ಬೆಂಗಳೂರು, ಮೇ 02: ವಾಣಿಜ್ಯ ಸಿಲಿಂಡರ್ ಮತ್ತು ಎಲ್ಪಿಜಿ ಅನಿಲದ ಬೆಲೆ ಏರಿಕೆಯ ನಂತರ, ಈಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಯು ವಾಹನ ಸವಾರರು ಮತ್ತು ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 102.96 ರೂಪಾಯಿ ಇದೆ. ಮುಂಬರುವ ನಾಲ್ಕರಿಂದ ಐದು ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು 5 ರಿಂದ 6 ರೂಪಾಯಿವರೆಗೆ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಂಚರಾಜ್ಯಗಳ ಚುನಾವಣೆಗಳು ಮುಗಿದ ನಂತರ ಈ ದರ ಏರಿಕೆ ಆಗುವ ಸೂಚನೆಗಳು ಕಂಡುಬರುತ್ತಿವೆ. ಈಗಾಗಲೇ ಗ್ಯಾಸ್ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಮತ್ತು ಆಟೋ ಚಾಲಕರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂಧನ ಬೆಲೆ ಏರಿಕೆಯು ಸಾರ್ವಜನಿಕರ ಮೇಲೆ ಇನ್ನಷ್ಟು ಆರ್ಥಿಕ ಹೊರೆ ಹೇರಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಳಗಾವಿ, ಮೇ 02: ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಗೆ ಅತ್ತೆ ಕನ್ನಹಾಕಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಳಿಯ ಮತ್ತು ಮಗಳು ಮನೆಯಲ್ಲಿ ಇಲ್ಲದಾಗ ಸಂಬಂಧಿ ಶಿವ ಎಂಬವನ ಜೊತೆ ಸೇರಿಕೊಂಡು ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ ಕಳ್ಳತನ ನಡೆಸಿದ್ದು, ಆರೋಪಿಗಳ ಬಂಧನವಾಗಿದೆ. 16 ಲಕ್ಷ ಮೌಲ್ಯದ 110ಗ್ರಾಂ ಚಿನ್ನದ ಆಭರಣವನ್ನು ಆರೋಪಿಗಳು ಎಗರಿಸಿದ್ದರು. ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ಅತ್ತೆಯನ್ನು ಅಳಿಯ ವಿಚಾರಿಸಿದ್ದ . ಆದರೆ ತನಗೆ ಏನೂ ಗೊತ್ತಿಲ್ಲ ಎಂದು ಅಳಿಯನ ಬಳಿ ಅತ್ತೆ ಡ್ರಾಮಾ ಮಾಡಿದ್ದಳು. ಬಳಿಕ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆಗೆ ಅಳಿಯ ದೂರು ನೀಡಿದ್ದು, ಪೊಲೀಸರು ತೀವ್ರ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿದ್ದಾಗಿ ಅತ್ತೆಯೇ ತಪ್ಪೊಪ್ಪಿಕೊಂಡಿದ್ದಾಳೆ.
ಬೆಂಗಳೂರು, ಮೇ 2: ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. ಶಿವಾಜಿನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ಮೊಹಮ್ಮದ್ ಜಾವೇದ್ ಮತ್ತು ವಸಂತನಗರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರುದ್ರಮುನಿ ಅಮಾನತಾಗಿದ್ದಾರೆ. ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಮುಖ್ಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಘಟನೆಯ ಕುರಿತು ತನಿಖೆಗೂ ಆದೇಶಿಸಲಾಗಿತ್ತು.
ಮಳೆಯಿಂದ ರಕ್ಷಣೆ ಪಡೆಯಲು ಗೋಡೆಯ ಪಕ್ಕದಲ್ಲಿ ನಿಂತಿದ್ದವರ ಮೇಲೆ ಕಾಂಪೌಂಡ್ ಕುಸಿದು ಬಿದ್ದಿತ್ತು. ಕಾಂಪೌಂಡ್ ಬದಿಯಲ್ಲಿ ಹಾಕಿದ್ದ ಮಣ್ಣಿನ ಒತ್ತಡ ತಡೆಯಲಾಗದೆ ಗೋಡೆ ಕುಸಿದಿತ್ತು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ವರದಿ: ಲಕ್ಷ್ಮೀ ನರಸಿಂಹ, ಟಿವಿ9
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ.
ಗ್ರಹಗಳ ಸಂಚಾರ:
ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು.
ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು.
ಶುಕ್ರ ದಶೆ: ಐದನೇ ಮನೆಯಲ್ಲಿ ಶುಕ್ರ ಇರುವುದು ಅತ್ಯಂತ ಶುಭ. ಇದು ಪ್ರೇಮ, ಕಲೆ ಮತ್ತು ಸಂತಾನ ಸುಖಕ್ಕೆ ಪೂರಕ.
ಶನಿ, ಕುಜ, ಬುಧ ದಶೆ: ಮೂರನೇ ಮನೆಯಲ್ಲಿ ಈ ಮೂರು ಗ್ರಹಗಳ ಸಂಯೋಗವು ನಿಮ್ಮ ಶೌರ್ಯ ಮತ್ತು ಧೈರ್ಯವನ್ನು ಹೆಚ್ಚಿಸುತ್ತದೆ.
ಗ್ರಹಗಳ ಪ್ರಭಾವ:
ಪರಿಶ್ರಮ ಮತ್ತು ಅಧಿಕಾರ :
ನಿಮ್ಮ ರಾಶ್ಯಾಧಿಪತಿ ಶನಿ ಮೂರನೇ ಮನೆಯಲ್ಲಿ ಬಲಿಷ್ಠನಾಗಿರುವುದರಿಂದ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕಚೇರಿಯಲ್ಲಿ ಅಥವಾ ಸಮಾಜದಲ್ಲಿ ನಿಮ್ಮ ಅಧಿಕಾರ ವ್ಯಾಪ್ತಿ ಹೆಚ್ಚಾಗಲಿದೆ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ಇದು ಸಕಾಲ. ಎದುರಾಳಿಗಳು ನಿಮ್ಮ ಮುಂದೆ ಮಂಡಿಯೂರುವರು.
ಕೃಷಿ ಮತ್ತು ಭೂಮಿ:
ಕೃಷಿಕರಿಗೆ ಈ ತಿಂಗಳು ಲಾಭದಾಯಕವಾಗಿದೆ. ಮೂರನೇ ಮನೆಯಲ್ಲಿರುವ ಕುಜ ಮತ್ತು ಶನಿ ಭೂಮಿಗೆ ಸಂಬಂಧಿಸಿದ ಹಳೆಯ ವಿವಾದಗಳನ್ನು ಬಗೆಹರಿಸುತ್ತಾರೆ. ತೋಟಗಾರಿಕಾ ಬೆಳೆಗಳನ್ನು ವಿಶೇಷವಾಗಿ ದೀರ್ಘಾವಧಿ ಬೆಳೆಗಳನ್ನು ಬೆಳೆಯಲು ಭೂಮಿ ಸಿದ್ಧಪಡಿಸಿಕೊಳ್ಳಬಹುದು. ಆದರೂ, ಶನಿಯ ಪ್ರಭಾವದಿಂದ ಅತಿಯಾದ ದೈಹಿಕ ಶ್ರಮ ಇರಲಿದೆ.
ಪ್ರೇಮ ಮತ್ತು ವಿವಾಹ:
ಶುಕ್ರನು 5ನೇ ಮನೆಯಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿ ಇರುವುದರಿಂದ ಪ್ರೇಮ ಸಂಬಂಧಗಳು ಗಟ್ಟಿಯಾಗುತ್ತವೆ. ಯಾರನ್ನಾದರೂ ಪ್ರೀತಿಸುತ್ತಿದ್ದರೆ ಅದನ್ನು ಮನೆಯವರಿಗೆ ತಿಳಿಸಲು ಇದು ಸುಸಮಯ. ವಿವಾಹ ಸಂಬಂಧಗಳು ಅಂತಿಮವಾಗಬಹುದು. ಸಣ್ಣಪುಟ್ಟ ವಿಹಾರ ಪ್ರವಾಸಗಳು ಮನಸ್ಸಿಗೆ ಮುದ ನೀಡುತ್ತವೆ.
ಸ್ವ-ಉದ್ಯೋಗ ಮತ್ತು ವ್ಯಾಪಾರ:
ವ್ಯಾಪಾರದಲ್ಲಿ ಈ ತಿಂಗಳು ವೇಗ ಕಂಡುಬರುತ್ತದೆ. ವಿಶೇಷವಾಗಿ ತಾಂತ್ರಿಕ ಕ್ಷೇತ್ರ, ಕಬ್ಬಿಣ ಅಥವಾ ಸಿವಿಲ್ ಕೆಲಸಗಳಲ್ಲಿ ತೊಡಗಿರುವವರಿಗೆ ಉತ್ತಮ ಆದಾಯವಿದೆ. ಸ್ವ-ಉದ್ಯೋಗಿಗಳಿಗೆ ಹೊಸ ಆರ್ಡರ್ಗಳು ಕೈ ಸೇರುತ್ತವೆ. ಆದರೆ, ಆರನೇ ಮನೆಯ ಗುರುವಿನ ಕಾರಣದಿಂದ ಹಣಕಾಸಿನ ವಹಿವಾಟಿನಲ್ಲಿ ಎಚ್ಚರಿಕೆ ಇರಲಿ. ಯಾರನ್ನೂ ಅತಿಯಾಗಿ ನಂಬಬೇಡಿ.
ಹವ್ಯಾಸ ಮತ್ತು ಕಲೆ:
ಕಲಾವಿದರಿಗೆ ಇದು ಸುವರ್ಣ ಕಾಲ. ಪಂಚಮ ಸ್ಥಾನದ ಶುಕ್ರ ನಿಮ್ಮ ಸೃಜನಶೀಲತೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತಾನೆ. ಹೊಸ ಹವ್ಯಾಸಗಳನ್ನು ಬೆಳೆಸಿಕೊಳ್ಳಲು ಅಥವಾ ಪ್ರದರ್ಶನ ನೀಡಲು ಇದು ಯಶಸ್ವಿ ತಿಂಗಳು.
ಹೂಡಿಕೆ:
ಹೂಡಿಕೆಯ ವಿಷಯದಲ್ಲಿ ಮಿಶ್ರ ಫಲವಿದೆ. ಸ್ಥಿರ ಆಸ್ತಿಯ ಮೇಲೆ ಹೂಡಿಕೆ ಮಾಡಲು ರವಿ ಮತ್ತು ಶನಿಯ ಪ್ರಭಾವ ಪೂರಕವಾಗಿದೆ. ಆದರೆ, ಷೇರು ಮಾರುಕಟ್ಟೆಯಲ್ಲಿ ಹೂಡುವ ಮುನ್ನ ಎಚ್ಚರವಿರಲಿ. 6ನೇ ಮನೆಯಲ್ಲಿರುವ ಗುರುವು ಅನಗತ್ಯ ಸಾಲ ಮಾಡದಂತೆ ಎಚ್ಚರಿಸುತ್ತಾನೆ. ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು, ಆಹಾರ ಕ್ರಮದ ಮೇಲೆ ನಿಗಾ ಇರಲಿ.
ಪ್ರತಿದಿನ ವಿಷ್ಣು ಸಹಸ್ರನಾಮ ಪಠಿಸಿ. ಗುರುವಾರದಂದು ದಾನ ಮಾಡಿ. ಶನಿವಾರದಂದು ಅನ್ನದಾನ ಮಾಡುವುದು ನಿಮ್ಮ ಕೆಲಸಗಳಲ್ಲಿರುವ ಅಡೆತಡೆಗಳನ್ನು ನಿವಾರಿಸುತ್ತದೆ.
ಪರಪುರುಷನೊಂದಿಗಿರುವ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ ಪತ್ನಿ! ನೊಂದ ಪತಿ ಸಾವಿಗೆ ಶರಣು
ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ (Affair) ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಪತ್ನಿಯ ಟಾರ್ಚರ್ಗೆ ಮಲೇಷ್ಯಾ ಉದ್ಯೋಗಿ ಸಾವು
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದಲ್ಲಿ ರಾಘವೇಂದ್ರ ವಾಡಕರ ಎಂಬುವವರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಒಂದು ವಾರದ ಹಿಂದಷ್ಟೇ ದಾಂಡೇಲಿಗೆ ಮರಳಿದ್ದರು. ಅವರು ಮರಳುತ್ತಿದ್ದಂತೆಯೇ ಪತ್ನಿ ಮೇಘಾ ಇಬ್ಬರು ಮಕ್ಕಳೊಂದಿಗೆ ಧಾರವಾಡದ ತವರು ಮನೆಗೆ ತೆರಳಿದ್ದರು.
ರಾಘವೇಂದ್ರ ಒಟ್ಟಿಗೆ ಸಂಸಾರ ಮಾಡೋಣ ಬಾ ಎಂದು ಕರೆದರೂ ಪತ್ನಿ ನಿರಾಕರಿಸಿದ್ದಳು. ನಿನ್ನ ಜೊತೆ ಸಂಸಾರ ಮಾಡಲು ಇಷ್ಟವಿಲ್ಲ, ಸತ್ತು ಹೋಗು ಎಂದು ಹೇಳಿದ್ದಲ್ಲದೆ, ಬೇರೊಬ್ಬ ಪುರುಷನ ಜೊತೆಗಿನ ಫೋಟೋಗಳನ್ನು ಸ್ಟೇಟಸ್ ಹಾಕಿಕೊಂಡು ಪತಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಳು ಎನ್ನಲಾಗಿದೆ. ತನ್ನ ಅನೈತಿಕ ಸಂಬಂಧದ ಬಗ್ಗೆ ಗಂಡನ ಬಳಿ ಬಹಿರಂಗವಾಗಿ ಹೇಳಿಕೊಂಡಿದ್ದ ಮೇಘಾ, ರಾಘವೇಂದ್ರ ಕೈ ಕೊಯ್ದುಕೊಂಡು ಫೋಟೋ ಕಳುಹಿಸಿದಾಗಲೂ ನೀನು ಸತ್ತರೂ ನನಗೆ ತೊಂದರೆಯಿಲ್ಲ ಎಂದು ಕ್ರೂರವಾಗಿ ಪ್ರತಿಕ್ರಿಯಿಸಿದ್ದಳು. ಈ ಎಲ್ಲಾ ಅವಮಾನ ಮತ್ತು ಕಿರುಕುಳದ ಬಗ್ಗೆ ಡೆತ್ ನೋಟ್ನಲ್ಲಿ ಉಲ್ಲೇಖಿಸಿ ರಾಘವೇಂದ್ರ ಸಾವನ್ನಪ್ಪಿದ್ದಾರೆ. ದಾಂಡೇಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ
ಬೆಂಗಳೂರಿನ ಹುಳಿಮಾವಿನ ಹಳೆಯ ಪೋಸ್ಟ್ ಆಫೀಸ್ ಬಳಿ ವಂದನಾ (23) ಎಂಬುವವರು ಪತಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬುವವರ ಜೊತೆ ಇವರ ವಿವಾಹವಾಗಿತ್ತು. ಈ ದಂಪತಿಗೆ ಮೂರು ತಿಂಗಳ ಮಗುವಿದೆ. ಮದುವೆಯ ಸಮಯದಲ್ಲಿ 4 ಲಕ್ಷ ರೂಪಾಯಿ ಖರ್ಚು ಮಾಡಿ ಬೈಕ್ ಹಾಗೂ ಚಿನ್ನಾಭರಣಗಳನ್ನು ನೀಡಿದ್ದರೂ, ಪತಿ ಹಾಗೂ ಕುಟುಂಬಸ್ಥರು ಪದೇ ಪದೇ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.
ಹಲವು ಬಾರಿ ರಾಜಿ ಸಂಧಾನ ಮಾಡಿದ್ದರೂ ಆರೋಪಿಗಳು ಬುದ್ಧಿ ಕಲಿತಿರಲಿಲ್ಲ. ಇದೀಗ ಗಂಡನ ಮನೆಯವರೇ ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೋಷಕರು ದೂರು ನೀಡಿದ್ದು, ಪತಿ ವಿಕ್ರಂ ಶೇಷ, ಮಾವ ಶ್ರೀನಿವಾಸ್ ಮತ್ತು ಮೈದುನ ವಿನಿಷ್ ವಿರುದ್ಧ ಹುಳಿಮಾವು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನವದೆಹಲಿ, ಮೇ 01:ಪಶ್ಚಿಮ ಬಂಗಾಳದ ಮತ ಎಣಿಕೆಗೆ ಕೇಂದ್ರ ಸರ್ಕಾರದ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕೆಂಬ ಚುನಾವಣಾ ಆಯೋಗದ ಆದೇಶದ ವಿರುದ್ಧ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ (ಟಿಎಂಸಿ) ಸಲ್ಲಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಆ ಮೂಲಕ ನ್ಯಾಯಾಲಯದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಹಿನ್ನಡೆಯಾಗಿದೆ. ಈ ಮೊದಲು ಕಲ್ಕತ್ತಾ ಹೈಕೋರ್ಟ್ ಕೂಡ ತೃಣಮೂಲ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಮತ ಎಣಿಕೆಯ ಸಂದರ್ಭದಲ್ಲಿ ಪಕ್ಷಗಳ ಪ್ರತಿನಿಧಿಗಳು ಹಾಜರಿರುತ್ತಾರೆ ಮತ್ತು ಚುನಾವಣಾ ಆಯೋಗದ ಸರ್ಕ್ಯುಲರ್ ನಿಯಮಗಳಿಗೆ ವಿರುದ್ಧವಾಗಿಲ್ಲ ಎಂದು ಪೀಠ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ. ಟಿಎಂಸಿ ಪರ ವಾದಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಮೀನಾಕ್ಷಿ ಅರೋರ, ಏಪ್ರಿಲ್ 13ರ ಸರ್ಕ್ಯುಲರ್ ಬಗ್ಗೆ ಏಪ್ರಿಲ್ 29ರವರೆಗೆ ಮಾಹಿತಿ ಸಿಗಲಿಲ್ಲ ಎನ್ನುವ ಮೂಲಕ ಆಯೋಗದ ನಿರ್ಧಾರವನ್ನು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಪರ ವಾದಿಸಿದ ಹಿರಿಯ ವಕೀಲ ಡಿ.ಎಸ್. ನಾಯ್ಡು, ಮತ ಎಣಿಕೆ ಪ್ರಕ್ರಿಯೆಯ ಮೇಲಿನ ಸಂಪೂರ್ಣ ನಿಯಂತ್ರಣ ರಾಜ್ಯ ಸರ್ಕಾರದ ಅಧಿಕಾರಿಯಾಗಿರುವ ರಿಟರ್ನಿಂಗ್ ಅಧಿಕಾರಿ ಕೈಯಲ್ಲೇ ಇರುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಾಗ್ಚಿ ಅವರಿದ್ದ ಪೀಠ, ಕೌಂಟಿಂಗ್ ಅಧಿಕಾರಿ ಕೇಂದ್ರ ಸರ್ಕಾರದ ಪ್ರತಿನಿಧಿ ಎಂದು ಹೇಳುವುದರಿಂದ ವಿಶೇಷ ವ್ಯತ್ಯಾಸವಿಲ್ಲ. ಇಂತಹ ನಿರ್ಧಾರಗಳು ಚುನಾವಣಾ ಆಯೋಗದ ವ್ಯಾಪ್ತಿಗೆ ಸೇರುತ್ತವೆ. ಜೊತೆಗೆ, ಪಕ್ಷಗಳಿಂದ ನೇಮಕಗೊಂಡ ಕೌಂಟಿಂಗ್ ಏಜೆಂಟ್ಗಳು, ಮೈಕ್ರೋ ಅಬ್ಸರ್ವರ್ಗಳು ಸೇರಿದಂತೆ ಹಲವಾರು ಮೇಲ್ವಿಚಾರಣಾ ವ್ಯವಸ್ಥೆಗಳು ಈಗಾಗಲೇ ಇವೆ ಎಂಬುದನ್ನು ಉಲ್ಲೇಖಿಸಿ ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.
ಮೇ 03ರಿಂದ ಮೇ 09ರವರೆಗೆ ಮೊದಲೇ ವಾರವಾಗಿದ್ದು ಗ್ರಹಗಳ ಗಮನವು ಪ್ರೇಮಕ್ಕೆ ಹೆಚ್ಚು ಪೂರಕವಾಗಿಯೇ ಇವೆ. ಹಳೆಯ ಬೇಸರ, ದುಃಖ, ಕೋಪ ತಾಪಗಳು ಒಂದೊಂದಾಗಿಯೇ ದೂರಾಗುವುದು. ವಿಚ್ಛೇದನಕ್ಕೆ ಪರಸ್ಪರರ ಒಪ್ಪಿಗೆಯನ್ನು ಎದುರು ನೋಡಿವರು.
ಮೇಷ ರಾಶಿ:
ಸಂಗಾತಿಯೊಂದಿಗೆ ಸಣ್ಣ ವಿಷಯಕ್ಕೆ ತರ್ಕ ಬೇಡ. ಪ್ರೇಮ ಜೀವನದಲ್ಲಿ ಉತ್ಸಾಹವಿದ್ದರೂ ತಾಳ್ಮೆ ಅಗತ್ಯ. ಅವಿವಾಹಿತರಿಗೆ ಹಿರಿಯರ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಸಂಬಂಧದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ.
ವೃಷಭ ರಾಶಿ:
ಪ್ರೇಮಿಗಳ ನಡುವೆ ಮಧುರ ಬಾಂಧವ್ಯವಿರಲಿದೆ. ಸಂಗಾತಿಯಿಂದ ಅನಿರೀಕ್ಷಿತ ಉಡುಗೊರೆ ಸಿಗಬಹುದು. ದಾಂಪತ್ಯದಲ್ಲಿ ಸುಖ ನೆಮ್ಮದಿ ಇರಲಿದ್ದು, ಹೊಸ ಸಂಬಂಧಗಳಿಗೆ ಇದು ಸಕಾಲ. ವಿಚ್ಛೇದನದ ಭೀತಿ ದೂರವಾಗಲಿದೆ.
ಮಿಥುನ ರಾಶಿ:
ಸಂವಹನದ ಕೊರತೆಯಿಂದ ಪ್ರೇಮದಲ್ಲಿ ವಿರಸ ಮೂಡಬಹುದು. ಮನಬಿಚ್ಚಿ ಮಾತನಾಡುವುದರಿಂದ ಸಮಸ್ಯೆ ಬಗೆಹರಿಯುತ್ತದೆ. ವಿವಾಹದ ಮಾತುಕತೆಗಳು ಸಕಾರಾತ್ಮಕವಾಗಿ ನಡೆಯಲಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ.
ಕರ್ಕಾಟಕ ರಾಶಿ:
ಹಳೆಯ ಪ್ರೇಮ ಪ್ರಕರಣಗಳು ಮರುಕಳಿಸಬಹುದು. ವೈವಾಹಿಕ ಜೀವನದಲ್ಲಿ ಸಾಮರಸ್ಯ ಹೆಚ್ಚಲಿದೆ. ವಿಚ್ಛೇದನ ಕೋರಿದವರಿಗೆ ರಾಜೀ ಸಂಧಾನದ ಅವಕಾಶವಿದೆ. ಪ್ರೇಮಿಗಳಿಗೆ ಮನೆಯವರ ಬೆಂಬಲ ಸಿಗುವ ಶುಭ ಕಾಲವಿದು.
ಸಿಂಹ ರಾಶಿ:
ಸಂಬಂಧದಲ್ಲಿ ಅಹಂಕಾರ ಬೇಡ. ಸಂಗಾತಿಯ ಭಾವನೆಗಳಿಗೆ ಗೌರವ ನೀಡಿ. ವಿವಾಹ ಆಕಾಂಕ್ಷಿಗಳಿಗೆ ಸ್ವಲ್ಪ ವಿಳಂಬವಾಗಬಹುದು. ಪ್ರೀತಿಯಲ್ಲಿ ನಂಬಿಕೆ ಮುಖ್ಯವಾಗಿದ್ದು, ಪರಸ್ಪರ ಅರ್ಥಮಾಡಿಕೊಳ್ಳಲು ಸಮಯ ಮೀಸಲಿಡಿ.
ಕನ್ಯಾ ರಾಶಿ:
ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಇದು ಸೂಕ್ತ ಸಮಯ. ದಾಂಪತ್ಯದಲ್ಲಿ ಪ್ರೀತಿ ಮತ್ತು ಕಾಳಜಿ ಹೆಚ್ಚಲಿದೆ. ಕಾನೂನಾತ್ಮಕ ಕೌಟುಂಬಿಕ ಸಮಸ್ಯೆಗಳಿದ್ದರೆ ಬಗೆಹರಿಯುವ ಹಾದಿಯಲ್ಲಿವೆ. ವಿವಾಹ ಯೋಗಗಳು ಪ್ರಬಲವಾಗಿವೆ.
ತುಲಾ ರಾಶಿ:
ಪ್ರೇಮಿಗಳ ನಡುವೆ ನವಿರಾದ ಬಾಂಧವ್ಯವಿರಲಿದೆ. ಸಂಗಾತಿಯೊಂದಿಗೆ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ವಿವಾಹ ಸಂಬಂಧಗಳು ಸ್ಥಿರವಾಗಲಿವೆ. ವೈವಾಹಿಕ ಜೀವನದಲ್ಲಿ ಇದ್ದ ಭಿನ್ನಾಭಿಪ್ರಾಯಗಳು ದೂರಾಗಿ ಸಂತಸ ಮನೆ ಮಾಡಲಿದೆ.
ವೃಶ್ಚಿಕ ರಾಶಿ:
ಸಂಬಂಧದಲ್ಲಿ ಅನುಮಾನಗಳಿಗೆ ಎಡೆಕೊಡಬೇಡಿ. ಪ್ರೇಮ ಜೀವನದಲ್ಲಿ ಕೆಲವು ಸವಾಲುಗಳು ಎದುರಾಗಬಹುದು. ವಿಚ್ಛೇದನದ ಹಂತದಲ್ಲಿರುವವರು ಸಮಾಧಾನದಿಂದ ಯೋಚಿಸುವುದು ಒಳಿತು. ದಾಂಪತ್ಯದಲ್ಲಿ ಸಮಾಧಾನ ಕಾಪಾಡಿಕೊಳ್ಳಿ.
ಧನುಸ್ಸು ರಾಶಿ:
ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಬರಲಿವೆ. ಪ್ರೇಮ ಜೀವನದಲ್ಲಿ ಪ್ರಗತಿ ಕಂಡುಬರಲಿದ್ದು, ವಿವಾಹಕ್ಕೆ ಮುದ್ರೆ ಬೀಳಬಹುದು. ಸಂಗಾತಿಯು ನಿಮ್ಮ ಕೆಲಸಗಳಿಗೆ ಬೆನ್ನೆಲುಬಾಗಿ ನಿಲ್ಲುವರು. ಒಟ್ಟಾರೆ ಸುಖದಿನಗಳು.
ಮಕರ ರಾಶಿ:
ಪ್ರೀತಿಯಲ್ಲಿ ಗಾಂಭೀರ್ಯವಿರಲಿ. ಸಂಗಾತಿಯ ಜೊತೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ವಿವಾಹ ಪ್ರಯತ್ನಗಳಲ್ಲಿ ಮಂದಗತಿ ಇರಲಿದೆ. ವಿಚ್ಛೇದನದ ವಿಚಾರದಲ್ಲಿ ತೀರ್ಪು ವಿಳಂಬವಾಗಬಹುದು. ತಾಳ್ಮೆಯಿಂದಿರಿ.
ಕುಂಭ ರಾಶಿ:
ಹೊಸ ವ್ಯಕ್ತಿಯ ಪರಿಚಯ ಪ್ರೇಮಕ್ಕೆ ತಿರುಗಬಹುದು. ವೈವಾಹಿಕ ಜೀವನದಲ್ಲಿ ಹೊಸ ಚೈತನ್ಯ ಬರಲಿದೆ. ಸಂಬಂಧಗಳಲ್ಲಿನ ಕಹಿ ನೆನಪುಗಳನ್ನು ಮರೆತು ಒಂದಾಗಲು ಶುಭ ಕಾಲ. ಕುಟುಂಬದವರಿಂದ ಬೆಂಬಲ ದೊರೆಯಲಿದೆ.
ಮೀನ ರಾಶಿ:
ಪ್ರೇಮಿಗಳಿಗೆ ಶುಭ ಫಲಗಳು ದೊರೆಯಲಿವೆ. ಸಂಬಂಧದಲ್ಲಿ ಬದ್ಧತೆ ಹೆಚ್ಚಲಿದೆ. ವಿವಾಹದ ಕನಸು ನನಸಾಗುವ ಕಾಲ ಹತ್ತಿರದಲ್ಲಿದೆ. ಸಂಗಾತಿಯ ನಡುವಿನ ಪ್ರೀತಿ ವೃದ್ಧಿಯಾಗಲಿದ್ದು, ನೆಮ್ಮದಿಯ ಜೀವನ ನಡೆಸುವಿರಿ.
ತುಮಕೂರು, ಮೇ 02: ಚಿನ್ನಾಭರಣ ಸಹಿತ ಪರಾರಿಯಾದ ಹೆಂಡತಿಯ (Wife) ನಡತೆಯಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನಿಬ್ಬರು ಪುಟ್ಟ ಮಕ್ಕಳನ್ನೂ ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿರುವ ಅಮಾನವೀಯ ಘಟನೆ ತುಮಕೂರು (Tumkuru)ಜಿಲ್ಲೆಯ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಲ್ಕೆರೆ ಗ್ರಾಮದ ಮಲ್ಲೇಶ್ವರಸ್ವಾಮಿ ದೇಗುಲದ ಅರ್ಚಕ ಹಾಗೂ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಶಿವಣ್ಣ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಸಾವಿಗೂ ಮುನ್ನ ಆತ ತನ್ನ ಮಕ್ಕಳಾದ ಜೀವನ್ (10) ಮತ್ತು ಪ್ರಾಣೇಶ್ (5) ಎಂಬುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಸಾವಿಗೆ ಕಾರಣವಾದ ಅಕ್ರಮ ಸಂಬಂಧ
ಶಿವಣ್ಣನ ಪತ್ನಿ ಪರಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಆಕೆ ತನ್ನ ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಓಡಿಹೋಗಿದ್ದಳು. ಈ ಸಂಬಂಧ ಶಿವಣ್ಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದ. ಪೊಲೀಸರ ಮಧ್ಯಸ್ಥಿಕೆಯ ನಂತರ ಪತ್ನಿ ಮನೆಗೆ ಮರಳಿ ಬಂದಿದ್ದಳು. ಆದರೆ, ಮರುದಿನವೇ ಶಿವಣ್ಣ ಕೆಲಸಕ್ಕೆ ಹೋದ ಸಮಯ ನೋಡಿಕೊಂಡು, ಮನೆಯಲ್ಲಿದ್ದ ಹಣ ಮತ್ತು ಚಿನ್ನಾಭರಣದೊಂದಿಗೆ ಆಕೆ ಮತ್ತೆ ಪಲಾಯನ ಮಾಡಿದ್ದಾಳೆ. ಪತ್ನಿಯ ಈ ನಡತೆಯಿಂದ ತೀವ್ರವಾಗಿ ಮನನೊಂದ ಶಿವಣ್ಣ, ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಸಾವಿನ ಹಾದಿ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಸಾಯಿಸಿ ತಂದೆಯೂ ಸಾವನ್ನಪ್ಪಿರುವ ಘಟನೆ ಗ್ರಾಮದಲ್ಲಿ ಸೂತಕದ ಛಾಯೆ ಮೂಡಿಸಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು, ಮೇ 02: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಡಿಕೆಶಿ ಖುಷಿಯಲ್ಲಿ ಆಸ್ಪತ್ರೆಗೆ ಬಂದು ಮೊಮ್ಮಗಳನ್ನು ಮುದ್ದಾಡುವ ಜೊತೆಗೆ ಮಗಳ ಆರೋಗ್ಯ ವಿಚಾರಿಸಿದ್ದರು. ವಿಶೇಷ ಅಂದ್ರೆ ಕಾರ್ಮಿಕ ದಿನಾಚರಣೆ, ಕರ್ನಾಟಕದ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಜನ್ಮದಿನ ಹಾಗೂ ಶುಭ್ರ ಪೂರ್ಣಿಮೆಯ ದಿನವೇ ತಾತನಾಗಿ ಡಿಸಿಎಂ ಭಡ್ತಿ ಪಡೆದಿದ್ದು, ಮಾಧ್ಯಮದವರ ಪ್ರಶ್ನೆಗೆ ಮುಗುಳ್ನಕ್ಕಿ ಸಂತಸ ವ್ಯಕ್ತಪಡಿಸಿದ್ದರು. ಈ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಡಿರುವ ಎಕ್ಸ್ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ.
ಸದಾ ಒಂದಿಲ್ಲೊಂದು ರಾಜಕೀಯ ವಿಚಾರಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಸಂಸದ ತೇಜಸ್ವಿಸೂರ್ಯ ನಡುವೆ ಜಟಾಪಟಿ ನಡೆಯುತ್ತಲೇ ಇರುತ್ತವೆ. ಈ ನಡುವೆಯೂ ಅಭಿವೃದ್ಧಿ ವಿಚಾರ ಬಂದಾಗ ಇಬ್ಬರೂ ಒಂದೇ ವೇದಿಕೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಉದಾಹರಣೆಗಳಿವೆ. ಅದರಂತೆ ನಿನ್ನೆಯೂ ವಿವಿಧ ಕಾಮಗಾರಿಗಳಿಗೆ ಚಾಲನೆ, ಶಂಕುಸ್ಥಾಪನೆ ನಿಮಿತ್ತ ಡಿಸಿಎಂ ಭಾಗವಹಿಸಿದ್ದ ಕೆಲ ಕಾರ್ಯಕ್ರಮಗಳಲ್ಲಿ ಸಂಸದರೂ ಭಾಗಿಯಾಗಿದ್ದರು. ಈ ವೇಳೆ ತಾನು ತಾತ ಆಗುತ್ತಿದ್ದೇನೆ ಎಂದು ಡಿಕೆಶಿ ತಮ್ಮ ಬಳಿ ಸಂತಸ ಹಂಚಿಕೊಂಡ ವಿಚಾರವನ್ನು ತೇಜಸ್ವಿ ಸೂರ್ಯ ತಮ್ಮ ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ.
ಇವತ್ತು DCM ಡಿ ಕೆ ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ.
ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, “ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ” ಎಂದರು
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆ ಬೆಂಗಳೂರು ದಕ್ಷಿಣದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜೊತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೇ ಫೋನ್ ಬರುತ್ತಿತ್ತು. ವಿಚಾರಿಸಿದಾಗ, ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ ಎಂದರು. ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರು. The first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ. ತಾತನಾದ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿ ಎಂದು ತೇಜಸ್ವಿ ಸೂರ್ಯ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ಬಾಲಿವುಡ್ನ ಐಕಾನಿಕ್ ಹಾಡುಗಳಾದ ‘ಏಕ್ ದೋ ತೀನ್’ ಮತ್ತು ‘ಡೋಲಾ ರೇ ಡೋಲಾ’ ಹಾಡುಗಳಿಗೆ ನೃತ್ಯ ಸಂಯೋಜಿಸಿ ಗಮನ ಸೆಳೆದವರು ಸರೋಜ್ ಖಾನ್. ತೆರೆಯ ಮೇಲೆ ಬಣ್ಣದ ಲೋಕವನ್ನು ಸೃಷ್ಟಿಸಿದ ಅವರ ವೈಯಕ್ತಿಕ ಜೀವನ ಮಾತ್ರ ಕಣ್ಣೀರಿನ ಕಥೆಯಂತಿತ್ತು. ಬಾಲ್ಯವಿವಾಹ, ಮೋಸ ಮತ್ತು ಜೀವನದ ಸಂಘರ್ಷಗಳ ನಡುವೆಯೇ ಅವರು ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ.
1948 ರಲ್ಲಿ ಮುಂಬೈನಲ್ಲಿ ನಿರ್ಮಲಾ ನಾಗಪಾಲ್ ಆಗಿ ಜನಿಸಿದ ಇವರು, ಬಡತನದ ಕಾರಣದಿಂದ ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದರು. ಕೇವಲ 13 ವರ್ಷದವರಿದ್ದಾಗ ತಮ್ಮ ನೃತ್ಯ ಗುರುಗಳಾದ 43 ವರ್ಷದ ಬಿ. ಸೋಹನ್ಲಾಲ್ ಅವರೊಂದಿಗೆ ವಿವಾಹವಾದರು. ‘ಮದುವೆ ಎಂದರೆ ಏನು ಎಂದು ತಿಳಿಯದ ವಯಸ್ಸಿನಲ್ಲಿ, ಅವರು ನನ್ನ ಕುತ್ತಿಗೆಗೆ ತಾಳಿ ಕಟ್ಟಿದರು. ನಾನು ಮದುವೆಯಾಯಿತು ಎಂದು ನಂಬಿದೆ’ ಎಂದು ಸರೋಜ್ ಖಾನ್ ಸಂದರ್ಶನವೊಂದರಲ್ಲಿ ಹೇಳಿದ್ದರು. ಈ ವಿವಾಹದ ನಂತರ ಅವರು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಸರೋಜ್ ಖಾನ್ ಎಂಬ ಹೆಸರನ್ನು ಪಡೆದರು.
ಸರೋಜ್ ಖಾನ್ 14ನೇ ವಯಸ್ಸಿನಲ್ಲಿ ಗರ್ಭಿಣಿಯಾದಾಗ ಅವರಿಗೆ ದೊಡ್ಡ ಶಾಕ್ ಕಾದಿತ್ತು. ಪತಿ ಸೋಹನ್ಲಾಲ್ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಅವರಿಗೆ ನಾಲ್ವರು ಮಕ್ಕಳಿದ್ದಾರೆ ಎಂಬ ಸತ್ಯ ಬಯಲಾಯಿತು. ಅಷ್ಟೇ ಅಲ್ಲದೆ, ಸೋಹನ್ಲಾಲ್ ಅವರು ಸರೋಜ್ ಖಾನ್ ಅವರ ಮಕ್ಕಳಿಗೆ ತಂದೆಯ ಹೆಸರನ್ನು ನೀಡಲು ನಿರಾಕರಿಸಿದರು. ಈ ದ್ರೋಹ ಮತ್ತು ನೋವಿನಿಂದ ಅವರು ಮಾನಸಿಕವಾಗಿ ಕುಗ್ಗಿಹೋದರೂ, ಧೈರ್ಯಗೆಡದೆ ತಮ್ಮ ಮಕ್ಕಳನ್ನು ಒಬ್ಬಂಟಿಯಾಗಿ ಸಾಕಲು ನಿರ್ಧರಿಸಿದರು.
1975 ರಲ್ಲಿ ಸರ್ದಾರ್ ರೋಷನ್ ಖಾನ್ ಅವರು ಸರೋಜ್ ಅವರನ್ನು ಮದುವೆಯಾಗಲು ಪ್ರಸ್ತಾಪಿಸಿದರು. ‘ನನ್ನ ಮಕ್ಕಳನ್ನು ಸ್ವೀಕರಿಸುವುದಾದರೆ ಮಾತ್ರ ನಾನು ಮದುವೆಯಾಗುತ್ತೇನೆ’ ಎಂಬ ಸರೋಜ್ ಅವರ ಷರತ್ತಿಗೆ ರೋಷನ್ ಒಪ್ಪಿದರು. ಈ ದಂಪತಿಗೆ ಸುಕೈನಾ ಎಂಬ ಮಗಳಿದ್ದಾಳೆ. ವೈಯಕ್ತಿಕವಾಗಿ ನೋವುಗಳನ್ನು ಕಂಡರೂ ಸರೋಜ್ ಖಾನ್ ವೃತ್ತಿಜೀವನದಲ್ಲಿ ಸೋಲಲಿಲ್ಲ.
ಸಂಜಯ್ ಲೀಲಾ ಭನ್ಸಾಲಿ ಅವರ ಪ್ರಕಾರ, ಸರೋಜ್ ಖಾನ್ ಅವರಿಗೆ ನೃತ್ಯವೆಂದರೆ ಪ್ರಾಣವಾಗಿತ್ತು. ಆಸ್ಪತ್ರೆಯ ಹಾಸಿಗೆಯಲ್ಲಿದ್ದಾಗಲೂ ಅವರು ಕೇಳುತ್ತಿದ್ದ ಮೊದಲ ಪ್ರಶ್ನೆ, ‘ಡೋಲಾ ರೇ ಡೋಲಾ ಹಾಡಿಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿ ನಾಣ್ಯಗಳನ್ನು ಎಸೆದರೇ?’ ಎಂಬುದಾಗಿತ್ತು. ನೋವಿನಲ್ಲೂ ನಗು ಮೂಡಿಸುತ್ತಾ, ಸಾವಿರಾರು ಜನರಿಗೆ ನೃತ್ಯ ಕಲಿಸಿದ ಈ ಮಹಾನ್ ಚೇತನದ ಬದುಕು ಇಂದಿಗೂ ಅನೇಕರಿಗೆ ಸ್ಫೂರ್ತಿ.