IPL 2026: ಆರಂಭಿಕನಾಗಿ ರೋಹಿತ್, ಕೊಹ್ಲಿ ದಾಖಲೆ ಮುರಿದ ರಾಹುಲ್

Source link

ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ – Kannada News | War Likely To Resume again Iran makes a big claim Donald trump

ಟೆಹ್ರಾನ್, ಮೇ 2: ಕದನವಿರಾಮ ಘೋಷಣೆಯಾಗಿದ್ದರೂ ಇರಾನ್ ಮತ್ತು ಅಮೆರಿಕದ ನಡುವಿನ ಉದ್ವಿಗ್ನತೆ ಇನ್ನೂ ಹೆಚ್ಚಾಗಿದೆ. ಎರಡೂ ದೇಶಗಳ ನಡುವಿನ ಪರಿಸ್ಥಿತಿ ಮತ್ತೆ ಉಲ್ಬಣಗೊಳ್ಳಬಹುದು. ಅಮೆರಿಕ ಮತ್ತು ಇಸ್ರೇಲ್ ಜೊತೆ ಯುದ್ಧ ಮತ್ತೆ ಆರಂಭವಾಗಬಹುದು ಎಂದು ಇರಾನ್ (Iran) ಸೇನೆ ಎಚ್ಚರಿಸಿದೆ. ಇರಾನ್ ಸೇನಾ ಉಪ ಅಧಿಕಾರಿ ಮೊಹಮ್ಮದ್ ಜಾಫರ್ ಅಸಾದಿ ಅಮೆರಿಕ ಯಾವುದೇ ಒಪ್ಪಂದಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಅಮೆರಿಕದ ಅಧಿಕಾರಿಗಳ ಹೇಳಿಕೆಗಳು ಕೇವಲ ಪ್ರದರ್ಶನಕ್ಕಾಗಿ ಮಾತ್ರ ಎಂದು ಅಸ್ಸಾದಿ ಆರೋಪಿಸಿದ್ದಾರೆ. ಇರಾನ್ ಸೇನೆಯು ಸಂಪೂರ್ಣವಾಗಿ ಸಿದ್ಧವಾಗಿದೆ. ಮತ್ತೆ ಯಾವುದೇ ದಾಳಿ ನಡೆದರೂ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಇದನ್ನೂ ಓದಿ: ನೀವು ನನಗೆ ಸಹಾಯ ಮಾಡಿ, ನಾನು ನಿಮಗೆ ಸಹಾಯ ಮಾಡ್ತೇನೆ, ಟ್ರಂಪ್-ಪುಟಿನ್ 90 ನಿಮಿಷಗಳ ರಹಸ್ಯ ಮಾತುಕತೆ

ಇರಾನ್ ಜೊತೆಗಿನ ಮಾತುಕತೆಯ ಹೊಸ ಪ್ರಸ್ತಾಪವನ್ನು ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ ಸಮಯದಲ್ಲಿಯೇ ಅವರ ಈ ಹೇಳಿಕೆ ಬಂದಿದೆ. ಇರಾನ್ ತಾನು ಒಪ್ಪಿಕೊಳ್ಳಲು ಸಾಧ್ಯವಾಗದ ಷರತ್ತುಗಳನ್ನು ವಿಧಿಸುತ್ತಿದೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ನಾಯಕರು ಒಗ್ಗಟ್ಟಿನಲ್ಲಿಲ್ಲ ಎಂದು ಅವರು ಆರೋಪಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಇರಾನ್ ಸಮರ ಅಂತ್ಯ: ಟ್ರಂಪ್ ಆಡಳಿತದ ದಿಢೀರ್ ಘೋಷಣೆ, ಸಂಸತ್ತಿನ ಹಸ್ತಕ್ಷೇಪಕ್ಕೆ ಬೀಳಲಿದೆಯೇ ಬ್ರೇಕ್?

ಒಂದು ಕಾರ್ಯಕ್ರಮವೊಂದರಲ್ಲಿ ಟ್ರಂಪ್ ಮಾತನಾಡುತ್ತಾ, ಪರಮಾಣು ಶಸ್ತ್ರಾಸ್ತ್ರಗಳು ಹುಚ್ಚರ ಕೈಗೆ ಸಿಗಲು ಬಿಡಲು ಸಾಧ್ಯವಿಲ್ಲದ ಕಾರಣ ಅಮೆರಿಕ ಈ ಯುದ್ಧದಲ್ಲಿ ಭಾಗವಹಿಸಿದೆ ಎಂದು ಹೇಳಿದ್ದಾರೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯುವುದನ್ನು ತಡೆಯುವುದು ಅತ್ಯಗತ್ಯ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Video: ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ! – Kannada News | Bihar Snake Catcher Dies After Stunt with Venomous Snake: Danger of Overconfidence

ಬಿಹಾರದಲ್ಲಿ ವೃತ್ತಿಪರ ಸ್ನೇಕ್ ಕ್ಯಾಚರ್ ಒಬ್ಬರು ಹಾವನ್ನು ರಕ್ಷಿಸಿದ ನಂತರ ಅದರೊಂದಿಗೆ ಕ್ಯಾಮೆರಾ ಮುಂದೆ ಸಾಹಸ ಪ್ರದರ್ಶಿಸಲು ಹೋಗಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವಸತಿ ಪ್ರದೇಶದಲ್ಲಿ ಸಿಕ್ಕ ವಿಷಪೂರಿತ ಹಾವನ್ನು ಹಿಡಿದ ವ್ಯಕ್ತಿ, ಅದನ್ನು ಸುರಕ್ಷಿತವಾಗಿ ಡಬ್ಬಿಗೆ ಹಾಕುವ ಬದಲು ಅದರೊಂದಿಗೆ ಆಟವಾಡಲು ಶುರು ಮಾಡಿದ್ದರಿಂದ ಹಾವು ಏಕಾಏಕಿ ಕಚ್ಚಿದೆ; ವಿಷದ ತೀವ್ರತೆಯಿಂದಾಗಿ ಕೇವಲ ಮೂರೇ ನಿಮಿಷಗಳಲ್ಲಿ ಆತ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಎಷ್ಟೇ ಅನುಭವವಿದ್ದರೂ ವನ್ಯಜೀವಿಗಳ ವಿಷಯದಲ್ಲಿ ಅಸಡ್ಡೆ ಅಥವಾ ಅತಿಯಾದ ಆತ್ಮವಿಶ್ವಾಸ ತೋರುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Karnataka Heatwave: ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು – Kannada News | Karnataka Heatwave Crisis: Two Dead in Raichur as Temperatures Cross 40 degree celsius; Severe Water Scarcity

ಬೆಂಗಳೂರು, ಮೇ 2: ಕರ್ನಾಟಕವು ತೀವ್ರ ಬಿಸಿಲಿನ ಬೇಗೆಯಿಂದ ಬಳಲುತ್ತಿದೆ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಈ ರಣಬಿಸಿಲು ಪ್ರಾಣಿ, ಪಕ್ಷಿ ಹಾಗೂ ಮನುಷ್ಯರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕುಡಿಯುವ ನೀರಿಲ್ಲದೆ ಸಾವಿರಾರು ಪ್ರಾಣಿಗಳು ನರಳುತ್ತಿವೆ, ಹಲವು ಸಾಯುತ್ತಿವೆ. ಕೊಪ್ಪಳದಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಹಸುಗಳು ಎಲುಬಾಗಿವೆ. ಗದಗ ಮತ್ತು ಇತರ ಪ್ರದೇಶಗಳಲ್ಲಿ ಕೆರೆಗಳು ಬತ್ತಿ ಹೋಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.

ರಾಯಚೂರಿನಲ್ಲಿ ತೀವ್ರ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಜಿಲ್ಲಾಡಳಿತವು ಹೃದ್ರೋಗ, ಕ್ಯಾನ್ಸರ್, ಬಿಪಿ, ಶುಗರ್ ಪೀಡಿತರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ಮಧ್ಯಾಹ್ನ 11 ರಿಂದ ಸಂಜೆ 4 ಗಂಟೆಯವರೆಗೆ ಹೊರಗೆ ಬಾರದಂತೆ ಜನರಿಗೆ ಸೂಚನೆ ನೀಡಲಾಗಿದೆ. ಈ ಬಿಸಿಲಿನಿಂದ ಪಾರಾಗಲು ಬೀದರ್‌ನಲ್ಲಿ ಏರ್ ಕೂಲರ್‌ಗಳು ಮತ್ತು ಬಾಗಲಕೋಟೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗಿದೆ. ಜನರು ಆದಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಆರೋಗ್ಯ ಇಲಾಖೆಯೂ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವ್ಯಕ್ತಿ ತಪ್ಪು ಮಾಡದಿದ್ದರೂ 3 ತಿಂಗಳು ಜೈಲಿನಲ್ಲಿ ಇಟ್ಟಿದ್ದ ಉತ್ತರ ಪ್ರದೇಶ ಸರ್ಕಾರಕ್ಕೆ 10 ಲಕ್ಷ ರೂ. ದಂಡ! – Kannada News | Allahabad High Court imposes Rs 10 lakh fine on Uttar Pradesh government for mans 3 months illegal jailing

ಅಲಹಾಬಾದ್, ಮೇ 2: ಅಲಹಾಬಾದ್ ಹೈಕೋರ್ಟ್‌ನ (Allahabad High Court) ಲಕ್ನೋ ಪೀಠವು ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೆ, ಅದಕ್ಕೆ 10 ಲಕ್ಷ ರೂ. ದಂಡವನ್ನು ವಿಧಿಸಿದೆ. ಕಾರಣಗಳನ್ನು ನೀಡದೆ ವ್ಯಕ್ತಿಯನ್ನು 3 ತಿಂಗಳ ಕಾಲ ಜೈಲಿನಲ್ಲಿ ಇರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ನ್ಯಾಯಾಲಯವು ಸಂವಿಧಾನಬಾಹಿರ ಎಂದು ಘೋಷಿಸಿದೆ. ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಮತ್ತು ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಶ್ರೀವಾಸ್ತವ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಈ ಅಕ್ರಮ ಬಂಧನಕ್ಕೆ ಕಾರಣರಾದ ಅಧಿಕಾರಿಗಳಿಂದ ರಾಜ್ಯ ಸರ್ಕಾರವು ಈ ದಂಡದ ಮೊತ್ತವನ್ನು ವಸೂಲಿ ಮಾಡಬಹುದು ಎಂದು ನ್ಯಾಯಾಲಯವು ನಿರ್ದೇಶಿಸಿದೆ. ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಉನ್ನತ ಅಧಿಕಾರಿಗಳ ಸ್ಥಿತಿಯೇ ಹೀಗಿದ್ದರೆ, ರಾಜ್ಯದ ಇತರ ಅಧಿಕಾರಿಗಳು ಯಾವ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರಬಹುದು ಎಂದು ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

ಸುಪ್ರೀಂ ಕೋರ್ಟ್‌ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ಅಲಹಾಬಾದ್ ಹೈಕೋರ್ಟ್, ಯಾವುದೇ ವ್ಯಕ್ತಿಯನ್ನು ಬಂಧಿಸಲು ಲಿಖಿತ ಆಧಾರಗಳನ್ನು ಒದಗಿಸುವುದು ಸಾಂವಿಧಾನಿಕ ಬಾಧ್ಯತೆಯಾಗಿದೆ ಎಂದು ಹೇಳಿದೆ. ಇದನ್ನು ನಿರ್ಲಕ್ಷಿಸುವುದು ನಾಗರಿಕರ ಮೂಲಭೂತ ಹಕ್ಕುಗಳ ನೇರ ಉಲ್ಲಂಘನೆಯಾಗುತ್ತದೆ ಎಂದಿದೆ.

ಮನೋಜ್ ಕುಮಾರ್ ಎಂಬುವವರನ್ನು ಜನವರಿ 27ರಂದು ಉನ್ನಾವೊ ಜಿಲ್ಲೆಯ ಅಸಿವಾನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲಾಯಿತು. ಬಂಧನದ ನಂತರ ಅವರನ್ನು 3 ತಿಂಗಳು ಜೈಲಿನಲ್ಲಿ ಇರಿಸಲಾಗಿತ್ತು. ಆದರೆ ಅವರ ವಿರುದ್ಧ ಪೊಲೀಸರು ಯಾವುದೇ ಆರೋಪಗಳನ್ನು ದಾಖಲಿಸಲು ವಿಫಲರಾಗಿದ್ದಾರೆ. ಪೊಲೀಸರಿಗೆ ಆ ವ್ಯಕ್ತಿಯ ಬಂಧನಕ್ಕೆ ಯಾವುದೇ ಸ್ಪಷ್ಟ ಕಾರಣಗಳನ್ನು ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ, ಮನೋಜ್ ಕುಮಾರ್ ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಯಾಗಿಲ್ಲದಿದ್ದರೆ ಅವರನ್ನು ತಕ್ಷಣ ಬಿಡುಗಡೆ ಮಾಡಲು ನ್ಯಾಯಾಲಯ ಆದೇಶಿಸಿದೆ. ಪೊಲೀಸರು ಬಂಧನಕ್ಕೆ ಕಾರಣಗಳನ್ನು ನೀಡಲು ವಿಫಲವಾದರೆ ಆ ಬಂಧನ ಸಂವಿಧಾನಬಾಹಿರವಾಗಿರುತ್ತದೆ ಎಂದು ನ್ಯಾಯಪೀಠ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

OTT Release this week: ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು

Source link

ಮಕ್ಕಳಲ್ಲಿ ರಕ್ತಹೀನತೆ ಹೆಚ್ಚುತ್ತಿರುವುದಕ್ಕೆ ಕಾರಣಗಳೇನು? ಪೋಷಕರೇ ಈ ರೀತಿಯ ಲಕ್ಷಣ ಕಂಡುಬಂದಾಗ ನಿರ್ಲಕ್ಷಿಸಬೇಡಿ – Kannada News | Why Do Kids Get Anemia? Signs Every Parent Should Know

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿ ರಕ್ತಹೀನತೆ (Anemia) ಸಮಸ್ಯೆ ಹೆಚ್ಚಾಗುತ್ತಿರುವುದು ವೈದ್ಯರನ್ನೇ ಚಿಂತೆಗೀಡುಮಾಡಿದೆ. ಏಕೆಂದರೆ ಈ ಸಮಸ್ಯೆ ಕೇವಲ ದೌರ್ಬಲ್ಯಕ್ಕೆ ಮಾತ್ರ ಸೀಮಿತವಾಗದೆ, ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಮೇಲೂ ಪರಿಣಾಮ ಬೀರುತ್ತದೆ. ತಜ್ಞರ ಪ್ರಕಾರ, ಮಕ್ಕಳಲ್ಲಿ ರಕ್ತಹೀನತೆಗೆ ಪ್ರಮುಖ ಕಾರಣ ಐರನ್ ಕೊರತೆ. ಹೀಮೋಗ್ಲೋಬಿನ್ ಉತ್ಪಾದನೆಗೆ ಐರನ್ ಅಗತ್ಯವಾಗಿದ್ದು, ಮಕ್ಕಳ ಆಹಾರದಲ್ಲಿ ಇದು ಕಡಿಮೆಯಾಗಿದ್ರೆ ಸಮಸ್ಯೆ ಉಂಟಾಗುತ್ತದೆ. ಜೊತೆಗೆ ವಿಟಮಿನ್ ಬಿ 12 ಮತ್ತು ಫೋಲಿಕ್ ಆಸಿಡ್ ಕೊರತೆಯೂ ಅನಿಮಿಯಾಗೆ ಕಾರಣವಾಗಬಹುದು. ಸರಿಯಾದ ಪೌಷ್ಟಿಕಾಂಶವಿಲ್ಲದ ಆಹಾರ ಪದ್ಧತಿ, ಹೆಚ್ಚು ಜಂಕ್ ಫುಡ್ ಸೇವನೆ ಮತ್ತು ಅಸಮತೋಲನ ಆಹಾರ ಸೇರಿದಂತೆ ನಾನಾ ರೀತಿಯ ಕಾರಣಗಳು ಕೂಡ ಈ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಹಾಗಾದರೆ ಈ ರೀತಿ ಅನಿಮಿಯಾ ಕಂಡುಬರುವ ಮೊದಲು ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇನ್ನಿತರ ಕಾರಣಗಳು

ರಕ್ತಹೀನತೆ ಅಥವಾ ಅನಿಮಿಯಾ ಕಂಡುಬರುವುದಕ್ಕೆ ಪುನಃಪುನಃ ಸೋಂಕುಗಳು, ಅಜೀರ್ಣ ಸಮಸ್ಯೆಗಳು ಅಥವಾ ಹೊಟ್ಟೆಯಲ್ಲಿ ಹುಳುಗಳಿರುವುದು ಕೂಡ ಕಾರಣವಾಗಬಹುದು. ಅದರ ಜೊತೆಗೆ ಸಮಯಕ್ಕಿಂತ ಮೊದಲು ಜನಿಸಿದ ಶಿಶುಗಳು ಅಥವಾ ಕಡಿಮೆ ತೂಕದ ಮಕ್ಕಳಲ್ಲಿಯೂ ಈ ಸಮಸ್ಯೆಯ ಅಪಾಯ ಹೆಚ್ಚಾಗಿ ಕಂಡುಬರಬಹುದು.

ಆರಂಭಿಕ ಲಕ್ಷಣಗಳು ಹೇಗಿರುತ್ತವೆ?

ರಕ್ತಹೀನತೆಯ ಲಕ್ಷಣಗಳು ಆರಂಭದಲ್ಲಿ ಸ್ವಲ್ಪಮಟ್ಟಿಗೆ ಕಾಣಿಸಿಕೊಂಡರೂ ಕೂಡ ಗಮನಿಸಿದರೆ ಸರಿಯಾಗಿ ತಿಳಿಯುತ್ತದೆ. ಮಕ್ಕಳಲ್ಲಿ ಸುಸ್ತು, ದೌರ್ಬಲ್ಯ ಮತ್ತು ಆಟದಲ್ಲಿ ಆಸಕ್ತಿ ಕಡಿಮೆಯಾಗುವುದು ಸಾಮಾನ್ಯ ಲಕ್ಷಣಗಳು. ಚರ್ಮವು ಬಿಳಿಯಾಗುವುದು, ತುಟಿ ಬಣ್ಣ ಕಳೆದುಕೊಳ್ಳುವುದು ಕೂಡ ಪ್ರಮುಖ ಸೂಚನೆಗಳಾಗಿವೆ. ಕೆಲವು ಸಂದರ್ಭಗಳಲ್ಲಿ ತಲೆ ಸುತ್ತುವುದು, ಉಸಿರಾಟದ ತೊಂದರೆ ಅಥವಾ ಹೃದಯದ ಬಡಿತ ಹೆಚ್ಚಾಗುವಂತಹ ಲಕ್ಷಣಗಳು ಕಾಣಿಸಬಹುದು. ಜೊತೆಗೆ ಚಿಡಿಚಿಡಿ, ಭಕ್ಷ್ಯಾಸಕ್ತಿ ಅಂದರೆ ತಿನ್ನುವ ಆಸಕ್ತಿ ಕಡಿಮೆಯಾಗುವುದು ಮತ್ತು ಓದಿನಲ್ಲಿ ಗಮನ ಇಲ್ಲದಿರುವುದು ಕೂಡ ಈ ಸಮಸ್ಯೆಯ ಲಕ್ಷಣಗಳಾಗಿರಬಹುದು.

ಇದನ್ನೂ ಓದಿ: ಯಾವ ಕೆಲಸ ಮಾಡದಿದ್ರೂ ಸುಸ್ತಾಗುತ್ತಿದ್ದರೆ ಈ ರೋಗ ಬಂದಿದೆ ಎಂದರ್ಥ!

ಹೇಗೆ ತಡೆಗಟ್ಟಬಹುದು?

ಮಕ್ಕಳಿಗೆ ಸಮತೋಲನ ಆಹಾರ ನೀಡುವುದು ಅತ್ಯಂತ ಮುಖ್ಯ. ಹಸಿರು ತರಕಾರಿ, ಬೇಳೆಕಾಳುಗಳು, ಹಣ್ಣುಗಳು ಮತ್ತು ಐರನ್ ಸಮೃದ್ಧ ಆಹಾರಗಳನ್ನು ನೀಡಬೇಕು. ವಿಟಮಿನ್ C ಇರುವ ಆಹಾರಗಳು ಐರನ್ ಪೋಷಣೆಗೆ ಸಹಕಾರಿ. ಅದರ ಜೊತೆಗೆ ಸ್ವಚ್ಛತೆ ಕಾಪಾಡುವುದು ಮತ್ತು ನಿಯಮಿತ ಆರೋಗ್ಯ ತಪಾಸಣೆ ಮಾಡಿಸುವುದು ಅಗತ್ಯ. ಸರಿಯಾದ ಆಹಾರ ಮತ್ತು ಆರೈಕೆಯಿಂದ ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆ: ನಾಪತ್ತೆಯಾಗಿದ್ದ ಮತಗಳು ಪತ್ತೆ; ಹೈರಾಣಾದ ಅಧಿಕಾರಿಗಳು – Kannada News | Chikmagalur Sringeri Recount: 9 Missing Ballots Found Amidst Intense Election Dispute

ಚಿಕ್ಕಮಗಳೂರು, ಮೇ 02: ನಗರದ IDSG ಕಾಲೇಜಿನಲ್ಲಿ ಇಂದು ಶೃಂಗೇರಿ ಕ್ಷೇತ್ರದ (Sringeri assembly constituency) ಅಂಚೆ ಮತಗಳ ಮರು ಮತ‌ ಎಣಿಕೆ ನಡೆದಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಗೆಲುವಿನ ಫೈಟ್ ಶುರುವಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಆದರೆ ಮತಗಳ ಮರು ಎಣಿಕೆ ಪ್ರಕ್ರಿಯೆ ವೇಳೆ ಗೊಂದಲ ಉಂಟಾಗಿತ್ತು. ಏಕೆಂದರೆ 279 ತಿರಸ್ಕೃತ ಮತಗಳಲ್ಲಿ 270 ಮತ ಪತ್ರಗಳಷ್ಟೇ ಪತ್ತೆಯಾಗಿದ್ದವು. ಬಾಕಿ 9 ತಿರಸ್ಕೃತ ಮತ ಪತ್ರಗಳು ನಾಪತ್ತೆಯಾಗಿದ್ದು, ಅಧಿಕಾರಿಗಳ ಸತತ ಹುಡುಕಾಟದ ಬಳಿಕ ಕೊನೆಗೂ 9 ಮತಪತ್ರಗಳು ಪತ್ತೆಯಾಗಿವೆ.

ನ್ಯಾಯಾಲಯದ ಆದೇಶದ ಮೇರೆಗೆ ಒಟ್ಟು 1822 ಅಂಚೆ ಮತಗಳ ಮರು ಎಣಿಕೆಗೆ ಅಧಿಕಾರಿಗಳು ಮುಂದಾಗಿದ್ದರೂ, ಇದೀಗ ಮತಪತ್ರಗಳ ಪತ್ತೆ ಕಾರ್ಯವೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ನ್ಯಾಯಾಲಯದ ನಿರ್ದೇಶನದಂತೆ, 2023ರ ಚುನಾವಣೆಯಲ್ಲಿ ಚಲಾವಣೆಯಾಗಿದ್ದ 1822 ಅಂಚೆ ಮತಗಳನ್ನು ಮರು ಎಣಿಕೆ ಮಾಡಬೇಕಿತ್ತು. ಈ ಪೈಕಿ 279 ಮತಗಳನ್ನು ಅಂದು ತಿರಸ್ಕೃತ ಮತಗಳೆಂದು ಪರಿಗಣಿಸಲಾಗಿತ್ತು. ಆದರೆ, ಈಗ ಮರು ಎಣಿಕೆಯ ಸಂದರ್ಭದಲ್ಲಿ 20 ಟ್ರಂಕ್‌ಗಳಲ್ಲಿ ಭದ್ರಪಡಿಸಲಾಗಿದ್ದ ಮತಪತ್ರಗಳನ್ನು ಪರಿಶೀಲಿಸಿದಾಗ, 279 ತಿರಸ್ಕೃತ ಮತಗಳ ಪೈಕಿ ಕೇವಲ 270 ಮತಪತ್ರಗಳು ಮಾತ್ರ ಲಭ್ಯವಾಗಿದ್ದವು. ಉಳಿದ 9 ಮತಪತ್ರಗಳು ನಾಪತ್ತೆಯಾಗಿದ್ದವು. ಸತತ ಹುಡುಕಾಟದ ಬಳಿಕ ಇದೀಗ ಮತಪತ್ರಗಳು ಪತ್ತೆಯಾಗಿವೆ.

ಇದನ್ನೂ ಓದಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪ

ಬೆಳಗ್ಗೆಯಿಂದಲೇ ಅಧಿಕಾರಿಗಳು ಈ 9 ನಾಪತ್ತೆಯಾದ ಮತಪತ್ರಗಳಿಗಾಗಿ ತೀವ್ರ ಶೋಧ ನಡೆಸಿದ್ದರು. ಮತಪತ್ರಗಳ ಪತ್ತೆಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು, ಇದರಿಂದಾಗಿ ಮರು ಎಣಿಕೆ ಕಾರ್ಯ ನಿಗದಿತ ಸಮಯಕ್ಕಿಂತಲೂ ತೀವ್ರ ವಿಳಂಬವಾಗಿತ್ತು, ಆದರೆ ಇದೀಗ ಪತ್ತೆಯಾಗಿದ್ದು, ಮರು ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಶಾಸಕ ಟಿ.ಡಿ.ರಾಜೇಗೌಡ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​: ತನಿಖಾಧಿಕಾರಿಗೆ ಕೋರ್ಟ್ ತರಾಟೆ

ಟಿ.ಡಿ.ರಾಜೇಗೌಡ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್​​ಗೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ಇಂದು ವಿಚಾರಣೆ ಮಾಡಲಾಗಿದ್ದು, ತನಿಖಾಧಿಕಾರಿಯ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ತನಿಖಾ ಸ್ಥಿತಿಗತಿ ವರದಿಯನ್ನು ಸಲ್ಲಿಸಿದ ತನಿಖಾಧಿಕಾರಿ, ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಪರಿಶೀಲನಾ ಹಂತದಲ್ಲಿದೆ. ಅಂತಿಮ ವರದಿ ಸಲ್ಲಿಸಲು ಮೇಲಧಿಕಾರಿಗಳ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಕೋರ್ಟಗೆಎ ತಿಳಿಸಿದರು.

ಇದನ್ನೂ ಓದಿ: ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಸಕಲ ಸಿದ್ಧತೆ

ತನಿಖಾಧಿಕಾರಿ ಹೇಳಿಕೆಗೆ ಗರಂ ಆದ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖೆಯ ಅಂತಿಮ ವರದಿ ಸಲ್ಲಿಸಲೂ ಮೇಲಧಿಕಾರಿಗಳ ಅನುಮತಿ ಬೇಕೇ? ಎಂದು ಪ್ರಶ್ನಿಸಿದರು. ಅಲ್ಲದೆ, ಸಿಆರ್‌ಪಿಸಿಯ ಯಾವ ನಿಯಮ ಅಥವಾ ಕಾನೂನಿನ ಅಡಿಯಲ್ಲಿ ಅಂತಿಮ ವರದಿ ಸಲ್ಲಿಸಲು ಮೇಲಧಿಕಾರಿಗಳ ಅನುಮತಿ ಕಡ್ಡಾಯವಾಗಿದೆ? ಎಂದು ಕೇಳುವ ಮೂಲಕ ತನಿಖಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನ್ಯಾಯಾಲಯದ ಪ್ರಶ್ನೆಗೆ ಸೂಕ್ತ ವಿವರಣೆ ನೀಡುವಂತೆ ತನಿಖಾಧಿಕಾರಿಗೆ ಸೂಚನೆ ನೀಡಿರುವ ನ್ಯಾಯಪೀಠವು, ಪ್ರಕರಣದ ವಿಚಾರಣೆಯನ್ನು ಮೇ 4ಕ್ಕೆ ಮುಂದೂಡಿದೆ.

ಪ್ರಕರಣ ಹಿನ್ನೆಲೆ 

2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ ರಾಜೇಗೌಡ ಎದುರು 201 ಮತಗಳ ಅಂತರದಿಂದ ಸೋತಿದ್ದರು. ಒಟ್ಟು 1822 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತವಾಗಿದ್ದವು. ಈ ಫಲಿತಾಂಶವನ್ನು ಪ್ರಶ್ನಿಸಿ ಡಿ.ಎನ್. ಜೀವರಾಜ್ ಮರು ಎಣಿಕೆಗೆ ಮನವಿ ಮಾಡಿದ್ದರು ಕೂಡ ಅಂದಿನ ಜಿಲ್ಲಾ ಚುನಾವಣಾಧಿಕಾರಿ ಅದನ್ನು ಪರಿಗಣಿಸದೆ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ ಇಂದು ಮರು ಎಣಿಕೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 3:28 pm, Sat, 2 May 26

Source link

ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು: ಎದೆಯ ಮೇಲೆ ಯುವಕನ ಹೆಸರು ಹಚ್ಚೆ ಹಾಕಿಸಿಕೊಂಡಿದ್ದೇ ಕಾರಣವಾಯ್ತಾ? – Kannada News | Chikkaballapur Tragedy: Newlywed Woman Commits Suicide Over Tattoo Dispute and Dowry Harassment; Husband Arrested

ಪ್ರೇಮಾ ಹಾಗೂ ಶಿವಕುಮಾರ್Image Credit source: tv9

ಚಿಕ್ಕಬಳ್ಳಾಪುರ, ಮೇ 2: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ ಮನೆಯಲ್ಲಿ ನೇಣಿಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆಯಲ್ಲಿ ನಡೆದಿದೆ. ಮೇ 15ಕ್ಕೆ ಮದುವೆಯ ಸಂಭ್ರಮ ಆಚರಿಸಬೇಕಿದ್ದ ಮನೆ ಈಗ ಸ್ಮಶಾನ ಸದೃಶವಾಗಿದೆ.

ಪ್ರಕರಣದ ಹಿನ್ನೆಲೆ

ಗೌರಿಬಿದನೂರು ಮೂಲದ ಶಕುಂತಲಾ ಎಂಬುವರ ಪುತ್ರಿ ಪ್ರೇಮಾ ಹಾಗೂ ಶಿಡ್ಲಘಟ್ಟದ ಜಂಗಮಕೋಟೆಯ ಶಿವಕುಮಾರ್ ಪರಸ್ಪರ ಸಂಬಂಧಿಕರು. ಪ್ರೇಮಾಳನ್ನು ಶಿವಕುಮಾರ್ ಕಾಡಿ ಬೇಡಿ ಮದುವೆಯಾಗಿದ್ದ. ಮದುವೆಯಾದ ಮೊದಲ ಮೂರು ತಿಂಗಳು ದಂಪತಿ ಸುಖವಾಗಿದ್ದರು. ಆದರೆ, ಆ ನಂತರ ಪ್ರೇಮಾ ಎದೆಯ ಮೇಲೆ ಯುವಕನೊಬ್ಬನ ಹೆಸರಿನ ಹಚ್ಚೆ (Tattoo) ಇರುವುದನ್ನು ಕಂಡು ದಾಂಪತ್ಯದಲ್ಲಿ ಬಿರುಕು ಮೂಡಿತ್ತು ಎಂದು ಸಂಬಂಧಿಕರು ತಿಳಿಸಿದ್ದಾರೆ. ಅದು ಕೇವಲ ಸ್ನೇಹಿತನ ಹೆಸರು ಎಂದು ಪ್ರೇಮಾ ಹೇಳಿದ್ದರೂ, ಶಿವಕುಮಾರ್ ಅದನ್ನು ಅನುಮಾನಿಸಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.

ವರದಕ್ಷಿಣೆ ಕಿರುಕುಳದ ಆರೋಪ

ಕೇವಲ ಹಚ್ಚೆ ವಿವಾದ ಮಾತ್ರವಲ್ಲದೆ, ವರದಕ್ಷಿಣೆ ತರುವಂತೆ ಶಿವಕುಮಾರ್ ಪ್ರೇಮಾ ಮೇಲೆ ನಿರಂತರವಾಗಿ ಹಲ್ಲೆ ಮಾಡುತ್ತಿದ್ದ ಎಂದು ಪ್ರೇಮಾ ತಾಯಿ ಶಕುಂತಲಾ ಆರೋಪಿಸಿದ್ದಾರೆ. ತಿಂಗಳ ಹಿಂದೆಯಷ್ಟೇ ಜಗಳವಾಡಿ ತವರು ಮನೆ ಸೇರಿದ್ದ ಪ್ರೇಮಾಳನ್ನು, ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಶಿವಕುಮಾರ್ ಮತ್ತೆ ಮನೆಗೆ ಕರೆತಂದಿದ್ದ. ಆದರೆ ಮನೆಗೆ ಬಂದ ತಿಂಗಳೊಳಗೆ ಪ್ರೇಮಾ ಮೃತಪಟ್ಟಿರುವುದು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ.

ಮೂರು ತಿಂಗಳ ಹಿಂದೆ ಪ್ರೇಮಾಗೆ ಗರ್ಭಪಾತವಾಗಿತ್ತು. ಆಗಲೂ ಗಂಡನ ಮನೆಯವರು ಸರಿಯಾಗಿ ನೋಡಿಕೊಂಡಿರಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಅನುಮಾನಾಸ್ಪದ ಸಾವು, ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರ ಆರೋಪ

ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಕ್ಷಿಣೆ ಕಿರುಕುಳದ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪತಿ ಶಿವಕುಮಾರ್‌ನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:22 pm, Sat, 2 May 26

Source link

94ನೇ ವಯಸ್ಸಿಗೆ ನಿರ್ದೇಶನ ಮಾಡಿದ ‘ಪುಷ್ಪಕ ವಿಮಾನ’ ನಿರ್ದೇಶಕ – Kannada News | Singeetam Srinivasa Rao Returns with ‘Sing Geetham’ at 94: Teaser Out Now

ಭಾರತೀಯ ಚಿತ್ರರಂಗದ ದಂತಕಥೆ, ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ಬರೋಬ್ಬರಿ 13 ವರ್ಷಗಳ ನಂತರ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ಅವರ ನಿರ್ದೇಶನದ ಹೊಸ ಚಿತ್ರ ‘ಸಿಂಗ್ ಗೀತಂ’ (Sing Geetham) ಟೀಸರ್ ಬಿಡುಗಡೆಯಾಗಿದ್ದು, 94ನೇ ವಯಸ್ಸಿನಲ್ಲೂ ಅವರ ಕ್ರಿಯಾಶೀಲತೆ ಕಂಡು ಎಲ್ಲರೂ ಅಚ್ಚರಿಕೊಂಡಿದ್ದಾರೆ.ಇವರು ಜೆನ್-ಜಿ ತಲೆಮಾರಿಗಿಂತಲೂ ಮಿಗಿಲು ಎಂದು ಗುಣಗಾನ ಮಾಡುತ್ತಿದ್ದಾರೆ.

ಸಿಂಗೀತಂ ಅವರ ಹೆಸರಿನಲ್ಲೇ ಇರುವ ‘ಸಿಂಗ್ ಗೀತಂ’ ಎಂಬ ಶೀರ್ಷಿಕೆಯ ಈ ಚಿತ್ರದ 1 ನಿಮಿಷ 22 ಸೆಕೆಂಡುಗಳ ಟೀಸರ್ ಕುತೂಹಲ ಮೂಡಿಸುವಂತಿದೆ. ಗಣಿಗಾರಿಕೆ ನಡೆಯುವ ಪಟ್ಟಣದ ಹಿನ್ನೆಲೆಯನ್ನು ಹೊಂದಿದ್ದು, ಅಲ್ಲಿ ಜನರು ಚಿನ್ನದ ಹುಡುಕಾಟದಲ್ಲಿ ತೊಡಗುತ್ತಾರೆ. ಪ್ರತಾಪ್ ಎಂಬ ಯುವಕ ವಿಚಿತ್ರ ಜಗತ್ತೊಂದಕ್ಕೆ ಪ್ರವೇಶಿಸಿದಾಗ ಎದುರಿಸುವ ಸವಾಲುಗಳು ಹಾಗೂ ಪ್ರಗತಿ ಮತ್ತು ಸಂರಕ್ಷಣೆಯ ನಡುವಿನ ಸಂಘರ್ಷವನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ.

ಈ ಚಿತ್ರವು ಒಂದು ‘ಮ್ಯೂಸಿಕಲ್ ಫ್ಯಾಂಟಸಿ’ ಕಥಾಹಂದರವನ್ನು ಹೊಂದಿದೆ. ಅಯಾನ್, ಅಹಲ್ಯಾ ಬಾಮ್ರೂ ಮತ್ತು ಶಾಲಿನಿ ಕೊಂಡೆಪುಡಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರೆ, ತುಳಸಿ ಪಿಎ, ಬ್ಯಾನರ್ಜಿ ಮತ್ತು ಶಿವನಾರಾಯಣ ಅವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ‘ಕಲ್ಕಿ 2898 ಎಡಿ’ ಖ್ಯಾತಿಯ ನಿರ್ದೇಶಕ ನಾಗ್ ಅಶ್ವಿನ್ ಅವರು ವೈಜಯಂತಿ ಮೂವೀಸ್ ಮತ್ತು ಸ್ವಪ್ನ ಸಿನಿಮಾ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ (DSP) ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಕೊನೆಗೂ ಸೆಟ್ಟೇರಲೇ ಇಲ್ಲ ರಾಜ್​​ಕುಮಾರ್ ನಟಿಸಬೇಕಿದ್ದ ಆ ಸಿನಿಮಾ

ಸಿಂಗೀತಂ ಶ್ರೀನಿವಾಸ ರಾವ್ ಅವರು ಕನ್ನಡ ಮತ್ತು ತೆಲುಗು ಚಿತ್ರರಂಗಕ್ಕೆ ಮರೆಯಲಾಗದ ಕೊಡುಗೆ ನೀಡಿದವರು. 1972 ರಲ್ಲಿ ‘ನೀತಿ ನಿಜಾಯಿತಿ’ ಚಿತ್ರದ ಮೂಲಕ ನಿರ್ದೇಶನ ಆರಂಭಿಸಿದ ಇವರು, 10 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಅವರು ‘ಚಲಿಸುವ ಮೋಡಗಳು’ ಸಿನಿಮಾ ಮಾಡಿದರು. ಅವರ ‘ಪುಷ್ಪಕ ವಿಮಾನ’ ಗಮನ ಸೆಳೆಯಿತು. ‘ಟುವ್ವಿ ಟುವ್ವಿ ಟುವ್ವಿ’, ‘ಭಾಗ್ಯದ ಲಕ್ಷ್ಮೀ ಬಾರಮ್ಮ’ ಮೊದಲಾದ ಸಿನಿಮಾ ಮಾಡಿದರು. ‘ಸಿಂಗ್ ಗೀತಂ’ ಚಿತ್ರವು ಜೂನ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version