T20 World Cup 2026: ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
T20 World Cup 2026: ಟಿ20 ವಿಶ್ವಕಪ್ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 18, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಪಾಡ್ಯ ತಿಥಿ, ಶತಭಿಷ ನಕ್ಷತ್ರ, ಭವ ಯೋಗ ಮತ್ತು ಶಿವಕರಣ ಇರತಕ್ಕಂತಹ ಈ ದಿನದ ರಾಹುಕಾಲ ಮಧ್ಯಾಹ್ನ 12:23 ರಿಂದ 2:01 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಸಂಜೆ 4:09 ರಿಂದ 5:27 ನಿಮಿಷದ ತನಕ ಇರುತ್ತದೆ. ಬುಧವಾರದ ಈ ಪರ್ವದಿನವು ಸಾಕ್ಷಾತ್ ವಿಷ್ಣು, ಕಾಲಭೈರವ ಮತ್ತು ವಿನಾಯಕನ ಲಹರಿಗಳಿಂದ ಕೂಡಿರುತ್ತದೆ.
ಇಂದು ರವಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಹೊನ್ನಗಿರಿ ಚೂರ್ಣೋತ್ಸವ, ಕಾಪು ಜನಾರ್ಧನ್ ರಥ, ಪಾರ್ಸಾರ್ಥಿ ಉತ್ಸವ ಮತ್ತು ಗೋಕರ್ಣದಲ್ಲಿ ರಥೋತ್ಸವಗಳು ನಡೆಯಲಿರುವ ಶುಭ ದಿನವಿದು. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ.
ಹರಿಯಾಣ, ಫೆಬ್ರವರಿ 18: ಪ್ರೇಮಿಗಳ ದಿನದಂದೇ ಪತಿ ತನ್ನ ಪತ್ನಿಯನ್ನು ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಅಂದು ರಾತ್ರಿ ಊಟಕ್ಕೆ ಆಕೆಯನ್ನು ಕರೆದು ಬಳಿಕ ಕೊಲೆ ಮಾಡಿದ್ದಾನೆ. ಆತ ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದಾನೆ. ಪ್ರೇಮಿಗಳ ದಿನ ಗಂಡ ಹೊರಗೆ ಊಟ ಕೊಡಿಸ್ತಾನೆ ಎಂದು ಖುಷಿಯಿಂದ ಕುಣಿದಾಡುತ್ತಾ ಹೋಗಿದ್ದ ಪತ್ನಿ ಶವವಾಗಿದ್ದಾಳೆ.
ಆಕೆಯನ್ನು ಕೊಲೆ ಮಾಡಿ ಬಳಿಕ ದರೋಡೆ ಕಥೆ ಕಟ್ಟಿ ಪೊಲೀಸರ ದಾರಿ ತಪ್ಪಿಸಲು ಆತ ಯತ್ನಿಸಿದ್ದ, ಹರಿಯಾಣದ ಬಹದ್ದೂರ್ಗಢದಲ್ಲಿ, ಬ್ಯಾಂಕ್ ಉದ್ಯೋಗಿ ಮೆಹೆಕ್ ಹತ್ಯೆಯ ಹಿಂದಿನ ನಿಗೂಢತೆಯನ್ನು ಝಜ್ಜರ್ ಪೊಲೀಸರು ಕೇವಲ 18 ಗಂಟೆಗಳಲ್ಲಿ ಭೇದಿಸಿದ್ದಾರೆ. ಮೊದಲು ದರೋಡೆ ಪ್ರಕರಣ ಎಂದು ತೋರುತ್ತಿದ್ದ ಪ್ರಕರಣವು ಶೀಘ್ರದಲ್ಲೇ ಆಕೆಯ ಪತಿ, ಚಾರ್ಟರ್ಡ್ ಅಕೌಂಟೆಂಟ್ ಅನ್ಶುಲ್ ಧವನ್ ಹೂಡಿದ್ದ ಯೋಜನೆ ಎಂಬುದು ಬೆಳಕಿಗೆ ಬಂದಿದೆ.
ಭಾನುವಾರ ರಾತ್ರಿ 11 ಗಮಟೆ ಸುಮಾರಿಗೆ ಗುರುಗ್ರಾಮದಲ್ಲಿ ಕೆಲಸ ಮಾಡುತ್ತಿದ್ದ ಅನ್ಶುಲ್ ಪೊಲೀಸರಿಗೆ ಕರೆ ಮಾಡಿ, ಅಪರಿಚಿತ ದಾಳಿಕೋರರು ತಮ್ಮ ಮನೆಯನ್ನು ದರೋಡೆ ಮಾಡಲು ಪ್ರಯತ್ನಿಸಿದ್ದಾರೆ ಮತ್ತು ಅವರ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎಂದು ಹೇಳಿದ್ದರು.
ಮತ್ತಷ್ಟು ಓದಿ: ಗರ್ಲ್ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
ಆದರೆ ತನಿಖೆ ಆರಂಭವಾದ ಬಳಿಕ ಅಧಿಕಾರಿಗಳಿಗೆ ಆತನ ಹೇಳಿಕೆ ಮೇಲೆ ಅನುಮಾನ ಬಂದಿತ್ತು, ಅನ್ಶುಲ್ ಆಗಾಗ ಕಥೆಯನ್ನು ಬದಲಾಯಿಸುತ್ತಲೇ ಇದ್ದ. ದಾಳಿಕೋರರ ಬಗ್ಗೆ ವಿವರಣೆ ಕೊಡಲು ಆತನಿಗೆ ಸಾಧ್ಯವಾಗಲಿಲ್ಲ. ಇದು ಪೊಲೀಸರಿಗೆ ಇನ್ನಷ್ಟು ಅನುಮಾನ ಹುಟ್ಟುಹಾಕಿತ್ತು.
ಆದರೆ ಮತ್ತಷ್ಟು ಪ್ರಶ್ನೆಗಳನ್ನು ಪೊಲೀಸರು ಕೇಳಿದಾಗ, ಅನ್ಶುಲ್ ಕೊನೆಗೂ ಪತ್ನಿಯನ್ನು ತಾನೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಗುರುಗ್ರಾಮದ ಎಚ್ಡಿಎಫ್ಸಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಪತ್ನಿ ಬಗ್ಗೆ ಮೊದಲಿನಿಂದಲೂ ಆತನಿಗೆ ಅನುಮಾನವಿತ್ತು. ಅವರ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು. ಈ ಅನುಮಾನವು ಅಂತಿಮವಾಗಿ ಅವರನ್ನು ಅಪರಾಧದತ್ತ ದೂಡಿತ್ತು. ಮೆಹೆಕ್ ತಂದೆ ಕಥುರಿಯಾ ಮೊದಲಿನಿಂದಲೂ ತನ್ನ ಅಳಿಯನ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು.
ಕೊಲೆಯ ಸಮಯದಲ್ಲಿ, ಅನ್ಶುಲ್ ಯಾವುದೇ ಬೆರಳಚ್ಚುಗಳನ್ನು ಬಿಡದಂತೆ ಕೈಗವಸುಗಳನ್ನು ಧರಿಸಿದ್ದ. ಮೊದಲು ಮೆಹೆಕ್ಳ ಕತ್ತು ಹಿಸುಕಿ ಕೊಂದು ನಂತರ ಕತ್ತರಿ ಬಳಸಿ ಆಕೆಯ ಗಂಟಲು ಸೀಳಿದ್ದ. ಹಿಸಾರ್ ನಿವಾಸಿ ಅನ್ಶುಲ್ ಮತ್ತು ಹನ್ಸಿಯ ಮೆಹೆಕ್ ಇಬ್ಬರೂ ಕಳೆದ ವರ್ಷ ಸೆಪ್ಟೆಂಬರ್ 25 ರಂದು ವಿವಾಹವಾಗಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸೋಶಿಯಲ್ ಮೀಡಿಯಾ, ಯೂಟ್ಯೂಬ್ ತೆಗೆದರೆ ಬಿಗ್ ಬಾಸ್ ಕನ್ನಡ ಸೀಸನ್ 12ರ (Bigg Boss) ವಿನ್ನರ್ ಗಿಲ್ಲಿ ನಟ ಅವರೇ ಕಾಣಿಸಿಕೊಳ್ಳುತ್ತಾರೆ. ಅವರು ವಿವಿಧ ಉತ್ಸವಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಇದಕ್ಕೆ ಕಾರಣ. ಈಗ ಗಿಲ್ಲಿ ನಟನ ಕಡೆಯಿಂದ ದೊಡ್ಡ ಅಪ್ಡೇಟ್ ಸಿಕ್ಕಿದೆ. ಮುಂದಿನ ಸಿನಿಮಾ ಯಾವುದು ಎಂಬುದನ್ನು ಅವರು ರಿವೀಲ್ ಮಾಡಿದ್ದಾರೆ. ಈ ವಿಷಯ ಕೇಳಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಅವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
ಬಿಗ್ ಬಾಸ್ ಪೂರ್ಣಗೊಂಡು ತಿಂಗಳ ಮೇಲಾಗಿದೆ. ಆದಾಗ್ಯೂ ಗಿಲ್ಲಿ ನಟನ ಹವಾ ಮಾತ್ರ ಕಡಿಮೆ ಆಗಿಲ್ಲ. ಅವರು ಹೋದಲ್ಲಿ-ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ತಮ್ಮನ್ನು ಭೇಟಿ ಮಾಡಲು ಬರೋ ಅಭಿಮಾನಿಗಳನ್ನು ಅವರು ಪ್ರೀತಿಯಿಂದ ಮಾತನಾಡಿಸುತ್ತಿದ್ದಾರೆ. ಈ ಮಧ್ಯೆ ಗಿಲ್ಲಿ ನಟ ಅವರು ಮುಂದಿನ ಪ್ರಾಜೆಕ್ಟ್ ಯಾವುದು ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸಿದ್ದಾರೆ.
ಗಿಲ್ಲಿ ಮಟ ಅವರು ಉತ್ತಮ ನಟ ಎಂಬುದು ಎಲ್ಲರಿಗೂ ಗೊತ್ತಿದೆ. ಹಾಸ್ಯ ಪ್ರಧಾನ ಕಿರುಚಿತ್ರ ಹಾಗೂ ರಿಯಾಲಿಟಿ ಶೋಗಳ ಮೂಲಕ ಇದು ಸಾಬೀತಾಗಿದೆ. ಇದರ ಜೊತೆಗೆ ಅವರಲ್ಲಿ ಓರ್ವ ನಿರ್ದೇಶಕ ಕೂಡ ಇದ್ದಾನೆ. ಈಗಾಗಲೇ ಕೆಲವು ಕಿರುಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಈ ಕಿರುಚಿತ್ರಗಳು ಗಮನ ಸೆಳೆದಿವೆ. ಈ ಕಿರುಚಿತ್ರಗಳ ಮೂಲಕ ಅವರು ಫೇಮಸ್ ಆಗಿದ್ದಾರೆ. ಈಗ ಅವರು ಸಿನಿಮಾ ನಿರ್ದೇಶನ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗೆ ಬಂತು ಬೆದರಿಕೆ; 10 ಕೋಟಿ ರೂಪಾಯಿಗೆ ಬೇಡಿಕೆ
ಸಿನಿಮಾದಲ್ಲಿ ನಟಿಸೋದು ಎಂದರೆ ನಿರ್ದೇಶನ ಮಾಡಿದ್ದಕ್ಕಿಂತ ಸುಲಭ. ನಿರ್ದೇಶಕರು ಸ್ಕ್ರಿಪ್ಟ್ ರೆಡಿ ಮಾಡಿ ಇಟ್ಟಿರುತ್ತಾರೆ. ಬಂದು ನಟಿಸಿ ಹೋದರೆ ಆಯ್ತು. ಆದರೆ, ನಿರ್ದೇಶನ ಮಾಡೋದು ಅಷ್ಟು ಸುಲಭ ಅಲ್ಲ. ಸಿನಿಮಾ ಆರಂಭದಿಂದ ಹಿಡಿದು ಕೊನೆಯವರೆಗೂ ಅವರೇ ಶ್ರಮ ಹಾಕಿ ಕೆಲಸ ಮಾಡಬೇಕು. ಸದ್ಯ ಗಿಲ್ಲಿ ವಿವಿಧ ಉತ್ಸವಗಳಿಗೆ ತೆರಳುತ್ತಿದ್ದಾರೆ. ಇದು ಪೂರ್ಣಗೊಂಡ ಬಳಿಕ ಅವರು ಸ್ಕ್ರಿಪ್ಟ್ ಬರೆಯೋಕೆ ಕುಳಿತುಕೊಳ್ಳಲಿದ್ದಾರೆ. ವಿಶೇಷ ಎಂದರೆ ಅವರ ಬಳಿ ಕಥೆ ಕೂಡ ರೆಡಿ ಇದೆಯಂತೆ. ಇದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮಂಗಳೂರಿನಲ್ಲೂ ಕಳಪೆ ಮಟ್ಟಕ್ಕಿಳಿದಿದೆ ವಾಯು ಗುಣಮಟ್ಟ
ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 156ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಮಂಗಳೂರಿನ ಏರ್ ಕ್ವಾಲಿಟಿ 190 ಆಗಿದೆ. ಜೊತೆಗೆ ಬಳ್ಳಾರಿಯ ವಾಯು ಗುಣಮಟ್ಟವೂ ಸಹ 168 ಆಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 8:37 am, Wed, 18 February 26
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯವು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈ ನಿರ್ಣಾಯಕ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಲಿರುವುದು ಪಾಕಿಸ್ತಾನ್ ಮತ್ತು ನಮೀಬಿಯ. ಈ ಮ್ಯಾಚ್ ನಮೀಬಿಯ ಪಾಲಿಗೆ ಔಪಚಾರಿಕವಾಗಿದ್ದರೆ, ಪಾಕ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.
ಅಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡವು ಸೂಪರ್-8 ಹಂತಕ್ಕೇರಲಿದೆ. ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕ್ ಪಡೆ ಗೆಲ್ಲಲೇಬೇಕು.
ಒಂದು ವೇಳೆ ನಮೀಬಿಯ ತಂಡವು ಯಾವುದೇ ಅಂತರದಿಂದ ಗೆದ್ದರೂ ಪಾಕಿಸ್ತಾನ್ ತಂಡ ವಿಶ್ವಕಪ್ ಟೂರ್ನಿಯಿಂದ ಹೊರಬೀಳಲಿದೆ. ಅಂದರೆ ನಮೀಬಿಯ ತಂಡ ಕೇವಲ 1 ರನ್ ಅಥವಾ 1 ವಿಕೆಟ್ನಿಂದಲೂ ಗೆದ್ದರೂ ಸಹ ಪಾಕ್ ತಂಡದ ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.
ಪಾಕಿಸ್ತಾನ್ ತಂಡ ಹೊರಬಿದ್ದರೆ ಯುಎಸ್ಎ ತಂಡ ಸೂಪರ್-8 ಹಂತಕ್ಕೇರಲಿದೆ. ಅಂದರೆ ಯುಎಸ್ಎ ತಂಡದ ಪಾಲಿಗೆ ಪಾಕಿಸ್ತಾನ್ ವಿರುದ್ಧ ನಮೀಬಿಯ ತಂಡ ಗೆಲ್ಲಲೇಬೇಕು. ಏಕೆಂದರೆ ಯುಎಸ್ಎ ತಂಡದ ನೆಟ್ ರನ್ ರೇಟ್ +0.787 ಇದ್ದು, ಇದರಿಂದ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿ ಮುಂದಿನ ಹಂತಕ್ಕೇರಬಹುದು.
ಅತ್ತ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಲು 6 ಅಂಕಗಳು ಅತ್ಯವಶ್ಯಕ. ಹೀಗಾಗಿ ನಮೀಬಿಯ ವಿರುದ್ಧ ಗೆಲ್ಲಬೇಕು. ಒಂದು ವೇಳೆ ಸೋತರೆ 4 ಅಂಕಗಳನ್ನು ಹೊಂದಿದ್ದರೂ -0.403 ನೆಟ್ ರನ್ ಇರುವ ಕಾರಣ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್ನಿಂದ ಹೊರಬೀಳಲಿದೆ.
ಹೀಗಾಗಿ ಕೊಲಂಬೊದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ 35ನೇ ಪಂದ್ಯವು ಪಾಕ್ನಂತೆ ಯುಎಸ್ಎ ಪಾಲಿಗೂ ಅತೀ ಮುಖ್ಯ. ಅದರಂತೆ ಪಾಕ್ ಪಡೆಯನ್ನು ಬಗ್ಗು ಬಡಿದು ನಮೀಬಿಯ ಯುಎಸ್ಎ ತಂಡವನ್ನು ಸೂಪರ್-8 ಹಂತಕ್ಕೇರಿಸಲಿದೆಯಾ ಅಥವಾ ನಮೀಬಿಯ ವಿರುದ್ಧ ಗೆದ್ದು ಪಾಕಿಸ್ತಾನ್ ಮುಂದಿನ ಹಂತಕ್ಕೇರಲಿದೆಯಾ ಕಾದು ನೋಡಬೇಕಿದೆ.
ಕೆಎಸ್ಆರ್ಟಿಸಿ ಬಸ್ (ಸಂಗ್ರಹ ಚಿತ್ರ)Image Credit source: tv9
ಬೆಂಗಳೂರು, ಫೆಬ್ರವರಿ 18: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ (ಫೆಬ್ರವರಿ 19) ಕರ್ನಾಟಕ ರಾಜ್ಯ ಸಾರಿಗೆ ನೌಕರರು ‘ಬೆಂಗಳೂರು ಚಲೋ’ಕ್ಕೆ ಕರೆ ನೀಡಿರುವುದರಿಂದ ಹಲವರು ಕರ್ತವ್ಯಕ್ಕೆ ಗೈರಾಗುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯಾದ್ಯಂತ ಕೆಎಸ್ಆರ್ಟಿಸಿ (KSRTC) ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು ಕಡೆಗೆ ಜಮಾಯಿಸುವ ನಿರೀಕ್ಷೆಯಿದೆ.
ಇದರ ನಡುವೆಯೇ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚನೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿರುವ ಅವರು, ಕರ್ತವ್ಯಕ್ಕೆ ಗೈರಾದಲ್ಲಿ ವೇತನ ಕಡಿತ ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಗೈರಾಗುವ ನೌಕರರ ಪಟ್ಟಿಯನ್ನು ಘಟಕವಾರು ಸಿದ್ಧಪಡಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ ಎಂಬ ತತ್ವದಡಿ ಕ್ರಮ ಜರುಗಿಸಲಾಗುತ್ತದೆ ಎಂದು ಎಂಡಿ ಸ್ಪಷ್ಟಪಡಿಸಿದ್ದಾರೆ.
ಅನಧಿಕೃತವಾಗಿ ಕರ್ತವ್ಯಕ್ಕೆ ಗೈರಾಗುವ ನೌಕರರ ವಿರುದ್ಧ ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಆದಾಗ್ಯೂ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರಿಗೆ ಸೇವೆ ಭಾಗಶಃ ವ್ಯತ್ಯಯವಾಗುವ ಸಾಧ್ಯತೆ ಇದ್ದು, ಪ್ರಯಾಣಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.
ಗುರುವಾರ ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮಕೈಗೊಳ್ಳಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ಎಂಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ. ತುರ್ತು, ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ಯಾವುದೇ ರಜೆ ನೀಡಬೇಡಿ. ಇದು ವಾರದ ರಜೆ ಅಥವಾ ದೀರ್ಘಾವಧಿ ರಜೆಯಲ್ಲಿರುವವರಿಗೆ ಅನ್ವಯಿಸುವುದಿಲ್ಲ. ಅಗತ್ಯವಿದ್ದರೆ ವಾರದ ರಜೆಯನ್ನು ರದ್ದುಪಡಿಸಿ ಕೆಲಸಕ್ಕೆ ನಿಯೋಜಿಸಬೇಕು ಎಂದು ಅಕ್ರಂ ಪಾಷಾ ನಿರ್ದೇಶನ ನೀಡಿದ್ದಾರೆ.
ಸಾರಿಗೆ ನೌಕರರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಸಹ ಜನವರಿ 29ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆಗೆ ಕರೆ ಕೊಡಲಾಗಿತ್ತು. ಆದರೆ, ಜನವರಿ 28 ರಂದು ಮುಖಂಡ ಅನಂತ್ ಸುಬ್ಬರಾವ್ ನಿಧನರಾದ ಹಿನ್ನೆಲೆ ಪ್ರತಿಭಟನೆಯ ಕಾವು ತಣ್ಣಗಾಗಿತ್ತು.
ಇದನ್ನೂ ಓದಿ: ಕರ್ನಾಟಕ ಸಾರಿಗೆ ನೌಕರರಿಂದ‘ಬೆಂಗಳೂರು ಚಲೋ’: ಬೇಡಿಕೆ ಈಡೇರದಿದ್ದರೆ ಮುಷ್ಕರಕ್ಕೂ ಪ್ಲ್ಯಾನ್!
01-01-2020ರಿಂದ 28-02-2023ರ ವರೆಗಿನ 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಹಾಗೂ 01.01.2024 ರಿಂದ ನಾಲ್ಕು ವರ್ಷಗಳ ವೇತನ ಒಪ್ಪಂದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದ್ದಾಗ ಮನವೊಲಿಸಿದ್ದ ಸರ್ಕಾರ, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ, ನಂತರ ಕ್ರಮ ಕೈಗೊಂಡಿರಲಿಲ್ಲ.
ಮದುವೆಯ ಕುರಿತಾದ ವದಂತಿಗಳಿಂದ ಮೃಣಾಲ್ ಠಾಕೂರ್ ಸುದ್ದಿಯಲ್ಲಿದ್ದಾರೆ. ಅವರು ಧನುಶ್ ಜೊತೆ ವಿವಾಹ ಆಗುತ್ತಾರೆ ಎಂಬ ವದಂತಿ ಜೋರಾಗಿದೆ. ಇದನ್ನು ಅವರು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ಇದರ ಮಧ್ಯೆ, ಈ ಸುಳ್ಳು ಸುದ್ದಿಯಿಂದ ತಮಗೆ ಪ್ರಚಾರ ಸಿಕ್ಕಿತು ಎಂದು ಹೇಳಿದ್ದಾರೆ. ಅವರ ಸ್ಟೇಟ್ಮೆಂಟ್ ಗಮನ ಸೆಳೆದಿದೆ.
ಕಾಲಿವುಡ್ ಸ್ಟಾರ್ ಹೀರೋ ಧನುಷ್ ಅವರನ್ನು ಮೃಣಾಲ್ ಪ್ರೀತಿಸುತ್ತಿದ್ದಾರೆ ಮತ್ತು ಫೆಬ್ರವರಿ 14 ರಂದು ಇಬ್ಬರೂ ಮದುವೆಯಾಗಲಿದ್ದಾರೆ ಎಂದು ಬಾಲಿವುಡ್ ಮಾಧ್ಯಮಗಳು ಸುದ್ದಿ ಹಬ್ಬಿಸಿದ್ದವು. ಈ ಸುದ್ದಿಗೆ ಪ್ರತಿಕ್ರಿಯಿಸಿದ ನಟಿ ಪ್ರಚಾರ ಸಿಕ್ಕಿದ್ದಾಗಿ ಖುಷಿಪಟ್ಟಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಪಿಆರ್ ತಂಡಕ್ಕೆ 3 ಕೋಟಿ, 6 ಕೋಟಿ ಅಥವಾ 10 ಕೋಟಿ ಖರ್ಚು ಮಾಡಿದ್ದರೂ ಸಹ, ನನಗೆ ಇಷ್ಟೊಂದು ಪ್ರಚಾರ ಸಿಗುತ್ತಿರಲಿಲ್ಲ. ಯಾರೋ ಉದ್ದೇಶಪೂರ್ವಕವಾಗಿ ನನ್ನ ಮತ್ತು ಧನುಷ್ ಬಗ್ಗೆ ವದಂತಿಗಳನ್ನು ಸೃಷ್ಟಿಸಿದರು. ಆದರೆ ಆ ವದಂತಿಗಳಿಂದಾಗಿ, ಇಡೀ ಭಾರತದಲ್ಲಿ ನನ್ನ ಹೆಸರು ಹರಿದಾಡಿತು. ಆ ವದಂತಿಗಳನ್ನು ಸೃಷ್ಟಿಸಿ, ನನಗೆ ಉಚಿತವಾಗಿ ಪ್ರಚಾರ ನೀಡಿದ್ದಕ್ಕಾಗಿ ನಾನು ಯಾವಾಗಲೂ ಋಣಿಯಾಗಿರುತ್ತೇನೆ’ ಎಂದು ಮೃಣಾಲ್ ಹೇಳಿದರು.
ಮೃಣಾಲ್ ಮತ್ತು ಧನುಷ್ ಅನೇಕ ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡರು. ಇಬ್ಬರೂ ಆಳವಾಗಿ ಪ್ರೀತಿಸುತ್ತಿದ್ದಾರೆ ಮತ್ತು ಪ್ರೇಮಿಗಳ ದಿನದಂದು ಮದುವೆಯಾಗಲಿದ್ದಾರೆ ಎಂಬ ಕಥೆಗಳನ್ನು ಸೃಷ್ಟಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಮೃಣಾಲ್, ‘ಅವರ ಲೆಕ್ಕಾಚಾರದ ಪ್ರಕಾರ, ನಮ್ಮ ಮದುವೆ ಇಷ್ಟೊತ್ತಿಗಾಗಲೇ ಮುಗಿದಿರಬೇಕಿತ್ತು’ ಎಂದಿದ್ದರು.
ಇದನ್ನೂ ಓದಿ: ‘ನನ್ನ ಮದುವೆ ಏಪ್ರಿಲ್ 1ಕ್ಕೆ’; ದಿನಾಂಕ ರಿವೀಲ್ ಮಾಡಿದ ಮೃಣಾಲ್ ಠಾಕೂರ್
ಮೃಣಾಲ್ ಅವರು ಪ್ರಸ್ತುತ ತಮ್ಮದೇ ಆದ ಪಿಆರ್ ತಂಡವನ್ನು ಹೊಂದಿಲ್ಲ ಎಂದು ಬಹಿರಂಗಪಡಿಸಿದ್ದಾರೆ. ಅವರ ಮನೆಯ ವಿಳಾಸವೂ ಈಗ ಸಾರ್ವಜನಿಕವಾಗಿದೆ. ಈ ರೀತಿಯ ಸಮಸ್ಯೆಗಳನ್ನು ಪರಿಹರಿಸಲು ಒಂದು ಪಿಆರ್ ತಂಡವನ್ನು ನೇಮಕ ಮಾಡದಾಗಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On – 8:08 am, Wed, 18 February 26
ಸಚಿವ ಜಾವೇದ್ ಅಹ್ಮದ್Image Credit source: India & the World
ನವದೆಹಲಿ, ಫೆಬ್ರವರಿ 18: ಈ ಬೇಸಿಗೆ ಪಾಕಿಸ್ತಾನ(Pakistan)ಕ್ಕೆ ಬರಗಾಲದ ದೊಡ್ಡ ಬಿಕ್ಕಟ್ಟನ್ನೇ ತಂದೊಡ್ಡಲಿದೆ. ಪಾಕಿಸ್ತಾನ ಒಂದು ಹನಿ ನೀರಿಗೂ ಹಾತೊರೆಯುವಂತಾಗಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದ್ದರಿಂದ ಅದು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಆದರೆ ಈಗ ಶಹಪುರ್ ಕಂಡಿ ಬ್ಯಾರೇಜ್ ಪೂರ್ಣಗೊಂಡ ನಂತರ, ಭಾರತವು ರಾವಿ ನದಿಯಿಂದ ಹೆಚ್ಚುವರಿ ನೀರಿನ ಹರಿವನ್ನು ನಿಲ್ಲಿಸಲಿದೆ.
ಇದು ಪಾಕಿಸ್ತಾನದ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಲಿದೆ. ಮಾಹಿತಿಯ ಪ್ರಕಾರ, ಶಾಹಪುರ್ ಕಂಡಿ ಬ್ಯಾರೇಜ್ನ ಕೆಲಸವು ಮಾರ್ಚ್ 31 ರೊಳಗೆ ಪೂರ್ಣಗೊಳ್ಳಲಿದೆ. ಇಲ್ಲಿಯವರೆಗೆ, ಸಂಗ್ರಹಣಾ ಸೌಲಭ್ಯಗಳ ಕೊರತೆಯಿಂದಾಗಿ, ರಾವಿಯ ಹೆಚ್ಚುವರಿ ನೀರು ಪಾಕಿಸ್ತಾನಕ್ಕೆ ಹೋಗುತ್ತಿತ್ತು.
ಜಮ್ಮು ಮತ್ತು ಕಾಶ್ಮೀರ ಸಚಿವ ಜಾವೇದ್ ರಾಣಾ ಅಣೆಕಟ್ಟಿನ ಕುರಿತು ಮಾಹಿತಿ ನೀಡಿದರು. ಬರಪೀಡಿತ ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ ನೀರಾವರಿ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಅಣೆಕಟ್ಟು ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ತಡೆಯುತ್ತದೆ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಸಾಕಷ್ಟು ನೀರು ಒದಗಿಸಲು ಸಹಾಯ ಮಾಡುತ್ತದೆ.
46 ವರ್ಷಗಳ ಕನಸು ನನಸಾಗುವ ಗಳಿಗೆ
ರಾವಿ ನದಿಗೆ ಕಟ್ಟುವ ಈ ಅಣೆಕಟ್ಟು ಯೋಜನೆಯನ್ನು 1979 ರಲ್ಲಿ ಕಲ್ಪಿಸಲಾಗಿತ್ತು. ಹೆಚ್ಚುವರಿ ನೀರು ಪಾಕಿಸ್ತಾನಕ್ಕೆ ಹರಿಯದಂತೆ ತಡೆಯಲು ರಂಜಿತ್ ಸಾಗರ್ ಅಣೆಕಟ್ಟು ಮತ್ತು ಶಹಪುರ್ ಕಂಡಿ ಬ್ಯಾರೇಜ್ ಅನ್ನು ಕೆಳಭಾಗದಲ್ಲಿ ನಿರ್ಮಿಸಲು ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಯೋಜನೆಗೆ 1982 ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಅಡಿಪಾಯ ಹಾಕಿದರು. ಆದಾಗ್ಯೂ, ನಂತರದ ವರ್ಷಗಳಲ್ಲಿ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರ ನಡುವಿನ ಆಂತರಿಕ ವಿವಾದಗಳು ಮತ್ತು ರಾಜಕೀಯ ನಿರ್ಲಕ್ಷ್ಯದಿಂದಾಗಿ, ಯೋಜನೆಯು 46 ವರ್ಷಗಳ ಕಾಲ ಸ್ಥಗಿತಗೊಂಡಿತು. 2018 ರಲ್ಲಿ, ಮೋದಿ ಸರ್ಕಾರ ಮಧ್ಯಪ್ರವೇಶಿಸಿ ಯೋಜನೆಯ ಕೆಲಸ ವೇಗವನ್ನು ಪಡೆಯಿತು.
ಮತ್ತಷ್ಟು ಓದಿ: Indus Waters Treaty: ಭಾರತದಿಂದ ಸಿಂಧೂ ನದಿ ನೀರು ಒಪ್ಪಂದ ಸ್ಥಗಿತ, ಪಾಕಿಸ್ತಾನಕ್ಕಾಗುವ ನಷ್ಟವೇನು?
1960 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸಹಿ ಹಾಕಿದ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ, ಭಾರತಕ್ಕೆ ಪೂರ್ವಕ್ಕೆ ಹರಿಯುವ ಮೂರು ನದಿಗಳಾದ ರಾವಿ, ಬಿಯಾಸ್ ಮತ್ತು ಸಟ್ಲೆಜ್ ನೀರನ್ನು ಬಳಸುವ ಸಂಪೂರ್ಣ ಹಕ್ಕುಗಳನ್ನು ನೀಡಲಾಯಿತು.
ಈ ಯೋಜನೆಯು 32,000 ಹೆಕ್ಟೇರ್ಗೂ ಹೆಚ್ಚು ಭೂಮಿಗೆ ನೀರಾವರಿ ಒದಗಿಸಲು ಸಹಾಯ ಮಾಡುತ್ತದೆ. ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದ ನಂತರ, ಇದು ಪಂಜಾಬ್ನಲ್ಲಿ 5,000 ಹೆಕ್ಟೇರ್ಗೂ ಹೆಚ್ಚು ಕೃಷಿ ಭೂಮಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ.
ಪಾಕಿಸ್ತಾನದ ಮೇಲೆ ಏನು ಪರಿಣಾಮ ಬೀರುತ್ತೆ?
ಪಾಕಿಸ್ತಾನ ಕೂಡ ಕೃಷಿ ನಂಬಿ ಬದುಕುತ್ತಿರುವ ದೇಶ, ಪಾಕಿಸ್ತಾನದ GDP ಗೆ ಕೃಷಿ ಶೇ. 25 ಕೊಡುಗೆ ನೀಡುತ್ತದೆ.ಅದರ ಕೃಷಿಯಲ್ಲಿ 80% ಸಿಂಧೂ ನದಿ ವ್ಯವಸ್ಥೆಯನ್ನು ಅವಲಂಬಿಸಿದೆ. ಆದಾಗ್ಯೂ, ಭಾರತದ ಕಠಿಣ ನಿಲುವು ಅದರ ತೊಂದರೆಗಳನ್ನು ಹೆಚ್ಚಿಸುತ್ತಿದೆ. ಹೆಚ್ಚುವರಿ ರಾವಿ ನೀರನ್ನು ತಡೆಹಿಡಿಯುವುದರಿಂದ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನೀರಾವರಿ ವ್ಯವಸ್ಥೆಗೆ ಅಡ್ಡಿಯಾಗಬಹುದು. ಇದಲ್ಲದೆ, ಲಾಹೋರ್ ಮತ್ತು ಮುಲ್ತಾನ್ನಂತಹ ಪ್ರಮುಖ ನಗರಗಳಿಗೆ ನೀರು ಸರಬರಾಜು ನೇರವಾಗಿ ಪರಿಣಾಮ ಬೀರುತ್ತದೆ. ನೀರಿನ ಕೊರತೆಯು ಬೆಳೆ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ, ಇದು ಪಾಕಿಸ್ತಾನದ ದುರ್ಬಲ ಆರ್ಥಿಕತೆ ಮತ್ತು ಆಹಾರ ಭದ್ರತೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ.
ಭಯೋತ್ಪಾದನೆ ವಿರುದ್ಧ ಭಾರತದ ಕಠಿಣ ನಿಲುವು
ಕಳೆದ ವರ್ಷ ಏಪ್ರಿಲ್ನಲ್ಲಿ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಕಠಿಣ ನಿಲುವು ತಳೆದು ಸಿಂಧೂ ಜಲ ಒಪ್ಪಂದ ಸ್ಥಗಿತಗಳಿಸಿತ್ತು. ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿಯಲ್ಲಿ ಹಲವು ಜಲವಿದ್ಯುತ್ ಯೋಜನೆಗಳ ಕೆಲಸವನ್ನು ಭಾರತ ಚುರುಕುಗೊಳಸಿದೆ. ಇವು 2027-28ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ನೀರಿನ ಹರಿವನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. ಇದಲ್ಲದೆ, ಝೀಲಂ ನದಿಯಿಂದ ನೀರಿನ ಸಂಗ್ರಹವನ್ನು ನಿಯಂತ್ರಿಸುವ ಸ್ಥಗಿತಗೊಂಡ ವುಲ್ಲಾರ್ ಬ್ಯಾರೇಜ್ನ ಕೆಲಸವನ್ನು ಭಾರತ ಪುನರಾರಂಭಿಸುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 8:11 am, Wed, 18 February 26
T20 World Cup 2026: ಟಿ20 ವಿಶ್ವಕಪ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 20 ತಂಡಗಳಲ್ಲಿ ಈಗಾಗಲೇ 7 ಟೀಮ್ಗಳು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಎ ಯಿಂದ ಈಗಾಗಲೇ ಭಾರತ ತಂಡವು ಮುಂದಿನ ಸುತ್ತಿಗೆ ಪ್ರವೇಶಿಸಿದ್ದು, ದ್ವಿತೀಯ ಸುತ್ತಿನಲ್ಲಿ ಮೂರು ತಂಡಗಳನ್ನು ಎದುರಿಸಲಿದೆ. ಅದರಂತೆ ಸೂಪರ್-8 ಸುತ್ತಿನಲ್ಲಿ ಟೀಮ್ ಇಂಡಿಯಾ ಎದುರಿಸಲಿರುವ ತಂಡಗಳಾವುವು ಎಂದು ನೋಡುವುದಾದರೆ…