾಗಿರುವ ಆಹಾರ, ಕಡಿಮೆ ನೀರು ಕುಡಿಯುವುದು, ಅತಿಯಾದ ತೂಕ, ಮದ್ಯಪಾನ, ಕೆಲವು ಔಷಧಿಗಳ ಬಳಕೆ ಮತ್ತು ಕಿಡ್ನಿ ಸಮಸ್ಯೆಗಳು ಯೂರಿಕ್ ಆಸಿಡ್ ಹೆಚ್ಚಾಗಲು ಪ್ರಮುಖ ಕಾರಣಗಳಾಗಿವೆ. ಇದು ದೀರ್ಘಕಾಲ ಹೆಚ್ಚಿದರೆ ಸಂಧಿ ನೋವು, ಊತದಂತಹ ಸಮಸ್ಯೆ ಉಂಟಾಗಬಹುದು. ಕೆಲವರಲ್ಲಿ ಕಿಡ್ನಿಯಲ್ಲಿ ಕಲ್ಲು ಅಥವಾ ಮೂತ್ರಪಿಂಡ ಹಾನಿಯ ಅಪಾಯವೂ ಹೆಚ್ಚಾಗಬಹುದು. ಹಾಗಾದರೆ ಈ ಸಮಸ್ಯೆಯನ್ನು ನಿಯಂತ್ರಿಸಲು ಏನು ಮಾಡಬಹುದು, ಯಾವ ರೀತಿಯ ಆಹಾರ ಸೇವನೆ ಮಾಡುವುದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಯೂರಿಕ್ ಆಸಿಡ್ ಎಷ್ಟಿದ್ದರೆ ಹೆಚ್ಚಾಗಿದೆ ಎಂದು ಪರಿಗಣಿಸಲಾಗುತ್ತದೆ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ಸಾಮಾನ್ಯವಾಗಿ ಪುರುಷರಲ್ಲಿ 7 mg/dL ಕ್ಕಿಂತ ಹೆಚ್ಚು ಮತ್ತು ಮಹಿಳೆಯರಲ್ಲಿ 6 mg/dL ಕ್ಕಿಂತ ಹೆಚ್ಚು ಯೂರಿಕ್ ಆಸಿಡ್ ಮಟ್ಟ ಕಂಡುಬಂದರೆ ಅದನ್ನು ಹೆಚ್ಚಾಗಿದೆ ಎಂದು ಪರಿಗಣಿಸಲಾಗುತ್ತದೆ. ಆದರೆ ಲ್ಯಾಬ್ ಹಾಗೂ ವ್ಯಕ್ತಿಯ ಆರೋಗ್ಯ ಸ್ಥಿತಿಯ ಪ್ರಕಾರ ಈ ಪ್ರಮಾಣದಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬರಬಹುದು. ಯೂರಿಕ್ ಆಸಿಡ್ ನಿರಂತರವಾಗಿ ಹೆಚ್ಚಿದ್ದರೆ ಕಾಲಿನ ಬೆರಳು, ಮಣಿಕಟ್ಟು ಹಾಗೂ ಮೊಣಕಾಲುಗಳಲ್ಲಿ ತೀವ್ರ ನೋವು ಮತ್ತು ಊತ ಕಾಣಿಸಬಹುದು. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆ ಅಗತ್ಯವಾಗಿದೆ.

ಇದನ್ನೂ ಓದಿ: ಯೂರಿಕ್ ಆಮ್ಲ ಹೆಚ್ಚಾಗದಂತೆ ತಡೆಯಲು ಈ ಆಹಾರಗಳ ಸೇವನೆಯನ್ನು ಕಡಿಮೆ ಮಾಡಿ

ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಯಾವ ರೀತಿಯ ಆಹಾರ ಸೇವಿಸಬೇಕು?

ಹೆಚ್ಚು ನೀರು ಕುಡಿಯುವುದು ಯೂರಿಕ್ ಆಸಿಡ್ ನಿಯಂತ್ರಣಕ್ಕೆ ಬಹಳ ಮುಖ್ಯವಾಗಿದೆ. ತಾಜಾ ಹಣ್ಣು, ಹಸಿರು ತರಕಾರಿ, ಧಾನ್ಯಗಳು, ಕಡಿಮೆ ಕೊಬ್ಬಿನಾಂಶವಿರುವ ಹಾಲು ಮತ್ತು ಮೊಸರು ಸೇವಿಸುವುದು ಉಪಯುಕ್ತವಾಗಿದೆ. ವಿಟಮಿನ್ ಸಿ ಇರುವ ಕಿತ್ತಳೆ, ನೆಲ್ಲಿಕಾಯಿ ಮುಂತಾದ ಹಣ್ಣುಗಳು ಸಹ ಸಹಾಯಕವಾಗಬಹುದು. ಚೆರಿ, ಸೌತೆಕಾಯಿ, ಸೋರೆಕಾಯಿ ಮುಂತಾದ ಹಗುರ ಆಹಾರ ಪದಾರ್ಥಗಳು ಕೂಡ ಉತ್ತಮವೆಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಯಾವ ಅಭ್ಯಾಸಗಳು ಸಹಾಯಕ?

ತೂಕ ನಿಯಂತ್ರಣದಲ್ಲಿ ಇಡುವುದು, ನಿಯಮಿತ ವ್ಯಾಯಾಮ ಮಾಡುವುದು ಹಾಗೂ ದಿನಪೂರ್ತಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಬಹಳ ಮುಖ್ಯ. ಮದ್ಯಪಾನ, ಸಿಹಿ ಪಾನೀಯಗಳು ಮತ್ತು ಪ್ಯೂರಿನ್ ಅಧಿಕವಾಗಿರುವ ಆಹಾರಗಳನ್ನು ಕಡಿಮೆ ಮಾಡಬೇಕು. ವೈದ್ಯರು ನೀಡಿದ ಔಷಧಿಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು? – Kannada News | Former Miss Pune Twisha Sharma Death Case Husband Family details

ನಟಿ, ಮಾಡೆಲ್ ಟ್ವಿಶಾ ಶರ್ಮಾ (Twisha Sharma) ಅವರ ನಿಧನದ ಸುದ್ದಿ ಭಾರಿ ಸಂಚಲನ ಮೂಡಿಸಿದೆ. 2012ರಲ್ಲಿ ಮಿಸ್ ಪುಣೆ ಆಗಿದ್ದ ಟ್ವಿಶಾ ಅವರು ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಮಾಡೆಲ್ ಆಗಿ ಅವರು ಗುರುತಿಸಿಕೊಂಡಿದ್ದರು. ಕೆಲವೇ ತಿಂಗಳ ಹಿಂದೆ ಹೈಪ್ರೊಫೈಲ್ ಕುಟುಂಬಕ್ಕೆ ಸೊಸೆಯಾಗಿ ಹೋಗಿದ್ದರು. ಆದರೆ ಮದುವೆ ಬಳಿಕ ಅವರ ಜೀವನ ನರಕ ಆಯಿತು. ಗಂಡನ ಜೊತೆ ಜಗಳ ಮಾಡಿಕೊಂಡ ಬಳಿಕ ಅವರ ಸಾವಿನ ಸುದ್ದಿ ಬಂದಿದೆ. ಸಾಯುವುದಕ್ಕೂ ಮುನ್ನ ಪೋಷಕರಿಗೆ ಕರೆ ಮಾಡಿ ತಮ್ಮ ನೋವನ್ನು ಅವರು ತೋಡಿಕೊಂಡಿದ್ದರು. ಟ್ವಿಶಾ ಶರ್ಮಾ ಸಾವಿನ (Twisha Sharma Death) ಸುತ್ತ ಹಲವು ಅನುಮಾನದ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅವರ ಪತಿ ಸಮರ್ಥ್ ಸಿಂಗ್ ಓರ್ವ ಕ್ರಿಮಿನಲ್ ಲಾಯರ್. ಟ್ವಿಶಾ ಸಾವಿನ ನಂತರ ಸಮರ್ಥ್ ತಲೆ ಮರೆಸಿಕೊಂಡಿದ್ದಾರೆ. ಸಮರ್ಥ್ ತಾಯಿ ಗಿರಿಬಾಲಾ ಸಿಂಗ್ ಅವರು ಜಡ್ಜ್ ಆಗಿದ್ದರು. ಇಂಥ ಹೈಪ್ರೋಫೈಲ್ ಕುಟುಂಬಕ್ಕೆ ಸೊಸೆಯಾಗಿ ಹೋದ ಟ್ವಿಶಾ ಶರ್ಮಾ ಮಸಣ ಸೇರುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಂಡಿಗೋ ವಿಮಾನದೊಳಗೆ 25 ನಿಮಿಷ ಎಸಿ, ಕರೆಂಟ್ ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು

ನವದೆಹಲಿ, ಮೇ 18: ಇಂಡಿಗೋ ವಿಮಾನದಲ್ಲಿ (IndiGo Flight) ಎಸಿ ಮತ್ತು ಕ್ಯಾಬಿನ್ ಲೈಟ್ ಸುಮಾರು 25 ನಿಮಿಷಗಳ ಕಾಲ ಆಫ್ ಆಗಿದ್ದರಿಂದ ವಿಮಾನದ ಪ್ರಯಾಣಿಕರು ಪರದಾಡುವಂತಾಯಿತು. ಇದರಿಂದ ವಿಮಾನದೊಳಗೆ ಪ್ರಯಾಣಿಕರಲ್ಲಿ ಭಾರಿ ಗದ್ದಲ ಉಂಟಾಯಿತು. ಸುಮಾರು 25 ನಿಮಿಷಗಳ ಕಾಲ ಕ್ಯಾಬಿನ್ ದೀಪಗಳು ಸ್ಥಗಿತಗೊಂಡಿದ್ದರಿಂದ, ವಿಮಾನವು ಸಂಪೂರ್ಣ ಕತ್ತಲೆಯಲ್ಲಿತ್ತು. ವಿಮಾನದೊಳಗಿನ ಬಿಸಿಗೆ ಪ್ರಯಾಣಿಕರಿಗೆ ಉಸಿರುಗಟ್ಟಿಸುವಂತಹ ಪರಿಸ್ಥಿತಿ ಉಂಟಾಯಿತು. ವಿಮಾನದೊಳಗಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಐಪಿಎಲ್‌ನಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮುರಿಯುವ ಸನಿಹದಲ್ಲಿ ಭುವನೇಶ್ವರ್ ಕುಮಾರ್

Source link

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತುಕತೆಗೆ ಪಟ್ಟು: ಸಾರಿಗೆ ನೌಕರರ ಸಂಧಾನ ವಿಫಲ – Kannada News | Karnataka Transport Strike Looms: Talks Fail, Workers Demand Meeting with CM Siddaramaiah

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರ ಮುಷ್ಕರ ವಿಚಾರ ಸಂಬಂಧ ಬೆಂಗಳೂರಿನ (Bengaluru) ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಸಾರಿಗೆ ನೌಕರರು ಪಟ್ಟು ಬಿಟ್ಟಿಲ್ಲ. ನಿಗಮಗಳ ಅಧಿಕಾರಿಗಳ ಮನವಿಗೆ ಜಂಟಿ ಕ್ರಿಯಾ ಸಮಿತಿ ಕೊನೆಗೂ ಒಪ್ಪಿಗೆ ಸೂಚಿಸಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರಲು ಅಧಿಕಾರಿಗಳು ಆಹ್ವಾನ ನೀಡಿದರೂ ನಿಗಮದ ಅಧಿಕಾರಿಗಳ ಮನವಿಗೆ ಒಪ್ಪದ ಸಾರಿಗೆ ಮುಖಂಡರು, ಸಿಎಂ ಜೊತೆಗೆ ಸಭೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ಸಚಿವರ ನೇತೃತ್ವದಲ್ಲಿ ನಾಳೆಯೇ ಸಭೆಗೆ ಆಗ್ರಹಿಸಿದ್ದಾರೆ.

‘ಸಭೆ ಮಾಡಿಲ್ಲ ಅಂದ್ರೆ ಮುಷ್ಕರ ಫಿಕ್ಸ್ ‘

ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಗಂಟೆಗಟ್ಟಲೆ ಮಾತುಕತೆ ನಡೆಸಿದರೂ ಸಭೆ ಯಶಸ್ವಿಯಾಗಿಲ್ಲ. ಯಾವುದೇ ಮನವೊಲಿಕೆಗೂ ಬಗ್ಗದ ನೌಕರರು, ನಾಳೆ ಮಧ್ಯಾಹ್ನದ ಒಳಗಾಗಿ ಸಭೆ ಕರೆದು ಬೇಡಿಕೆ ಈಡೇರಿಕೆ ಸಂಬಂಧ ಮಾತನಾಡುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಸರ್ಕಾರ ಸದ್ಯದ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ವಿವರಿಸಿದರೂ, ಸಿಎಂ ಜೊತೆ ಸಭೆಗೆ ಸಾರಿಗೆ ನೌಕರರ ಸಂಘಟನೆ ಆಗ್ರಹಿಸಿದೆ. ಅಲ್ಲದೆ ಸಭೆ ಮಾಡಿಲ್ಲ ಅಂದ್ರೆ ಮುಷ್ಕರ ಫಿಕ್ಸ್ ಎಂದು ವಾರ್ನಿಂಗ್ ಕೂಡ ನೀಡಿದೆ.

ಇದನ್ನೂ ಓದಿ: ಮೇ 20ರಂದು ಸಾರಿಗೆ ನೌಕರರ ಮುಷ್ಕರ, ಸಿಬ್ಬಂದಿಗೆ ಖಡಕ್​​ ಎಚ್ಚರಿಕೆ ಕೊಟ್ಟ KSRTC

2012ರಲ್ಲಿ ತಡರಾತ್ರಿ 2 ಗಂಟೆವರೆಗೂ ಮೀಟಿಂಗ್​ ನಡೆದಿದೆ. ಸಾರಿಗೆ ಸಚಿವರ ಅಧ್ಯಕ್ಷತೆಯ ಸಭೆಗೆ ನಾವು ಸಿದ್ಧರಾಗಿದ್ದೇವೆ. ಮುಖ್ಯಮಂತ್ರಿ ಸಭೆ ನಡೆಸಿದ್ರೂ ನಾವು ಸಭೆಗೆ ಬರುತ್ತೇವೆ. ಸರ್ಕಾರದ ಸೂಚನೆಗಾಗಿ ಜಂಟಿ ಕ್ರಿಯಾ ಸಮಿತಿ ಕಾಯುತ್ತಿದೆ. ಕೋರ್ಟ್​​ ಹೇಳಿದರೂ ನಾವು ಅದರ ಬಗ್ಗೆ ಚರ್ಚೆ ಮಾಡ್ತೇವೆ. ಈ ಬಾರಿ ಸರ್ಕಾರ ಏನೇ ಬೆದರಿಕೆ ಹಾಕಿದ್ರೂ ನಾವು ಬಗ್ಗಲ್ಲ. ಎಲ್ಲ ಸಾರಿಗೆ ಮುಖಂಡರು ಒಗ್ಗಟ್ಟಿನಿಂದ ಭಾಗವಹಿಸಬೇಕಿದ್ದು, ಸರ್ಕಾರಕ್ಕೆ ನಾವು ಯಾವುದೇ ಡೆಡ್​ಲೈನ್​ ಕೊಡುವುದಿಲ್ಲ ಎಂದು ಮುಖಂಡರು ತಿಳಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ

ಈ ನಡುವೆ ನಾಳೆ (ಮೇ 19) ಬೆಳಿಗ್ಗೆ 11.30ಕ್ಕೆ ಸಂಪಂಗಿರಾಮನಗರದ ಕಚೇರಿಯಲ್ಲಿ ಜಂಟಿ ಕ್ರಿಯಾ ಸಮಿತಿಯ CITU ರಾಜ್ಯ ಸಮಿತಿ ಬಣದಿಂದ ಸುದ್ದಿಗೋಷ್ಠಿ ಕೂಡ ಕರೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:17 pm, Mon, 18 May 26

Source link

ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ; ಡೆಡ್‌ಲೈನ್ ಸಹ ಫಿಕ್ಸ್! – Kannada News | Major Reshuffle in Karnataka Education Department: Mandatory Transfer for Employees Serving Over 5 Years, Deadline Fixed

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada

ಧಾರವಾಡ, ಮೇ 18: ರಾಜ್ಯದಲ್ಲಿನ (Karnataka) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ ಬೀಡುಬಿಟ್ಟಿರುವ ನೌಕರರನ್ನು ಬದಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರ ಪಟ್ಟಿ ಸಿದ್ಧಪಡಿಸಿ ಮೇ 28ರೊಳಗಾಗಿ ಕಡ್ಡಾಯ ವರ್ಗಾವಣೆಗೆ (transfer) ಸೂಚಿಸುವ ಮೂಲಕ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ಹೀಗಾಗಿ ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಬರೋಬ್ಬರಿ 1,026 ಬೋಧಕೇತರ ನೌಕರರಿಗೆ ಈಗ ದೊಡ್ಡ ಶಾಕ್ ಎದುರಾಗಿದೆ.

ಮುಖ್ಯಾಂಶಗಳು

  • ಶಿಕ್ಷಣ ಇಲಾಖೆಯ ಇತಿಹಾಸದಲ್ಲೇ ದಿಟ್ಟ ಹೆಜ್ಜೆ
  • ಧಾರವಾಡ ಆಯುಕ್ತಾಲಯವೊಂದರಲ್ಲೇ 1,026 ನೌಕರರ ವರ್ಗಾವಣೆ ಫಿಕ್ಸ್​​
  • ಸರಕಾರದ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ

ಡಿಡಿಪಿಐ, ಅಪರ ಆಯುಕ್ತರ ಕಚೇರಿ ಸೇರಿದಂತೆ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ 15ಕ್ಕೂ ಹೆಚ್ಚು ವರ್ಷಗಳಿಂದ ಸೂಪರಡೆಂಟ್, ಎಫ್‌ಡಿಎ, ಎಸ್‌ಡಿಎ, ಪ್ಯೂನ್ ಸೇರಿದಂತೆ ಎ,ಬಿ,ಸಿ,ಡಿ ವರ್ಗದ ನೌಕರರು ಸೇವೆ ಸಲ್ಲಿಸುತ್ತಿದ್ದರು. ಇದರಿಂದ ಪಾರದರ್ಶಕ ಆಡಳಿತ, ತ್ವರಿತ ಕೆಲಸಗಳಿಗೆ ಅಡ್ಡಿ ಆಗಿತ್ತು. ಕೆಲವೆಡೆ ಭ್ರಷ್ಟಾಚಾರದ ಆರೋಪಗಳೂ ಕೇಳಿ ಬಂದಿದ್ದವು. ಹೀಗಾಗಿ ಸರಕಾರ ಅಂಥವರನ್ನು ಗುರುತಿಸಿ ಕಡ್ಡಾಯ ವರ್ಗಾವಣೆಗೆ ಅಸ್ತು ಎಂದಿದೆ. ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಮುಖ್ಯಸ್ಥರ ಕಚೇರಿಗಳಲ್ಲಿ 5 ವರ್ಷ ಪೂರ್ಣಗೊಳಿಸಿದ ಸಿ.ಡಿ ವೃಂದದ ನೌಕರರನ್ನು 2026-27ರ ಶೈಕ್ಷಣಿಕ ವರ್ಷದ ಆರಂಭದೊಳಗಡೆ ಕೌನ್ಸಿಲಿಂಗ್ ಮೂಲಕ ವರ್ಗಾಯಿಸಬೇಕು. ಈ ಪ್ರಕ್ರಿಯೆ ಇಲಾಖಾ ಮುಖ್ಯಸ್ಥರ ಹಂತದಲ್ಲಿಯೇ ಮಾಡಿ ವರ್ಗಾವಣೆ ಆದೇಶಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಇನ್ನು 5 ವರ್ಷ ಸೇವೆ ಪೂರ್ಣಗೊಂಡು, ವರ್ಗಾವಣೆಗೊಳಿಸಿದ್ದರೂ ಪುನಃ ಕೇಂದ್ರ ಕಚೇರಿಗೆ ಹಿಂದಿರುಗಿರುವ ಮತ್ತು ಪ್ರಸ್ತುತ 5 ವರ್ಷಗಳ ಸೇವೆ ಪೂರ್ಣಗೊಳಿಸಿದವರ ಕಡ್ಡಾಯ ವರ್ಗಾವಣೆಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿದ್ದಾರೆ. ಅದರಂತೆ ಎಲ್ಲ ಮುಖ್ಯಸ್ಥರ ಕಚೇರಿಯಲ್ಲಿ ವರ್ಗಾವಣೆ ಪಟ್ಟಿ ಸಜ್ಜುಗೊಳ್ಳುತ್ತಿದೆ. ರಾಜ್ಯಾದ್ಯಂತ ಸಾವಿರಾರು ನೌಕರರು ಈ ರೀತಿ ದಶಕಗಳಿಂದ ಒಂದೇ ಕಡೆ ಸೇವೆ ಸಲ್ಲಿಸುತ್ತಿರುವ ಅಂದಾಜಿದೆ.

ಧಾರವಾಡ ವಿಭಾಗದಲ್ಲೇ 1,026 ನೌಕರರ ಪತ್ತೆ

ಶಾಲಾ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತರ ಕಚೇರಿಯಲ್ಲಿ 1,026 ಬೋಧಕೇತರ ನೌಕರರು 7-15 ವರ್ಷಗಳಿಂದ ಒಂದೆ ಕಡೆ ಕರ್ತವ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಆಯುಕ್ತಾಲಯ ಪಟ್ಟಿ ಸಿದ್ಧಪಡಿಸಿತ್ತಾದರೂ ಹಲವರು ಅದೇ ಸ್ಥಳದಲ್ಲಿ ಮುಂದುವರಿಯಲು ಪ್ರಭಾವ ಬಳಸುತ್ತಿದ್ದರು. ಆದರೆ ಈ ನೌಕರರು ಸಾರ್ವಜನಿಕರು ಮತ್ತು ಶಿಕ್ಷಕರಿಗೆ ಸ್ಪಂದಿಸುತ್ತಿಲ್ಲ. ಕಡತ ವಿಲೇವಾರಿ ವಿಳಂಬ ಆಗುತ್ತಿದೆ. ಭ್ರಷ್ಟಾಚಾರಗಳೂ ನಡೆಯುತ್ತಿವೆ ಎಂಬ ದೂರುಗಳು ಬಂದಿದ್ದರಿಂದ 2025 ಜುಲೈನಲ್ಲಿ ಸ್ವತಃ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಪರ ಆಯುಕ್ತರಿಗೆ ಪತ್ರ ಬರೆದಿದ್ದರು. ಇಷ್ಟಾದರೂ ಕೆಲವರು ಅಲ್ಲಿಯೇ ಉಳಿದುಕೊಂಡಿದ್ದರು.

ಜನಸಾಮಾನ್ಯರಿಂದ ವ್ಯಾಪಕ ಪ್ರಶಂಸೆ

ಇದೀಗ ಸರಕಾರವೇ ರಾಜ್ಯದ ಎಲ್ಲ ಮುಖ್ಯಸ್ಥರ ಕಚೇರಿಗಳಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದವರ ವರ್ಗಾವಣೆಯನ್ನು ಕಡ್ಡಾಯಗೊಳಿಸಿದೆ. ಸರಕಾರದ ಈ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಒಂದೇ ಕಡೆ ಹಲವಾರು ವರ್ಷಗಳ ಕಾಲ ಕೆಲಸ ಮಾಡುವ ಸಿಬ್ಬಂದಿ, ಸಾಕಷ್ಟು ಭ್ರಷ್ಟಾಚಾರ ಮಾಡುತ್ತಾರೆ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಹೀಗಾಗಿ ಸರಕಾರದ ನಿರ್ಧಾರವನ್ನು ನಾಗರಿಕರು ಸ್ವಾಗತಿಸಿದ್ಧಾರೆ.

ಇದನ್ನೂ ಓದಿ: ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್

ಇಲಾಖೆ ಮುಖ್ಯಸ್ಥರ ಕಚೇರಿಗಳಲ್ಲಿ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದ ನೌಕರರನ್ನು ಕಡ್ಡಾಯವಾಗಿ ವರ್ಗಾವಣೆಗೊಳಿಸಲು ಸರಕಾರ ಸೂಚನೆ ನೀಡಿದೆ. ಧಾರವಾಡ ಆಯುಕ್ತಾಲಯ ವ್ಯಾಪ್ತಿಯಲ್ಲಿ ಅಂಥವರ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಈಗ ಸರಕಾರದ ನಿರ್ದೇಶನದ ಅನ್ವಯ 20 ದಿನಗಳ ಒಳಗಾಗಿ ವರ್ಗಾವಣೆಗೆ ಕ್ರಮ ಜರುಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಒಟ್ಟಿನಲ್ಲಿ ಹಲವಾರು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೂತಿದ್ದ ಅನೇಕ ನೌಕರರು ಇದೀಗ ಬೇರೆ ಬೇರೆ ಕಡೆಗೆ ವರ್ಗಾವಣೆಯಾಗುವುದು ಪಕ್ಕಾ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On – 8:11 pm, Mon, 18 May 26

Source link

Exit mobile version