Headlines

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

Chanakya Niti: ಯೌವನದಲ್ಲಿ ಈ ಕೆಲಸಗಳನ್ನು ಮಾಡಿದರೆ ವೃದ್ಧಾಪ್ಯವು ಸಂತೋಷದಿಂದಿರುವುದು – Kannada News | Chanakya Niti: Do these things today to make old age happy

ಯೌವನದಲ್ಲಿರುವಾಗ ಮಾಡುವ ಕೆಲವೊಂದು ತಪ್ಪುಗಳು ವೃದ್ಧಾಪ್ಯವನ್ನು (old age) ನರಕ ಮಾಡುತ್ತಂತೆ. ಹೌದು ಇಂದು ಮಾಡುವ ತಪ್ಪಿನಿಂದ ಕೊನೆಗಾಲದಲ್ಲಿ ಮಕ್ಕಳ ಪ್ರೀತಿಯೂ ಸಿಗೋದಿಲ್ಲ, ನೆಮ್ಮದಿಯೂ ಇರೋಲ್ಲ, ಮುಖ್ಯವಾಗಿ ಆಹಾರಕ್ಕೂ ಪರದಾಡಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ವೃದ್ಧಾಪ್ಯವು ಶಾಂತಿ ಮತ್ತು ಸಂತೋಷದಿಂದ ಕೂಡಿರಬೇಕೆಂದರೆ ಯೌನದಲ್ಲಿರುವಾಗ ಈ ಒಂದಷ್ಟು ಕೆಲಸಗಳನ್ನು ತಪ್ಪದೆ ಮಾಡಲೇಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಹಾಗಿದ್ರೆ ಕೊನೆಗಾಲದಲ್ಲಿ ನೆಮ್ಮದಿಯಾಗಿ ಜೀವನ ನಡೆಸಲು ಮುಂಚಿತವಾಗಿಯೇ ಏನೆಲ್ಲಾ ಮಾಡಬೇಕು ಎಂಬುದನ್ನು ತಿಳಿಯಿರಿ. ವೃದ್ಧಾಪ್ಯವು ಸಂತೋಷದಿಂದ ಕೂಡಿರಲು…

Read More

ಹುಷಾರ್: ಅಕ್ರಮ ವಲಸಿಗರಿಗೆ ಜಾಗ ಕೊಟ್ರೆ ಮನೆ ಮಾಲಿಕರಿಗೆ ಸಂಕಷ್ಟ – Kannada News | Bangaluru Police Crackdown on Illegal Foreigners: 2000 Questioned, Landlords Face Action

ಪೊಲೀಸರಿಂದ ಪರಿಶೀಲನೆImage Credit source: tv9 kannada ಬೆಂಗಳೂರು, ಫೆಬ್ರವರಿ 26: ನಗರದಲ್ಲಿ ವಿದೇಶಿಗರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನಲೆ ಪೊಲೀಸರು (police) ಅಲರ್ಟ್ ಆಗಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ನೆಲೆಸಿರುವ ಅಕ್ರಮ ವಿದೇಶಿಗರ (Illegal Foreigners) ಪತ್ತೆಗೆ ಖಾಕಿ ಪಡೆ ಮುಂದಾಗಿದೆ. ಕಮಿಷನರ್​​ ಸೂಚನೆ ಬೆನ್ನಲ್ಲೇ ನಗರ‌ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಒಂದು ವೇಳೆ ಅಕ್ರಮ ವಲಸಿಗರಿಗೆ ಜಾಗ ಕೊಟ್ಟರೆ ಮನೆ ಮಾಲಿಕರಿಗೂ ಸಂಕಷ್ಟ ತಪ್ಪಿದ್ದಲ್ಲ. ಬೆಂಗಳೂರಲ್ಲಿ ಪೊಲೀಸರ ತಲಾಶ್ ಬೆಂಗಳೂರಿನ ಆಯಾ ವಿಭಾಗದಲ್ಲಿ…

Read More

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ – Kannada News | Fire Breaks out In Janardhana Reddy And Sriramulu ownership Model House at Bellary, reddy Alleged On Congress

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ…

Read More

ದೆಹಲಿ ಮಾಲಿನ್ಯದ ಭೀಕರತೆಯನ್ನು ತೆರೆದಿಟ್ಟ ಸಚಿವ ನಿತಿನ್ ಗಡ್ಕರಿ – Kannada News | Nitin Gadkari Warns of Delhi’s Air Crisis, Cites Health Impact

ನವದೆಹಲಿ, ಡಿಸೆಂಬರ್ 24: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಮಾನವನ ಆರೋಗ್ಯಕ್ಕೆ ಹಾನಿಕಾರಕ ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ(Nitin Gadkari) ಕೂಡ ದೆಹಲಿಯ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ನಾನು ಎರಡು ದಿನಗಳ ಕಾಲ ದೆಹಲಿಯಲ್ಲಿದ್ದೆ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದೆ ಎಂದರು. ‘ಮೈ ಐಡಿಯಾ ಆಫ್ ನೇಷನ್ ಫರ್ಸ್ಟ್​ ಅನ್​ಲಾಯ್ಡ್​ ನ್ಯಾಷನಲಿಸಂ’ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.ಶೇಕಡಾ…

Read More

ಇರಾನ್​ನ ಭದ್ರತಾ ಮುಖ್ಯಸ್ಥರ ಹತ್ಯೆಯಾಗಿದೆ ಎಂದ ಇಸ್ರೇಲ್; ಕೆಲವೇ ಗಂಟೆಗಳಲ್ಲಿ ಕೈಬರಹದ ಪೋಸ್ಟ್ ಹಾಕಿದ ಅಲಿ ಲಾರಿಜಾನಿ!

ಟೆಹ್ರಾನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದ ಬಳಿಕ ಶುರುವಾದ ಸಂಘರ್ಷ ಇನ್ನೂ ಮುಂದುವರೆದಿದೆ. ಈ ದಾಳಿಯಲ್ಲಿ ಮೊದಲ ದಿನವೇ ಇರಾನ್​ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ಇರಾನ್ (Iran- Israel War) ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆಲ್ಲ ದಾಳಿ ನಡೆಸಿತ್ತು. ಈ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಇರಾನ್​ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್​ ಘೋಷಿಸಿತ್ತು….

Read More

ಬಾಬರ್ ಅಝಂ ಮಾನಸಿಕವಾಗಿ ಅಸ್ವಸ್ಥ; ಪಾಕ್ ಮಾಜಿ ಕ್ರಿಕೆಟಿಗನ ಸ್ಫೋಟಕ ಹೇಳಿಕೆ

ಬಾಬರ್ ಆಝಂ (Babar Azam).. ಪಾಕಿಸ್ತಾನದ ದಿಗ್ಗಜ ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕ್ರಿಕೆಟಿಗ. ನಾಯಕನಾಗಿ ತಂಡವನ್ನು ಅನೇಕ ಗೆಲುವಿನತ್ತ ಮುನ್ನಡೆಸಿದ ಮತ್ತು ಆಟಗಾರನಾಗಿಯೂ ಹಲವು ಸ್ಮರಣೀಯ ಇನ್ನಿಂಗ್ಸ್​ಗಳನ್ನು ಆಡಿದ್ದ ಹೆಗ್ಗಳಿಕೆಗೆ ಬಾಬರ್ ಅರ್ಹರು. ಆದರೆ ಕಳೆದೊಂದು ವರ್ಷದಿಂದ ಬಾಬರ್ ಅವರ ಪ್ರದರ್ಶನ ತೀರ ಕಳಪೆಯಾಗಿದೆ. ಮುಂಚೆ ರನ್ ಮಳೆ ಹರಿಸುತ್ತಿದ್ದ ಬಾಬರ್ ಇದೀಗ ರನ್ ಬರ ಎದುರಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತಿಚಿಗಷ್ಟೆ ಮುಗಿದ ಟಿ20 ವಿಶ್ವಕಪ್​ನಲ್ಲೂ (T20 World Cup) ಬಾಬರ್ ಬ್ಯಾಟ್ ಮೌನವಾಗಿತ್ತು….

Read More

ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆನ್ನಿಗೆ ನಿಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್! ಹೇಳಿದ್ದೇನು ನೋಡಿ – Kannada News | Udupi Saffron Flag Controversy: Minister Lakshmi Hebbalkar Backs Udupi DC, Says No Place for Politics

ಉಡುಪಿ, ಜನವರಿ 26: ಉಡುಪಿ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಕೇಸರಿ ಧ್ವಜ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ವಿವಾದಕ್ಕೆ ಗ್ರಾಸವಾಗಿತ್ತು. ಆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯ ಸೈಂಟ್ ಮೇರೀಸ್ ದ್ವೀಪದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು. ಇದೇ ವೇಳೆ, ಡಿಸಿ ವಿರುದ್ಧ ಕಾಂಗ್ರೆಸ್​​ನವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ…

Read More

ಮಧ್ಯಪ್ರದೇಶ: ಅರಣ್ಯ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | MP Horror: College Student Assaulted in Isolated Forest Area, Friend Attacked

ಕ್ರೈಂ-ಸಾಂದರ್ಭಿಕ ಚಿತ್ರ Image Credit source: Taylor & Ring ಇಂದೋರ್, ಏಪ್ರಿಲ್ 16: ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದ (ಮೋವ್) ಸಮೀಪವಿರುವ ಬೆರ್ಚಾ ಅರಣ್ಯ ಪ್ರದೇಶವು ಒಂದು ಘೋರ ಅಪರಾಧಕ್ಕೆ ಸಾಕ್ಷಿಯಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಗೆಳೆಯನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮೃಗೀಯವಾಗಿ ದಾಳಿ ನಡೆಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಮಂಗಳವಾರ ಸಂಜೆ ಪ್ರಸಿದ್ಧ ಲಗ್ನಶಾ ಭೈರವ ಬಾಬಾ ದೇವಸ್ಥಾನಕ್ಕೆ ಭೇಟಿ…

Read More

ಬೆಂಗಳೂರಿಗರೇ ಗಮನಿಸಿ: ಫ್ರೀಡಂ ಪಾರ್ಕ್​​ ಸುತ್ತಮುತ್ತ ಇಂದು ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು, ಮಾರ್ಚ್​​ 12: ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಫ್ರೀಡಂ ಪಾರ್ಕ್​​​ನಲ್ಲಿ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್​ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದು, ಶಾಂತಲಾ ಜಂಕ್ಷನ್, ಖೋಡ್ ಸರ್ಕಲ್​ನಿಂದ ಆನಂದ ರಾವ್ ಫ್ಲೈಓವರ್​, ಓಲ್ಡ್ JDS ಕಚೇರಿ…

Read More