Headlines

ಅಂದು ವಿದ್ಯಾರ್ಥಿ ನಾಯಕ, ಇಂದು ಮುಖ್ಯಮಂತ್ರಿ! ಕೇರಳ ನೂತನ ಸಿಎಂ ವಿಡಿ ಸತೀಶನ್ ರಾಜಕೀಯ ಹಾದಿಯ ಹಿನ್ನೋಟ ಇಲ್ಲಿದೆ – Kannada News | VD Satheesan Profile: From Student Leader to Kerala’s New Chief Minister from UDF

ವಿ.ಡಿ. ಸತೀಶನ್Image Credit source: PTI ತಿರುವನಂತಪುರ, ಮೇ 14: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) 102 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಜಯ ದಾಖಲಿಸಿದ 10 ದಿನಗಳ ನಂತರ ಹಿರಿಯ ನಾಯಕ ವಿಡಿ ಸತೀಶನ್ (VD Satheesan) ಕೇರಳದ (Kerala) ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ದಶಕಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಖರ ಧ್ವನಿಯಾಗಿ ಗುರುತಿಸಿಕೊಂಡಿದ್ದ ಸತೀಶನ್, ಹೈಕಮಾಂಡ್‌ನ ಸುದೀರ್ಘ ಚರ್ಚೆಯ ನಂತರ ಮುಖ್ಯಮಂತ್ರಿ ಗದ್ದುಗೆಗೆ ಆಯ್ಕೆಯಾಗಿದ್ದಾರೆ. ಮುಖ್ಯಾಂಶಗಳು 61 ವರ್ಷದ ವಿಡಿ ಸತೀಶನ್…

Read More

Video: ರಸ್ತೆಯಲ್ಲಿ ತನ್ನಷ್ಟಕ್ಕೆ ಹೋಗುತ್ತಿದ್ದ ಗೂಳಿಗೆ ಹೊಡೆಯಲು ಹೋದವನ ಗತಿ ಏನಾಯ್ತು ನೋಡಿ

ಮಿರ್ಜಾಪುರ, ಮೇ 05: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಕಚ್ವಾ ಎಂಬಲ್ಲಿ ವ್ಯಕ್ತಿಯ ಮೂರ್ಖತನಕ್ಕೆ ಗೂಳಿಯೊಂದು ತಕ್ಕ ಪಾಠ ಕಲಿಸಿದ ವಿಡಿಯೋ ವೈರಲ್ ಆಗಿದೆ. ಅಲೆದಾಡುತ್ತಿದ್ದ ಹೋರಿಯನ್ನು ವಿನಾಕಾರಣ ಕೆಣಕಿದ ವ್ಯಕ್ತಿಯೊಬ್ಬ ಈಗ ಆಸ್ಪತ್ರೆ ಪಾಲಾಗಿದ್ದಾರೆ. ಸ್ಥಳೀಯ ನಿವಾಸಿಯಾದ ರಾಜು ಸಿಂಗ್ ಎಂಬ ವ್ಯಕ್ತಿ ರಸ್ತೆಯಲ್ಲಿ ಸುಮ್ಮನೆ ಓಡಾಡುತ್ತಿದ್ದ ಹೋರಿಗೆ ಹೊಡೆಯಲು ಹೋಗಿದ್ದಾರೆ. ಮೊದಲು ಇಟ್ಟಿಗೆಗಳನ್ನು ಹೋರಿಯ ಮೇಲೆ ಎಸೆದು ಅದನ್ನು ಓಡಿಸಲು ಪ್ರಯತ್ನಿಸಿದ ಆತ, ನಂತರ ಕೋಲನ್ನು ಹಿಡಿದು ಹೋರಿಗೆ ಮನಬಂದಂತೆ ಹೊಡೆಯಲು ಆರಂಭಿಸಿದ್ದ. ಸತತವಾಗಿ…

Read More

ಇಂಧನ ದರ ಏರಿಕೆ ಎಫೆಕ್ಟ್​​: ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ‘ಇವಿ’ ವಾಹನಗಳ ಧಮಾಕಾ!

ಬೆಂಗಳೂರು, ಮೇ 30: ಪೆಟ್ರೋಲ್, ಡೀಸೆಲ್, ಸಿಎನ್‌ಜಿ ಮತ್ತು ಎಲ್‌ಪಿಜಿ ದರಗಳು ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ಕಂಗೆಟ್ಟಿರುವ ಬೆಂಗಳೂರಿಗರು (Bangaluru) ಈಗ ಇವಿ ಅಂದರೆ ಎಲೆಕ್ಟ್ರಿಕ್ ವಾಹನಗಳ (Electric Vehicles) ಮೊರೆ ಹೋಗುತ್ತಿದ್ದಾರೆ. ನಗರದಲ್ಲಿ ಇವಿ ವಾಹನಗಳಿಗೆ ಭರ್ಜರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಪ್ರತಿ ತಿಂಗಳು ನೂರಾರು ವಾಹನಗಳು ಮಾರಾಟವಾಗುತ್ತಿವೆ. ಇತ್ತ ವಾಹನ ಮಾಲೀಕರು ಮತ್ತೆ ಡೀಸೆಲ್ ದರ ಹೆಚ್ಚಾಗುತ್ತದೆ, ಹಾಗಾಗಿ ಇವಿ ಮೊರೆ ಹೋಗುತ್ತಿದ್ದೇವೆ ಎನ್ನುತ್ತಿದ್ದಾರೆ. ಮುಖ್ಯಾಂಶಗಳು ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ಕಂಗೆಟ್ಟು ಇವಿ…

Read More

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್ – Kannada News | U19 World Cup 2026: New Zealand enter in Super 6 without any win

ಅಂಡರ್-19 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ನ್ಯೂಝಿಲೆಂಡ್ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಕೇಳಲು ಅಚ್ಚರಿ ಎನಿಸಿದರೂ ಇಂತಹದೊಂದು ಫಲಿತಾಂಶಕ್ಕೆ ಕಿರಿಯರ ವಿಶ್ವಕಪ್ ಪಾಯಿಂಟ್ಸ್ ಟೇಬಲ್​ ಸಾಕ್ಷಿಯಾಗಿದೆ. ಈ ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ನ್ಯೂಝಿಲೆಂಡ್ ತಂಡದ ಮೊದಲೆರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಇನ್ನು ಮೂರನೇ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ್ದರು. ಅಂದರೆ ಮೂರು ಪಂದ್ಯಗಳಿಂದ ನ್ಯೂಝಿಲೆಂಡ್​ಗೆ ಸಿಕ್ಕಿರುವುದು ಕೇವಲ 2 ಅಂಕಗಳು ಮಾತ್ರ. ಅದು ಕೂಡ ರದ್ದಾದ…

Read More

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ – Kannada News | A little girl was blessed after seeing dolls at the mall and touched their feet

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ. sarcastic_doctorrr ಹೆಸರಿನ…

Read More

ಬೆಂಗಳೂರಿನಲ್ಲಿ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಅಬ್ದುಲ್​​ಗೆ ಚಪ್ಪಲಿ ಏಟು

ಬೆಂಗಳೂರು, ಮಾ.26: ನೆಲಮಂಗಲ ತಾಲೂಕಿನ ಬೇಗೂರು ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರೊಬ್ಬರು ವಿದ್ಯಾರ್ಥಿನಿಯೊಬ್ಬಳಿಗೆ ತರಗತಿಯಲ್ಲೇ ಪ್ರಪೋಸ್ ಮಾಡಿರುವ ಘಟನೆ ನಡೆದಿದೆ. ಪ್ರಾಧ್ಯಾಪಕ ಅಬ್ದುಲ್ ಎಂಬಾತ ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರೀತಿ ನಿವೇದನೆ ಮಾಡಿದ್ದಾನೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿ ಪ್ರಾಂಶುಪಾಲರೊಂದಿಗೆ ಮಾತನಾಡುವಂತೆ ತಿಳಿಸಿದ್ದಾಳೆ. ಈ ಘಟನೆಯಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್‌ನನ್ನು ಕಾಲೇಜು ಆವರಣದಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಬ್ದುಲ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಪ್ರಸ್ತುತ ಪ್ರಾಧ್ಯಾಪಕ ಅಬ್ದುಲ್ ತಲೆಮರೆಸಿಕೊಂಡಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸರು…

Read More

ಸಿನಿಮಾಗೆ ನಾಯಕಿ ಆದ ನಟಿ ಭವ್ಯಾ ಗೌಡ; ಚಿತ್ರಕ್ಕೆ ‘ದೇವಿ’ ಟೈಟಲ್ – Kannada News | From Bigg Boss to Big Screen Bhavya Gowda Leads Devi Movie Balances TV

‘ಗೀತಾ’ ಧಾರಾವಾಹಿ ಮೂಲಕ ಗಮನ ಸೆಳೆದವರು ನಟಿ ಭವ್ಯಾ ಗೌಡ (Bhavya Gowda). ಆ ಬಳಿಕ ಬಿಗ್ ಬಾಸ್ ಶೋಗೆ ಆಗಮಿಸಿದರು. ಅಲ್ಲಿ ಅದ್ಭುತವಾಗಿ ಟಾಸ್ಕ್​​ಗಳನ್ನು ಆಡುವ ಮೂಲಕ ಗಮನ ಸೆಳೆದರು. ಈಗ ಭವ್ಯಾ ಗೌಡ ಅವರು ಕಿರುತೆರೆಯಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ‘ದೇವಿ’ ಹೆಸರಿನ ಸಿನಿಮಾಗೆ ನಾಯಕಿ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಅವರನ್ನು ಬೆಳ್ಳಿ ಪರದೆ ಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಯುವ ರೈತ ಚೇತನ್ ಗೌಡ ಹಾಗೂ…

Read More

ಟಿ20 ವಿಶ್ವಕಪ್‌ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅತ್ಯಂತ ಹಿರಿಯ ಆಟಗಾರ – Kannada News | Mohammed Nadeem Breaks Jayasuriya’s Record: Oldest T20 WC Fifty as Sri Lanka Dominates Oman

ಓಮನ್ ತಂಡವನ್ನು 105 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಶ್ರೀಲಂಕಾ ತಂಡ ಅತಿ ದೊಡ್ಡ ಗೆಲುವಿನ ದಾಖಲೆಯನ್ನು ಬರೆದಿದೆ. ಇದರ ಜೊತೆಗೆ 19 ಎಸೆತಗಳಲ್ಲಿ ಅರ್ಧಶತಕದ ಬಾರಿಸಿದ ದಸುನು ಶನಕ ಕೂಡ ಲಂಕಾ ಪರ ಅತಿ ವೇಗದ ಟಿ20 ಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ಇದು ಲಂಕಾ ತಂಡದ ಕಥೆಯಾದರೆ, ಈ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ ಓಮನ್ ತಂಡದ ಮೊಹಮ್ಮದ್ ನದೀಮ್ ಕೂಡ ದಾಖಲೆಯೊಂದನ್ನು ನಿರ್ಮಿಸಿದರು. ಓಮನ್ ಪರ ಅರ್ಧಶತಕ ಬಾರಿಸಿ ಏಕಾಂಗಿ ಹೋರಾಟ ನೀಡಿದ…

Read More

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು – Kannada News | Shivamogga: Kuvempu University Students Protest, Demand Dismissal of Chancellor and Registrar

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು…

Read More

Tv9 Kannada News Live: ಕಾರ್ಮಿಕರ ವೇತನ ಹೆಚ್ಚಳ, ತೆಲಂಗಾಣದಲ್ಲಿ ಉಷ್ಣ ಅಲೆ ಮತ್ತು ಚೇತನ್ ಅಹಿಂಸಾ ಹೇಳಿಕೆ ವಿವಾದ! ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Karnataka Minimum Wage Hike, Telangana Heatwave Deaths and Actor Chetan Controversy

ಬೆಂಗಳೂರು, ಮೇ 24: ಕರ್ನಾಟಕದಲ್ಲಿ 81 ವಲಯಗಳ ಕಾರ್ಮಿಕರ ಕನಿಷ್ಠ ವೇತನವನ್ನು  (Minimum Wage) ಶೇ 60 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿಗೆ 16 ಜನರು ಬಲಿಯಾಗಿದ್ದು ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು, ಬೆಂಗಳೂರಿನಲ್ಲಿ ನಟ ಚೇತನ್ ಅಹಿಂಸಾ ಅವರು ಡಾ. ರಾಜ್‌ಕುಮಾರ್ ಸಮಾಧಿ ಜಾಗದ ಕುರಿತು ತಾವು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದ ಲಕ್ಷಾಂತರ ಕಾರ್ಮಿಕರಿಗೆ ಬಂಪರ್ ಕೊಡುಗೆ ಕರ್ನಾಟಕ ಸರ್ಕಾರವು 81…

Read More