Headlines

ಭಾರತದಲ್ಲಿ ಬರಲಿವೆ 50ಕ್ಕೂ ಹೆಚ್ಚು ಡೀಪ್​ಟೆಕ್ ಕಂಪನಿಗಳು: ಅಶ್ವಿನಿ ವೈಷ್ಣವ್ – Kannada News | Expecting arrival of over 50 deep tech Indian companies, says Ashwini Vaishnaw at India AI Impact Summit

ನವದೆಹಲಿ, ಫೆಬ್ರುವರಿ 17: ‘ಕ್ರಿಯೇಟ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ 50ಕ್ಕೂ ಹೆಚ್ಚು ಡೀಪ್-ಟೆಕ್ ಕಂಪನಿಗಳು ತಲೆ ಎತ್ತುವ ನಿರೀಕ್ಷೆ ಇದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಡಾ. ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೆಹಲಿಯಲ್ಲಿ ನಿನ್ನೆಯಿಂದ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯ ಭಾಗವಾಗಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಎಐ ಆವಿಷ್ಕಾರಗಳಿಗೆ ಪೂರಕವಾಗಿ ಭಾರತದ ಸೆಮಿಕಂಡಕ್ಟರ್ ಮಿಷನ್ನ ಹಾದಿ ಸಾಗುತ್ತದೆ ಎಂದಿದ್ದಾರೆ. ಹಾಗೆಯೇ, ಮಿಷನ್​ನ ಮುಂದಿನ ಹಂತದಲ್ಲಿ ಚಿಪ್ ಡಿಸೈನ್…

Read More

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ – Kannada News | Tarique Rahman takes oath as Bangladesh New Prime Minister

ಢಾಕಾ, ಫೆಬ್ರವರಿ 17: ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ…

Read More

3 ಹೆಸರಲ್ಲಿ ಪ್ರೀತಿ, ಮದ್ವೆ ನಾಟಕ: ಯುವಕರಿಗೆ ಗಾಳ ಹಾಕುತ್ತಿದ್ದವಳು ಮಾಡಿದ್ದೇನು ಗೊತ್ತಾ? – Kannada News | A Woman Cheating Youths On Love And Marriage Name at Dharwad

ಧಾರವಾಡ, (ಫೆಬ್ರವರಿ 17): ಯುವತಿಯೋರ್ವಳು ಮೂರ್ಮೂರು ಹೆಸರಿಟ್ಟುಕೊಂಡು ಯುವಕರನ್ನು ವಂಚಿಸಿದ್ದಾಳೆ ಎನ್ನುವ ಆರೋಪ (Accusation) ಕೇಳಿ ಬಂದಿದೆ. ಶ್ರೀಮಂತ ಹುಡುಗರಿಗೆ ಗಾಳ ಹಾಕ್ತಿದ್ದ ಐಶ್ವರ್ಯ ಎನ್ನುವ ಯುವತಿ, ಪ್ರೀತಿ (Love) ನಾಟಕವಾಡಿ ಯುವಕರಿಂದ ಹಣ ಪಡೆದು ವಂಚಿಸಿದ್ದಾಳಂತೆ. ಅದರಂತೆ ಐಶ್ವರ್ಯ, ಯುವಕನನ್ನು ಮದ್ವೆಯಾಗುವುದಾಗಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾಳೆ. ಐಶ್ವರ್ಯ, ರೇಣುಕಾ, ಆರೋಹಿ ಎಂಬ ಮೂರು ವಿಭಿನ್ನ ಹೆಸರಿನಲ್ಲಿ ಯುವಕರನ್ನು ಪರಿಚಯಿಸಿಕೊಂಡಿದ್ದ ಯುವತಿ, ಆರ್ಥಿಕವಾಗಿ ಸಹಾಯ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡುತ್ತಿದ್ದಳಂತೆ. ಸಂಜು ದೊಡಮನಿ ಹಾಗೂ ಗುರು…

Read More

ರಿಷಬ್ ಶೆಟ್ಟಿ ಜೊತೆ ನಟಿಸಲಿರುವ ‘ಬಾಹುಬಲಿ’ಯ ‘ಸಹೋದರ’ – Kannada News | Rana Daggubati joins Rishab Shetty’s Jai Hanuman movie

ರಿಷಬ್ ಶೆಟ್ಟಿ (Rishab Shetty) ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ಅಭೂತಪೂರ್ವ ಗೆಲುವು ಕಂಡಿದ್ದಾರೆ. ‘ಕಾಂತಾರ 1’ ಸಿನಿಮಾದ ಬಳಿಕ ಇದೀಗ ರಿಷಬ್ ತಮ್ಮ ಹೊಸ ಪ್ರಾಜೆಕ್ಟ್​ನಲ್ಲಿ ತೊಡಗಿಸಿಕೊಳ್ಳುವ ಸಮಯ ಬಂದಾಗಿದೆ. ‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಮಾಡುತ್ತಿರುವಾಗಲೇ ಅವರಿಗೆ ತೆಲುಗಿನ ‘ಜೈ ಹನುಮಾನ್’ ಸಿನಿಮಾದ ಆಫರ್ ಬಂದಿತ್ತು, ಸಿನಿಮಾದ ಪೋಸ್ಟರ್ ಸಹ ಬಿಡುಗಡೆ ಆಗಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಚಿತ್ರೀಕರಣವೂ ಪ್ರಾರಂಭ ಆಗಲಿದೆ. ಇದೀಗ ಸ್ಟಾರ್ ನಟರೊಬ್ಬರು ರಿಷಬ್ ಜೊತೆಗೆ ನಟಿಸಲಿರುವ ಸುದ್ದಿ ಹೊರಬಿದ್ದಿದೆ….

Read More

ಹಿಂದೂ ಯುವತಿಯರೇ ಟಾರ್ಗೆಟ್: ಶಾಕಿಂಗ್ ಆಗಿದೆ ‘ದಿ ಕೇರಳ ಸ್ಟೋರಿ 2’ ಟ್ರೇಲರ್ – Kannada News | The Kerala Story 2 trailer shows the shocking scenes of love Jihad

2023ರಲ್ಲಿ ಬಿಡುಗಡೆ ಆಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಸೂಪರ್ ಹಿಟ್ ಆಗಿತ್ತು. ಆ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಬಲವಂತದಿಂದ ಭಯೋತ್ಪಾದಕ ಕೃತ್ಯಕ್ಕೆ ಬಳಸಿಕೊಳ್ಳುವ ಕಥೆಯನ್ನು ತೋರಿಸಲಾಗಿತ್ತು. ಈಗ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ಸಿದ್ಧವಾಗಿದೆ. ಈ ಸಿನಿಮಾದಲ್ಲಿ ಕೂಡ ಲವ್ ಜಿಹಾದ್ ಬಗ್ಗೆ ತೋರಿಸಲಾಗುತ್ತದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಅದರಲ್ಲಿ ಕಥೆಯ ಬಗ್ಗೆ ಝಲಕ್ ನೀಡಲಾಗಿದೆ. ಟ್ರೇಲರ್…

Read More

ಅವಳಿಗೆ ಮೊಬೈಲ್ ಚಟ ಇತ್ತು: ಹಲವು ಪುರುಷರ ಜತೆ ಸಂಪರ್ಕ ಇದೆ ಎಂದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ – Kannada News | Birur Husband Murders Wife Over Suspicion, Children Orphaned

ಅನುಮಾನದಿಂದ ಹೆಂಡತಿಯನ್ನೇ ಕೊಂದ ಪತಿ ಚಿಕ್ಕಮಗಳೂರು, ಫೆ.17: ಪ್ರೀತಿಸಿ ಮದುವೆಯಾಗಿ 12 ವರ್ಷಗಳ ಸುಖ ಸಂಸಾರ ನಡೆಸಿದ್ದ ದಂಪತಿಗಳ ನಡುವೆ ಅನುಮಾನದ ಕಿಚ್ಚು ಹತ್ತಿ, ದಾಂಪತ್ಯ ಜೀವನವೇ ನಾಶವಾಗಿದೆ. ಈ ಅನುಮಾನದ ಭೂತದಿಂದ ಪತ್ನಿಯ ಕೊಲೆ ಮಾಡಿರುವ ಘಟನೆ ಬೀರೂರು ಪಟ್ಟಣದ ಚೌಡೇಶ್ವರಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಮತಾ (32) ಎಂದು ಗುರುತಿಸಲಾಗಿದೆ. ಇದೀಗ ಕೊಲೆ ಮಾಡಿದ ಪತಿ ರಂಗನಾಥ್ ಪೊಲೀಸರ ವಶದಲ್ಲಿದ್ದಾನೆ. ಅಜ್ಜಂಪುರ ತಾಲೂಕಿನ ಬುರುಡೆಕಟ್ಟೆ ಗ್ರಾಮದ ರಂಗನಾಥ್ ಮತ್ತು ಮಮತಾ ಪರಸ್ಪರ ಪ್ರೀತಿಸಿ 12…

Read More

ಎಐ ಶೃಂಗಸಭೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ ವಸ್ತುವೇ ಕಳ್ಳತನ; ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಸ್ಟಾರ್ಟಪ್ ಸ್ಥಾಪಕನಿಗೆ ಶಾಕ್ – Kannada News | Bengaluru startup’s patented AI product stolen at Delhi summit, NeoSapien CEO expresses disappointment

ನವದೆಹಲಿ, ಫೆಬ್ರುವರಿ 17: ಇಲ್ಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit) ಇಡೀ ಜಗತ್ತಿನ ಗಮನ ಸೆಳೆಯುತ್ತಿದೆ. ಅದರ ಹೊರತಾಗಿಯೂ ಕೆಲವರಿಗೆ ಕಹಿ ಅನುಭವವನ್ನೂ ನೀಡುತ್ತಿದೆ. ಬೆಂಗಳೂರಿನ ನಿಯೋಸೇಪಿಯೆನ್ (NeoSapien) ಎನ್ನುವ ಕಂಪನಿಯ ಪೇಟೆಂಟ್ ಉತ್ಪನ್ನದ ಸ್ಯಾಂಪಲ್​ವೊಂದು ಎಕ್ಸ್​ಪೋ ವೇಳೆ ಕಳ್ಳತನವಾದ ಘಟನೆ ನಡೆದಿದೆ. ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಧನಂಜಯ್ ಯಾದವ್ (Dhananjay Yadav) ಈ ಘಟನೆಯನ್ನು ಎಕ್ಸ್​ನಲ್ಲಿ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ. ಶೃಂಗಸಭೆಯ ಎಕ್ಸ್​ಪೋ ಹಾಲ್​ನಲ್ಲಿ ಬಿಗಿ ಭದ್ರತಾ…

Read More

ನಿಯಮ ಉಲ್ಲಂಘಿಸಿ ಸಚಿವ ಸ್ಥಾನಮಾನ: ಸಿದ್ದರಾಮಯ್ಯ ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ – Kannada News | Karnataka high Court asks His Stand about minister status to CM advisers And corporation heads

ಬೆಂಗಳೂರು, (ಫೆಬ್ರವರಿ 17): ಸಂವಿಧಾನದ 164(1)A ನಿಯಮ ಉಲ್ಲಂಘಿಸಿ ನಿಗಮ ಮಂಡಳಿ ಅಧ್ಯಕ್ಷರಿಗೆ (corporation heads) ಸಚಿವ ಸ್ಥಾನಮಾನ ಹಾಗೂ ಸಿಎಂ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್​​ ವಿಚಾರಣೆ ನಡೆಸಿದ ಹೈಕೋರ್ಟ್ (Karnataka high Court) ವಿಭಾಗೀಯ ಪೀಠ, ಈ ಬಗ್ಗೆ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಸಚಿವರ ಸಂಖ್ಯೆ ಶಾಸಕರ ಸಂಖ್ಯೆಯ ಶೇ.15ರಷ್ಟನ್ನು ಮೀರುವಂತಿಲ್ಲ. ಆದರೆ ಸಚಿವ ಸ್ಥಾನಮಾನದ ಮೂಲಕ ಸಂವಿಧಾನದ ನಿಯಮ ಉಲ್ಲಂಘಿಸಿದ್ದಾರೆಂದು ದೂರುದಾರ ಸೂರಿ ಪಾಯಲ ಪರ…

Read More

ಕೋಲಾರದ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ – Kannada News | Kolar’s Tata Airbus Mini Helicopter Unit Launched by Modi and Macron Virtually

ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆImage Credit source: Google ಕೋಲಾರ, ಫೆಬ್ರವರಿ 17: ಕೋಲಾರ ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಮುಂಬೈನಿಂದ ವರ್ಚುವಲ್ ಮೂಲಕ​​ ಉದ್ಘಾಟಿಸಿದ್ದಾರೆ. ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್ ಇಲ್ಲಿ ಸಿದ್ಧಗೊಳ್ಳುವ ನಿರೀಕ್ಷೆಯಿದೆ. ಕೋಲಾರ ತಾಲೂಕಿನ ವೇಮಗಲ್​ನಲ್ಲಿ…

Read More

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ 650 ಸಹಾಯಕ ಹುದ್ದೆಗೆ ನೇಮಕಾತಿ – Kannada News | RBI Assistant Recruitment 2026: Eligibility, Exam Dates and How to Apply for 650 Jobs

ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಾಯಕ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, 650 ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ 18 RBI ಕಚೇರಿಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. RBI ಸಹಾಯಕ ನೇಮಕಾತಿ ಅಧಿಸೂಚನೆಯ ಬಿಡುಗಡೆಯೊಂದಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 8 ಎಂದು ನಿಗದಿಪಡಿಸಲಾಗಿದೆ. RBI ಸಹಾಯಕ ನೇಮಕಾತಿ ಅಧಿಸೂಚನೆ ವೇಳಾಪಟ್ಟಿ: RBI ಸಹಾಯಕ ನೇಮಕಾತಿ 2026 ಹುದ್ದೆಗಳ ಸಂಖ್ಯೆ: 650 ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಫೆಬ್ರವರಿ 16…

Read More