Headlines

Video: ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ! – Kannada News | Bihar Snake Catcher Dies After Stunt with Venomous Snake: Danger of Overconfidence

ಬಿಹಾರದಲ್ಲಿ ವೃತ್ತಿಪರ ಸ್ನೇಕ್ ಕ್ಯಾಚರ್ ಒಬ್ಬರು ಹಾವನ್ನು ರಕ್ಷಿಸಿದ ನಂತರ ಅದರೊಂದಿಗೆ ಕ್ಯಾಮೆರಾ ಮುಂದೆ ಸಾಹಸ ಪ್ರದರ್ಶಿಸಲು ಹೋಗಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವಸತಿ ಪ್ರದೇಶದಲ್ಲಿ ಸಿಕ್ಕ ವಿಷಪೂರಿತ ಹಾವನ್ನು ಹಿಡಿದ ವ್ಯಕ್ತಿ, ಅದನ್ನು ಸುರಕ್ಷಿತವಾಗಿ ಡಬ್ಬಿಗೆ ಹಾಕುವ ಬದಲು ಅದರೊಂದಿಗೆ ಆಟವಾಡಲು ಶುರು ಮಾಡಿದ್ದರಿಂದ ಹಾವು ಏಕಾಏಕಿ ಕಚ್ಚಿದೆ; ವಿಷದ ತೀವ್ರತೆಯಿಂದಾಗಿ ಕೇವಲ ಮೂರೇ ನಿಮಿಷಗಳಲ್ಲಿ ಆತ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಎಷ್ಟೇ…

Read More

Karnataka Heatwave: ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು – Kannada News | Karnataka Heatwave Crisis: Two Dead in Raichur as Temperatures Cross 40 degree celsius; Severe Water Scarcity

ಬೆಂಗಳೂರು, ಮೇ 2: ಕರ್ನಾಟಕವು ತೀವ್ರ ಬಿಸಿಲಿನ ಬೇಗೆಯಿಂದ ಬಳಲುತ್ತಿದೆ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಈ ರಣಬಿಸಿಲು ಪ್ರಾಣಿ, ಪಕ್ಷಿ ಹಾಗೂ ಮನುಷ್ಯರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕುಡಿಯುವ ನೀರಿಲ್ಲದೆ ಸಾವಿರಾರು ಪ್ರಾಣಿಗಳು ನರಳುತ್ತಿವೆ, ಹಲವು ಸಾಯುತ್ತಿವೆ. ಕೊಪ್ಪಳದಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಹಸುಗಳು ಎಲುಬಾಗಿವೆ. ಗದಗ ಮತ್ತು ಇತರ ಪ್ರದೇಶಗಳಲ್ಲಿ ಕೆರೆಗಳು ಬತ್ತಿ ಹೋಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿ ತೀವ್ರ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ….

Read More

ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ! – Kannada News | Allahabad High Court imposes Rs 10 lakh fine on Uttar Pradesh government for mans 3 months illegal jailing

ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್‌ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು…

Read More

OTT Release this week: ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು

ಮಲಯಾಳಂ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಕೇವಲ ಕಂಟೆಂಟ್ ಇಂದಲೇ ಗೆಲ್ಲುತ್ತಿವೆ. ಅಂಥಹಾ ಸಿನಿಮಾಗಳ ಸಾಲಿಗೆ ಸೇರುತ್ತದೆ ‘ಆಡು 3’. ಈ ಮಲಯಾಳಂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಿಟ್ ಆಗಿತ್ತು. ಇದೀಗ ಒಟಿಟಿಗೆ ಬಂದಿದ್ದು, ಜೀ5ನಲ್ಲಿ ಸ್ಟ್ರೀಮ್ ಆಗುತ್ತಿದೆ. ಶರ್ವಾನಂದ ಅವರ ಬಹು ನಿರೀಕ್ಷಿತ ಸಿನಿಮಾ ‘ಬೈಕರ್’ ಕೆಲ ವಾರಗಳ ಹಿಂದಷ್ಟೆ ಈ ಸಿನಿಮಾ ಬಿಡುಗಡೆ ಆಗಿತ್ತು. ‘ಬೈಕರ್’ ಸಿನಿಮಾದ ಮೇಲೆ ಶರ್ವಾನಂದಗೆ ಭಾರಿ ನಂಬಿಕೆ ಇತ್ತು. ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು. ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ…

Read More

ಮಕ್ಕಳಲ್ಲಿ ರಕ್ತಹೀನತೆ ಹೆಚ್ಚುತ್ತಿರುವುದಕ್ಕೆ ಕಾರಣಗಳೇನು? ಪೋಷಕರೇ ಈ ರೀತಿಯ ಲಕ್ಷಣ ಕಂಡುಬಂದಾಗ ನಿರ್ಲಕ್ಷಿಸಬೇಡಿ – Kannada News | Why Do Kids Get Anemia? Signs Every Parent Should Know

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿ ರಕ್ತಹೀನತೆ (Anemia) ಸಮಸ್ಯೆ ಹೆಚ್ಚಾಗುತ್ತಿರುವುದು ವೈದ್ಯರನ್ನೇ ಚಿಂತೆಗೀಡುಮಾಡಿದೆ. ಏಕೆಂದರೆ ಈ ಸಮಸ್ಯೆ ಕೇವಲ ದೌರ್ಬಲ್ಯಕ್ಕೆ ಮಾತ್ರ ಸೀಮಿತವಾಗದೆ, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತದೆ. ತಜ್ಞರ ಪ್ರಕಾರ, ಮಕ್ಕಳಲ್ಲಿ ರಕ್ತಹೀನತೆಗೆ ಪ್ರಮುಖ ಕಾರಣ ಐರನ್ ಕೊರತೆ. ಹೀಮೋಗ್ಲೋಬಿನ್ ಉತ್ಪಾದನೆಗೆ ಐರನ್ ಅಗತ್ಯವಾಗಿದ್ದು, ಮಕ್ಕಳ ಆಹಾರದಲ್ಲಿ ಇದು ಕಡಿಮೆಯಾಗಿದ್ರೆ ಸಮಸ್ಯೆ ಉಂಟಾಗುತ್ತದೆ. ಜೊತೆಗೆ ವಿಟಮಿನ್ ಬಿ 12 ಮತ್ತು ಫೋಲಿಕ್ ಆಸಿಡ್ ಕೊರತೆಯೂ ಅನಿಮಿಯಾಗೆ ಕಾರಣವಾಗಬಹುದು. ಸರಿಯಾದ ಪೌಷ್ಟಿಕಾಂಶವಿಲ್ಲದ…

Read More

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆ: ನಾಪತ್ತೆಯಾಗಿದ್ದ ಮತಗಳು ಪತ್ತೆ; ಹೈರಾಣಾದ ಅಧಿಕಾರಿಗಳು – Kannada News | Chikmagalur Sringeri Recount: 9 Missing Ballots Found Amidst Intense Election Dispute

ಚಿಕ್ಕಮಗಳೂರು, ಮೇ 02: ನಗರದ IDSG ಕಾಲೇಜಿನಲ್ಲಿ ಇಂದು ಶೃಂಗೇರಿ ಕ್ಷೇತ್ರದ (Sringeri assembly constituency) ಅಂಚೆ ಮತಗಳ ಮರು ಮತ‌ ಎಣಿಕೆ ನಡೆದಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಗೆಲುವಿನ ಫೈಟ್ ಶುರುವಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಮತಗಳ ಮರು ಎಣಿಕೆ ಪ್ರಕ್ರಿಯೆ ವೇಳೆ ಗೊಂದಲ ಉಂಟಾಗಿತ್ತು. ಏಕೆಂದರೆ 279 ತಿರಸ್ಕೃತ ಮತಗಳಲ್ಲಿ 270 ಮತ ಪತ್ರಗಳಷ್ಟೇ ಪತ್ತೆಯಾಗಿದ್ದವು. ಬಾಕಿ 9 ತಿರಸ್ಕೃತ ಮತ ಪತ್ರಗಳು ನಾಪತ್ತೆಯಾಗಿದ್ದು, ಅಧಿಕಾರಿಗಳ ಸತತ ಹುಡುಕಾಟದ ಬಳಿಕ ಕೊನೆಗೂ…

Read More

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ? – Kannada News | Chikkaballapur Tragedy: Newlywed Woman Commits Suicide Over Tattoo Dispute and Dowry Harassment; Husband Arrested

ಪ್ರೇಮಾ ಹಾಗೂ ಶಿವಕುಮಾರ್Image Credit source: tv9 ಚಿಕ್ಕಬಳ್ಳಾಪುರ, ಮೇ 2: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ಕ್ಕೆ ಮದುವೆಯ ಸಂಭ್ರಮ ಆಚರಿಸಬೇಕಿದ್ದ ಮನೆ ಈಗ ಸ್ಮಶಾನ ಸದೃಶವಾಗಿದೆ. ಪ್ರಕರಣದ ಹಿನ್ನೆಲೆ ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ ಬೇಡಿ…

Read More

94ನೇ ವಯಸ್ಸಿಗೆ ನಿರ್ದೇಶನ ಮಾಡಿದ ‘ಪುಷ್ಪಕ ವಿಮಾನ’ ನಿರ್ದೇಶಕ – Kannada News | Singeetam Srinivasa Rao Returns with ‘Sing Geetham’ at 94: Teaser Out Now

ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರ ‘ಸಿಂಗ್ ಗೀತಂ’ (Sing Geetham) ಟೀಸರ್ ಬಿಡುಗಡೆಯಾಗಿದ್ದು, 94ನೇ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಕಂಡು ಎಲ್ಲರೂ ಅಚ್ಚರಿಕೊಂಡಿದ್ದಾರೆ.ಇವರು ಜೆನ್-ಜಿ ತಲೆಮಾರಿಗಿಂತಲೂ ಮಿಗಿಲು ಎಂದು ಗುಣಗಾನ ಮಾಡುತ್ತಿದ್ದಾರೆ. ಸಿಂಗೀತಂ ಅವರ ಹೆಸರಿನಲ್ಲೇ ಇರುವ ‘ಸಿಂಗ್ ಗೀತಂ’ ಎಂಬ ಶೀರ್ಷಿಕೆಯ ಈ ಚಿತ್ರದ 1 ನಿಮಿಷ 22 ಸೆಕೆಂಡುಗಳ ಟೀಸರ್ ಕುತೂಹಲ ಮೂಡಿಸುವಂತಿದೆ….

Read More

NEET UG 2026: ನೀಟ್ ಯುಜಿ ಪರೀಕ್ಷಾ ದಿನದ ಡ್ರೆಸ್ ಕೋಡ್ ಮತ್ತು ಪ್ರಮುಖ ಮಾರ್ಗಸೂಚಿ ಪ್ರಕಟ! – Kannada News | NEET UG 2026 Exam Guidelines: NTA Dress Code and Security Rules Explained

ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಯುಜಿ (NEET UG) 2026 ರ ಪರೀಕ್ಷಾ ದಿನಾಂಕ ಹತ್ತಿರವಾಗುತ್ತಿದೆ. ಈ ಪ್ರಮುಖ ಪರೀಕ್ಷೆಯು ಮೇ 3 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ರವರೆಗೆ ಒಂದೇ ಪಾಳಿಯಲ್ಲಿ ದೇಶಾದ್ಯಂತ ನಡೆಯಲಿದೆ. ಒಟ್ಟು 180 ನಿಮಿಷಗಳ ಕಾಲ ನಡೆಯುವ ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಂದ ಒಟ್ಟು 180 ಪ್ರಶ್ನೆಗಳನ್ನು ಎದುರಿಸಲಿದ್ದಾರೆ. ಒಟ್ಟು 720 ಅಂಕಗಳನ್ನು ಒಳಗೊಂಡಿರುವ ಈ ಪರೀಕ್ಷೆಯ ಬಗ್ಗೆ ಅಭ್ಯರ್ಥಿಗಳಲ್ಲಿ…

Read More

2 ವರ್ಷದಿಂದ 15 ವರ್ಷದವರೆಗೆ ಕಂಡುಬರುವ ಈ ಟುರೆಟ್ ಸಿಂಡ್ರೋಮ್ ಬಗ್ಗೆ ಪೋಷಕರಿಗೆ ತಿಳಿದಿರಲೇಬೇಕು: ಡಾ. ಪ್ರಪುಲ್ಲ – Kannada News | Tourette Syndrome Symptoms in Children: Dr. Prapulla’s Guidance for Parents

ಇತ್ತೀಚಿನ ದಿನಗಳಲ್ಲಿ ಈ ಟುರೆಟ್ ಸಿಂಡ್ರೋಮ್ (Tourette Syndrome) ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲದ ಕಾರಣ ವಿವಿಧ ರೀತಿಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ. ಅದರಲ್ಲಿಯೂ ಪೋಷಕರು ಈ ಸಿಂಡ್ರೋಮ್ ಬಗ್ಗೆ ತಿಳಿಯುವುದು ಅತಿಮುಖ್ಯವಾಗಿದೆ. ಏಕೆಂದರೆ ಇದೊಂದು ನರಮಂಡಲಕ್ಕೆ ಸಂಬಂಧಿಸಿದ ಖಾಯಿಲೆಯಾಗಿದ್ದು, ಇದು ಹದಿಹರೆಯದವರಲ್ಲಿ ಕಂಡುಬರುತ್ತದೆ (ಸಾಮಾನ್ಯವಾಗಿ 2 ವರ್ಷದಿಂದ 15 ವರ್ಷದವರೆಗೆ). ಇದನ್ನು ತಡೆಗಟ್ಟಲು ಮತ್ತು ಇದರ…

Read More