ದಿನ ಭವಿಷ್ಯ: ಇಂದು ಈ ರಾಶಿಯವರು ಕಾಣಿಸಿದ್ದನ್ನೂ ನಿಜ ಎಂದು ಒಪ್ಪಲಾರರು.. – Kannada News | Horoscope 26 Thursday 2026; Dina Rashi Bhavishya Today, Checkout the details here

ಮೇಷ ರಾಶಿ:

ಏನಾದರೂ ಒಂದು ಅಸಂಬದ್ಧವನ್ನು ಮಾಡುವ ಹಣೆಪಟ್ಟಿ ಬರಬಹುದು. ದುರ್ಬಲರ ಜೊತೆ ಹೋರಾಡಿ ಗೆದ್ದು ಹೆಮ್ಮೆಪಡುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ನೀವು ಸದಾ ಉಳಿಸಿಕೊಳ್ಳುವ ಯೋಚನೆಯಲ್ಲಿಯೇ ಇರುವಿರಿ. ಆಪ್ತರನ್ನು ಕಳೆದುಕೊಂಡು ದುಃಖಿಸುವಿರಿ. ಕ್ರೀಡೆಗೆ ಸಂಬಂಧಿಸಿದಂತೆ ಮಾರ್ಗದರ್ಶನದ ಕೊರತೆ ಕಾಣುವುದು. ಎಲ್ಲ ಮಾತುಗಳನ್ನೂ ನೀವು ನಕಾರಾತ್ಮಕವಾಗಿಯೇ ತಿಳಿಯುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಭಯವಿದ್ದು, ಎದುರಿಸುವ ಬಗ್ಗೆ ಸಲಹೆಯನ್ನು ಪಡೆಯಿರಿ.

ವೃಷಭ ರಾಶಿ:

ಸ್ವಯಾರ್ಜಿತ ಆಸ್ತಿಯ ಮಾರಾಟದ ವಿಚಾರವು ಅಧಿಕವಾಗಿ ಕೇಳಿಬರಬಹುದು. ಉದ್ಯೋಗದ ಅವಕಾಶವನ್ನು ಬಿಟ್ಟುಬಿಡುವಿರಿ. ಸಂಗಾತಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ. ನಿಮ್ಮ ಊಹೆಯು ಸತ್ಯವಾಗಬಹುದು. ಬಂಧುಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳುವರು. ನಿಮ್ಮ ಮತ್ತೊಂದು ಮುಖದ ಪರಿಚಯವೂ ಆಪ್ತರಿಗೆ ಆಗಲಿದೆ. ಪ್ರಯಾಣದಿಂದ ಸ್ವಲ್ಪ ಆಯಾಸವಾಗಲಿದ್ದು ವಿಶ್ರಾಂತಿಯಿಂದ ಸರಿಮಡಿಕೊಳ್ಳಿ. ನಿಮ್ಮ ವಸ್ತುಗಳನ್ನು ಕಳೆದುಕೊಳ್ಳುವ ಸಂಭವವಿದೆ.

ಮಿಥುನ ರಾಶಿ:

ಇಂದು ಮಾಡಲಾಗದ ಕಾರ್ಯವನ್ನು ಮತ್ತೆಂದೋ ಮಾಡುವ ಬದಲು ಅದಕ್ಕಾಗಿ ಇಂದೇ ದಿನವನ್ನು ನಿಶ್ಚಯಿಸಿ. ಹೊಸತನ್ನು ಏನಾದರೂ ಮಾಡುವ ಉದ್ದೇಶ ನಿಮ್ಮಲ್ಲಿರಲಿದೆ. ಬಂಧುಗಳ ವಿಚಾರದಲ್ಲಿ ನಿಮಗೆ ಪೂರ್ಣ ವಿಶ್ವಾಸವಿರದು. ಮಾನಸಿಕ ಒತ್ತಡವು ನಿಮ್ಮ ಕಾರ್ಯವನ್ನು ನಿಧಾನ ಮಾಡುವುದು. ನಿಮ್ಮಲ್ಲಿ ಆದ ಬದಲಾವಣೆಯನ್ನು ಸಹೋದ್ಯೋಗಿಗಳು ಗಮನಿಸಬಹುದು. ವಿದ್ಯಾರ್ಥಿಗಳು ಮನೆಯ ಜವಾಬ್ದಾರಿಯನ್ನೂ ನಡೆಸುವ ಸಂದರ್ಭವು ಬರಬಹುದು.

ಕರ್ಕಾಟಕ ರಾಶಿ:

ವಾಗ್ವಾದದಿಂದ ನಿಮ್ಮ ಹೆಸರನ್ನು ಕೆಡಿಸಿಕೊಳ್ಳುವಿರಿ. ಯಾವುದೋ ಆಲೋಚನೆಯಲ್ಲಿ ಮಗ್ನರಾಗಿ ಮಾಡಬೇಕಾದ ಕೆಲಸವನ್ನು ಮಾಡಲಾಗದು. ಕುರುಡಾಗಿ ಮುನ್ನುಗ್ಗುವುದು ಬೇಡ. ವಿವಾಹದ ಮಾತುಕತೆಗೆ ವಿಘ್ನಗಳು ಬರಬಹುದು. ಸಮಯವನ್ನು ಬಹಳ ದುರುಪಯೋಗ ಮಾಡಿಕೊಳ್ಳುವ ಸಂಭವವಿದೆ. ಸಂಗಾತಿಯಿಂದ ನಿಮಗೆ ಅಪರೂಪದ ವಸ್ತುಗಳು ಸಿಗಬಹುದು. ರಾಜಕೀಯವು ನಿಮಗೆ ಇಷ್ಟವಾಗದು. ಒಂದು ಕೆಲಸವನ್ನು ಮೈ ಮೇಲೆ ಬಿದ್ದು ಮಾಡಿಸಿಕೊಳ್ಳಬೇಕಾಗುವುದು. ನಿಮಗೆ ಆಗುವಷ್ಟೇ ಕೆಲಸವನ್ನು ಮಾಡಿ.

ಸಿಂಹ ರಾಶಿ:

ಸಹೋದರರ ಜೊತೆ ಕಲಹವಾಗಬಹುದು. ಸಂಗಾತಿಯ ಮೌನವು ನಿಮಗೆ ಕಷ್ಟವಾಗಬಹುದು. ಅಧಿಕ ಪ್ರಯಾಣದಿಂದ ಆಯಾಸವಾಗಬಹುದು. ಪ್ರೀತಿಯಲ್ಲಿ ನಿಮಗೆ ನೋವಾಗುವ ಸಾಧ್ಯತೆ ಇದೆ. ಏನೂ ಬೇಡ ಎನಿಸಬಹುದು. ಸಣ್ಣ ಸಣ್ಣ ವಿಚಾರಗಳೂ ದೊಡ್ಡದಾಗಿ ಕಾಣಿಸುವುದು. ಸುರಕ್ಷಿತ ವಾಹನ ಚಾಲನೆಯನ್ನು ಮಾಡಿ. ವಿದ್ಯಾಭ್ಯಾಸವನ್ನು ಮುಗಿಸಿ ಹೊಸ ಉದ್ಯೋಗವನ್ನು ಹುಡುಕುವಿರಿ. ಆಹಾರದ ವ್ಯಾಪಾರದಿಂದ ಲಾಭವಾಗುವುದು. ಸರ್ಕಾರದಿಂದ ಆಗಬೇಕಾದ ಕೆಲಸಕ್ಕೆ ಹೆಚ್ಚು ಖರ್ಚನ್ನು ಮಾಡಬೇಕಾಗುದು.

ಕನ್ಯಾ ರಾಶಿ:

ನಿಮ್ಮ ಉದ್ಯಮದ ಪ್ರಗತಿಯು ನಿಮಗೆ ಖುಷಿಕೊಡುವುದು. ಹಳೆಯ ಹೂಡಿಕೆಗೆ ಪುನಃ ನವೀಕರಣ ಮಾಡಿಕೊಳ್ಳುವಿರಿ. ಸಮಾಧಾನಚಿತ್ತದಿಂದ ನೀವು ಇಂದಿನ ಮಧುರ ಕ್ಷಣಗಳನ್ನು ಆನಂದಿಸುವಿರಿ. ನಿಮ್ಮ ಸಾಹಸಕ್ಕೆ ಯಾರ ಪ್ರೇರಣೆಯೂ ಸಿಗಲಿಕ್ಕಿಲ್ಲ. ಭೂಮಿಯ ವ್ಯವಹಾರದಿಂದ ಅಲ್ಪ ಹಣವು ನಷ್ಟವಾಗುವುದು. ಯಾರನ್ನೋ ನಂಬಿ ಹಣವ್ಯವಹಾರವನ್ನು ಮಾಡಿ ಮೋಸ ಹೋಗುವಿರಿ. ವಿದ್ಯಾಭ್ಯಾಸದ ಹಿನ್ನಡೆಯ ಕಾರಣ ಎಲ್ಲರಿಂದ ಅವಮಾನವಾಗಬಹುದು. ಕೃಷಿಯನ್ನು ಆದಾಯದ ಮೂಲವಾಗಿಸಿಕೊಳ್ಳಬಹುದು. ನಿಮಗೆ ಪ್ರೋತ್ಸಾಹದ ಕೊರತೆ ಅಧಿಕವಾಗಿ ಕಾಣಿಸುವುದು.

ತುಲಾ ರಾಶಿ:

ಮಾರಾಟದ ವಿಭಾಗದಲ್ಲಿ ಇರುವವರಿಗೆ ಲಾಭವನ್ನು ಹೆಚ್ಚಿಸಿದ ಕಾರಣಕ್ಕೆ ಪ್ರಶಂಸೆಯು ಸಿಗಲಿದೆ. ಯಾವ ವಿದ್ಯೆಯೂ ಕರಗತ ಆಗದ ಹೊರತೂ ಧೈರ್ಯವನ್ನು ಕೊಡದು. ನಿಮ್ಮನ್ನು ಅವ್ಯವಹಾರಕ್ಕೆ ಸಹೋದ್ಯೋಗಿಗಳು ಪ್ರೇರಿಸಬಹುದು. ಅಪ್ರಯೋಜಕ ಎಂದುಕೊಂಡ ವಿದ್ಯೆಯಿಂದ ಪ್ರಯೋಜನವಾಗುವುದು. ಹಿತಶತ್ರುಗಳನ್ನೇ ನಿಮ್ಮ ಬೆಂಬಲಕ್ಕೆ ಇಟ್ಟುಕೊಳ್ಳುವಿರಿ. ನೀವೇ ಸಾಯಬೇಕು, ಸ್ವರ್ಗಕಾಣಬೇಕು. ರಾಜಕೀಯದವರಿಗೆ ಬೆಂಬಲಿಗರಿಂದ ಒತ್ತಡಗಳು ಬರಬಹುದು.

ವೃಶ್ಚಿಕ ರಾಶಿ:

ಗೆಲುವಿಗೆ ಬಹಳ ಪ್ರಯತ್ನಪಟ್ಟು ಯಶಸ್ವಿಯಾಗುವಿರಿ. ವ್ಯಕ್ತಿತ್ವವನ್ನು ಗಮನಿಸಿಕೊಂಡು ಯಾರ ಬಳಿಯಾದರೂ ಮಾತನಾಡಿ. ನಿಮ್ಮ ಸ್ಥಾನದ ಬಗ್ಗೆ ಭಯ ಉಂಟಾಗಬಹುದು. ಪವಿತ್ರಕ್ಷೇತ್ರಗಳಿಗೆ ತೆರಳುವ ಅವಕಾಶ ಸಿಗಬಹುದು. ತಂದೆಯ ಅಸಮಾಧಾನವನ್ನು ಕುಳಿತು ಬಗೆಹರಿಸಿ. ಪೋಷಕರ ಜೊತೆ ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಕಾರ್ಯಕ್ಕೆ ಎಲ್ಲರಿಂದ ಪ್ರಶಂಸೆ ಸಿಕ್ಕರೂ ನಿಮ್ಮ ಕೆಲಸವು ಸಮಾಧಾನ ಕೊಡದು. ಪರೋಪಕಾರ ಗುಣವು ನಿಮ್ಮಲ್ಲಿ ಇಂದು ಜಾಗರೂಕವಾಗಿ ಇರುವುದು.

ಧನು ರಾಶಿ:

ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ವಿಚಾರದಲ್ಲಿ ತಜ್ಞರ ಸಂಪರ್ಕ ಮಾಡುವುದು ಉತ್ತಮ. ನಿಮ್ಮ ಇಂದಿನ ಕೆಲಸವನ್ನು ಪೂರ್ಣ ಮಾಡಲು ಬಹಳ ಆತುರದಿಂದ ಇರುವಿರಿ. ವೃತ್ತಿಯ ಜೊತೆ ಉನ್ನತ ಶಿಕ್ಷಣವನ್ನೂ ಮಾಡುವಿರಿ. ಇಂದು ನಿಮ್ಮ ಕುಟುಂಬದ ಸದಸ್ಯರು ನಿಮ್ಮನ್ನು ಬಿಟ್ಟು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳುವರು. ನಿಮ್ಮ ಸ್ಥಾನಕ್ಕೆ ಗೌರವವಿಲ್ಲದಂತೆ ತೋರಬಹುದು. ನಿಮ್ಮ ಸೋಲನ್ನು ಸುಲಭಕ್ಕೆ ಒಪ್ಪಿಕೊಳ್ಳಲಾರಿರಿ. ಯಾರ ಮೇಲೂ ಸಿಟ್ಟಿನಿಂದ ಮಾತನಾಡುವುದು ಬೇಡ.

ಮಕರ ರಾಶಿ:

ಮೋಸಕ್ಕೆ ಅನೇಕ ಮುಖಗಳಿವೆ ಎಂದು ಗೊತ್ತಾಗುವುದು. ಎಲ್ಲದಕ್ಕೂ ಇನ್ನೊಬ್ಬರನ್ನು ಅವಲಂಬಿಸುವುದು ನಿಮಗೆ ಇಷ್ಟವಾಗದು. ಇದಕ್ಕಾಗಿ ಬೇರೆ ಮಾರ್ಗವನ್ನೂ ಅನ್ವೇಷಿಸುವಿರಿ. ನಿಮ್ಮ ಸಂಗಾತಿಯ ಆರೋಗ್ಯವು ಕ್ಷೀಣಸಲಿದ್ದು ಚಿಂತೆಯೂ ಕಾಡುವುದು. ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ನಿಮ್ಮ ಅಪರೂಪದ ವ್ಯಕ್ತಿಗಳು ಆಕಸ್ಮಾತ್ತಾಗಿ ಭೇಟಿಯಾಗುವರು. ನಿಮಗೆ ಕೊಟ್ಟ ಕಾರ್ಯವನ್ನು ಮರೆತು ಅನ್ಯರ ಕಾರ್ಯದಲ್ಲಿ ಮಗ್ನರಾಗುವಿರಿ. ಕೂಡಿಟ್ಟ ಹಣದಿಂದ ಕೆಲವು ಪ್ರಯೋಜನಗಳು ನಿಮಗೆ ಆಗಲಿವೆ.

ಕುಂಭ ರಾಶಿ:

ನೀವು ಇತರರ ಮನೋಭಾವಕ್ಕೆ ಸ್ಪಂದಿಸಲು ಹೆಚ್ಚು ಉತ್ಸುಕತೆ ಇರಲಿದೆ. ಇಂದು ನಿಮ್ಮ ಮಕ್ಕಳ ಬಗ್ಗೆ ಸಕಾರಾತ್ಮಕ ವಾರ್ತೆಯನ್ನು ಕೇಳುವಿರಿ. ನಿಮ್ಮ ಆದಾಯಕ್ಕೆ ಹೊಡೆತ ಬೀಳಬಹುದು. ವೃತ್ತಿಪರರಾದ ನಿಮಗೆ ಕಛೇರಿಯಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವುದು ಬೇಡ. ಸಂಗಾತಿಯು ನಿಮ್ಮ ನಡವಳಿಕೆಯ ಬಗ್ಗೆ ಏನಾದರೂ ಹೇಳಬಹುದು. ಕೇಳಿ ಸುಮ್ಮನಾಗಿ. ಉತ್ತರದಿಂದ ಮತ್ತೇನಾದರೂ ಆದೀತು. ಸುಲಭವಾಗಿ ಸಿಗುವ ಸಂಪತ್ತಿಗೆ ಆಸೆಪಡುವುದು ಬೇಡ.

ಮೀನ ರಾಶಿ:

ವಿವಾಹದ ವಾತಾವರಣವು ಮನೆಯಲ್ಲಿ ಇದ್ದರೂ ಉದ್ವೇಗಕ್ಕೆ ಒಳಗಾಗದೇ ನೀವೂ ನೆಮ್ಮದಿಯಿಂದ ಓಡಾಡುವಿರಿ. ಚಲಿಸುವ ವಾಹನದಿಂದ ಬೀಳುವ ಸಾಧ್ಯತೆ ಇದೆ. ನಿಷ್ಕಪಟವು ನಿರಾತಂಕ ಸ್ಥಿತಿಯನ್ನು ಕೊಡುವುದು. ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಲು ನಿಮಗೆ ಆಗದು. ನಿಮ್ಮ ವಸ್ತುವು ಕಳ್ಳತನವಾಗಬಹುದು ಎಂಬ ಭೀತಿಯು ಉಂಟಾಗಬಹುದು. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಫಾಲ್ಗುಣ, ಸೌರ ಮಾಸ : ಕುಂಭ, ಮಹಾನಕ್ಷತ್ರ : ಶತಭಿಷಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ದಶಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ತೈತುಲ, ಸೂರ್ಯೋದಯ – 06 – 43 am, ಸೂರ್ಯಾಸ್ತ – 06 – 30 pm, ಇಂದಿನ ಶುಭಾಶುಭ ಕಾಲ : ರಾಹು 14:06 – 15:34, ಯಮಗಂಡ ಕಾಲ 06:44 – 08:12, ಗುಳಿಕ ಕಾಲ 09:41 – 11:09

-ಲೋಹಿತ ಹೆಬ್ಬಾರ್ – 8762924271 (what’s app only)

Source link

SSLC ಪಾಸ್ ಮಾಡಿಸುತ್ತೇನೆಂದು ನಂಬಿಸಿ ವಂಚಿದ ಬಂಗಾರದ ಶಿಕ್ಷಕ: ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ – Kannada News | Dharwad: Teacher cheats student by promising to help him pass SSLC

ಧಾರವಾಡ, ಫೆಬ್ರವರಿ 25: ವಿದ್ಯಾರ್ಥಿಯ (student) ಮುಖ್ಯ ಘಟ್ಟವೇ ಎಸ್​ಎಸ್​ಎಲ್​ಸಿ. ಅದಾದ ಮೇಲೆ ಆತನ ಬದುಕೇ ಬದಲಾಗಿ ಬಿಡುತ್ತೆ. ಅಂತಹ SSLC ಪರೀಕ್ಷೆಯನ್ನು ಉತ್ತೀರ್ಣ ಮಾಡಿಕೊಡುತ್ತೇನೆ ಅಂತಾ ಹೇಳಿ ಓರ್ವ ಶಿಕ್ಷಕ ವಿದ್ಯಾರ್ಥಿಗೆ ಮೋಸ ಮಾಡಿದ ಘಟನೆಯೊಂದು ಧಾರವಾಡದಲ್ಲಿ ನಡೆದಿದೆ. ವಿದ್ಯಾರ್ಥಿಯಿಂದ ಬಂಗಾರ ಪಡೆದು ಇದೀಗ ವಿದ್ಯಾರ್ಥಿ ಜೀವನವನ್ನೇ ಅತಂತ್ರ ಮಾಡಿದ್ದಾನೆ.

ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟವಾಡಿದ ಶಿಕ್ಷಕ

ಹೀಗೆ ವಿದ್ಯಾರ್ಥಿಗೆ ಚಳ್ಳೆಹಣ್ಣು ತಿನ್ನಿಸಿದ ಧಾರವಾಡದ ವಿದ್ಯಾರಣ್ಯ ಶಾಲೆಯ ಶಿಕ್ಷಕ ರಾಜಶೇಖರ್. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಕನಾಗಿರುವ  ಈತ, ಇದೀಗ ವಿದ್ಯಾರ್ಥಿಯ ಜೀವನದಲ್ಲಿ ಚೆಲ್ಲಾಟ ಆಡಿದ್ದಾನೆ. 10ನೇ ತರಗತಿ ವಿದ್ಯಾರ್ಥಿಯಾಗಿರೋ ನಗರದ ಶಿವನಗರ ನಿವಾಸಿ ಅಭಿಷೇಕ್​ಗೆ ಈ ಬಾರಿಯ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಾಗಿ ನಂಬಿಸಿದ್ದಾನೆ. ಪ್ರಶ್ನೆ ಪತ್ರಿಕೆಗಳನ್ನ ಲೀಕ್ ಮಾಡಿ ಕೊಡುತ್ತೇನೆ ಅಂತ ನಂಬಿಸಿ ವಿದ್ಯಾರ್ಥಿಗೆ ಹಣದ ಬೇಡಿಕೆ ಇಟ್ಟಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಅಭಿಷೇಕ್

ನನ್ನ ಮಗನ ಕಾಲೇಜಿನ ಫೀಸ್ ಕಟ್ಟಬೇಕು. ನಿಮ್ಮ ಮನೆಯ ಬಂಗಾರವನ್ನು ತಂದು ಕೊಡು ಅಂತ ಹೇಳಿದ್ದಾನೆ. ಅದಕ್ಕೆ ಮೊದಲು ಒಪ್ಪದ ವಿದ್ಯಾರ್ಥಿ ಬಳಿಕ ಆತನ ಮಾತನ್ನು ನಂಬಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ವಿಡಿಯೋ ಕಾಲ್ ಮೂಲಕ ಚಿನ್ನವನ್ನು ಎಲ್ಲಿ ಇಟ್ಟಿದ್ದಾರೆ ಹುಡುಕು ಎಂದು ಹೇಳಿ ಮನೆಯ ಅಲ್ಮೇರಾದಲ್ಲಿಟ್ಟಿದ್ದ 82 ಗ್ರಾಂ ಬಂಗಾರವನ್ನು ತೆಗೆದುಕೊಂಡು ಹೋಗಿ ಶಿಕ್ಷಕನಿಗೆ ಕೊಟ್ಟಿದ್ದಾನೆ ಅಂತ ವಿದ್ಯಾರ್ಥಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಯಾವಾಗ ಈ ವಿಚಾರ ತಂದೆ-ತಾಯಿಗೆ ಗೊತ್ತಾಯಿತೋ ಆಗ ಹೆದರಿಕೊಂಡ ಅಭಿಷೇಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ನನ್ನ ಲೈಫ್​​​​ ಹೇಗಾಗಿದೆ ಅಂದ್ರೆ: ಒಂದು ಕಡೆ ಅಪ್ಪ ಇಲ್ಲ, ಇನ್ನೊಂದು ಕಡೆ ಅಮ್ಮನಿಗೆ ಅನಾರೋಗ್ಯ, ಕೈಯಲ್ಲಿ ಕೆಲಸ ಇಲ್ಲ

ಇನ್ನು ವಿದ್ಯಾರ್ಥಿಯ ಪೋಷಕರಿಗೆ ಈ ವಿಷಯ ಗೊತ್ತಾಗುತ್ತಲೇ ಶಿಕ್ಷಕ ಉಲ್ಟಾ ಹೊಡೆದಿದ್ದಾನೆ. ನನ್ನ ಬಳಿ ಯಾವುದೇ ಬಂಗಾರ ನೀಡಿಲ್ಲ ಎಂದು ಹೇಳುತ್ತಿದ್ದಾನೆ. ವಿದ್ಯಾರ್ಥಿ ಬಳಿ ಚಿನ್ನ ಪಡೆದು ಬ್ಯಾಂಕ್​ನಲ್ಲಿ ಅಡವಿಟ್ಟು ಬಂದಿರುವ ಬಗ್ಗೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ತೋರಿಸಿದರೂ ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದಾರೆ ಅನ್ನೋದು ಪೋಷಕರ ಆರೋಪ. ಈ ಬಗ್ಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಕೇಳಿದರೆ, ಪ್ರಕರಣ ದಾಖಲಿಸಲು ಸೂಚನೆ ನೀಡುತ್ತೇನೆ ಅಂತಾ ಹೇಳಿದ್ದಾರೆ.

ದೂರು ನೀಡಿದ ಪೋಷಕರು

ಸದ್ಯಕ್ಕೆ ವಿದ್ಯಾರ್ಥಿಯ ಪೋಷಕರು ಉಪನಗರ ಠಾಣೆಗೆ ದೂರು ನೀಡಿದ್ದಾರೆ. ಆದರೆ ಇದುವರೆಗೂ ಎಫ್​ಐಆರ್​ ದಾಖಲಾಗಿಲ್ಲ. ಒಂದು ವೇಳೆ ಶಿಕ್ಷಕ ಚಿನ್ನವನ್ನು ಪಡೆದಿದ್ದು ನಿಜವಾಗಿದ್ದರೆ, ವಿದ್ಯಾರ್ಥಿಯ ಬಾಳಲ್ಲಿ ಬೆಳಕಾಗಬೇಕಿದ್ದ ಶಿಕ್ಷಕನೇ ವಿಲನ್ ಆಗಿದ್ದಾನೆ ಎನ್ನಬಹುದಾಗಿದೆ. ಪೊಲೀಸರು ಈ ಬಗ್ಗೆ ಸರಿಯಾಗಿ ತನಿಖೆ ನಡೆಸಿ, ಸತ್ಯಾಂಶವನ್ನು ಹೊರಗೆ ತರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು? – Kannada News | ED attaches Anil Ambani’s Rs 3,716 Crore Mumbai Home In Money Laundering Case

ಮುಂಬೈ, (ಫೆಬ್ರವರಿ 25): ಕೈಗಾರಿಕೋದ್ಯಮಿ ಅನಿಲ್ ಅಂಬಾನಿ (Anil Ambani) ಅವರ ಮುಂಬೈನಲ್ಲಿರುವ 3,716 ಮೌಲ್ಯದ ‘ಅಬೋಡ್’ ನಿವಾಸವನ್ನು ಇಡಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದೆ. ಅನಿಲ್ ಅಂಬಾನಿ ಅವರ ಸಮೂಹ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್​​ಕಾಂ) ವಿರುದ್ಧ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಅನಿಲ್ ಅಂಬಾನಿಗೆ ಸೇರಿದ ಬಂಗಲೆಯನ್ನು ಜಪ್ತಿ ಮಾಡಿದೆ ಎಂಬ ತಿಳಿದುಬಂದಿದೆ.

ಮುಂಬೈನ ಪಾಲಿಹಿಲ್ ಪ್ರದೇಶದಲ್ಲಿರುವ 17 ಅಂತಸ್ತಿನ, 66 ಮೀ.ಎತ್ತರದ ಐಷಾರಾಮಿ ಆಸ್ತಿಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ತಾತ್ಕಾಲಿಕ ಜಪ್ತಿ ಆದೇಶವನ್ನು ಹೊರಡಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಜಪ್ತಿ ಮಾಡಲಾದ ಆಸ್ತಿಯ ಮೌಲ್ಯ 15,700 ಕೋಟಿ ರೂಪಾಯಿಗೆ ತಲುಪಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಿಲ್ ಅಂಬಾನಿಗೆ ಇನ್ನಷ್ಟು ಕುಣಿಕೆ ಬಿಗಿದ ಇಡಿ; 3,000 ಕೋಟಿ ರೂ ಮೌಲ್ಯದ ವಿವಿಧ ಆಸ್ತಿಗಳು ಮುಟ್ಟುಗೋಲು

ಈ ಜಪ್ತಿ ಆರ್‌ಕಾಮ್‌ನಿಂದ ಹಣಕಾಸು ಅಕ್ರಮಗಳು ಮತ್ತು ಸಾಲದ ಹಣದ ದುರ್ಬಳಕೆ ಆರೋಪಗಳ ಕುರಿತು ಇಡಿ ನಡೆಸುತ್ತಿರುವ ತನಿಖೆಯ ಭಾಗವಾಗಿದೆ. ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಕಂಪನಿಗಳಿಂದ ವಂಚನೆ, ಲಂಚ ಮತ್ತು ಬ್ಯಾಂಕ್ ಸಾಲಗಳ ದುರ್ಬಳಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿಕೊಂಡಿರುವ ಎರಡು ಎಫ್‌ಐಆರ್‌ಗಳ ಆಧಾರದಲ್ಲಿ ಇಡಿ ತನಿಖೆ ನಡೆಸುತ್ತಿದೆ.

ಇನ್ನು ಮೂಲಗಳ ಪ್ರಕಾರ,  ಈ ಪ್ರಕರಣದಲ್ಲಿ ಅನಿಲ್ ಅಂಬಾನಿ ಅವರನ್ನು ಇಡಿ ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಅವರನ್ನು ಈ ಹಿಂದೆ ಆಗಸ್ಟ್ 2025 ರಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಆ ವೇಳೆ ಪಿಎಂಎಲ್‌ಎ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗಿತ್ತು. ಈಗ ಮತ್ತೊಮ್ಮೆ ವಿಚಾರಣೆಗೆ ಒಳಪಡುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:56 pm, Wed, 25 February 26

Source link

ಇಸ್ರೇಲ್ ಸಂಸತ್​​ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ – Kannada News | Modi Modi chants echo in Israel Parliament Knesset welcomes Indian PM with standing ovation

ಜೆರುಸಲೇಂ, ಫೆಬ್ರವರಿ 25: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು. ಈ ವೇಳೆ ಸಂಸತ್ ತುಂಬ “ಮೋದಿ, ಮೋದಿ” ಘೋಷಣೆಗಳು ಮೊಳಗಿದವು. ನೆಸ್ಸೆಟ್ ಸ್ಪೀಕರ್ ಅಮೀರ್ ಒಹಾನಾ “ನಮಸ್ತೆ ಮೋದಿ” ಎಂದು ಹೇಳುವ ಮೂಲಕ ವಿಶೇಷ ರೀತಿಯಲ್ಲಿ ಭಾರತದ ಪ್ರಧಾನಿಗೆ ಸ್ವಾಗತ ಕೋರಿದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ನೀಡಿದ ಹೈಕೋರ್ಟ್ – Kannada News | High Court stays release of The Kerala Story 2 Goes Beyond

ಭಾರಿ ಉತ್ಸಾಹದಲ್ಲಿ ಟೀಸರ್ ಬಿಡುಗಡೆ ಮಾಡಿ, ಮುಖಭಂಗ ಎದುರಿಸಿದ ‘ದಿ ಕೇರಳ ಸ್ಟೋರಿ 2’ (The Kerala Story 2) ಚಿತ್ರತಂಡಕ್ಕೆ ಈಗ ಇನ್ನೊಂದು ಆಘಾತ ಎದುರಾಗಿದೆ. ಈ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕುವಂತೆ ಕೇರಳ ಹೈಕೋರ್ಟ್ (Kerala High Court) ಸೂಚನೆ ನೀಡಿದೆ. ಫೆಬ್ರವರಿ 27ರಂದು ‘ದಿ ಕೇರಳ ಸ್ಟೋರಿ 2’ ಚಿತ್ರವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಜ್ಜಾಗಿದ್ದರು. ಆದರೆ ಕೇರಳದಲ್ಲಿ ಈ ಸಿನಿಮಾದ ಟೀಸರ್​​ಗೆ ಭಾರಿ ವಿರೋಧ ವ್ಯಕ್ತವಾಯಿತು. ಈ ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಲು ಹತ್ತಿದರು. ಅದರ ವಿಚಾರಣೆ ನಡೆಯುತ್ತಿದೆ.

‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಕೇರಳವನ್ನು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ ಆಗಿದೆ. ಈ ಸಿನಿಮಾದಿಂದ ರಾಜ್ಯದಲ್ಲಿ ಕೋಮು ಗಲಭೆ ಉಂಟಾಗುವ ಸಾಧ್ಯತೆ ಇದೆ ಎಂದು ಆರೋಪಿಸಿ ಚಿತ್ರದ ವಿರುದ್ಧ ಕೇಸ್ ಹಾಕಲಾಯಿತು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ಚಿತ್ರದ ಬಿಡುಗಡೆಗೆ ಹೈಕೋರ್ಟ್ ತಡೆ ನೀಡಿದೆ.

ಸಿನಿಮಾದ ವಿವಾದಕ್ಕೆ ಸಂಬಂಧಿಸಿದಂತೆ 3 ಅರ್ಜಿಗಳ ವಿಚಾರಣೆ ಬಾಕಿ ಇದೆ. ಆದರೆ ಶುಕ್ರವಾರವೇ ಸಿನಿಮಾ ಬಿಡುಗಡೆ ಆಗಬೇಕಿದೆ, ವಿದೇಶಿ ವಿತರಣೆ ಹಕ್ಕುಗಳು ಮಾರಾಟ ಆಗಿವೆ ಎಂದು ಕೋರ್ಟ್ ಗಮನಕ್ಕೆ ತರಲಾಯಿತು. ‘ಎಲ್ಲ ವಾದವನ್ನು ಆಲಿಸಬೇಕಿದೆ. ಅಲ್ಲಿಯ ತನಕ ಸಿನಿಮಾದ ಬಿಡುಗಡೆಯನ್ನು ಮುಂದಕ್ಕೆ ಹಾಕಿ’ ಎಂದು ಜಡ್ಜ್ ಸೂಚನೆ ನೀಡಿದರು.

ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್​ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಊಜಾ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಲವ್ ಜಿಹಾದ್ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದು ಟೀಸರ್ ಮೂಲಕ ಗೊತ್ತಾಗಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ ಸಿಎಂ ಪಿಣರಾಯಿ ವಿಜಯನ್

2023ರಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಅದರ ಸೀಕ್ವೆಲ್ ಆಗಿ ‘ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್’ ಸಿನಿಮಾ ಸಿದ್ಧವಾಗಿದೆ. ಟೀಸರ್ ಬಿಡುಗಡೆ ಆದ ಬಳಿಕ ವಿವಾದ ಸೃಷ್ಟಿ ಆಯಿತು. ಚಿತ್ರಕ್ಕೆ ಪ್ರಮಾಣಪತ್ರ ನೀಡಿದ ಸೆನ್ಸಾರ್ ಮಂಡಳಿಯ ಕ್ರಮವನ್ನು ಪ್ರಶ್ನಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs ZIM: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ – Kannada News | New Zealand’s Dominant Win: SL Knocked Out of 2026 T20 World Cup Super 8 by Rachin Ravindra’s Spin

ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಿನ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕನ್ನಡಿಗ ರಚಿನ್ ರವೀಂದ್ರ ಸ್ಪಿನ ಮೋಡಿಗೆ ತತ್ತರಿಸಿ ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

Published On – 10:41 pm, Wed, 25 February 26

Source link

ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ

ಲಕ್ನೋ, ಫೆಬ್ರವರಿ 25: ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

SL vs NZ: 6,6,6,6.. ಲಂಕಾ ವಿರುದ್ಧ ಅಬ್ಬರಿಸಿ ವಿಶೇಷ ದಾಖಲೆ ಬರೆದ ಮಿಚೆಲ್ ಸ್ಯಾಂಟ್ನರ್ – Kannada News | Mitchell Santner Rescues NZ with Record Partnership, Reaches 1000 T20I Runs vs SL

ಶ್ರೀಲಂಕಾ ವಿರುದ್ಧ 47 ರನ್‌ಗಳ ಇನ್ನಿಂಗ್ಸ್‌ ಆಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದರು. ಸ್ಯಾಂಟ್ನರ್ ತಮ್ಮ ಇನ್ನಿಂಗ್ಸ್‌ನ 26 ನೇ ರನ್ ಗಳಿಸಿದ ತಕ್ಷಣ ಈ ಮೈಲಿಗಲ್ಲು ತಲುಪಿದರು. ಮಿಚೆಲ್ ಸ್ಯಾಂಟ್ನರ್ ಈಗ 132 ಪಂದ್ಯಗಳಿಂದ 88 ಇನ್ನಿಂಗ್ಸ್‌ಗಳಲ್ಲಿ 1,021 ರನ್‌ಗಳನ್ನು ಗಳಿಸಿದ್ದಾರೆ. ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ 13 ನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೂ ಸ್ಯಾಂಟ್ನರ್ ಪಾತ್ರರಾಗಿದ್ದಾರೆ.

Source link

ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್​​ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ – Kannada News | PM Narendra Modi conferred with Speaker of the Knesset Medal by Israel Parliament

ಜೆರುಸಲೆಮ್, ಫೆಬ್ರವರಿ 25: ಇಸ್ರೇಲ್ ಸಂಸತ್ ಅನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ನರೇಂದ್ರ ಮೋದಿ (PM Modi in Israel) ಅವರಿಗೆ ಇಂದು “ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ” ಪ್ರದಾನ ಮಾಡಲಾಗಿದೆ. ಇದು ಇಸ್ರೇಲ್ ಸಂಸತ್​ ನೆಸ್ಸೆಟ್‌ನ ಅತ್ಯುನ್ನತ ಗೌರವವಾಗಿದೆ. ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ವೈಯಕ್ತಿಕ ನಾಯಕತ್ವದ ಮೂಲಕ ನೀಡಿದ ಅಸಾಧಾರಣ ಕೊಡುಗೆಯನ್ನು ಗುರುತಿಸಿ ಈ ಪದಕವನ್ನು ನೀಡಲಾಗಿದೆ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕೆಲವೇ ಜಾಗತಿಕ ನಾಯಕರಲ್ಲಿ ಮೋದಿ ಕೂಡ ಒಬ್ಬರು. 2018ರಲ್ಲಿ ವಿದೇಶಿ ಗಣ್ಯರಿಗೆ ನೀಡಲಾಗುವ ಅತ್ಯುನ್ನತ ಪ್ಯಾಲೆಸ್ಟೀನಿಯನ್ ಪ್ರಶಸ್ತಿಯಾದ ಪ್ಯಾಲೆಸ್ಟೈನ್ ರಾಜ್ಯದ ಗ್ರ್ಯಾಂಡ್ ಕಾಲರ್ ಅನ್ನು ಮೋದಿಗೆ ನೀಡಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ – Kannada News | Free HPV Vaccine For Young Women over Cervical Cancer: What is it and how does it work?

ನವದೆಹಲಿ, (ಫೆಬ್ರವರಿ 25): ಗರ್ಭಕಂಠದ ಕ್ಯಾನ್ಸರ್‌ ತಡೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಕ್ಯಾನ್ಸರ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ ‘ಡ್ಯೂಮನ್ ಪ್ಯಾಪಿಲೋಮ ವೈರಸ್(HPV) ಲಸಿಕೆ ವಿತರಣೆ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಜ್ಜಾಗಿದ್ದು, ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ‘ಸ್ವಸ್ಥ ನಾರಿ’ (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಮೆರ್ಕ್ ಸಂಸ್ಥೆಯು ತಯಾರಿಸಿರುವ ‘ಗಾರ್ಡಾಸಿಲ್’ ಚುಚ್ಚುಮದ್ದನ್ನು ದೇಶಾದ್ಯಂತ ಉಚಿತವಾಗಿ ನೀಡಲಾಗುವುದು. ಯಾಕೆ ಈ ನಿರ್ಧಾರ? 14ನೇ ವಯಸ್ಸಿಗೇ ಏಕೆ? ಇಲ್ಲಿದೆ ವಿವರ

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version