KKR vs GT: 34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಫಿನ್ ಅಲೆನ್ ಗುಜರಾತ್ ಟೈಟಾನ್ಸ್ ವಿರುದ್ಧ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈಡನ್ ಗಾರ್ಡನ್ಸ್‌ನಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದ ಅಲೆನ್ ಕೇವಲ 7 ರನ್​ಗಳಿಂದ ಶತಕ ವಂಚಿತರಾದರು. ಆದಾಗ್ಯೂ ಅಲೆನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಫಿನ್ ಅಲೆನ್ ಕೇವಲ 35 ಎಸೆತಗಳಲ್ಲಿ ನಾಲ್ಕು ಬೌಂಡರಿಗಳು ಮತ್ತು ಹತ್ತು ಸಿಕ್ಸರ್‌ಗಳ ಸಹಿತ 93 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ವಾಸ್ತವವಾಗಿ ಅಲೆನ್​ಗೆ ಈ ಪಂದ್ಯದಲ್ಲಿ ಎರಡು ಜೀವದಾನಗಳು ಸಿಕ್ಕವು. ಇನ್ನಿಂಗ್ಸ್​ನ ಆರಂಭದಲ್ಲಿ ಹೋಲ್ಡನ್ ಸ್ವಲ್ಪ ಕಷ್ಟಕರವಾದ ಕ್ಯಾಚ್ ಬಿಟ್ಟರೆ, ಅಲೆನ್ 34 ರನ್ ಬಾರಿಸಿದ್ದಾಗ ಮೊಹಮ್ಮದ್ ಸಿರಾಜ್ ಸುಲಭವಾದ ಕ್ಯಾಚ್​ ಕೈಬಿಟ್ಟರು. ಈ ಎರಡು ಜೀವದಾನಗಳ ಲಾಭ ಪಡೆದ ಅಲೆನ್ ಗುಜರಾತ್ ಬೌಲರ್​ಗಳನ್ನು ಹೈರಾಣಾಗಿಸಿದರು.

Source link

ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ! – Kannada News | Hubballi Law and Order Crisis: Family Brawl in Police Station Over Love, Pregnant Woman Assaulted

, ಹುಬ್ಬಳ್ಳಿ ಪೊಲೀಸ್ ಠಾಣೆ ಗಲಾಟೆImage Credit source: Tv9 kannada

ಹುಬ್ಬಳ್ಳಿ, ಮೇ.16: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್ ಠಾಣೆಯ ಒಳಗೇ ಎರಡು ಕುಟುಂಬಗಳ ಮಧ್ಯೆ ಭೀಕರ ಗಲಾಟೆ ನಡೆದಿದ್ದು, ಪೊಲೀಸರ ಕಣ್ಣೆದುರಲ್ಲೇ ಗರ್ಭಿಣಿ ಮಹಿಳೆ ಸೇರಿದಂತೆ ಯುವಕನ ಕುಟುಂಬಸ್ಥರ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

ಈಶ್ವರ ತಾಳಂಬರಿ ಮತ್ತು ನಿಖಿತಾ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ, ಇವರ ಪ್ರೇಮ ಸಂಬಂಧಕ್ಕೆ ಯುವತಿ ನಿಖಿತಾ ಕುಟುಂಬಸ್ಥರಿಂದ ತೀವ್ರ ವಿರೋಧವಿತ್ತು. ಇದೇ ವಿಚಾರವಾಗಿ ಯುವತಿಯ ಸಹೋದರ ಗಿರೀಶ್ ಎಂಬಾತ ಈಶ್ವರ್ ಮೇಲೆ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಬಗ್ಗೆ ದೂರು ನೀಡಲು ಈಶ್ವರ್ ತನ್ನ ಕುಟುಂಬಸ್ಥರೊಂದಿಗೆ ಕೇಶ್ವಾಪುರ ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಈಶ್ವರ್ ಕುಟುಂಬ ದೂರು ನೀಡಲು ಬಂದ ವಿಷಯ ತಿಳಿದು ಯುವತಿಯ ಕಡೆಯವರು ಕೂಡ ಠಾಣೆಗೆ ಧಾವಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿಯ ಕಣ್ಣೆದುರಲ್ಲೇ ಮಾತಿಗೆ ಮಾತು ಬೆಳೆದು, ಯುವತಿಯ ಕಡೆಯವರು ಠಾಣೆಯ ಒಳಗೇ ಇಟ್ಟಿದ್ದ ಕಟ್ಟಿಗೆಯಿಂದ ಯುವಕನ ಕುಟುಂಬಸ್ಥರ ಮೇಲೆ ಮುಗಿಬಿದ್ದಿದ್ದಾರೆ. ಹಲ್ಲೆಯ ತೀವ್ರತೆಗೆ ಗರ್ಭಿಣಿ ಮಹಿಳೆ ಎಂದೂ ನೋಡದೆ ಆಕೆಯ ಮೇಲೂ ಕೈ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಠಾಣೆಯ ಒಳಗೆ ಗಲಾಟೆ ಜೋರಾಗುತ್ತಿದ್ದಂತೆ ಅಲ್ಲಿದ್ದ ಸಿಬ್ಬಂದಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಯುವಕ ಈಶ್ವರ್‌ನನ್ನು ತಕ್ಷಣವೇ ಚಿಕಿತ್ಸೆಗಾಗಿ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬಗಳಿಂದ ದೂರು ಮತ್ತು ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೊಮೆಟೋದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಮನೆಯ ಮೂಲೆಗಳಲ್ಲಿಟ್ಟರೆ ಜಿರಳೆಗಳ ಕಾಟವೇ ಇರೋದಿಲ್ಲ – Kannada News | These simple home remedies are effective in getting rid of cockroach

ಮನೆಯನ್ನು ಎಷ್ಟೇ ಸ್ವಚ್ಛವಾಗಿ ಇಟ್ಟುಕೊಂಡರೂ ಜಿರಳೆಗಳ (cockroach) ಹಾವಳಿ ಇದ್ದೇ ಇರುತ್ತದೆ. ಅದರಲ್ಲೂ ಅಡುಗೆ ಮನೆಯಲ್ಲಿ ಇವುಗಳ ಕಾಟ ತುಸು ಹೆಚ್ಚೇ ಇರುತ್ತದೆ. ಆಹಾರ ಪದಾರ್ಥಗಳನ್ನಿಟ್ಟಿರುವ ಸ್ಥಳ, ಸಿಂಕ್‌, ಕಸದ ಬುಟ್ಟಿ ಇತ್ಯಾದಿ ಸ್ಥಳಗಳಲ್ಲಿ ಜಿರಳೆಗಳು ಹೆಚ್ಚಾಗಿ ಓಡಾಡುತ್ತಿರುತ್ತವೆ. ಹೀಗೆ ಸುಳಿದಾಡುವ ಇವು ಪಾತ್ರೆಗಳು, ಆಹಾರ ಪದಾರ್ಥಗಳನ್ನು ಸ್ಪರ್ಶಿಸುವ ಮೂಲಕ ನಮಗೆ ರೋಗಗಳನ್ನು ಹರಡುತ್ತವೆ. ಇದು ಅಲರ್ಜಿ, ಕೆಂಪು, ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳನ್ನು ಉಂಟು ಮಾಡಬಹುದು. ಹಾಗಾಗಿ ಇವುಗಳ ಹಾವಳಿಯಿಂದ ಮುಕ್ತಿ ಪಡೆಯಲು ಬಹುತೇಕರು ರಾಸಯನಿಕಯುಕ್ತ ಸ್ಪ್ರೇ ಇತ್ಯಾದಿ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇದು ಆರೋಗ್ಯದ ದೃಷ್ಟಿಯಿಂದ ಅಷ್ಟೇನೂ ಒಳ್ಳೆಯದಲ್ಲ. ಹೀಗಿರುವಾಗ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜೊತೆಗೆ ಟೊಮೆಟೋದಲ್ಲಿ ಈ ಎರಡು ವಸ್ತುಗಳನ್ನು ಬೆರೆಸಿ ಜಿರಳೆಗಳು ಓಡಾಡುವ ಸ್ಥಳದಲ್ಲಿ ಇರುವ ಮೂಲಕ ಇವುಗಳ ಹಾವಳಿಯಿಂದ ಮುಕ್ತಿ ಪಡೆಯಬಹುದು.

ಜಿರಳೆಗಳ ಹಾವಳಿಯಿಂದ ಮುಕ್ತಿ ಪಡೆಯಲು ಇಲ್ಲಿದೆ ಸುಲಭ ಉಪಾಯ:

ನಿಮ್ಮ ಅಡುಗೆಮನೆಯಲ್ಲಿ ಮತ್ತು ನಿಮ್ಮ ಕೋಣೆಗಳಲ್ಲಿ ಜಿರಳೆಗಳು ಓಡಾಡುವುದನ್ನು ನೀವು ನೋಡಿದರೆ, ಅವುಗಳು ಎಲ್ಲಿ ಓಡಾಡುತ್ತದೆಯೋ ಅಲ್ಲಿ ಟೊಮೆಟೊದಲ್ಲಿ ಅಡುಗೆ ಸೋಡಾ ಮತ್ತು ಸಕ್ಕರೆಯನ್ನು ಮಿಶ್ರಣ ಮಾಡಿ ಇಟ್ಟುಬಿಡಿ. ಈ ಪರಿಣಾಮಕಾರಿ ಮನೆಮದ್ದು ಜಿರಳೆಗಳನ್ನು ಪರಿಣಾಮಕಾರಿಯಾಗಿ ತೊಡೆದು ಹಾಕುತ್ತವೆ. ಇದಕ್ಕಾಗಿ ಟೊಮೆಟೊವನ್ನು ಕತ್ತರಿಸಿ, ಅದರ ಬೀಜಗಳು ಮತ್ತು ತಿರುಳನ್ನು ತೆಗೆದುಹಾಕಿ ಬಳಿಕ ಅದಕ್ಕೆ ಅರ್ಧ ಟೀಚಮಚ ಅಡಿಗೆ ಸೋಡಾ ಮತ್ತು ಒಂದು ಟೀಚಮಚ ಸಕ್ಕರೆಯನ್ನು ಹಾಕಿ ಮಿಶ್ರಣ ಮಾಡಿ,  ಜಿರಳೆಗಳು ಹೆಚ್ಚಾಗಿ ಇರುವ ಪ್ರದೇಶಗಳಲ್ಲಿ ಇರಿಸಿ. ಸಕ್ಕರೆ ಮತ್ತು ಟೊಮೆಟೊದ ವಾಸನೆಗೆ ಈ ಮಿಶ್ರಣದತ್ತ ಬರುವ ಜಿರಳೆಗಳು ಈ ಮಿಶ್ರಣವನ್ನು ತಿಂದು ಸಾಯುತ್ತವೆ.

ಇದನ್ನೂ ಓದಿ: ಬೇಸಿಗೆಯಲ್ಲಿ ಹಾವುಗಳು ಪದೇ ಪದೇ ಮನೆ ಬಳಿ ಕಾಣಿಸಿಕೊಳ್ಳಲು ಮರ ಗಿಡಗಳೇ ಮುಖ್ಯ ಕಾರಣ

ಜಿರಳೆಗಳನ್ನು ಓಡಿಸುವ ಇತರೆ ಪರಿಣಾಮಕಾರಿ ಮನೆಮದ್ದುಗಳು:

  • ನಿಮ್ಮ ಅಡುಗೆಮನೆಯ ಸಿಂಕ್, ಕಪಾಟು ಅಥವಾ ಡ್ರಾಯರ್‌ನಲ್ಲಿ ಕೆಲವು ಪಲಾವ್‌ ಎಲೆಗಳನ್ನು ಇರಿಸಿ. ಅವುಗಳ ವಾಸನೆಯು ಜಿರಳೆಗಳನ್ನು ಓಡಿಸುತ್ತವೆ.
  • 1-2 ಚಮಚ ಬೇವಿನ ಎಣ್ಣೆಯನ್ನು ನೀರಿನೊಂದಿಗೆ ಬೆರೆಸಿ. ಅದನ್ನು ಸ್ಪ್ರೇ ಬಾಟಲಿಯಲ್ಲಿ ಹಾಕಿ ಜಿರಳೆಗಳು ಓಡಾಡಸುವ ಸ್ಥಳದಲ್ಲಿ ಸಿಂಪಡಿಸಿ.
  • ನಿಮ್ಮ ಅಡುಗೆಮನೆ ಮತ್ತು ಸ್ನಾನಗೃಹದಲ್ಲಿ ಎಲ್ಲೆಡೆ ಕರ್ಪೂರದ ತುಂಡುಗಳನ್ನು ಇರಿಸಿ. ಇದರ ವಾಸನೆಗೆ ಜಿರಳೆಗಳು ಓಡಿ ಹೋಗುತ್ತವೆ.
  • ನೆಲ ಒರೆಸುವ ನೀರಿಗೆ ಬಿಳಿ ವಿನೆಗರ್ ಮತ್ತು ನಿಂಬೆ ರಸವನ್ನು ಸೇರಿಸಿ, ಆ ನೀರಿನಲ್ಲಿ ನೆಲ ಒರೆಸಿ, ಇದು ಜಿರಳೆಗಳು ಮತ್ತು ಇರುವೆಗಳನ್ನು ಓಡಿಸುತ್ತವೆ. ನೆಲದ ಮೇಲೆ ಅಂಟಿರುವ ಇದು ಬ್ಯಾಕ್ಟೀರಿಯಾಗಳನ್ನು ಸಹ ಕೊಲ್ಲುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀಟ್ ಹಗರಣದ ಬೆನ್ನಲ್ಲೇ ಎನ್‌ಟಿಎ ಸರ್ಜರಿ: ನಾಲ್ವರು ಖಡಕ್ ಅಧಿಕಾರಿಗಳ ಎಂಟ್ರಿ – Kannada News | NTA Overhaul: Joint Secretaries Appointed; NEET UG Shifts to Online Exams from 2027

ದೆಹಲಿ, ಮೇ16: ನೀಟ್-ಯುಜಿ (NEET-UG 2026) ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಹಗರಣದ ತನಿಖೆಯನ್ನು ಸಿಬಿಐ (CBI) ಚುರುಕುಗೊಳಿಸಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯನ್ನು ಸಂಪೂರ್ಣವಾಗಿ ಪುನರ್ರಚಿಸಲು ಮುಂದಾಗಿದೆ. ಶನಿವಾರದ (ಮೇ.16) ಮಹತ್ವದ ಬೆಳವಣಿಗೆಯಲ್ಲಿ, ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಎನ್‌ಟಿಎಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು (Joint Secretaries) ಮತ್ತು ಇಬ್ಬರು ಜಂಟಿ ನಿರ್ದೇಶಕರನ್ನು (Joint Directors) ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅನುಜಾ ಬಾಪತ್ (ISS – 1998 ಬ್ಯಾಚ್) ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಅವಧಿಗೆ ನೇಮಕ. ರುಚಿತಾ ವಿಜ್ (IRS ಕಸ್ಟಮ್ಸ್ – 2004 ಬ್ಯಾಚ್) ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಅವಧಿಗೆ ನೇಮಕ. ಆಕಾಶ್ ಜೈನ್ (IRS ಆದಾಯ ತೆರಿಗೆ – 2013 ಬ್ಯಾಚ್) ಜಂಟಿ ನಿರ್ದೇಶಕರಾಗಿ ನೇಮಕ. ಆದಿತ್ಯ ರಾಜೇಂದ್ರ ಭೋಜಗಾಢಿಯಾ (IA&AS – 2013 ಬ್ಯಾಚ್) ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಪೇಪರ್ ಲೀಕ್ ಜಾಲಕ್ಕೆ ಶಾಶ್ವತ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ (2027) ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (Computer-Based Test) ಆನ್‌ಲೈನ್ ಮಾದರಿಯಲ್ಲಿ ನಡೆಸುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಇದನ್ನೂ ಓದಿ: ಮಗುವಿನ ಹೊಟ್ಟೆಯಲ್ಲಿದ್ದ 25 ಸೆಂ.ಮೀ ಕೂದಲಿನ ಗುಡ್ಡೆ ಹೊರಗೆ ತೆಗೆದ ವೈದ್ಯರು!

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಎನ್‌ಟಿಎ ಸಂಸ್ಥೆಯಲ್ಲಿ ಲೋಪದೋಷಗಳಿರುವುದನ್ನು ಒಪ್ಪಿಕೊಂಡಿದ್ದು, “ಸಂಸ್ಥೆಯನ್ನು ಶೂನ್ಯ-ದೋಷ (Zero-Error) ಮುಕ್ತವಾಗಿಸುವುದು ನಮ್ಮ ಜವಾಬ್ದಾರಿ, ಇದಕ್ಕಾಗಿ ಬಲವಾದ ಸುಧಾರಣೆಗಳನ್ನು ತರುತ್ತೇವೆ” ಎಂದು ಹೇಳಿದ್ದಾರೆ. ಕಳೆದ ಮೇ 3 ರಂದು ನಡೆದಿದ್ದ, ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಪೇಪರ್ ಲೀಕ್ ಆರೋಪದ ಹಿನ್ನೆಲೆಯಲ್ಲಿ ಈ ವಾರದ ಆರಂಭದಲ್ಲಿ ರದ್ದುಗೊಳಿಸಲಾಗಿತ್ತು. ಪ್ರಸ್ತುತ ಈ ಮರುಪರೀಕ್ಷೆಯನ್ನು (Retest) ಜೂನ್ 21 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:00 pm, Sat, 16 May 26

Source link

ಸೊಳ್ಳೆ ಓಡಿಸಲು ಬಳಸುವ ಅಗರಬತ್ತಿಗಳಿಂದ ಬರಬಹುದು ಗಂಭೀರ ಕಾಯಿಲೆ! ಸಮೀಕ್ಷೆಯಲ್ಲಿ ಆತಂಕಕಾರಿ ಮಾಹಿತಿ ಬಹಿರಂಗ – Kannada News | Is Your Mosquito Agarbatti Safe? How To Identify Legal Vs Illegal Brands

ಮನೆಗಳಲ್ಲಿ ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಅನೇಕರು ಸೊಳ್ಳೆ ಅಗರಬತ್ತಿ (Mosquito Agarbatti), ಕಾಯಿಲ್ ಮತ್ತು ವಿವಿಧ ಮಸ್ಕಿಟೋ ರಿಪೆಲೆಂಟ್‌ಗಳನ್ನು ಬಳಸುತ್ತಾರೆ. ಇವು ಸೊಳ್ಳೆಗಳನ್ನು ದೂರವಿಡಲು ಸಹಾಯ ಮಾಡಿದರೂ, ಎಲ್ಲ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿರುತ್ತವೆ ಎನ್ನುವುದು ತಪ್ಪು ಕಲ್ಪನೆ. ಅದರಲ್ಲಿಯೂ ಇತ್ತೀಚೆಗೆ ಬಿಡುಗಡೆಯಾದ ಎಚ್ಐಸಿಎ (Home Insect Control Association) ಎಂಬ ಸಮೀಕ್ಷೆ ಈ ಬಗ್ಗೆ ಆತಂಕವನ್ನು ವ್ಯಕ್ತಪಡಿಸಿದ್ದು ಇವು ಸೊಳ್ಳೆಗಳನ್ನು ಸಾಯಿಸುವುದರ ಜೊತೆಗೆ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಸಿಐಆರ್ ನೋಂದಣಿ ಸಂಖ್ಯೆ ಇಲ್ಲದ ಸೊಳ್ಳೆ ನಿವಾರಕ ಉತ್ಪನ್ನಗಳನ್ನು ಖರೀದಿ ಮಾಡಬಾರದು ಎಂದು ಹೇಳಿದೆ. ಹಾಗಾದರೆ ಸಮೀಕ್ಷೆ ಹೇಗೆ ನಡೆಸಲಾಗಿತ್ತು, ಸೊಳ್ಳೆ ಅಗರಬತ್ತಿಗಳು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಚ್ಐಸಿಎ ಸಮೀಕ್ಷೆಯಲ್ಲಿ ಬಹಿರಂಗವಾದ ವಿಷಯಗಳು;

ಈ ಸಮೀಕ್ಷೆಯನ್ನು ದೇಶದ 12 ನಗರಗಳಲ್ಲಿ ನಡೆಸಲಾಗಿದ್ದು ಇದರಲ್ಲಿ 1,264 ಕುಟುಂಬಗಳು ಮತ್ತು 405 ವೈದ್ಯರು ಒಳಗೊಂಡಿದ್ದರು. ಸಮೀಕ್ಷೆಯ ಪ್ರಕಾರ, 70 ಶೇಕಡಾ ವೈದ್ಯರು ಅನಧಿಕೃತ ಸೊಳ್ಳೆ ಅಗರಬತ್ತಿಗಳ ಹೊಗೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಅದೇ ರೀತಿ 67 ಶೇಕಡಾ ವೈದ್ಯರು, ಕೆಲವು ಸೊಳ್ಳೆ ಅಗರಬತ್ತಿಗಳ ಹೊಗೆ ಸಿಗರೇಟ್ ಹೊಗೆಯಷ್ಟೇ ಹಾನಿಕಾರಕವಾಗಿರಬಹುದು ಎಂದು ತಿಳಿಸಿದ್ದಾರೆ. ವಿಶೇಷವಾಗಿ ಸಿಐಆರ್ (Central Insecticides Registration) ನೋಂದಣಿ ಸಂಖ್ಯೆ ಇಲ್ಲದ ಉತ್ಪನ್ನಗಳನ್ನು ಬಳಸಬಾರದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಸೊಳ್ಳೆ ಅಗರಬತ್ತಿಯ ಹೊಗೆ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ?

ನಿರಂತರವಾಗಿ ಸೊಳ್ಳೆ ಅಗರಬತ್ತಿ ಅಥವಾ ಕಾಯಿಲ್ ಬಳಕೆ ಮಾಡಿದರೆ ಉಸಿರಾಟದ ತೊಂದರೆ, ಕೆಮ್ಮು, ಗಂಟಲು ಕೆರೆತ ಮತ್ತು ಎದೆ ಉರಿ ಕಾಣಿಸಬಹುದು. ಕೆಲವರಿಗೆ ಕಣ್ಣಿನಲ್ಲಿ ಉರಿ, ತಲೆನೋವು ಮತ್ತು ಅಲರ್ಜಿ ಸಮಸ್ಯೆಯೂ ಕಾಣಿಸಬಹುದು. ಆಸ್ತಮಾ, ಸಿಓಪಿಡಿ ಮತ್ತು ಅಲರ್ಜಿ ಸಮಸ್ಯೆ ಇರುವವರಿಗೆ ಈ ಹೊಗೆ ಹೆಚ್ಚು ಅಪಾಯಕಾರಿಯಾಗಿದೆ. ಮಕ್ಕಳ ಮತ್ತು ವೃದ್ಧರ ಶ್ವಾಸಕೋಶಗಳು ಸಂವೇದನಾಶೀಲವಾಗಿರುವುದರಿಂದ ಅವರಿಗೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ, ಸಣ್ಣ ಅಸಡ್ಡೆಯೂ ಜೀವಕ್ಕೆ ಮಾರಕ

ಸುರಕ್ಷಿತವಾಗಿ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು?

ಸೊಳ್ಳೆ ನಿವಾರಕ ಉತ್ಪನ್ನಗಳನ್ನು ಖರೀದಿಸುವಾಗ ಪ್ಯಾಕ್ ಮೇಲೆ ಸಿಐಆರ್ ನೋಂದಣಿ ಸಂಖ್ಯೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಲೇಬಲ್ ಇಲ್ಲದ ಅಥವಾ ಸ್ಥಳೀಯ ಅನಧಿಕೃತ ಉತ್ಪನ್ನಗಳನ್ನು ಬಳಸುವುದನ್ನು ತಪ್ಪಿಸುವುದು ಉತ್ತಮ. ಕೊಠಡಿಯಲ್ಲಿ ಗಾಳಿ ಸರಿಯಾಗಿ ಓಡಾಡುವಂತೆ ನೋಡಿಕೊಳ್ಳಬೇಕು. ಮಕ್ಕಳ ಹಾಗೂ ವೃದ್ಧರ ಕೋಣೆಗೆ ನಿರಂತರವಾಗಿ ಹೊಗೆ ಹೋಗುವುದನ್ನು ತಪ್ಪಿಸಬೇಕು. ಮಸ್ಕಿಟೋ ನೆಟ್, ಕಿಟಕಿಗಳಿಗೆ ಜಾಲಿ ಹಾಕುವುದು ಮುಂತಾದ ಸುರಕ್ಷಿತ ಪರ್ಯಾಯಗಳನ್ನು ಬಳಸುವುದು ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KKR vs GT: ಐಪಿಎಲ್‌ನಲ್ಲಿ ವಿಶೇಷ ದ್ವಿಶತಕ ಪೂರೈಸಿದ ಸುನಿಲ್ ನರೈನ್

Source link

PBKS vs RCB: ಆರ್​ಸಿಬಿಗೆ ಪಂಜಾಬ್ ಎದುರಾಳಿ; ಬದಲಾದ ಸಮಯದಲ್ಲಿ ನಡೆಯಲಿದೆ ಪಂದ್ಯ – Kannada News | RCB vs PBKS IPL 2026: Final Rematch! Match 61 Date, Time, Venue and Streaming

ಐಪಿಎಲ್ 2026 (IPL 2026) ರ 61 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ನಡೆಯಲಿದೆ. ಕಳೆದ ಐಪಿಎಲ್ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ಈ ಎರಡೂ ತಂಡಗಳು ಆ ಪಂದ್ಯದ ನಂತರ ಇದೇ ಮೊದಲ ಬಾರಿಗೆ ಎದುರು ಬದುರಾಗಿವೆ. ಒಂದೆಡೆ ಆರ್​ಸಿಬಿ ಫೈನಲ್​ನಲ್ಲಿ ಸೋಲಿಸಿದಂತೆ ಈ ಪಂದ್ಯದಲ್ಲೂ ಸೋಲಿಸಿ ಪ್ಲೇಆಫ್‌ಗೆ ಟಿಕೆಟ್ ಖಚಿತಪಡಿಸುವ ಇರಾದೆಯಲ್ಲಿದ್ದರೆ, ಇತ್ತ ಪಂಜಾಬ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಲು ಯತ್ನಿಸಲಿದೆ. ಪ್ರಸ್ತುತ ಪಾಯಿಂಟ್ ಪಟ್ಟಿಯಲ್ಲಿ ಆರ್​ಸಿಬಿ ಅಗ್ರಸ್ಥಾನದಲ್ಲಿದ್ದರೆ, ಪಂಜಾಬ್ ತಂಡ ನಾಲ್ಕನೇ ಸ್ಥಾನದಲ್ಲಿದೆ.

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61 ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61 ನೇ ಪಂದ್ಯ ಮೇ 17 ರಂದು ನಡೆಯಲಿದೆ.

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61 ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61 ನೇ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ.

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61 ನೇ ಪಂದ್ಯ ಎಷ್ಟು ಗಂಟೆಗೆ ಆರಂಭ?

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61 ನೇ ಪಂದ್ಯ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಭಾರತೀಯ ಕಾಲಮಾನ ಮಧ್ಯಾಹ್ನ 3:00 ಗಂಟೆಗೆ ನಡೆಯಲಿದೆ.

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61ನೇ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಆರ್​​ಸಿಬಿ ಹಾಗೂ ಪಂಜಾಬ್ ನಡುವಿನ ಐಪಿಎಲ್ 2026 ರ 61ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಟಿಮ್ ಡೇವಿಡ್, ಜಾಕೋಬ್ ಬೆಥೆಲ್, ರೊಮಾರಿಯೊ ಶೆಫರ್ಡ್, ಜೋಶ್ ಹ್ಯಾಜಲ್‌ವುಡ್, ನುವಾನ್ ತುಷಾರ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ರಸಿಖ್ ದಾರ್, ಭುವನೇಶ್ವರ್ ಕುಮಾರ್, ಜೋರ್ಡಾನ್ ಕಾಕ್ಸ್, ವೆಂಕಟ್ ಸಿಂಗ್, ಸುಯಶ್ ಲ್ಯೂನ್ ಕಾಕ್ಸ್, ವೆಂಕಟ್ ಸಿಂಗ್ ಶರ್ಮಾ, ಭುವನೇಶ್ವರ್ ಕುಮಾರ್ ಕಾನಿಷ್ಕ್ ಚೌಹಾಣ್, ಅಭಿನಂದನ್ ಸಿಂಗ್, ಮಂಗೇಶ್ ಯಾದವ್, ಫಿಲ್ ಸಾಲ್ಟ್, ಸಾತ್ವಿಕ್ ದೇಸ್ವಾಲ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ.

ಪಂಜಾಬ್ ಕಿಂಗ್ಸ್ : ಶ್ರೇಯಸ್ ಲಿಯಾನ್ (ನಾಯಕ), ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಉಮರ್‌ಜಾಯ್, ವಿಜಯ್‌ಕುಮಾರ್ ವೈಶಾಕ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ಹರ್‌ಪ್ರೀತ್ ಬ್ರಾರ್, ಸೂರ್ಯಾಂಶ್ ಶೆಡ್ಜ್, ವಿಷ್ಣು ವಿನೋದ್ (ವಿಕೆಟ್ ಕೀಪರ್), ಕ್ಸೇವಿಯರ್ ಬಾರ್ಟ್ಲೆಟ್, ಯಶ್ ಠಾಕೂರ್, ಮಿಚೆಲ್ ಓವನ್, ಹರ್ನೂರ್ ಸಿಂಗ್, ಮುಶೀರ್ ಖಾನ್, ಪಾಯಲ್ ಅವಿನಾಶ್, ಮಾರ್ಕೊ ಯಾನ್ಸನ್, ಲಾಕಿ ಫರ್ಗುಸನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು! – Kannada News | Mysuru, Ballari Lightning Tragedy: Two Dead Amidst Rain; Weather Dept Issues Warning

ಮೈಸೂರು, ಮೇ.16: ರಾಜ್ಯಾದ್ಯಂತ ಹವಾಮಾನ ವೈಪರೀತ್ಯದ ಬೆನ್ನಲ್ಲೇ ಮಳೆರಾಯನ ಆರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು (ಮೇ.16) ಸಂಜೆ ಸಂಭವಿಸಿದ ಪ್ರತ್ಯೇಕ ಸಿಡಿಲು ಬಡಿತದ ದುರಂತಗಳಲ್ಲಿ ಓರ್ವ ರೈತ ಮಹಿಳೆ ಹಾಗೂ ಯುವಕ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಸಿಡಿಲು ಬಡಿದು ಆಲನಹಳ್ಳಿ ನಿವಾಸಿಯಾದ ವಿನೋದಾ ಎಂಬ ರೈತ ಮಹಿಳೆ ಮೃತಪಟ್ಟಿದ್ದಾರೆ. ಇಂದು ಸಂಜೆ ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮಳೆಯಿಂದಾಗಿ ವಾಪಸ್ ಮನೆಗೆ ಕರೆತರಲು ಹೋದಾಗ ಈ ದುರ್ಘಟನೆ ಸಂಭವಿಸಿದೆ. ಸಿಡಿಲಿನ ತೀವ್ರತೆಗೆ ವಿನೋದಾ ಮಾತ್ರವಲ್ಲದೆ ಅವರಿಗೆ ಸೇರಿದ ಎರಡು ಹಸುಗಳು ಕೂಡ ಸ್ಥಳದಲ್ಲೇ ಜೀವ ಕಳೆದುಕೊಂಡಿವೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಂದಿನಿಂದ 4 ದಿನ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ: ಆಲಿಕಲ್ಲು ಮಳೆ , ಬಿರುಗಾಳಿಯ ಮುನ್ನೆಚ್ಚರಿಕೆ!

ಸಪೋಟ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ದುರ್ಮರಣ

ಬಳ್ಳಾರಿ ತಾಲೂಕಿನ ಡಿ. ನಾಗನಹಳ್ಳಿ ಗ್ರಾಮದಲ್ಲಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಸಿಡಿಲಿಗೆ ಬಲಿಯಾಗಿದ್ದಾನೆ. ಗಾದಿಲಿಂಗಪ್ಪ (32) ಮೃತಪಟ್ಟ ದುರ್ದೈವಿ. ಇಂದು ಸಂಜೆ ಸಪೋಟ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಸಿಡಿಲು ಅಪ್ಪಳಿಸಿದೆ. ಸಿಡಿಲಿನ ಹೊಡೆತಕ್ಕೆ ಸಿಕ್ಕು ಗಾದಿಲಿಂಗಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹವಾಮಾನ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ನೀಡಿರುವುದರಿಂದ, ಸಾರ್ವಜನಿಕರು ಮಳೆ ಮತ್ತು ಗುಡುಗು ಮುನ್ಸೂಚನೆ ಇರುವಾಗ ಜಮೀನು, ತೋಟ ಅಥವಾ ಮುಕ್ತ ಪ್ರದೇಶಗಳಿಗೆ ಹೋಗದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಳ್ಳಿ ಬಾರ್ ಆಮದಿಗೆ ಕೇಂದ್ರ ಬ್ರೇಕ್: ಇನ್ಮುಂದೆ ಪರವಾನಗಿ ಕಡ್ಡಾಯ

ನವದೆಹಲಿ, ಮೇ 16: ದೇಶದಲ್ಲಿ ಬೆಳ್ಳಿ ಬೆಲೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬೆಳ್ಳಿ ಬಾರ್ ಆಮದು ಮಾಡಿಕೊಳ್ಳಲು ವಿಶೇಷ ಪರವಾನಗಿಯನ್ನು ಕಡ್ಡಾಯಗೊಳಿಸಿ ನಿರ್ಬಂಧ ಹೇರಿದೆ. ಈವರೆಗೂ ಸಿಲ್ವರ್ ಬಾರ್ಸ್ ಆಮದಿನ ಮೇಲೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ, ಹೊಸ ನಿಯಮದ ಪ್ರಕಾರ 99.9% ಶುದ್ಧತೆಯ ಬೆಳ್ಳಿ ಬಾರ್‌ ಆಮದು ಮಾಡಲು ವಾಣಿಜ್ಯ ಸಚಿವಾಲಯದ ವಿಶೇಷ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ.

Source link

ಸೆಲೆಬ್ರಿಟಿಗಳ ಅಹಂಕಾರಕ್ಕೆ ತೆರೆ ಹಾಕಲು ನಿರ್ಧರಿಸಿದ ಬಾಲಿವುಡ್​ನ ಖ್ಯಾತ ಹೇರ್​​​ಸ್ಟೈಲಿಸ್ಟ್ – Kannada News | Hair stylist Aalim Hakim pens against celebrities rude behavior

ಬಾಲಿವುಡ್ (Bollywood) ಚಿತ್ರರಂಗದ ಮೋಸ್ಟ್ ಡಿಮ್ಯಾಂಡಿಂಗ್ ಹೇರ್ ಸ್ಟೈಲಿಸ್ಟ್ ಎಂದರೆ ಅದು ಆಲಿಮ್ ಹಕೀಮ್. ಅವರು ಅಹಂಕಾರಿ ವರ್ತನೆ ತೋರುವ ನಟರ ತಂಡಕ್ಕೆ ಬಿಸಿ ಮುಟ್ಟಿಸಿದ್ದಾರೆ. ಚಿತ್ರರಂಗದ ತೆರೆಯ ಹಿಂದೆ ಕೆಲಸ ಮಾಡುವ ಕಲಾವಿದರನ್ನು ಗೌರವಿಸದ ನಟರು ಮತ್ತು ಅವರ ಮ್ಯಾನೇಜರ್‌ಗಳ ಜೊತೆ ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಆಲಿಮ್, ‘ಯಾವ ನಟರ ಮ್ಯಾನೇಜರ್‌ಗಳು ಚಿತ್ರತಂಡದ ಸದಸ್ಯರನ್ನು ಕೀಳಾಗಿ ಕಾಣುತ್ತಾರೋ, ಅಂತಹ ನಟರ ಸಿನಿಮಾಗಳಿಂದ ನಾವು ಹಿಂದೆ ಸರಿಯಲು ನಿರ್ಧರಿಸಿದ್ದೇವೆ’ ಎಂದು ತಿಳಿಸಿದ್ದಾರೆ.

‘ಹೇರ್ ಡ್ರೆಸ್ಸರ್ಸ್, ಮೇಕಪ್ ಆರ್ಟಿಸ್ಟ್‌ಗಳು, ಸ್ಟೈಲಿಸ್ಟ್‌ಗಳು ಮತ್ತು ಅಸಿಸ್ಟೆಂಟ್‌ಗಳನ್ನು ‘ಕೇವಲ ಸ್ಟಾಫ್’ ಎಂದು ಕರೆಯಬೇಡಿ. ಪ್ರತಿಯೊಬ್ಬ ನಟನ ಸೌಂದರ್ಯ ಮತ್ತು ಸ್ಕ್ರೀನ್ ಅಪಿಯರೆನ್ಸ್ ಹಿಂದೆ ಈ ತಂತ್ರಜ್ಞರ ಶ್ರಮವಿರುತ್ತದೆ. ಹಬ್ಬ ಹರಿದಿನಗಳು, ನಿದ್ರೆ ಮತ್ತು ಕುಟುಂಬವನ್ನು ಮರೆತು ಕಲಾವಿದರು ಕೆಲಸ ಮಾಡುತ್ತಾರೆ. ಆದರೆ ಅವರ ಜೊತೆ ಮ್ಯಾನೇಜರ್‌ಗಳು ಅಸಭ್ಯವಾಗಿ ವರ್ತಿಸುವುದು, ಕಿರುಚಾಡುವುದು ಮತ್ತು ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಆಲಿಮ್ ಬೇಸರ ವ್ಯಕ್ತಪಡಿಸಿದ್ದಾರೆ.

ನಟರ ಇಮೇಜ್‌ಗೆ ಧಕ್ಕೆ

ಹಲವು ಬಾರಿ ನಟರ ಮ್ಯಾನೇಜರ್‌ಗಳು ವ್ಯಾನಿಟಿ ವ್ಯಾನ್ ಹೊರಗಡೆ ತಂಡದ ಸದಸ್ಯರ ಜೊತೆ ತೋರುವ ಅಸಭ್ಯ ವರ್ತನೆಯಿಂದ ಆ ನಟರ ಘನತೆಗೂ ಧಕ್ಕೆ ಬರುತ್ತದೆ ಎಂಬ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ‘ಗೌರವ ನೀಡುವುದು ಮೂಲಭೂತ ಮಾನವೀಯತೆ, ಅದು ಉಪಕಾರವಲ್ಲ. ಪ್ರತಿಭೆಗೆ ಗೌರವ ಸಿಗಲೇಬೇಕು’ ಎಂದು ಅವರು ಪ್ರತಿಪಾದಿಸಿದ್ದಾರೆ.

ಆಲಿಮ್ ಅವರ ಈ ನಿರ್ಧಾರಕ್ಕೆ ಬಾಲಿವುಡ್‌ನ ಗಣ್ಯರಾದ ಫರಾ ಖಾನ್, ರಾಜಕುಮಾರ್ ರಾವ್, ಕಾಜೋಲ್, ಅರ್ಜುನ್ ರಾಂಪಾಲ್ ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ. ವಿಶೇಷವೆಂದರೆ ಆಲಿಮ್ ಹಕೀಮ್ ಅವರು ರಾಕಿಂಗ್ ಸ್ಟಾರ್ ಯಶ್, ಎಂ.ಎಸ್. ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಭಾರತದ ಬಹುತೇಕ ಸ್ಟಾರ್ ನಟರ ನೆಚ್ಚಿನ ಹೇರ್ ಸ್ಟೈಲಿಸ್ಟ್ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version