VHT 2025-26: ಕರುಣ್, ಪಡಿಕ್ಕಲ್ ಶತಕ; ಕರ್ನಾಟಕಕ್ಕೆ ಸತತ 2ನೇ ಜಯ – Kannada News | Vijay Hazare: Karnataka Dominates with Padikkal, Nair Centuries!

ಸೈಯದ್ ಮುಷ್ತಾಕ್ ಟ್ರೋಫಿಯಲ್ಲಿ ಎಡವಿದ್ದ ಕರ್ನಾಟಕ ತಂಡ ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಜಾರ್ಖಂಡ್ ನೀಡಿದ್ದ 412 ರನ್​ಗಳ ದಾಖಲೆಯ ಗುರಿಯನ್ನು ಬೆನ್ನಟ್ಟಿ ಗೆದ್ದ ಕರ್ನಾಟಕ ಇದೀಗ ತನ್ನ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8ವಿಕೆಟ್​ಗಳ ಸುಲಭ ಜಯ ದಾಖಲಿಸಿದೆ. ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ತಂಡದ ಗೆಲುವಿಗೆ ಕಾರಣರಾಗಿದ್ದ ದೇವದತ್ ಪಡಿಕ್ಕಲ್‌, ಈ ಪಂದ್ಯದಲ್ಲೂ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು…

Read More

ಬೆಂಗಳೂರು ವಿವಿ ವಿದ್ಯಾರ್ಥಿಗಳ ಜೊತೆ ‘ಲ್ಯಾಂಡ್​ಲಾರ್ಡ್’ ವಿಜಯ್ ಜಾಥಾ – Kannada News | Landlord movie actor Vijay Kumar aka Duniya Vijay marched with Bangalore University students

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ. ಶೆಟ್ಟಿ, ರಿತನ್ಯಾ, ಶಿಶಿರ್ ಬೈಕಾಡಿ ಮುಂತಾದವರು ನಟಿಸಿರುವ ‘ಲ್ಯಾಂಡ್​ಲಾರ್ಡ್’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಜನಮೆಚ್ಚುಗೆ ಗಳಿಸಿದೆ. ಈ ಸಿನಿಮಾಗೆ ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ.ಈ ಸಿನಿಮಾದಲ್ಲಿನ ಕಲಾವಿದರ ನಟನೆ, ಕಥೆ, ಚಿತ್ರದ ಆಶಯವನ್ನು ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ. ಈ ಪ್ರಯುಕ್ತ ‘ಲ್ಯಾಂಡ್​ಲಾರ್ಡ್’ (Landlord) ಸಿನಿಮಾ ತಂಡದವರು ಇಂದು (ಜನವರಿ 28) ಮಧ್ಯಾಹ್ನ 1.45ಕ್ಕೆ ವಿದ್ಯಾರ್ಥಿಗಳ ಜೊತೆ ಜಾಥಾ ನಡೆಸಿದರು. ‘ಲ್ಯಾಂಡ್​ಲಾರ್ಡ್’ ಸಿನಿಮಾ…

Read More

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! – Kannada News | Soladevanahalli Tragedy: Family’s Despair After Murder of Free Fire Addict Leads to Mass Suicide

ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದಕ್ಕೆ ಅಕ್ಕನ ಮಗನನ್ನೇ ಕೊಂದಿದ್ದ ಮಾವನೂ ಆತ್ಮಹತ್ಯೆಗೆ ಶರಣು! ಬೆಂಗಳೂರು, ಫೆಬ್ರವರಿ 07: ನಗರದ ಸೋಲದೇವನಹಳ್ಳಿ (Bengaluru rural) ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆ ನಡೆದಿದೆ. ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ ಮಾವ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ…

Read More

ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ! – Kannada News | Congress High Command Sidelined? CM Siddaramaiah Firmly Rejects Mallikarjun Kharge’s Local Formula

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಎಲ್ಲರ ಬೆರಳು ಸೀದಾ ಹೈಕಮಾಂಡ್ ಕಡೆಗೆ ತಿರುಗುತ್ತದೆ. ಆದರೆ ಗೊಂದಲ ಬಗೆಹರಿಸಿಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅರ್ಥಾತ್ ಹೈಕಮಾಂಡ್​​ನ ಮುಖ್ಯ ನಾಯಕನೇ ‘ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ. ಅಲ್ಲಿ ಸ್ಥಳೀಯವಾಗಿ ಏನು ಆಗಿದೆಯೋ ಅಲ್ಲೇ ಸೆಟಲ್ ಮಾಡಿಕೊಳ್ಳಿ’ ಎಂದಿದ್ದಾರೆ. ಆದರೆ ಖರ್ಗೆ ಅವರ ಲೋಕಲ್ ಸೂತ್ರವನ್ನು ಸಿದ್ದರಾಮಯ್ಯ ಸುತರಾಂ ಒಪ್ಪುವ ಹಾಗೆ…

Read More

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ! – Kannada News | Owner locks to Anganwadi centre for not provide job to his family member at Belagavi

ಬೆಳಗಾವಿ, (ಜನವರಿ 08):  ಅಂಗನವಾಡಿಯಲ್ಲಿ (Anganwadi centre) ತಮ್ಮ ಕುಟುಂಬಸ್ಥರಿಗೆ ಕೆಲಸ ನೀಡದ ಕೋಪದಲ್ಲಿ ಜಾಗದ ಮಾಲೀಕ ಕಟ್ಟಡಕ್ಕೆ ಬೀಗ ಹಾಕಿರುವ ಘಟನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ನಂದಿಕುರಳಿ ಗ್ರಾಮದ ವಂಜೇರಿ ತೋಟದ ಅಂಗನವಾಡಿ ಕೇಂದ್ರಕ್ಕೆ ಕಳೆದ ನಾಲ್ಕು ದಿನಗಳಿಂದ ಬಾಬುರಾವ್ ವಂಜೇರಿ ಎಂಬವರು ಬೀಗ ಹಾಕಿದ್ದಾರೆ. ಇದರಿಂದಾಗಿ ಮಕ್ಕಳು ಅಂಗನವಾಡಿಯ ಆವರಣದಲ್ಲಿಯೇ ಕುಳಿತು ಆಟವಾಡುತ್ತಿದ್ದಾರೆ. ಶಾಲೆಗೆ ಸ್ಥಳ ಕೊಟ್ಟಿರುವ ಬಾಬುರಾವ್ ವಂಜೇರಿ…

Read More

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ…

Read More

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ – Kannada News | Tamannaah Bhatia unveils new Mysore Sandal Soap in Bengaluru as brand ambassador

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲೇ ಹೇಳುವ ಮೂಲಕ ತಮನ್ನಾ ಅವರು ಮಾತು ಆರಂಭಿಸಿದರು. ಬಳಿಕ ಅವರು ಇಂಗ್ಲಿಷ್​​ನಲ್ಲಿ ಮಾತು ಮುಂದುವರಿಸಿದರು. ‘ನನಗೆ ಇದು ತುಂಬಾ ದೊಡ್ಡ ಗೌರವ ಹಾಗೂ ಹೆಮ್ಮೆ. KSDL ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೇನೆ. 20 ವರ್ಷಗಳಿಂದ ಚಿತ್ರರಂಗದಲ್ಲಿ…

Read More

ರಸ್ತೆ ಬದಿ ಕಾರು ಪಾರ್ಕ್ ಮಾಡಿ ಹೋಗುವಾಗ ಬೆಲೆಬಾಳುವ ವಸ್ತು ಬಿಟ್ಟು ಹೋಗ್ತೀರಾ? ಹಾಗಿದ್ರೆ ಈ ಸಿಸಿಟಿವಿ ವಿಡಿಯೋ ನೋಡಲೇಬೇಕು – Kannada News | Bengaluru Crime: Thieves Break Car Window, Steal Electronics and TV in Ashok Nagar; Incident Caught on CCTV

ಬೆಂಗಳೂರು, ಮೇ 7: ರಾಜಧಾನಿ ಬೆಂಗಳೂರಿನ ರಸ್ತೆ ಪಕ್ಕದಲ್ಲಿ ಕಾರು ಪಾರ್ಕ್ ಮಾಡಿ ಬೆಲೆಬಾಳುವ ವಸ್ತುಗಳನ್ನು ಅದರಲ್ಲಿಯೇ ಬಿಟ್ಟು ಹೋಗುವವರು ಎಚ್ಚೆತ್ತುಕೊಳ್ಳಬೇಕಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಅದರಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕಳೆದ ತಿಂಗಳು ನಡೆದ ಈ ಘಟನೆಯಲ್ಲಿ, ಕಾರಿನ ಮಾಲೀಕರು ರಾತ್ರಿ ಟಿವಿ ಹಾಗೂ ಕೆಲವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಾರಿನಲ್ಲೇ ಇಟ್ಟು ರಸ್ತೆ ಪಕ್ಕದಲ್ಲಿ ಪಾರ್ಕ್ ಮಾಡಿ ಮನೆಗೆ…

Read More

ಸ್ಟೀವ್ ಸ್ಮಿತ್ ಬರುವಷ್ಟರಲ್ಲಿ ವಿಶ್ವಕಪ್​ನಿಂದಲೇ ಹೊರಬಿದ್ದ ಆಸ್ಟ್ರೇಲಿಯಾ

T20 World Cup 2026: ಟಿ20 ವಿಶ್ವಕಪ್​ಗೆ ಸ್ಟೀವ್ ಸ್ಮಿತ್ (Steve Smith) ಎಂಟ್ರಿ ಕೊಟ್ಟಿದ್ದಾರೆ. ಆದರೆ ಈ ಎಂಟ್ರಿಗೂ ಮುನ್ನವೇ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ತಂಡದಲ್ಲಿ ಸ್ಟೀವ್ ಸ್ಮಿತ್​ಗೆ ಸ್ಥಾನ ಲಭಿಸಿರಲಿಲ್ಲ. ಆದರೆ ಝಿಂಬಾಬ್ವೆ ವಿರುದ್ಧದ ಪಂದ್ಯದ ಬಳಿಕ ಮಿಚೆಲ್ ಮಾರ್ಷ್​​ ಗಾಯಗೊಂಡಿದ್ದ ಹಿನ್ನಲೆಯಲ್ಲಿ ಸ್ಮಿತ್ ಅವರನ್ನು ಮೀಸಲು ಆಟಗಾರರನಾಗಿ ಆಯ್ಕೆ ಮಾಡಲಾಗಿತ್ತು. ಇದಾಗ್ಯೂ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಮಿಚೆಲ್ ಮಾರ್ಷ್ ಗಾಯದಿಂದ ಚೇತರಿಸಿಕೊಂಡಿರುವುದು. ಆದರೆ …

Read More

ಲೋಕಾಯುಕ್ತ ದಾಳಿ ವೇಳೆ ಎಸಿಎಫ್​​ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

ಚಿಕ್ಕಮಗಳೂರು, ಜೂನ್​​ 16: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ನಿವಾಸ, ಕಚೇರಿ ಹಾಗೂ ನಿರ್ಮಾಣ ಹಂತದ ಮನೆ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ಆಸ್ತಿ ದುರ್ಬಳಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ನಗರದ ಕಲ್ಯಾಣನಗರದಲ್ಲಿರುವ ಎಸಿಎಫ್ ಮೋಹನ್ ಅವರ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂಪಾಯಿ ನಗದು…

Read More