ಫುಟ್‌ಪಾತ್ ತೆರವು ಅಭಿಯಾನ: ಆರ್.ಟಿ. ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ – Kannada News | Bengalurus Footpath Clearance Drive Continues: Street Vendors Protest in RT Nagar

ಬೆಂಗಳೂರು, ಜುಲೈ 07: ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಆರ್.ಟಿ. ನಗರದ ಜೆ.ಸಿ. ನಗರ ಮುಖ್ಯರಸ್ತೆಯಲ್ಲಿ ತೆರವು ಕಾರ್ಯಾಚರಣೆಗೆ ಬೀದಿ ಬದಿ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರ್ಯಾಯ ಜಾಗ ನೀಡದೆ ತೆರವುಗೊಳಿಸುತ್ತಿರುವುದಕ್ಕೆ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಜಿಬಿಎನಿಂದ ಐಡಿ ಕಾರ್ಡ್‌ಗಳನ್ನು ಪಡೆದು, ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಈಗ ಬೇರೆ ಜಾಗ ತೋರಿಸದೆ ತೆರವುಗೊಳಿಸಿದರೆ ನಮ್ಮ ಜೀವನ ಹೇಗೆ? ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ವ್ಯಾಪಾರಿಗಳ ಪ್ರತಿರೋಧದ ನಡುವೆಯೂ…

Read More

ಬಾಗಲಕೋಟೆಯಲ್ಲಿ ಯತ್ನಾಳ್​​ ಪ್ರಚಾರ ಮಾಡಿದ್ರೂ ಬಿಜಿಪಿ ಏಕೆ ಗೆಲ್ಲಲಿಲ್ಲ: ಸಚಿವ ತಿಮ್ಮಾಪುರ್ ಹೇಳಿದ್ದಿಷ್ಟು – Kannada News | Minister Timmapur on Bagalkote By election Victory: Congresss Collective Effort and Development Wins

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗಳಿಸಿದ್ದಾರೆ. ಈ ಮಾಧ್ಯಮದವರೊಂದಿಗೆ ಮಾತನಾಡಿದ ಬಾಗಲಕೋಟೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಮಾಜಿ ಸಚಿವರು, ಮಾಜಿ ಶಾಸಕರು ನಿರಂತರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರ  ಶ್ರಮದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎಂದರು. ಬಿಜೆಪಿಯು ಹಿಂದುತ್ವದ ಟ್ರಂಪ್ ಕಾರ್ಡ್ ಬಳಸಿ, ಯತ್ನಾಳ್​​​ರನ್ನ ಕರೆತಂದಿದ್ದರು ಎಂಬ ಪ್ರಶ್ನಗೆ ಉತ್ತರಿಸಿ ಅವರು, ಪದೇ ಪದೇ ಹಿಂದುತ್ವ,…

Read More

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ….

Read More

TV9 ಬಿಗ್ ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್

ಚಾಮರಾಜನಗರ, (ಜೂನ್ 24): ಅದೆಷ್ಟೋ ಆದಿವಾಸಿಗಳು ಕರ್ನಾಟಕದಲ್ಲೂ ಸಹ ಬದುಕಿದ್ದು ಸತ್ತಂತೆ ಜೀವನ ಸಾಗಿಸುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಚಾಮರಾಜನಗರದ ಕಾಡಿನಲ್ಲಿ ವಾಸಿಸುತ್ತಿರುವ ಆನೆ ದಿಂಬ ಹಾಡಿಯ ಜನರಿಗೆ ಮೂಲಸೌಲಭ್ಯಗಳು, ರೇಷನ್ ಕಾರ್ಡ್​​ ಸೇರಿದಂತೆ ಇನ್ನಿತರ ಸರ್ಕಾರದ ಯೋಜನೆಗಳೇ ಸಿಗುತ್ತಿಲ್ಲ. ಕಳೆದ 10 ವರ್ಷಗಳಿಂದ ಹಾಡಿಯ ವಾಸಿಗಳು ರೇಷನ್ ಕಾರ್ಡ್ ಗಾಗಿ ಕಚೇರಿಯಿಂದ ಕಚೇರಿ ಅಲೆದು ರೋಸಿ ಹೋಗಿದ್ದರು. ಆದರೂ ರೇಷನ್ ಕಾರ್ಡ್​ ಸಿಕ್ಕಿಲಲ್. ಹೀಗಾಗಿ ಈ ಬಗ್ಗೆ ನಿಮ್ಮ ಟಿವಿ9, ಆದಿವಾಸಿ ಸೋಲಿಗರು ಶೀರ್ಷಿಕೆ ಅಡಿ ಸುದ್ದಿ…

Read More

ಗುಜರಾತ್​​ನಲ್ಲಿ ಮೈಕ್ರಾನ್‌ನ ಸೆಮಿಕಂಡಕ್ಟರ್ ಸೌಲಭ್ಯ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | PM Modi inaugurates Micron semiconductor ATMP facility in Gujarat

ಅಹಮದಾಬಾದ್, ಫೆಬ್ರವರಿ 28: ಇಂದು ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸನಂದ್‌ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ಎಟಿಎಂಪಿ) ಸೌಲಭ್ಯವನ್ನು ಉದ್ಘಾಟಿಸಿದರು. ಈ ಉದ್ಘಾಟನೆಯು ಭಾರತದ ಸೆಮಿಕಂಡಕ್ಟರ್ ಉತ್ಪಾದನಾ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಸನಂದ್ ಎಟಿಎಂಪಿ ಸೌಲಭ್ಯದಿಂದ ಭಾರತದಲ್ಲಿ ತಯಾರಿಸಿದ ಮೊದಲ ಸೆಮಿಕಂಡಕ್ಟರ್ ಮೆಮೊರಿ ಮಾಡ್ಯೂಲ್‌ಗಳ ವಾಣಿಜ್ಯ ಉತ್ಪಾದನೆ ಮತ್ತು ಸಾಗಣೆಯನ್ನು ಪ್ರಾರಂಭಿಸಿದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ…

Read More

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು…

Read More

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ! ವಿದ್ಯಾರ್ಥಿಗಳ ವಾಟ್ಸಪ್‌ಗೇ ಬಂತು ರಿಸಲ್ಟ್ – Kannada News | VTU Exam Results in 10 Minutes: Visvesvaraya Technological University Creates History

ಪರೀಕ್ಷೆ ಮುಗಿದ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟ ಬೆಳಗಾವಿ, ಮೇ 23: ದೇಶದ ಇಂಜಿನಿಯರಿಂಗ್ ಶಿಕ್ಷಣ ರಂಗದಲ್ಲಿ ಹಿಂದೆಂದೂ ಕೇಳರಿಯದ ಅಪರೂಪದ ಮತ್ತು ಐತಿಹಾಸಿಕ ದಾಖಲೆಯೊಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಸಾಕ್ಷಿಯಾಗಿದೆ. ರಾಜ್ಯದ 200ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳನ್ನು ಒಳಗೊಂಡಿರುವ ವಿಟಿಯು, ಬಿಇ ಹಾಗೂ ಬಿ.ಟೆಕ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷಗಳಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ನಿರ್ಮಿಸಿದೆ. ಮುಖ್ಯಾಂಶಗಳು ವಿಟಿಯು ಪರೀಕ್ಷೆ ಮುಗಿದ ಕೇವಲ ಹತ್ತೇ ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿದೆ….

Read More

Astrological Remedie: ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೇ? ಈ ಜ್ಯೋತಿಷ್ಯ ಸಲಹೆ ಅನುಸರಿಸಿ – Kannada News | Recover Lent Money: Astrological Remedies to Get Your Funds Back Fast

ಸ್ನೇಹಿತರು, ಸಂಬಂಧಿಕರು ಅಥವಾ ಪರಿಚಿತರವರಿಗೆ ಸಹಾಯದ ಮನಸ್ಸಿನಿಂದ ನೀಡಿದ ಹಣ ಸಮಯಕ್ಕೆ ಸರಿಯಾಗಿ ವಾಪಸ್ ಸಿಗದಿದ್ದರೆ ಮಾನಸಿಕ ಒತ್ತಡ ಉಂಟಾಗುವುದು ಸಹಜ. ಇಂತಹ ಸಂದರ್ಭಗಳಲ್ಲಿ ಕೆಲವರು ಜ್ಯೋತಿಷ್ಯ ಪರಿಹಾರಗಳನ್ನು ಅನುಸರಿಸುವ ಮೂಲಕ ಧನಪ್ರವಾಹ ಸುಗಮವಾಗುತ್ತದೆ ಎಂದು ನಂಬುತ್ತಾರೆ. ಇವು ನಂಬಿಕೆ ಆಧಾರಿತ ಪರಿಹಾರಗಳಾಗಿದ್ದು, ನಿಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅನುಸರಿಸಬಹುದು. ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೆಂದಾದರೆ ಜ್ಯೋತಿಷ್ಯ ಶಾಸ್ತಜ್ಞರು ಹೇಳುವ ಈ ಪರಿಹಾರವನ್ನು ಒಮ್ಮೆ ಪ್ರಯತ್ನಿಸಿ. ಬುಧವಾರದ ಪರಿಹಾರ: ಬುಧವಾರ ಗಣೇಶನ ದಿನವೆಂದು ಪರಿಗಣಿಸಲಾಗುತ್ತದೆ. ಆ ದಿನ…

Read More

‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ? – Kannada News | Jana Nayagan Delay: How KVN Productions Toxic and KD Releases Face Major Setbacks

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ….

Read More

West Bengal Election 2026: 142 ಕ್ಷೇತ್ರಗಳು, 1448 ಅಭ್ಯರ್ಥಿಗಳು, 3.21 ಕೋಟಿ ಮತದಾರರು, ಪಶ್ಚಿಮ ಬಂಗಾಳದಲ್ಲಿ ಇಂದು ಎರಡನೇ ಹಂತದ ಮತದಾನ – Kannada News | West Bengal Election 2026: Phase 2 Voting Begins, 3.21 Crore Voters Decide Fate

ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್‌ದಲ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು…

Read More